Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಯಾವುದೆ ಧರ್ಮದ ಹಬ್ಬ ಹರಿದಿನಗಳಾಗಲಿ ಅದಕ್ಕೆ ಸಂಬಂದಪಟ್ಟಂತ ಕಾರ್ಯಕ್ರಮಗಳು ಮಾಡಬೇಕು ಅದರಿಂದ ಸಮಾಜ ಸುದಾರಣೆಯಾಗುವಂತ ಉತ್ತಮ ಸಂದೇಶ ನೀಡುವಂತಿರಬೇಕು ಎಂದು ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ ಹೇಳಿದರು.ಶನಿವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಹರಮ್ ಹಬ್ಬದ ನಿಮಿತ್ಯ ಹಮ್ಮಿಕೊಂಡಿದ್ದ ಪೂರ್ವಬಾವಿ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹಬ್ಬ ಹರಿದಿನ, ಉತ್ಸವಗಳೆಂದರೆ ಕುಡಿದು ಅಸಭ್ಯ ವರ್ತನೆ ಮಾಡುವುದು ಹಬ್ಬಗಳಿಗೆ ಅಗೌರವಿಸಿದಂತೆ. ಯಾವುದೆ ಧರ್ಮದ ಹಬ್ಬಗಳಾಗಲಿ ಎಲ್ಲರು ಒಂದಾಗಿ ಶ್ರದ್ದಾ ಭಕ್ತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು.ಪಿಎಸ್ಐ ಅರವಿಂದ ಅಂಗಡಿ ಮಾತನಾಡಿ ಕಳೆದ ವರ್ಷ ಮೋರಮ್ಮ ಹಬ್ಬದಂದು ಬೇರೆ ಗ್ರಾಮಗಳಿಂದ ಸ್ನೇಹಿತರನ್ನು ಕರಿಸಿ ಸಣ್ಣ ಪುಟ್ಟ ಗಲಾಟೆಗಳಾಗಿದ್ದು ಈ ವರ್ಷ ಅದು ಮರುಕಳಿಸದೆ ಶಾಂತಿಯುತವಾಗಿ ಆಚರಿಸಿ. ಎಲ್ಲರು ಕಾನೂನಿ ಚೌಕಟ್ಟಿನಲ್ಲಿ ನಡೆದುಕೊಳ್ಳಬೇಕು ಒಂದು ವೇಳೆ ಕಾನೂನು ಮೀರಿ ಶಾಂತಿ ಭಂಗ ತರುವಂತ ಕೆಲಸ ಮಾಡಿದರೆ ಹಂತವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವದು. ಮಸಿದಿ ಮಂದಿರಗಳಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ಸಿಸಿ…
ಬಿಜೆಪಿಗರಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿಗೆ ಅವಮಾನ | ವಿರೋಧಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ತುರ್ತು ಪರಿಸ್ಥಿತಿಯನ್ನು ಖಂಡಿಸುವ ನೆಪದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಅವಮಾನಿಸುತ್ತಿರುವುದನ್ನು ವಿರೋಧಿಸಿ ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ ತಕ್ಷಣ, ಅವರನ್ನು ಸ್ಥಳದಿಂದ ಚದುರಿಸಲಾಯಿತು ಮತ್ತು ಪೊಲೀಸ್ ವ್ಯಾನ್ಗಳಲ್ಲಿ ಕರೆದೊಯ್ಯಲಾಯಿತು.ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇಂದಿರಾ ಗಾಂಧಿಯನ್ನು ಅಡಾಲ್ಫ್ ಹಿಟ್ಲರ್ಗೆ ಹೋಲಿಸಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಎಫ್ಐಆರ್ ದಾಖಲಿಸಿದ ಕೆಲವೇ ದಿನಗಳಲ್ಲಿ ಈ ಪ್ರತಿಭಟನೆ ನಡೆದಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅವರು ಜೂನ್ 25 ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ…
