Author: editor.udayarashmi@gmail.com

ಇಂಡಿ: ಕಾರ್ಮಿಕರು ಹಾಗೂ ಕಾರ್ಮಿಕ ವರ್ಗವನ್ನು ದೇಶದ ಪ್ರಬಲ ಶಕ್ತಿ ಎಂದರೂ ತಪ್ಪಾಗಲಿಕ್ಕಿಲ್ಲ. ದೇಶದ ಅಭಿವೃದ್ಧಿಯಲ್ಲಿ ಇವರ ಪಾತ್ರ ಬಹಳ ಮಹತ್ವದ್ದು. ಕಾರ್ಮಿಕ ವರ್ಗದವರು ದೇಶದ ಅಭಿವೃದ್ಧಿಗೆ ಬೇರುಗಳಂತೆ ಭದ್ರವಾಗಿರುವವರು. ಆದರೆ ಇಡೀ ದೇಶ ಮತ್ತು ರಾಜ್ಯದಾದ್ಯಂತ ಮೇ – 1 ರಂದು ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಮಾಡುತ್ತೀರುವ ಸಂದರ್ಭದಲ್ಲಿ, ತಾಲ್ಲೂಕಿನ ಆಡಳಿತ ಸೌಧದಲ್ಲಿರುವಕಾರ್ಮಿಕರ ಇಲಾಖೆಗೆ ಬೀಗ ಹಾಕಿದ್ದು, ಆಚರಣೆ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೌದು ಭವಿಷ್ಯದ ಜಿಲ್ಲಾ ‌ಕೇಂದ್ರ ಎಂದು ಬಿಂಬಿತಗೊಂಡಿರುವ ಇಂಡಿ ತಾಲ್ಲೂಕಿನ ಆಡಳಿತ ಸೌಧದಲ್ಲಿ ಇರುವ ಕಾರ್ಮಿಕ ಕಛೇರಿ ನೌಕರರು ನಿರಂತರ ಸೇವೆ ನೀಡಿದರೂ ಉಪಯೋಗಬಾರದಂತಾಗಿದೆ. ಏಕೆಂದರೆ ಇಂದು ಕಾರ್ಮಿಕರಿಗೆ ಅತ್ಯಂತ ಮೌಲ್ಯಯುತ್ ದಿನ. ಅವರು ತಮ್ಮ ನೋವು ನಲಿವು, ಬೇಕು-ಬೇಡಿಕೆ ಭಾವನೆ ಹಂಚಿಕೊಳ್ಳುವ ದಿನಆದರೆ ಕಾರ್ಮಿಕ ಕಛೇರಿ ಬೀಗ ಹಾಕಿದ್ದರಿಂದ ತಾಲೂಕಿನ ಕಾರ್ಮಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗಿದೆ.ಯಾವುದೇ ದೇಶಕ್ಕೆ ಕಾರ್ಮಿಕರು ಹಾಗೂ ಕಾರ್ಮಿಕ ವರ್ಗದವರು ಬೆನ್ನೆಲುಬಾಗಿರುವುದು ಬಹಳ ಮುಖ್ಯ.ಒಂದು ದೇಶ ಹಾಗೂ ರಾಜ್ಯ ತನ್ನದೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸದ್ಗುರು ಭೀಮಾಶಂಕರ ಸ್ವಾಮಿ ಸಂಸ್ಥಾನಮಠದಲ್ಲಿ ಮೇ.೦೨ ಶುಕ್ರವಾರದಂದು ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.ಬೆಳಿಗ್ಗೆ ೦೯ಗಂಟೆಗೆ ಪಟ್ಟಣದ ಸಂಗಮೇಶ್ವರ ದೇವಸ್ಥಾನದಿಂದ ಶ್ರೀಮಠದವರೆಗೆ ಶೋಭಾಯಾತ್ರೆ, ಬೆಳಿಗ್ಗೆ ೧೦ಗಂಟೆಗೆ ಶ್ರೀಮಠದಲ್ಲಿ ಜಗದ್ಗುರು ಶಂಕರಾಚಾರ್ಯರ ಅಷ್ಟೋತ್ತರ ಪಾರಾಯಣ ಹಾಗೂ ಸಾಮೂಹಿಕ ನಮಃ ಶಂಕರಾಯ ಜಪ, ೧೧ಗಂಟೆಗೆ ವೇ.ಮೂ.ಶ್ರೀ ಆದಿತ್ಯ ವೈದ್ಯ ಅವರಿಂದ ಉಪನ್ಯಾಸ, ಮದ್ಯಾಹ್ನ ೧೨ಗಂಟೆಗೆ ಸದ್ಗುರು ದತ್ತಪ್ಪಯ್ಯ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ಹಾಗೂ ೧೨:೪೦ಗಂಟೆಗೆ ಮಹಾಮಂಗಳಾರತಿ ಹಾಗೂ ಮಹಾಪ್ರಸಾದ ಜರುಗಲಿದೆ.

