Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ ಎಸ್ಎಚ್ಸಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್ಕೆವಿವೈ) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಎನ್ಎಚ್ಎಂ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಗೆ ಪ್ರಶಂಸನಾ ಪತ್ರ ಲಭಿಸಿದೆ.ಕಳೆದ ಮೇ.೧೪ ರಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ವಿಜಯಪುರ ಜಿಲ್ಲೆಯಲ್ಲಿ ಮಣ್ಣಿನ ಫಲವತ್ತತೆಯ ರಾಷ್ಟ್ರೀಯ ಯೋಜನೆ (ಎಸ್ಎಚ್ಸಿ), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಆರ್ಕೆವಿವೈ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ಮತ್ತು ರಾಷ್ಟ್ರೀಯ ತೋಟಗಾರಿಕಾ…
ವಿಜಯಪುರ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಉದ್ಯಾನ, ಮಾರುಕಟ್ಟೆ ಹಾಗೂ ಅನೇಕ ನಗರಗಳುಳ್ಳ ಅದ್ಭುತ ನಗರ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರು ಅನೇಕ ನಗರ ನಿರ್ಮಾತರಿಗೆ ಇಂದು ಸಹ ಮಾದರಿಯಾಗಿದ್ದಾರೆ. ಕೆಂಪೇಗೌಡರು ನಿರ್ಮಾಣ ಮಾಡಿದ ಬೃಹತ ಬೆಂಗಳೂರು ಈಗಲೂ ಸಹ ತನ್ನ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಈ ನಗರದಲ್ಲಿ ಲಕ್ಷಾಂತರ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ಆಸರೆಯ ತಾಣವಾಗಿದೆ. ಇಡೀ ವಿಶ್ವದಲ್ಲಿಯೇ ಗುರುತಿಸುವಂತಹ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಕಾರ್ಯ ಸ್ಮರಣೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.ಕಾರ್ಯಕ್ರಮದಲ್ಲಿ ಮಹಾದೇವ ರೆಬಿನಾಳ ಅವರು ವಿಶೇಷ ಉಪನ್ಯಾಸ ನೀಡಿ, ಬೃಹತ್ ನಗರ ನಿರ್ಮಾಣವಷ್ಟೇ ಅಲ್ಲದೆ ಪಾರದರ್ಶಕತೆಯುಳ್ಳ ಉತ್ತಮ ಆಡಳಿತಗಾರಾಗಿದ್ದ ಕೆಂಪೇಗೌಡರು ರೈತರಿಗೆ ಹೊರೆಯಾಗದಂತೆ ತೆರಿಗೆ, ಸೈನ್ಯಕ್ಕಾಗಿ ಹಣ ಮೀಸಲಿಟ್ಟಿದ್ದರು. ಸಾಮಾನ್ಯ ಜನರೆ…
