Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜುಲೈ 27 ರಂದು ರವಿವಾರ ನಗರದದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಿಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಛಾಯಾಗ್ರಾಹಕರ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ ಹೋಲಿಸಿದರೆ ಇಂದಿನ ತಂತ್ರಜ್ಞಾನ ಅನುಕೂಲವಾಗಿದೆ. ಛಾಯಾಗ್ರಾಹಕರ ಬೇಡಿಕೆಯಾದ ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಹೇಳಿದರು.ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಛಾಯಾಗ್ರಾಹಕರ ಸಂಘದ ರಾಜ್ಯಾಧ್ಯಕ್ಷ ಎಚ್. ಎಸ್.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೊನ್ನುಟಗಿ ೩೩/೧೧ ಕೆವ್ಹಿ ಉಪ-ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೋಲಾರ ಕಾಮಗಾರಿ ಕೈಗೊಳ್ಳುವುದರಿಂದ ಜುಲೈ ೨೮ ರಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ೩೩/೧೧ ಕೆವ್ಹಿ ಹೊನ್ನುಟಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬ್ಯಾಂಕ-೧ರ ಮೇಲೆ ಬರುವ ಎಫ್-೧ ಆಹೇರಿ ಐಪಿ, ಎಫ್ ೧ ಶಿವಣಗಿ ಐಪಿ, ಎಫ್-೩ ಕುಮಟಗಿ ಐಪಿ, ಎಫ್-೬ ಸಂಗನಬಸವ ಶಾಲೆ ಎಫ್-೭ ಶಿವಣಗಿ ನಿರಂತರ ಜ್ಯೋತಿ ಎಫ್-೧೦ ನೀರು ಸರಬರಾಜು ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕಾರ್ಯನಿರ್ವಾಕ ಅಭಿಯಂತರರು ಕೋರಿದ್ದಾರೆ.
ಜಿಲ್ಲಾ ಪಂಚಾಯತ್ ಸಿಇಓ ರಿಷಿ ಆನಂದ ಅವರಿಂದ ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಸಿಂದಗಿ ತಾಲೂಕಿನ ರಾಂಪುರ ಪಿ.ಎ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಪಿ.ಎ ಮತ್ತು ಗಣಿಹಾರ ಗ್ರಾಮ ಹಾಗೂ ಆಲಮೇಲ ತಾಲೂಕಿನ ಕೋರಹಳ್ಳಿ, ಹೂವಿನಹಳ್ಳಿ ಹಾಗೂ ವಿಬೂತಿಹಳ್ಳಿ ಗ್ರಾಮ ಮತ್ತು ಇಂಡಿ ತಾಲೂಕಿನ ಮರಸನಹಳ್ಳಿ, ಸಾಲೋಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾ ನಗರ, ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಬಲಾದ ಮತ್ತು ಹಲಗುಣಕಿ ಮತ್ತು ಹೊರ್ತಿ ಗ್ರಾಮಗಳಲ್ಲಿ ಸಂಚರಿಸಿ, ಪ್ರತಿ ಮನೆ ಮನೆಗೆ ಗಂಗೆ ಕಾರ್ಯಕ್ರಮದಡಿ ಅನುಷ್ಠಾನಗೊಂಡ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಸಂಗಮೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶಾಲಾ ಸಂಸತ್ ಗೆ ಚುನಾವಣೆ ಜರುಗಿತು.