Read More

ಜಿಲ್ಲಾಧಿಕಾರಿ ಟಿ.ಭೂಬಾಲನ್ ರಿಂದ ನಗರದ ವಿವಿಧ ಕಾಮಗಾರಿಗಳು-ಅತಿಕ್ರಮಣ ಪ್ರದೇಶಗಳ ಸ್ಥಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿವಿಧೆಡೆ ಕೈಗೊಂಡಿರುವ ಕಾಮಗಾರಿ ಹಾಗೂ ಅತಿಕ್ರಮಣವಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿ ಹಿಂಭಾಗದಲ್ಲಿರುವ ಖಾಲಿ ಜಾಗವನ್ನು ಪರಿಶೀಲನೆ ನಡೆಸಿದ ಅವರು, ಸದರಿ ಸ್ಥಳದಲ್ಲಿರುವ ತಗ್ಗು ಗುಂಡಿಗಳನ್ನು ದುರಸ್ತಿಗೊಳಿಸಿ, ಸಮತಟ್ಟುಗೊಳಿಸಿ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ನಗರದಾದ್ಯಂತ ವಿವಿಧೆಡೆ ೧೦ ಸಾವಿರ ಗಿಡಗಳನ್ನು ಬೆಳೆಸುವ ಮೂಲಕ ಹಸಿರು ವಲಯಕ್ಕೆ ಕ್ರಮ ವಹಿಸುವಂತೆ ಅರಣ್ಯಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ನಗರದ ರಿಂಗ್ ರಸ್ತೆ ಶ್ರಿ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೋಲಾಪುರ ರಾಷ್ಟ್ರೀಯ ಹೆದ್ದಾರಿವರೆಗೆ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ನಗರದ ದರ್ಗಾ ರಸ್ತೆಯಲ್ಲಿ ಸೋಲಾಪುರ ಹಳೆಯ ಬೈಪಾಸ್‌ದಿಂದ ದರ್ಗಾ (ಇಟ್ಟಂಗಿಹಾಳ) ರಸ್ತೆವರೆಗೆ ಮುಖ್ಯ ರಸ್ತೆಯಲ್ಲಿರುವ ಅನಧಿಕೃತ- ಒತ್ತುವರಿಯಾಗಿರುವ ಕಟ್ಟಡ-ಶೆಡ್‌ಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ…

Read More

ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿನ ವಿವಿಧ ಐತಿಹಾಸಿಕ ಬಾವಿಗಳನ್ನು ಮಹಾನಗರ ಪಾಲಿಕೆ ವತಿಯಿಂದ ಪುನಶ್ಚೇತನಗೊಳಿಸಿ, ಬಾವಡಿಯಲ್ಲಿರುವ ನೀರನ್ನು ಗೃಹ ಬಳಕೆಗಾಗಿ ಸಾರ್ವಜನಿಕರಿಗೆ ಪೂರೈಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.ವಿಜಯಪುರ ನಗರದಲ್ಲಿರುವ ಗಚ್ಚಿನಕಟ್ಟಿ ಕಾಲನಿ ಬಾವಡಿ, ಫೋಸ್ಟ್ ಆಫೀಸ್ ಆವರಣದಲ್ಲಿರುವ ಬಾವಡಿ, ಭರತ ಬಾವಡಿ, ಚಂದಾಬಾವಡಿ, ಸೈಟಲೈಟ್ ಬಸ್ ನಿಲ್ದಾಣದ ಹತ್ತಿರದ ರೂಮಾಲ ಬಾವಡಿ, ಆಕೃತಿ ಕಾಲನಿ ಬಾವಡಿ, ಕಣಕಿ ಬಜಾರ ಹತ್ತಿರದ ಸಕ್ರಿ ಬಾವಡಿ, ಚಪ್ಪರಬಂದ ಗಲ್ಲಿಯಲ್ಲಿರುವ ಮುಕ್ರಿ ಬಾವಡಿ, ಝಂಡಾ ಕಟ್ಟಾ ಹತ್ತಿರವಿರುವ ಪೇಟಿ ಬಾವಡಿ, ಮನಗೂಳಿ ಅಗಸಿ ಹತ್ತಿರವಿರುವ ಬಸರಿ ಬಾವಡಿ, ಅಂಜುಮನ್ ಕಾಲೇಜ್ ಹತ್ತಿರವಿರುವ ಬಾವಡಿ, ರಂಭಾಪುರ ಬಾವಡಿ, ವಾರ್ಡ ನಂ.