Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್ಫರ್ಡ್ ಪಾಟೀಲ್ಸ್ ಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಅಖಿಲ ನದಾಫ ೬೨೫ ಅಂಕ ಪಡೆದು ರಾಜ್ಯಕ್ಕೆ ಮತ್ತು ಶಾಲೆಗೆ ಪ್ರಥಮ, ಮಲ್ಲನಗೌಡ ಬಿರಾದಾರ ೬೨೩ ಅಂಕ ಪಡೆದು ರಾಜ್ಯಕ್ಕೆ ತೃತೀಯ ಮತ್ತು ಶಾಲೆಗೆ ದ್ವಿತೀಯ, ಪ್ರಾರ್ಥನಾ ಕುಲಕರ್ಣಿ ೬೨೨ ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲೆಯ ಒಟ್ಟು ಫಲಿತಾಂಶ ಶೇ೯೯ ರಷ್ಟು ಆಗಿದ್ದು ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಪಾಟೀಲ ಅಭಿನಂದಿಸಿದ್ದಾರೆ.
ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ “ವೀರರಾಣಿ ಕಿತ್ತೂರು” ಚೆನ್ನಮ್ಮ ಹೆಸರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಬಸ್ ನಿಲ್ದಾಣ ಎಂದು ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ಹೃದಯ ಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಈಗಾಗಲೇ ಅಶ್ವಾರೂಢ ವೀರರಾಣಿ ಚೆನ್ನಮ್ಮನವರ ಪ್ರತಿಮೆ ಸ್ಥಾಪಿಸಲಾಗಿದೆ. ಶಕ್ತಿ ಯೋಜನೆ ಉದ್ಘಾಟನೆ ಸಂದರ್ಭದಲ್ಲಿ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುತ್ತೇನೆ ಎಂದು ನಾನು ತಿಳಿಸಿದ್ದೆ. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಗಳು ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರಿಡಲು ಅಗತ್ಯ ಕ್ರಮ ಕೈಗೊಳ್ಳಲು ಸಾರಿಗೆ ಸಚಿವರಿಗೆ ಸೂಚಿಸಿದ್ದರು. ನನ್ನ ಕೋರಿಕೆ ಹಾಗೂ ಮುಖ್ಯಮಂತ್ರಿಗಳ ಸೂಚನೆ ಪರಿಗಣಿಸಿ ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರು…
“ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ” ಎಂಬ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕರ ಗುಡುಗು ಬೆಂಗಳೂರು: ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದರ ಬದಲು ಬಿಜೆಪಿ, ಆರ್.ಎಸ್.ಎಸ್ ಗೆ ‘ನಾವು ತಿರುಗಿ ಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ’ ಎಂಬ ನಿಮ್ಮ ಹೇಳಿಕೆ ‘ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು’ ಎಂಬಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಬಿಜೆಪಿ ವ್ಯಂಗ್ಯವಾಡಿದೆ.