Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೨೦೨೪-೨೫ನೆಯ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ೧ರಲ್ಲಿ ಕಲ್ಪವೃಕ್ಷ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ವಿಷಯವಾರು ಹಿಂದಿ ವಿಷಯದಲ್ಲಿ ೪ ವಿದ್ಯಾರ್ಥಿಗಳು, ಗಣಿತದಲ್ಲಿ ಒರ್ವ ವಿದ್ಯಾರ್ಥಿ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಒರ್ವ ವಿದ್ಯಾರ್ಥಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.ಲತಾ ಕುಂಟೋಜಿಮಠ ೬೨೫ಕ್ಕೆ ೬೧೩ (ಶೇ.೯೮.೦೮) ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ, ಲಕ್ಷ್ಮಿ ಪಾಟೀಲ ೫೯೨ (ಶೇ.೯೪.೭೨) ದ್ವಿತೀಯ ಸ್ಥಾನ, ಶಿವಲಿಂಗಪ್ಪ ಕುನ್ನೂರ ೫೯೦ (ಶೇ.೯೪.೪೦) ತೃತೀಯ ಸ್ಥಾನ, ಆಲಿಯಾ ಕಣ್ಣಿ ೫೮೮ (ಶೇ.೯೪.೦೮), ಪ್ರಕೃತಿ ಬಡಿಗೇರ ೫೮೩ (ಶೇ.೯೩.೨೮), ಕೆಂಚಪ್ಪ ಗೊರಗುಂಡಗಿ ೫೭೯ (ಶೇ.೯೨.೬೪), ಸೌಮ್ಯ ಘಂಟಿ ೫೭೬ (ಶೇ.೯೨.೧೬), ಅಭಿಷೇಕ ಹೂಗಾರ ೫೭೫ (ಶೇ.೯೨), ಮಲ್ಲಿಕಾರ್ಜುನ ಹೂಗಾರ ೫೬೮ (ಶೇ.೯೦.೮೮), ಭೀಮಾಶಂಕರ ನಾಯ್ಕೋಡಿ ೫೬೩ (ಶೇ.೯೦.೦೮) ಅಂಕಗಳನ್ನು ಪಡೆದುಕೊಂಡ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗ ಶ್ರೀ ವ್ಹಿ.ಎಸ್.ಬಿ. ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು, ಆಡಳಿತಾಧಿಕಾರಿಗಳು, ಮುಖ್ಯ ಗುರುಗಳು, ಸಿಬ್ಬಂದಿಗಳು…

