Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೫-೨೬ ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜು ನ್ಯಾಕ್ ಕಮೀಟಿಯಿಂದ ಬಿ ಶ್ರೇಣಿ ಪಡೆದುಕೊಂಡಿದೆ. ಕಾಲೇಜು ಅನುಭವಿ ಅಧ್ಯಾಪಕರನ್ನು ಹೊಂದಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಗುರಿ ಕಾಲೇಜು ಹೊಂದಿದೆ. ಕಾಲೇಜು ಕಲಾ ವಿಭಾಗದಲ್ಲಿ ಇತಿಹಾಸ ಭೂಗೋಳಶಾಸ್ತ್ರ, ರಾಜಕೀಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಉರ್ದು, ಐಚ್ಛಿಕ ಇಂಗ್ಲೀಷ್, ಐಚ್ಛಿಕ ಕನ್ನಡ ಮುಂತಾದ ವಿಷಯ ಸಂಯೋಜನೆಗಳೊಂದಿಗೆ ಬಿಎ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶವಿದೆ. ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳೊಂದಿಗೆ ಬಿ.ಎಸ್ಸಿ. ಕೋರ್ಸ್ಗಳು ಲಭ್ಯವಿದೆ. ಬಿಕಾಂ ಮತ್ತು ಬಿಬಿಎ ಕೋರ್ಸ್ ಸಹ ಲಭ್ಯವಿದೆ. ಕಾಲೇಜು ಎಲ್ಲ ಸೌಲಭ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಕಾಲೇಜಿನ ಪ್ರವೇಶ ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಬಿ.ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮ ಕಲಾವಿದ ಡಿಜಿಟಲ್ ಸ್ಟುಡಿಯೋದ ಉಮೇಶ ಶಾಖಾಪುರ ಅವರಿಗೆ ಈಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಛಾಯಾ ಗ್ರಾಹಕರ ಸಂಘವು ಹಮ್ಮಿಕೊಂಡಿದ್ದ ೭೦ನೇ ವರ್ಷದ ಡಿಜೆ ಇಮೇಜ್ ನಮ್ಮ ಇಮೇಜ್-ಛಾಯಾಗ್ರಾಹಕರ ಸಂಭ್ರಮದಲ್ಲಿ ಸಂಘದ ಅಧ್ಯಕ್ಷ, ಕೆಪಿಎ ನಿರ್ದೇಶಕ ರಮೇಶ ಚವ್ಹಾಣ ಅವರು ಛಾಯಾಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಇವರನ್ನು ಸಂಘದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಲಾಯಿತು. ಇವರು ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ತಾಲೂಕಿನ ಛಾಯಾವೃತ್ತಿ ಬಾಂಧವರಿಗೆ ಹರ್ಷಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರು ಮತ್ತು ಭಾರತೀಯ ವಕೀಲರ ಪರಿಷತ್ ಸಹ ಅಧ್ಯಕ್ಷರು, ಹಿರಿಯ ನ್ಯಾಯವಾದಿ ಸದಾಶಿವರೆಡ್ಡಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಕರೆ ನೀಡಿದ ಪ್ರತಿಭಟನೆ ಬೆಂಬಲಿಸಿ ಸೋಮವಾರ ಬೆಳಗ್ಗೆ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಎನ್.ಎಸ್.ಬಿರಾದಾರ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ವಕೀಲರು ಮೌನ ಪ್ರತಿಭಟನೆ ನಡೆಸಿ ನಂತರ ತಹಸಿಲ್ದಾರ ಕಚೇರಿಗೆ ತೆರಳಿ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮನವಿ ಪತ್ರವನ್ನುಕಚೇರಿಯ ಸಿಬ್ಬಂದಿ ಬಸವರಾಜ ದಾನಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿ ಮಲ್ಲಿಕಾರ್ಜುನ ದೇವರಮನಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂರು ಅಂಗಗಳಲ್ಲಿ ಒಂದಾದ ನ್ಯಾಯಾಂಗ ಅಂಗವು ನಾಡಿನ ಹಿರಿಮೆ ಪ್ರತೀಕವಾಗಿದೆ.. ಇಂತಹ ನ್ಯಾಯಾಂಗ ಅಂಗದಲ್ಲಿ ನ್ಯಾಯ ವಿಲೇವಾರಿ ಪ್ರಕ್ರಿಯೆಯಲ್ಲಿ ವಕೀಲರ ಪಾತ್ರ ದೊಡ್ಡದಾಗಿದೆ. ವಕೀಲರ ಮೇಲೆ ಅವ್ಯಾಹತವಾಗಿ ಹಲ್ಲೆ-ದೌರ್ಜನ್ಯಗಳು ನಡೆದಿರುವದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ತನ್ನ ಕಕ್ಷಿದಾರರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮೇ.೧೨ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಭಗವಾನ ಬುದ್ಧ ಜಯಂತಿ ಅಂಗವಾಗಿ ಮೇ.೧೨ರಂದು ಬೆಳಿಗ್ಗೆ ೮-೩೦ ಗಂಟೆಗೆ ನಗರದ ಜಲನಗರದಲ್ಲಿರುವ ಬುದ್ಧವಿಹಾರದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಭಗವಾನ ಬುದ್ಧ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಓರ್ವ ನುರಿತ ಉಪನ್ಯಾಸಕರನ್ನು ಆಹ್ವಾನಿಸಿ, ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವುದು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ, ವಿವಿಧ ಗಣ್ಯರಿಗೆ ಆಹ್ವಾನ, ವೇದಿಕೆ ಅಲಂಕಾರ, ವಿವಿಧ ಕಲಾ ತಂಡಗಳೊಂದಿಗೆ ಭಾವಚಿತ್ರ ಮೆರವಣಿಗೆಗೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕುಡಿಯುವ ನೀರಿಗೆ ವ್ಯವಸ್ಥೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ಮೇ.೦೨ರಂದು ಆದಿ ಶಂಕರಾಚಾರ್ಯ, ಮೇ.೦೪ರಂದು ಭಗೀರಥ ಮಹರ್ಷಿ ಹಾಗೂ ಮೇ.೧೦ರಂದು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಆದಿ ಶಂಕರಾಚಾರ್ಯ ಜಯಂತಿ ಅಂಗವಾಗಿ ಮೇ.೨ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಲಕ್ಷ್ಮಿ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಮೇ.೦೪ ರಂದು ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದರೆ ದಿನಾಂಕ:೨೧-೦೪-೨೦೨೫ ರಿಂದ ೦೨-೦೫-೨೦೨೫ ರೊಳಗಾಗಿ ಕಚೇರಿ ಸಮಯದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಇಲಾಖೆಯ ಉಸ್ತುವಾರಿಯಾದ ಎಚ್.ಎಂ ಶಕೀಲ್ ನವಾಜ್ ಇವರಿಗೆ ಬೆಂಗಳೂರಿನ ವಸತಿ ಸಚಿವ ಜಮೀರ್ ಅಹಮದ್ ಖಾನ್ ರವರ ಸರ್ಕಾರಿ ನಿವಾಸದಲ್ಲಿ 65 ನೇ ಹುಟ್ಟು ಹಬ್ಬದ ಪ್ರಯುಕ್ತ ನಬಿರೋಷನ್ ಪ್ರಕಾಶನ, ಬೋರಗಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಬರಹಗಾರ ಮೌಲಾಲಿ ಆಲಗೂರ, ಕಾಂಗ್ರೆಸ್ ಮುಖಂಡ ಸದ್ದಾಮ್ ಆಲಗೂರ, ಹೀನಾ, ಸಾನಿಯಾ ಸೇರಿದಂತೆ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾನೂನು ಎಲ್ಲರಿಗೂ ಸಮಾನವಾದದ್ದು, ಸಂವಿಧಾನ ರಚನೆ ಎಲ್ಲರ ಜವಾಬ್ದಾರಿ ದೇಶದ ಸಾರ್ವಭೌಮತ್ವವನ್ನು ಕಾಪಾಡುವುದು ನಮ್ಮ ಕರ್ತವ್ಯ. ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳನ್ನು ಪಾಲಿಸುವುದರಿಂದ ದೇಶದಲ್ಲಿ ಶಾಂತಿ ನೆಲಸಲಿದೆ ಎಂದು ಉಪನ್ಯಾಸಕಿ ವಿದ್ಯಾ ಕಲ್ಯಾಣಶೆಟ್ಟಿ ಹೇಳಿದರು.ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಜಿಲ್ಲಾ ಘಟಕದವರ ವತಿಯಿಂದ ಹಮ್ಮಿಕೊಂಡಿದ್ದ ಶಿವಾನುಭವಗೋಷ್ಠಿಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರರ ಬದುಕು ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು ದೇಶದ ಏಳ್ಗೆಗಾಗಿ ಸಮಾಜದಲ್ಲಿ ಸಮಾನತೆಯ ಹಕ್ಕು, ಸ್ವಾತಂತ್ರö್ಯ, ಅಭಿವ್ಯಕ್ತಿ ಮತ್ತು ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಒದಗಿಸಿಕೊಟ್ಟಿದ್ದು ಅದರ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ವವ್ಯವಾಗಿದೆ. ನಮ್ಮ ಸಾಂಸ್ಕೃತಿ, ಧರ್ಮ ಇತಿಹಾಸವನ್ನು ನಮ್ಮ ಜೀವನಕ್ಕೆ ಅಳವಡಿಸಿಕೊಂಡು ನಡೆಯಬೇಕು ಎಂದು ಕರೆ ನೀಡಿದರು.ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಸಮಾಜದ ಪರಿಸರ ಅಂದಿನ ವಿಚಾರ ಮನೋಸ್ಮೃತಿಯ ಸಂಸ್ಕಾರ ಬದುಕಿನ ದೌರ್ಜನ್ಯಗಳಿಂದ ಅನುಭವಿಸಿ ದಲಿತ ನಾಯಕನಾಗಿ ಸರ್ವರ ಕಲ್ಯಾಣಕ್ಕಾಗಿ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಇತ್ತೀಚೆಗೆ ಕಲಕೇರಿಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಡಾ ಬಾಬಾಸಾಹೇಬ ಅಂಬೇಡ್ಕರರ 134ನೇ ಜಯಂತೋತ್ಸವ ಮತ್ತು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಲಮೇಲದ ವೈದ್ಯ ಸಾಹಿತಿ ಡಾ ಸಮೀರ ಹಾದಿಮನಿ ಅವರನ್ನು ಸಂಕೀರ್ಣ ಕ್ಷೇತ್ರದಲ್ಲಿ ಖ್ಯಾತ ನೇತ್ರ ತಜ್ಞ ಡಾ ಪ್ರಭುಗೌಡ ಪಾಟೀಲ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು.ಶ್ರೀ ಮಡಿವಾಳೇಶ್ವರ ಶಿವಾಚಾರ್ಯರು , ಭಂತೆ ಅಮರಜ್ಯೋತಿ ಸಾನಿಧ್ಯ ವಹಿಸಿದ್ದರು. ವಿದ್ವಾಂಸ ಡಾ ಎಚ್ ಟಿ ಪೋತೆ , ಪ್ರೋ ಸುಜಾತಾ ಚಲವಾದಿ, ದಲಿತ ಮುಖಂಡ ವೈ ಸಿ ಮಯೂರ, ಶ್ರೀನಾಥ್ ಪೂಜಾರಿ, ಡಿಎಸ್ಎಸ್ ಸಂಚಾಲಕ ಸೋಮಶೇಖರ್ ಬಡಿಗೇರ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕವೇ ಸಾಧ್ಯ ಎಂದು ಉತ್ತರ ಕನ್ನಡ ಜಿಲ್ಲೆಯ ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದಲ್ಲಿ (ಎನ್.ಇ.ಪಿ) ಆಯೋಜಿಸಿದ್ದ, ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತ್ಯೋತ್ಸವ ಅಂಗವಾಗಿ ‘ಡಾ.ಬಿ.ಆರ್.ಅಂಬೇಡ್ಕರ ಮತ್ತು ಮಹಿಳೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಒಂದು ಸಮಾಜದ ಸೌಖ್ಯ ಮತ್ತು ಪ್ರಗತಿಗೆ ಮಹಿಳೆಯರ ಸಬಲೀಕರಣ ಅತೀ ಅಗತ್ಯವಾದದ್ದು. ಮಹಿಳೆಯರಿಗೆ ಸಮರ್ಪಕ ಶಿಕ್ಷಣ, ಉತ್ತಮ ಆರೋಗ್ಯ ಸೇವೆ, ಆರ್ಥಿಕ ಸ್ವಾವಲಂಬನೆ ಮತ್ತು ತೀರ್ಮಾನಾತ್ಮಕ ಹಕ್ಕುಗಳನ್ನು ನೀಡಿದಾಗ ಮಾತ್ರ ಸಮಾನತೆಯ ಪರಿಕಲ್ಪನೆಗೆ ನಿಜವಾದ ಅರ್ಥ ದೊರೆಯುತ್ತದೆ. ಮಹಿಳೆಯರ ಸಬಲೀಕರಣದಿಂದ ಅವರು ತಮ್ಮ ಕುಟುಂಬ ಅಲ್ಲದೆ ಸಮುದಾಯದ ಬೆಳವಣಿಗೆಗೂ ಪ್ರಮುಖ ಶಕ್ತಿಯಾಗಿ ಪರಿಣಮಿಸುತ್ತಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ವಿಭಾಗದ ಸಂಯೋಜಕಿ ಡಾ. ಜಿ.ಸೌಭಾಗ್ಯ ಮಾತನಾಡಿ, ಇಡೀ ಮಹಿಳಾ ಸಮುದಾಯಕ್ಕೆ…