ಹುಬ್ಬಳ್ಳಿಯಲ್ಲಿ ಗುರುವಾರ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ರ್ಯಾಲಿ ನಡೆಸಿತ್ತು. ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಮಲ್ಲಿಕಾರ್ಜುವನ ಖರ್ಗೆಯವರು, ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಗುಡುಗಿದ್ದರು.ಈ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಹಾಗೂ ಆರ್.ಎಸ್.ಎಸ್ ಸಂಘಟನೆಗಳ ಕುರಿತು ನೀವು ವಾರ್ನಿಂಗ್ ನೀಡಿರುವ ಪರಿ ಗಮನಿಸಿದರೆ…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮಿಪದ ತಿಳಗೂಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ೧೧ ಅಡಿ ಎತ್ತರದ ಅಶ್ವಾರೂಡ ಬಸವಣ್ಣನವರ ಮೂರ್ತಿ ಪ್ರತಿಸ್ಥಾಪನೆ,ಧರ್ಮ ಸಭೆ,ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ.೪ ರಂದು ರವಿವಾರ ಸಂಜೆ ೪ ಘಂಟೆಗೆ ನಡೆಯಲಿದೆ.ಕಾರ್ಯಕ್ರಮದ ನಿಮಿತ್ಯವಾಗಿ ಮೇ.೪ ರಂದು ಬೆಳಿಗ್ಗೆ ೮ ಘಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಗಜ್ಯೋತಿ ಬಸವೆಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಸಂಜೆ ೪ ಘಂಟೆಗೆ ನೂತನವಾಗಿ ನಿರ್ಮಿಸಿದ ಅಶ್ವಾರೂಡ ಮೂರ್ತಿಯ ಪ್ರತಿಸ್ಥಾಪನೆ ಹಾಗೂ ಲೋಕಾರ್ಪಣೆ, ಹಾಗೂ ಧರ್ಮ ಸಭೆ ಕಾರ್ಯಕ್ರಮ ನಡೆಯಲಿದ್ದು, ಚಿಗರಹಳ್ಳಿಯ ಜಗದ್ಗುರು ಮರುಳಶಂಕರ ದೇವರ ಗುರುಪೀಠದ ಸಿದ್ದಬಸವ ಕಭೀರ ಮಹಾಸ್ವಾಮಿಗಳು ಹಾಗೂ ತಿಳಗೂಳದ ಭ್ರಹ್ಮ ವಿಧ್ಯಾಶ್ರಮದ ಮಹೇಶ್ವರಾನಂದ ಸ್ವಾಮಿಗಳು ಸಾನಿಧ್ಯವನ್ನು ವಹಿಸುವರು, ಮಹಾಂತಯ್ಯ ಹಿರೇಮಠ ಅಧ್ಯಕ್ಷತೆ ವಹಿಸಲಿದ್ದು, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಕಾರ್ಯಕ್ರಮವನ್ನು ಉದ್ಘಾಟಿಸುವರು,ವಿಶೇಷ ಭಾಷಣಕಾರರಾಗಿ ಬೆಂಗಳೂರಿನ ಖ್ಯಾತ ವಾಗ್ಮಿ ಹಾರಿಕಾ ಮಂಜುನಾಥ ಭಾಗಿಯಾಗುವರು.ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ, ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ…
