Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂದು (ಏ.೩೦ ಬುಧವಾರ) ಪ್ರಜಾಪ್ರಭುತ್ವೀಯ ಮೌಲ್ಯಗಳನ್ನು ಹೊಂದಿದ ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ವಿವೇಕಾನಂದ ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ವರ್ಷಕ್ಕೂ ಸ್ವಲ್ಪ ಹೆಚ್ಚು ಕಾಲವಾಯಿತು. ಆ ಘೋಷಣೆಯಿಂದ ಏನಾದರೂ ಬದಲಾವಣೆ ಕರ್ನಾಟಕದ ಜನಮಾನಸದಲ್ಲಿ ಉಂಟಾಗಿದೆಯೇ ಎಂಬುದನ್ನು ವಿಮರ್ಶಿಸಿಕೊಳ್ಳಬೇಕಾದ ಸಮಯ..ಈ ಬಸವ ಜಯಂತಿ ಬಸವಣ್ಣನವರನ್ನು ವಿಜೃಂಭಿಸುವುದು, ಆರಾಧಿಸುವುದು, ಭಕ್ತಿ ಪೂರ್ವಕವಾಗಿ ಪೂಜಿಸುವುದು, ಅತಿಮಾನುಷ ವ್ಯಕ್ತಿಯಂತೆ ಭಾವಿಸುವುದು, ಪವಾಡ ಪುರುಷರಂತೆ ಹರಕೆ ಹೊರುವುದು, ಸಂಘಟನಾತ್ಮಕವಾಗಿ ಒಗ್ಗೂಡಲು ಅವರ ಹೆಸರನ್ನು ಉಪಯೋಗಿಸಿಕೊಳ್ಳುವುದು, ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದು, ಪ್ರತಿಮೆಗಳನ್ನು ಸ್ಥಾಪಿಸುವುದು, ಅಧ್ಯಯನ ಪೀಠಗಳನ್ನು ಸೃಷ್ಟಿ ಮಾಡುವುದು, ದೊಡ್ಡ ದೊಡ್ಡ ಸಂಶೋಧನಾತ್ಮಕ ಪ್ರಬಂಧಗಳನ್ನು ಮಂಡಿಸುವುದು, ರಸ್ತೆ, ವಿಶ್ವವಿದ್ಯಾಲಯ, ಸಾರಿಗೆ ನಿಲ್ದಾಣಗಳು ಮುಂತಾದುವುಗಳಿಗೆ ಹೆಸರಿಡುವುದು ಇವೆಲ್ಲವುಗಳನ್ನು ಹೊರತುಪಡಿಸಿ ಸಮ ಸಮಾಜದ, ಮಾನವೀಯ ಸಮಾಜದ, ನಾಗರೀಕ ಸಮಾಜದ ನಿರ್ಮಾಣದ ಹಾದಿಯಲ್ಲಿ ಏನಾದರೂ ಪ್ರಯತ್ನಗಳು ಸಾಗುತ್ತಿದೆಯೇ ಎಂಬುದನ್ನು ನೋಡಬೇಕಿದೆ..ಬಸವಣ್ಣನವರು ಸಾಮಾನ್ಯ…
ಚಿಂತನೆ- ಶರಣಮ್ಮ ಗೊರೆಬಾಳಪ್ರಾಚಾರ್ಯರುವಿದ್ಯಾರಣ್ಯ ಪಪೂ ಮಹಾವಿದ್ಯಾಲಯಧಾರವಾಡ ಉದಯರಶ್ಮಿ ದಿನಪತ್ರಿಕೆ ಬಸವಯುಗದ ಶ್ರೇಷ್ಠ ಶಿವಶರಣ, ಕಾಯಕಯೋಗಿ, ಕಟುವಾದರೂ ದಿಟವನ್ನೇ ನುಡಿಯುವ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ.ಕಾಲ: 12ನೇ ಶತಮಾನಊರು: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚೌಡದಾನಪುರವೃತ್ತಿ: ದೋಣಿ ನಡೆಸುವುದುದೊರಕಿದ ವಚನಗಳು: 278ವಿಶೇಷತೆ: ತನ್ನ ಹೆಸರನ್ನೇ ಅಂಕಿತನಾಮವನ್ನಾಗಿ ಇಟ್ಟುಕೊಂಡು ವಚನ ರಚಿಸಿದ್ದು,ಆಳವಾದ ಅನುಭವ, ಕಾಯಕನಿಷ್ಠೆಯನ್ನು