ಶಿಕ್ಷಕರು ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿತ್ತಲು ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣೆಯನ್ನು ನಡೆಸಿದರು. ಚುನಾವಣೆ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಕೆ, ಹಿಂದಕ್ಕೆ ತೆಗೆದುಕೊಳ್ಳುವುದು, ಚಿಹ್ನೆ ವಿತರಣೆ, ಪ್ರಚಾರ ಕಾರ್ಯ ಭರದಿಂದ ಜರುಗಿತು. ನಂತರ ಶಿಕ್ಷಕರು ಮೊಬೈಲ್ ನಲ್ಲಿ ಇಲೆಕ್ಟ್ರಾನಿಕ ವೋಟಿಂಗ್ ಮಷಿನ್ ಅಪ್ ದೌನ್ಲೋಡ್ ಮಾಡಿ ಅದರಲ್ಲಿ ಮಕ್ಕಳಿ ನೀಡಿದ ಚಿಹ್ನೆಯನ್ನು ಅಳವಡಿಸಿ ತರಗತಿವಾರು ಮತದಾನ ನಡೆಸಿದರು.ಈ ವೇಳೆ 5,6 ಹಾಗೂ 7ನೇ ತರಗತಿಯ ನೂರಾರು ಮಕ್ಕಳು ಆಧಾರ ಕಾರ್ಡ್ಗಳನ್ನು ತೋರಿಸಿ ಸಂಭ್ರಮದಿಂದ ತಮ್ಮ ತಮ್ಮ ಅಭ್ಯರ್ಥಿಗಳಿಗೆ ಮತ ಹಾಕಿದರು.ಈ ವೇಳೆ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಚುನಾವಣೆ ಸಿಬ್ಬಂದಿಗಳಾಗಿ ಗಂಡು ಮಕ್ಕಳು ಪೊಲೀಸ್, ಸೈನಿಕನ ವೇಷ ಧರಿಸಿದರೆ, ಹೆಣ್ಣು ಮಕ್ಕಳು ನರ್ಸ್, ವೈದ್ಯ ಹಾಗೂ ಆಶಾ ಕಾರ್ಯಕರ್ತೆಯರ ವೇಷ ಧರಿಸಿ ಕರ್ತವ್ಯ ನಿರ್ವಹಿಸಿದರು. ಗಂಡು ಮಕ್ಕಳು ಹಳ್ಳಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಬಳೂತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಣಮಾಪುರ ಪಂಚಾಯಿತಿ ಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಅಶೋಕ ಗಿಡ್ಡಪ್ಪಗೋಳ ಮಾತನಾಡಿ, ಮಗುವಿನ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಯು ಸಹಕಾರಿಯಾಗಿದೆ ಮತ್ತು ಮಕ್ಕಳ ಕಲಿಕೆಗೆ ಪೂರಕವಾಗಿದೆ ಎಂದು ಹೇಳಿದರು.ಅತಿಥಿಗಳಾಗಿ ದೈಹಿಕ ಶಿಕ್ಷಣಾಧಿಕಾರಿ ಎಸ್ ಎಸ್ ಅವಟಿ ಮಾತನಾಡಿ, ಮಕ್ಕಳ ಆರೋಗ್ಯ ಮತ್ತು ಜ್ಞಾನ ಸಂಪಾದನೆಗೆ ಕ್ರೀಡೆ ಅಡಿಪಾಯ ಇದ್ದಂತೆ ಮತ್ತು ಪಾಲಕರು ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕು ಎಂದು ಹೇಳಿದರು.ಸಾನಿಧ್ಯ ಶೆಂಕ್ರೆಯ್ಯ ಚಿಕ್ಕಮಠ, ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಬಸವರಾಜ ಬನಾಗೊಂಡ, ಸಿಆರ್ಪಿ ಸಂಗಮೇಶ ಜಂಗಮಶೆಟ್ಟಿ, ಮುಖ್ಯ ಶಿಕ್ಷಕ ವ್ಹಿ.ಬಿ. ಬಡಿಗೇರ, ದುಂಡಪ್ಪ ಬನಾಗೊಂಡ, ಶ್ರೀಶೈಲ ಗಾಮನ್ನವರ, ಬಸವರಾಜ ಮಾಳೆದ, ಶೇಕಪ್ಪ ಔರಸಂಗ, ಜಗದೀಶ ಸುನಗದ, ಬಸವರಾಜ ಚೌಧರಿ, ಅಭಿಷೇಕ ಹೆಬ್ಬಾಳ, ನವೀನ್ ಕೋರಿ, ಶಿವಾನಂದ ಪಡಶೆಟ್ಟಿ , ಸುರೇಶ ಬಿರಾದಾರ ಉಪಸ್ಥಿತರಿದ್ದರು.
ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಶನಿವಾರ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.೧೦೦ ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಹಾಗೂ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡಿದರು.ಈ ಹಿಂದೆ ಸೆಪ್ಟಂಬರ್ ೨೦೨೪ ರಂದು ವಿಜಯಪುರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಹಾಪೇಟೆ, ಸುಣಗಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಾಕಷ್ಟು ನ್ಯಾನೋ ಯೂರಿಯಾ ಲಭ್ಯವಿದ್ದು, ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವಂತೆ ಜಂಟಿ ಕೃಷಿ ಉಪನಿರ್ದೇಶಕರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕಾಂಪ್ಲೆಕ್ಸ್ ರಸಗೊಬ್ಬರ ೧೫೫೬೩ ಟನ್ ಲಭ್ಯವಿದ್ದು, ಈ ರಸಗೊಬ್ಬರವನ್ನು ರೈತರು ಬಳಕೆ ಮಾಡಬೇಕು. ರೈತರು ಲಭ್ಯವಿರುವ ವಿವಿಧ ರಸಗೊಬ್ಬರಗಳನ್ನು ತಮ್ಮ ಬೆಳೆಗಳಿಗೆ ಅವಶ್ಯಕತೆನುಗುಣಗವಾಗಿ ಬಳಸುವಂತೆ ಅವರು ಕೋರಿದ್ದಾರೆ.ಜಿಲ್ಲೆಗೆ ೨೦೨೫ರ ಜುಲೈ ಅಂತ್ಯದವರೆಗೆ ೨೪೯೫೦ ಟನ್ ಯೂರಿಯಾ ರಸಗೊಬ್ಬರ ಹಂಚಿಕೆಯಾಗಿದ್ದು, ಈವರೆಗೆ ೩೦೮೭೦ ಟನ್ ಮಾರಾಟವಾಗಿ ೪೮೪೨ ಟನ್ ಯೂರಿಯಾ ವಿವಿಧ ಮಾರಾಟಗಾರರಲ್ಲಿ ದಾಸ್ತಾನಿದ್ದು, ಜಿಲ್ಲೆಯಲ್ಲಿ ಅಗತ್ಯ ಯೂರಿಯಾ ರಸಗೊಬ್ಬರ ಬೇಡಿಕೆ ತಕ್ಕಂತೆ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನಿದ್ದು, ವಿತರಣೆ ಪ್ರಗತಿಯಲ್ಲಿದೆ. ದಿನಾಂಕ : ೨೩.೭೦೨೯೨೫ರಂದು ಪಿಪಿಎಲ್ (ಜುವಾರಿ) ಸಂಸ್ಥೆಯಿಂದ ೧೦೧೨ ಟನ್, ದಿನಾಂಕ : ೨೪-೦೭-೨೦೨೫ರಂದು ಆರ್ಸಿಎಫ್ ಸಂಸ್ಥೆಯಿAದ ೨೧೨ ಟನ್ ಹಾಗೂ ದಿನಾಂಕ : ೨೭-೦೭-೨೦೨೫ ರಂದು ಕೋರಮಂಡಲ ಸಂಸ್ಥೆಯ ೨೦೦ ಟನ್ ಯೂರಿಯಾ ರಸಗೊಬ್ಬರ ಜಿಲ್ಲೆಗೆ ಸರಬರಾಜಾಗಿದ್ದು, ವಿತರಣೆ ಪ್ರಗತಿಯಲ್ಲಿದೆ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್.ಲಕ್ಕಣ್ಣನವರ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ.ಎಚ್.ಎಂ.ಚಂದ್ರಶೇಖರ್ ಅವರ ಸೇವೆಯನ್ನು ಅವರ ಮಾತೃ ಸಂಸ್ಥೆಯಾಗಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಕ್ಷಣ ಜಾರಿಗೆ ಬರುವಂತೆ ಹಿಂತಿರುಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ಸಿಂದಗಿ ಪಿಇಎಸ್ ಕಾಲೇಜಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿಮಿತ್ತ ವಿಜಯ ಸಿಂಧೂರ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯುದ್ಧ ಯಾವಾಗಲು ನಡೆಯುದಿಲ್ಲ. ಆದರೆ ನಮ್ಮ ಯೋಧರು ಮಾತ್ರ ಯಾವಾಗಲೂ ಪ್ರಾಣಾರ್ಪಣೆಗೆ ಸಿದ್ದವಾಗಿಯೇ ಇರುತ್ತಾರೆ. ಇಂತಹ ಯೋಧರನ್ನು ಗೌರವಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಸಿಂದಗಿ ಪಟ್ಟಣದ ಪಿಇಎಸ್ ಕಾಲೇಜಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿಮಿತ್ತ ಹಮ್ಮಿಕೊಂಡ ವಿಜಯ ಸಿಂಧೂರ ಕಾರ್ಯಕ್ರವನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.ದೇಶ ಮತ್ತ ದೇಶವಾಸಿಗಳ ಸಂರಕ್ಷಣೆಗಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಹಾಗೂ ೨೬ರ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಆಚರಣೆ ಮಾಡಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತ. ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯಗಳಿಸಿ ೨೬ವರ್ಷ ಕಳೆದಿದೆ. ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ ನಡೆಸಿ ಮತ್ತೊಮ್ಮೆ ಭಾರತ ಪರಾಕ್ರಮ ಮೆರೆದಿದೆ. ಜು.೨೬ರಂದು ಕಾರ್ಗಿಲ್ ವಿಜಯೋತ್ಸವ…