ವಿಶ್ವಪ್ರಕಾಶ ಮಲಗೊಂಡ ನಟನೆಯ ಕಿರುಚಿತ್ರಕ್ಕೆ ಪ್ರಶಸ್ತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ನಟಿಸಿ ನಿರ್ದೇಶಿಸಿರುವ “ವಿದ್ಯಾ ಲವ್ ವಿಶ್ವ” ಕಿರುಚಿತ್ರಕ್ಕೆ “ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ” (ಬೆಸ್ಟ್ ಶಾರ್ಟ ಫೀಲಂ ಅವಾರ್ಡ) ಲಭಿಸಿದೆ.ಇತ್ತೀಚೆಗೆ ಕೊಪ್ಪಳ ನಗರದ ಜೆಕೆಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ್ ಆಯೋಜಿಸಿದ್ದ ಕಿರುಚಿತ್ರೋತ್ಸವ ಸಿಜನ್ -2 ರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದ್ದು, ಅದರಲ್ಲಿ ಅತ್ಯುತ್ತಮ ಕಿರುಚಿತ್ರ ವಿಭಾಗದಲ್ಲಿ ವಿದ್ಯಾ ವಿಶ್ವ ಕಿರುಚಿತ್ರ ಪ್ರಶಸ್ತಿ ಪಡೆದಿದೆ.ಕಿರುಚಿತ್ರೋತ್ಸವದಲ್ಲಿ ನಿರ್ದೇಶಕ ಬಸವರಾಜ ಕೊಪ್ಪಳ, ಪತ್ರಕರ್ತ ಶರಣಬಸವ ಹುಲಿಹೈದರ, ಕಿರುಚಿತ್ರೋತ್ಸವ ನಿಕಟಪೂರ್ವ ಅಧ್ಯಕ್ಷ ಡಾ.ಮಹಾಂತೇಶ ಮಲ್ಲನಗೌಡರ, ಡಾ.ಸಿದ್ದಲಿಂಗಪ್ಪ ಕೊಟ್ನೇಕಲ್, ಶರಣಬಸಪ್ಪ ಬಿಳಿಯಲಿ, ಭೀರಪ್ಪ ಅಂಡಗಿ, ನಾಗರಾಜ ಗುಡಿ, ಮುತ್ತಣ್ಣ ಧರ್ಮಂತಿ, ಬಿ ಎನ್ ಹೊರಪೇಟಿ, ಪ್ರೀಯದರ್ಶಿನಿ ಮುಂಡರಗಿಮಠ, ಕೆ ಎಂ ಖಲೀಲ್ ಕಾರ್ಕಳ, ನಟ ಪ್ರೀತಮ್ ವೇದಿಕೆ ಮೇಲಿದ್ದರು.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಾಂಪ್ರದಾಯಿಕವಾಗಿ ಗಾಣದಿಂದ ಎಣ್ಣೆ ತೆಗೆಯುವ ಬೆಂಗಳೂರು ದಕ್ಷಿಣ ಜಿಲ್ಲೆಯ ವಾಸಿಗಳಾದ ಶಿವನಗೌಡ ಜಿ ಪಾಟೀಲ್ ರವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ ಹುಲಿಕಲ್ ನಟರಾಜ್ ತಿಳಿಸಿದರು.ಮೇ 1 ಗುರುವಾರ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ರಬಕವಿಯ ಶ್ರೀ ಶಿವದಾಶಿವಯ್ಯ ಸಮುದಾಯ ಭವನದಲ್ಲಿ ನಡೆದ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ-2025. ಪ್ರಶಸ್ತಿ ಪ್ರಧಾನ ಮಾಡಲಾಯಿತು. ಬೆಂಗಳೂರು ದಕ್ಷಿಣ ಜಿಲ್ಲೆ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಜಿ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಡಾ. ಕೆ ಜಿ ರಾವ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಇದ್ದರು.ಶಿವನಗೌಡ ಜಿ ಪಾಟೀಲ್ ಸತತವಾಗಿ 25 ವರ್ಷಗಳಿಂದ ಉತ್ತಮ ಆರೋಗ್ಯಕ್ಕಾಗಿ ಕಲ್ಲಿನ ಎತ್ತಿನಗಾಣದಿಂದ ಸಾಂಪ್ರದಾಯಿಕವಾಗಿ ಶ್ರೇಷ್ಠ ಗುಣಮಟ್ಟದ ಕಡಲೆ…