ವಿಜಯಪುರದಲ್ಲಿ ಅಹಿಂದ ಮುಖಂಡ ಫಯಾಜ ಕಲಾದಗಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹಲವಾರು ಪ್ರತಿಭಾನ್ವಿತ ಬಡ ಕ್ರಿಕೆಟ್ ಕ್ರೀಡಾಪಟುಗಳು ಇದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ವಿಜಯಪುರ ಜಿಲ್ಲೆಯಲ್ಲಿ ಕ್ರಿಕೆಟ್ಗೆ ಒಂದು ಪ್ರತ್ಯೇಕ ಕ್ರೀಡಾಂಗಣ ಇಲ್ಲ. ಇದರಿಂದ ಕ್ರಿಕೆಟ್ ಕ್ರೀಡಾ ಪಟುಗಳಿಗೆ ನಿರಾಸೆ ಉಂಟಾಗಿದೆ ಎಂದು ಅಹಿಂದ ಮುಖಂಡರಾದ ಫಯಾಜ ಕಲಾದಗಿ ಕಳವಳ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ ಅವರು, ಕೂಡಲೇ ವಿಜಯಪುರ ಜಿಲ್ಲೆಯಲ್ಲಿ ಒಂದು ಪ್ರತ್ಯೇಕ ಕ್ರಿಕೇಟ್ ಕ್ರೀಡಾಂಗಣ ಮಾಡಲು ಜಾಗವನ್ನು ಗುರುತಿಸಿ ಕ್ರೀಡಾಪಟುಗಳಿಗೆ ಕ್ರೀಡಾಭ್ಯಾಸ ಮಾಡಲು ಅನುಕೂಲ ಮಾಡಿಕೊಡಬೇಕೆಂದು ವಿಜಯಪುರ ಜಿಲ್ಲಾಡಳಿತಕ್ಕೆ ಕಲಾದಗಿ ಒತ್ತಾಯಿಸಿದ್ದಾರೆ.
ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಯತ್ನಾಳ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಾರ್ಡ್ ನಂ.2ರ ದರ್ಗಾ ಹತ್ತಿರದ ಆಶ್ರಯ ಕಾಲೊನಿಯ ನಿವಾಸಿಗಳಿಗೆ ಆದಷ್ಟು ಶೀಘ್ರದಲ್ಲೇ ಹಕ್ಕುಪತ್ರ ವಿತರಿಸಿ, ಅನುಕೂಲ ಮಾಡಿಕೊಡಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಭರವಸೆ ನೀಡಿದರು.ನಗರದ ಆಶ್ರಯ ಕಾಲೊನಿ ಶಂಕರಲಿಂಗ ಗುಡಿ ರಸ್ತೆಯಲ್ಲಿರುವ ಶ್ರೀ ವಾರಿ ಮಾರುತಿ ದೇವಸ್ಥಾನ ಹತ್ತಿರ ಶನಿವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರಿಸಲಾದ ರೂ.10 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಪ್ರಸ್ತುತ ಕಾಲೊನಿಯ ಜಾಗವು ಕಂದಾಯ ಇಲಾಖೆ ಒಡೆತನದಲ್ಲಿದ್ದು, ಸ್ಲಂ ಬೋರ್ಡ್ ಗೆ ಹಸ್ತಾಂತರಿಸಿದ ಬಳಿಕ ತಮಗೆ ಹಕ್ಕು ಪತ್ರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರೊಂದಿಗೆ ಸಭೆ ಕೂಡ ಮಾಡಿರುವುದಾಗಿ ತಿಳಿಸಿದರು.ಸದರಿ ಕಾಲೊನಿಯಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ಈಗಾಗಲೇ ಸ್ವಂತ ಹಣದಲ್ಲಿ ಸಂಗೋಳ್ಳಿ ರಾಯಣ್ಣ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಧರ್ಮಸ್ಥಳ ಸಂಘವು ಕೇವಲ ಸಾಲ ಕೊಡುವದಷ್ಟೇ ಅಲ್ಲದೆ ನೂರಾರು ಜನಪಯೋಗಿ ಯೋಜನೆ ಕೈಗೆತ್ತಿ ಕೊಂಡಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ಜನಜಾಗೃತಿ ವೇದಿಕೆ ಮಾಡುತ್ತಿರುವದು ಶ್ಲಾಘನೀಯವಾಗಿದೆ. ವಯೋವೃದ್ದರಿಗೆ ಮಾಶಾಸನವನ್ನು ನೀಡಿ ಸಹಕರಿಸುತ್ತಿದೆ ಎಂದು ಇಂಡಿಯ ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.