Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದಾದದು. ಶಿಕ್ಷಕ, ರೈತ, ಸೈನಿಕ ಈ ದೇಶದ ಬೆನ್ನೆಲುಬಗಳು. ತಂದೆ, ತಾಯಿ ಮಾತುಗಳನ್ನು ಕೇಳದ ಕೆಲವೊಂದಿಷ್ಟು ಮಕ್ಕಳು ಶಿಕ್ಷಕರ ಮಾತುಗಳಿಗೆ ಗೌರವ ಕೊಡುತ್ತಾರೆಂದು ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಪ್ರಕಾಶ ನರಗುಂದ ಹೇಳಿದರು.ಬಿದರಕುಂದಿ ಗ್ರಾಮದ ಶಿವಕುಮಾರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಎಡ್ ಪ್ರಶಿಕ್ಷಣಾರ್ಥಿಗಳ ನಿಕಟ ಸೇವಾ ಪೂರ್ವ ತರಬೇತಿ ಮುಕ್ತಾಯ ಹಾಗೂ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು. ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ಗುರುತರ ನಾಗರಿಕ ಸಮಾಜದ ಕರ್ತವ್ಯ. ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಲಿಂಗೈಕ್ಯ ಮಹಾಂತ ಶಿವಯೋಗಿಗಳು ಬಸವ ತತ್ವದ ಪರಿಪಾಲಕರಾಗಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕು ಬಣಜಿಗ ಸಮಾಜವನ್ನು ಸಂಘಟನಾತ್ಮಕವಾಗಿ ಬಲಿಷ್ಠಗೊಳಿಸಲು ಪೂರ್ಣಪ್ರಮಾಣದ ಸಮಾಜದ ಪದಾಧಿಕಾರಿಗಳನ್ನು ರಚಿಸಲಾಗಿದೆ.ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎಂ.ಎಸ್.ನಾವದಗಿ, ಅಧ್ಯಕ್ಷರಾಗಿ ಗಣ್ಯ ವರ್ತಕ ಅಶೋಕ ಚಟ್ಟೇರ, ಉಪಾಧ್ಯಕ್ಷರಾಗಿ ಬಿ.ಆರ್.ಚಿನಿವಾರ, ಬಸವರಾಜ ಬೆಲ್ಲದ, ಸೋಮಶೇಖರ ಅಣೆಪ್ಪನವರ್, ಸಿದ್ದು ಹೆಬ್ಬಾಳ, ಸಂಗಮೇಶ ಕಡಿ, ಕಾರ್ಯದರ್ಶಿಯಾಗಿ ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗದೀಶ ಕಂಠಿ, ಸಂಗಣ್ಣ ನಾಶಿ, ಪ್ರವೀಣ ನಾಗಠಾಣ, ದುಂಡಪ್ಪ ಅಕ್ಕಿ, ಶಿವಾನಂದ ಹುರಕಡ್ಲಿ, ಮುರುಗೇಶ ಹುಂಡೇಕಾರ, ಖಜಾಂಚಿಯಾಗಿ ಸಂತೋಷ ನಾಯನೇಗಲಿ, ಸಹ ಖಜಾಂಚಿಯಾಗಿ ರಮೇಶ ಕಿತ್ತೂರ, ವಕ್ತಾರರಾಗಿ ರುದ್ರೇಶ ಕಿತ್ತೂರ, ಪತ್ರಿಕಾ ಪ್ರತಿನಿಧಿಗಳಾಗಿ ಗುರುನಾಥ ಕತ್ತಿ ಮತ್ತು ಡಿ.ಬಿ.ವಡವಡಗಿ, ಕಾರ್ಯಕಾರಿಣಿ ಸದಸ್ಯರಾಗಿ ತೆರಿಗೆ ಸಲಹೆಗಾರರಾಗಿರುವ ನಾಗಭೂಷಣ ನಾವದಗಿ ವಕೀಲರು, ಶಿವಾನಂದ ಕಿಣಗಿ ವಕೀಲರು, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಿ.ಎಸ್.ಚಳಗೇರಿ, ಎಸ್.ಎಸ್.