Author: editor.udayarashmi@gmail.com

ವಿಜಯಪುರದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಭಾಭವನ & ಅಗಸ್ತ್ಯ ಪೌಂಡೇಶನ್ ಪ್ರಾಯೋಜಕತ್ವದ ಸಂಚಾರಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದಿನ ಕಾಲದಲ್ಲಿ ಗುರುಕುಲಗಳು ಗುಡಿಸಿಲಿನಲ್ಲಿ ನಡೆಯುತ್ತಿದ್ದವು. ಅಲ್ಲಿ ಒಳ್ಳೆಯ ಶಿಕ್ಷಣ ಪಡೆದು ಮೇಧಾವಿಗಳಾಗಿ ಉನ್ನತ ಹುದ್ದೆ ಪಡೆಯುತ್ತಿದ್ದರು. ಯಾಕೆಂದರೆ ಅಲ್ಲಿ ಒಳ್ಳೆಯ ಶಿಕ್ಷಕರಿಂದ ಒಳ್ಳೆಯ ಶಿಕ್ಷಣ ದೊರಕುತ್ತಿತ್ತು. ಆದರೆ ಅಲ್ಲಿ ಸುಸಜ್ಜಿತ ಕಟ್ಟಡಗಳಿರಲಿಲ್ಲ. ಇಂದು ಹಲವು ಸೌಲಭ್ಯಗಳೊಂದಿಗೆ ಕಟ್ಟಡ, ಡಿಜಿಟಲ್ ಕ್ಲಾಸ್ ಇತ್ಯಾದಿ ಇದ್ದರು ಶಿಕ್ಷಣದ ಗುಣಮಟ್ಟ ಹೆಚ್ಚಾಗಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.ನಗರದ ಠಕ್ಕೆಯಲ್ಲಿ ಶುಕ್ರವಾರ ಸಂಜೆ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಸಿ.ಎಸ್.ಆರ್.(ಎಂ.ಎಸ್.ಐ.ಎಲ್) ಅನುದಾನದಡಿ ನಿರ್ಮಿಸಲಾದ ಸಭಾಭವನ ಉದ್ಘಾಟನೆ, ಎಸ್.ಎಸ್.ಎಲ್.ಸಿ.ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಗಸ್ತ್ಯ ಪೌಂಡೇಶನ ಪ್ರಾಯೋಜಕತ್ವದ ಸಂಚಾರಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರು ಶಾಲೆಯ ಹೃದಯವಿದ್ದಂತೆ. ಶಿಕ್ಷಕರು ಪ್ರಾಮಾಣಿಕತೆಯಿಂದ ಬಡ ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡಬೇಕು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯೂ ಕುಸಿತ ಕಂಡಿದ್ದು ಸುಧಾರಣೆಗೆ ಹೆಚ್ಚು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಶಿಕ್ಷಕಿ, ಸಾಹಿತಿ ಪಾರ್ವತಿ ಬಸವರಾಜ ಸೊನ್ನದ (ತಳವಾರ)- ಅವರನ್ನು “ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಜುಲೈ 06 ರಂದು ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ ದಿನ ಎಂಬುದು ವರ್ಷಕ್ಕೊಮ್ಮೆ ಬರುವ ವೃತಾಚರಣೆಯಲ್ಲ. ಅದು ನಿತ್ಯಾರಾಧನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಹೊರವಲಯದ ತೊರವಿ ಬಳಿ ಪೊಲೀಸ್ ವಸತಿ ಗೃಹದ ಆವರಣದಲ್ಲಿ 1800 ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಹಸಿರೀಕರಣ ಕೆಲಸ ಮುಂದುವರೆದಿದೆ. ಹಸಿರು ವಿಜಯಪುರ ರೂಪಿಸಬೇಕೆಂಬ ಸಂಕಲ್ಪಕ್ಕೆ ಕೋಟಿ ವೃಕ್ಷ ಅಭಿಯಾನ ಒಳಗೊಂಡಂತೆ ಜಿಲ್ಲಾದ್ಯಂತ ದೊರಕುತ್ತಿರುವ ಸ್ಪಂದನೆ ಹೃದಯ ತುಂಬುವ ಸಂತಸ ನೀಡಿದೆ. ಈ ಹಸಿರು ಅಭಿಯಾನ ಮುಂದುವರೆಯಲಿದ್ದು, ನಮ್ಮ ಬಸವ ನಾಡು ಇನ್ನಷ್ಟು ಸುಂದರವಾಗಲಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿಗಳಾದ ರಾಮನಗೌಡ ಹಟ್ಟಿ, ಶಂಕರ ಮಾರಿಹಾಳ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ಬಿ. ಕುಶನಾಳ, ಸಹಾಯಕ ಸಂರಕ್ಷಣಾಧಿಕಾರಿ ಭಾಗ್ಯವಂತ ಮಸೂದಿ, ವಲಯ ಅರಣ್ಯಾಧಿಕಾರಿ ಸಂತೋಷ ಅಜೂರ, ವಿಜಯಪುರ ಅಲ್ ಅಮೀನ್ ಮೆಡಿಕಲ್…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಮತ್ತು ಘಟಪ್ರಭಾ , ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ನೀರಿನ ಒಳಹರಿವು ಹಾಗೂ ಹೊರ ಹರಿವು ಎರಡು ಒಂದು ಲಕ್ಷ ಕ್ಯೂಸೆಕ್‌ ಗೂ ಅಧಿಕವಾಗಿದೆ. 