ವಿಜಯಪುರ ಜಿಲ್ಲಾ ಮಟ್ಟದ ’ಸರ್ವೋತ್ತಮ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಸಚಿವ ಡಾ.ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಜಾರಿಗೊಳಿಸುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸೌಲಭ್ಯಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅಯೋಜಿಸಲಾದ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ, ನಾಡಪ್ರಭು ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರ ಜನರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ, ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ವಿವಿಧ ಯೋಜನೆಗಳನ್ನು ರೂಪಿಸುತ್ತದೆ. ಈ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯೋಗದಿಂದ ನಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಆರೋಗ್ಯ ಸುಧಾರಣೆ ಸಾಧ್ಯ ಜತೆಗೆ ನಮ್ಮ ದೇಹ ಮತ್ತು ಪ್ರಜ್ಞೆಯನ್ನು ಒಗ್ಗೂಡಿಸುತ್ತದೆ ಎಂದು ಗೋಗಿ ಜ್ಞಾನಯೋಗ ಮಂದಿರದ ಯೋಗಿ ಜಯಗುರುದೇವ ಸ್ವಾಮಿಗಳು ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಯೋಗ ಮತ್ತು ಆರೋಗ್ಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಮನಸ್ಸು ಶುದ್ಧವಾಗಿದ್ದರೆ ನಮ್ಮ ಭಾರತವೂ ಪರಿಶುದ್ಧವಾಗುತ್ತದೆ. ನೀವು ಜೀವಂತವಾಗಿರುವವರೆಗೆ ನಿಮ್ಮ ದೇಹವನ್ನು ಕಾಳಜಿ ವಹಿಸಿ ಮತ್ತು ಪ್ರೀತಿಸಿ, ಜೀವನವನ್ನು ಆನಂದಿಸಿ, ಯಾವಾಗಲೂ ಗುಣಮಟ್ಟದ ಜೀವನವನ್ನು ನಡೆಸಲು ಹಾಗೂ ಆರೋಗ್ಯಕರವಾಗಿರಲು ಯೋಗವು ಬಹುಮುಖ್ಯವಾಗಿದೆ. ಎಂದರಲ್ಲದೇ ಯೋಗದಲ್ಲಿನ ನಿಂತು ಮಾಡುವ ಆಸನಗಳು, ಕುಳಿತು ಮಾಡುವ ಆಸನಗಳು, ಧ್ಯಾನಗಳ ಮಹತ್ವ ಮತ್ತು ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು.ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಮಾತನಾಡಿ, ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಹೆಚ್ಚಿನ ಜನರು ತಮ್ಮ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ವಡವಡಗಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.2024-25 ನೇ ಸಾಲಿನ ಎಸ್ ಎಸ್ .ಎಲ್ .ಸಿ ಮತ್ತು ಪಿ.ಯು.ಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಘದ ಸದಸ್ಯತ್ವದ ಕಾರ್ಡು, ವಿದ್ಯಾರ್ಥಿ/ ವಿದ್ಯಾರ್ಥಿನಿಯರ ಅಂಕುಪಟ್ಟಿ ಕಾರ್ಡು ಜೆರಾಕ್ಸ್ ಪ್ರತಿ ಹಾಗೂ ಎರಡು ಭಾವಚಿತ್ರಗಳು ಜುಲೈ 5 ರೊಳಗೆ ತಮ್ಮ ಅರ್ಜಿಯನ್ನು ಖುದ್ದಾಗಿ ವಿಜಯಪುರ ನಗರದ ಜಿಲ್ಲಾಪಂಚಾಯಿತಿ ಕಚೇರಿ ರಸ್ತೆಯ ಪತ್ರಿಕಾ ಭವನದಲ್ಲಿ ಸಲ್ಲಿಸಲು ಕೋರಲಾಗಿದೆ. ಮತ್ತು ಕೊರಿಯರ್ ಹಾಗೂ ಅಂಚೆ ಕಚೇರಿ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು, ಹೆಚ್ಚಿನ ಮಾಹಿತಿಗಾಗಿ ಕೆಯುಡಬ್ಲ್ಯೂಜೆ ಜಿಲ್ಲಾ ಕಾರ್ಯದರ್ಶಿ ಮೋಹನ ಕುಲಕರ್ಣಿ ಇವರ ದೂರವಾಣಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ವ್ಯಕ್ತಿಯೊರ್ವನ ಮೇಲೆ ಪೋಲಿಸ್ ಅಧಿಕಾರಿಗಳು ಹಿಗ್ಗಾ-ಮುಗ್ಗವಾಗಿ ಹೊಡೆದು, ಹಲ್ಲೆ, ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ತಡರಾತ್ರಿಯಲ್ಲಿ ನೂರಾರು ರೈತರು ಧಿಡೀರನೆ ಪ್ರತಿಭಟನೆಯನ್ನು ನಡೆಸಿದ ಘಟನೆ ಜರುಗಿದೆ.ತಾಲೂಕಿನ ಸಿದ್ದಾಪೂರ ಗ್ರಾಮದ ಬಳಿ ಬೈಕ್ ಸವಾರನಿಂದ ಡಿಕ್ಕಿ ಹೊಡೆದ ಪರಿಣಾಮ ಹನುಮಂತ ಕಡ್ಲಿ (65) ಸ್ಥಳದಲ್ಲಿಯೇ ಸಾವನ್ನಪ್ಪಿದ ಧಾರುಣ ಘಟನೆ ಸಂಭವಿಸಿದೆ. ಬೈಕ್ ಸವಾರ ಸಿದ್ದಪ್ಪ ಕುರಿ (29) ಜಮಖಂಡಿ ರಸ್ತೆಯ ಮಾರ್ಗವಾಗಿ ಶಿರೋಳ ಗ್ರಾಮಕ್ಕೆ ತೆರಲುವ ಸಮಯದಲ್ಲಿ ಹನುಮಂತ ಕಡ್ಲಿ ಎಂಬ ವ್ಯಕ್ತಿಯು ಎಮ್ಮೆಯನ್ನು ಮೇಯಿಸುತ್ತಾ ಬರುವ ಸಮಯದಲ್ಲಿ ಎಮ್ಮೆಯು ಧಿಡೀರನೆ ರಸ್ತೆಯ ಮೇಲೆ ಬಂದ ಪರಿಣಾಮ ಎಮ್ಮೆ ಮೇಯಿಸುತ್ತಿದ್ದ ಹಣಮಂತನಿಗೆ ವೇಗವಾಗಿ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಹನುಮಂತ ಕಡ್ಲಿ ಸಾವನ್ನಪ್ಪಿದ ದುರ್ದೃವಿ.ಘಟನಾ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ, ಬೈಕ್ ಸವಾರನಾದ ಸಿದ್ದಪ್ಪ ಕುರಿ (29) ಹಾಗೂ ರಸ್ತೆ ಅಪಘಾತದಲ್ಲಿ ಸಾವು ಬದುಕಿನ ಮಧ್ಯ ಹೋರಾಟ ಮಾಡುವ ವ್ಯಕ್ತಿಗೆ ಮತ್ತು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಯೋಗ ಎನ್ನುವುದು ಕೇವಲ ವ್ಯಾಯಾಮವಲ್ಲ. ಯೋಗ ದೇಹ-ಮನಸ್ಸಿನ ಸಮತೋಲನಕ್ಕಾಗಿ ಅಗತ್ಯವಾದ ಜೀವನ ಶೈಲಿಯಾಗಿದೆ ಎಂದು ರಾಣಿ ಚನ್ನಮ್ಮ ಮಹಿಳಾ ಮಂಡಳ ಅಧ್ಯಕ್ಷೆ ಶ್ರೀಮತಿ ಆಶಾದೇವಿ ಗುಡಗುಂಟಿಮಠ ಹೇಳಿದರು.