Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ದಿಗಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ರಕ್ತದಾನ ಶಿಬಿರಕ್ಕೆ ಶ್ರೀ ಕಲ್ಲಿನಾಥ ದೇವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಶ್ರೀಗಳು, ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ, ಆರೋಗ್ಯವಂತರು ರಕ್ತದಾನ ಮಾಡುವುದರಿಂದ ಮಹಿಳೆಯರಿಗೆ, ಮಕ್ಕಳಿಗೆ, ಬಾಣಂತಿಯರಿಗೆ ಮತ್ತು ಅಪಘಾತವಾದವರಿಗೆ ಹೀಗೆ ಹಲವರಿಗೆ ತ್ವರಿತ ರಕ್ತ ಬೇಕಾದಲ್ಲಿ ಸಹಾಯವಾಗುತ್ತದೆ ಇಂತಹ ಕಾರ್ಯಕ್ರಮ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡಿದ್ದು ಬಹಳ ಮಹತ್ವದ್ದು ಎಂದು ತಿಳಿಸಿದರು. ರಕ್ತದಾನ ಶಿಬಿರದಲ್ಲಿ ಆಯುಷ್ ವೈದ್ಯಾಧಿಕಾರಿ ಡಾಕ್ಟರ್ ಎಸ್.ಎಂ. ಪಾಟೀಲ ಮಾತನಾಡಿ ರಕ್ತದಾನದ ಮಹತ್ವ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ರಕ್ತದಾನ ಮಾಡುವ ಶಿಬಿರಾರ್ಥಿಗಳಿಗೆ ರಕ್ತದಾನಿಗಳಿಗೆ ತಿಳಿಸಿದರು. ರಕ್ತದಾನ ಶಿಬಿರದಲ್ಲಿ ಆರ್.ಕೆ. ಯಾತನೂರ, ಎಲ್.ಎಲ್. ಕಟಗಿ, ಅಶೋಕ ಕೊಲ್ಹಾರ, ಜಗದೀಶ ಬಿ, ಸವಿತಾ ದೊಡ್ಡಮನಿ, ಆಶಾಬಿ ವಾಲಿಕಾರ, ಮಲ್ಲಪ್ಪ ಗಣಿ, ಹಾಗೂ ನೂರಾರು ಭಕ್ತಾದಿಗಳು ಹಾಜರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ : ಪಟ್ಟಣದ ಆಡಳಿತ ಸೌಧ ಆವರಣದಲ್ಲಿ ಸಂವಿದಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರರವರ ಪೂರ್ತಿ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಘಟನೆ ಭೀಮವಾದದ ಕಾರ್ಯಕರ್ತರು ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತçದ ಮತ್ತು ತಹಸೀಲ್ದಾರ ಬಿ.ಎಸ್. ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು.ರಾಜಧಾನಿ ಬೆಂಗಳೂರಿನ ವಿಧಾನಸೌಧ ಎದುರು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ರವರ ಪುತ್ಥಳಿ ಪ್ರತಿಸ್ಥಾಪಿಸಿ ವಿಧಾನಸೌಧಕ್ಕೆ ಮೆರಗು ಬಂದಿದೆ.ಅದೇ ಮಾದರಿಯಲ್ಲಿ ಪಟ್ಟಣದ ಆಡಳಿತಸೌಧದಲ್ಲಿ ಪ್ರತಿಷ್ಠಾಪಿಸಲು ಆಗ್ರಹಿಸಿದರು.ಮಲ್ಲು ಮಡ್ಡಿಮನಿ, ವಿಕಾಸ ಗುಡಿಮನಿ, ಅಂಬಣ್ಣಾ ರಾಂಪೂರ, ಸಿದರಾಮ ಕೆಂಗಾರ, ಚನ್ನಪ್ಪ ನಡಗಡ್ಡಿ, ಚಂದಪ್ಪ ಸಿಗಣಾಪುರ, ಸಮರ್ಥ ಕೋಳೆಕರ, ಲಕ್ಷ್ಮಣ ಗುಂದವಾನ, ಸಂತೋಷ ಬೋವಿ, ಪ್ರಕಾಶ ಕಾಂಬಳೆ, ಈಶ್ವರ ಮನಗೂಳಿ, ನಾಗರಾಜ, ಬಾಬು ಪವಾರ ಮತ್ತಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ತಡವಲಗಾ ಗ್ರಾಮಕ್ಕೆ ನೀರನ್ನು ಕಾಲುವೆ ನೀರಿನಿಂದ ತುಂಬುತ್ತಿದ್ದು ರೈತರು ಕೃಷಿ ಪಂಪುಶೆಟ್ಟು ಬಳಸಿ ಮತ್ತು ಕಾಲುವೆ ಒಡೆದು ನೀರು ಹೊಲಗಳಿಗೆ ಮತ್ತು ವಾಲ್ ತಿರುಗಿಸಿ ಹಳ್ಳಕ್ಕೆ ಬಿಟ್ಟು ಅಲ್ಲಿಂದ ಕೃಷಿಗೆ ಬಳಸುತ್ತಿದ್ದಾರೆ ಎಂದು ಭಾರತೀಯ ಕಿಸಾನ ಸಂಘದ ರೈತರು ಪ್ರತಿಭಟನೆ ನಡೆಸಿ ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತçದ ಮತ್ತು ತಹಸೀಲ್ದಾರ ಬಿ.