Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಭಗವಾನ್ ಶ್ರೀ ಮಾಹಾವೀರ ಜಯಂತಿ ಮಾ.೩೦ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೯:೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ಜರುಗಲಿದೆ.ಹೀರಾಚಂದ್ ಎಸ್.ಗಾಂಧಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶಿವಾನಂದ ಬಿ. ಬಜಂತ್ರಿ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ಶಿವಾನಂದ ರಾಠೋಡ್ ಅವರಿಗೆ ನಗರದ ವಿವಿಧ ಕೊಳಚೆ ಪ್ರದೇಶಗಳಲ್ಲಿನ ಸಮಸ್ಯೆಗಳ ಪಟ್ಟಿ ಸಲ್ಲಿಸಿದರೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಸಂಘಟನೆಯ ಅಧ್ಯಕ್ಷ ಗೌಡಪ್ಪ ಬಡಿಗೇರ ಹೇಳಿದರು.ಸಮಸ್ಯೆಗಳು ಕೇಳಲು ತಿಂಗಳಿಗಿಂತಲೂ ಹೆಚ್ಚಿನ ಅವಧಿ ಬೇಕು ಮತ್ತು ಕೊಳಚೆ ಪ್ರದೇಶಗಳಲ್ಲಿನ ಸಮಸ್ಯೆಗಳೆಲ್ಲವೂ ಆಲಿಸಿದ್ದೇನೆ, ಎಲ್ಲವೂ ಸುಸೂತ್ರ ವಾಗಿದೆ ಎಂದು ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನಿಸುತಿದ್ದಾರೆ.ಯಾವ ಕೊಳಚೆ ಪ್ರದೇಶಗಳಿಗೂ ಬೇಟಿ ಕೊಟ್ಟು ವಾಸ್ತವ ಅಂಶಗಳನ್ನು ಪರಿಶೀಲಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ಲಭ್ಯವಿರುವುದಿಲ್ಲ. ನಾನು ಕೂಡ ಎಸ್ಸಿನೇ ಇದ್ದೇನೆ. ನನಗೆ ಯಾರು ಏನನ್ನು ಮಾಡಿಕೊಳ್ಳಲಾಗುವುದಿಲ್ಲ ಎಂದು ಹೇಳುತ್ತಾರೆ. ಆದುದರಿಂದ, ಸೇವಾ ಅಧಿನಿಯಮದನ್ವಯ ನೋಟಿಸ್ ಜಾರಿಗೊಳಿಸಿ, ಕೊಳಗೇರಿ ಜನರ ಕನಿಷ್ಠ ಬದುಕುವ ಹಕ್ಕುಗಳನ್ನು ರಕ್ಷಿಸಲು ಶಿಸ್ತು ಕ್ರಮ ಜರುಗಿಸಬೇಕೆಂದು ಕೋರಿದರು.ಪದಾಧಿಕಾರಿಗಳಾದ ಅಮೃತ್, ಪರಶುರಾಮ್, ಪ್ರಶಾಂತ್, ರಮೇಶ್, ಮೇಹಬೂಬ್, ಆದಿತ್ಯ ಹಳ್ಳಿ, ಉಮೇಶ್, ಚನ್ನು, ಸಾಗರ್, ಸುಭಾಶ್ಚಂದ್ರ, ತೋಫೀಕ್, ಇಮ್ರಾನ್ ಇತರರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕೆ.ಎಂ.ಕೃಷ್ಣನಾಯಕ ಅವರಿಗೆ ಟಿಕೆಟ್ ಸಿಕ್ಕಿದ್ದರೆ ನಿಮ್ಮ ಆಶೀರ್ವಾದದಿಂದ ಈವಾಗ ಶಾಸಕರಾಗಿರುತ್ತಿದ್ದರು. ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಪಕ್ಷ ತೆಗೆದುಕೊಂಡ ಕೆಲ ತೀರ್ಮಾನದಿಂದ ಆ ಅವಕಾಶ ಕೈತಪ್ಪಿತ್ತು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಹಳೆ ಸಂತೆಮಾಳದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಸಮಾವೇಶ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೆ.ಎಂ. ಕೃಷ್ಣನಾಯಕ ಅವರು ಹೆಚ್ ಡಿ ಕೋಟೆಗೆ ಬಂದು 10 ವರ್ಷ ಕಳೆದಿರಬಹುದು. ಆದರೆ ಅಧಿಕಾರ ಇಲ್ಲದಿದ್ದರೂ ಇವತ್ತು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಟೊಂಕಕಟ್ಟಿ ನಿಂತಿದ್ದಾರೆ. ಇತಿಹಾಸ ಪುಟ ತಿರುವಿದಾಗ ಬಹಳಷ್ಟು ಜನ ಮೊದಲ ಚುನಾವಣೆಯಲ್ಲಿ ಎಡವಿರುವುದನ್ನು ನೋಡಿದ್ದೇವೆ. ಆದರೆ ಕ್ಷೇತ್ರದ ಜನ ದೂಡುವ ಪರೀಕ್ಷೆಗಳನ್ನು ಎದುರಿಸಿದಾಗ ಕಲ್ಲು ಕೂಡ ಶಿಲೆಯಾಗುತ್ತೆ ಎಂಬ ಗಾದೆ ಮಾತಿನಂತೆ ಎನ್ ಡಿಎ ಮೈತ್ರಿಕೂಟದ ಸರ್ಕಾರದಲ್ಲಿ , ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕೆ.ಎಂ. ಕೃಷ್ಣನಾಯಕ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಯಲಗೂರದ ಯಲಗೂರೇಶ್ವರ ದೇವಸ್ಥಾನದಲ್ಲಿ ಭಾನುವಾರ ರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.ದೇವಸ್ಥಾನದ ಪ್ರಾಂಗಣದಲ್ಲಿ ಹೂವಿನಿಂದ ಶೃಂಗರಿಸಲ್ಪಟ್ಟಿದ್ದ ರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿ ಪ್ರತಿಷ್ಠಾಪಿಸಿ ಭಕ್ತಿಯಿಂದ ನಮಿಸಿದರು. ತೊಟ್ಟಿಲನ್ನು ತೂಗಿದ ಮಹಿಳೆಯರು ರಾಮ ಎಂದು ಹೆಸರು ನಾಮಕರಣ ಮಾಡಿದರು.ನಂತರ ಮಹಿಳೆಯರು ರಾಮನ ಹಾಗೂ ಪವನ ಸುತನ ಭಕ್ತಿಗೀತೆಗಳನ್ನು ಹಾಡಿದರು. ನಂತರ ಯಲಗೂರೇಶನಿಗೆ ಸಾಮೂಹಿಕ ಪಂಚಾಮೃತ ಅಭೀಷೇಕ, ಮಹಾಪೂಜೆ, ಮಹಾನೈವೇದ್ಯ, ಅನ್ನಸಂತರ್ಪಣೆ ಜರುಗಿದವು.ವಾದೀಂದ್ರ ಯಲಬುರ್ಗಿ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದರು.ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಅನಂತ ಓಂಕಾರ, ಅನ್ನದಾಸೋಹ ಸಮಿತಿಯ ಅಧ್ಯಕ್ಷ ಶ್ಯಾಮ ಪಾತರದ, ಯಲಗೂರದಪ್ಪ ಪೂಜಾರ, ಸಂಜೀವ ಪೂಜಾರ, ಶ್ರೀಶೈಲ ಪೂಜಾರ, ಗೋಪಾಲ ಗದ್ದನಕೇರಿ, ಸಂತೋಷ ಪೂಜಾರ, ವೆಂಕಟೇಶ ಒಡೆಯರ , ಮಹಾದೇವ ಹೂಗಾರ ಮತ್ತೀತರರು ಇದ್ದರು.ಭಕ್ತಾದಿಗಳು ನೀಡಿದ ಕಾಣಿಕೆಯಲ್ಲಿ ೨೦೦ ಕೆಜಿಗೂ ಅಧಿಕ ದ್ರಾಕ್ಷಿ, ದ್ರಾಕ್ಷಿ ಬಳ್ಳಿಯಿಂದ ಯಲಗೂರೇಶ ಹಾಗೂ ದೇವಸ್ಥಾನದ ಪ್ರಾಂಗಣ, ತೊಟ್ಟಿಲು ಸೇರಿ ಹಲವೆಡೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.ಯಲಗೂರದ ಪ್ರಮೋದಾತ್ಮ ಗೋಸಂರಕ್ಷಣಾ ಕೇಂದ್ರದಲ್ಲಿ ಉತ್ತರಾದಿಮಠದ ಸತ್ಯಾತ್ಮತೀರ್ಥ ಶ್ರೀಪಾದಂಗಳವರು…

