Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಿಂತನೆ- ಡಾ.ಸಾವಿತ್ರಿ ಕಮಲಾಪೂರಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಹಸಿಮಸಿ ಕೃಷಿ ವಾಣಿಜ್ಯ ಮುಂತಾದಕಾಯಕವ ಮಾಡಿಭಕ್ತರ ಪಡುಗ , ಪಾದತ್ತ್ರಾನ, ಪಹರಿ, ಬಾಗಿಲು, ಬೊಕ್ಕಸ, ಬಿಯಗ ಮುಂತಾದ ಕಾಯಕಂ ಮಾಡಿಕೊಂಡುವ್ರತಕ್ಕೆ ಊಣೆಯವಿಲ್ಲದೆ ಮಾಡುವ ಕೃತ್ಯಕ್ಕೆ ಕಡೆಯಾಗದೆಈ ಭಕ್ತನ ಅಂಗಳ ಅವಿಮುಕ್ತಿ ಕ್ಷೇತ್ರಆತನ ಮನೆಯೆ ಆಚಾರವೇ ಪ್ರಾಣವಾದರಾಮೇಶ್ವರ ಲಿಂಗದಾಶ್ರಯ ವಚನಅಸಿ ಎಂದರೆ : ಯುದ್ಧ .ಮಸಿ ಎಂದರೆ : ಸಾಹಿತ್ಯ . ಸಂಪುಟ ೫ವಚನ ಸಂಖ್ಯೆ ೪೪೫ಅಕ್ಕಮ್ಮನವರು 12ನೇ ಶತಮಾನದ ಶರಣೆ. ಅಕ್ಕಮ್ಮನವರಿಗೆ ರೆಮ್ಮವ್ವೆ ಎಂತಲೂ ಶೋಧನೆಗಳಿಂದ ತಿಳಿದು ಬಂದಿದೆ.ಡಾಕ್ಟರ ಫ, ಗು ಹಳಕಟ್ಟಿಯವರ ಶಿವಾನುಭವ ಗ್ರಂಥ ಮಾಲೆ ಏಳೇಶ್ವರ ಲಿಂಗ ಎಂಬ ಅಂಕಿತದಲ್ಲಿ 23 ವಚನಗಳು ಸಿಕ್ಕ ಆಧಾರದ ಮೇಲೆ ಇವುಗಳನ್ನೆಲ್ಲ ಪ್ರತ್ಯೇಕಿಸಿ ಡಾಕ್ಟರ ಆರ್, ಸಿ ಹಿರೇಮಠ ಅವರು ಅಕ್ಕಮ್ಮನ ವಚನಗಳು ಎಂಬ ವಚನಗಳನ್ನು ಪ್ರಕಟಿಸಿರುವುದು ಕಂಡು ಬಂದಿದೆ. ಹೀಗಾಗಿ ಏಲೇಶ್ವರದ ಕೇತಯ್ಯ ಮತ್ತು ಎಲೇಶ್ವರದ ಅಕ್ಕಮ್ಮ ಇವರಿಬ್ಬರೂ ದಂಪತಿಗಳೇ ಎನ್ನುವ, ಸಂಶೋಧನೆಯು ಮುಂದುವರಿಯಬೇಕಾಗಿದೆ.ಸ್ಥಳ :- ಯಾದಗಿರಿ ಜಿಲ್ಲೆ ಏಳೇರಿಕಾಯಕ:- ಕೃಷಿ ಕಾಯಕಅಂಕಿತನಾಮ:-…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ದ್ಯಾಮವ್ವ ದೇವಿ ಮತ್ತು ದುರ್ಗಾ ಮಾತೆಯ ಉಡಿತುಂಬುವ ಕಾರ್ಯಕ್ರಮವನ್ನು ಆದ್ದೂರಿಯಾಗಿ ಆಚರಿಸುವ ಸಲುವಾಗಿ ದೇವಸ್ಥಾನದ ಸಭಾಂಗಣದಲ್ಲಿ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.ಪ್ರತಿ ವರ್ಷದಂತೆ ನಡೆಯುವ ದೇವತೆಗಳ ನಮ್ಮೂರ ಉತ್ಸವವನ್ನು ಬರುವ ಮೇ ತಿಂಗಳ ೧೨,/೧೩/೧೪ ಮೂರು ದಿನಗಳ ಕಾಲ ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವದು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಬೆಳ್ಳುಬ್ಬಿ ತಿಳಿಸಿದರು.ಮೇ ತಿಂಗಳ ೧೨ ಸೋಮವಾರ ದಿವಸ ರಾಜ್ಯ ಮಟ್ಟದ ಕ್ರಷಿ ಮೇಳ ರೈತರ ಜಾತ್ರೆಯ ಉದ್ಘಟನೆ ಮತ್ತು ವಿಚಾರ ಸಂರ್ಕೀಣ ೧೩ ಮಂಗಳವಾರ ದೇವಿಗೆ ಉಡಿ ತುಂಬುವದು. ವಿವಿಧ ಕ್ಷೇತ್ರದಲ್ಲಿ ಉನ್ನತ ಹುದ್ದೆ ಹೊಂದಿದ ಸಾಧನೆ ಮಾಡಿದ ಕೊಲ್ಹಾರ ಪಟ್ಟಣದ ವಿಧ್ಯಾರ್ಥಿಗಳನ್ನು ನಾಗರಿಕರನ್ನು ಗೌರವಿಸಲಾಗುವದು.