Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪವಾಡ ಬಸವೇಶ್ವರ ದೇವಾಲಯದಲ್ಲಿ ಇದೇ ದಿನಾಂಕ ೬ ರಂದು ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ ನಡೆಯಲಿದೆ ಎಂದು ಪಾರಂಪರಿಕ ವೈದ್ಯ ಪರಿಷತ್ ಜಿಲ್ಲಾ ಸಂಚಾಲಕ ಶಿವಾನಂದ ಜಂಗಿನಮಠ ಹೇಳಿದರು.ಶನಿವಾರ ನಗರದ ಜಿಪಂ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಾತ, ಪಿತ್ತ, ಕಫ ಸೇರಿದಂತೆ ತ್ರಿದೋಷಗಳಿಗೆ ಪರಿಹಾರ ಕಲ್ಪಿಸುವ ವಿವಿಧ ಗಿಡಮೂಲಿಕೆಗಳು, ಆರೋಗ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಸಮಾವೇಶ ನಡೆಯಲಿದ್ದು, ಸಂಘದ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.ಪಾರಂಪರಿಕ ವೈದ್ಯರ ಸಮಸ್ಯೆಗಳ ಬಗ್ಗೆ ಚರ್ಚೆ, ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸುವುದು, ಪಾರಂಪರಿಕ ವೈದ್ಯರಿಗೆ ಉಚಿತ ಬಸ್ ಸಂಪರ್ಕ ಕಲ್ಪಿಸುವುದು, ವೈದ್ಯರಿಗೆ ಮಾಶಾಸನ ನೀಡುವುದು, ಪಾರಂಪರಿಕ ವೈದ್ಯ ಕುಟುಂಬದ ಮಕ್ಕಳಿಗೆ ಬಿಎಎಂಎಸ್ ಸೀಟುಗಳನ್ನು ಹೆಚ್ಚಿಗೆ ಮೀಸಲಿರಿಸುವುದು ಸೇರಿದಂತೆ ಅನೇಕ ರೀತಿಯ ಬೇಡಿಕೆಗಳನ್ನು ಸರ್ಕಾರದ ಮುಂದೆ ಇರಿಸಲಾಗುವುದು ಎಂದರು.ಕರ್ನಾಟಕದಲ್ಲಿ ೩ ರಿಂದ…
” ವಿಜಯಪುರದ ಪತ್ರಿಕಾ ಭವನದಲ್ಲಿ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಸಾಂಸ್ಕೃತಿಕ ವೈಭವವನ್ನು ಪ್ರಪಂಚಾದ್ಯಂತ ಪಸರಿಸುವ ಕೆಲಸ ನಡೆಯಬೇಕಿದೆ, ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆಯಾಗಿ ಕಲಾಧಾರಾ ಎಂಬ ವಿಶೇಷ ಕಾರ್ಯಕ್ರಮ ಸಂಘಟಿಸಲು ನಿರ್ಧರಿಸಲಾಗಿದೆ, ಸಾರ್ವಜನಿಕರ ಸಹಕಾರ ದೊರಕಿದರೆ ಪ್ರತಿ ವರ್ಷವೂ ಈ ಕಾರ್ಯಕ್ರಮವನ್ನು ಸಂಘಟಿಸುವ ಯೋಜನೆ ಹೊಂದಲಾಗಿದೆ ಎಂದು ರಾಜ್ಯಸಭಾ ಸದಸ್ಯೆ ಹಾಗೂ ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಡಾ.ಸುಧಾಮೂರ್ತಿ ಹೇಳಿದರು.ವಿಜಯಪುರದ ಪತ್ರಿಕಾ ಭವನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಅವರು, ಸಾಂಸ್ಕೃತಿಕ ಭವ್ಯತೆಯ ಪ್ರಸಾರದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸರ್ವೇಕ್ಷಣಾ ಇಲಾಖೆ, ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ, ಹಿಂದೂಸ್ತಾನಿ, ಕರ್ನಾಟಕಿ, ಕಥಕ್ ಸೇರಿದಂತೆ ಅನೇಕ ಕಲಾ ಪ್ರಕಾರಗಳ ರಸ ದೌತಣ ಉಣ ಬಡಿಸುವ ಕಾರ್ಯ ಎರಡು ದಿನಗಳ ಕಾಲ ನಡೆಯಲಿದೆ. ಈ ವರ್ಷದ ಯಶಸ್ಸು ನೋಡಿ ಮುಂದಿನ ಸಾರಿಯೂ ಈ…
ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಕ್ಕೆ ನಿಂತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆ ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಕ್ಕೆ ನಿಂತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ʻರಿಪಬ್ಲಿಕ್ ಆಫ್ ಬಳ್ಳಾರಿʼಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಕಾರಣವಾದ ಬಳ್ಳಾರಿ ಫೈರಿಂಗ್ ಘಟನೆಯ ನಂತರ ಖಾಸಗಿ ಬಂದೂಕುಗಳನ್ನು ಹೊಂದಲು ಅನುಮತಿ ನೀಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಡಿಸಿಎಂ ತಿಳಿಸಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, “ಯಾರ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಲಿದೆ” ಎಂದು ಹೇಳಿದರು.ನಮ್ಮ ಸರ್ಕಾರ ಮೊದಲ ಬಾರಿಗೆ ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ, ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು…
ಉದಯರಶ್ಮಿ ದಿನಪತ್ರಿಕೆ ವರದಿ: ದೇವೇಂದ್ರ ಹೆಳವರವಿಜಯಪುರ: ಜ್ಞಾನಯೋಗಾಶ್ರಮದ ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಪ್ರವಚನವಿದೆ ಎಂದರೆ ಸಾಕು ಸಹಸ್ರ- ಸಹಸ್ರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದುದನ್ನು ನಾವು- ನೀವೆಲ್ಲಾ ಕಣ್ಣಾರೆ ಕಂಡಿದ್ದುಂಟು.ಬದುಕಿನಲ್ಲಿ ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ, ಗೌರವ ಪುರಸ್ಕಾರಗಳನ್ನು ಬಯಸದೇ ಆಧ್ಯಾತ್ಮಿಕ ಸಾಧನೆಯ ಉತ್ತುಂಗ ಶಿಖರಕ್ಕೆ ಏರಿದ ಶ್ರೀಗಳು, ಅತ್ಯಂತ ಸರಳವಾಗಿ ಬದುಕಿ ಹೋದರು. ಬದುಕಿನುದ್ದಕ್ಕೂ ತಮ್ಮ ಸಮಯವನ್ನು ಆಧ್ಯಾತ್ಮಿಕ ಚಿಂತನೆಗೆ, ಜ್ಞಾನದಾಸೋಹಕ್ಕೆ ಮೀಸಲಿಟ್ಟಿದ್ದ ಶ್ರೀಗಳು, ದೇಶ-ವಿದೇಶಗಳಲ್ಲಿ ಸಂಚರಿಸಿ ಜನತೆಗೆ ಆಧ್ಯಾತ್ಮಿಕ ಜ್ಞಾನದ ಜೊತೆಗೆ ಪ್ರೀತಿಯನ್ನು ಹಂಚಿ ಎಲ್ಲರ ಮನಸ್ಸು- ಹೃದಯಗಳನ್ನು ಅರಳಿಸಿದ ಶ್ರೇಷ್ಠ ಯೋಗಿಗಳು.ಸಿದ್ಧೇಶ್ವರ ಶ್ರೀಗಳು ದೇಹತ್ಯಾಗ ಮಾಡಿ ಬಯಲಲ್ಲಿ ಬಯಲಾಗಿ ಮೂರು ವರ್ಷಗಳಾದರೂ ಅವರ ಬಗ್ಗೆ ಜನರಲ್ಲಿರುವ ಶ್ರದ್ಧಾಭಾವನೆ, ಭಕ್ತಿಭಾವನೆ ಒಂದಿಷ್ಟು ಕಡಿಮೆಯಾಗಿಲ್ಲ ಎನ್ನುವುದಕ್ಕೆ ಜ್ಞಾನಯೋಗಾಶ್ರಮದಲ್ಲಿ ಪ್ರತೀ ವರ್ಷ ಜನೇವರಿಯಲ್ಲಿ ಹಮ್ಮಿಕೊಳ್ಳುವ ಗುರುನಮನ ಮಹೋತ್ಸವಕ್ಕೆ ನಾಡಿನ ವಿವಿಧೆಡೆಯಿಂದ ಭಕ್ತಸಾಗರ ಹರಿದು ಬರುತ್ತಿರುವುದೇ ಸಾಕ್ಷಿಯಾಗಿದೆ.