Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ ಜಿಲ್ಲೆಯ ವಾರ್ಷಿಕ ಸಾಲ ಯೋಜನೆ ಕೈಪಿಡಿ ಬಿಡುಗಡೆ | ೧೬೩೬೭.೮೩ ಕೋಟಿ ರೂ. ವಾರ್ಷಿಕ ಸಾಲ ಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗಿರುವ ೨೦೨೬-೨೦೨೭ನೇ ಹಣಕಾಸು ವರ್ಷದ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.ಜಿಲ್ಲೆಯ ಅಗ್ರಣೀಯ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಈ ಸಾಲಿನ ವಾರ್ಷಿಕ ಸಾಲ ಯೋಜನೆ ಕೈಪಿಡಿ ಬಿಡುಗಡೆಗೊಳಿಸಿದರು.ಪ್ರಸಕ್ತ ವರ್ಷದ ಸಾಲ ಯೋಜನೆಯ ೧೬೩೬೭.೮೩ ಕೋಟಿ ರೂ. ವಿತರಣೆಯ ಗುರಿಯನ್ನು ಹೊಂದಿದೆ. ಇದು ಕಳೆದ ವರ್ಷದ ವಾರ್ಷಿಕ ಸಾಲ ಯೋಜನೆಯ ಶೇಕಡಾ ೧೦.೯೦ ಪಟ್ಟು ಹೆಚ್ಚಿನ ಗುರಿಯಾಗಿದೆ. ಆದ್ಯತಾ ವಲಯಕ್ಕೆ: ಒಟ್ಟು ಯೋಜನೆ ಶೇ:೬೯.೫೯ ರಷ್ಟು ಅಂದರೆ ರೂ೧೧೩೮೯.೯೬ ಕೋಟಿ ಮೀಸಲಿಡಲಾಗಿದೆ. ಕೃಷಿ ವಲಯಕ್ಕೆ: ಒಟ್ಟು ಯೋಜನೆ ಶೇ: ೫೧.೪೬ ರಷ್ಟು ಅಂದರೆ ೮೪೨೨.೭೧ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಉದ್ಯಮಿ ವಲಯಕ್ಕೆ:…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಉನ್ನತ ಶ್ರೇಣಿಗೆ ಮಕ್ಕಳು ತಲುಪಬೇಕಾದರೆ ಆವಮಾನ, ಅನುಮಾನ ನಂತರ ಸನ್ಮಾನ ದೊರೆಯುತ್ತವೆ. ಹಾಗಾಗಿ ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಹೇಳಿದರು.ಜಿಲ್ಲಾ ಬಾಲ ಭವನದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಕ್ರೀಯಾಶೀಲ ವ್ಯಕ್ತಿತ್ವ ವಿಕಸನಕ್ಕಾಗಿ ಚಟುವಟಿಕೆಯ ಮೂಲಕ ಮಕ್ಕಳಿಗೆ ತಿಳುವಳಿಕೆ ನೀಡಿದರು. ಮಕ್ಕಳು ಪಾಲಕರು ಮಾಡುವ ಕೆಲಸಗಳನ್ನು ಅನುಸರಿಸುತ್ತಾರೆ. ಹಾಗಾಗಿ ಮಕ್ಕಳ ಮುಂದೆ ಪಾಲಕರು ಮೊಬೈಲ್ ಬಳಕೆಯನ್ನು ನಿಯಮಿತವಾಗಿ ಮಾಡುವುದಾಗಿ ಹಾಗೂ ಮಕ್ಕಳಲ್ಲಿ ಸ್ಮಜನಾತ್ಮಕ ಕಲಿಕೆಗೆ ಹೆಚ್ಚಿನ ಅವಕಾಶವನ್ನು ಮಾಡಿಕೊಡಬೇಕು ಎಂದರು. ಕರ್ನಾಟಕ ನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುರೇಶ ಜತ್ತಿ ಮಾತನಾಡಿ, ಮಕ್ಕಳನ್ನು ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ಮಾಡಲು ಕ್ರೀಡೆ, ಯೋಗ, ಸಂಗೀತ, ಕರಾಟೆ, ಚಿತ್ರಕಲೆ, ಕರಕುಶಲ ವಸ್ತುಗಳ ತಯಾರಿಕೆ ಇತ್ಯಾದಿ ಚಟುವಟಿಕೆಗಳ ತರಬೇತಿ ಪಡೆಯುವುದು ಅಗತ್ಯವಾಗಿದೆ ಎಂದರು.ಇಂತಹ ಚಟುವಟಿಕೆಗಳು ಬೇಸಿಗೆ ಶಿಬಿರದಲ್ಲಿರುತ್ತವೆ. ಅದರಲ್ಲಿ ಭಾಗವಹಿಸಿ ಸಸುಪಯೋಗ ಪಡೆದುಕೊಳ್ಳಬೇಕು…
