Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಸ್ತೆ ಕಾಮಗಾರಿಗೆ ಭೂಮಿಪೂಜೆ | ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಸಿಸಿ ರಸ್ತೆ,, ಡಾಂಬರೀಕರಣ, ಮಠ ಮಂದಿರಗಳ ಜೀರ್ಣೋದ್ಧಾರ, ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದರ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಸಮೀಪದ ಗಬಸಾವಳಗಿ ಗ್ರಾಮದ ರಾಷ್ಟ್ರಿಯ ಹೆದ್ದಾರಿಯಿಂದ ಭಂಟನೂರ ಮಾರ್ಗವಾಗಿ ಗೊರವಗುಂಡಗಿ ಗ್ರಾಮದ ವರೆಗೆ ೨೦೨೪-೨೫ನೇ ಸಾಲಿನ ೫೦೫೪-ಅಪೆಂಡೆಕ್ಸ್ -ಇ ಯೋಜನೆಯಡಿಯಲ್ಲಿ ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟ ಕಡೆಯ ಕುಟುಂಬದವರ ಕಷ್ಟಕ್ಕೆ ಮಿಡಿದಿದೆ ಈ ಉಚಿತ ಯೋಜನೆಗಳ ಜೊತೆಗೆನೆ ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕಷ್ಟು ಅನುದಾನವನ್ನು ಕೂಡಾ ನೀಡಿದ್ದಾರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಕ್ಕೂ ಹೆಚ್ಚಿನ ಆದ್ಯತೆ ನೀಡಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸುತ್ತೇನೆ ಸರಕಾರ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು…
ಬಿಜೆಪಿ ನಿಯೋಗದಿಂದ ಸ್ಪೀಕರ್ ಭೇಟಿ | ೧೮ ಶಾಸಕರ ಅಮಾನತು | ವಿರೋಧ ಪಕ್ಷದ ನಾಯಕ(ಎಲ್ಒಪಿ) ಆರ್.ಅಶೋಕ್ ಮನವಿ ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದ್ದು, 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದೆ.ಮಾರ್ಚ್ 21 ರಂದು, ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.ಸ್ಪೀಕರ್ ಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ(ಎಲ್ಒಪಿ) ಆರ್. ಅಶೋಕ್ ಅವರು, “ನಾವು ಸ್ಪೀಕರ್…
ಜನಮನ ಗೆದ್ದ ಹಾಲೋಕುಳಿ ಯುವಕರು ಭಾಗಿ | ಶಿಳ್ಳೆ, ಕೇಕೆಗಳ ಸುರಿಮಳೆ | ಸಾವಿರಾರು ಜನರಿಂದ ವೀಕ್ಷಣೆ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿ ಜಮಖಂಡಿ: ಅಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಕೆಲವರು 52 ಅಡಿ ಎತ್ತರ ಕಂಬವನ್ನು ಎರಲು ಸಿದ್ಧರಾಗಿ ನಿಂತಿದ್ದರು. ಮೈನವಿರೇಳಿಸುವ ಈ ಸಾಹಸದಲ್ಲಿ ಕೆಲವರು ಕಂಬ ಏರಲು ಹೋಗಿ ಬೀಳುತ್ತಿದ್ದರೆ, ಮತ್ತೆ ಕೆಲವರು ಎದ್ದು ಗುರಿ ಮುಟ್ಟಲು ಹರಸಾಹಸ ನಡೆಸುತ್ತಿದ್ದರು. ಕೊನೆಗೆ ಒಬ್ಬ ಗುರಿತಲುಪುತಿದ್ದಂತೆ ಚಪ್ಪಾಳೆˌ ಸಿಳ್ಳೆˌ ಕೇಕೆಗಳ ಸುರಿಮಳೆಯಾಯಿತು.ಇದು ಗ್ರಾಮ ಆರಾಧ್ಯ ದೈವ ಮಾರುತೇಶ್ವರ ಜಾತ್ರೆ ನಿಮಿತ್ತ ಸೋಮವಾರ ನಡೆದ ಹಾಲೋಕುಳಿಯ ಝಲಕ್, ಜಾತ್ರೆ ನಿಮಿತ್ತ ಮೂರು ದಿನ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಹಾಲೋಕುಳಿ ವಿಶೇಷವಾಗಿ ಗಮನ ಸೆಳೆಯಿತು.ಏನಿದು ವಿಶೇಷ: ದೇವಸ್ಥಾನದ ಎದುರು 52 ಅಡಿ ಎತ್ತರದ ಕಂಬವನ್ನು ನೆಟ್ಟು ಅದರ ಮೇಲೆ ವ್ಯಕ್ತಿಯನ್ನು ಕೂಡಿಸಲಾಗಿತ್ತು. ಈ ಕಂಬಕ್ಕೆ ಜಾರುವ ಪದಾರ್ಥ ಲೇಪಿಸಲಾಗಿತ್ತು. ಸ್ಪರ್ಧೆಗೆ ಬಂದ ಯುವಕರು ಈ ಕಂಬ ಹತ್ತಿ ಮೇಲೆ ಕುಳಿತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮನಗೂಳಿ ರಸ್ತೆಯಲ್ಲಿರುವ ಜಿಲ್ಲಾ ಬಾಲ ಭವನದಲ್ಲಿ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ೨೦೨೫-೨೬ನೇ ಸಾಲಿನ ಬೇಸಿಗೆ ತರಬೇತಿ ಶಿಬಿರ ಏರ್ಪಡಿಸಲಾಗಿದೆ.