Author: editor.udayarashmi@gmail.com

ಇಂದು (ಏಪ್ರೀಲ್-೨೨, ಮಂಗಳವಾರ) “ವಿಶ್ವ ಭೂ ದಿನ”ದ ನಿಮಿತ್ಯ ಈ ವಿಶೇಷ ಲೇಖನ) ಲೇಖನ-ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ವಿಜ್ಞಾನ-ತಂತ್ರಜ್ಞಾನದ ಅಭಿವೃದ್ಧಿಯ ಮಂತ್ರ ಜಪಿಸುತ್ತಿರುವ ಮಾನವ ಇಡೀ ಮಾನವ, ಪಶು, ಪಕ್ಷಿ, ಜೀವಜಂತು, ಸಸ್ಯರಾಶಿಗಳಿಗೆ ಆಶ್ರಯ ತಾಣವಾಗಿರುವ ಪೃಥ್ವಿ ಮತ್ತು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಖಾಸಗೀಕರಣ. ಜಾಗತೀಕರಣ ಮತ್ತು ಉದಾರೀಕರಣಗಳಿಂದ ಅಭಿವೃದ್ಧಿ ಸಾಧಿಸಬೇಕೆಂಬ ಮರೀಚಿಕೆಗೆ ಬೆನ್ನು ಹತ್ತಿರುವ ಮಾನವ ತನ್ನ ಸ್ವಾರ್ಥ ಸಾಧನೆಗಾಗಿ ಅರಣ್ಯ ಸಂಪತ್ತನ್ನು ನಾಶಗೊಳಿಸಿ ತನ್ನ ಬದುಕಿಗೆ ತಾನೇ ಕೈಯಾರೆ ಕೊಡಲಿ ಪೆಟ್ಟು ಹಾಕಿಕೊಳ್ಳುತ್ತಿದ್ದಾನೆ. ಹಣ ಗಳಿಕೆ, ನಗರೀಕರಣ, ಕೈಗಾರಿಕೆ, ಸಂಶೋಧನೆ, ಹೊಸ ಅವಿಷ್ಕಾರ, ಅಣ್ವಸ್ತ್ರ ಪ್ರಯೋಗ, ಐಷಾರಾಮಿ ವಸ್ತುಗಳ ಬಳಕೆ ಮತ್ತು ವಿಜ್ಞಾನ-ತಂತ್ರಜ್ಞಾನದ ಮಿತಿಮೀರಿದ ಉಪಯೋಗದಿಂದ ಭೂಮಿಯ ಮೇಲಿನ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.ಇರುವುದೊಂದೆ ಭೂಮಿ, ಉಸಿರಾಡುವುದೋಂದೇ ಗಾಳಿ, ಕುಡಿಯುವುದೊಂದೇ ನೀರು ಹೀಗಿರುವಾಗ ಅವುಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಉಳಿಸಬೇಕಾದ ಅಗತ್ಯವಾಗಿದೆ. ಈ ಭೂಮಿಯಲ್ಲಿ ಮನುಷ್ಯ ಮತ್ರವಲ್ಲ ಅದೇಷ್ಟೋ ಜೀವ ಸಂಕುಲಗಳು, ಸೂಕ್ಷ್ಮಾಣುಗಳು & ಸಸ್ಯಗಳು ಹೀಗೆ ಭೂಮಿ…