1,08,723 ಕ್ಯೂಸೆಕ್ ಒಳಹರಿವು ಇದ್ದರೆ 1.07.973 ಕ್ಯೂಸೆಕ್ ಹೊರಹರಿವು ಇದೆ. ಈ ಬ್ಯಾರೇಜ್ ಕೆಳಭಾಗದಲ್ಲಿ ಇರುವ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶ್ರಮಬಿಂದು ಸಾಗರ ಈಗಾಗಲೇ ಸಂಪೂರ್ಣ ಮುಳುಗಿ ಹೋಗಿದೆ. ಜಲಾಶಯದ ಮೇಲ್ಬಾಗದಲ್ಲಿ ನೀರು ಉಕ್ಕಿ ಹರಿಯುತ್ತಿದೆ.ಘಟಪ್ರಭಾ ನದಿಯಲ್ಲೂ ನೀರಿನ ಹರಿವು ಹೆಚ್ಚಳವಾಗಿದೆ. ಜಿಎಲ್‌ಬಿಸಿ ಕಾಲುವೆಗೆ 2400 ಕ್ಯೂಸೆಕ್ ಹಾಗೂ ನದಿಗೆ 13890 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ ಅಡ್ಡಲಾಗಿ ಮುಧೋಳ ತಾಲೂಕಿನಲ್ಲಿ ಒಟ್ಟು 12 ಬ್ಯಾರೇಜ್‌ಗಳು ಇದ್ದು, ನೀರಿನ ಹರಿವು 30 ಕ್ಯೂಸೆಕ್ ದಾಟಿದರೆ ಕೆಲ ಬ್ಯಾರೇಜ್‌ಗಳು ಮುಳುಗಿ ಸೇತುವೆ ರಸ್ತೆಯಲ್ಲಿ ಸಂಚಾರ ಬಂದ್ ಆಗುವ ಸಂಭವ ಇದೆ. ಈಗ ಮಿರ್ಜಿ ಗ್ರಾಮದ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಆದರ್ಶವಿದ್ಯಾಲಯದ 7, 8 ಹಾಗೂ 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿ ದೆ. ಖಾಲಿ ಇರುವ ಸ್ಥಾನಗಳಿಗಾಗಿ ಅರ್ಜಿ ಕರೆಯಲಾಗಿ ದ್ದು, ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಜೂ.26 ರಿಂದ ಜುಲೈ 7 ರವರೆಗೆ ಆದರ್ಶ ವಿದ್ಯಾಲಯದ ಆರ್‌ಎಂಎಸ್‌ಎ ಆಲಗೂರು ಆರ್‌ಸಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಗಳು ಆ.16ರಂದು ಬುಧವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ವಿದ್ಯಾಲಯದಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು, ಮೀಸಲಾತಿಯ ವಿವರವನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು7411672048/9916006936 ಸಂಪರ್ಕಿಸಬಹುದು ಎಂದು ಮುಖ್ಯಶಿಕ್ಷಕರು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಹದಾನ ಮಾಡುವುದರಿಂದ ಅಂಗಾಂಗ ಅಗತ್ಯವಿರುವ ರೋಗಿಗಳಿಗೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸ್ಟೇಟ್ ಬ್ಯಾಂಕಿನ ರೀಜನಲ್ ಮ್ಯಾನೇಜರ ಸಂತೋಷ ನಾಯಕ ಹೇಳಿದ್ದಾರೆ.ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಟ್ರಾಮಾ ಸೆಂಟರ್ ಹಾಗೂ ರಕ್ತನಿಧಿ ಕೇಂದ್ರದ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎಸ್.ಬಿ.