ದಿನಾಂಕ: ೨೩-೦೪-೨೦೨೫ ರಿಂದ ೦೭-೦೫-೨೦೨೫ರವರಗೆ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧.೩೦ ರವರೆಗೆ ನಡೆಯುವ ಈ ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ನೃತ್ಯ, ಸಂಗೀತ, ಕರಾಟೆ ಹಾಗೂ ಕರಕುಶಲ ಕಲೆ ಕುರಿತಾಗಿ ತರಬೇತಿ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೭೭೬೦೪೦೨೨೩೯ಗ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಇದೇ ಏಪ್ರಿಲ್ ೨೪ ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಇದೇ ಏಪ್ರಿಲ್ ೨೪ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಜನ್ಮದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಅಂದು ಡಾ.ರಾಜ್ ಕುಮಾರ್ ಅವರ ಚಲನಚಿತ್ರಗಳ ಗೀತಗಾಯನ ನಡೆಯಲಿದ್ದು, ಡಾ.ರಾಜ್ ಕುಮಾರ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಭೆ ಮೂಲಕ ಮನವಿ ಮಾಡಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕ್ರೀಡಾಧಿಕಾರಿ ರಾಜಶೇಖರ್…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ ಮತ್ತು ರಾಜ್ಯದ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಸದಾಶಿವರೆಡ್ಡಿ ಅವರ ಮೇಲೆ ಅಪರಿಚಿತರು ದಾಳಿ ಮಾಡಿ ಭೀಕರ ಹಲ್ಲೆ ಮಾಡಿರುವದನ್ನು ಇಲ್ಲಿನ ವಕೀಲರ ಸಂಘವು ಬಲವಾಗಿ ಖಂಡಿಸಿತು.ಪಟ್ಟಣದ ನ್ಯಾಯಾಲಯದ ಕಲಾಪಗಳಲ್ಲಿ ಎಲ್ಲ ನ್ಯಾಯವಾದಿಗಳು ಕೈಗೆ ಕೆಂಪು ಪಟ್ಟಿ ಕಟ್ಟಿ ಮೌನ ಪ್ರತಿಭಟನೆ ಮಾಡಿದರು.ಈ ಕುರಿತು ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಪತ್ರಿಕೆಯೊಂದಿಗೆ ಮಾತನಾಡಿ, ಈ ಘಟನೆ ಅಮಾನವೀಯ. ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ಇಂತಹ ಘಟನೆಗಳು ನಡೆಯುತ್ತಿರೋದು ವಕೀಲರ ಸಮುದಾಯಕ್ಕೆ ಆತಂಕವನ್ನುಂಟು ಮಾಡಿದೆ. ಈ ಘಟನೆಯಲ್ಲಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು ಎಂದರು.ಸಂಘದ ವತಿಯಿಂದ ಕೈಗೆ ಕೆಂಪು ಪಟ್ಟಿ ಧರಿಸಿಯೇ ತಹಸೀಲ್ದಾರ ಕಚೇರಿಯವರೆಗೆ ಕಾಲ್ನಡಿಗೆಯ ಮೂಲಕ ಸಾಗಿ ತಹಸೀಲ್ದಾರ ಬಲರಾಮ ಕಟ್ಟಿಮನಿ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮತ್ತು ಗೃಹ ಮಂತ್ರಿಗಳಿಗೆ ಘಟನೆಯ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದರು.ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಸಿ.ಇ.