Read More

ಚಿಂತನೆ- ಸುಧಾ ಪಾಟೀಲ್ವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಲಿಂಗವನ್ನು ನೆನೆ ನೆನೆದು ಲಿಂಗವೇ ತಾನಾದಂತೆ ಗುರುವನ್ನೇ ನೆನೆದು ಗುರುವೇ ತಾನಾದಂತೆ ಬಸವ ಬಸವ ಎಂದು ಅನುದಿನ ಬಸವಣ್ಣನವರನ್ನು ನೆನೆದು ವಚನ ರಚನೆಯಲ್ಲಿ ಮಾತ್ರ ಪ್ರತಿಬಸವಣ್ಣನಾದವರು ಷಣ್ಮುಖ ಶಿವಯೋಗಿಗಳು. ಅವರ ವಚನದ ಶಿಲ್ಪ, ಸ್ವರೂಪ, ಶೈಲಿ,ತಂತ್ರ, ಶಬ್ದ, ಅರ್ಥ, ಅಲಂಕಾರಗಳೆಲ್ಲವೂ ನಮ್ಮನ್ನು 12ನೇ ಶತಮಾನಕ್ಕೆ ಕೊಂಡೊಯುತ್ತವೆ.ಷಣ್ಮುಖ ಶಿವಯೋಗಿಗಳು ಬಾಲ್ಯದಿಂದಲೇ ನಿವೃತ್ತಿ ಮಾರ್ಗದಲ್ಲಿದ್ದರು. ಭಕ್ತಿ,ಜ್ಞಾನ, ವೈರಾಗ್ಯ ಅವರ ತ್ರಿವಿಧ ಧ್ಯೇಯಗಳಾದವು. ಗುರುವ ಹಿಡಿದು ಕುರುಹನ್ನು ಕಂಡರು, ಕುರುಹಿನಿಂದ ಅರುಹನ್ನು ಕಂಡರು. ಅರುಹಿನಿಂದ ಆಚಾರವ ಕಂಡರು. ಆಚಾರದಿಂದ ನಿಜವ ಕಂಡರು. ನಿಜದಿಂದ ಅಖoಡೇಶ್ವರನ ಕೂಡಿದರು. ಕೂಡಿದರಷ್ಟೇ ಅಲ್ಲ ಅಖಂಡೇಶ್ವರನೇ ತಾವಾದರು. ಅಂತೆಯೇ ತಮ್ಮ ವಚನಾoಕಿತ ವಾಗಿ ಅಖಂಡೇಶ್ವರ ಎಂಬ ಅಂಕಿತನಾಮವನ್ನು ಇಟ್ಟುಕೊಂಡರು. ಅಖoಡೇಶ್ವರರ ವಚನಗಳ ಒಂದು ವೈಶಿಷ್ಟ್ಯವೆಂದರೆ ಅವು ಬಸವಣ್ಣನವರ ಷಟಸ್ಥಲ ವಚನಗಳು ಪ್ರಕಟವಾಗುವ ಪೂರ್ವದಲ್ಲಿಯೇ ಪ್ರಕಟವಾಗಿ ಜನರ ಕೈ ಸೇರಿತ್ತು.ಲಿಂಗಾಯತ ಧರ್ಮದ ಧರ್ಮ ಗ್ರಂಥವೆಂದರೆ ಅಖoಡೇಶ್ವರ ವಚನಗಳು ಎಂಬಷ್ಟು ಅವು…