ಎಸ್.ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು.ಕಾಲುವೆ ನೀರು ದುರುಪಯೋಗವಾದರೆ ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಮತ್ತು ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಯಾಗುತ್ತದೆ ಎಂದು ಗುರುನಾಥ ಬಗಲಿ ಆರೋಪಿಸಿದ್ದಾರೆ.ಕೂಡಲೇ ವಿಶೇಷ ಪೋಲಿಸ ವ್ಯವಸ್ಥೆ ಮಾಡಿ ನೀರು ಪೋಲಾಗದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ,ಪ್ರತಿಭಟನೆಯಲ್ಲಿ ಈರಣ್ಣಾ ಗೋಟ್ಯಾಳ, ಶರಣು ಶಹಾಪುರ, ಸಂತೋಷ ಸುರಾಗಡ್ಡೆ, ರಾಜು ಆನೂರ ಮತ್ತಿತರಿದ್ದರು.ಎಸಿಯವರು ಮಾತನಾಡಿ ಸೂಕ್ತ ಪೋಲಿಸ ಭದ್ರತೆ ನೀಡಿ ಕೃಷ್ಣಾ ಕಾಲುವೆಯವರಿಗೆ ನೀರು ಪೋಲಾಗದಂತೆ ಕ್ರಮ ವಹಿಸಲು ತಿಳಿಸುವದಾಗಿ ತಿಳಿಸಿದರು.
ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀವು ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಕೇವಲ ಮುಸಲ್ಮಾನರ ಮುಖ್ಯಮಂತ್ರಿಗಳೋ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.ವಿಜಯಪುರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ವಿಜಯಪುರಕ್ಕೆ ತಲುಪಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಂ ಹೆಣ್ಣುಮಕ್ಕಳಿಗೆ ವಿದೇಶದಲ್ಲಿ ಕಲಿಯಲು ದೊಡ್ಡ ಪ್ರಮಾಣದಲ್ಲಿ ಶಿಷ್ಯವೇತನ, ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ ಎಲ್ಲವೂ ನೋಡಿದರೆ ನೀವು ಕೇವಲ ಮುಸ್ಲಿಂರ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರ ವರ್ತನೆ ಇದೆ ಎಂದರು.ಹಿಂದೂ ಬಾಂಧವರಲ್ಲಿ ಬಡ ಹೆಣ್ಣು ಮಕ್ಕಳು ವಿದೇಶಕ್ಕೆ ಹೋಗಿ ವ್ಯಾಸಾಂಗ ಮಾಡಬಾರದೇ? ಎಂದು ಪ್ರಶ್ನಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಇರುವುದನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗುಂಡಿಗೆ ಗಟ್ಟಿ ಇದ್ದರೆ ವಿಜಯಪುರಕ್ಕೆ ಬಂದು ನೋಡಿ ಎಂದು ಸವಾಲು ಹಾಕಿದರು.ಬೆಲೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿಜಯಪುರ ತಾಲೂಕಿಗೆ ಸಂಬಂಧಿಸಿದಂತೆ ಮೆಟ್ರಿಕ್ ನಂತರದ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಬಾಲಕಿಯರ ಹಾಗೂ ಬಾಲಕರ ಎರಡು ವಸತಿ ನಿಲಯಕ್ಕೆ ತಲಾ ೧೦೦ ಸಂಖ್ಯಾಬಲಕ್ಕೆ ಅನುಗುಣವಾಗಿ ಹತ್ತು ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯವುಳ್ಳ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.