ನಗರದ ಬಸವಭವನದ ಆವರಣದಲ್ಲಿ ನಡೆದ ರಾಣಿ ಚನ್ನಮ್ಮ ಮಹಿಳಾ ಮಂಡಳದಿಂದ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಸತತ 11 ದಿನಗಳವರೆಗೆ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮಹಿಳೆಯರನ್ನು ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ದಿಕ್ಕಿನಲ್ಲಿ ಮುನ್ನಡೆಸುವುದು ನಮ್ಮ ಸಂಸ್ಥೆ ಮುಖ್ಯ ಧೈಯವಾಗಿದೆ. ಯೋಗದಿಂದ ಜೀವನ ಬದಲಾಗುವ ಸಾಧ್ಯತೆ, ಯೋಗದಿಂದ ಶಿಸ್ತು, ಸಂಸ್ಕೃತಿ, ಆಚರಣೆಗಳು ರೂಢಿಸಿಕೊಳ್ಳಬಹುದು. ಮಹಿಳೆಯರಿಗಾಗಿ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯೋಗ ಶಿಬಿರ ಒಂದು ದಿಟ್ಟ ಹೆಜ್ಜೆಯಾಗಿದೆ. ಜನರಿಗೆ ಯೋಗದ ಮಹತ್ವ ತಿಳಿಸುವ ಮತ್ತು ಜೀವನದಲ್ಲಿ ಯೋಗದ ಅನಿವಾರ್ಯತೆ ಪ್ರತಿಪಾದಿಸುವ ಉತ್ತಮ ವೇದಿಕೆಯನ್ನು ನಿರ್ಮಿಸಲಾಗಿತ್ತು. ಜನಸಾಮಾನ್ಯರ ದೈಹಿಕ ಮತ್ತು ಮಾನಸಿಕ ಆರೋಗ್ಯ ಹಾಗೂ ಶ್ರೇಯಸ್ಸಿಗಾಗಿ ನಮ್ಮ ಮಹಿಳಾ ಮಂಡಲ ಶ್ರಮಿಸುತ್ತಿದೆ ಎಂದರು.ವೇದಿಕೆಯಲ್ಲಿ…
ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಶ್ರೇಷ್ಠ ವಿಜ್ಞಾನಿ ಡಾ. ಎ.ಪಿ.ಜೆ. ಕಲಾಂ ಅವರು “ನೀವು ನಿಮ್ಮ ಭವಿಷ್ಯವನ್ನು ಬದಲಿಸಲಾರಿರಿ. ನಿಮ್ಮ ಹವ್ಯಾಸವನ್ನು ಬದಲಿಸಿದರೆ, ನೀವು ಖಂಡಿತವಾಗಿಯೂ ನಿಮ್ಮ ಒಳ್ಳೆಯ ಹವ್ಯಾಸಗಳು ಭವಿಷ್ಯತ್ತಿನ ದಿಕ್ಕನ್ನೇ ಬದಲಿಸಬಲ್ಲವು” ಎಂದು ಹೇಳಿದ್ದಾರೆ. ಆದ್ದರಿಂದ ಒಳ್ಳೆಯ ವಿಚಾರ, ಆಲೋಚನೆ, ಒಳ್ಳೆಯ ಹವ್ಯಾಸ ಮತ್ತು ಒಳ್ಳೆಯ ಕಾರ್ಯ ಮಾಡುತ್ತಾ ಸಾಗಿದರೆ ನಮ್ಮ ಭವಿಷ್ಯವು ಕೂಡ ನಮ್ಮ ಆಲೋಚನೆಯಂತೆ ನಿರ್ಮಾಣಗೊಳ್ಳಲಿದೆ ಎನ್ನುವುದು ನೂರಕ್ಕೆ ನೂರರಷ್ಟು ಸತ್ಯವಾದ ಮಾತು. ಮೋಬೈಲ್ ಬಳಕೆಯನ್ನು ತಗ್ಗಿಸಿ, ಪುಸ್ತಕದತ್ತ ಆಸಕ್ತಿ ಹೊರಳಿಸಬೇಕಾಗಿದೆ. ಮನೆಯಲ್ಲಿ ಪೋಷಕರು ಮಕ್ಕಳು ಓದುವ ಸಮಯದಲ್ಲಿ ಮೋಬೈಲ್ ಬಳಸದಂತೆ ಮತ್ತು ಮಕ್ಕಳಿಗೆ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ಅಗತ್ಯತೆಯಾಗಿದೆ. ತಮ್ಮ ಮಕ್ಕಳನ್ನು ಮೋಬೈಲ್ ಎಂಬ ಮಾಯೆಯಿಂದ ದೂರವಿರಿಸುವುದು ಪೋಷಕರಿಗೆ ಸವಾಲಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಕೂಡಿಕೊಂಡು ಮೋಬೈಲ್ ಬದಲಿಗೆ ಪುಸ್ತಕವನ್ನು ಓದುವ ಸಂಸ್ಕೃತಿಯನ್ನು ಬೆಳೆಸಿದರೆ ಇತ್ತ ವಿದ್ಯಾರ್ಥಿಗಳ ಗಮನ ವಿಷಯದ ಮೇಲೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಷಯ ಶಿಕ್ಷಕರ ಕೊರತೆಯಿಂದ ಅನುದಾನಿತ ಶಾಲೆಗಳಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದಿರುತ್ತದೆ ಎಂದು ಜಿಲ್ಲಾ ಅನುದಾನಿತ ಪ್ರಾಥಮಿಕ ಶಿಕ್ಷಕರ ಸಂಘದ ಎಸ್.