Read More

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಕೈಯಲ್ಲಿರುವ ಈ ಕ್ಷಣಗಳನ್ನು ಕಳೆದುಕೊಳ್ಳುತ್ತಿದ್ದೇವೆಂಬ ಅರಿವಿಲ್ಲದೆ ಹಳೆಯ ಸಂಗತಿಗಳ ನೆನಪಿನ ರಾಶಿ ಕೆದುಕುತ್ತ ಕಾಲ ಕಳೆಯುತ್ತೇವೆ. ಅದರಿಂದ ಏನೂ ಪ್ರಯೋಜನವಿಲ್ಲ ಎಂಬುದು ಗೊತ್ತಿದ್ದೂ ಅದರಲ್ಲಿ ಮುಳುಗುತ್ತೇವೆ. ಇಷ್ಟು ಸಾಲದೆಂಬಂತೆ ಹಳೆಯ ನೋವುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಅದರ ಬಗ್ಗೆ ಯೋಚಿಸುತ್ತ ಕೊರಗುತ್ತೇವೆ. ಒಟ್ಟಿನಲ್ಲಿ ಈ ದಿನ ಈ ಕ್ಷಣ ಏನು ಮಾಡಬಲ್ಲೆವು. ಏನು ಮಾಡಿದರೆ ನೆಮ್ಮದಿಯ ಬದುಕು ಸೃಷ್ಟಿಸಬಲ್ಲೆವು ಎಂದು ಯೋಚಿಸುವುದರ ಗೊಡವೆಗೆ ಹೋಗುವುದೇ ಇಲ್ಲ. ಅವೇ ನೆನಪುಗಳನ್ನು ಮತ್ತು ಅವೇ ನೋವುಗಳನ್ನು ಮೆಲಕು ಹಾಕುತ್ತ ಜೀವನವನ್ನು ಸರ್ವನಾಶ ಮಾಡಲು ಅಡಿಪಾಯ ಹಾಕುತ್ತೇವೆ. ನೋವುಗಳ ನೆನಪುಗಳು ನಮ್ಮ ಬೆಳವಣಿಗೆಗೆ ಪೂರಕವಾಗುವುದಿಲ್ಲ ಎಂಬುದು ಗೊತ್ತಿದ್ದರೂ ಅದೇಕೆ ಜೀವನವನ್ನು ನಾವೇ ನಮ್ಮ ಕೈಯಾರೆ ಹಾಳು ಮಾಡಿಕೊಳ್ಳುತ್ತೇವೆ. ನಾವು ಸಾಮಾನ್ಯ ಮಾಹಿತಿಯನ್ನು ಮರೆತುಬಿಡುತ್ತೇವೆ, ಆದರೆ ನಮ್ಮ ಮೆದುಳು ಬಲವಾದ ಭಾವನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸುವ ಸಾಧ್ಯತೆ ಹೆಚ್ಚು. ಎಕ್‌ಹಾರ್ಟ್ ಟೋಲೆಯವರು ಹೇಳುವಂತೆ ’ಭೂತಕಾಲಕ್ಕೆ ವರ್ತಮಾನದ ಮೇಲೆ ಯಾವುದೇ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಿಇಟಿ ಪರೀಕ್ಷೆ ವೇಳೆ ಪರೀಕ್ಷಾ ಮಂಡಳಿಯ ನಿಯಮವನ್ನು ದುರುಪಯೋಗ ಮಾಡಿಕೊಂಡು ಜನಿವಾರ ತೆಗೆಯಿಸಿ ಧಾರ್ಮಿಕ ಭಾವನೆಗೆ ಚ್ಯುತಿ ತಂದ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜನಿವಾರ ಸಮಾಜ ಬಾಂಧವರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಮುಖ್ಯ ಮಂತ್ರಿಗಳಿಗೆ ಮತ್ತು ಶಿಕ್ಷಣ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ರಾಘವೇಂದ್ರ ಮಂಗಲ ಕಾರ್ಯಾಲಯದಿಂದ ಶುರುವಾದ ಪ್ರತಿಭಟನೆ ವಾಲ್ಮೀಕಿ ವೃತ್ತ, ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ, ದ್ಯಾಮವ್ವ ದೇವಿ ದೇವಸ್ಥಾನ, ಮುಖ್ಯ ಬಜಾರ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಸೀಲ್ದಾರ ಕಚೇರಿಯ ವರೆಗೆ ಸಾಗಿತು. ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸಮಾಜದ ಪ್ರಮುಖರಾದ ವಾಸುದೇವ ಶಾಸ್ತಿç, ಬಿ.ಪಿ.ಕುಲಕರ್ಣಿ, ಉದಯಸಿಂಗ ರಾಯಚೂರ, ಈರಣ್ಣ ಬಡಿಗೇರ, ವಿಜು ಬಡಿಗೇರ ಮತ್ತೀತರರು ಮಾತನಾಡಿ, ಈ ಘಟನೆ ಮಾನವ ಕುಲ ತಲೆ ತಗ್ಗಿಸುವಂಥದ್ದು. ಜನಿವಾರವನ್ನು ಗಾಯತ್ರಿ ಮಂತ್ರ ಪಠಿಸಿ ದೊಡ್ಡ ಸಮಾರಂಭ ಮಾಡಿ ಧರಿಸುತ್ತೇವೆ.…

Read More

ಪೆಟ್ರೋಲಿಯಂ ರೂಲ್ಸ್ ಪ್ರಕಾರ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಪೆಟ್ರೋಲ್ ಪಂಪ್‌ಗಳು ಪೆಟ್ರೋಲಿಯಂ ರೂಲ್ಸ್ ಪ್ರಕಾರ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ನಿಯಮದಂತೆ ಪೆಟ್ರೋಲ್ ಪಂಪ್‌ಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತವಾದ ಶೌಚಾಲಯ, ಸ್ನಾನದ ಕೋಣೆ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಅಗ್ನಿ ನಂದಿಸುವ ವಸ್ತುಗಳು, ವಾಹನಗಳಿಗೆ ಏರ ಮಷಿನ್ ಮತ್ತು ನೈಟ್ರೋಜನ್ ಸೇವೆ, ವಾಹನಗಳಿಗೆ ಅಡೆತಡೆಯಾಗದಂತೆ ಒಳಗೆ-ಹೊರಗೆ ಹೋಗಲು ರಸ್ತೆ ಸಂಪರ್ಕ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಗ್ರಾಹಕರಿಗೆ ಸರಿಯಾಗಿ ಅಳತೆ ಮಾಡಿ ಪೆಟ್ರೋಲ್ ಒದಗಿಸುವ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಸೂಚನೆ ನೀಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮೊಬೈಲ್‌ನಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕೋರವಾರ ಗ್ರಾಮದಲ್ಲಿ ಸಂಭವಿಸಿದೆ.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ಜರುಗಿದ್ದು, ಗ್ರಾಮದ ನಿವಾಸಿ ಸಂಗಯ್ಯ ಶಾಂತವೀರಯ್ಯ ಚಿಕ್ಕಯ್ಯನಮಠ(೧೭) ಎಂಬುವ ವಿದ್ಯಾರ್ಥಿಯೇ ಸಿಡಿಲಿಗೆ ಬಲಿಯಾದ ದುರ್ದೈವಿಯಾಗಿದ್ದಾನೆ. ಇವನು ಕಲಕೇರಿ ಗ್ರಾಮದ ಐಟಿಐ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು.ಗ್ರಾಮದ ಶ್ರೀಹನುಮಾನ ದೇವಸ್ಥಾನದ ಮೇಲೆ ನಿಂತು ಮೊಬೈಲ್‌ನಲ್ಲಿ ಮಾತನಾಡುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಪ್ರಕರಣ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More