ಪರಿಸರ ಪ್ರೇಮಿಗಳಾಗಿದ್ದ ಶ್ರೀಗಳಿಗೆ ಪಶು-ಪಕ್ಷಿ, ಹೂವು, ಗಿಡ-ಮರಗಳ ಮೇಲೆ ಬಹಳ ಪ್ರೀತಿ ಇತ್ತು. ಶ್ರೀಗಳು ಆಶ್ರಮದ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಜನವರಿ ೨೫ ರವಿವಾರ ರಥಸಪ್ತಮಿ ಶುಭ ಮಹೂರ್ತದಂದು ರಾಜ್ಯಮಟ್ಟದ ಆದಿ ಬಣಜಿಗ ಸಮಾಜದ ವಧು-ವರರ ಸಮಾವೇಶವನ್ನು ವಿಜಯಪೂರ ನಗರದ ಸಂಗನಬಸವ ಸಮುದಾಯ ಭವನ ಲಿಂದಗುಡಿ ರಸ್ತೆ ಬಿಎಲ್ಡಿಇ ಆಸ್ಪತ್ರೆ ಹತ್ತಿರ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಜಿಲ್ಲಾ ಅಧ್ಯಕ್ಷ ಸೋಮನಿಂಗ ಕಠಾವಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.ಜಿಲ್ಲಾ ವೀರಶೈವ ಲಿಂಗಾಯತ ಆದಿಬಣಜಿಗರ ಕ್ಷೇಮಾಭಿವೃದ್ದಿ ಸಂಘ ವಿಜಯಪೂರ(ರಿ), ಮತ್ತು ವಧು-ವರರ ಮಾಹಿತಿ ಕೇಂದ್ರ ಸಂಘಟಣೆ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಕರ್ನಾಟಕ ಸೇರಿದಂತೆ ಪಕ್ಕದ ರಾಜ್ಯಗಳಾದ ಮಹರಾಷ್ಟ್ರ, ಆಂದ್ರ ಪ್ರದೇಶ, ತೆಲಂಗಾಣದಲ್ಲಿರುವ ಆಧಿಬಣಜಿಗ ಸಮುದಾಯದ ಬಂಧುಗಳಲ್ಲಿ ಸಂಪರ್ಕ ಕಲ್ಪಿಸುವ ಬಾಂಧವ್ಯ ಪ್ರೀತಿ. ಪ್ರೇಮ, ಬೆಳೆಸುವ ಒಬ್ಬರಿಗೊಬ್ಬರು ಪರಸ್ಪರ ಪರಿಚಯ ಮಾಡಿಕೊಳ್ಳಲು ಅನುಕೂಲವಾಗುವ ದೃಷ್ಟಿಕೋಣದಿಂದ ಇದೊಂದು ಸಮಾಜದ ಐತಿಹಾಸಿಕ ನಿರ್ಣಯವಾಗಿದೆ ಎಂದರು.ಸಮಾಜದಲ್ಲಿ ಅನೇಕ ಪಾಲಕರು ವರನ ಮತ್ತು ಕನ್ಯೆಯ ಮದುವೆ ಮಾಡಲು ಪರದಾಡುತ್ತಿರುವವರಾಗಿ ಕನ್ಯೆ ಹುಡುಕಿ ಸುಸ್ತಾಗಿರುವ ಸೂಕ್ತ ವರನ ಹುಡುಕಾಟದಲ್ಲಿರುವ ವಧು-ವರರ ಪಾಲಕರಿಗೆ ಸುವರ್ಣ ಅವಕಾಶವನ್ನು ಸಂಘಟಣೆಯವರು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿಜಯಪುರ ಬಾಗಲಕೋಟೆ ಜಿಲ್ಲಾ ಹಾಲು ಉತ್ಪಾದಕರ ಸಂಘದ ಒಕ್ಕೂಟದ ನಿರ್ದೇಶಕರಾದ ನಿಂಗನಗೌಡ ಪಾಟೀಲ ಅವರು ತಮ್ಮ ತಂದೆ ರುದ್ರಗೌಡ ವೀರನಗೌಡ ಪಾಟೀಲ್ ಇವರ ಸ್ಮರಣಾರ್ಥ ನಾಗರದಿನ್ನಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ಬ್ಯಾಗ ಹಾಗೂ ನೋಟ್ ಬುಕ್ ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದರು.ಈ ಸಂದರ್ಭದಲ್ಲಿ ಪ್ರದೀಪ ಪಾಟೀಲ, ಶಾಲೆ ಗುರುಗಳು ಗುರುಮಾತೆಯರು ಹಾಗೂ ಗ್ರಾಮದ ಯುವಕರು ಕೂಡ ಪಾಲ್ಗೊಂಡಿದ್ದರು.