Read More

ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ | ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ‌ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ ನಡೆಯುತ್ತಿರುವ ಎಸ್ಎಸ್ಎಲ್‌ಸಿ ಪರೀಕ್ಷೆಯಿಂದಲೇ ಅನ್ವಯವಾಗಲಿದೆ ಎಂದರು. ಈ ಹಿಂದೆ 625 ಅಂಕಗಳಿಗೆ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರು. ಆದರೆ ಈಗ ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವುದಿಲ್ಲ. 525 ಅಂಕಗಳಿಗೆ ಪ್ರತಿ ವಿದ್ಯಾರ್ಥಿಯೂ ಪಡೆದ ಅಂಕಗಳಷ್ಟೇ ಇರುತ್ತವೆ ಎಂದು ಹೇಳಿದರು. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಶೀಘ್ರದಲ್ಲೇ…

Read More

ಎಲ್ಪಿಜಿ ಗ್ಯಾಸ್ ಗೆ ಬೈ, ಪರಿಸರ ಸ್ನೇಹಿ ಬಯೋಗ್ಯಾಸ್ ಗೆ ಸೈ | ಗ್ಯಾಸ್ ಟ್ರಬಲ್ಲೂ ಇಲ್ಲ, ಅಡುಗೆ ಸಮಸ್ಯೆಯೂ ಇಲ್ಲ ಲೇಖನ- ಮಿಥುನ ಬನಸೋಡೆಪ್ರ-ಶಿಕ್ಷಣಾರ್ಥಿವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವಿಜಯಪುರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದುಬಾರಿ ದುನಿಯಾ ಗಗನಕ್ಕೇರಿದ ಅಗತ್ಯ ದಿನಬಳಕೆಯ ವಸ್ತುಗಳು ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆ. ಇಂತಹ ಸಂದರ್ಭದಲ್ಲಿ ಕುಟುಂಬ ನಿರ್ವಹಣೆ ತುಂಬಾ ಸವಾಲಿನ ಕೆಲಸವಾಗಿದೆ. ಆದರೆ ಇದಕ್ಕೆ ಪರ್ಯಾಯವಾಗಿ ಮಹಿಳಾ ರೈತರೊಬ್ಬರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ “ಪರಿಸರ ಸ್ನೇಹಿ ಬಯೋಗ್ಯಾಸ್” ನಿರ್ಮಾಣ ಮಾಡಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೇಗುಣಿಸಿ ಗ್ರಾಮದ ಸಾವಿತ್ರಿ ಹಣಮಂತ ಚನಾಳ ಎಂಬುವರೇ ಈ ಸಾಧನೆ ಮಾಡಿದವರು.ಮೂಲತ: ಕೃಷಿ ಕುಟುಂಬ. ಕೃಷಿಯಲ್ಲಿ ಸಾಕಷ್ಟು ಒಲವು ಮತ್ತು ಅಭಿರುಚಿ ಹೊಂದಿದ ಇವರು, ಸರ್ಕಾರದ ಯೋಜನೆಯಡಿ ಬಯೋಗ್ಯಾಸ್ ನಿರ್ಮಾಣ ಮಾಡಿಕೊಂಡಿದ್ದಾರೆ.ಈ ಮೊದಲು ನೆರೆ ಜಿಲ್ಲೆಯ ಸಂಬಂಧಿಕರ ತೋಟದಲ್ಲಿರುವ ಬಯೋಗ್ಯಾಸ್…