೩೨ರ ಲಿಂಗೇಶ್ವರ ದೇವಸ್ಥಾನದ ಹತ್ತಿರವಿರುವ ಬಾವಡಿ ಹಾಗೂ ಶಾಹು ನಗರದ ಗುಂಡ ಬಾವಡಿಯನ್ನು ಪುನಶ್ಚೇತನಗೊಳಿಸಲಾಗಿದೆ. ಈ ಬಾವಡಿಗಳು ನೀರಿನಿಂದ ಸಮೃದ್ಧವಾಗಿದ್ದು, ಈ ಬಾವಡಿಗಳ ಪೈಕಿ ಈಗಾಗಲೇ ೬ ಬಾವಡಿಗಳ ನೀರು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಶ್ರೀ ಬಸವೇಶ್ವರ ಜಯಂತಿಯ ಪ್ರಯುಕ್ತ ಬಸವೇಶ್ವರ ಸರ್ಕಲನಲ್ಲಿ ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಸವ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಬಸವೇಶ್ವರ ಸರ್ಕಲ್ ಗೆಳೆಯರಾದ ವಿಜಯ ಗಿಡ್ಡಪ್ಪಗೋಳ, ಉಮೇಶ ಗಣಿ, ಹರೀಶ ಸೋಮಶೇಖರ, ಶಿವು ಅರಕೇರಿ, ತೇಜಸ್ ಗಣಿ, ಚಂದ್ರು ‌ಹಡ್ರೋಳಿ, ಬ‌ಸು ವಜ್ರಮಟ್ಟಿ, ಸಚೀನ ಮನ್ನಿಕೇರಿ, ಸಾಬು ವಾಲೀಕಾರ ಇನ್ನಿತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಾಷ್ಟ್ರೀಯ ಪ್ರಗತಿಗೆ ಶ್ರಮವೇ ಪ್ರಮುಖ, ಕಾರ್ಮಿಕರ ಅವಿರತ ಶ್ರಮದ ಮೂಲಕ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ದೃಷ್ಟಿಕೋನವನ್ನು ನನಸಾಗಿಸಬಹುದು. ಕಾರ್ಮಿಕರ ಪರಿಶ್ರಮ ಮತ್ತು ಸಮರ್ಪನೆಯು ರಾಷ್ಟ್ರ ನಿರ್ಮಾಣದ ಅಡಿಪಾಯವೆಂದು ಎನ್ ಟಿಪಿಸಿ ಕಾರ್ಯನಿರ್ವಾಹಕ ನಿರ್ದೇಶಕ ಬಿದ್ಯಾನಂದ್ ಝಾ ಹೇಳಿದರು.ತಾಲೂಕಿನ ಕೂಡಗಿ ಎನ್ ಟಿಪಿಸಿಯಲ್ಲಿ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಮಿಕರ ಕಠಿಣ ಪರಿಶ್ರಮದ ಪ್ರಯತ್ನಗಳಿಲ್ಲದೆ ಯಾವುದೇ ರೀತಿಯ ಆರ್ಥಿಕ ಬೆಳವಣಿಗೆ ಸಾಧ್ಯವಿಲ್ಲ.ದೇಶದ ಪ್ರಗತಿಗೆ ಕೈಗಾರಿಕಾ ಬೆಳವಣಿಗೆ ಅತ್ಯಗತ್ಯ. ಎನ್‌ಟಿಪಿಸಿಯ ಉದ್ಯೋಗಿಗಳ ಕಠಿಣ ಪರಿಶ್ರಮ ಮತ್ತು ಬದ್ಧತೆಯು ಕಂಪನಿಯು ತನ್ನ ಧ್ಯೇಯವನ್ನು ಸಾಧಿಸಲು ಅನುವು ಮಾಡಿಕೊಡುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ದಿನವು ಕೇವಲ ಆಚರಣೆಯಲ್ಲ, ಆದರೆ ಕಾರ್ಮಿಕರ ಬೆಂಬಲವಿಲ್ಲದೆ, ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನು ನೆನಪಿಸುತ್ತದೆ ಎಂದರು.ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಜನರಲ್ ಮ್ಯಾನೇಜರ್ ಗಳಾದ ಸಂತೋಷ ತಿವಾರಿ, ಉಮೇಶ ಕುಮಾರ್ ಜೈನ್, ಕಾಲಿಯಾ ಎಸ್ ಮೂರ್ತಿ,…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಕಮರಿಮಠದ ಶರಣಭಸವೇಶ್ವರ ಹಾಗೂ ಸಿದ್ಧಲಿಂಗೇಶ್ವರ ಮಹಾರಾಜರ ರಥೋತ್ಸವ ಸೋಮವಾರ ಸಾಯಂಕಾಲ ಹಳಿಂಗಳಿಯ ಶಿವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು.ರಥವನ್ನು ತೆಂಗು, ಬಾಳೆ ಹಣ್ಣು, ಹೂವುಗಳು, ವಿದ್ಯುತ್ ದ್ವೀಪಗಳಿಂದ ಅಲಂಕರಿಸಲಾಗಿತ್ತು, ಭಕ್ತರು ಬೆಂಡು, ಬೆತ್ತಾಸು, ಕಾರಿಖ್, ರಥಕ್ಕೆ ಎಸೆದು ಭಕ್ತಿ ಮೇರೆದರು. ಚೀನಿಕೊಲು, ಕರಡಿ ವಾದ್ಯ, ಡೊಳ್ಳು ವಾದ್ಯ, ಗಮನ ಸೆಳೆದವು.ಚಿಕ್ಕಪಡಸಲಗಿ, ಕವಟಗಿ, ಜನವಾಡ, ಬಿದರಿ, ನಾಗನೂರು, ಹಿರೇಪಡಸಲಗಿ ಮತ್ತಿತರ ಗ್ರಾಮಗಳ ಭಕ್ತರು ಭಾಗವಹಿಸಿದ್ದರು. ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಬೆಳ್ಳಗ್ಗೆ ಸಿದ್ದಲಿಂಗೇಶ್ವರ ಮಹಾರಾಜರ ಅಡ್ಡಪಲ್ಲಕ್ಕಿ ಉತ್ಸವ, ಶರಣ ಬಸವೇಶ್ವರ ಮಹಾರಾಜರ ತೊಟ್ಟಿಲು ತೂಗುವ(ನಾಮಕರಣ) ಕಾರ್ಯಕ್ರಮಗಳು ಜರುಗಿದವು.ಇದೇ ವೇಳೆ ಗ್ರಾಮಸ್ಥರಾದ ರಾವತಪ್ಪ ಕಲ್ಯಾಣಿˌ ಮಲ್ಲು ಪಟ್ಟಣಶೆಟ್ಟಿˌ ಸುರೇಶ ದಾನಗೌಡ, ಮಹಾದೇವ ಕಲ್ಯಾಣಿˌ ಲಕ್ಷ್ಮಣ ಕಲ್ಯಾಣಿˌ ಸಿದ್ದು ಜಂಗಮಶೆಟ್ಟಿˌ ಅಡಿವೇಪ್ಪ ಅಂಬಲಝೇರಿˌ ಪ್ರಭು ಬೋದ್ಲಿˌ ಜೈಪಾಲ್ ಹೊಸಮನಿˌ ಸದಾಶಿವ ಕಲ್ಯಾಣಿ, ಮಲ್ಲಯ್ಯಾ ಹಿರೇಮಠ, ಅಯ್ಯಪ್ಪ ಮಠಪತಿ, ಸಿದ್ಧಲಿಂಗ ಹಿರೇಮಠˌ ಸಿದ್ರಾಮ ಇಟ್ಟಿˌ ಶ್ರೀಶೈಲ ಪಟ್ಟಣಶೆಟ್ಟಿˌ ಹನಮಂತ ಕಾರಜೋಳˌ…

Read More

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು, ಸಮಗ್ರವಾದ ಯೋಜನೆ ರೂಪಿಸಿ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಸೂಚನೆ ನೀಡಿದರು.ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕ್ರೀಯಾ ಯೋಜನೆ ಪರಿಶೀಲನೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಬೇಸಿಗೆ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡು ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ನಗರ ಪ್ರದೇಶದ ಎಲ್ಲ ವಾರ್ಡಗಳಿಗೆ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಕೆಗೆ ತಾಂತ್ರಿಕ ಸಮಸ್ಯೆ ಎದುರಾದ ಸಂದರ್ಭಗಳಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಇರ್ತರ್ಥಪಡಿಸಿಕೊಂಡು ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುಂತೆ ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಜಲನಗರದಲ್ಲಿರುವ ಶ್ರೀ ಬಿ. ಎಂ. ಪಾಟೀಲ ಐ.ಸಿ.ಎಸ್.ಇ ಸ್ಕೂಲ್ ವಿದ್ಯಾರ್ಥಿನಿ ವರ್ಷಾ ಕುಂಬಾರ ನಗರಕ್ಕೆ ದ್ವಿತೀಯ ಮತ್ತು ಶಾಲೆಗೆ ಪ್ರಥಮ ಸ್ಥಾನ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ. ಅಲ್ಲದೇ, ಪರೀಕ್ಷೆಗೆ ಹಾಜರಾದ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪಾಸಾಗಿದ್ದು, ಶೇ. 100 ರಷ್ಟು ಫಲಿತಾಂಶ ಬಂದಿದೆ.ಈ ಪರೀಕ್ಷೆಯಲ್ಲಿ ವರ್ಷಾ ಕುಂಬಾರ ಒಟ್ಟು 600 ಅಂಕಗಳ ಪೈಕಿ 559 ಅಂಕ ಪಡೆದಿದ್ದಾಳೆ. ಈ ಮೂಲಕ ವಿಜಯಪುರ ನಗರಕ್ಕೆ ದ್ವಿತೀಯ ಮತ್ತು ಶಾಲೆಗೆ ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಅದೇ ರೀತಿ ವರ್ಷಾ ಹಿರೇಮಠ 600ಕ್ಕೆ 551 ಅಂಕ ಪಡೆದು ಶಾಲೆಗೆ ದ್ವಿತೀಯ ಮತ್ತು ಮತ್ತು ರೊಮಾ ಭೋಸಲೆ 600ಕ್ಕೆ 542 ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ವರ್ಷಾ ಕುಂಬಾರ ಶಾಲೆಯಲ್ಲಿ ಗುರುಗಳು ಮಾಡಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ನಾಳೆ ದಿ.2 ಶುಕ್ರವಾರ ತಮ್ಮ ಗೃಹ ಕಚೇರಿಯಲ್ಲಿ ಬೆ.10ಗಂ. ಮ. 12ಗಂ. ವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.ನಂತರ ಸಂ. 4ಗಂ. ವಿಜಯಪುರದಿಂದ ಹೊರಟು ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿಯಲ್ಲಿ ಸಂ. 7ಗಂ. ನಡೆಯಲಿರುವ ಸದ್ಧರ್ಮ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ರಾ. 9ಗಂ. ಉಜ್ಜಯಿನಿಯಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಮಾನ್ಯ ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More