ಹೊಂದಿದ ಚೌಡಯ್ಯನವರ ವಚನಗಳಲ್ಲಿ ಸಾಮಾಜಿಕ ಪ್ರಜ್ಞೆ ಎದ್ದು ಕಾಣುತ್ತದೆ. ತನ್ನ ವಚನಗಳ ಮೂಲಕ ಸಮಾಜದ ಓರೆ ಕೋರೆಗಳನ್ನು ತಿದ್ದಿದವನು, ಮನುಷ್ಯ ದೇವರನ್ನು ಹುಡುಕಿಕೊಂಡು ಎಲ್ಲಿಗೂ ಹೋಗಬೇಕಿಲ್ಲ ತನ್ನಲ್ಲಿಯೇ ದೇವರನ್ನು ಕಂಡುಕೊಳ್ಳಬಹುದು ಎಂಬ ವಿಶಿಷ್ಟ ತತ್ವವನ್ನು ಸಾರಿದವನು. ತನ್ನ ಅರಿವೇ ತನಗೆ ಗುರು ಎಂಬ ಅಂಶ ಅವರ ಸಾಕಷ್ಟು ವಚನಗಳಲ್ಲಿ ಕಂಡು ಬರುತ್ತದೆ, ಅಂಬಿಗರ ಚೌಡಯ್ಯ ದೋಣಿಯನ್ನು ನಡೆಸುವ ಕಾಯಕವನ್ನು ನಿಷ್ಠೆಯಿಂದ ಮಾಡುತ್ತಿದ್ದನು, ದೋಣಿಯಲ್ಲಿ ಜನರನ್ನು ಕೂರಿಸಿಕೊಂಡು ನದಿ ದಾಟಿಸುವ ಕಾಯಕ ಮಾಡುತ್ತಿದ್ದನು, ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳುವ ಮಾರ್ಗಗಳನ್ನು ತೋರಿಸುವ ಅಂಬಿಗ ಆಗಿದ್ದನು, ಚೌಡಯ್ಯನವರಿಗೆ ತಮ್ಮ ವೃತ್ತಿಯಿಂದ ಹಣ…
ಲೇಖನ- ಶೈಲಜಾ ಆಲಗೂರಉಪನ್ಯಾಸಕರುಶಿವಣಗಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ “ಜ್ಞಾನದ ಬಲದಿಂದ ಅಜ್ಞಾನದ ಕೇಡುಜ್ಯೋತಿಯ ಬಲದಿಂದ ತಮಂಧದ ಕೇಡುಸತ್ಯದ ಬಲದಿಂದ ಅಸತ್ಯದ ಕೇಡುಪರುಷದ ಬಲದಿಂದ ಅವಲೋಹದ ಕೇಡುಕೂಡಲಸಂಗನ ಶರಣುಭಾವದಿಂದಎನ್ನ ಭವದ ಕೇಡು ನೋಡಯ್ಯ ” ಜಗತ್ತು ಅಂಧಕಾರದಲ್ಲಿ ಮುಳುಗಿದ್ದಾಗ ಸಮಾಜವನ್ನು ಮುನ್ನಡೆಸಲು, ಬೆಳಕಿನೆಡೆಗೆ ತೆಗೆದುಕೊಂಡು ಹೋಗಲು ಮಹಾಪುರುಷರು ಹುಟ್ಟುತ್ತಾರೆಂಬುದಕ್ಕೆ ಬುದ್ಧನಿಂದ ಬಸವ ಮತ್ತು ಅಂಬೇಡ್ಕರ್ ಇವರು ಜನ್ಮ ತಾಳಿದ್ದು ಇದಕ್ಕೆ ನಿದರ್ಶನ. ಹನ್ನೆರಡನೇ ಶತಮಾನದ ಮಧ್ಯಭಾಗದಲ್ಲಿ ಇಡೀ ದೇಶ ಅಸಮಾನತೆ,ಅಂಧಶ್ರದ್ಧೆಯಲ್ಲಿ ಮುಳುಗಿ ಹೋಗಿತ್ತು ಅಂತಹ ಕಾಲಘಟ್ಟದಲ್ಲಿ ಶ್ರೀಸಾಮಾನ್ಯರ ಪರವಾಗಿ ಧ್ವನಿ ಎತ್ತಿ ಜಾತೀಯತೆ, ಅಸ್ಪೃಶ್ಯತೆ, ಸಾಮಾಜಿಕ ಅಸಮಾನತೆಯ ವಿರುದ್ಧ ಸಿಡಿದೆದ್ದ ಬಸವಣ್ಣನವರು ಕಾಲ ಕಾಲದಿಂದ ನಡೆದು ಬಂದ ತೊಡರುಗಳಿಗೆ ಅಂಜದೆ, ಅಳುಕದೆ ಬಂಡಾಯವೆದ್ದರು. ಪುರೋಹಿತಶಾಹಿಯನ್ನು ಧಿಕ್ಕರಿಸಿ ಕಂದಾಚಾರದ ವಿರುದ್ಧ ತಿರುಗಿಬಿದ್ದರು. ಸಮಾಜದ ಎಲ್ಲ ಜನರ ಒಳಿತಿಗಾಗಿ ಹೋರಾಟ ಶುರು ಮಾಡಿದರು. ಬಸವಣ್ಣನವರು ಇಂದಿಗೂ ನಮ್ಮೊಡನೆ ಜೀವಂತವಾಗಿರುವುದು