ಹುನಗುಂದ, ಮುರುಗೇಶ ಹೊಕ್ರಾಣಿ, ಅಶೋಕ ಚಿನಿವಾರ, ಸುನೀಲ ನಾಗಮೋತಿ, ಆನಂದ ಕಂಠಿ, ಸಿದ್ದಲಿಂಗ ಚಿನಿವಾರ, ರಾಜೇಶ ಹುನಗುಂದ, ಜಗದೀಶ ಲಕ್ಷಟ್ಟಿ ಆಯ್ಕೆಯಾಗಿದ್ದಾರೆ. ಯುವ ಘಟಕ ಅಧ್ಯಕ್ಷರಾಗಿ ಪುರಸಭೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ‘ಕಸ ಕಂಡರೆ ಕ್ಯೂಆರ್ ಕೋಡ್ಗೆ ಫೋಟೋ ಕಳಿಸಿ’ ನೂತನ ಅಭಿಯಾನಕ್ಕೆ ಎಲ್ಲರೂ ಸ್ಪಂದಿಸಿ ಪಟ್ಟಣದ ಸ್ವಚ್ಛತೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಹೇಳಿದರು.ಪಟ್ಟಣದ ಪಂಚಾಯಿತಿ ಆವರಣದಲ್ಲಿ ಶನಿವಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಸ್ವಚ್ಛತೆಗಾಗಿ ಪೌರಕಾರ್ಮಿಕರು ಈಗಾಗಲೇ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅದಾಗ್ಯೂ ಕಸ ವಿಲೇವಾರಿ ಕುರಿತು ಆಗಾಗ ದೂರುಗಳು ಬರುವ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಈ ವಿನೂತನ ಅಭಿಯಾನ ಆರಂಭಗೊಂಡಿದೆ.ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.ಪಟ್ಟಣ ಪಂಚಾಯತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಪಟ್ಟಣದಲ್ಲಿ ಕಸ ವಿಲೇವಾರಿ ಸರಿಯಾಗಿ ಕಾರ್ಯಗತಗೊಳಿಸಿ ಸ್ವಚ್ಛ ಪರಿಸರ ನಿರ್ಮಿಬೇಕಾಗಿದೆ. ಕಸ ವಿಲೇವಾರಿ ವಾಹನ ಮನೆ ಬಾಗಿಲಿಗೆ ಬಂದಾಗ ಕಸವನ್ನು ಪೌರ ಕಾರ್ಮಿಕರ ಸಹಾಯದೊಂದಿಗೆ ವಿಲೇವಾರಿ ವಾಹನಕ್ಕೆ ರವಾನಿಸಲು ಸಾರ್ವಜನಿಕರು ಮುಂದಾಗಬೇಕು ಇದರಿಂದ ನಿಮ್ಮ ಸುತ್ತಲಿನ ವಾತಾವರಣವೂ ಶುದ್ಧವಾಗಿರುತ್ತದೆ. ಯಾವುದೇ ಕಾರಣಕ್ಕೂ ಕಸವನ್ನು ರಸ್ತೆ ಬದಿ ಎಸೆಯುವುದು ಬೇಡ ಎಂದರು.ಅಭಿಯಾನ ಪಟ್ಟಣ ಪಂಚಾಯಿತಿಯಿಂದ ಆರಂಭಗೊಂಡು ಡಾ. ಅಂಬೇಡ್ಕರ್ ವೃತ್ತದವರೆಗೆ ತೆರಳಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಿಂದಗಿ ರಸ್ತೆಯಲ್ಲಿನ ಮೋಹನ ಬುದ್ನಿ ಎಂಬುವವರಿಗೆ ಸೇರಿದ ಜಮೀನಿನ ಭಾವಿಯಲ್ಲಿ ಅನಾಮಧೇಯ ಪುರುಷನ ಶವ ಪತ್ತೆಯಾಗಿದೆ.ಮೃತ ವ್ಯಕ್ತಿ ಅಂದಾಜು ೨೫ ರಿಂದ ೩೦ ವರ್ಷದವನಾಗಿದ್ದು, ಕರಿ ಕೂದಲು, ೫.೫ ಎತ್ತರ ಹೊಂದಿ ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಮೃತನ ಮೈಮೇಲೆ ಕೆಂಪು ಬಣ್ಣದ ಬನಿಯನ್, ಚಾಕಲೆಟ್ ಬಣ್ಣದ ನೈಟ್ ಪ್ಯಾಂಟ್, ಚಾಕಲೇಟ್ ಬಣ್ಣದ ಅಂಡರ್ವೇರ್, ಕೊರಳಲ್ಲಿ ಕರಿದಾರವಿರುತ್ತದೆ.ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ದೇವರಹಿಪ್ಪರಗಿ ಪೊಲೀಸ್ ಠಾಣೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮದಲ್ಲಿ ಮಹಾಶಿವಶರಣೆ ಅಕ್ಕಮಹಾದೇವಿ ಪ್ರತಿಮೆ ಪ್ರಾಣ ಪ್ರತಿಷ್ಠಾಪನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಮಲ್ಲಯ್ಯನ ದೇವಸ್ಥಾನದಲ್ಲಿ ಶುಕ್ರವಾರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು ಬಸವಣ್ಣ ಅಕ್ಕಮಹಾದೇವಿ, ಹಾಗೂ ಶ್ರೀಶೈಲ ಮಲ್ಲಿಕಾರ್ಜುನರ ವೇಷಭೂಷಣ ಧರಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು. ಜೊತೆಗೆ ಅಕ್ಕಮಹಾದೇವಿಯವರ ವಚನ, ಹಾಡುಗಳಿಂದ ಕೂಡಿದ ಮಕ್ಕಳ ಕೋಲಾಟ ಎಲ್ಲರ ಗಮನ ಸೆಳೆಯಿತು.ಗ್ರಾಮದ ನೂರಾರು ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಆರತಿ ಸಮೇತವಾಗಿ ಪಾಲ್ಗೊಂಡು ಭಕ್ತಿ ಭಾವ ತೋರಿದರು.ಗ್ರಾಮದ ಭಜನಾಮೇಳ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ತಂದಿತು.ನಂತರ ನಡೆದ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿಯವರ ಚರಿತ್ರೆಯ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಹಣಮಂತ್ರಾಯ ಹಿರೂರ ಮಾತನಾಡಿದರು.ಅಂದಾನಯ್ಯ ಹಿರೇಮಠ, ಶರಣಗೌಡ ಪಾಟೀಲ, ಮಲಕು ಸುರಗಿಹಳ್ಳಿ, ಶಿವಾನಂದ ಹೊನ್ನಳ್ಳಿ, ಮಲ್ಲನಗೌಡ ಬಿರಾದಾರ, ಸಾಹೇಬಗೌಡ ಬಿರಾದಾರ, ಭೀಮರಾಯ ಪೊಲೇಶಿ, ಸಿದ್ದು ಹದರಿ, ಭಾಗೀರಥಿ ನಾಗರಳ್ಳಿ, ಶಾಂತಾಬಾಯಿ ಗಬ್ಬೂರ, ಭಾರತಿ ಗಬ್ಬೂರ, ಸರೂಬಾಯಿ ಉಕುಮನಾಳ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯಾರ್ಥಿಗಳು ದುಶ್ಚಟಗಳ ದುಷ್ಪರಿಣಾಮಗಳನ್ನು ಅರಿತು ಅವುಗಳಿಂದ ದೂರವಿರಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನಲ್ಲಿ ಶುಕ್ರವಾರ ಜರುಗಿದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಡಾ.ಮಹಾಂತ ಶಿವಯೋಗಿಗಳ ಜನ್ಮದಿನವನ್ನು ಕರ್ನಾಟಕದಲ್ಲಿ ವ್ಯಸನ ಮುಕ್ತದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿ ಮಾದಕ ಪದಾರ್ಥ ಹಾಗೂ ಪಾನೀಯಗಳ ಕುರಿತು ಎಚ್ಚರವಹಿಸಿ ಅವುಗಳಿಂದ ದೂರವಿರಬೇಕು. ಮಹಾಂತ ಶಿವಯೋಗಿ ಸ್ವಾಮೀಜಿ ‘ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ೧೯೭೫ ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮದ ಮಹತ್ವ ಅರಿತು ತಾವು ಸಹ ದುಶ್ಚಟಗಳಿಗೆ ಅಂಟಿದವರನ್ನು ಎಚ್ಚರಿಸಲು ಮುಂದಾಗಿ ಎಂದು ಹೇಳುತ್ತಾ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ವಿಜಯಲಕ್ಷ್ಮಿ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ, ತಹಶೀಲ್ದಾರ ಕಾರ್ಯಾಲಯ ಸಿಬ್ಬಂದಿಗಳಾದ ಚನ್ನಬಸು ಹೊಸಮನಿ, ಸಂತೋಷ ತಳವಾರ, ವಿನೋದಕುಮಾರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಶ್ರಾವಣ ಕಾವ್ಯ ಸಂಭ್ರಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಮಕ್ಕಳೆ ರಚಿಸಿದ ಭಾವಚಿತ್ರವನ್ನು ಉದ್ಘಾಟಿಸಿ ಮಾತನಾಡಿದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜಿ ಎಚ್ ಮಣ್ಣೂರ ಮಾತನಾಡಿ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಸಂಸ್ಕಾರ ನೀಡುವುದು ಅವಶ್ಯವಾಗಿದೆ ಕವಿಗಳ ಕಾವ್ಯ ಕಥೆ ವಿವಿಧ ಸಾಹಿತ್ಯದ ಪ್ರಕಾರಗಳನ್ನು ಮಕ್ಕಳಿಂದಲೇ ಓದಿಸಿ ಚಿತ್ರ ತೆಗೆಸುವುದರ ಮೂಲಕ ಮಕ್ಕಳ ಮೇಲೆ ಕವಿಗಳ ಪ್ರಭಾವ ಬೀರಿ ಭವಿಷ್ಯದಲ್ಲಿ ಖ್ಯಾತ ಕವಿ ಸಾಹಿತಿಗಳಾಗ ಬಲ್ಲರು ವರಕವಿ ಬೇಂದ್ರೆ ಅವರ ಶ್ರಾವಣ ಬಂತು ಕಾಡಿಗೆ ಬಂತು ನಾಡಿಗೆ ಬಂತು ಬೀಡಿಗೆ ಬಂತು ಶ್ರಾವಣ ಮಾಸವನ್ನು ಸಂಭ್ರಮಿಸುವ ಹಾಡು ಸುಂದರವಾಗಿ ಮೂಡಿಬಂದಿದೆ ಎಂದು ನುಡಿದರು.ಇದೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಖ್ಯಾತ ಕವಿಗಳ ಕವನ ವಾಚನ ಮಾಡಿದರು ಮಕ್ಕಳಿಗೆ ನಿರಂತರವಾಗಿ ಸೃಜನಶೀಲ ಹಾಗೂ ರಚನಾತ್ಮಕ ಚಟುವಟಿಕೆ ಮಾಡಿಸುತ್ತಿರುವುದು ಶ್ಲಾಘನೀಯ ವಾದದ್ದು ಎಂದು ನುಡಿದರು ವೇದಿಕೆಯ ಮೇಲೆ ಮುಖ್ಯೋಪಾಧ್ಯಯ ರಮೇಶ ಕೊಟ್ಯಾಳ…
ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ, ಮನೆ-ಮನೆಗೆ ಹೋಗಿ ನೊಂದಣಿ ಮಾಡುವ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಜೀರಂಕಲಗಿ ಗ್ರಾಮದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಆಗಸ್ಟ್ ೧೦, ೧೧, ೧೨ರಂದು ಗುರು ಶ್ರೀ ರಾಘವೇಂದ್ರ ಸ್ವಾಮಿಗಳವರ ೩೫೪ನೇ ಆರಾಧನಾ ಮಹೋತ್ಸವ ಏರ್ಪಡಿಸಲಾಗಿದೆ.ಮಹೋತ್ಸವದ ಅಂಗವಾಗಿ ಆ.