Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಕಟ್ಟೆಯ ಮೇಲೆ ಕುಳಿತು ಇನ್ನೊಬ್ಬರ ಕುರಿತು ಮಾತನಾಡುತ್ತ ನಮ್ಮ ಘನತೆ, ಗೌರವಗಳನ್ನು ನಾವೇ ಹಾಳು ಮಾಡಿಕೊಳ್ಳುವುದಕ್ಕಿಂತ ದೇವರು ಮಹಾಪುರುಷರ ಕುರಿತ ಚರ್ಚೆಮಾಡಿದಲ್ಲಿ ಮನಸ್ಸಿಗೆ ನೆಮ್ಮದಿ ದೊರಕುತ್ತದೆ ಎಂದು ಬಂಡಿಗಣಿ ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಶ್ರೀ ಹೇಳಿದರು.ಗ್ರಾಮದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರಿಗಳ ಸ್ವಾಗತ ಹಾಗೂ ಸತ್ಸಂಗ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಸಾಧು ಸಂತರು, ಮಹಾನ್ ಪುರುಷರ ಕುರಿತ ಚರ್ಚೆಯಿಂದ ಜ್ಞಾನವೃಧ್ದಿಯಾಗುತ್ತದೆ, ದೇಶಪ್ರೇಮ ಬೆಳೆಯುತ್ತದೆ ಹಾಗೂ ಮಕ್ಕಳಿಗೆ ದೇಶದ ಸಂಸ್ಕೃತಿಯನ್ನು ಅರ್ಥೈಸಿಕೊಳ್ಳಲು ಸಹಕಾರಿಯಾಗುತ್ತದೆ. ನಾವು ಯಾರಿಗೂ ಅನ್ಯಾಯ ಮಾಡಬಾರದು ಅಣ್ಯಾಯ ಸಹಿಸಲೂಬಾರದು. ದೇಶದ ವಿಷಯ ಬಂದಾಗ ಒಗ್ಗಟ್ಟಾಗಿರಬೇಕೆಂದರು.ಬಾವಲತ್ತಿಯ ವಿಜಯ ವೇದಾಂಗ ಶ್ರೀ ಮಾತನಾಡಿ, ದೇವರು ಧರ್ಮದದಲ್ಲಿ ಜೊಳ್ಳು ಪೊಳ್ಳು ಹೋಗಿ ಗಟ್ಟಿ ಕಾಳುಗಳು ಮಾತ್ರ ಉಳಿಯಲಿವೆ. ಶರಣ ಮಹಾತ್ಮರು ನಿಜ ಭಕ್ತರಲ್ಲಿ ಯಾವತ್ತೂ ನೆಲೆಸಿರುತ್ತಾರೆಂದರು.ಯೂಥ ಕಾಂಗ್ರೇಸ್ ಅಧ್ಯಕ್ಷ ಪ್ರವೀಣ ಪೂಜಾರಿ ಮಾತನಾಡಿ ಬಂಡಿಗಣಿ ಮಠದ ಇತಿಹಾಸ ಶ್ರೀಗಳ ಸಾರ್ವಜನಿಕ ಸೇವೆಗಳ ಕುರಿತು…

Read More

ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ದತ್ತಾಂಶ ಶೇಖರಣಾ ಸಮೀಕ್ಷೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಕೈಗೊಳ್ಳಲಾಗುವ ಸಮೀಕ್ಷೆಗೆ ಮತಕ್ಷೇತ್ರ ಹಂತದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶಿಸಿದ್ದಾರೆ.೨೬-ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು, ೨೭-ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು, ೨೮-ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ೨೯-ಬಬಲೇಶ್ವರ ಮತಕ್ಷೇತ್ರಕ್ಕೆ ವಿಜಯಪುರ ಉಪವಿಭಾಗಾಧಿಕಾರಿಗಳು, ೩೦-ವಿಜಯಪುರ ನಗರ ಮತಕ್ಷೇತ್ರಕ್ಕೆ ಮಹಾನಗರ ಪಾಲಿಕೆ ಆಯುಕ್ತರು, ೩೧-ನಾಗಠಾಣ ಮತಕ್ಷೇತ್ರಕ್ಕೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು, ೩೨-ಇಂಡಿ ಮತಕ್ಷೇತ್ರಕ್ಕೆ ಇಂಡಿ ಉಪವಿಭಾಗಾಧಿಕಾರಿಗಳನ್ನು ಹಾಗೂ ೩೩-ಸಿಂದಗಿ ಮತಕ್ಷೇತ್ರಕ್ಕೆ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಹಿಪ್ಪರಗಿ ಜಲಾಶಯದಿಂದ ಹರಿಸಲಾದ ನೀರು ಗ್ರಾಮದ ಶ್ರಮಬಿಂದು ಸಾಗರವರೆಗೆ ಹರಿದು ಬಂದಿದ್ದರಿಂದ ಈ ಭಾಗದ ರೈತರು ಸಂತಸಗೊಂಡಿದ್ದಾರೆ.ಕೃಷ್ಣಾ ನದಿ ತೀರದ ಗ್ರಾಮಗಳ ಜನ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಪ್ಪರಗಿ ಜಲಾಶಯದಿಂದ ನೀರು ಬಿಡುವಂತೆ ಕ.ನೀ.