Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.ಜಯಂತಿಯಂಗವಾಗಿ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಶಿರಸ್ತೇದಾರ ಬಿ.ಆರ್.ಪೊಲೇಶಿ ಅವರು ಪೂಜೆ ನೆರವೇರಿಸಿ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ವಿಲಾಸ ಜಾಡರ, ರಿಶಿಕೇಶ ಇಂಗಳೆ, ಪ್ರಸನ್ನ ಕಡಿಜಾಡರ, ಪ್ರವೀಣ ಲಮಾಣಿ, ಆರತಿ ತೆನಹಳ್ಳಿ, ಅನ್ನಪೂರ್ಣ ಪಾಟೀಲ, ಪುರಸಭೆ ಸದಸ್ಯ ಪ್ರವೀಣ ಪೂಜಾರಿ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುವಲ್ಲಿ ಭಾರತ ಸೇವಾದಳದ ಪಾತ್ರ ಹಿರಿದು ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪಪೂ ಕಾಲೇಜಿನ ಆವರಣದಲ್ಲಿರುವ ಭಾರತ ಸೇವಾದಳದ ಕಾರ್ಯಾಲಯದಲ್ಲಿ ಶುಕ್ರವಾರ ಜರುಗಿದ ಭಾರತ ಸೇವಾದಳದ ತಾಲೂಕು ಮಟ್ಟದ ಮಿಲಾಪ್ ಶಿಬಿರವನ್ನು ಉದ್ಘಾಟಿಸಿ, ಭಾರತ ಸೇವಾದಳದ ಚಟುವಟಿಕೆಗಳು ನಿರಂತರವಾಗಿ ಶಾಲೆಗಳಲ್ಲಿ ನಡೆಯಬೇಕು. ನಾಡಗೀತೆ, ರಾಷ್ಟ್ರಗೀತೆಯನ್ನು ಲಯಬದ್ಧವಾಗಿ ಕಲಿಸುವಲ್ಲಿ ಸೇವಾದಳದ ಶಿಕ್ಷಕರು ಮಾಡುತ್ತಿರುವದು ಶ್ಲಾಘನೀಯ. ಮಕ್ಕಳಲ್ಲಿ ಶಿಸ್ತು, ದೇಶಭಕ್ತಿ ಬೆಳೆಯುವಂತೆ ಮಾಡುವ ಮೂಲಕ ಅವರನ್ನು ಸತ್ಪ್ರಜೆಗಳನ್ನಾಗಿ ತಯಾರು ಮಾಡಬೇಕೆಂದರು.ಭಾರತ ಸೇವಾದಳ ರಾಜ್ಯ ಉಪಾಧ್ಯಕ್ಷ ಶಿವನಗೌಡ ಬಿರಾದಾರ ಮಾತನಾಡಿ, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಶಿಸ್ತು, ಸಂಯಮ, ಧೈರ್ಯ, ಸಹನೆಯ ಗುಣಗಳನ್ನು ಕಲಿಸಬೇಕು. ಸೇವಾದಳದ ಚಟುವಟಿಕೆಗಳ ಮೂಲಕ ರಾಷ್ಟ್ರೀಯ ಭಾವೈಕ್ಯತೆ, ದೇಶಪ್ರೇಮ ಜಾಗೃತಗೊಳಿಸಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ದೇಶಪ್ರೇಮದ ಪಾಠ ಕಲಿಸಬೇಕೆಂದರು.ತಾಲೂಕು ಭಾರತ ಸೇವಾದಳದ ಕಾರ್ಯದರ್ಶಿ ಆರ್.ಜಿ.ಅಳ್ಳಗಿ ಮಾತನಾಡಿ, ಭಾರತ ಸೇವಾದಳವು ನಾ.ಸು.