ವಸತಿ ನಿಲಯಕ್ಕಾಗಿ ಬಾಡಿಗೆ ಕಟ್ಟಡ ಒದಗಿಸಲು ಆಸಕ್ತಿ ಇರುವ ಕಟ್ಟಡ ಮಾಲೀಕರು ದಿನಾಂಕ: ೨೮-೦೪-೨೦೨೫ ರೊಳಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ. ದೇವರಾಜ್ ಅರಸು ಭವನ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ ಕನಕದಾಸ ಬಡಾವಣೆ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೫೨-೨೬೭೯೯೩, ಮೊಬೈಲ್ ೯೬೧೧೫೧೮೪೭೬ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಯಾಳವಾರ ಗ್ರಾಮದ ಶ್ರೀಸೋಮೇಶ್ವರ, ನವಕೋಟೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ.ದಿ.೧೮ ರಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಗೆ ರುದ್ರಾಭಿಷೇಕ ಹಾಗೂ ಶ್ರೀಸೋಮೇಶ್ವರನಿಗೆ ಪ್ರಜಾಪತಿ ಸುವರ್ಣ ಬಂಡಿಮಠ ಜಮಖಂಡಿ ಇವರಿಂದ ವಿಶೇಷ ಬುತ್ತಿ ಅಲಂಕಾರ ಪೂಜೆ. ನಂತರ ೧೦ ಗಂಟೆಗೆ ಪಲ್ಲಕ್ಕಿ ಉತ್ಸವದೊಂದಿಗೆ ಅಗ್ನಿಪ್ರವೇಶ. ಇದೇ ಸಂದರ್ಭದಲ್ಲಿ ೧೧ ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ, ರಕ್ತ ಭಂಡಾರನಿಧಿ ವಿಜಯಪುರ ಹಾಗೂ ಶರಣಮ್ಮಗೌಡತಿ ನಾಡಗೌಡ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ ಆರಂಭಗೊಳ್ಳಲಿದೆ. ನಂತರ ಮಹಾಪ್ರಸಾದ ಜರುಗಲಿದೆ.ಸಾಯಂಕಾಲ ೫.೦೦ ಗಂಟೆಗೆ ಮಹಾರಥೋತ್ಸವ ಜರುಗಲಿದೆ. ರಾತ್ರಿ ಒಡಹುಟ್ಟಿದವರು ಎಂಬ ಸುಂದರ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ.ದಿ.೧೯ ಶನಿವಾರದಂದು ಬೆಳಿಗ್ಗೆ ೧೦ ಗಂಟೆಗೆ ಸಂಗ್ರಾಣಿ, ಗುಂಡುಕಲ್ಲು, ಧಾನ್ಯದ ಚೀಲ ಭಾರ ಎತ್ತುವ ಸ್ಪರ್ಧೆಗಳು ಜರುಗಲಿದ್ದು ಪ್ರಥಮ ಸ್ಥಾನ ಪಡೆದವರಿಗೆ ೧೦ ತೊಲಿ ಬೆಳ್ಳಿ ಖಡೆ ಹಾಗೂ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದಲ್ಲಿ ನಡೆದ ಶ್ರೀಶೈಲ ಮಲ್ಲಿಕಾರ್ಜುನನ ಐದೇಶಿ ಜಾತ್ರಾ ಮಹೋತ್ಸವದಲ್ಲಿ ಜಾತ್ರೆಗೆ ಬಂದ ಭಕ್ತಾದಿಗಳಿಗೆ ಗ್ರಾಮದ ಅಂಜುಮನ್ ಇಸ್ಲಾಂ ಸಮೀತಿಯ ವತಿಯಿಂದ ಶರಬತ್ ಹಾಗೂ ಪಾನೀಯ ವ್ಯವಸ್ಥೆಯನ್ನು ಮಾಡಿ ಮುಸ್ಲಿಮ ಸಮುದಾಯದವರು ಸೌಹಾರ್ದತೆ ಮೆರೆದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನನ ಜಾತ್ರಾ ಮಹೋತ್ಸವದ ಅಂಗವಾಗಿ ಹಲವಾರು ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಕೇಸರಿ ಶಾಲನ್ನು ಧರಿಸಿ ಜಾತ್ರಾ ಮಹೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.