ಜನಿವಾರ ತಗೆಯುವಂತೆ ಒತ್ತಾಯ ಮಾಡಿದ ಅಧಿಕಾರಿಗೆ ಅಮಾನತ್ತು ಮಾಡಲು ಆಗ್ರಹ | ಜಿಲ್ಲಾಧಿಕಾರಿ ಮೂಲಕ ರಾಜ್ಯ ಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಅಖಿಲ ಕರ್ನಾಟಕ ರಾಜ್ಯ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘ, ಅಖಿಲ ಭಾರತೀಯ ಬ್ರಾಹ್ಮಣ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಹಾಗೂ ಶ್ರೀ ಚಿದಂಬರ ಸೇವಾ ಸಮಿತಿ ನೇತೃತ್ವದಲ್ಲಿ ಕೆ. ಇ. ಎಯಿಂದ ನಡೆಸುತ್ತಿರುವ ವಿವಿಧ ವೃತ್ತಿಪರ ಪದವಿಗಳ ಪ್ರವೇಶ ಪರೀಕ್ಷೆಯಲ್ಲಿ ಶಿವಮೊಗ್ಗ ಮತ್ತು ಬೀದರ ಜಿಲ್ಲೆಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಒತ್ತಾಯ ಮಾಡಿ ಅವಮಾನಿಸಿರುವ ಘಟನೆ ಖಂಡಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆನಂದ ಕುಲಕರ್ಣಿ ಅವರು ಮಾತನಾಡಿ ಕೆ. ಇ. ಎಯಿಂದ ನಡೆಸುತ್ತಿರುವ ಸಿ ಇ ಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಆಗಿರುವ ಅವಮಾನಕ್ಕೆ ರಾಜ್ಯ ಸರಕಾರ ನೇರ ಹೊಣೆ ಹೊರಬೇಕು…

Read More

ದಲಿತರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಸಿಎಂ ಗೆ ಇಲ್ಲ :ಜಿಗಜಿಣಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾ.ಸದಾಶಿವ ಆಯೋಗದ ವರದಿಯನ್ನು ಬದಿಗಿರಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತ ಬಾಂಧವರಿಗೆ ನ್ಯಾಯ ಕೊಡಿಸುವ ನೈಜ ಇಚ್ಛಾಶಕ್ತಿ ಇಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಹಿಂದ ನಾಯಕ ಎಂದು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಹಿಂದ ಪರವಾದ ಯಾವ ಕಾಳಜಿಯೂ ಇಲ್ಲ. ತಾನು ಮಾಡುತ್ತಿರುವ ತಪ್ಪುಗಳನ್ನು ಮುಚ್ಚಿಹಾಕಲು ಈಗ ಜಾತಿ ಜನಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತ ಬಾಂಧವರ ಮೇಲೆ ನೈಜವಾದ ಕಾಳಜಿ ಇದ್ದಿದ್ದರೆ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುತ್ತಿದ್ದರು, ೨೦೧೨-೧೩ ರಲ್ಲಿಯೇ ನ್ಯಾ.ಸದಾಶಿವ ಆಯೋಗ ವರದಿಯನ್ನು ಸರ್ಕಾರಕ್ಕೆ ನೀಡಿದೆ, ಇನ್ನು ಅನುಷ್ಠಾನಗೊಳಿಸಬೇಕಾದ ಸರ್ಕಾರ ನಂತರ ಅಂದರೆ ೨೦೧೫ ರಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಲು ತರಾತುರಿ ಮಾಡುತ್ತಿದೆ, ಇದಕ್ಕಿಂತಲೂ ಎಷ್ಟೋ ವರ್ಷ ಪೂರ್ವ ಒಳಮೀಸಲಾತಿ ಶಿಫಾರಸ್ಸುಳ್ಳ ನ್ಯಾ.ಸದಾಶೀವ ಆಯೋಗದ ವರದಿಯನ್ನು ಏಕೆ…