ಹರ್ಡೀಕರ ನೇತೃತ್ವದಲ್ಲಿ ದೇಶದ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಾರತ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಡಿತರ ಅಕ್ಕಿ ಅಕ್ರಮ ಮಾರಾಟ ಸರಬರಾಜು ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಎಗ್ಗಿಲ್ಲದೆ ಸಾಗುತ್ತಿದೆ. ಈಗಾಗಲೇ ಅನೇಕರ ಮೇಲೆ ಪ್ರಕರಣ ದಾಖಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಅಕ್ಕಿ ದಲ್ಲಾಳಿಗಳಿಗೆ ಮಾರಾಟ ಮಾಡುವವರನ್ನು ಗುರುತಿಸಿ ಅವರ ಕಾರ್ಡನ್ನು ರದ್ದತಿ ಪಟ್ಟಿಯಲ್ಲಿ ಸೇರಿಸಿ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ್ ಬೊರಾಮಣಿ ಹೇಳಿದರು.ಸಿಂದಗಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಿಂದ ಬೆಂಗಳೂರು, ಹಾಸನ, ಮೈಸೂರು ಸೇರಿದಂತೆ ಇನ್ನುಳಿದ ಪ್ರದೇಶಗಳಿಗೆ ಜನ ಇಟ್ಟಿಗೆ ಬಟ್ಟಿಯ ಕೆಲಸಕ್ಕಾಗಿ ಗುಳೆ ಹೋಗುವುದು ಹೆಚ್ಚಾಗಿದೆ. ಜನರಲ್ಲಿ ಮಾಹಿತಿಯಿಲ್ಲದ ಕಾರಣ ಕೆವೈಸಿ ಮಾಡಿಕೊಳ್ಳದೆ ಪಡಿತರ ಕಾರ್ಡಯಿಂದ ವಂಚಿತರಾಗುತ್ತಿದ್ದು,ಅದರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ.ಇಂದಿನ ಸಮಯದಲ್ಲಿ ಇಂಡಿ ಮತ್ತು ಸಿಂದಗಿ ಭಾಗದಲ್ಲಿ ಅಕ್ಕಿ ಮಾಫಿಯಾ ಮೀತಿ ಮೀರಿದೆ. ಇಂಡಿ ತಾಲ್ಲೂಕಿನಲ್ಲಿಯೇ ೩೩ ಪ್ರಕರಣ ದಾಖಲಿಸಲಾಗಿದೆ. ಸಿಂದಗಿಯಲ್ಲಿ ಒಂದು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೫೦೯ರಲ್ಲಿ ವಿಜಯನಗರದ ಸಿಂಹಾಸನವೆರಿದ್ದ ಶ್ರೀ ಕೃಷ್ಣದೇವರಾಯರು ಹಲವಾರು ಯುದ್ಧಗಳಲ್ಲಿ ಜಯಗಳಿಸಿ ತಮ್ಮ ಸೈನ್ಯದ ಅಸಾಧಾರಣ ಸಾಮರ್ಥ್ಯ ಹಾಗೂ ವಿಜಯನಗರದ ಸಾಮ್ರಾಜ್ಯದ ವೈಭೋಗವನ್ನು ಅನಾವರಣ ಮಾಡಲೆಂದು ೧೫೧೫ರಲ್ಲಿ ರಾಜಧಾನಿ ಹಂಪಿಯಲ್ಲಿ ಪ್ರಥಮ ಬಾರಿಗೆ ವಿಜಯ ದಶಮಿ ಉತ್ಸವವನ್ನು ಆರಂಭಿಸಿದರು ಎಂದು ನಿವೃತ್ತ ಪ್ರಾಚಾರ್ಯ ಬಿ.ಎಂ.ಬಿರಾದಾರ ಹೇಳಿದರು.ಸಿಂದಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿರು.ಪತ್ರಕರ್ತ ಪಂಡಿತ ಯಂಪೂರೆ ಮಾತನಾಡಿದರು.ಇದೇ ಸಂದರ್ಭದಲ್ಲಿ ಗ್ರೇಡ್-೨ ತಹಶೀಲ್ದಾರ ಇಂದಿರಾಬಾಯಿ ಬಳಗಾನೂರ, ಶಿರಸ್ತೇದಾರ ಆರ್.ಪಿ.ಜೋಷಿ, ಸಿಬ್ಬಂದಿಗಳಾದ ಗಂಗಾಧರ ಸೋಮನಾಯಕ, ಗಗನ ಕುಲಕರ್ಣಿ, ಮಲ್ಲು ಮಾಲಗಾರ, ಸಾಗರ ಪಾಟೀಲ, ಕೀರ್ತಿ ಅಗ್ನಿಹೊತ್ರಿ, ವಿದ್ಯಾ ಹಿಪ್ಪರಗಿ, ಹೀನಾ ಸರಿನಾ ಮಂದೇವಾಲಿ, ವಿಜಯಲಕ್ಷ್ಮಿ, ಗುರುನಾಥ ರೆಡ್ಡಿ, ಸಂತೋಷ ವಾಲೀಕಾರ ಸೇರಿದಂತೆ ಇತರರು ಇದ್ದರು.