ಅವರಲ್ಲಿದ್ದ ವೈಚಾರಿಕ ಅಂಶಗಳಿಂದ. ಇವರು ಜಾತಿ, ಮತ, ಉದ್ಯೋಗ, ವಯಸ್ಸು ಯಾವುದೂ ಅಡ್ಡಿಯಾಗದಂತಹ ನೈತಿಕ ಜೀವನವನ್ನು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರಕಾರದ ಜಾತಿ ಪಟ್ಟಿಯಲ್ಲಿ ಆದಿಬಣಜಿಗ ಸಮಾಜವನ್ನು ಪರಿಗಣಿಸಿರುವದನ್ನು ಅಖಿಲ ಕರ್ನಾಟಕ ಆದಿಬಣಜಿಗ ಸಮಾಜ ಕಲ್ಯಾಣ ಸಮಿತಿ ರಾಜ್ಯ ಘಟಕದ ಆಡಳಿತ ಮಂಡಳಿ ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನಿಡಿರುವ ಸಮಿತಿಯ ಸಂಘಟನಾ ಕಾರ್ಯದರ್ಶಿ ಶರಣಬಸವ ಕಿವಡನ್ನವರ ಸರಕಾರ ಆದಿಬಣಜಿಗ ಸಮಾಜ ಜಾತಿಯನ್ನು ೨ಎ ಅಡಿಯಲ್ಲಿ ಸೇರಿಸಿ ಆದೇಶ ಮಾಡಬೇಕು ಎಂದು ಆಗ್ರಹಿಸಿದರು.೧೮೯೩ ಬ್ರಿಟಿಷರ ಆಡಳಿತ ಕಾಲದಲ್ಲಿ ಆದಿಬಣಜಿಗ ಎಂದು ಜಾತಿ ಗೆಜೆಟ್ ನಲ್ಲಿ ನಮೂದಾಗಿತ್ತು ಆದಾದ ಮೇಲೂ ನಂತರ ರಾಜ್ಯ ಸರಕಾರ ಜಾತಿ ಪಟ್ಟಿಯಲ್ಲಿ ಸೇರಿಸಿದ್ದರೂ ಅದು ಬಹಳ ದಿನ ಉಳಿಯಲಿಲ್ಲ ಆದರೂ ಸಂಘಟನೆಯವರೂ ಸುಮ್ಮನೆ ಕೂಡದೆ ಹಲವಾರೂ ಬಾರಿ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ೨೦೨೨ ರಲ್ಲಿ ಸಮಾಜದ ಬಹಿರಂಗ ವಿಚಾರಣೆ ನಡೆಸಿ ಎಲ್ಲ ರೀತಿಯ ಮಾಹಿತಿ ಸಂಗ್ರಹಿಸಿದ ಹೊತ್ತಿಗೆಯನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಭೂಮ್ಮಾಯಿ ಅವರಿಗೆ ಸಲ್ಲಿಸಿದ ಪ್ರಯುಕ್ತ ಜಾತಿ ಪಟ್ಟಿಯಲ್ಲಿ ಹೆಸರು ಸೆರ್ಪಡೆಯಾಗಿದೆ ಎಂದರು.ಈಗಿನ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಾದಿ ಶರಣರ ವಚನಗಳಲ್ಲಿ ಜೀವನಕ್ಕೆ ಬೇಕಾದ ಜೀವನ ಮೌಲ್ಯಗಳಿವೆ. ಶರಣರ ವಚನಗಳನ್ನು ಓದುವುದರ ಮೂಲಕ ಅದರಲ್ಲಿನ ತತ್ವಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ದೇವಾಲಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೋಣೆಯಲ್ಲಿ ಬಸವಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರ ಬಸವಜಯಂತಿಯಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ವಚನ ಕಂಠಪಾಠ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಸಮಸ್ಯೆಗೆ ಪರಿಹಾರ ಮತ್ತು ಆದರ್ಶ ಬದುಕಿನ ಮೌಲ್ಯ ವಚನ ಸಾಹಿತ್ಯದಲ್ಲಿದೆ. ಶರಣರ ವಚನ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಲು ಯತ್ನಿಸಿದಾಗ ಜೀವನದಲ್ಲಿ ಶಾಂತಿ-ನೆಮ್ಮದಿ, ಸಾರ್ಥಕತೆ ಕಾಣಲು ಸಾಧ್ಯ. ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಲು ವಚನ ಕಂಠಪಾಠ ಸೇರಿದಂತೆ ಬಸವಾದಿ ಶರಣರ ವಚನಗಳ ಕುರಿತ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡುವದು ಅಗತ್ಯವಿದೆ. ಹಿಂದೆ ನಾವು ಈ ನೆಲದಲ್ಲಿ ವಚನ ಕಂಠಪಾಠ ಸ್ಪರ್ಧೆಗಳನ್ನು ಮಾಡುತ್ತಿದ್ದವು. ಈಚೆಗೆ ಇದು ಕೆಲ ಕಾರಣಗಳಿಂದ…
ಉದಯರಶ್ಮಿ ದಿನಾಚರಣೆ ಸಿಂದಗಿ: ಮತಕ್ಷೇತ್ರದ ಮಲಘಾಣ ಗ್ರಾಮದಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದ ಸಿಡಿಲು ಬಡಿದು ಮೃತಪಟ್ಟ ಬಿಸ್ಮಿಲ್ಲಾ ದಸ್ತಗೀರಸಾಬ್ ಅವಟಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸರಕಾರ ನೀಡಿದ ೫ಲಕ್ಷ ರೂ. ಪರಿಹಾರ ಮೊತ್ತದ ಚೆಕ್ಕನ್ನು ನೀಡಿ ಶಾಸಕ ಅಶೋಕ ಮನಗೂಳಿ ಸಾಂತ್ವಾನ ಹೇಳಿದರು.ಇದೇ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಮಾಂತಗೌಡ ಬಿರಾದಾರ ದಸಂಸ ಸಮಿತಿ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ, ರಾವುತಗೌಡ ಬಿರಾದಾರ,. ವಿಠ್ಠಲ ಖೇಡಗಿ, ಶ್ಯಾಮ ಚವ್ಹಾಣ, ಶೇಕಪ್ಪ ಮನ್ನಾಪುರ, ಬಾಪೂಗೌಡ ರೂಗಿ ಸೇರಿದಂತೆ ತಾಲೂಕು ಆಡಳಿತಾಧಿಕಾರಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ನಿವಾಸಿ, ಕರ್ನಾಟಕ ರಣಧೀರ ಪಡೆಯ ಉತ್ತರ ಕರ್ನಾಟಕ ಅಧ್ಯಕ್ಷರಾದ ಸಂತೋಷ ಮಣಿಗೀರಿ ಅವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಇತ್ತೀಚೆಗೆ ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆಯಾಚಿಸಬೇಕು. ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕಿಳಿಯುತ್ತಾರೆ ಎಂಬ ಸತ್ಯ ಜನರಿಗೆ ಗೊತ್ತಿದೆ. ಆದರೆ, ದೇಶದ ವಿಚಾರ ಬಂದಾಗ, ಕಾಶ್ಮೀರದ ಭಯೋತ್ಪಾದಕರ ದಾಳಿ, ಹತ್ಯೆಗಳ ಘಟನೆಯನ್ನು ಪ್ರತಿಯೊಬ್ಬ ಸ್ವಾಭಿಮಾನಿ ಕೂಡ ಖಂಡಿಸಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಾಕಿಸ್ತಾನದ ಜೊತೆ ಯುದ್ಧ ಸಾರುವ ಅಗತ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಪಹಲ್ಗಾಮ್ ನಲ್ಲಿ ನಡೆದ ಘಟನೆ ನಮ್ಮ ರಾಷ್ಟ್ರದ ಮೇಲೆ ನಡೆದ ಹೇಡಿತನ ದಾಳಿ. ಜವಾಬ್ದಾರಿಯುತ ಸ್ಥಾನದಲ್ಲಿ ಅದರಲ್ಲೂ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ ಎಂಬ…
ಬಿಜೆಪಿ ನಿಯೋಗದಿಂದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ರ ಭೇಟಿ | ಸ್ಪೀಕರ್ ಯು ಟಿ ಖಾದರ್ ಗೆ ನಿರ್ದೇಶನ ನೀಡಲು ಮನವಿ ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ.ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಅವರು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು.ರಾಜ್ಯದ ಪ್ರಮುಖ ವಿರೋಧ ಪಕ್ಷಕ್ಕೆ ಸೇರಿದ 18 ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭೆಯ ಸ್ಪೀಕರ್ ಗೆ ನಿರ್ದೇಶಿಸುವಂತೆ ನಾವು ಅತ್ಯಂತ ಗೌರವದಿಂದ ಬೇಡಿಕೊಳ್ಳುತ್ತೇವೆ” ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.ಅಮಾನತು…
ಬಿಜೆಪಿ ನಿಯೋಗದಿಂದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ರ ಭೇಟಿ | ಸ್ಪೀಕರ್ ಯು ಟಿ ಖಾದರ್ ಗೆ ನಿರ್ದೇಶನ ನೀಡಲು ಮನವಿ ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ.ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಅವರು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು.ರಾಜ್ಯದ ಪ್ರಮುಖ ವಿರೋಧ ಪಕ್ಷಕ್ಕೆ ಸೇರಿದ 18 ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭೆಯ ಸ್ಪೀಕರ್ ಗೆ ನಿರ್ದೇಶಿಸುವಂತೆ ನಾವು ಅತ್ಯಂತ ಗೌರವದಿಂದ ಬೇಡಿಕೊಳ್ಳುತ್ತೇವೆ” ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.ಅಮಾನತು…