Read More

ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಒತ್ತಾಯಿಸಿ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಜ್ವಲಂತ ಸಮಸ್ಯೆಯನ್ನು ನಿವಾರಿಸಬೇಕೆಂದು ಒತ್ತಾಯಿಸಿ ಮಡಸನಾಳ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ಕನ್ನೂರ ಗ್ರಾಮದ ರೈತ ಹೋರಾಟಗಾರ ಸತೀಶ ಪಾಟೀಲ ಮಾತನಾಡಿ, ಇಂದಿನ ದಿನದಲ್ಲಿ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಇದ್ದಾವೆ. ಜಲಜೀವನ ಮಿಷನ್ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ ಜಿಲ್ಲಾ ಉಸ್ತುವಾರಿ ಸಚಿವರ ತವರೂರಲ್ಲಿ ನೀರಿನ ಜ್ವಲಂತ ಸಮಸ್ಯೆ ಉಂಟಾಗಿರುವುದು ನಾಚಿಗೇಡಿತನವಾಗಿದೆ. ಸಾಕಷ್ಟು ಭಾರಿ ನೀರಿನ ತೊಂದರೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಸಚಿವರಿಗೆ ವಿನಂತಿಸಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರೇ ಕುಡಿಯೋದಕ್ಕೆ ನೀರು ಕೊಡಿ. ಇದು ನಮ್ಮ ದೌರ್ಬಾಗ್ಯವಾಗಿದೆ ಎಂದು ರೈತರು ತಮ್ಮ ಸಮಸ್ಯೆಯನ್ನು ಯಾರಿಗೂ ಹೇಳದ ಪರಿಸ್ಥಿತಿವುಂಟಾಗಿದೆ. ನಮ್ಮ ಸಚಿವರಾದ ಎಂ.ಬಿ. ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ ಇವರು ಕಾಣೆಯಾಗಿದ್ದಾರೆ. ತಮ್ಮದೇ ಸರ್ಕಾರವಿದ್ದರೂ ನೀರಿನ ಭವಣೆ ನೀಗಿಸದ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳಿಗೆ ಸದಸ್ಯರ ಸಹಮತದ ಮೂಲಕ ಅಂಗಿಕಾರ ನೀಡಲಾಯಿತು.ಗ್ರಾ.ಪಂ. ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೆ. ಎಸ್. ತಳ್ಳಿ (ಘೂಳನ್ನವರ) ಮಾತನಾಡಿ, ಗ್ರಾಮದಲ್ಲಿ ಡೆಂಗ್ಯು, ಮಲೇರಿಯಾ ರೋಗಾಣುಗಳು ಹಲವರಲ್ಲಿ ಕಂಡುಬಂದಿದ್ದು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ, ಬಾಳಪ್ಪಾ ಗಡೆಪ್ಪನವರ ಮಾತನಾಡಿ ಸಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಇಲಾಖೆ ಆಸ್ಪತ್ರೆಗಳಿಗೂ ಅನುದಾನ ನೀಡಲಾಗುತ್ತದೆ. ಆ ಹಣ ಯಾವ ಕಾರ್ಯಗಳಿಗೆ ಖರ್ಚು ಮಾಡುತ್ತೀರಿ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ವೈದ್ಯಾಧಿಕಾರಿಗಳು ಸದರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗಕ್ಕೆ ನಿಯೋಜನೆ ಗೊಂಡಿದ್ದು ಮಿಕ್ಕ ವಿಚಾರಗಳು ನನ್ನ ಸುಪರ್ದಿಗೆ ಬರುವುದಿಲ್ಲವೆಂದರು. ಆಶ್ರಯ ಯೋಜನೆಗಳ ಫಲಾನುಭವಿಗಳ ಮನೆ ನಿರ್ಮಾಣದ ಬಿಲ್ ಬಾಕಿ ಹಣ ಹಾಗೂ ವಯಕ್ತಿಕ ಶೌಚಾಯಲಗಳ ಸಹಾಯಧನ ಇನ್ನೂ ಬಂದಿಲ್ಲ ಈ ಕುರಿತು…

Read More