ಪಟ್ಟಣದ ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆಯ ಕಚೇರಿಯ ಆವರಣದಲ್ಲಿ ನಡೆದ ಹೊಸದಾಗಿ ಮಂಜುರಾದ ಮಾಶಾಸನ ಪತ್ರ, ವ್ಹೀಲ್ ಚೇರ ಮತ್ತು ವಾಕಿಂಗ ಸ್ಟಿಕ್ ವಿತರಿಸಿ ಮಾತನಾಡಿದರು.ಜೆಡಿ ಎಸ್ ಪ್ರಮುಖ ಬಿ.ಡಿ.ಪಾಟೀಲ ಮಾತನಾಡಿ, ಸ್ವಾಸ್ಥ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ನಾಡಿನ ಕಲ್ಯಾಣದ ಆಶಯ ಹೊಂದಿರುವ ಸಂಸ್ಥೆಯು ಮಹಿಳಾ ಸಬಲೀಕರಣ, ವ್ಯಸನಮುಕ್ತ ಸಮಾಜ, ಆರೋಗ್ಯದ ಕಾಳಜಿ, ಪರಿಸರದ ಕಾಳಜಿ, ದೇವಸ್ಥಾನಗಳ ರಕ್ಷಣೆ, ಜೀರ್ಣೋದ್ದಾರ, ಮೂಲಕ ಜಾತ್ಯಾತೀತವಾಗಿ ಧರ್ಮಾತೀತವಾಗಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದರು.ಸಂಸ್ಥೆಯ ಯೋಜನಾಧಿಕಾರಿ ನಟರಾಜ ಯೋಜನೆಯಿಂದ ನಡೆಯುತ್ತಿರುವ ಕಾರ್ಯಕ್ರಮ ಬಗ್ಗೆ ಮಾತನಾಡಿದರು.ಸಿದ್ದು ಡಂಗಾ, ಪ್ರಕಾಶ ಬಿರಾದಾರ, ಶಾರುಖ ವಲಯ ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು ಸೇವಾ ಪ್ರತಿನಿಧಿಗಳು ಮತ್ತಿತರಿದ್ದರು.ಫಲಾನುಭವಿಗಳಾದ…
ತಿಕೋಟಾ ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳು, ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಡಾ.ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಜಾರಿಗೆ ತಂದಿರುವ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಜನರಿಗೆ ಬಹುಪಯೋಗಿಯಾಗಿದ್ದು, ಅವರ ಆರ್ಥಿಕ ಜೀವನ ಮಟ್ಟ ಹೆಚ್ಚಾಗುವುದರ ಜೊತೆಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಈ ಯೋಜನೆಗಳು ಸಹಕಾರಿಯಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶನಿವಾರ ೨೦೨೩-೨೪ನೇ ಸಾಲಿನ ಹಾಗೂ ೨೦೨೪-೨೫ನೇ ಸಾಲಿನ ಬಬಲೇಶ್ವರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲೂಕಿನಲ್ಲಿ ನಿರ್ಮಿಸಲಾದ ಕಟ್ಟಡ ಕಾಮಗಾರಿಗಳು ಹಾಗೂ ಭೂಮಿ ಪೂಜಾ ಸಮಾರಂಭ ವಿವಿಧ ಕಾಮಗಾರಿಗಳಾದ ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಸಂಖ್ಯೆ-೪ರ ಉದ್ಘಾಟನೆ, ೨೫ ಲಕ್ಷ ರೂ ವೆಚ್ಚದ ರೈತ ಸಂಪರ್ಕ ಕೇಂದ್ರ ಗೋದಾಮು ಉದ್ಘಾಟನೆ, ೧೫ ಲಕ್ಷ ರೂ. ವೆಚ್ಚದಡಿಯ ಅಂಗನವಾಡಿ…