ಉದಯರಶ್ಮಿ ದಿನಾಚರಣೆ ವಿಜಯಪುರ: ಸಾಂಕ್ರಾಮಿಕ ರೋಗಗಳ ಹರಡುವಿಕೆ, ನಿಯಂತ್ರಣ ಮತ್ತು ಚಿಕಿತ್ಸೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಚನ್ನಪ್ಪ ಕಟ್ಟಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಇತ್ತಿಚಿಗೆ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕರ್ನಾಟಕ ರಾಜ್ಯದಲ್ಲಿ ೨೦೨೭ರ ವೇಳೆಗೆ ಮಲೇರಿಯಾ ನಿವಾರಣಾ ಗುರಿ ಹೊಂದಲಾಗಿದೆ. ಮಲೇರಿಯಾ ರೋಗವು ಪ್ಲಾಸ್ಮೋಡಿಯಾ ಎಂಬ ಪರಾವಲಂಬಿ ಜೀವಿಯಿಂದ ಬರುತ್ತದೆ. ಅನಾಫಿಲೀಸ್ ಎಂಬ ಹೆಣ್ಣು ಸೊಳ್ಳೆ ಕಡಿತದಿಂದ ಈ ರೋಗ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ರೋಗ ಸಾಮಾನ್ಯವಾಗಿ ವರ್ಷದ ಎಲ್ಲ ಕಾಲದಲ್ಲೂ ಕಂಡು ಬಂದರೂ ಜೂನ್ ನಿಂದ ಅಕ್ಟೋಬರ್ ಅಂತ್ಯದವರೆಗಿನ ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಸಮಯದಲ್ಲಿ ಕೆರೆ, ಕುಂಬೆ, ಬಾವಿ, ಸಣ್ಣಪುಟ್ಟ ತಗ್ಗು ಪ್ರದೇಶದಲ್ಲಿ ಮಳೆ ನೀರು ನಿಂತು ಸೊಳ್ಳೆಗಳ ವಂಶಾಭಿವೃದ್ದಿಗೆ ಅನುಕೂಲವಾಗಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅನಾಫೆಲಿಸ್ ಎನ್ನುವ ಹೆಣ್ಣು ಸೊಳ್ಳೆಯಿಂದ ಮಲೇರಿಯಾ ರೋಗ ಹರಡುತ್ತದೆ. ನಿಂತ ನೀರು ಸೊಳ್ಳೆಗಳ ತವರಿನಂತಿದ್ದು, ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಿ, ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇಲಾಖೆಯ ಮಾರ್ಗದರ್ಶನದಲ್ಲಿ ಮುಂಜಾಗೃತ ವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ರಾಜೇಶ ಕೋಳೆಕರ ಹೇಳಿದರು.ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಲೇರಿಯಾ ತೀವ್ರವಾದ, ಕೆಲವೊಮ್ಮೆ ಮಾರಕವಾಗಬಹುದು. ಪ್ಲಾಸ್ಮೋಡಿಯಂ ಪರಾವಲಂಬಿಗಳು ಸಂಕೀರ್ಣ ಜೀವನ ಚಕ್ರವನ್ನು ಪಡೆದು, ಆವರ್ತಕ ಜ್ವರಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ರೋಗಿಗಳು ಚಿಕಿತ್ಸೆಯ ನಂತರ ಮಲೇರಿಯಾ ಲಕ್ಷಣಗಳಿಂದ ಬೇಗ ಚೇತರಿಸಿಕೊಳ್ಳುತ್ತಾರೆ. ಆದರೆ, ಚಿಕಿತ್ಸೆ ವಿಳಂಬವಾದರೆ ತೀವ್ರ ರಕ್ತಹೀನತೆ, ಸೆರೆಬ್ರಲ್, ಕೋಮಾ ಅಥವಾ ಸಾವೂ ಸಂಭವವಿದೆ ಎಂದು ತಿಳಿಸಿದರು.ತಾಲೂಕಾ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿ, ಜ್ವರದ ಲಕ್ಷಣಗಳಿದ್ದರೆ ರಕ್ತ ಪರೀಕ್ಷೆ ಮಾಡಿಸಿ, ಸಂಪೂರ್ಣ ಚಿಕಿತ್ಸೆ ಪಡೆಯಿರಿ. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆ ಪರದೆ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಜ್ಯದ ಒಂದೂವರೆ ಲಕ್ಷ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಸದಸ್ಯತ್ವ ಹೊಂದಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಕೆಎಸ್ ಪಿಎಸ್ ಟಿಎ ) ೨೦೨೬-೩೧ರ ಅವಧಿಯ ಚುನಾವಣೆಗೆ ಸಂಬಂಧಿಸಿದ ಪರಿಷ್ಕೃತ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾಧಿಕಾರಿಗಳು ಮಂಗಳವಾರ ಪ್ರಕಟಿಸಿದ್ದಾರೆ.ಈ ಹಿಂದೆ ಏಪ್ರಿಲ್ ೧ಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಹೈಕೋರ್ಟ್ ಏಕಸದಸ್ಯ ಪೀಠದ ತಡೆಯಾಜ್ಞೆಯಿಂದಾಗಿ ಏ.೧೮ರಂದು ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಗೌರವಾನ್ವಿತಮುಖ್ಯ ನ್ಯಾಯಮೂರ್ತಿಗಳಿದ್ದ ಹೈಕೋರ್ಟ್ ಪ್ರಧಾನ ವಿಭಾಗೀಯ ಪೀಠ ಮಂಗಳವಾರ ತಡೆಯಾಜ್ಞೆ ತೆರವುಗೊಳಿಸಿತ್ತು. ಇದರಿಂದ ಚುನಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದ ಹಂತದಿಂದಲೇ ಚುನಾವಣೆ ಪ್ರಕ್ರಿಯೆ ಪುನರಾರಂಭಗೊಂಡಿದೆ.*ತಾಲ್ಲೂಕು/ ಯೋಜನಾ ಸಂಘಗಳ ಕಾರ್ಯಕಾರಿ ಸಮಿತಿಗೆ ಚುನಾವಣೆ;ತಾಲ್ಲೂಕು/ ಯೋಜನಾ ಶಾಖೆಯ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ, ವಾಪಸ್ಸಾತಿ, ಅಂತಿಮ ಕಣದಲ್ಲಿ ಉಳಿದ ಅಭ್ಯರ್ಥಿಗಳ ಪ್ರಕಟಣೆವರೆಗೂ ಚುನಾವಣಾ ಪ್ರಕ್ರಿಯೆಗಳು ಮುಗಿದು, ನಿಗದಿತ ಸ್ಥಾನದಷ್ಟೇ ಅಭ್ಯರ್ಥಿಗಳು ಚುನಾಚಣೆ ಕಣದಲ್ಲಿ ಉಳಿದರೆ ಅವಿರೋಧ ಆಯ್ಕೆಯ ಫಲಿತಾಂಶ ಘೋಷಣೆಯಾಗಿತ್ತು. ನಿಗದಿತ ಸ್ಥಾನಕ್ಕಿಂತ ಹೆಚ್ಚು…
ಲೇಖನ- ಬಸಲಿಂಗಯ್ಯ ಹಿರೇಮಠಶಿಕ್ಷಕರುಸಿಂದಗಿಮೊ: 9972658355 ಉದಯರಶ್ಮಿ ದಿನಪತ್ರಿಕೆ ಬಸವಣ್ಣನವರ ತತ್ವಗಳು ಮತ್ತು ಆದರ್ಶಗಳು ಕೇವಲ 12ನೇ ಶತಮಾನಕ್ಕೆ ಸೀಮಿತವಾಗದೆ, ಇಂದಿನ ಆಧುನಿಕ ಸಮಾಜದ ಜ್ವಲಂತ ಸಮಸ್ಯೆಗಳಿಗೆ ರಾಮಬಾಣದಂತಿವೆ. ಪ್ರಸ್ತುತ ಸಮಾಜ ಎದುರಿಸುತ್ತಿರುವ ಅಸಮಾನತೆ, ಭ್ರಷ್ಟಾಚಾರ ಮತ್ತು ಮಾನಸಿಕ ಅಶಾಂತಿಗೆ ಬಸವಣ್ಣನವರ ‘ವಚನ ಸಂಸ್ಕೃತಿ’ ಒಂದು ದಾರಿದೀಪ.ಇಂದಿಗೂ ಸಮಾಜದಲ್ಲಿ ಜಾತಿ ಮತ್ತು ವರ್ಗದ ಹೆಸರಿನಲ್ಲಿ ತಾರತಮ್ಯಗಳು ಜೀವಂತವಾಗಿವೆ. ಬಸವಣ್ಣನವರು ಅಂದೇ “ಇವನಾರವ ಇವನಾರವ ಎನ್ನದೆ, ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯ” ಎಂದು ಸಾರುವ ಮೂಲಕ ಸಾರ್ವತ್ರಿಕ ಭ್ರಾತೃತ್ವದ ಸಂದೇಶ ನೀಡಿದ್ದರು. ಮೇಲು-ಕೀಳು ಎಂಬ ಭೇದಭಾವವಿಲ್ಲದ ‘ಅನುಭವ ಮಂಟಪ’ವು ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯದಂತಿದೆ.ಇಂದಿನ ಕಾಲದಲ್ಲಿ ನಿರುದ್ಯೋಗ ಮತ್ತು ಕೆಲಸದ ಬಗ್ಗೆ ಅಸಡ್ಡೆ ಹೆಚ್ಚಾಗುತ್ತಿದೆ. ಬಸವಣ್ಣನವರು “ಕಾಯಕವೇ ಕೈಲಾಸ” ಎಂಬ ಸಿದ್ಧಾಂತದ ಮೂಲಕ ಪ್ರತಿಯೊಬ್ಬರೂ ತಮ್ಮ ಶ್ರಮದಿಂದಲೇ ಜೀವನ ನಡೆಸಬೇಕೆಂದು ಬೋಧಿಸಿದರು. ಯಾವುದೇ ಕೆಲಸವು ಕೀಳಲ್ಲ, ಅದು ಪ್ರಾಮಾಣಿಕವಾಗಿದ್ದರೆ ಅದೇ ದೈವತ್ವಕ್ಕೆ ಸಮಾನ ಎಂಬ ಅವರ ಮಾತುಗಳು ಇಂದಿನ ಯುವಜನತೆಗೆ ಪ್ರೇರಣಾದಾಯಕ. ಸಂಪತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಮೇ 4 ರಿಂದ ಮೇ 9ರ ವರೆಗೆ ಸೋಮವಾರದಿಂದ ಶನಿವಾರದ ವರೆಗೆ ಹಿರಿಯ ನಾಗರಿಕರಲ್ಲಿ ಕಂಡುಬರುವ ವಯೋಸಹಜವಾದ ನೆನಪಿನ ಶಕ್ತಿ ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ನೆನೆಪಿನ ಶಕ್ತಿ ಕ್ಷೀಣಿಸುವಿಕೆ, ಆಲೋಚನೆ ಮತ್ತು ನಿರ್ಧಾರದ ಸಮಸ್ಯೆ, ಸ್ಥಳ ಮತ್ತು ಸಮಯದ ಅರಿವು ಕಡಿಮೆಯಾಗುವುದು, ವರ್ತನೆ ಮತ್ತು ಮನಸ್ಥಿತಿಯಲ್ಲಿನ ಬದಲಾವಣೆ ಸಮಸ್ಯೆ ಎದುರಿಸುತ್ತಿರುವ 60 ರಿಂದ 75 ವರ್ಷದೊಳಗಿನ ಹಿರಿಯ ನಾಗರಿಕರು ಚಿಕಿತ್ಸೆ ಪಡೆಯಬಹುದಾಗಿದೆ.ಇಂಥ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಮೊಬೈಲ್ ಸಂಖ್ಯೆ- 9513397413 ಸಂಪರ್ಕಿಸಬಹುದಾಗಿದೆ.
ವಿಜಯಪುರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ | ಈ ಪ್ರಕರಣವನ್ನು ಎಸ್.ಐ.ಟಿ. ತಂಡ ರಚಿಸಿ ತನಿಖೆ ನಡೆಸಬೇಕೆಂದು ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಳೆದ 23/24. ಏಪ್ರಿಲ್ ರಂದು ನಡೆದ ಸಿಇಟಿ ಪರೀಕ್ಷೆಯಲ್ಲಿ ಬೆಂಗಳೂರಿನ ಮಡಿವಾಳದ ಕೃಪಾನಿಧಿ. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ಕಾಲೇಜಿನ ಆಡಳಿತ ಮಂಡಳಿ ತೆಗೆಸಿದ್ದನ್ನು ಖಂಡಿಸಿ ಈ ಪ್ರಕರಣವನ್ನು ಎಸ್.ಐ.ಟಿ. ತಂಡ ರಚಿಸಿ ತನಿಖೆ ನಡೆಸಬೇಕೆಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾದ ಜಿಲ್ಲಾಧ್ಯಕ್ಷ ಮುಕುಂದ ಕುಲಕರ್ಣಿಮಾತನಾಡಿ, ಜನಿವಾರ ಧರಿಸುವುದು ಬ್ರಾಹ್ಮಣ ಸಮಾಜದ ಸಾಂಪ್ರದಾಯಿಕ ಗುರುತು. ಜನಿವಾರ ನಮ್ಮ ಸಮಾಜದ ಹೆಮ್ಮೆ. ನಮ್ಮ ಸಮಾಜದ ಗರ್ವದ ಪ್ರತೀಕವಾದ ಜನಿವಾರವನ್ನು ತೆಗೆಸಿದ್ದು ಆಘಾತಕಾರಿ. ಜನಿವಾರದಿಂದ ಯಾವ ರೀತಿಯಾಗಿ ಪರೀಕ್ಷೆಯಲ್ಲಿ ನಕಲು ಮಾಡಲು ಸಾಧ್ಯ? ಅನವಶ್ಯಕವಾಗಿ ವಿದ್ಯಾರ್ಥಿಯ ಜನಿವಾರ ತೆಗೆಸಿ ನಮ್ಮ ಸಮಾಜಕ್ಕೆ ಅಪಮಾನಿಸಿದ್ದುಖಂಡನಾರ್ಹ. ಕಳೆದ ವರ್ಷವೂ ಸಹಿತ ಇದೇ ರೀತಿಯಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2026-27ನೇ ಶೈಕ್ಷಣಿಕ ಸಾಲಿಗೆ ಗ್ರಾಮೀಣ ವಿದ್ಯಾರ್ಥಿನಿಯರಿಗಾಗಿ ನಗರದಲ್ಲಿ ಉಚಿತ ವಸತಿ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುದಾನದಲ್ಲಿ ವಿಜಯಪುರದ ಶ್ರೀ ಶರಣ ಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.ಪದವಿ ಪೂರ್ವ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮಾತ್ರ ಇಲ್ಲಿ ಅವಕಾಶವಿದೆ.ಮೇ.೪ ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಜೂನ್ ೧೦ ಕೊನೆಯ ದಿನವಾಗಿದೆ.ಅರ್ಜಿಗಳನ್ನು ಶ್ರೀ ಶರಣ ಜ್ಯೋತಿ ವಿದ್ಯಾ ಸಂಸ್ಥೆ, ಬಿಡಿಎ ಕ್ರಾಸ್, ಮನಖಾದ್ರಿ ದರ್ಗಾ ಹತ್ತಿರ, ಕೆ.ಕೆ. ಕಾಲೋನಿ, ವಿಜಯಪುರ ಇಲ್ಲಿ ಪಡೆಯಬಹುದು ಎಂದು ವಸತಿ ನಿಲಯ ಅಧಿಕ್ಷಕಿ ವಿಜಯಲಕ್ಷ್ಮಿ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಸಕ್ತ ವಿದ್ಯಾರ್ಥಿನಿಯರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8660626216 ಮತ್ತು 8123478500 ಸಂಖ್ಯೆಗಳಿಗೆ ಸಂಪರ್ಕಿಸಬಹುದು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘ ಬೆಂಗಳೂರು. ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. ೮೦ ರ ಮೇಲೆ ಅಂಕ ಗಳಿಸಿದ ಹಡಪದ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ ಮಾಡಲು ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘ ವಿಜಯಪುರ ಜಿಲ್ಲಾ ಘಟಕ ನಿರ್ಧರಿಸಿದೆ.ಈ ನಿಟ್ಟಿನಲ್ಲಿ ಶೇ. ೮೦ ರ ಮೇಲೆ ಅಂಕ ಗಳಿಸಿದ ಮಕ್ಕಳು ಅರ್ಜಿ ನಮೂನೆ ಭರ್ತಿಮಾಡಿ, ಅಂಕ ಪಟ್ಟಿ (ಮಾರ್ಕ್ಸ್ ಕಾರ್ಡ್), ಆಧಾರ ಕಾರ್ಡ್ ಇತ್ತೀಚಿನ ೧ ಭಾವಚಿತ್ರ (ಫೋಟೋ) ಗಳನ್ನು ಶ್ರೀ ಮಂಜುನಾಥ ಕೃಪಾ ನಿವಾಸ, ಏಕತಾ ನಗರ , ಸಾಯಿ ಪಾರ್ಕð ರಸ್ತೆ, ವಿಜಯಪುರ – ೫೮೬೧೦೯ ಈ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನೌಖರರ ಸಂಘದ ಜಿಲ್ಲಾಧ್ಯಕ್ಷರಿಗೆ ನೇರವಾಗಿ ಮೇ ೨೦ ನೇ ತಾರಿಖಿನೊಳಗಾಗಿ ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ (ಮೊ: ೯೯೮೬೦೯೧೩೭೪) ಸಂಖ್ಯೆಗೆ ಸಂಪರ್ಕಿಸಬೇಕೆಂದು ಕರ್ನಾಟಕ ರಾಜ್ಯ ಹಡಪದ…