ಕಲಕೇರಿಗ್ರಾಪಂ ನಿರ್ಮಿಸಿದ ಗ್ರಾಮೀಣ ಸಂತೆ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಉದ್ಘಾಟನೆ ಸಮಾರಂಭ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಜನತೆಯ ಆಶಿರ್ವಾದದಿಂದ ಸಿಕ್ಕ ಅಧಿಕಾರದ ಅವಧಿಯಲ್ಲಿ ಜನ ಮೆಚ್ಚುವ ಕೆಲಸ ಕಾರ್ಯಗಳನ್ನು ಮಾಡಿದರೆ ಮಾತ್ರ ಅದು ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯವಾಗುತ್ತದೆ. ಅಂತಹ ಕೆಲಸವನ್ನು ಗ್ರಾಮದ ಮುಖ್ಯ ಬಜಾರನಲ್ಲಿ ಉತ್ತಮ ಗುಣಮಟ್ಟದ ೫೦ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡುವ ಮೂಲಕ ಕಲಕೇರಿಯ ಗ್ರಾಮ ಪಂಚಾಯತಿಯು ಇಡಿ ಜಿಲ್ಲೆಗೆ ಮಾದರಿಯಾಗಿದೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಹೇಳಿದರು.ಕಲಕೇರಿ ಗ್ರಾಮದ ಮುಖ್ಯ ಬಜಾರನಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ತಾಲೂಕು ಪಂಚಾಯತ್ ತಾಳಿಕೋಟಿ ಗ್ರಾಮ ಪಂಚಾಯತ್ ಕಾರ್ಯಾಲಯ ಕಲಕೇರಿ ಇವರ ವತಿಯಿಂದ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಉದ್ಘಾಟಿಸಿ, ಸಸಿ ನೆಟ್ಟು ಅವರು ಮಾತನಾಡಿದರು.ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಕಡಿಮೆ ಅವಧಿಯಲ್ಲಿ ಮಳಿಗೆಗಳನ್ನು ನಿರ್ಮಿಸುವದರ ಜೊತೆಗೆ ಸುಮಾರು ೩೦-೪೦ ವರ್ಷಗಳಿಂದ ಈ ಜಾಗದಲ್ಲಿ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಲಮೇಲ ಶಾಲೆಯಲ್ಲಿ ಅಕ್ಷರದ ಅವ್ವ, ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜೋಗೂರ ರವರು ೧೮ನೇ ಶತಮಾನದಲ್ಲಿ ಅಸ್ಪೃಶ್ಯತೆ ಯನ್ನು ಹೋಗಲಾಡಿಸಿ , ಜ್ಞಾನದ ಹಣತೆಯನ್ನು ಹಚ್ಚಲು ಪೌರೋಹಿತ್ಯ ಸಮಾಜದಿಂದ ಅನೇಕ ಅವಮಾನಗಳನ್ನು ಸಹಿಸಿಕೊಂಡು ಪ್ರತಿಯೊಂದು ಹೆಣ್ಣು ಅಕ್ಷರ ಜ್ಞಾನ ಪಡೆಯಲು ತಮ್ಮ ಇಡೀ ಜೀವನವನ್ನು ಶೈಕ್ಷಣಿಕ ಕ್ರಾಂತಿಗೆ ಮುಡುಪಾಗಿಟ್ಟ ಸಾವಿತ್ರಿಬಾಯಿ ಫುಲೆ ರವರ ಆದರ್ಶಗಳು ಇಂದಿನ ಮಕ್ಕಳಿಗೂ ದಾರಿ ದೀಪ ಎಂದರು.ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಸಾವಿತ್ರಿ ಬಾಯಿ ಫುಲೆ ರವರ ವಿಚಾರ ಸಂಕಿರಣ ಆಯೋಜಿಸಿ ಮಕ್ಕಳಿಗೆ ಬಹುಮಾನ ವಿತರಿಸಿರುವುದು ಶ್ಲಾಘನೀಯ ಕಾರ್ಯ ಎಂದು ಸಾಹಿತ್ಯ ಚಟುವಟಿಕೆಗೆ ಅಭಿನಂದನೆ ತಿಳಿಸಿದರು.ಈ ವೇಳೆ ಸಾವಿತ್ರಿಬಾಯಿ ಫುಲೆ ರವರ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಸಂಗಮದ…
ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಸಂಭ್ರಮೋತ್ಸವದಲ್ಲಿ ಶಾಸಕ ಕಟಕದೊಂಡ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಲೋಣಿ ಬಿಕೆ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವು ದಿ.ರಾಜಶೇಖರ ಕಲ್ಯಾಣಶೆಟ್ಟಿ ವೇದಿಕೆಯಲ್ಲಿ ಶನಿವಾರ ಜರುಗಿತು.ಕಾರ್ಯಕ್ರಮವನ್ನು ವಿಜಯಪುರ ಸಂಸದ ರಮೇಶ ಜಿಗಜಣಗಿ ಉದ್ಘಾಟಿಸಿದರು.ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಮ್. ಕೋರೆ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಭಾಗದ ಬಡಮಕ್ಕಳಿಗೆ ಶಿಕ್ಷಣ ಕಲ್ಪಿಸಲು ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿರುತ್ತೆನೆ ಎಂದರು.ಸಂಸದ ರಮೇಶ ಜಿಗಜಿಣಗಿ ಸುವರ್ಣ ಸಂಭ್ರಮೋತ್ಸವವನ್ನು ಉದ್ಘಾಟಿಸಿ ಹಾಗೂ ಸಂಸ್ಥೆಯ 50ನೇ ವರ್ಷದ ಶಿಕ್ಷಣ ಸಂಸ್ಥೆಯ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು, ಶಿಕ್ಷಣ ನೀಡುವದು ಪುಣ್ಯದ ಕೆಲಸ, ತಾಯಿ ಮೊದಲ ಗುರು, ನಂತರ ಶಿಕ್ಷಕರು. ಅದಕ್ಕಾಗಿ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಇಂದಿನ ಶಿಕ್ಷಣದ ತಳಹದಿಯ ಮೇಲೆ ನಿಂತಿದೆ ಎಂದ ಅವರು, ಗಡಿಭಾಗದಲ್ಲಿ ಶಿಕ್ಷಣ ಕ್ರಾಂತಿಯನ್ನು ಮಾಡಿದ ಬಿ.ಎಮ್. ಕೋರೆ ಅವರಿಂದ ಲೋಣಿ ಗ್ರಾಮ ವಿದ್ಯಾಕಾಶಿಯಾಗಿದ್ದು ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೧೫ರವರೆಗ ವಿಸ್ತರಿಸಲಾಗಿದೆ.ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ( ೦೮೩೫೫೨_೨೯೫೫೨೩) ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ, ವಿಜಯಪುರ ( ೮೧೨೩೭೧೦೭೬೬) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಬ. ಬಾಗೇವಾಡಿ ( ೯೯೭೨೩೪೦೭೨೧) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮುದ್ದೇಬಿಹಾಳ (೮೭೨೨೪೪೫೫೫೨) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಿಂದಗಿ ( ೯೦೩೫೫೫೮೬೦೯) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