ಬಿ. ಹಿರೇಕುರಬರ ತಿಳಿಸಿದ್ದಾರೆ.ಇದನ್ನು ಮನಗೊಂಡು ನಿರ್ದೇಶಕರು ಬೆಂಗಳೂರು ಇವರು ಹೊರಡಿಸಿರುವ ಆದೇಶ ಕೂಡಲೇ ಹಿಂಪಡೆಯಬೇಕು. ಸರಕಾರವು ದಿನಾಂಕ : ೩೧-೧೨-೨೦೧೫ ರಿಂದ ೩೧-೧೨-೨೦೨೦ ರವರೆಗೆ ಖಾಲಿ ಇರುವ ಹುದ್ದೆ ತುಂಬಿಕೊಳ್ಳಲು ಅನುಮತಿ ನೀಡಿದ್ದರು. ಒಂದು ವರ್ಷದಿಂದ ಇನ್ನು ಗೊಂದಲದಲ್ಲಿ ಇರುತ್ತದೆ. ಇದಕ್ಕೆ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರುಗಳು, ಕೂಡಲೇ ಅನುದಾನಿತ ಶಾಲೆಗಳ ಮೇಲೆ ನೀಡುತ್ತಿರುವ ಮಾನದಂಡಗಳನ್ನು ಕೂಡಲೇ ಹಿಂಪಡೆಯಬೇಕು. ಹಿಂಪಡೆಯದೇ ಹೋದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಯ ವಿಜಯಪುರ ಜಿಲ್ಲಾ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಅನುದಾನಿತ ಮಹಾ ಮಂಡಳ ವತಿಯಿಂದ ಬೀದಿಗಿಳಿದು ಹೋರಾಟ ಮಾಡಲಾಗುವದು ಎಂದು ಮಹಾ ಮಂಡಳ ಅಧ್ಯಕ್ಷರಾದ ಬಿ.ಎಸ್. ಪಾಟೀಲ, ನಿರ್ದೆಶಕರಾದ ಆರ್.ಎಸ್. ತುಂಗಳ, ಆರ್.ಬಿ. ಜಾಧವ, ಮೋಹನ ಜಾಧವ, ಸಳ್ಳಗಿ, ಬಿರಾದಾರ, ವಿಜಯಪುರ ಜಿಲ್ಲಾ…
ಲೇಖನ- ಸುಧಾ ಪಾಟೀಲಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಆಯುಕ್ತರಾದ ಶಿವಾನಂದ ಕಲಕೇರಿ ಅವರು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರದ ವಿಶ್ವಸ್ಥರು ಮತ್ತು ನಮ್ಮ ವೇದಿಕೆಯ ಬಗೆಗೆ ಅಭಿಮಾನ ಮತ್ತು ಕಳಕಳಿ ಹೊಂದಿರುವ ಸರಳತೆಯ ಸಾಕಾರಮೂರ್ತಿಯಂತಿರುವ ಸರ್ಕಾರಿ ಅಧಿಕಾರಿ.ನಮ್ಮ ಎಲ್ಲ ಕೆಲಸ ಕಾರ್ಯಗಳಲ್ಲಿ ಯಾವತ್ತೂ ತಮ್ಮ ಸಾರಥ್ಯವನ್ನು ವಹಿಸುವ ಒಬ್ಬ ಅಪ್ಪಟ ಬಸವಾಭಿಮಾನಿ ಮತ್ತು ಯಾವುದೇ ಪ್ರಚಾರವಿಲ್ಲದೆ, ಸದ್ದುಗದ್ದಲವಿಲ್ಲದೆ ತಮ್ಮ ಕೆಲಸ ಕಾರ್ಯಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ತೂಗಿಸಿಕೊಂಡು ಹೋಗುವ ಒಬ್ಬ ದಕ್ಷ ಅಧಿಕಾರಿ ಎಂದು ಹೇಳಬಹುದು.ಶಿವಾನಂದ ಹಣಮಂತರಾಯ ಕಲಕೇರಿ ಅವರು ಜುಲೈ 21. 1971ರಲ್ಲಿ ಜನಿಸಿದರು. ಇವರ ತಂದೆಯವರು ದಿ. ಹಣಮಂತರಾಯ ಕಲಕೇರಿ, ನಿ. ಶಾಲಾ ಶಿಕ್ಷಕರು, ಇವರ ತಾಯಿ ಯವರು ದಿ. ಗಿರಿಜಾ. ಎಚ್. ಕಲಕೇರಿ , ಪ್ರೌಢಶಾಲಾ ಶಿಕ್ಷಕಿ. ಶಿವಾನಂದ ಕಲಕೇರಿ ಅವರ ತಂದೆಯವರು ಅಪ್ಪಟ ಶರಣ ಸಂಪ್ರದಾಯವಾದಿಗಳು. ತಮ್ಮ ವೈಜ್ಞಾನಿಕ ದೃಷ್ಟಿಕೋನ ಮತ್ತು ವೈಚಾರಿಕ ಚಿಂತನೆಯಿಂದ ಹಲವು…