Read More

ವಿಜಯಪುರ ಜಿಲ್ಲೆಯಲ್ಲಿ ಎರಡು ಹಂತದ ಜನಗಣತಿಗೆ ಬ್ಲಾಕ್ ರಚನೆ ಜಿಲ್ಲೆ, ತಾಲೂಕು, ಪಾಲಿಕೆ ಮಟ್ಟದಲ್ಲಿ ಅಧಿಕಾರಿಗಳ ನೇಮಕ | ನಮ್ಮ ಜನಗಣತಿ, ನಮ್ಮ ಭವಿಷ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯ ವಾಕ್ಯದಡಿ ಭಾರತ ಜನಗಣತಿ-೨೦೨೭ರ ಮೊದಲ ಹಂತದ ಜನಗಣತಿಯನ್ನು ಏಪ್ರಿಲ್ ನಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಮೊದಲ ಹಂತ -೧ ಮನೆಪಟ್ಟಿ ಮತ್ತು ಮನೆ ಗಣತಿ (ಎಚ್‌ಎಲ್‌ಒ) ಏಪ್ರಿಲ್ ೧ರಿಂದ ೧೫ರವರೆಗೆ ಇದೇ ಮೊದಲ ಬಾರಿಗೆ ಸ್ವಯಂ ಗಣತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸ್ವಯಂ ಗಣತಿ ಐಚ್ಛಿಕವಾಗಿರುತ್ತದೆ. ಕುಟುಂಬಗಳು ಮಾತ್ರ ಸ್ವಯಂ ಗಣತಿ ಮಾಡಬಹುದಾಗಿದೆ ಎಂದವರು ತಿಳಿಸಿದ್ದಾರೆ.ಈ ಹಂತದಲ್ಲಿ ನಿಮ್ಮ ಮೊಬೈಲ್ ಮತ್ತು ಡೆಸ್ಕ್ ಟಾಪ್ ಮೂಲಕ ಲಾಗಿನ್ ಆಗಬೇಕು. ಲಾಗಿನ್ ನಲ್ಲಿ ಕಾಣಿಸುವ ೩೩ ಸರಳ ಪ್ರಶ್ನೆಗಳಿಗೆ ಸರಿಯಾದ ಮಾಹಿತಿಯನ್ನು ಅಪ್ ಡೇಟ್ ಮಾಡಿದ ನಂತರ ಎಸ್‌ಇ ಐಡಿ ಸೃಜನೆಯಾಗುತ್ತಿದ್ದಂತೆಯೇ ಅದನ್ನು ಸೇವ್…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಆವರಣಗೋಡೆ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಬಣ) ಯ ಪದಾಧಿಕಾರಿಗಳು, ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಿದರು.ಈ ಸಂದರ್ಭದಲ್ಲಿ ಡಿಎಸ್ಎಸ್ ಜಿಲ್ಲಾ ಸಂಚಾಲಕ ಅರವಿಂದ ಸಾಲವಾಡಗಿ ಮಾತನಾಡಿ, ಪಟ್ಟಣದ ಇಂಗಳೇಶ್ವರ ರಸ್ತೆಯಲ್ಲಿ ಪುರಸಭೆಯಿಂದ ವಾಜಪೇಯಿ ನಗರ ವಸತಿ ಯೋಜನೆಯಲ್ಲಿ ಜಿ ಪ್ಲಸ್ ಮಾದರಿಯಲ್ಲಿ ನಿರ್ಮಾಣ ಮಾಡಿರುವ ಮನೆಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿವೆ. ಈ ಮನೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಿದ ನಂತರ ಈ ಯೋಜನೆಯ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಬೇಕು. ಪುರಸಭೆಯಿಂದ ಮನೆ ಹಂಚಿಕೆಯಲ್ಲಿ ಸರ್ಕಾರದ ಮೀಸಲಾತಿ ನಿಯಮ ಸರಿಯಾಗಿ ಮಾಡದೇ ಹಂಚಿಕೆ ಮಾಡಲಾಗಿದೆ. ಸರ್ಕಾರದ ನಿಯಮದ ಪ್ರಕಾರ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿ ವಾಸವಾಗಿರಬೇಕು. ಯಾವುದೇ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿ ವಾಸವಾಗಿರುವದಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ಸಕಾಲದಲ್ಲಿ ಅಧಿಕಾರಿಗಳು ಸಿಗುವುದಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದ ಅವರು, ತಾಲೂಕಿನ 15 ಗ್ರಾಮ ಪಂಚಾಯಿತಿಗಳ್ಲಿ ವರ್ಗ…

Read More

lವಿಜಯಪುರದಲ್ಲಿ ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತದಲ್ಲಿ ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಜಾರಿಗೆ ತಂದಿರುವ ಅoಟಿsumeಡಿ Pಡಿoಣeಛಿಣioಟಿ ಂಛಿಣ,೨೦೧೯ ಮಹತ್ವದ ಕಾಯ್ದೆಯಾಗಿದ್ದು, ಗ್ರಾಹಕರಿಗೆ ನ್ಯಾಯಸಮ್ಮತ ಸೇವೆ ಮತ್ತು ಸುರಕ್ಷಿತ ಉತ್ಪನ್ನಗಳನ್ನು ಒದಗಿಸುವುದನ್ನು ಖಚಿತಪಡಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ, ಕೆಎಫ್ ಸಿಎಸ್ಸಿ ನಿಗಮ ವಿಜಯಪುರ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಈ ಕಾಯ್ದೆಯಡಿ ಗ್ರಾಹಕರಿಗೆ ಮುಖ್ಯವಾಗಿ ಸುರಕ್ಷತಾ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆ ಮಾಡುವ…

Read More