Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರವಚನ ಎಂದರೆ ಶ್ರೇಷ್ಠವಾದ ಮಾತು. ಬದುಕನ್ನು ಶ್ರೇಷ್ಠತೆಯತ್ತ ಕರೆದೊಯ್ಯುವ ಮಾತುಗಳಿಗೆ ಪ್ರವಚನ ಎನ್ನುತ್ತಾರೆ. ಪ್ರವಚನಕ್ಕೆ ಸಾವಿರಾರು ವರ್ಷಗಳ ಪರಂಪರೆಯಿದೆ. ಒಂದು ಪ್ರವಚನ ನೂರು ಪೊಲೀಸ್ ಠಾಣೆಗೆ ಸಮಾನ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ರಾಜಯೋಗಿಂದ್ರ ಮಹಾಸ್ವಾಮಿಗಳು ಹೇಳಿದರು.ಜಮಖಂಡಿ ನಗರದ ಐತಿಹಾಸಿಕ ಓಲೇಮಠದ ಆಶ್ರಯದಲ್ಲಿ ಬಸವ ಜಯಂತಿ ನಿಮಿತ್ತ ಏ.15 ರಿಂದ ಏ.29 ರವರೆಗೆ ಹಮ್ಮಿಕೊಂಡಿರುವ ಶರಣರ ವಚನ ಪ್ರವಚನ ಮತ್ತು ಸದ್ಭಾವನಾ ಪಾದಯಾತ್ರೆ ಅಂಗವಾಗಿ ಹನ್ನೊಂದನೆ ದಿನವಾದ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಕಿವಿಗಳು ಒಳ್ಳೆಯದನ್ನು ಕೇಳುವಂತಾಗಲಿ, ಅನುಭಾವದ ನುಡಿ ಕಿವಿಗಳಿಗೆ ಬೀಳುವ ಶಬ್ದಕ್ಕೆ ಸೂತಕವಿಲ್ಲ. ಒಳ್ಳೆಯ ಮಾತು, ಶಬ್ದ ಸೂತಕವಿಲ್ಲದ್ದು. ನೈತಿಕವಾಗಿ ಉನ್ನತ ಮಟ್ಟಕ್ಕೆ ಒಯ್ಯುವ ಶಕ್ತಿ ಪ್ರವಚನಕ್ಕಿದೆ. ಪ್ರವಚನದಿಂದ ಮನಸ್ಸು ಸಾತ್ವಿಕವಾಗುತ್ತದೆ, ಭಾವನೆ ಶುದ್ಧಗೊಳ್ಳುತ್ತದೆ. ಪ್ರವಚನ ಕೇಳಿ ಸುಳ್ಳರು ಸುಳ್ಳು ಹೇಳುವುದನ್ನು ಹಾಗೂ ಕಳ್ಳರು ಕಳ್ಳತನ ಮಾಡುವುದನ್ನು ಬಿಟ್ಟಿದ್ದಾರೆ ಎಂದು ಆಶೀರ್ವಚನ ನೀಡಿದರು.ಪ್ರವಚನದಿಂದ ಏಕಾಗ್ರತೆ ಸಂಪಾದಿಸಬಹುದು. ಪ್ರವಚನ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ದೇಶದ ಶ್ರೀಮಂತ ಸಂಸ್ಕೃತಿಯ ಪ್ರತೀಕವಾದ ಪ್ರಾಚೀನ ಕಾಲದ ಜಾನಪದ ಕಲೆ ಸಾಹಿತ್ಯ ಪರಂಪರೆ ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು ಎಂದು ಯುವ ನಾಯಕ ಆದಿತ್ಯ ಪೋಲೀಸ್ ಪಾಟೀಲ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ -2025, ಉದ್ಘಾಟಿಸಿ ಮಾತನಾಡಿದ ಅವರು ಭಾವೈಕ್ಯತೆಯ ಭಾರತದಲ್ಲಿ ಉಡುಗೆ ತೊಡುಗೆ ಆಹಾರ ಪದ್ಧತಿ ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿದ್ದು, ನಾವೆಲ್ಲರೂ ದೇಶಿಯ ಸಂಸ್ಕೃತಿಯನ್ನು ಎತ್ತಿ ಹಿಡಿಯೋಣ, ಜಾನಪದ ಉತ್ಸವ ನಿತ್ಯ ನಿರಂತರ ಮೂಡಿಬರಲಿ ಎಂದವರು, ಯುವಕ ಯುವತಿಯರು ಆಧುನಿಕ ಭರಾಟೆಯಲ್ಲಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದವರು.ಮುಖ್ಯ ಅತಿಥಿಗಳಾದ ಸಂಜೀವರಾವ್ ಕುಲ್ಕರ್ಣಿ ಹಾಗೂ ಸಾಹೇಬಲಾಲ್ ಆಂದೇಲಿ ಮಾತನಾಡಿ ನಶಿಸುತ್ತಿರುವ ಗ್ರಾಮೀಣ ಪ್ರದೇಶದ ಕಲೆ ಸಂಸ್ಕೃತಿ ಕಟ್ಟಿ ಕೊಡವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದರು.ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜಕಿ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಬಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಬತ್ತಿ ಹೋಗಿದ್ದ ಲಕ್ಷಾಂತರ ಬೋರವೆಲ್ ಗಳು ಪುನಶ್ಚೇತನಗೊಂಡಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದ ಶ್ರೀ ಚಂದ್ರಗಿರಿ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು.ಜಲಸಂಪನ್ಮೂಲ ಸಚಿವನಾಗಿ ಭವಿಷ್ಯದ ದೃಷ್ಟಿಯಿಂದ ಕೈಗೊಂಡ ಯೋಜನೆಗಳು ಫಲ ನೀಡಿದ್ದು, ಅಂತರ್ಜಲ ಹೆಚ್ಚಾಗಿದೆ. ಇದರಿಂದ ಸಂಕಷ್ಟದಲ್ಲಿದ್ದ ರೈತರ ಬಾಳು ಹಸನಾಗಿದ್ದು, ರೈತರು ಉತ್ತಮ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈಗ ಕೆರೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಲಾಗುತ್ತಿದ್ದು, ರಾತ್ರಿ ವೇಳೆ ಹೆಬ್ಬಾಳಟ್ಟಿ ಗ್ರಾಮಕ್ಕೆ ನೀರು ತಲುಪಲಿದೆ. 5ಎ ಮತ್ತು 5ಬಿ ಲಿಫ್ಟ್ ಹಾಗೂ 15 ನೇ ಡಿಸ್ಟ್ರೀಬ್ಯೂಟರಿ ಕಾಲುವೆ ನಿರ್ಮಿಸುವ ಮೂಲಕ ಈ ಭಾಗದಲ್ಲಿ ಬಾಕಿ ಉಳಿದ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಇದರಿಂದ ಹೆಬ್ಬಾಳಟ್ಟಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಡವರ ಬಾಳಿನ ಆಶಾಕಿರಣ ಆರ್ಥಿಕ ಪ್ರಗತಿಯ ಒಂದು ಕನಸಿನ ಯೋಜನೆ ಪಂಚ ಗ್ಯಾರಂಟಿ ಯೋಜನೆ ಜನರ ಮನೆ ಮನೆ ಬಾಗಿಲಿಗೆ ತಲುಪುವಂತಾಗಿದ್ದು ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸಮಾಡುವಂತಾಗಿದೆ ಎಂದು ಕೊಲ್ಹಾರ ತಾಲೂಕು ಪಂಚ ಗ್ಯಾರಂಟಿ ಯೋಜನಾ ಸಮೀತಿಯ ಅಧ್ಯಕ್ಷ ಸಂತೋಷ ಗಣಾಚಾರಿ ಹೇಳಿದರು.ತಾಲೂಕಿನ ಮುಳವಾಡ ಗ್ರಾಮದಲ್ಲಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ತಾಲೂಕಾ ಮಟ್ಟದ ಪಂಚ ಗ್ಯಾರಂಟಿ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಸ್ತ್ರೀ ಶಕ್ತಿ ಯೋಜನೆಯ ಅಡಿ ತಾಲೂಕಿನಲ್ಲಿ ೨೬೮೯೫೫೬ ಮಹಿಳೆಯರು ಬಸ್‌ನಲ್ಲಿ ಪ್ರಯಾಣ ಮಾಡಿದ್ದರಿಂದ ಆದಾಯ ದ್ವಿಗುಣವಾಗಿದೆ, ಗೃಹ ಲಕ್ಷ್ಮಿ ಯೋಜನೆಯ ಅಡಿ ತಾಲೂಕಿನಲ್ಲಿ ೨೦೦೩೬ ಅರ್ಜಿದಾರರು ಇದ್ದು ೧೯೬೮೨ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಂಡಿದ್ದು ೨೯೦ ಜನ ಬಾಕಿ ಉಳಿದಿದ್ದಾರೆ ಎಂದರು.