ಮತ್ತು ರಾತ್ರಿ ೧೦/೩೦ ಕ್ಕೆ ವಿಜಯನಗರ ಜಿಲ್ಹೆಯ ಕೂಡ್ಲಗಿ ತಾಲೂಕಿನ ಹೀರೆಹೆಗಡ್ಯಾಳ ಗ್ರಾಮದ ಕಲಾಭಾರತಿ ಕಲಾ ಸಂಘದವರಿಂದ ರಕ್ತ ರಾತ್ರಿ ಎಂಬ ಪೌರಾಣಿಕ ನಾಟಕ ಇರುವದು.ದಿನಾಂಕ ೧೪ ಬುಧವಾರ ಕ್ರಷಿ ಕ್ಷೇತ್ರದಲ್ಲಿ ಉತ್ತಮ…
ಚರ್ಚೆ ಸಮಯದಲ್ಲಿ ಸಚಿವರು ಪರಸ್ಪರ ಏರು ಧ್ವನಿಯಲ್ಲಿ ವಾಗ್ವಾದ ನಡೆಸಿಲ್ಲ ಎಂದು ಸಿಎಂ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ‘ಜಾತಿ ಗಣತಿ’ ಎಂದು ಜನಪ್ರಿಯವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಬಗ್ಗೆ ಚರ್ಚಿಸಲು ಗುರುವಾರ ಸಂಜೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಯಾರೂ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.ಕೆಲವು ಮಾಧ್ಯಮಗಳು ವರದಿ ಮಾಡಿದಂತೆ ಚರ್ಚೆಯ ಸಮಯದಲ್ಲಿ ಕೆಲವು ಸಚಿವರು ಪರಸ್ಪರ ಏರು ಧ್ವನಿಯಲ್ಲಿ ವಾಗ್ವಾದ ನಡೆಸಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.”ನಿನ್ನೆ, ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು. ಚರ್ಚೆ ಅಪೂರ್ಣವಾಗಿದೆ ಮತ್ತು ಅದನ್ನು ಇನ್ನೊಂದು ದಿನಕ್ಕೆ ಮುಂದೂಡಲಾಗಿದೆ. ಈ ವಿಷಯವನ್ನು ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಯಾರೂ ಅದನ್ನು ವಿರೋಧಿಸಿಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ಕೆಲವು ಸಚಿವರು ಪರಸ್ಪರ ಏರು ಧ್ವನಿಯಲ್ಲಿ ವಾಗ್ವಾದ ನಡೆಸಿದರು ಎಂಬ ಮಾಧ್ಯಮ ವರದಿ ಸುಳ್ಳು” ಎಂದು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದ ಬಸ್ ನಿಲ್ದಾಣ ಮುಂಭಾಗ ದೆಹಲಿಯಲ್ಲಿ ಗುರುವಾರ ಹೃದಯಾಘಾತದಿಂದ ವೀರಮರಣ ಹೊಂದಿದ್ದ ಯೋಧ ಶ್ರೀಶೈಲ ಯಮನಪ್ಪ ಹಿರೋಡಗಿ (೫೪) ಅವರ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ, ಆಪ್ತರ, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಯೋಧನ ಪಾರ್ಥಿವ ಶರೀರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನೆರವೇರಿತು. ಮೆರವಣಿಗೆಯುದ್ದಕ್ಕೂ ದೇಶದ ಭಾವುಟ ರಾರಾಜಿಸಿದವು. ದೇಶಭಕ್ತಿಗೀತೆಗಳು ಮೊಳಗಿದವು. ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.೧೯೯೦ರ ಡಿಸೆಂಬರ ೧೨ ರಂದು ತಮ್ಮ ೧೯ ನೇ ವಯಸ್ಸಿನಲ್ಲಿ ಸಿಆರ್ಪಿಎಫ್ ಸೇನೆಗೆ ಸೇರ್ಪಡೆಗೊಂಡಿದ್ದ ಯೋಧ ಶ್ರೀಶೈಲ ಹಿರೋಡಗಿ ಅವರು ಹೈದರಾಬಾದ, ಜಮ್ಮು ಮತ್ತು ಕಾಶ್ಮೀರ, ಪಂಜಾಬ, ಆಸ್ಸಾಂ, ತ್ರಿಪುರ, ಮಣಿಪುರದಲ್ಲಿ ಕಳೆದ ೩೪ ವರ್ಷದಿಂದ ಸಿಆರ್ಪಿಎಫ್ನ ಎಸ್ಐ ,ಕ್ವಾಟರ್ ಮಾಸ್ಟರ್ಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಧ್ಯ ದೆಹಲಿಯಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಕರ್ತವ್ಯದ ಸಮಯದಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಶರಣಕ್ಷೇತ್ರ ವಡವಡಗಿ ಗ್ರಾಮದ ನಂದಿಮಠದ ಗುರುವೀರಸಿದ್ದ ಶಿವಯೋಗಿಗಳವರ ೭೫ ನೇ ಜಾತ್ರಾಮಹೋತ್ಸವ ಹಾಗೂ ಲಿಂ. ಮಲ್ಲಿಕಾರ್ಜುನ ಸ್ವಾಮೀಜಿಯವರ ತೃತೀಯ ಪುಣ್ಯಾರಾಧನೆಯಂಗವಾಗಿ ಏ.೧೯ ರಂದು ಸಂಜೆ ೭ ಗಂಟೆಗೆ ಶಿವಾನುಭವ ಚಿಂತನ ಹಾಗೂ ರಾಜ್ಯಮಟ್ಟದ ನಂದಿಸಿರಿ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದೆ. ಸಮಾರಂಭವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಶಾಸಕರಾದ ರಾಜುಗೌಡ ಪಾಟೀಲ,ಅಶೋಕ ಮನಗೂಳಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ಶರಣಪ್ಪ ಸುಣಗಾರ ಆಗಮಿಸುವರು. ಸಾನಿಧ್ಯವನ್ನು ಶಿರಹಟ್ಟಿಯ ಜಗದ್ಗುರು ಫಕೀರ ಸಿದ್ದರಾಮ ಸ್ವಾಮೀಜಿ, ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಸಿದ್ದಲಿಂಗ ಸ್ವಾಮೀಜಿ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ಕಲಕೇರಿಯ ಮಡಿವಾಳೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ವಹಿಸುವರು. ಅಧ್ಯಕ್ಷತೆಯನ್ನು ವೀರಸಿದ್ದ ಸ್ವಾಮೀಜಿ ವಹಿಸುವರು.ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಹಚ್ಯಾಳದ ಶಾಂತಪ್ಪ ನಾಗಪ್ಪ ಶಿರಶ್ಯಾಡ, ಶಿಕ್ಷಣ ಕ್ಷೇತ್ರದಲ್ಲಿ ವಿಜಯಪುರದ ಎನ್.ಎಂ.ಬಿರಾದಾರ, ಸಮಾಜ ಸೇವೆಗೆ ಬಸವನ ಬಾಗೇವಾಡಿಯ ಈರಣ್ಣ ಪಟ್ಟಣಶೆಟ್ಟಿ, ಸಾಹಿತ್ಯ ಕ್ಷೇತ್ರದಲ್ಲಿ ವಿಜಯಪುರದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆಯುತ್ತಿರುವ ಶಿರಾಡೋಣ ಲಿಂಗಸೂರು ಕಾಮಗಾರಿಯ ಭಾಗವಾಗಿರುವ ಡಿವೈಡರ್ ಕಾಮಗಾರಿಯು ಅತ್ಯಂತ ಕಳಪೆಯಾಗಿದ್ದು, ಕಾಮಗಾರಿಯ ಗುಣಮಟ್ಟವನ್ನು ಸಂಪೂರ್ಣವಾಗಿ ಪರಿಶೀಲಿಸಿ, ಅಂದಾಜು ಪತ್ರಿಕೆಯಲ್ಲಿರುವಂತೆ ಸರಿಪಡಿಸುವವರೆಗೆ ಈ ಕಾಮಗಾರಿಯ ಬಿಲ್ ನೀಡಬಾರದು ಎಂದು ಯುವ ಮುಖಂಡ ವಿರೇಶ ಆಲಕೊಪ್ಪರ ಇಲ್ಲಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಪತ್ರ ಬರೆದಿದ್ದಾರೆ.ಪತ್ರದ ಪ್ರತಿಯನ್ನು ಪತ್ರಿಕೆಗೆ ನೀಡಿ ಮಾತನಾಡಿದ ಅವರು ಕಾಮಗಾರಿ ನಡೆಯುವ ಸ್ಥಳದಲ್ಲೇ ಗಮನಿಸುತ್ತಿದ್ದ ನನ್ನ ಕಣ್ಣ ಮುಂದೆಯೇ ಕಾಮಗಾರಿಗೆ ಬಳಸಬೇಕಾದ ಸಿಮೆಂಟ್ ಬ್ಯಾಗ್ಗಳನ್ನು ಕಡಿಮೆ ಪ್ರಮಾಣದಲ್ಲಿ ಬಳಸಲಾಯಿತು. ಈ ಬಗ್ಗೆ ಕಾರ್ಮಿಕರನ್ನು ಪ್ರಶ್ನಿಸಲಾಗಿ ನಮಗೆ ಇಷ್ಟೇ ಪ್ರಮಾಣದಲ್ಲಿ ಬಳಸುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ನನ್ನಲ್ಲಿ ವಿಡಿಯೋ ದಾಖಲೆಗಳು ಇವೆ. ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆಸುವಾಗ ಯಾರೊಬ್ಬ ಅಧಿಕಾರಿ ಸ್ಥಳದಲಲಿ ಇರಲಿಲ್ಲ. ಈ ಬಗ್ಗೆ ಪಿಡಬ್ಲೂಡಿ ಅಧಿಕಾರಿ ಶಿವನಗುತ್ತಿ ಅವರಿಗೂ ಸಹ ಫೋನ್ ಮೂಲಕ ದೂರಿದ್ದೇನೆ. ತನಿಖೆ ನಡೆಸದೇ ಬಿಲ್ ನೀಡಿದಲ್ಲಿ ಲೋಕಾಯುಕ್ತಕ್ಕೆ ದೂರಿ ತಪ್ಪಿತಸ್ಥರಿಗೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸಮಾಜದ ಅಗತ್ಯಗಳನ್ನು ಗುರುತಿಸಿ ಅವುಗಳನ್ನು ಕಾರ್ಯರೂಪಕ್ಕೆ ತರವಲ್ಲಿ ಇಂದಿನ ಯುವಕರ ಪಾತ್ರ ಮುಖ್ಯವಾಗಿದೆ. ಎನ್ಎಸ್ಎಸ್ ಶಿಬಿರದ ಉದ್ದೇಶ ಮುಖ್ಯ ಉದ್ದೇಶ ಯುವಕರಲ್ಲಿ ದೇಶಾಭಿಮಾನ ಹಾಗೂ ಶ್ರಮ ಜೀವನದ ಕುರಿತು ಅರಿವು ಮೂಡಿಸುವುದಾಗಿದೆ ಎಂದು ಮುಖ್ಯ ಅತಿಥಿ, ಉಪನ್ಯಾಸ ಸದಾನಂದ ಈರನಕೇರಿ ಮಾತನಾಡಿದರು.ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಹಾಗೂ ಬಿ ಎಲ್ ಡಿ ಇ ಸಂಸ್ಥೆಯ ಸಿದ್ದೇಶ್ವರ ಶಿಕ್ಷಕರ ತರಬೇತಿ ಕೇಂದ್ರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಏಳು ದಿನಗಳ ವಿಶೇಷ ಶಿಬಿರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್ಎಂ ಶೆಟ್ಟೆಣ್ಣವರ್ ಹಾಗೂ ರಮೇಶ್ ದಾಯಗೋಡೆ ಪಿಕೆಪಿಎಸ್ ಸದಸ್ಯರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಎಸ್ ಎಸ್ ಈರನಕೇರಿ, ಉಪನ್ಯಾಸಕ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಧೇಯ ಉದ್ದೇಶಗಳನ್ನು ಕುರಿತು ಮಾತನಾಡುತ್ತಾ, ಎನ್ಎಸ್ಎಸ್ ಯೋಜನೆಯೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ಶತಮಾನೋತ್ಸವದ ನಿಮಿತ್ಯವಾಗಿ 1969…
ಉದಯರಶ್ಮಿ ದಿನಪತ್ರಿಕೆ ಇಂಡಿ: ಸಾಲೋಟಗಿಯ ಶ್ರೀ ಶಿವಯೋಗೀಶ್ವರರ ಜಾತ್ರೆ ಕುರಿತು ಗುರುವಾರ ರಾತ್ರಿ ನೀರಾಟ ನಡೆಯಿತು.ಹಿನ್ನೆಲೆ – ಶ್ರೀ ಶಿವಯೋಗೀಶ್ವರರ ಮಾತಾ ಪಿತ್ರಗಳ ಅಭಿಪ್ಸೆಯ ಮೇರೆಗೆ ಶಿವಯೋಗೀಶ್ವರರ ಮದುವೆಯು ಗಂಗಾಂಬಿಕೆಯೊಂದಿಗೆನಡೆಯುವ ಸಂದರ್ಭದಲ್ಲಿ ಮದುವೆ ಜೋಡಿಯನ್ನು ಸುರಿಗೆ ಸುತ್ತಿ ವಧು ವರರ ಮೇಲೆ ಸುರಿಗೆ ನೀರನ್ನು ಹಾಕುವಾಗ ಅಜನ್ಮ ಬ್ರಹ್ಮಚಾರಿಗಳಾದ ಶಿವಯೋಗೀಶ್ವರರು ಮದುವೆಯನ್ನು ನಿರಾಕರಿಸಿ ಮದುವೆ ಮಂಟಪದಿಂದ ಹೊರ ಹೋಗುತ್ತಾರೆ. ದಾಂಪತ್ಯದ ಸಂಬಂಧ ಬಿಟ್ಟು ಶಿವಯೋಗೀಶ್ವರ ಹೋಗಬೇಡೆಂದು ಕಳಸಿಗಳಲ್ಲಿ ತುಂಬಿದ ಸುರಿಗೆ ನೀರನ್ನು ಎರಚುತ್ತಾರೆ. ಶಿವಯೋಗಿಶ್ವರರು ಅಲ್ಲಿಂದ ದೂರ ಹೋಗಲಾಗಿ ಸುರುಗೆ ನೀರು ಗಂಗಾಂಬಿಕೆಯ ಮೇಲೆಮಾತ್ರ ಬಿಳುತ್ತದೆ. ಈ ಸನ್ನಿವೇಶವೇ ನೀರಾಟದ ರೂಪದಲ್ಲಿ ಧಾರ್ಮಿಕ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಕೇತವಾಗಿದೆ.ಗುರುವಾರ ಒಳಗಿನ ಗುಡಿಯಿಂದ ಶಿವಯೋಗೀಶ್ವರರ ಉತ್ಸವ ಮೂರ್ತಿಯನ್ನು ಭವ್ಯ ಮೆರವಣೆಗೆಯಲ್ಲಿ ಹೊರಗಿನ ಗುಡಿಗೆ ಒಯ್ದು ಗದ್ದುಗೆಯಲ್ಲಿ ಕೂಡಿಸಿದ ನಂತರ ಸರಿಯಾಗಿ ರಾತ್ರಿ ಒಂದು ಗಂಟೆಗೆ ನೀರಾಟ ಪ್ರಾರಂಭವಾಯಿತು. .ಗಂಗಾಂಬಿಕೆಯನ್ನು ಸಂಕೇತಿಸುವ ಗಂಗಮ್ಮನ ಬಿಂದಿಗೆಯ ಬಾಯಿಯನ್ನು ಶ್ರೀಗಂಧದ ನೀಳವಾದೆಲೆಯುಕ್ತ ಚಬಕಿಗಳಿಂದೊಂದು ಹನಿ ನೀರೂ ಒಳಿಯದಂತೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಬಂಗಾರ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ, ಯುವಕ ಯುವತಿಯರು ಅತಿ ಕಡಿಮೆ ಸಂಬಳದಲ್ಲಿ ದುಡಿಯುತ್ತಿರುವದು, ಸೇರಿದಂತೆ ಹಲವಾರು ಸಮಸ್ಯೆಯಲ್ಲಿ ಯುವಕರು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡರೆ ಕುಟುಂಬದ ಅರ್ಥ ವ್ಯವಸ್ಥೆ ಸರಿದೂಗಿಸುವಲ್ಲಿ ಮುಖ್ಯ ಪಾತ್ರ ವಹಿಸಿದಂತಾಗುತ್ತದೆ ಈ ದಿಶೆಯಲ್ಲಿ ವಿದ್ಯಾವಂತ ಯುವಕರು ಮುಂದಾಗಬೇಕು ಎಂದು ಯರನಾಳದ ಸಂಗನಬಸವ ಶ್ರೀಗಳು ಹೇಳಿದರು.ತಾಲೂಕಿನ ಲಚ್ಯಾಣ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶಂಕರಲಿಂಗ ಜಾತ್ರಾ ಮಹೋತ್ಸವ ಮತ್ತು ಹನುಮಾನ ಗುಡಿಯ ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಾಲ ಶೂಲ ಮಾಡಿ ದುಂದು ವೆಚ್ಚ ಮಾಡದೇ ಯಾವದೇ ಜಾತಿ ಮತ ಪಂಥ ಎನ್ನದೇ ಹತ್ತಾರು ಪೂಜ್ಯರು ಸಾವಿರಾರು ಜನರು, ರಾಜಕೀಯ ಮುತ್ಸದ್ದಿಗಳು ಮತ್ತು ಸತ್ಪುರುಷರ ಬಂಧು ಬಳಗ ಮಧ್ಯೆ ನಡೆಯುವ ವಿವಾಹ ಶ್ರೇಷ್ಠ ಮದುವೆ ಎಂದರು.ನಿವೃತ್ತ ಪ್ರಾಚಾರ್ಯ ಎ.ಪಿ.ಕಾಗವಾಡಕರ, ಹಣಮಂತ ಕಾಗವಾಡ ಮಾತನಾಡಿದರು.ಇದೇ ವೇಳೆ ಸಾಮೂಹಿಕ ವಿವಾಹ ವಧು ವರರಿಗೆ ಬಟ್ಟೆ ಸೇವೆ ನೀಡಿದ ಶ್ರೀಮತಿ ಮಂಗಲಾಬಾಯಿ ಶ್ರೀ ಜೀವನದಾಸ ಶಹಾ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ತಾಲ್ಲೂಕಿನ ಹಿರೇರೂಗಿ ಗ್ರಾಮದ ಬೆಳ್ಳಿಹಳ್ಳ ವಸ್ತಿಯ ಜಟ್ಟಿಂಗೇಶ್ವರ ದೇವಸ್ಥಾನದಲ್ಲಿ ಏ- 20 ಬೆಳಿಗ್ಗೆ 11 ಘಂಟೆಗೆ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಭಗೀರಥ ಮಹರ್ಷಿ (ಉಪ್ಪಾರ) ತಾಲ್ಲೂಕು ಸಂಘದ ಅಧ್ಯಕ್ಷ ಸುರೇಶ ಕರಂಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಭಗೀರಥ ಮಹರ್ಷಿ ಕೇವಲ ಒಂದು ಸಮುದಾಯಕ್ಕೆ ಸೀಮಿತರಲ್ಲ. ಭಾರತ ಕಂಡ ಮಹಾನ್ ಚಕ್ರವರ್ತಿಗಳಲ್ಲಿ ಸಗರ ಚಕ್ರವರ್ತಿಯ ವಂಶದ ಭಗೀರಥ ಮಹರ್ಷಿಯು ತನ್ನ ಘೋರ ತಪಸ್ಸಿನಿಂದ ಗಂಗೆಯನ್ನು ಭೂಮಿಗೆ ತಂದ ಮಹಾನ್ ಶಕ್ತಿ. ಆ ಕಾರಣಕ್ಕಾಗಿ ಉಪ್ಪಾರ ಸಮಾಜದ ರಾಜಕೀಯ ಮುಖಂಡರು, ಯುವ ನಾಯಕರು, ಸಮಾಜದ ಚಿಂತಕರು, ಮಹಿಳಾ ಸಂಘದ ಪದಾಧಿಕಾರಿಗಳು, ಅಭಿಮಾನಿಗಳು ಸೇರಿದಂತೆ ಎಲ್ಲರೂ ಭಾಗವಹಸಿ ತಮ್ಮ ಸಲಹೆ ಸೂಚನೆ ನೀಡಲು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ.
