Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ಪಟ್ಟಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಐಟಿಐ ಯಲ್ಲಿ ೨೦೨೬-೨೭ನೇ ಸಾಲಿನ ಪ್ರವೇಶಾವಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎರಡು ವರ್ಷದ ಎಲೆಕ್ಟ್ರಿಷಿಯನ್, ಫಿಟ್ಟರ್, ವೃತ್ತಿಗಳಲ್ಲಿ ಪ್ರವೇಶ ಪಡೆಯಲು ಏ.೨೭ ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ೦೮-೦೪-೨೦೨೬ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಟಾಟಾ ಯೋಜನೆ ಅಡಿಯಲ್ಲಿ ಮೆಕ್ಯಾನಿಕ್ ಎಲೆಕ್ಟ್ರಿಕ್ ವಾಹನ, ಇಂಡಸ್ಟ್ರಿಯಲ್ ರೊಬೋಟಿಕ್ ಡಿಸೈನಿಂಗ್ ಅಂಡ್ ಮ್ಯಾನುಫ್ಯಾಕ್ಚರಿಂಗ್, ಸಿಎನ್ಸಿ ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್, ಆಟೋನಾಮಸ್, ವರ್ಚುವಲ್ ಅನಾಲಿಸಿಸ್ ಅಂಡ್ ಡಿಸೈನರ್ ಹಾಗೂ ಎಂಜಿನಿಯರಿAಗ್ ಡಿಸೈನ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು ೦೬ ವೃತ್ತಿಗಳಲ್ಲೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳುwww.emptrg.kar.nic.in ºÁUÀÆ www.detkarnataka.org.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪೋ ಸಂಖ್ಯೆ: ೯೪೪೯೫೦೧೬೬೩, ೯೭೩೯೯೮೫೪೨೨, ೯೮೮೬೨೪೭೭೧೮, ೯೯೦೨೧೦೯೭೫೦. ಮೂಲಕ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗರಿಕಾ ತರಬೇತಿ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಕೊಡುಗೆ ಅವಶ್ಯಕ. ಆ ನಿಟ್ಟಿನಲ್ಲಿ ಇಂತಹ ಎನ್ ಎಸ್ ಎಸ್ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ನಿವೃತ್ತ ಪ್ರಾಚಾರ್ಯೆ ಡಾ. ಆರ್.ಎಂ. ಮಿರ್ಧೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೭ ರಂದು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ನಿಸ್ವಾರ್ಥ ಸೇವೆ ಮನೋಭಾವ ಅದು ಎನ್ ಎಸ್ ಎಸ್, ಇಂತಹ ಶಿಬಿರದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ನಿಮ್ಮ ವ್ಯಕ್ತಿತ್ವ,ಸ್ವಯಂ ಸೇವಾ ಮನೋಭಾವ ವಿಕಸನ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.ಈ ವೇಳೆ ಅರಕೇರಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಜಿ. ಮುಲ್ಲಾ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಿಂದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪ ಕಾಲುವೆಯ ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂದು ಈ ಭಾಗದ ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.ಗ್ರಾಮದಿಂದ ಜಗದಾಳ, ಕುಳಲಿ ಮಾರ್ಗದ ಈ ರಸ್ತೆಯು ೨೦೨೦-೨೧ ನೇ ಸಾಲಿನ ಅಪೆಂಡಿಕ್ಸ -ಇ ಯೋಜನೆಯಡಿಯಲ್ಲಿ ಸುಮಾರು ೬ ಕೋಟಿ ರೂ.