ಐ 70ನೇ ಫೌಂಡೇಶನ್ ದಿನದ ಅಂಗವಾಗಿ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ಉಚಿತ ಅರೋಗ್ಯ ತಪಾಸಣೆ, ರಕ್ತದಾನ, ದೇಹದಾನ, ನೇತ್ರದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ದೇಹ ದಾನ ಶ್ರೇಷ್ಟ ದಾನವಾಗಿದೆ. ಇದರಿಂದ ಮರಣ ನಂತರವೂ ಅಂಗಾಂಗಗಳನ್ನು ಅಗತ್ಯವಿರುವ ರೋಗಿಗಳಿಗೆ ದಾನ ಮಾಡಬಹುದು. ಅಲ್ಲದೇ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೂ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮಾತನಾಡಿ, ದೇಹದಾನ, ಅಂಗದಾನ, ರಕ್ತದಾನ, ಮಾಡುವಲ್ಲಿ ಆಸಕ್ತಿ ತೋರಿರುವ ಸ್ಟೇಟ್ ಬ್ಯಾಂಕ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಮಾಜಿಕ ಕಳಕಳಿ ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ. ಅಲ್ಲದೇ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಧ್ಯೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಗಿದೆ.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ ಮತ್ತು ಎಸ್ಪಿ ಕಚೇರಿಯ ಪರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಣಣ ನಿಂಬರಗಿ ಅವರು ಮೂರು ವರ್ಷಗಳ ಈ ಒಪ್ಪಂದಕ್ಕೆ ಸಹಿ ಹಾಕಿದರು.ಈ ಒಡಂಬಡಿಕೆಯಿಂದಾಗಿ ಕಾನೂನು ಶಾಲೆಯ ವಿದ್ಯಾರ್ಥಿಗಳು ಕಾನೂನು ವಿಷಯಗಳಾದ, ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆ, ಭಾರತೀಯ ಸಾಕ್ಷ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಪೋಲೀಸ ಅಧಿಕಾರಿಗಳಿಂದ ಪ್ರಾತ್ಯಕ್ಷಿಕೆಯ ಮೂಲಕ ಅನುಭವವನ್ನು ಪಡೆದುಕೊಳ್ಳಲಿದ್ದಾರೆ. ಅಲ್ಲದೇ, ಇಂಟರ್ನಶಿಪ್ ಮಾಡಲಿದ್ದಾರೆ. ಅಲ್ಲದೇ, ಪೋಲೀಸ್ ತರಬೇತಿ ಕೇಂದ್ರದಲ್ಲಿ ಅಧ್ಯಯನಶೀಲರಾದ ಅಧಿಕಾರಿಗಳಿಗೆ ಕಾನೂನು ಶಾಲೆಯ ಬೋಧಕ ವೃಂದದವರು ಪಾಠವನ್ನು ಮಾಡಲಿದ್ದಾರೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು ಇದನ್ನು ಮತ್ತೆ ನವೀಕರಿಸಬಹುದಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಕಾನೂನು ಶಾಲೆಯ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ, ಈ ಒಡಂಬಡಿಕೆಯಿಂದ ವಿದ್ಯಾರ್ಥಿಗಳು, ಕಾನೂನು ಶಾಲೆಯ ಪ್ರಾಧ್ಯಾಪಕರು ಮತ್ತು ಪೋಲಿಸ್…

Read More

ಹೊನವಾಡದ ಸರ್ಕಾರಿ ಪ್ರೌಡಶಾಲೆ ಮಂಜೂರಾತಿ ಹಾಗೂ ಸರ್ಕಾರಿ ಆಸ್ಪತ್ರೆಯ ಸಮಸ್ಯೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಸರಕಾರಿ ಪ್ರೌಡಶಾಲೆ ಪ್ರಾರಂಭಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಒದಗಿಸುವುದು ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ,ಬಿ ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಹೊನವಾಡ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ೭ ನೇ ತರಗತಿ ಕಲಿತ ಮಕ್ಕಳಿಗೆ ಮುಂದೆ ಕೂಡಾ ಓದಬೇಕಾದರೆ ಸರಕಾರಿ ಪ್ರೌಡಶಾಲೆ ಬೇಕೆ ಬೇಕು ಎಂದು ತಮ್ಮ ಗಮನಕ್ಕೂ ಈ ವಿಷಯವನ್ನು ತಂದಾಗ ಈ ವರ್ಷ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಿರಿ ಆದರೆ ಅದು ಸಾಧ್ಯವಾಗಿಲ್ಲ, ಕೂಡಲೇ ಅಲ್ಲಿಯೇ ಇರುವ ಶಾಲಾ ಕಟ್ಟಡದಲ್ಲಿ ಪ್ರೌಡಶಾಲೆ ಪ್ರಾರಂಭಿಸಬೇಕು ಜೊತೆಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಸಿಬ್ಬಂದಿ ಹಾಗೂ ಕಲಿಕಾ ಸಾಮಗ್ರಗಳನ್ನು ಪೂರೈಸಬೇಕು ಎಂದರುಜೊತೆಗೆ ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲೋಕಾಯುಕ್ತ ಸಂಸ್ಥೆಯಲ್ಲಿನ ಅಕ್ರಮಗಳ ತನಿಖೆ, ಉಚ್ಚ ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ, ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆಯುವಲ್ಲಿ ವಿಫಲರಾಗಿರುವ ಸಚಿವ ಆರ್.