Read More

ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಮ್ಮ ತಾಯಿ ಹಾಗೂ ತಮ್ಮನ ಸಹಕಾರದಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ತುಂಬಾ ಅನುಕೂಲವಾಯಿತು. ನಮ್ಮ ಮಡಿವಾಳ ಸಮಾಜದ ಮಕ್ಕಳು ಉನ್ನತ ವಿದ್ಯಾಭ್ಯಾಸ ಮಾಡಲು ಸಹಕಾರ ಮಾಡುತ್ತೇನೆ ಎಂದು ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ ಹೇಳಿದರು.ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಮಡಿವಾಳ ಮಾಚಿದೇವ ಸೇವಾ ಸಂಘ ವತಿಯಿಂದ ಇತ್ತೀಚಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ೪೮೨ನೇ ರ‍್ಯಾಂಕ್ ಪಡೆದ ನಿಮಿತ್ಯ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಯುವಕ, ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ನನ್ನ ಈ ಸಾಧನೆಯಲ್ಲಿ ನಮ್ಮ ಕುಟುಂಬದ ಪಾತ್ರ ಮಹತ್ವದ್ದಾಗಿದೆ. ವಿದ್ಯೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಮಕ್ಕಳು ಕೇವಲ ವೇಷ ಭೂಷಣಗಳ ಕಡೆಗೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಭಾಗ್ಯಶ್ರೀ ಬಿರಾದಾರ ೬೨೫ ಅಂಕಗಳಿಗೆ ೬೧೫ (ಶೇ.೯೮.೪೦) ಅಂಕಗಳು ಪಡೆದು ಪ್ರಥಮ ಸ್ಥಾನ, ರಾಕೇಶ ಜೋಗುರ ೬೧೧ (ಶೇ.೯೭.೭೬%) ದ್ವಿತೀಯ, ಸೃಷ್ಟಿ ಹಿರೇಮಠ ೫೪೯ (ಶೇ.೮೭.೮೪) ಅಂಕಗಳನ್ನು ಪಡದುಕೊಂಡು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಮುಖ್ಯಗುರುಗಳು ಜಿ.ಜಿ.ಬಿರಾದಾರ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ನವಬಾಗದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮೇ.೦೯ರ ಬೆಳಿಗ್ಗೆ ೧೦ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ೨೦ಕ್ಕೂ ಹೆಚ್ಚು ಸ್ಥಳೀಯ ಹಾಗೂ ವಿವಿಧ ಎಂ.ಎನ್.ಸಿ ಕಂಪನಿಗಳು ಭಾಗವಹಿಸಲಿವೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರುವ ೩೫ ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿ ಸಹಿತ ಸ್ವ-ವಿವರ (ಬಯೋಡೆಟಾ)ದ ಕನಿಷ್ಟ ೧೦ ಪ್ರತಿಗಳನ್ನು ಅಗತ್ಯದಾಖಲೆಯೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.ಸಂ: ೮೭೨೨೭೮೦೭೬೭ ಹಾಗೂ ೯೯೪೫೦೦೦೭೯೩ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ವ್ಯಾಪ್ತಿಯಲ್ಲಿನ ಒಟ್ಟು 7771 ವಿದ್ಯಾರ್ಥಿಗಳಲ್ಲಿ 3779 ವಿದ್ಯಾರ್ಥಿಗಳು, 3992 ವಿದ್ಯಾರ್ಥಿನಿಯರು ಉತ್ತಿರ್ಣರಾಗಿದ್ದಾರೆ ಎಂದು ಬಿಇಓ ಎ.ಕೆ.ಬಸಣ್ಣವರ ತಿಳಿಸಿದ್ದಾರೆ.ಜಮಖಂಡಿ ತಾಲೂಕು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.70.34ರಷ್ಟು ಫಲಿತಾಂಶ ಪಡೆದುಕೊಳ್ಳುವ ಮೂಲಕ ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ ಉತ್ತಮ ಫಲಿತಾಂಶ ಒದಗಿಸಿಕೊಟ್ಟ ಪ್ರೌಢಶಾಲೆಯ ಸಹ ಶಿಕ್ಷಕರಿಗೆ ಹಾಗೂ ಮುಖ್ಯೋಪಾಧ್ಯಾಯರಿಗೆ ಇಲಾಖೆಯಿಂದ ಅಭಿನಂದಿಸಿದ್ದಾರೆ.ಬನಹಟ್ಟಿಯ ಎಸ್‌ಆರ್‌ಎ ಕಾಲೇಜಿನ ಲಕ್ಷ ಸುನೀಲ ಹಿರಕಾಳೆ 623, ಮಧುರಖಂಡಿಯ ಸಾಯಿ ಸಂಕಲ್ಪ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಸಿಂಚನಾ ಶರಣಪ್ಪಾ ಪರುತಿ 623, ಬನಹಟ್ಟಿ ಎಸ್‌ಆರ್‌ಎ ಕಾಲೇಜಿನ ಅನಯಾ ಸಂಗಪ್ಪಾ ನಂದ್ಯಾಳ 622, ಯಲ್ಲಟ್ಟಿಯ ಆರ್‌ಎಂಎಸ್‌ಎ ನಿರ್ಮಲಾ ಮಲ್ಲಿಕಾರ್ಜುನ ಸಂತಿ 622, ತೊದಲಬಾಗಿ ಕಿತ್ತೂರ ರಾಣಿ ಚನ್ನಮ್ಮ ರೆಸಿಡೆನ್ಸಿಯಲ್ ಶಾಲೆಯ ಸಹನಾ ಸಂಗಮೇಶ ತಿಪರಡ್ಡಿ 622, ಹನಗಂಡಿಯ ಮೋರಾರ್ಜಿ ದೇಸಾಯಿ ಶಾಲೆಯ ಭಾಗ್ಯಶ್ರೀ ಬಸನಗೌಡಾ ಬಿಪಾಟೀಲ 622, ತೊದಲಬಾಗಿ ಕಿತ್ತೂರ ರಾಣಿ ಚನ್ನಮ್ಮ ರೆಸಿಡೆನ್ಸಿಯಲ್ ಶಾಲೆಯ ಪ್ರೀತಿ ರಮೇಶ ಭಾವಿಕಟ್ಟಿ 621,…