ವಿಜಯಪುರ ಮಹಿಳಾ ವಿವಿಯಲ್ಲಿ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನರಲ್ಲಿ ವೈಜ್ಞಾನಿಕ ಮನೋಭಾವದ ಕೊರತೆಯಿಂದಾಗಿ ಸಮಾಜದಲ್ಲಿ ಇನ್ನೂ ಮೌಢ್ಯಗಳು ಹೆಚ್ಚಾಗಿವೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದರಿಂದ ಸಮಾಜದಲ್ಲಿನ ಮೌಡ್ಯತೆ ಹಾಗೂ ಅಂಧಕಾರಗಳನ್ನು ಕಡಿಮೆ ಮಾಡಬಹುದಾಗಿದೆ ಎಂದು ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ ಅಭಿಪ್ರಾಯಪಟ್ಟರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ತಂತ್ರಜ್ಙಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗಗಳು ಭಾರತೀಯ ವಿಜ್ಞಾನ ಕಾಂಗ್ರೆಸ್ನ ವಿಯಪುರ ಚಾಪ್ಟರ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಪ್ರಾದೇಶಿಕ ಭಾಷೆಯಲ್ಲಿ ವಿಜ್ಞಾನ ಸಂವಹನ” ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಧೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಜನಪ್ರಿಯಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವೈದ್ಯಕೀಯ ಮತ್ತು ಎಂಜನಿಯರಿಂಗ್ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ದೊರೆಯುವಂತಾಗಬೇಕು ಎಂದರು.ಇದೇ ಸಂದರ್ಭದಲ್ಲಿ ವಿಜ್ಞಾನ ಕ್ಷೇತ್ರದ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿದರು.ಸಂಪನ್ಮೂಲ ವ್ಯಕ್ತಿಯಾಗಿದ್ದ ಬೆಂಗಳೂರಿನ ಭಾರತೀಯ…
ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೊಂಡಗೂಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ ಮಾಡಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶುಕ್ರವಾರ ವಿಜಯಪುರದಲ್ಲಿನ ಸಚಿವರ ಸ್ವಗೃಹಕ್ಕೆ ತೆರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಎಮ್. ನಾಗಾವಿ ಮಾತನಾಡಿ, ಗ್ರಾಮದಲ್ಲಿ ಪ್ರೌಢಶಾಲೆಯ ಅವಶ್ಯಕತೆಯಿದೆ. ಈ ಮೊದಲು ಇದ್ದ ಖಾಸಗಿ ಪ್ರೌಢಶಾಲೆ ೩ ವರ್ಷಗಳ ಹಿಂದೆ ಬಂದಾಗಿದೆ. ಇದರಿಂದ ೩ ಪ್ರಾಥಮಿಕ ಶಾಲೆಗಳ ಮಕ್ಕಳು ಪ್ರೌಢಶಾಲೆ ವಿದ್ಯಾಭ್ಯಾಸಕ್ಕೆ ದೇವರಹಿಪ್ಪರಗಿ ಅಥವಾ ತಾಳಿಕೋಟೆ ಪಟ್ಟಣಗಳಿಗೆ ತೆರಳಬೇಕಾಗಿದೆ. ಆದರೆ ಎರಡು ಪಟ್ಟಣಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಯಿಲ್ಲ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೂ ಹೆಣ್ಣುಮಕ್ಕಳು ಪಾಲಕರು ದೂರದ ಪ್ರೌಢಶಾಲೆಗಳಿಗೆ ಕಳಿಸಲು ಹಿಂಜರೆದು ವಿದ್ಯಾರ್ಥಿನೀಯರ ಪ್ರೌಢಶಾಲಾ ಶಿಕ್ಷಣ ಮೊಟಕುಗೊಳಿಸಲು ಕಾರಣರಾಗುತ್ತಿದ್ದಾರೆ. ಇವೆಲ್ಲ ಕಾರಣಗಳಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರಾಮದಲ್ಲಿ ಕೂಡಲೇ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಮೃದ್ಧಿ ಸಹಕಾರಿ ಸಂಘದ ನಿರ್ದೇಶಕ ಕೆ.ಎಸ್.ಕೋರಿ ವಿಜಯಪುರದ ಅಮ್ಮ ಫೌಂಡೇಷನ್ ಇದೇ ಪ್ರಥಮ ಬಾರಿಗೆ ಕೊಡಮಾಡುತ್ತಿರುವ ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪಟ್ಟಣದ ಸಮೃದ್ಧಿ ಸಹಕಾರಿ ಸಂಘದ ಮೂಲಕ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಬರುವ ಜುಲೈ ೭ ರಂದು ವಿಜಯಪುರ ಕಂದಗಲ್ಲ ಹನುಮಂತ್ರಾಯ ರಂಗಮಂದಿರದಲ್ಲಿ ಜರುಗುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಫೌಂಡೇಷನ್ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಮಲ್ಲಯ್ಯ, ರಾವುತರಾಯ ದೇವಸ್ಥಾನಗಳ ಯಾತ್ರಿನಿವಾಸ ಅಭಿವೃದ್ಧಿಗಾಗಿ ಕಮಿಟಿ ಸದಸ್ಯರು ನೀಡಿದ ಉದಾರ ದೇಣಿಗೆ ನಿಜವಾಗಿಯೂ ಶ್ಲಾಘನೀಯವಾದದು ಎಂದು ಕಮಿಟಿ ಅಧ್ಯಕ್ಷ ವಿನೋದಗೌಡ ಪಾಟೀಲ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಯಾತ್ರಿನಿವಾಸ ಅಭಿವೃದ್ಧಿಗಾಗಿ ಕಮಿಟಿ ಸದಸ್ಯ ನಾಗರಾಜ್ ಸಂಗಣ್ಣವರ ನೀಡಿದ ೫ ಲಕ್ಷ ರೂ.ಗಳ ದೇಣಿಗೆ ಚೆಕ್ ಅನ್ನು ಸ್ವೀಕರಿಸಿ ನಂತರ ಅವರನ್ನು ಕಮಿಟಿ ಮೂಲಕ ಸನ್ಮಾನಿಸಿ ಮಾತನಾಡಿದರು. ಭಕ್ತರ ಆಶಯದಂತೆ ನಿರ್ಮಿಸಲಾಗುತ್ತಿರುವ ಯಾತ್ರಿನಿವಾಸಕ್ಕೆ ಕಮಿಟಿ ಸದಸ್ಯರು ನೀಡಿದ ಈ ಸಹಕಾರ ಸಮಯೋಚಿತ ಹಾಗೂ ಅನುಕರಣಿಯ ಎಂದರು.ಕಮಿಟಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ದಾನಿ ನಾಗರಾಜ ಸಂಗಣ್ಣವರ, ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ಪುರಂದಾಸರ ಕೀರ್ತನಾವಾಣಿಯಂತೆ ಧರ್ಮ ಹಾಗೂ ಧಾರ್ಮಿಕ ಕಾರ್ಯಗಳಿಗೆ ಸಹಕಾರಿಯಾಗುವಂತೆ ನನ್ನ ತನು,ಮನ, ಧನದ ಭಕ್ತಿಸೇವೆ ಸಲ್ಲಿಸಿದ್ದೇನೆ ಎಂದರು.ಕಮಿಟಿ ಉಪಾಧ್ಯಕ್ಷ ಶ್ರೀಧರ ನಾಡಗೌಡ, ಕಾರ್ಯದರ್ಶಿ ಮಲ್ಲು ನಾಟೀಕಾರ, ಸದಸ್ಯರಾದ ಕಾಶೀನಾಥ ತಳಕೇರಿ, ನಿಂಗು ಯಂಭತ್ನಾಳ, ಅಪ್ಪೋಜಿ ದೇಸಾಯಿ, ಶಿವನಗೌಡ ಯರನಾಳ, ರಾವುತಪ್ಪ ದೇವರಮನಿ, ಯಮನೂರಪ್ಪ ಸಣ್ಣಕ್ಕಿ, ಮಲ್ಲು ಜಮಾದಾರ,…