ನಿ. ಅಧೀಕ್ಷಕ ಅಭಿಯಂತರರು ಆದೇಶಿಸಿದ್ದರು. ಸೋಮವಾರ ಸಂಜೆ 0.30 ಟಿಎಂಸಿ ನೀರು ಬಿಡಲಾಗಿತ್ತು. ಈ ನೀರು ಮಂಗಳವಾರ ಬೆಳಗ್ಗೆ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ ತಲುಪಿದ್ದು, ಸುತ್ತಲಿನ ಗ್ರಾಮಸ್ಥರು ಸಂತಸಗೊಂಡಿದ್ದಾರೆ.ಕೇವಲ ಕುಡಿವ ನೀರಿನ ಉದ್ದೇಶಕ್ಕಾಗಿ ನೀರು ಹರಿಸಲಾಗಿದ್ದು, ರೈತರು ಪಂಪ್ ಸೆಟ್ ಮೂಲಕ ಕೃಷಿಗೆ ನೀರು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.ಈ ಕುರಿತು “ಉದಯರಶ್ಮಿ” ವಿಸ್ತೃತ ವಿಶೇಷ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಝಳಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪದವಿ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭವಾಗಿವೆ.ಬಿ.ಎ, ಬಿಕಾಂ ಮತ್ತು ಬಿಎಸ್ಸಿ ಪದವಿ ಕೊರ್ಸುಗಳ ಪ್ರವೇಶಾತಿ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಿ.ಎ ವಿಭಾಗಕ್ಕೆ ೯೪೮೧೮೮೦೪೧೮, ೯೭೪೩೧೫೨೦೨೫, ೮೦೭೦೬೮೫೫೫೫, ೭೨೫೯೫೯೪೯೪೧, ಬಿ.ಕಾಂ ವಿಭಾಗ ಮೊ.ನಂ ೯೯೪೫೪೮೫೪೧೩, ೮೧೦೫೨೬೯೨೮೭ ಹಾಗೂ ಬಿ.ಎಸ್ಸಿ ವಿಭಾಗದ ಮೊ.ನಂ: ೯೦೩೫೦೬೨೬೨೫ಗೆ ಸಂಪರ್ಕಿಸಬಹುದು ಎಂದು ಝಳಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಏಪ್ರಿಲ್ ೩೦ರಂದು ಬಸವ ಜಯಂತಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಏಪ್ರಿಲ್ ೩೦ರ ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುವ ಸಂಭವವಿದ್ದು, ಈ ಸಂದರ್ಭಗಳಲ್ಲಿ ಅಪ್ರಾಪ್ತ ವಯಸ್ಸಿನವರ ವಿವಾಹಗಳು ಜರುಗುವ ಸಾಧ್ಯತೆ ಇರುವುದರಿಂದ, ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-೨೦೧೬ರ ಸೆಕ್ಷನ್ ೧೩(೪)ರಂತೆ ವಿವಾಹಗಳನ್ನು ತಡೆಯುವ ಅಧಿಕಾರವಿರುವುದರಿಂದ ಜಿಲ್ಲಾ, ತಾಲೂಕು, ವಾರ್ಡ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಡೆಯದಂತೆ ನಿಗಾವಹಿಸುವಂತೆ ಅವರು ಸೂಚನೆ ನೀಡಿದ್ದಾರೆ.ಸಾರ್ವಜನಿಕರು ಸಹ ಬಾಲ್ಯವಿವಾಹ ತಡೆಗಟ್ಟಲು ಸಹಕರಿಸಬೇಕು. ಬಾಲ್ಯವಿವಾಹ ನಡೆಯುವ ಮಾಹಿತಿ ದೊರೆತಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಅಥವಾ ೧೧೨ಗೆ ಕರೆ ಮಾಡಿ ದೂರು ನೀಡಿದರೆ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಟ್ಟು ಬಾಲ್ಯ ವಿವಾಹ ತಡೆಗಟ್ಟಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ ಎಂದು ಜಿಲ್ಲಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಏ.೩೦ ಹಾಗೂ ಮೇ.೧ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಏ.೩೦ರಂದು ಮಧ್ಯಾಹ್ನ ೩-೪೫ಕ್ಕೆ ಕಲ್ಬುರ್ಗಿಯಿಂದ ವಿಜಯಪುರಕ್ಕೆ ಆಗಮಿಸಿ, ಸಂಜೆ ೪ ರಿಂದ ೬ ಗಂಟೆಯವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಮೇ.೦೧ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಮಧ್ಯಾಹ್ನ ೨-೩೦ಕ್ಕೆ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸದಂತೆ ಮೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಲಿದ್ದು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ವಿವಿಧ ಕಟ್ಟಡಗಳ ಉದ್ಘಾಟನೆ, ಸೇರಿದಂತೆ ದೀರ್ಘಾವಧಿ ಬಾಕಿ ಪ್ರಸ್ತಾವನೆಗಳ ಮಾಹಿತಿ ಸಲ್ಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಲೋಕೋಪಯೋಗಿ, ಪ್ರವಾಸೋದ್ಯಮ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಡಿ ನಡೆಯುತ್ತಿರುವ ಕಾಮಗಾರಿಗಳು, ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.೨೦೨೪ ಹಾಗೂ ೨೦೨೫ನೇ ಸಾಲಿನ…

Read More

ವಿಜಯಪುರದಲ್ಲಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ರಮೇಶ ಜಿಗಜೀಣಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶೇಷ ಚೇತನರು ಕೂಡ ಸಾಮಾನ್ಯರಂತೆ ಬದುಕುವ ಬಯಕೆಯಿರುತ್ತದೆ ಎಂಬುದನ್ನು ಸಮಾಜದ ಇತರರು ಅರಿತು ಅವರ ಬೆಳವಣಿಗೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷಚೇತನರ ಸಬಲೀಕರಣಕ್ಕಾಗಿ ಉಚಿತವಾಗಿ ಸಾಧನ ಸಲಕರಣೆಯನ್ನು ನೀಡಲಾಗುತ್ತಿದೆ ಎಂದು ಸಂಸದರಾದ ರಮೇಶ ಜಿಗಜೀಣಗಿ ಹೇಳಿದರು.ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ್ ರಂಗ ಮಂದಿರದಲ್ಲಿ ಮಂಗಳವಾರ ಭಾರತ ಸರ್ಕಾರ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ, ಅಲಿಂಕೋ, ಜಿಲ್ಲಾಡಳಿತ, ಜಿಲ್ಲಾಪಂಚಾಯತಗಳ ಸಂಯುಕ್ತಾಶ್ರಯದಲ್ಲಿ ವಿಶೇಷಚೇತನ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಿಸುವ ಭಾರತ ಸರ್ಕಾರದ ಅಡಿಪ್ ಯೋಜನೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶೇಷಚೇತನರಿಗಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು ತಾವುಗಳು ಮಾತ್ರ ಸಮರ್ಪಕವಾಗಿ ಉಪಯೋಗಿಸುವಂತಾಗಬೇಕು ಅಧಿಕಾರಿಗಳು ಕೂಡ ಅರ್ಹತೆ ಹೊಂದಿದವರಿಗೆ ಮಾತ್ರ ಸಾಧನ ಸಲಕರಣಗಳು ದೊರೆಯುವಂತೆ ಕ್ರಮ ವಹಿಸಬೇಕು ಯೋಜನೆಗಳ ಫಲಾನುಭವಿಗಳು ಸಾಧನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉuesಣ ಂssisಣಚಿಟಿಣ ಐibಡಿಚಿಡಿiಚಿಟಿ) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು (ಐibಡಿಚಿಡಿಥಿ ಂssisಣಚಿಟಿಣ) (ತಾತ್ಕಾಲಿಕ) ಹುದ್ದೆಗೆ ಇದೇ ೨೯ ರಂದು ಬೆಳಿಗ್ಗೆ ೧೧:೩೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿತ್ತು, ಕಾರಣಾಂತರದಿಂದ ಸದರಿ ಸಂದರ್ಶನವನ್ನು ಮುಂದೂಡಲಾಗಿತ್ತು, ಸದರಿ ನೇರ ಸಂದರ್ಶವನ್ನು ಇದೇ ಮೇ ದಿ. ೦೨ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More