ಬಿ. ತಿಮ್ಮಾಪುರ ರವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಶುಕ್ರವಾರ ಮನವಿ ಸಲ್ಲಿಸಲಾಯಿತು.ಆಡಳಿತದಲ್ಲಿನ ಅಕ್ರಮ, ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಿಸಬೇಕಾದ ಲೋಕಾಯುಕ್ತ ಸಂಸ್ಥೆಯ ನಿರಂತರವಾಗಿ ಅಕ್ರಮಗಳಲ್ಲಿ ಮತ್ತು ಅವ್ಯವಹಾರಗಳಲ್ಲಿ ಸಿಲುಕುತ್ತಿರುವುದು ದುರದೃಷ್ಟಕರ. ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಬಹುತೇಕ ಪ್ರಕರಣಗಳು ತಾರ್ಕಿಕ ಅಂತ್ಯ ಕಾಣದೆ ಮುಕ್ತಾಯವಾಗುತ್ತಿವೆ ಮತ್ತು ಸ್ಪಷ್ಟವಾಗಿ ಭ್ರಷ್ಟಾಚಾರವೆಸಗಿರುವ ಪ್ರಕರಣಗಳು ಕೂಡ ವಿಲೇವಾರಿಯಾಗದೆ ದೂಳು ಹಿಡಿಯುತ್ತಿವೆ. ಇದು ಲೋಕಾಯುಕ್ತ ಸಂಸ್ಥೆಯ ಹಳ್ಳ ಹಿಡಿರುವುದನ್ನು ತೋರಿಸುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಲು ಸಾಲು ಹಗರಣಗಳು ನಡೆಯುತ್ತಿದ್ದು, ನಿಯಂತ್ರಿಸಲು ಸರ್ಕಾರದ ವತಿಯಿಂದ ಯಾವುದೇ ಕ್ರಮವಾಗುತ್ತಿಲ್ಲ. ಅಬಕಾರಿ ಇಲಾಖೆಯಲ್ಲಿ ಅಸಹ್ಯಕರ ಅವ್ಯವಹಾರ, ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಇವನ್ನೆಲ್ಲ ನಿಯಂತ್ರಿಸಬೇಕಾದ…

Read More

ಬರಟಗಿ ಗ್ರಾಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬರಟಗಿ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಜರುಗಿದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಮಿತಿಯ ತಾಲೂಕು ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಮಾತನಾಡಿದರು.ಸರಕಾರ ಜಾರಿಗೆ ತಂದಿರುವ ಈ ಪಂಚ ಗ್ಯಾರಂಟಿಗಳಿಂದ ಬಡಜನರ ಜೀವನವು ಅತ್ಯಂತ ಸುಖಕರವಾಗಿ ನಡೆಯುತ್ತಿದೆ, ಸಾಕಷ್ಟು ಕಷ್ಟಗಳನ್ನು ಅನುಭವಿಸಿದ ಕುಟುಂಬಗಳು ಈಗ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದಕ್ಕೆ ಪಂಚ ಗ್ಯಾರಂಟಿಗಳೇ ಕಾರಣ ಎಂದರು.ನಮ್ಮ ತಾಲೂಕಿನ ಅನುಷ್ಠಾನ ಸಮಿತಿಯು ತುಂಬಾ ಕ್ರೀಯಾಶೀಲವಾಗಿದ್ದು, ಸಮಸ್ಯೆಯನ್ನು ಹೇಳಿಕೊಂಡು ಬರುವ ಫಲಾನುಭವಿಗಳಿಗೆ ಕೇವಲ ೧೫ ನಿಮಿಷದಲ್ಲಿಯೇ ಪರಿಹಾರ ನೀಡುತ್ತಿದ್ದೇವೆ. ಸಮಸ್ಯೆಗಳನ್ನು ವ್ಯಾಟ್ಸಾಫ್ ಮೂಲಕ ಸಲ್ಲಿಸಿದರೂ ಸಹಿತ ೧೫ ನಿಮಿಷದಲ್ಲಿ ಪರಿಹಾರ ನೀಡಲಾಗುತ್ತಿದೆ. ಈ ಕಾರ್ಯಕ್ಕೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳ ಜೊತೆಗೆ ತಾಲೂಕು ಪಂಚಾಯತಿಯ ಎಲ್ಲಾ ಅಧಿಕಾರಿಗಳು ತುಂಬಾ ಸಹಾಯ ಸಹಕಾರ ನೀಡುತ್ತಿದ್ದಾರೆ, ಯೋಜನೆಯ ಯಶಸ್ವಿಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.ಪಂಚ…

Read More