Read More

ಮಾದಕ ವಸ್ತುಗಳ ದುರುಪಯೋಗ & ಸಾಗಣೆ ವಿರುದ್ದ ಜಾಗೃತಿ ಜಾಥಾ | ಪಿಎಸೈ ಅರವಿಂದ ಅಂಗಡಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಣೆ ವಿರುದ್ದ ಜಾಗೃತಿ ಜಾಥಾ ಹಾಗೂ ಕಾನೂನು ಅರಿವು ಕಾರ್ಯಕ್ರಮ ಜರುಗಿತು.ಗುರುವಾರ ಶಾಲಾ ಮಕ್ಕಳೊಂದಿಗೆ ಆಲಮೇಲ ಪಿಎಸ್‌ಐ ಅರವಿಂದ ಅಂಗಡಿ ನೇತೃತ್ವದಲ್ಲಿ ಮಾದಕ ವಸ್ತುಗಳ ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ಪಟ್ಟಣದ ಪ್ರಮುಕ ಬಿದಿಗಳಲ್ಲಿ ಸಂಚರಿಸಿ ಗೋಷಣೆಗಳನ್ನು ಕೂಗುತ್ತ ಮಾದಕ ವಸ್ತುಗಳ ದುರುಪಯೋಗದ ಜಾಗೃತಿ ಜಾತ ಅಭಿಯಾನ ಮಾಡಿದರು.ನಂತರ ಪಿಎಸೈ ಅರವಿಂದ ಅಂಗಡಿ ಮಾತನಾಡಿ, ಎಲ್ಲೆಡೆ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಪರಾದ ಕೃತ್ಯಗಳು ಹೆಚ್ಚಾಗಿದ್ದು ಅದನ್ನು ತಡೆಗಟ್ಟಲು ಸಾರ್ವಜನಿಕರು, ವಿದ್ಯಾರ್ಥಿಗಳು ಜಾಗ್ರತರಾಗಿ ಪೊಲೀಸ್‌ರೊಂದಿಗೆ ಸಹಕರಿಸಬೇಕು. ಯಾರಾದರು ಮಾದಕ ವಸ್ತುಗಳ ಸೇವನೆ ಮಾಡುವದು ಮತ್ತು ಬೇರೆಡೆ ಸಾಗಣೆ ಮಾಡುವದು ಕಂಡು ಬಂದರೆ ಪೊಲೀಸ್‌ರಿಗೆ ಮಾಹಿತಿ ನೀಡಿದರೆ ಅದನ್ನು ತಡೆಗಟ್ಟಲು ಸಾದ್ಯವಾಗುತ್ತದೆ ಎಂದರು.ತಂತ್ರಜ್ಞಾನ ಹೆಚ್ಚಾದಂತೆ ಅಪರಾದ ಕೃತ್ಯಗಳು ಹೆಚ್ಚಾಗಿದ್ದು ಅದರ ಬಗ್ಗೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುರೇಶ ನಾಯಕ ನೇತೃತ್ವದಲ್ಲಿ ತೆರಿಗೆ ವಸೂಲಾತಿ ಅಭಿಯಾನ ಜರುಗಿತು.ಗುರುವಾರ ಪಟ್ಟಣ ಪಂಚಾಯಿತಿ ವತಿಯಿಂದ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತ್ತು ಮನೆ ಮನೆಗಳಿಗೆ ತೆರಳಿ ತೆರಿಗೆ ತುಂಬುವAತೆ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದರು.ಮುಖ್ಯಾಧಿಕಾರಿ ಸುರೇಶ ನಾಯಕ ಮಾತನಾಡಿ, ಸರ್ಕಾರ ಕಳೆದ ಮೂರು ತಿಂಗಳಿಂದ ಸ್ವಯಂ ಪ್ರೇರಣೆಯಿಂದ ಪ್ರತಿ ವರ್ಷ ತೆರಿಗೆ ತುಂಬುವರಿಗೆ ಶೇ.೫% ರಿಯಾಯಿತಿ ನೀಡಿದ್ದು ಅದು ಇದೆ ತಿಂಗಳು ೩೧ ರಂದು ಮುಕ್ತಾಯಗೊಳ್ಳುವದು ಆಲಮೇಲ ಪಟ್ಟಣದ ಜನತೆ ಸರ್ಕಾರದ ರಿಯಾಯಿತಿಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಒಂದು ವೇಳೆ ಜೂನ್ ೩೧ರ ವರೆಗೆ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಕಟ್ಟಡ ಪರವಾನಿಗೆ, ಉದ್ಯಮೆ ಪರವಾನಿಗೆ ಪಡೆದುಕೊಳ್ಳದೆ ಇದ್ದರೆ ಹೆಚ್ಚುವರಿ ದಂಡ ವಿಧಿಸಲಾಗುವದು ಎಂದು ಹೇಳಿದರು.ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಪಟ್ಟಣದ ಜನರು ಸರ್ಕಾರದ ರಿಯಾಯಿತಿ ಸದುಪಯೋಗ ಪಡೆದುಕೊಂಡು ಸ್ವಯಂ ಪ್ರೇರಣೆಯಿಂದ ತೆರಿಗೆ ತುಂಬುತ್ತಿದ್ದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಈಚೆಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರಿಂದ ಅಹವಾಲು ಆಲಿಸಿದರು.ನಗರದ ಗೋದಾವರಿ ಹೋಟೆಲ್ ದಿಂದ ಸೈನಿಕ ಸ್ಕೂಲ್ ಮುಂಭಾಗದ ಜಿಲ್ಲಾ ಆಸ್ಪತ್ರೆಯ ವರೆಗೆ ರೂ.1.30 ಕೋಟಿ ಅನುದಾನದಲ್ಲಿ ಮುಖ್ಯ ರಸ್ತೆಯ ಸಮಾನಾಂತರ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಹತ್ತಿರ ಭೂಮಿಪೂಜೆ ನೆರವೇರಿಸಿದರು.ವಿಜಯಪುರ ನಗರದ ವಾರ್ಡ್ ನಂ.13 ರಲ್ಲಿ ಬರುವ ಬಾರಾಕಮಾನ್ ಹಿಂದಿನ ಭಾಗದ ಹಾಗೂ ಕಲಾದಗಿ ಗಲ್ಲಿಯಲ್ಲಿ ರೂ.50 ಲಕ್ಷ ಅನುದಾನದಲ್ಲಿ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿದೆ. ನಂತರ ವಾರ್ಡ್ ನಂ.11 ರಲ್ಲಿ ಬರುವ ಕುಲ್ಲೋಳ್ಳಿ ಪೆಟ್ರೋಲ್ ಪಂಪ್ ದಿಂದ ಅಟಲ್ ಬಿಹಾರಿ ವಾಜಪೇಯಿ ರಸ್ತೆಯವರೆಗೆ ರೂ.50 ಲಕ್ಷ ಅನುದಾನದಲ್ಲಿ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಕೆಲಹೊತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲೇ ಹಲವು…

Read More

ಸಿಂದಗಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಾರ್ವಜನಿಕರ ಆಸ್ತಿಗಳ ಉತಾರೆ ನೀಡುವಲ್ಲಿ ರೂ.೨೦೩೦ ಸಾವಿರ ಬೇಡಿಕೆಯಿಟ್ಟು ಅವರಿಂದ ಫೋನ್‌ಫೇ ಮೂಲಕ ತನ್ನ ಖಾತೆಗೆ ಜಮೆ ಮಾಡಿಸಿಕೊಂಡು ಭ್ರಷ್ಠಾಚಾರದಲ್ಲಿ ತೊಡಗಿದ ಪುರಸಭೆ ಸಿಬ್ಬಂದಿ ಅಜೀತ ಹಳಿಂಗಳಿ ಅವರನ್ನು ಸೇವೆಯಿಂದ ಅಮಾನತ್ತು ಮಾಡುವಂತೆ ಠರಾವು ಪಾಸು ಮಾಡಿದ ಪ್ರತಿಯನ್ನು ಮೇಲಾಧಿಕಾರಿಗಳಿಗೆ ರವಾನೆ ಮಾಡಿ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಸೂಚಿಸಿದರು.ಸಿಂದಗಿ ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಆಸ್ತಿಗಳ ಮೇಲೆ ಸಾಲ ಪಡೆಯಲು ಬೋಜಾ ದಾಖಲು ಮಾಡಲು ಪರಿತಪ್ಪಿಸುತ್ತಿರುವದನ್ನು ಗಮನಿಸಿ ರೂ.೫೦೦ ತುಂಬಿಸಿಕೊಂಡು ಭೋಜಾ ದಾಖಲು ಮಾಡಿ, ಅಲ್ಲದೆ ಬಾಕಿ ಉಳಿದ ಆಸ್ತಿಯನ್ನು ಬಡ್ಡಿ ರಹಿತ ತುಂಬಲು ೨ತಿಂಗಳು ಕಾಲಾವಕಾಶವಿದೆ. ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.ಈಗಿರುವ ತಹಶೀಲ್ದಾರ ಕಾರ್ಯಾಲಯ ನೂತನ ಮಿನಿವಿಧಾನ ಸೌಧಕ್ಕೆ ಸ್ಥಳಾಂತರವಾಗುತ್ತಿರುವ ಹಿನ್ನಲೆಯಲ್ಲಿ ಆ ಕಟ್ಟಡವನ್ನು ಪುರಸಭೆ ಕಾರ್ಯಾಲಯಕ್ಕೆ ಹಸ್ತಾರಿಸುವಂತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ನಿಕಾಯದ ಡೀನ್ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆÀಹಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ ಅವರ ಡೀನ್ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- ೨೦೦೦ನ ಸೆಕ್ಷನ್ ೧೬ (೨) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ ೨೭-೬-೨೦೨೫ರ ಮಧ್ಯಾಹ್ನದಿಂದ ೩೦-೦೬-೨೦೨೫ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಪ್ರೊ.ಶಾಂತಾದೇವಿ ಟಿ ಮತ್ತು ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ವಿವಿಧ ನಿಕಾಯಗಳ…

Read More

ವಿಜಯಪುರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್‌ನನ್ನು ಉದ್ಘಾಟಿಸಿದ ಸಚಿವರು, ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ ಸಾವಿರಾರು ಜನರು ಪ್ರಯಾಣಿಸುತ್ತಾರೆ. ಪ್ರಯಾಣಿಕರು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೪೮ ಲಕ್ಷ ಕಟ್ಟಡ ಕಾಮಗಾರಿ, ೧೨.೦೫ ಲಕ್ಷ ಅಡುಗೆ ಸಲಕರಣೆಗಳ ಮೊತ್ತ ಸೇರಿದಂತೆ ೬೦.೦೫ ಲಕ್ಷ ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಇಂದಿರಾ ಕ್ಯಾಂಟಿನ್‌ನಲ್ಲಿ ಉತ್ತಮ ರುಚಿ-ಶುಚಿಯಾದ ಗುಣಮಟ್ಟದ ಆಹಾರ ಲಭ್ಯವಾಗಲಿದ್ದು, ಇದರಿಂದ ಬಡ ಜನರಿಗೆ ಅನುಕೂಲವಾಗಲಿದೆ. ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಯೋಜನೆ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು, ಜೂ.೨೮ರಂದು…

Read More