Read More

ಸಚಿವ ಶಿವಾನಂದ್ ಪಾಟೀಲ್’ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸವಾಲು ಬೆಂಗಳೂರು: ನಿಜಕ್ಕೂ ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಲಿ ಎಂದು ಸಚಿವ ಶಿವಾನಂದ ಪಾಟೀಲ್ ಅವರಿಗೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸವಾಲು ಹಾಕಿದ್ದಾರೆ.ಶಿವಾನಂದ ಪಾಟೀಲ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು, ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.ಉತ್ತರನ ಪೌರುಷ ಒಲೆಯ ಮುಂದೆ ಎಂಬಂತಿದೆ. ರಾಜೀನಾಮೆ ಅಂಗೀಕಾರ ಆಗೋದಿಲ್ಲ ಅಂತ ಗೊತ್ತಿದ್ದರೂ ಪುಕ್ಕಟೆ ಪ್ರಚಾರಕ್ಕೆ ರಾಜೀನಾಮೆ ಕೊಟ್ಟು ರಾಜೀನಾಮೆಯನ್ನು ತಿರಸ್ಕೃತವಾಗುವಂತ ಪ್ರಭೃತಿಗಳು ಇದ್ದಾರೆ ಎಂಬುದೇ ಸೋಜಿಗದ ಸಂಗತಿ. ಶಾಸಕರು ರಾಜೀನಾಮೆ ಕೊಡುವುದಕ್ಕೆ ರೀತಿ ರಿವಾಜು ಇರುತ್ತೆ ಎಂಬುದು ಇವರಿಗೆ ಗೊತ್ತಿಲ್ಲವೇ.ಇವರು ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು. ಸಭಾಧ್ಯಕ್ಷರಾದ ಖಾದರ್ ಅವರು ಈ ರೀತಿಯಾದ ರಾಜೀನಾಮೆ ಸ್ವೀಕೃತವಾಗುವುದಿಲ್ಲ ಎಂಬುದನ್ನು ಅವರಿಗೆ ತಿಳಿಸಬೇಕಾಗಿತ್ತು.…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ 6 ಜನರು ಪರಾರಿಯಾದ ಘಟನೆ ಬನಹಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.ಮಂಗಳವಾರ ಮಧ್ಯಾಹ್ನ ಬನಹಟ್ಟಿ ಕಡೆಯಿಂದ ಮುಧೋಳಗೆ ಬಸ್‌ ಸಂಚರಿಸುತ್ತಿದ್ದಾಗ ಜಗದಾಳ ಕೆಇಬಿ ಸಮೀಪ ಕಾರೊಂದು ಎದುರಿಗೆ ಬಂದಿದ್ದರಿಂದ ಬೈಕ್ ಸವಾರ ವೇಗವಾಗಿ ವಾಹನ ಚಲಾಯಿಸಿದ್ದು, ಚಾಲಕ ಬಸ್ ನಿಯಂತ್ರಿಸಿ ಸಂಭಾವ್ಯ ಅಪಘಾತ ತಪ್ಪಿಸಿದ್ದಾರೆ. ಸರಿಯಾಗಿ ಬೈಕ್‌ ಓಡಿಸುವಂತೆ ಬೈಕ್‌ ಸವಾರನಿಗೆ ಬುದ್ಧಿಹೇಳಿದ್ದು, ಇದಕ್ಕೆ ಕೋಪಗೊಂಡು ತೆರಳಿದ ಬೈಕ್‌ ಚಾಲಕ ಬೊಲೆರೋ ವಾಹನದಲ್ಲಿ 6 ಜನರೊಂದಿಗೆ ಬಂದು ಬಸ್ ಅಡ್ಡಗಟ್ಟಿ ಚಾಲಕ ಸಂಗಪ್ಪನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆರೋಪಿಗಳಾದ ಮುತ್ತಪ್ಪ ಗಾಜ್ಯಾಗೋಳ, ಶಿವಾನಂದ ಗಾಜ್ಯಾಗೋಳ, ವೆಂಕಟೇಶ ಗಾಜ್ಯಾಗೋಳ, ಸಂದೇಶ ಗಾಜ್ಯಾಗೋಳ, ಶ್ರೀಕಾಂತ ಗಿಡನ್ನವರ, ಸಾಗರ ಬಡಿಗೇರ ವಿರುದ್ಧ ಬನಹಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪಿಎಸ್‌ಐ ಶಾಂತಾ ಹಳ್ಳಿ ನೇತೃತ್ವದಲ್ಲಿ ಶೋಧ ನಡೆಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ಶಲ್ಯತಂತ್ರ ವಿಭಾಗದ ವತಿಯಿಂದ ಮೇ 5 ರಿಂದ ಮೇ 10ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಉಚಿತ ತಪಾಸಣೆ ಮತ್ತು ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೋಬೈಲ್ ಸಂಖ್ಯೆ: 7019656245 ಸಂಪರ್ಕಿಸಬಹುದಾಗಿದೆ.