ಗಳ ವೆಚ್ಚದಲ್ಲಿ ದ್ವಿಪಥ ಮಾರ್ಗವಾಗಿ ಕಳೆದ ಎರಡು ವರ್ಷಗಳ ಹಿಂದೆ ಅಭಿವೃದ್ದಿ ಪಡಿಸಲಾಗಿದ್ದು, ಈ ರಸ್ತೆಯನ್ನು ಎತ್ತರಿಸಿದ ಕಾರಣ ಸೇತುವೆಯ ತಡೆಗೋಡೆ ಸಂಪೂರ್ಣವಾಗಿ ಮುಚ್ಚಿಕೊಂಡಿದ್ದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ. ಜನ ಜಾನುವಾರುಗಳು ಕಾಲುವೆಗೆ ಬೀಳುವ ಅಪಾಯ ಹೆಚ್ಚಿದ್ದು, ಪ್ರತಿದಿನ ಶಾಲಾ ವಾಹನಗಳು ಹಾಗೂ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಈ ಭಾಗದ ರೈತರು ತಮ್ಮ ಹೊಲ ಗದ್ದೆಗಳಿಗೆ ತೆರಳುವ ಏಕೈಕ ಮಾರ್ಗ ಇದಾಗಿದ್ದರಿಂದ ರಾತ್ರಿವೇಳೆ ಸಂಚರಿಸುವಾಗ ಸೇತುವೆ ಕಾಣದೆ ವಾಹನಗಳು ಕಾಲುವೆಗೆ ಬೀಳುವ ಅಪಾಯವಿದ್ದು, ಅನಾಹುತ ಸಂಭವಿಸುವ ಮುನ್ನ ಈ ಸೇತುವೆಗೆ ತಡೆಗೋಡೆ ನಿರ್ಮಿಸಿ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ತಾಲೂಕಾ ಪಂಚಾಯತಿ ಮಾಜಿ ಉಪಾಧ್ಯಕ್ಷ, ಗ್ರಾಮದ ಪ್ರಭು ಮುಧೋಳ ಅವರನ್ನು ಬಾಗಲಕೋಟ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ (ಓಬಿಸಿ ಮೋರ್ಚಾ) ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದು ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ದುರಂತ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಭೇಟಿ | ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ | ಹಿರಿಯ ಅಧಿಕಾರಿಗಳಿಗೆ ಶಾಕ್? ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ತೀವ್ರ ಗಾಳಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಅಮಾಯಕರು ಬಲಿಯಾದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತವು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ.ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ (Suo Motu Case) ಪ್ರಕರಣ ದಾಖಲಿಸುವುದಾಗಿ ಘೋಷಿಸಿದ್ದಾರೆ.ಗುರುವಾರ ಕಂಪೌಂಡ್ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಕಾಂಪೌಂಡ್ನ ಅಡಿಪಾಯ ಅತ್ಯಂತ ದುರ್ಬಲವಾಗಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ. ನಗರದಲ್ಲಿ ಪ್ರತಿ ವರ್ಷ ಮಳೆ ಬರುತ್ತದೆ ಎಂಬುದು ಗೊತ್ತಿದ್ದರೂ, ಇಂತಹ ದುರ್ಬಲ ಗೋಡೆಗಳ ಪಕ್ಕದಲ್ಲಿ ಬೀದಿ…
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಜಿಲ್ಲಾಡಳಿತ | ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ | ಆಮ್ ಆದ್ಮಿ ಪಾರ್ಟಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಾಂಧಿ ಚೌಕ್ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೇ 3 ರಂದು ನಡೆಯಲಿರುವ ನೀಟ್ (NEET) ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ ವ್ಯಕ್ತಪಡಿಸಿದರು.ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಫ್ಯಾನ್ಗಳ ವ್ಯವಸ್ಥೆ ಇಲ್ಲದಿರುವುದು, ನಿರಂತರ ವಿದ್ಯುತ್ ಪೂರೈಕೆಯ ಕೊರತೆ ಇರುವುದು ಮತ್ತು ಬೇಸಿಗೆಯ ತೀವ್ರ ಬಿಸಿಲಿನಲ್ಲಿ (40–42 ಡಿಗ್ರಿ ಸೆಲ್ಸಿಯಸ್) ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಪರೀಕ್ಷಾ ಕೊಠಡಿಗಳಲ್ಲಿ ಫ್ಯಾನ್ ಇದ್ರೆ ವಿದ್ಯುತ್ ಇಲ್ಲ, ವಿದ್ಯುತ್ ಇದ್ರೆ ಫ್ಯಾನ್ ಇಲ್ಲ.. ಕೆಲವೊಂದು ಕೊಠಡಿಗಳಲ್ಲಿ ವಿದ್ಯುತ್ ಹಾಗೂ ಫ್ಯಾನ್ ಪಾಯಿಂಟ್ ಗಳೇ ಇಲ್ಲ.ಇದರಿಂದ ವಿದ್ಯಾರ್ಥಿಗಳ ಆರೋಗ್ಯಕ್ಕೆ ಧಕ್ಕೆ ಉಂಟಾಗುವ…
ವಿಜಯಪುರದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ ಇಲಾಖೆಗಳು ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸೂಕ್ತ ಗುರುತು ಫಲಕ, ಅಗತ್ಯವಿದ್ದಲ್ಲಿ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳು ನಡೆಯದಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.ಜಿಲ್ಲೆಯಲ್ಲಿರುವ ಅಪಘಾತ ವಲಯಗಳಲ್ಲಿ ಅಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಪರಿಶೀಲಿಸಿ, ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಂಬೇಡ್ಕರರವರು ನಮ್ಮ ದೇಶದ ಸಂವಿಧಾನವನ್ನು ಕೇವಲ ಪೆನ್ನಿನಿಂದ ಬರೆದಿದ್ದಲ್ಲ. ಬದಲಾಗಿ ಅವರ ದೇಹದ ರಕ್ತದ ಕಣಕಣದಿಂದ ಬರೆದದ್ದು ಎಂದು ದಲಿತ ಸಾಹಿತಿ ಶಿವಪುತ್ರ ಅಜಮನಿ ಅಭಿಪ್ರಾಯ ಪಟ್ಟರು.ತಾಲೂಕಿನ ದೇವೂರ ಗ್ರಾಮದಲ್ಲಿ ನಡೆದ ಡಾ. ಬಾಬಾಸಾಹೇಬ ಅಂಬೇಡ್ಕರರ ೧೩೫ ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಈ ದೇಶದ ಶೋಷಿತರಿಗೆ, ನಿರ್ಗತಿಕರಿಗೆ, ದೀನದಲಿತರಿಗೆ, ಸಾಮಾಜಿಕ ನ್ಯಾಯವನ್ನು ಕೊಡಿಸಲು ದೇಶದಲ್ಲಿ ಸರಿ ಸಮಾನತೆ ತರಲು ತಮ್ಮ ನಾಲ್ಕು ಮಕ್ಕಳನ್ನು ಬಲಿ ಕೊಟ್ಟು, ತಮ್ಮ ಮಡದಿಯನ್ನು ಬಲಿ ಕೊಟ್ಟು, ತಮ್ಮ ಹದಗೆಟ್ಟ ಆರೋಗ್ಯವನ್ನೂ ಲೆಕ್ಕಿಸದೆ ಈ ದೇಶಕ್ಕೆ ಬಹು ದೊಡ್ಡ ತ್ಯಾಗವನ್ನು ಮಾಡಿದ್ದಾರೆ. ಭಾರತೀಯರು ಅವರ ತ್ಯಾಗವನ್ನು ಯಾವ ಕಾಲಕ್ಕೂ ಮರೆಯಬಾರದು ಎಂದರು.ನಿವೃತ್ತ ಉಪನ್ಯಾಸಕ ಪಿ.ಎಚ್.ಉಪ್ಪಲದಿನ್ನಿ, ಕಂದಾಯ ನಿರೀಕ್ಷಕ ವೆಂಕಟೇಶ ಅಂಬಿಗೇರ, ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ, ಡಿ.ಕೆ.ದ್ಯಾವಪ್ಪ ಮತ್ತೀತರರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸಿದರು.ಈ ವೇಳೆ ಮುಖಂಡರಾದ ಸಿದ್ಧಾರ್ಥ ರೂಗಿ, ಪ್ರವೀಣ ಕಟ್ಟಿಮನಿ, ಮುತ್ತಣ್ಣ ಕಟ್ಟಿಮನಿ, ಬಸಂತ ಕಟ್ಟಿಮನಿ,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಇತ್ತಿಚೆಗೆ ನೇಪಾಳದಲ್ಲಿ ಯುಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಸಹಯೋಗದಲ್ಲಿ ಯುಥ್ ಗೇಮ್ಸ್ ಫೌಂಡೇಷನ್ ಹಮ್ಮಿಕೊಂಡಿದ್ದ ೮ನೇ ಸಾಲಿನ್ ಯುಥ್ ಗೇಮ್ಸ್ ಇಂಡೋ-ನೇಪಾಳ ಇಂಟರನ್ಯಾಷನಲ್ ಸೀರೀಸ್-೨೦೨೬ ಕ್ರೀಡಾಕೂಟದಲ್ಲಿ ಪಟ್ಟಣದ ಬಸವ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಮೊಹ್ಮದ್ ಜೀಶಾನ್ ರಿಸಾಲ್ದಾರ್ ಅಂಡರ್ ೧೦ ವಿಭಾಗದಲ್ಲಿ ೧೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಈಗ ಮಲೇಷ್ಯಾದಲ್ಲಿ ನಡೆಯುವ ಸೌಥ್ ಏಷಿಯನ್ ಯುಥ್ ಗೇಮ್ಸ್ ಇಂಟರ್ ನ್ಯಾಷನಲ್ ಚಾಂಪಿಯನ್ಶಿಪ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.ಆರಂಭಮಟ್ಟದಿಂದಲೇ ಅಥ್ಲೇಟಿಕ್ಸ್ ವಿಭಾದಲ್ಲಿ ಕ್ರೀಡಾ ಸಾಧನೆಗೈಯುತ್ತಿರುವ ಜೀಶಾನ ರಿಸಾಲ್ದಾರ್ ಮೊನ್ನೆಯಷ್ಟೆ ಗೋವಾದಲ್ಲಿ ಹಮ್ಮಿಕೊಂಡಿದ್ದ ಯುಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಕ್ರೀಡಾ ಕೂಟದಲ್ಲಿ ಕರ್ನಾಟಕ ಪರವಾಗಿ ಭಾಗವಹಿಸಿ ೧೦೦ ಮೀಟರ್ದಲ್ಲಿ ಗೋಲ್ಡ್ ಮೇಡಲ್ ಪಡೆದು ರಾಜ್ಯದ ಹೆಸರನ್ನು ತಂದಿದ್ದ. ಸಧ್ಯ ಇಂಡೋ ನೇಪಾಳ ಇಂಟರ್ ನ್ಯಾಷನಲ್ ಸೀರೀಸ್ ನಲ್ಲಿ ಮತ್ತೆ ೧೦೦ ಮೀಟರ್ ಓಟವನ್ನು ೧೪:೫೬ ಸೆಕೆಂಟ್ನಲ್ಲಿ ಪೂರ್ಣಗೊಳಿಸಿ ಪ್ರಥಮ ಸ್ಥಾನವನ್ನು ಪಡೆದು ದೇಶದ ಕೀರ್ತೀಯನ್ನು ಹೆಚ್ಚಿಸಿದ್ದಾನೆ.ತಾಲೂಕಿನ ಸರೂರ ಗ್ರಾಮದ…