ರಚನೆ*- ಡಾ.ಶಶಿಕಾಂತ ಪಟ್ಟಣಪುಣೆ ಉದಯರಶ್ಮಿ ದಿನಪತ್ರಿಕೆ ಮದುವೆಯಾಗಿವಾರವೂ ಕಳೆದಿರಲಿಲ್ಲಹಚ್ಚಿದ ಅರಿಸಿನ ಅರಿರಲಿಲ್ಲಕಾಶ್ಮೀರ ಪಯಣಕೆಹೊರಟ ದಂಪತಿ ಅತ್ತ ಮಗಹೆಂಡತಿ ಜೊತೆಗೆರಜೆ ಕಳೆಯಲುಹೊರಟರುಕಣಿವೆ ನಾಡಿಗೆ ಅದೆಷ್ಟೋ ಪ್ರವಾಸಿಗಳುಕನಸು ಬಯಕೆ ಹೊತ್ತುಬಂದರು ಹಸಿರು ತಾಣಕೊಳಗಳ ಪುಟ್ಟ ದೋಣಿಮಂಜುಗಡ್ಡೆ ಮುತ್ತಿಕ್ಕಿತ್ತು ನೋಡು ನೋಡುವರೊಳಗೆಬಂದು ನಿಂತರು ಉಗ್ರಗಾಮಿಗಳುಕಂಡ ಕಂಡಲ್ಲಿ ಗುಂಡುರಕ್ತ ಸುರಿಸಿದ ರಕ್ಕಸರು ಚೀರಾಟ ಕೂಗಾಟ ಅಕ್ರ೦ದನಕರುಣೆ ಇಲ್ಲದ ಕಟುಕರುಮೂವತ್ತು ಹೆಣ ಉರುಳಿದವುಇರಲಿಲ್ಲ ಸೇನೆ ಕಾವಲಿಗೆಮಸಣವಾದ ಫೆಹಲ್ಗಾಮ
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಭಾರತದ ಮೊಟ್ಟ ಮೊದಲ ಸ್ವತಂತ್ರ ವಿಚಾರವಾದಿ ಬಸವಣ್ಣನವರು ಮನುಕುಲದ ಮಂದಾರವಾಗಿದ್ದಾರೆ. ವಿಶ್ವದ ವಿಚಾರ ಕ್ರಾಂತಿಯ ಇತಿಹಾಸದಲ್ಲಿ ೧೨ನೇ ಶತಮಾನ ಒಂದು ಸುವರ್ಣ ಯುಗವಾಗಿದೆ. ಬಸವಣ್ಣ ಬಡವರ ನಿಧಿಯು, ವಚನ ಸಾಹಿತ್ಯದ ಸಿರಿಯಾಗಿ, ಅನುಭವ ಮಂಟಪದ ನಿರ್ಮಾಪಕರಾಗಿ ಯುಗಾವತಾರಿಯಾದ ಬಸವಣ್ಣನವರ ಜೀವನ ದಿವ್ಯದರ್ಶನವಾಗಿದೆ ಎಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಚಿಮ್ಮಡ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿನಿತ್ಯ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಬಸವ ನಾಡಿನಲ್ಲಿ ಜನಿಸಿದ ನಮ್ಮ ಜನ್ಮ ಸಾರ್ಥಕವಾಗುವುದು ಎಂದರು.ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿದರು.ಗ್ರಾಮದ ಪ್ರಮುಖರಾದ ರಾಮಣ್ಣ ಮುಗಳಖೋಡ, ಪುಂಡಲಿಕಪ್ಪಾ ಪೂಜಾರಿ, ಬಾಳಪ್ಪಾ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ರಾಮಣ್ಣ ಬಗನಾಳ, ಗುರಲಿಂಗಪ್ಪಾ ಪೂಜಾರಿ, ರಾಚಯ್ಯ ಮಠಪತಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪ್ರಭು ಪಾಲಭಾವಿ, ಅಶೋಕ ಧಡೂತಿ, ಪರಪ್ಪ ನೇಸೂರ, ಬಸವರಾಜ…
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಬಸವಣ್ಣನವರು ನಾಗರಿಕ ಸಮಾಜದ ಬೆಳಕಾಗಿದ್ದಾರೆ.ಅವರ ಆದರ್ಶತನದ ಕಾಯಕ ತತ್ವಾದರ್ಶಗಳು ನಮಗೆಲ್ಲ ಪ್ರೇರಣಾದಾಯಕವಾಗಿವೆ. ಅಣ್ಣ ಬಸವೇಶ್ವರ ಕಾಯಕ ವಿಚಾರ,ಮಂಥನಗಳು ಸರಳತೆಯ ಶ್ರೇಷ್ಠತೆ ಕಂಡಿವೆ.ಬಸವ ಕಾಯಕ ಮಿಡಿತ ಜನಮನದಲ್ಲಿ ಪೂಜ್ಯತೆ ಭಾವ ತೋರಿವೆ. ನೈಜತೆಯ ಹೊಳಪಿನಲ್ಲಿ ಮಿನುಗಿವೆ.ಅವು ಜಗದಗಲಕ್ಕೆ ಸಂದಿವೆ ಎಂದು ಪ್ರಭಾರಿ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಅಭಿಪ್ರಾಯಿಸಿದರು.ಜಗದ್ಗುರು ತೋಂಟದಾರ್ಯ ವಿದ್ಯಾಪೀಠ, ಗದಗ ಸಂಸ್ಥೆಯ ವತಿಯಿಂದ ಚಿಕ್ಕಪಡಸಲಗಿ ಗ್ರಾಮದಲ್ಲಿ ನಡೆಯುತ್ತಿರುವ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಬಸವಣ್ಣನವರ 892 ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವೇಶ್ವರರ ಮಾನವೀಯ ಮೌಲ್ಯಗಳು ಆದರ್ಶಪ್ರಾಯಗಳಾಗಿವೆ. ಕಾಯಕ ನಿಷ್ಟೆಗೆ ಆದ್ಯತೆ ನೀಡಿ ಸಾಮಾಜಿಕ ಕಳಕಳಿ ಮೆರೆದಿರುವ ಬಸವಣ್ಣನವರು ತಮ್ಮ ಜ್ಞಾನಯೋಗದಿಂದ ಜಗಕ್ಕೆ ಸದಾ ಒಳಿತು ಬಯಸಿ ಮಹಾತ್ಮರಾಗಿದ್ದಾರೆ ಎಂದರು.ಒಳಿತು ಭಾವಗಳ ಸಾಂಸ್ಕೃತಿಕ ನಾಯಕ, ಕಾಯಕಯೋಗಿ ಬಸವ ಶರಣರ ತತ್ವ, ಸಂದೇಶಗಳು ಸಾರ್ವಕಾಲಿಕ ಪ್ರಸ್ತುತವಾಗಿವೆ. ಅವರ ಅಪ್ರತಿಮ ಆಚಾರ,ವಿಚಾರ ಪವಿತ್ರವಾಗಿವೆ.ಸಮಸಮಾಜದ ಕನಸುಗಾರ ಬಸವಣ್ಣನವರ ಜೀವನ ಚರಿತ್ರೆಯ ಯಶೋಗಾಥೆ ಅರ್ಥವತ್ತಾಗಿದೆ. ಮೈಮನ ಪುಳುಕುವಂತೆ…
ಮುಸ್ಲಿಂ ಕುಟುಂಬದಿಂದ ಬಸವ ಜಯಂತಿ ಆಚರಣೆ | ಶಾಂತಿ ಸೌಹಾರ್ದತೆಯಿಂದ ಕೂಡಿ ಬಾಳಲು ಪ್ರಾರ್ಥನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಭೂಮಿ ಮೇಲಿನ ಭಯೋತ್ಪಾದನೆ ನಿರ್ಮೂಲನೆಯಾಗಬೇಕಾದರೆ, ಜಗತ್ ಜ್ಯೋತಿ ಬಸವಣ್ಣನವರ ದಯೋತ್ಪಾದನೆ (ದಯೆವೇ ಧರ್ಮದ ಮೂಲ) ಸಿದ್ದಾಂತ ಮೈಗೂಡಿಸಿಕೊಂಡಾಗ ಮಾತ್ರ ಸಾಧ್ಯ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ಕಳೆದ ಮೂರು ವರ್ಷಗಳಿಂದ ಆಡುಗೋಡಿಯ ತಮ್ಮ ಪೊಲೀಸ್ ವಸತಿ ಗೃಹದಲ್ಲಿ ಬಸವಣ್ಣನವರ ಜಯಂತಿ ಆಚರಣೆ ಮಾಡುತ್ತ ಬರುತ್ತಿರುವ ಮೌಲಾಲಿ ಅವರು ಪೋಟೋಗೆ ಪೂಜೆ ಮಾಡಿ ಮಾತನಾಡಿದರು.ಇತ್ತೀಚೆಗೆ ಸಮಾಜದಲ್ಲಿ ಅಮಾನವೀಯ ಕೃತ್ಯಗಳು ಹೆಚ್ಚುತ್ತಿವೆ, ಶ್ರೇಷ್ಠ ಜೀವಿ ಎನಿಸಿಕೊಂಡ ಮನುಜ ಧರ್ಮ, ಜಾತಿಗಳ ಹೆಸರಿನಲ್ಲಿ ಸಂಘರ್ಷದ ಹಾದಿ ತುಳಿಯುತ್ತಿರುವುದು ವಿಷಾದನೀಯ. ಬಸವಣ್ಣನವರು 12 ನೇ ಶತಮಾನದಲ್ಲಿಯೇ ಪ್ರತಿಪಾದಿಸಿದ ಸಮಾನತೆ, ಸಹಿಷ್ಣುತೆ, ಭ್ರಾತೃತ್ವ ಸೇರಿದಂತೆ ಮಾನವೀಯ ಮೌಲ್ಯಾಧಾರಿತ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೋಳ್ಳದೇ ಇರುವುದು ನೋವಿನ ಸಂಗತಿ ಎಂದರು.ಆರಕ್ಷಕ ಮಷಾಕ್ ನಾಯ್ಕೋಡಿ ಮಾತನಾಡಿ, ಬಸವಣ್ಣನವರು ಹೇಳಿದ ಹಾಗೆ ಇವನಾರವ ಇವನಾರವ ಇವನಾರವ ಎನ್ನದೆ, ಇವ ನಮ್ಮವ ಇವ ನಮ್ಮವ,…
