Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಿಂತನೆಡಾ. ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಹನ್ನೆರಡನೆಯ ಶತಮಾನದ ದಿಟ್ಟ ಶರಣೆ ಅಕ್ಕ ಮಹಾದೇವಿ ತನ್ನ ಅನುಭವಕ್ಕೆ ನಿಲುಕದ ಅನುಭಾವವನ್ನು ಅತ್ಯಂತ ಸುಂದರ ಸರಳ ರೀತಿಯಲ್ಲಿ ಕಟ್ಟಿ ಕೊಟ್ಟಿದ್ದಾಳೆ. ಅಕ್ಕ ತಾನೂ ಒಬ್ಬ ಸಮಾಜದ ಪ್ರತಿನಿಧಿ .ತನಗೂ ಹಸಿವು ನಿದ್ದೆ ಬಯಕೆ ಕನಸು ಮನುಷ್ಯ ಸಹಜ ದತ್ತವಾದ ಬೇಡಿಕೆ ಸರಳ ಮತ್ತು ಸ್ವಾಭಾವಿಕ ಎಂದು ಈ ವಚನದಲ್ಲಿ ಅಭಿವ್ಯಕ್ತಗೊಳಿಸಿದ್ದಾಳೆ. ವಚನ ಒಡಲ ಕಳವಳಕ್ಕಾಗಿ ಅಡವಿಯ ಪೊಕ್ಕೆನು.ಗಿಡುಗಿಡುದಪ್ಪದೆ ಬೇಡಿದೆನೆನ್ನಂಗಕ್ಕೆಂದು.ಅವು ನೀಡಿದವು ತಮ್ಮ ಲಿಂಗಕ್ಕೆಂದು.ಆನು ಬೇಡಿ ಭವಿಯಾದೆನು; ಅವು ನೀಡಿ ಭಕ್ತರಾದವು.ಇನ್ನು ಬೇಡಿದೆನಾಡದೆ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮಾಣೆ. ವಚನ ವಿಶ್ಲೇಷಣೆ ಒಡಲ ಕಳವಳಕ್ಕಾಗಿ ಅಡವಿಯ ಪೊಕ್ಕೆನು.ಅಕ್ಕ ತಾನು ಪ್ರಕೃತಿಯ ಪ್ರಾಣಿ ಪಶು ಪಕ್ಷಿ ಜೀವಿಗಳ ಹಾಗೆ ಒಡಲ ಹಸಿವಿಗೆ ಆಹಾರ ಪಡೆಯಲು ದಟ್ಟವಾದ ಅರಣ್ಯ ಅಡವಿಗೆ ಹೊಕ್ಕೆನು ಎಂದು ಹೇಳಿದ್ದು ಅವಳ ಪ್ರೌಢಿಮೆ ನೀರ್ಭಾವ ಗುಣಕ್ಕೆ ಹಿಡಿದ ಕನ್ನಡಿಯಾಗಿದೆ.ಅನೇಕ ಪ್ರಾಣಿಗಳಿಗೆ ಹಲವು ರೀತಿಯಲ್ಲಿ ಆಶ್ರಯ ನೀಡಿದ ಅಡವಿಯ ಉಪಮೆಯ ಸುಂದರ. ಪ್ರಾಣಿಗಳಂತೆ ತನ್ನ ಹಸಿವಿನ ಒಡಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿನ ೨೦೨೧-೨೨ನೇ ಅವಧಿಯ ಖಾಲಿ ಇರುವ ಉತ್ನಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕಲಬುರಗಿಯ ಕರ್ನಾಟಕ ಉಚ್ಛ ನ್ಯಾಯಾಲಯ ಇವರ ರಿಟ್ ಅಪೀಲು ಆದೇಶದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ದಿನಾಂಕ:೧೫-೦೫-೨೦೨೫ರೊಳಗಾಗಿ ಸಂಬಂಧಿಸಿದ ವಿಜಯಪುರ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦/೧೧ ಕೆ.ವ್ಹಿ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ನಿಡೋಣಿ ಹಾಗೂ ಕಂಬಾಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೆಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ.೧೧೦/೧೧ ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ೩೩/೧೧ಕೆ.ವ್ಹಿ ದೇವರಗೆಣ್ಣೂರ, ೩೩/೧೧ ಕೆ.ವ್ಹಿ ಲಿಂಗದಳ್ಳಿ ಎಲ್.ಐ.ಎಸ್ ಹಾಗೂ ಎಲ್ಲ ೧೧ ಕೆ.ವ್ಹಿ ವಿದ್ಯುತ್ ಮಾರ್ಗಗಳಲ್ಲಿ ಮೇ.