ಗೃಹ ಜ್ಯೋತಿ ಯೋಜನೆಯ ಅಡಿ ೧೭೯೧ ಫಲಾನುಭವಿಗಳು ಅರ್ಜಿ ಹಾಕಿದ್ದು ೧೭೦೨ ಫಲಾನುಭವಿಗಳಿಗೆ ಅವಕಾಶ ಲಭಿಸಿದ್ದು ಬಾಕಿ ೮೧ ಕುಟುಂಬಗಳು ಉಳಿದುಕೊಂಡಿವೆ. ಯುವನಿಧಿ ಯೋಜನೆಯ ಅಡಿ ತಾಲೂಕಿನಲ್ಲಿ ೪೦೯ ಅರ್ಜಿದಾರರಿದ್ದು ೨೧೯ ಜನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಮೂಲಭೂತ ಸೌಕರ್ಯ ಯೋಜನೆಯಡಿ ನಗರ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ತಾಂಡಾಗಳಲ್ಲಿ ಹೈಮಾಸ್ಕ ದೀಪಗಳನ್ನು ಅಳವಡಿಸುವ ಕಾಮಗಾರಿ ಕೈಗೊಳ್ಳಲು ರೂ.೪೯.೯೦ ಲಕ್ಷ ಅನುದಾನ ಮಂಜೂರಿಸಲಾಗಿದೆ.ಕಳೆದ ಚಳಿಗಾಲ ಅಧಿವೇಶನದ ವೇಳೆ (೨೦೨೫ ಮಾರ್ಚ ೧೮ ರಂದು) ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಪತ್ರ ಬರೆದು, ಈ ಕೆಳಕಂಡ ತಾಂಡಾಗಳಲ್ಲಿ ಹೈಮಾಸ್ಕ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲು ಕೋರಿದ್ದರು. ಅದಕ್ಕೆ ಸ್ಪಂದಿಸಿ, ಇದೀಗ ಮಂಜೂರಾತಿ ನೀಡಲಾಗಿದೆ. ಆದಷ್ಟು ಶೀಘ್ರವಾಗಿ ಪಂಚಾಯತ್ ರಾಜ್ ಎಂಜನಿಯರಿಂಗ್ ವಿಭಾಗ ವಿಜಯಪುರ ಮೂಲಕ ಕಾಮಗಾರಿ ಕೈಗೊಳ್ಳಲಾಗುವುದು.ತೊರವಿ ತಾಂಡಾ ನಂ.೧, ೨, ೩, ಕೌಜಲಗಿ ತಾಂಡಾ, ಬಾರಾಕೊಟ್ರಿ ತಾಂಡಾ, ಭೂತನಾಳ ತಾಂಡಾ (ಪೂರ್ವ), ಭೂತನಾಳ ತಾಂಡಾ (ಪಶ್ಚಿಮ), ಸೇವಾಲಾಲ್ ನಗರ ತಾಂಡಾ, ಖಂಡಕಾರಿ ತಾಂಡಾ ಹಾಗೂ ಬೇಗಮ್ ತಲಾಬ್ ತಾಂಡಾ (ದೊಡ್ಡಿ) ದಲ್ಲಿ ತಲಾ ರೂ.೪.೯೯ ಲಕ್ಷದಂತೆ ಒಟ್ಟು ರೂ.೪೯.೯೦ ಲಕ್ಷ ಮೊತ್ತದಲ್ಲಿ ೧೦…

Read More

1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ | 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧಾರ | ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದ ಮುಖ್ಯಮಂತ್ರಿ, ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದರು.ಕೃಷಿ ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರು ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವವರು ಎಂಬ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ. ಸದಾ ಇಷ್ಟೇ ಪಾರದರ್ಶಕ ನೇಮಕಾತಿ ನಡೆದರೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಇವತ್ತಿನ ಸಾಮಾಜಿಕ ಜಾಲತಾಣಗಳು ಹಾಗೂ ಪತ್ರಿಕೆಗಳ ಮೂಲಕ ಎಲ್ಲರಿಗೂ ತಿಳುವಳಿಕೆ ಬಂದಿದೆ ಡಾ|| ಬಿ.ಆರ್.ಅಂಬೇಡ್ಕರ ಅವರು ಮೂಲಭೂತ ಹಕ್ಕುಗಳನ್ನು ದೇಶದ ಜನರಿಗೆ ಕೊಡದೆ ಹೋಗಿದ್ದರೆ ನಾವ್ಯಾರು ಈ ವೇದಿಕೆ ಮೇಲೆ ಇರುತ್ತಿರಲಿಲ್ಲ ಅಸ್ಪೃಶ್ಯತೆ ಎನ್ನುವದು ಸಮಾಜಕ್ಕೆ ಅಂಟಿದ ಶಾಪ ಅದನ್ನು ಕಿತ್ತೊಗೆಯಬೇಕು ಅಂತಹ ತಪ್ಪನ್ನು ಇನ್ನೊಂದು ಬಾರಿ ಸಮಾಜ ಮಾಡಬಾರದು ಎಂದು ತಹಶೀಲ್ದಾರ್ ಎಸ್.ಎಸ್.ನಾಯ್ಕಲಮಠ ಹೇಳಿದರು.ತಾಲೂಕಿನ ಮಸೂತಿ ಗ್ರಾಮದಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ೧೩೪ ನೇ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ದೇಶದ ಜನ ತಮ್ಮ ತಪ್ಪು ಭಾವನೆಗಳಿಂದ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡಿರಲಿಲ್ಲ ಈಗ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲ್ಲಿ ಸತ್ಯ ನಿಷ್ಠ ವರದಿಗಳು ಬರುತ್ತಿರುವದರಿಂದ ಸಂವಿಧಾನದ ಮೂಲ ಆಶಯ ಜನರಿಗೆ ತಿಳಿಯುವಂತಾಗಿದೆ ಎಂದರು.ಕೂಡಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಮಾತನಾಡಿ ಸಮಗ್ರ ತಳ ಸಮುದಾಯಗಳು ತಮ್ಮ ಪಂಚೇAದ್ರಿಯಗಳನ್ನು ಸರಿಯಾದ ನಿಟ್ಟಿನಲ್ಲಿ ಬಳಸಿಕೊಂಡು ಶಿಕ್ಷಣ ಸಂಘಟನೆ ಹೋರಾಟದ ಕಡೆಗೆ ಗಮನಕೊಡಬೇಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ, ಇದರ ಕೇಂದ್ರ ಸಂಘಟಣೆಯ ಜನರಲ್ ಸೆಕ್ರೆಟರಿ ಎಸ್.ಎಸ್.ಮಹಾದೇವಯ್ಯನವರ ಕರೆಯ ಮೇರೆಗೆ ವಿಜಯಪುರ ವಿಭಾಗದ ಗ್ರಾಮೀಣ ಅಂಚೆ ಸೇವಕರು ಏ.೨೯ ರಂದು ಅಂಚೆ ಅಧೀಕ್ಷಕರ ವಿಭಾಗೀಯ ಕಾರ್ಯಾಲಯದ ಮುಂದೆ ಒಂದು ದಿನದ ಧರಣಿ’ ಹಮ್ಮಿಕೊಂಡು ಅಂಚೆ ಅಧೀಕ್ಷಕ ಎಮ್. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಧರಣಿಯಲ್ಲಿ ಅಧ್ಯಕ್ಷತೆ ವಹಿಸಿ ಎಸ್.ವಾಯ್. ಥೋರತ ಮಾತನಾಡಿ ಉಆS ಗೆ ಮಾಸಿಕ ಪಿಂಚಣಿ ಸೌಲಭ್ಯವನ್ನು ಕೊಡಬೇಕು. ಮತ್ತು ಸಿವಿಲ್ ದರ್ಜೆಯ ಸ್ಥಾನ-ಮಾನ ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.ಸಂಘಟನೆಯ ವಿಭಾಗೀಯ ಕಾರ್ಯದರ್ಶಿ ಜಿ.ಎಸ್.