ಟಿ ಪರೀಕ್ಷೆಯಲ್ಲಿ ಶಿವಮೊಗ್ಗ ಮತ್ತು ಬೀದರನಲ್ಲಿ ವಿಪ್ರ ಸಮಾಜದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ಪರೀಕ್ಷೆಗೆ ಹಾಜರಾಗುವಂತೆ ಮಾಡಿದ ಕುಕೃತ್ಯವನ್ನು ಖಂಡಿಸಿ ಬ್ರಾಹ್ಮಣ ಸಮಾಜ ಹಾಗೂ ವಿವಿಧ ಸಮಾಜದ ಹಲವು ಸಂಘಟನೆಗಳು ಜಿಲ್ಲಾ ವಕೀಲರ ಸಂಘದ ಸಹಯೋಗದೊಂದಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಭಾವಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ರಾಜೇಶ ದೇವಗಿರಿ ಮಾತನಾಡಿ, ನಮ್ಮ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತ ಕೆಲಸವನ್ನು ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಡಿದ್ದು, ಈ ಹೇಯಕೃತ್ಯ ಎಂದು ಆರೋಪಿಸಿ ತಪ್ಪಿತಸ್ಥತ್ತರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೂವರೆಗೂ ಈ ವಿಷಯಕ್ಕೆ ಸಂಬಂಧಪಟ್ಟಂತೆ ಏನೂ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ನೋಡಿದರೆ ಅವರ ಬೆಂಬಲ ಈ ರೀತಿ ವರ್ತಿಸಿದ ತಪ್ಪಿತಸ್ಥರನ್ನು ಬಚಾವು ಮಾಡುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತದೆ. ಸರ್ಕಾರವು ಈ ಸಮಸ್ಯೆಯನ್ನು ಶೀಘ್ರ ಪರಿಹರಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬೆನಕಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಶಿಶ ಝಳಕಿ ಹಾಗೂ ಕೀರ್ತಿ ಗಾಯಕವಾಡ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೆಇಇ ಮೇನ್ಸ್ನಲ್ಲಿ ಉತ್ತಮ ಸಾಧನೆ ಮಾಡಿ ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಕಾರ್ಯದರ್ಶಿ ಹೇಮಲತಾ ಬೆನಕಟ್ಟಿ, ಪ್ರಾಚಾರ್ಯ ಸೂರಜ್ ಉಮದಿ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಏ.೨೨ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ಭೂಮಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಹಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಕಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಸಿಪಿಐ ಮಹಮ್ಮದ ಫಸಿಯುದ್ಧೀನ ಭಾಗಿಯಾಗಲಿದ್ದು, ವಿಶ್ವ ಭೂಮಿ ದಿನದ ಕುರಿತು ನ್ಯಾಯವಾದಿ…
ಎಕ್ಸಲಂಟ್ ಪಪೂ ಕಾಲೇಜಿನಲ್ಲಿ ನಡೆದ ಸೇತುಬಂಧ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳು ಎಷ್ಟು ಅಂಕಗಳನ್ನು ಪಡೆದರು ಎನ್ನುವುದಕ್ಕಿಂತ ಹೆತ್ತವರಿಗೆ ನೋವಾಗದಂತೆ ಹೇಗೆ ನಡೆದುಕೊಂಡರು ಎನ್ನುವುದು ಬಹು ಮುಖ್ಯವಾಗುತ್ತದೆ. ಒಂದು ಅಂಕ ಕಡಿಮೆ ಬಂದರೆ ಪರವಾಗಿಲ್ಲ, ಮುಂದಿನ ಬಾರಿ ಅದರ ಎರಡರಷ್ಟು ಅಂಕಗಳನ್ನು ಪಡೆದುಕೊಳ್ಳಬಹುದು. ಆದರೆ ಒಂದು ಬಾರಿ ಹೆತ್ತವರಿಗೆ ಸಂಕಟ ನೀಡಿದರೆ ಅದನ್ನು ಹತ್ತು ಜನ್ಮ ಎತ್ತಿದರೂ ತೀರಿಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಮಕ್ಕಳು ಮಾಡುವ ಸಾಧನೆ ಹೇಗಿರಬೇಕು ಎಂದರೆ ಸಾಧನೆ ಮಾಡಿದ ಮಕ್ಕಳನ್ನು ನೋಡಿದವರು ಇಂಥ ಮಕ್ಕಳು ನಮ್ಮ ಹೊಟ್ಟೆಯಲ್ಲಿಯೂ ಹುಟ್ಟಬೇಕಿತ್ತು ಎಂದುಕೊಳ್ಳಬೇಕು ಎನ್ನುವ ಹಾಗಿರಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೨೦೨೫-೨೬ ನೇ ಸಾಲಿಗೆ ದಾಖಲಾತಿ ಪಡೆದುಕೊಂಡ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಬ್ರಿಡ್ಜಕೋರ್ಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು; ಇಂದು ಮಕ್ಕಳಿಗೆ ಶಿಕ್ಷಣ…