೧೦ರಂದು ಪೂರ್ವಾರಾಧನೆ ಅಂಗವಾಗಿ ಬೆಳಗ್ಗೆ ೭ಗಂಟೆಗೆ ಗೋಪೂಜಾ, ಧ್ವಜಾರೋಹಣ, ೮ ಗಂಟೆಗೆ ಪಂ. ಸಮೀರಾಚಾರ್ಯ ಇವರಿಂದ ಪವಮಾನ ಹೋಮ, ೧೦ ಗಂಟೆಗೆ ಕಲಶ ಸ್ಥಾಪನೆ, ಶ್ರೀ ಹರಿವಾಯು ಸ್ತುತಿ, ಅಷ್ಟೋತ್ತರ, ಕ್ಷೀರಾಭಿಷೇಕ ಪಂಚಾಮೃತ, ಅಲಂಕಾರ, ೧೨ ಗಂಟೆಗೆ ಪೂಜಾ, ನೈವೇದ್ಯ, ಹಸ್ತೋದಕ, ಸಾಯಂಕಾಲ ೭ ಗಂಟೆಗೆ ವಿಜಯಪುರದ ಸರ್ವಜ್ಞ ವಿಹಾರ ವಿದ್ಯಾಪೀಠದ ಪಂಡಿತ ಸಮೀರಾಚಾರ್ಯ ಕುಲಕರ್ಣಿ ಇವರಿಂದ ನವಮ ಸ್ಕಂದ ಭಾಗವತ ಪುರಾಣ, ಶ್ರೀ ವೇದೇಶತೀರ್ಥ ವಿದ್ಯಾಪೀಠ ಮಣೂರದ ಪಂಡಿತ ಸತ್ಯವರಾಚಾರ್ಯ ಇವರಿಂದ ಪ್ರವಚನ, ರಾತ್ರಿ ೮ ಗಂಟೆಗೆ ಸ್ಥಳೀಯ ಭಜನಾ ಮಂಡಳಿಗಳಿಂದ ತಾರತಮ್ಯೋಕ್ತ ಭಜನೆ.೧೧ರಂದು ಮಧ್ಯಾರಾಧನೆ ಪ್ರಯುಕ್ತ ಬೆಳಗ್ಗೆ ೭ ಗಂಟೆಗೆ ಪಂಚಾಮೃತ, ಅಷ್ಟೋತ್ತರ, ಅಲಂಕಾರ, ೧೦ ಗಂಟೆಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿಜಯಪುರ ಶಾಖಾಧಿಕಾರಿ ಸತೀಶ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಶಾಲಾ ಮಕ್ಕಳಲ್ಲಿ ಚುನಾವಣೆ ಮತ್ತು ಸಂಸತ್ತು ರಚನೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮೀಪದ ಬರಡೋಲ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢ ವಿಭಾಗ) ದಲ್ಲಿ ೨೦೨೫-೨೬ ನೇ ಸಾಲಿನ ಶಾಲಾ ಸಂಸತ್ತ ಚುನಾವಣೆ ಇ.ಎಲ್.ಸಿ. ಕ್ಲಬ್ ಅಡಿಯಲ್ಲಿ ನಡೆಯಿತು.ಶಾಲಾ ಸಂಸತ್ತ ಚುನಾವಣೆ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ನಡೆಯಿತು, ನಾಮಪತ್ರ ಸಲ್ಲಿಕೆ ಹಿಡಿದು, ಚುನಾವಣಾ ಪ್ರಚಾರ, ನಾಮ ಪತ್ರ ಹಿಂಪಡೆಯುವಿಕೆ, ಮತದಾನ, ಫಲಿತಾಂಶ ಪ್ರಕಟಣೆ, ಶಾಲಾ ಸಂಸತ್ತ ರಚನೆ, ಮಂತ್ರಿಗಳ ಪದಗ್ರಹಣ ಹೀಗೆ ಎಲ್ಲವೂ ಚುನಾವಣೆ ಪ್ರಕ್ರಿಯೆಯನ್ನು ಒಳಗೊಂಡಿತ್ತು.ಇ.ವ್ಹಿ.ಎಮ್. ಮತಯಂತ್ರದ ಮಾದರಿಯಲ್ಲಿಯೇ ಮೊಬೈಲ್ ಫೋನ್ ಬಳಕೆ ಮಾಡಿ ಮತದಾನ ಫಲಿತಾಂಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ಚುಣಾವಣೆ ನೋಡಲ್ ಅಧಿಕಾರಿಯಾಗಿ ಶಿಕ್ಷಕಿ ಎಮ್.ಎಸ್. ಲುಗಡೆ ಕಾರ್ಯನಿರ್ವಹಿಸಿದರು. ಶಾಲೆಯ ಎಲ್ಲ ಶಿಕ್ಷಕರು, ಶಿಕ್ಷಕಿಯರು ಚುನಾವಣಾ ಕಾರ್ಯದಲ್ಲಿ ಸಹಕಾರ ನೀಡಿದರು.ನಂತರ ಮಂತ್ರಿಗಳ ಪದಗ್ರಹಣ ಸಮಾರಂಭ ನಡೆಯಿತು.ಉಪ ಪ್ರಾಂಶುಪಾಲ ಎಸ್.ಆಯ್. ಚನಗೊಂಡ ಅಧ್ಯಕ್ಷತೆ ವಹಿಸಿದ್ದರು, ಶಾಲಾ ಸಂಸತ್ತ ಮಂತ್ರಿ ಮಂಡಳದಲ್ಲಿ ಪ್ರಧಾನಮಂತ್ರಿ, ವಾರ್ತಾ ಮತ್ತು…