ಬೆಳ್ಳುಬ್ಬಿ , ಕಾರ್ಯಧ್ಯಕ್ಷ ಮಹಾಂತೇಶ ಮ. ಇಂಗಳೆ, ಜಿ.ಡಿ.ಎಸ್ ನವರು ಎದುರಿಸುತ್ತಿರುವ ಎಲ್ಲ ರೀತಿಯ ಕಿರುಕುಳಗಳನ್ನು ನಿಲ್ಲಿಸಿ ಅವೈಜ್ಞಾನಿಕ ಗುರಿಗಳನ್ನು ಸ್ಥಗಿತಗೊಳಿಸಬೇಕೆಂದು ಹೇಳಿದರು.ಈ ಧರಣಿಯಲ್ಲಿ ಕಾರ್ಯಧ್ಯಕ್ಷ ಸೋಮಲಿಂಗ ಆರ್, ಉಪಾಧ್ಯಕ್ಷರುಗಳಾದ ಶಾಂತಗೌಡ ಜಹಾಗೀರದಾರ ಬಿರಾದಾರ, ಎಸ್.ಎಮ್.ಹಿರೇಮಠ, ಸಂಘಟನ ಎ.ಎಸ್.ಬಗಲಿ ಅಕ್ಷಯಕುಮಾರ ಕಾರ್ಯದರ್ಶಿ ಆರ್.ಬಿ.ನಿಂಗನೂರ, ಆರ್.ಎನ್.ತಂಬಾಕೆ, ಕಾರ್ಯಕಾರಿ ಸಮೀತಿ ಸದಸ್ಯರುಗಳಾದ ಜಿ.ಎಸ್.ಪಾಟೀಲ, ನಿಂಗಪ್ಪ ಮಸಬಿನಾಳ, ಐ.ಜಿ.ಹಿರೇಮಠ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ ೧೦೦ನೇ ಸಂಚಿಕೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಬಿಡುಗಡೆ ಮಾಡಿದರು.ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಮ್.ಚಂದ್ರಶೇಖರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕ ಸಂದೀಪ, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಚಿತ್ರದಲ್ಲಿ ಇದ್ದಾರೆ.

Read More

ಎಎಸ್ಪಿ ಭರಮನಿ ಜೊತೆ ಅಸಭ್ಯ ವರ್ತನೆ | ಸಂಯಮ ಕಳೆದುಕೊಂಡ ಸಿಎಂ ನಡೆ ಖಂಡಿಸಿ ರಾಜ್ಯಪಾಲರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠಾಧಿಕಾರಿ ನಾರಾಯಣ ಭರಮನಿಯರ ಅವರ ಜೊತ ಅಸಭ್ಯ ವರ್ತನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾ ಯುವ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಯುವ ಪರಿಷತ್, ಅಧ್ಯಕ್ಷರಾದ ಶರಣು ಸಬರದ ಅವರು ಮಾತನಾಡಿ, ಅತ್ಯಂತ ಗೌರವಾನ್ವಿತ ಪೋಲೀಸು ನೌಕರಿ ಮಾಡುತ್ತಿರುವ ಹಿರಿಯ ಪೋಲೀಸು ಅಧಿಕಾರಿ, ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠಾಧಿಕಾರಿಗಳಾದ ನಾರಾಯಣ ಭರಮನಿಯರ ಜೊತೆಗೆ ತುಂಬಿದ ಕಾಂಗ್ರೆಸ್ಸು ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದುಕೊಂಡ ರೀತಿ ಇಡೀ ನಾಗರಿಕ ಸಮಾಜ ತೆಲೆತಗ್ಗಿಸುವಂತಾಗಿದೆ.ಬೆಳಗಾವಿಯ ಘಟನೆಯಿಂದ ಭರಮನಿ ಅಂತಹ ಅಧಿಕಾರಿಗಳಿಗೆ ಆಗುವ ಮಾನಸಿಕ ಹಿಂಸೆ ಅಷ್ಟಿಷ್ಟಲ್ಲ. ರಾಜಕಾರಣಿಗಳನ್ನು ತಮ್ಮ ಮನೆಯ ಹೆಂಡತಿ, ಮಕ್ಕಳು ಹಾಗೂ ಪಾಲಕರನ್ನು ಬಿಟ್ಟು ಹೊತ್ತಿಲ್ಲದ ಹೊತ್ತಿನಲ್ಲಿ ಒಬ್ಬ ಪೋಲೀಸು ಆಧಿಕಾರಿ…

Read More