೦೮ರ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೩ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳಬಸವನಬಾಗೇವಾಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಹಣದಲ್ಲಿ ಕೆಲವರು ಹೊಲಿಗೆ ಯಂತ್ರ, ಪ್ರಿಡ್ಜ್, ಸೇರಿದಂತೆ ಕೆಲವು ಸಾಮಾನುಗಳನ್ನು ಖರೀದಿಸಿದ್ದನ್ನು ಕೇಳಿದ್ದೇವೆ. ಇದಕ್ಕೆ ವಿಭಿನ್ನವಾಗಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ಒಂದು ಲಕ್ಷ ನುಡಿಮುತ್ತು ಬರೆದ ಯುವ ಸಾಹಿತಿ ಭೀಮರಾಯ ಹೂಗಾರ ಅವರು ತಮ್ಮ ಪತ್ನಿಗೆ ಬಂದಿರುವ ಗೃಹಲಕ್ಷ್ಮೀ ಹಣದಲ್ಲಿ ರಾಜಕಾರಣಿ ಹೇಗಿರಬೇಕು ನುಡಿಮುತ್ತುಗಳನ್ನು ಬರೆಯುವ ಜೊತೆಗೆ ರಾಜಕಾರಣಿಯರ ಜೀವನ ಚರಿತ್ರೆ ಒಳಗೊಂಡ ನಾಲ್ಕು ಪುಸ್ತಕಗಳನ್ನು ಇದುವರೆಗೂ ಪ್ರಕಟಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗಮನ ಸೆಳೆಯುತ್ತಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ತಾಲೂಕಿನ ಹುನ್ನೂರು ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಗಂಭೀರ ಸ್ವರೂಪ ಪಡೆದು ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.ಗ್ರಾಮದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಗ್ರಾಮ ಮಾಡುವಲ್ಲಿ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ತ್ಯಾಜ್ಯವನ್ನು ಸೂಕ್ತ ಜಾಗದಲ್ಲಿ ಸಂಗ್ರಹಿಸಲು ಕ್ರಮ ಕೈಗೊಳ್ಳದ ಗ್ರಾಮ ಪಂಚಾಯಿತಿಯು ಊರು ಪಕ್ಕದ ಹಿಪ್ಪರಗಿ ರಸ್ತೆ ಬದಿಯಲ್ಲಿಯೇ ಸಂಗ್ರಹಿಸುತ್ತಿದೆ. ನಂತರದ ದಿನಗಳಲ್ಲಿ ಅದನ್ನು ಜನವಸತಿಯಿಂದ ದೂರದ ಪ್ರದೇಶಕ್ಕೆ ಸಾಗಿಸಲು ಕ್ರಮ ಕೈಗೊಳ್ಳುತ್ತಿಲ್ಲ. ತ್ಯಾಜ್ಯದಲ್ಲಿರುವ ಪ್ಲಾಸ್ಟಿಕ್, ಕಸಕಡ್ಡಿ ಗಾಳಿಗೆ ಹಾರಿ ಮತ್ತೆ ಊರು ಸೇರಿಕೊಳ್ಳುತ್ತಿದೆ. ವಾರಕ್ಕೊಮ್ಮೆ ಇಲ್ಲವೆ ವಾರದಲ್ಲಿ ಎರಡು ಬಾರಿ ಪ್ಲಾಸ್ಟಿಕ್ ಹಾಗೂ ಕಸವನ್ನು ಸುಡಲಾಗುತ್ತಿದೆ. ಇದರಿಂದ ವಾಯು ಮಾಲಿನ್ಯ ಉಂಟಾಗಿ ಗ್ರಾಮಸ್ಥರು ಅಸ್ತಮಾ ರೋಗಕ್ಕೆ ತುತ್ತಾಗುವಂತಾಗಿದೆ. ಈಗಾಗಲೇ ಗ್ರಾಮಸ್ಥರು ಹಲವಾರು ಬಾರಿ ಈ ವಿಷಯದ ಕುರಿತು ಗ್ರಾಮ ಪಂಚಾಯಿತಿಗೆ ಮೌಖಿಕವಾಗಿ ದೂರು ನೀಡಿದರೂ ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಸ್ಥಳಾವಕಾಶದ ಸಮಸ್ಯೆಹುನ್ನೂರು ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆ ಕುರಿತು ಪಿಡಿಒ…
ಮಕ್ಕಳ ಬೇಸಿಗೆ ಶಿಬಿರ ಸಮಾರೋಪ | ಜಿಪಂ ಸಿಇಓ ರಿಷಿ ಆನಂದ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಜ್ಞಾನ ಮತ್ತು ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಬೇಸಿಗೆ ಶಿಬಿರಗಳು ಸಹಾಕಾರಿಯಾಗಿವೆ ಎಂದು ಜಿಲ್ಲಾ ಬಾಲ ಭವನ ಅಧ್ಯಕ್ಷರಾದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಹೇಳಿದರು.ಅವರು, ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಮಂಗಳವಾರ ನಡೆದ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ಬೇಸಿಗೆ ಶಿಬಿರವು ಬಹಳ ತೃಪ್ತಿದಾಯಕವಾಗಿ ಜರುಗಿದ್ದು, ಅತ್ಯಲ್ಪ ಸಮಯದಲ್ಲಿಯೇ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಕರಾಟೆ, ನೃತ್ಯ, ಸಂಗೀತ, ಚಿತ್ರಕಲೆ, ಕರಕುಶಲ ವಸ್ತುಗಳ ತಯಾರಿಕೆ ಸೇರಿದಂತೆ ಅಗತ್ಯ ಕೌಶಲ್ಯಗಳನ್ನು ತಿಳಿದುಕೊಂಡಿದ್ದಾರೆ. ನಾಲ್ಕು ಗೋಡೆಗಳ ಮಧ್ಯ ಸದಾ ಪುಸ್ತಕ, ಓದು-ಬರಹ ಒತ್ತಡದಿಂದ ಮುಕ್ತರಾಗಿ ಮಕ್ಕಳು ತಮ್ಮ ಸ್ನೇಹಿತರೊಂದಿಗೆ ಆಟವಾಡಿಕೊಂಡು ಸಂತೋಷದಿAದ ಮುಕ್ತವಾದ ವಾತಾವರಣದಲ್ಲಿ ಕಲಿಕೆಯಲು…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಕ್ತದಾನ ಮಾಡುವದರಿಂದ ದೇಹದಲ್ಲಿ ಹೊಸ ರಕ್ತದ ಉತ್ಪತ್ತಿಯಾಗುತ್ತದೆ. ಎಲ್ಲ ದಾನಗಳಲ್ಲಿ ರಕ್ತದಾನವು ಅತ್ಯಂತ ಶ್ರೇಷ್ಠದಾನವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಿಜಯಪುರದ ಚೇರಮನ್ ರಾದ ಪ್ರೋ.ಎಸ್ ಜಿ ರೊಡಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ರೆಡ್ ಕ್ರಾಸ್ ಸಂಸ್ಥೆ ಹಾಗೂ ಐಕ್ಯೂಎಸಿ ಮತ್ತು ಎನ್ಎಸ್ಎಸ್ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರು ಆರೋಗ್ಯವಂತ ವ್ಯಕ್ತಿ ರಕ್ತದಾನ ಮಡುವುದರಿಂದ ಆರೋಗ್ಯ ದೃಷ್ಠಿಯಿಂದ ಒಳ್ಳೆಯದು ಎಂದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಸ್ ಜಿ ಮುರನಾಳ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಶಿವಾನಂದ ಹತ್ತರಕಿ ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಪ್ರೊ. ಆರ್ ಎಚ್ ರಮೇಶ ಮಾತನಾಡಿʼರಕ್ತದಾನ ಶಿಭಿರದ ಮೂಲಕ ರಕ್ತದ ಅವಶ್ಯಕತೆ ಉಳ್ಳವರಿಗೆ ಸಾಹಾಯಕಾರಿಯಾಗಿದೆ. ಇಂತಹ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳಿಸಬೇಕಾದುದು ಅಗತ್ಯವಾಗಿದೆ ಎಂದರು.ಐವತ್ತಕ್ಕೂ ಹೆಚ್ಚು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಮಹಿಳಾ ವಿ. ವಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೆರೂಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ ಬೆಳೆ ವಿಮೆ ಜಮೆಯಾಗದ ಹಿನ್ನೆಲೆಯಲ್ಲಿ, ರೈತರು ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಮಂಗಳವಾರ ಆಗಮಿಸಿದ ಕೆರೂಟಗಿ ಗ್ರಾಮದ ರೈತರು ತಮ್ಮ ಖಾತೆಗಳಿಗೆ ಜಮೆಯಾಗದೇ ಇರುವ ಬೆಳೆ ವಿಮೆಯ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ ಮಾತನಾಡಿ, ೨೦೨೪-೨೫ ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ರೈತರು ತೊಗರಿ ಬೆಳೆ ಭಿತ್ತನೆ ಮಾಡಿದ್ದರು. ಆದರೆ ನಂತರ ಬಹುತೇಕ ಬೆಳೆ ಮಳೆ ಕೊರತೆ ಹಾಗೂ ಇನ್ನಿತರ ಪ್ರಕೃತಿ ವಿಕೋಪಗಳಿಗೆ ಒಳಗಾಗಿ ಫಸಲು ಬಾರದಂತಾಯಿತು. ಆದರೆ ರೈತರು ತೊಗರಿ ಬೆಳೆಯ ವಿಮೆ ತುಂಬಿದ್ದು, ಈಗ ವಿಮೆ ಪರಿಹಾರದ ಹಣ ಕೆಲವು ರೈತರಿಗೆ ಮಾತ್ರ ಜಮೆ ಆಗಿದೆ. ಇನ್ನೂಳಿದ ರೈತರು ವಿಮೆ ಹಣ ಪಾವತಿಸಿದ್ದರು ಸಹ ಅವರಿಗೆ ಯಾವುದೇ ವಿಮೆ ಪರಿಹಾರ ಬಂದಿರುವುದಿಲ್ಲ ಎಂದರು.ಬಿಜೆಪಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಜಾಪ್ರಭುತ್ವದಲ್ಲಿ ಮತದಾನ ಒಂದು ಶ್ರೇಷ್ಠ ಕರ್ತವ್ಯ. ಮತದಾನ ಎಂಬುದು ಪ್ರಜಾಪ್ರಭುತ್ವದ ಬೆನ್ನೆಲುಬು ಇದ್ದಂತೆ ಎಂದು :ಪ್ರೊ.ರವಿ ಕಟ್ಟಿಮನಿ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಜg ನಂಪ್ರಥಮ ದರ್ಜೆ ಕಾಲೇಜುಯಡಿ ಮುಳಸಾವಳಗಿ ದತ್ತು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರೇವiಕುಮಾರಿ ಮಾತನಾಡಿ, ಮತದಾರರು ಭ್ರಷ್ಟರಾದರೆ ಆಯ್ಕೆಯಾಗಿ ಬರುವ ಆಳುವ ವರ್ಗವು ಭ್ರಷ್ಟವಾಗಿರುತ್ತದೆ ಎಂದರು.ಉಪನ್ಯಾಸಕ ಶಿವಪುತ್ರ ಜಾಲವಾದಿ, ಸಂಗನಗೌಡ ಬಿರಾದಾರ, ಗ್ರಾಮ ಪಂಚಾಯಿತಿ ಸದಸ್ಯರಾದ ರೇಣುಕಾ ಬಿರಾದಾರ, ಉಮೇಶ ಮೂಲಿಮನಿ, ರೇಖಾ ತಳವಾರ ಸೇರಿದಂತೆ ರಾಜು ಕಪಾಲಿ, ಮಲ್ಲಿಕಾರ್ಜುನ ಲಕ್ಷ್ಮೀಶ, ಭೀಮನಗೌಡ ಬಿರಾದಾರ ಇದ್ದರು.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಘೋಷಣೆ ಮಾಡಿದ್ದ ಸಹಾಯಧನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸದಾ ಹಿಂದುತ್ವ, ಹಿಂದೂಗಳ ಪರವಾಗಿ ಗಟ್ಟಿಯಾಗಿ ನಿಲ್ಲುವ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು, ಈಚೆಗೆ ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಕುಟುಂಬವರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.5 ಲಕ್ಷ ಸಹಾಯ ಧನ ನೀಡುವುದಾಗಿ ಘೋಷಿಸಿದಂತೆ, ಮಂಗಳವಾರ ತಮ್ಮ ಆಪ್ತ ಸಹಾಯಕರ ಮೂಲಕ ಸಹಾಯಧನ ಚೆಕ್ ನ್ನು ನೀಡಿದರು.ಬಂಟ್ವಾಳ ತಾಲ್ಲೂಕಿನ ಕಾರಿಂಜ ಗ್ರಾಮದಲ್ಲಿರುವ ತೋಟದ ಮನೆಗೆ ಭೇಟಿ ನೀಡಿ, ಸುಹಾಸ್ ಶೆಟ್ಟಿ ಅವರ ತಂದೆ-ತಾಯಿ ಅವರಿಗೆ ಸಾಂತ್ವನ ಹೇಳಿ ಚೆಕ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಪಿ.ಜಿ.ಕೆಂಗನಾಳ, ಉಮೇಶ ಕೋರೆ, ಯಲಗೊಂಡ ಬಾಗಾದಿ, ಮುಖಂಡರಾದ ದಾದಾಸಾಹೇಬ ಬಾಗಾಯತ, ಸಚಿನ ಕೋರಿ ಸೇರಿದಂತೆ ಸ್ಥಳೀಯ ಹಿಂದೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