Read More

ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪುತ್ಥಳಿ ಮತ್ತು ವೃತ್ತ ನಿರ್ಮಾಣ ಹಾಗೂ ಪ್ರಮುಖ‌ ಸ್ಥಳಗಳಿಗೆ ಮಹನೀಯರ ಹೆಸರುಗಳನ್ನು ನಾಮಕರಣ ಮಾಡುವುದರಿಂದ ರಾಷ್ಟ್ರ ನಾಯಕರು ದೇಶ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಲು ಸಾಧ್ಯ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ದೇಶ ಮತ್ತು ಸಮಾಜಕ್ಕಾಗಿ ಹೋರಾಟ ನಡೆಸಿದ ರಾಷ್ಟ್ರ ನಾಯಕರ ಕಾರ್ಯಗಳನ್ನು ಸ್ಮರಿಸಲು ಪುತ್ಹಳಿ ಅನಾವರಣ ಮತ್ತು ರಾಷ್ಟ್ರ ನಾಯಕರ ಹೆಸರುಗಳನ್ನು ನಾನಾ ಸ್ಥಳಗಳಿಗೆ ನಾಮಕರಣ ಮಾಡುತ್ತಿರುವುದು ಉತ್ತಮ ಸಂಪ್ರದಾಯವಾಗಿದೆ. ಹಿಟ್ಟಿನಹಳ್ಳಿ ಗ್ರಾಮದಲ್ಲಿ ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ ಮಾಡಲಾಗಿದೆ. ಸಚಿವ ಎಂ. ಬಿ. ಪಾಟೀಲ ಅವರ ಪ್ರಯತ್ನದಿಂದಾಗಿ ವಿಜಯಪುರ ಕೇಂದ್ರ ಬಸ್…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ೨೦೨೪-೨೦೨೫ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಚಡಚಣ ತಾಲೂಕಿನ ನಿವರಗಿಯ ಸಂಗಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.ಶಾಲೆಯ ವಿದ್ಯಾರ್ಥಿನಿ ಕುಮಾರಿ ಶುಭಲಕ್ಷ್ಮೀ ರಾ.ವಾಲಿಕಾರ ೯೫.೫೨% ಪ್ರಥಮ ಸ್ಥಾನ, ಕುಮಾರಿ ಸಾಕ್ಷೀ.ರಾ.ತೇಲಿ ೯೨.೨೬% ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ, ಕುಮಾರಿ ಶೃಷ್ಠಿ .ಸಂ.ಕಟಗೇರಿ ೯೦.೨೪% ತೃತೀಯ ಸ್ಥಾನವನ್ನು ಪಡೆದುಕೊಂಡು ಅತ್ಯುತ್ತಮ ಸಾಧನೆ ಮಾಡಿದ್ದಾರೆ.ರಾಜಶ್ರೀ.ಮ.ಚೌಧರಿ ೮೭.೩೬%, ರವಿಶಂಕರ.ಮ.ಪೋಲಾದಿ ೮೭.೨೦%, ಸನ್ನಿಧಿ.ಸು.ಶಹಾ ೮೩.೮೪%, ರವಿಕಾಂತ.ಶಿ.ಜಾಲಗೇರಿ ೮೩.೫೨%, ಶ್ರಾವಣಿ.ಅ.ರಾಜಮಾನ್ಯ ೮೧.೧೨%, ಸ್ನೇಹಲ್.ಶ.ಮಠಪತಿ ೭೮.೪೦%, ಭಾಗ್ಯಶ್ರೀ.ಸಿ.ಬಿರಾದಾರ ೭೭.೬೦%, ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ ಗೌಡ ಅಣ್ಣಾರಾಯ ಪಾಟೀಲ, ಮುಖ್ಯಗುರುಗಳಾದ ರವಿಕುಮಾರ ನಾಯಕ್ ಬಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡೆಸಿದ್ದಾರೆ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.

Read More