ಭಾವೈಕ್ಯತೆಗೆ ಹೆಸರಾದ ಮುಳಸಾವಳಗಿ ಗ್ರಾಮದಲ್ಲಿ ಹಜರತ್ ಮತಾಬ್ ಷಹೀದ ಜಾತ್ರಾ ಮಹೋತ್ಸವವನ್ನು ಗ್ರಾಮಸ್ಥರು ಎಲ್ಲರೂ ಸೇರಿ ಆಚರಿಸುವುದು ವಿಶೇಷ. ಜೊತೆಗೆ ಪ್ರತಿ ವರ್ಷ ರಮಜಾನ್ ಮಾಸಾಚರಣೆಯ ಸಂದರ್ಭದಲ್ಲಿ ಹಿಂದು ಸಮುದಾಯದವರು ಉಪಾಹಾರ ಹಾಗೂ ತಂಪು ಪಾನೀಯ, ಹಣ್ಣುಗಳ ವ್ಯವಸ್ಥೆಯನ್ನು ಮಾಡುತ್ತಾರೆ.ಅಂಜುಮನ್ ಇಸ್ಲಾಂ ಸಮಿತಿಯ ರಜಾಕ ಮುಜಾವರ, ಕಲಶಾ ಮಕಾನದಾರ, ಸಾಹೇಬ ಹುಸೇನ ಮುಲ್ಲಾ, ಇಸ್ಮಾಯಿಲ್ ಪಠಾಣ, ದಾವುಲ್ ಇನಾಮದಾರ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಶರಣಗೌಡ ಬಿರಾದಾರ, ಜಿ.ಪಿ.ಬಿರಾದಾರ, ಬಿ.ಎಸ್.ಪೊಲೇಶಿ,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಿರ್ವಹಣಾ ಕಾರ್ಯದ ನಿಮಿತ್ಯ ಪಟ್ಟಣದ ಕುಂಬಾರ ಓಣಿ ಮತ್ತು ಮಟನ್ ಮಾಕೇಟ್ನಲ್ಲಿ ಏ.೧೮ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ಗಂಟೆಯವರೆಗೆ ವಿದ್ಯುತ್ ಪೂರೈಕೆ ನಿಲ್ಲಿಸುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯದಲ್ಲಿ ಬ್ರಾಹ್ಮಣ ಸಮಾಜದಲ್ಲಿ ಒಳಪಂಗಡಗಳನ್ನು ಬ್ರಾಹ್ಮಣ ಸಮಾಜದಲ್ಲಿ ಒಳಪಂಗಡಗಳನ್ನು ಬೇರ್ಪಡಿಸಿ ಜನಗಣತಿ ಮಾಡಿಸಿದೆಯೆಂದು ರಾಜ್ಯ ಸರ್ಕಾರದ ವಿರುದ್ಧ ಬ್ರಾಹ್ಮಣ ಅರ್ಗನೈಜೇಷನ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಗುಂಡು ಕುಲಕರ್ಣಿ ಹೇಳಿದರು.ಈ ವೇಳೆ ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಬ್ರಾಹ್ಮಣ ಸಮಾಜ ಕಡಿಮೆಯಿದೆ. ಆದರೆ ಅದರಲ್ಲೇ ಒಳ ಪಂಗಡಗಳನ್ನು ವಿಂಗಡಿಸಿದ್ದು ಯಾವ ನ್ಯಾಯ. ಎಲ್ಲ ಸಮಾಜದಲ್ಲೂ ಒಳ ಪಂಗಡಗಳಿವೆ. ಅದನ್ನು ಬಿಟ್ಟು ಕೆಲವು ಸಮಾಜಗಳಲ್ಲಿ ಮಾತ್ರ ಒಳ ಪಂಗಡಗಳು ತೋರಿಸಿದ್ದಾರೆ ಮತ್ತು ಹಿಂದೆ ಮಾಡಿಸಿದ ಜಾತಿ ಗಣತಿಯನ್ನು ಈಗ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕೂಡಲೇ ಜಾತಿ ಗಣತಿಯನ್ನು ಕೈ ಬಿಡಬೇಕು. ನಿಮಗೆ ಬೇಕಾದಂತೆ ಜಾತಿ ಗಣತಿ ಮಾಡಿಸಿದ್ದೇರೆಂದು ಆಕ್ರೋಶ ಹೊರಹಾಕಿದರು.ಕೂಡಲೇ ಜಾತಿ ಗಣತಿಯನ್ನು ಕೈ ಬಿಡದೆ ಹೋದರೆ ಬ್ರಾಹ್ಮಣ ಸಮುದಾಯ ಕೂಡ ಬಿದಿಗಿಳಿದು ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ ಈ ಜಾತಿ ಗಣತಿ ಪ್ರಕಾರ ೧೫,೬೪,೭೪೧ ಎಂದು ತೋರಿಸಿದ್ದಾರೆ. ಮತ್ತೆ ಅದರಲ್ಲೇ ಹವ್ಯಕ…
ವಿಜಯಪುರ ಜಿಲ್ಲಾ ದಸಂಸ ಸಂಚಾಲಕ ವಾಯ್.ಸಿ.ಮಯೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಣ ಕ್ರಾಂತಿಗೆ ಛಲತೊಟ್ಟ ಮಹಾನ್ ಚೇತನ ಡಾ.ಬಾಬಾಸಾಹೇಬ್ ಅಂಬೇಡ್ಕರ್. ಅವರ ಜೀವನ ಚರಿತ್ರೆ ಇಡೀ ವಿಶ್ವಕ್ಕೆ ಮಾದರಿ ಎಂದು ಜಿಲ್ಲಾ ದಸಂಸ ಸಂಚಾಲಕ ವಾಯ್.ಸಿ.ಮಯೂರ ಹೇಳಿದರು.ಮೋರಟಗಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡ ೧೩೪ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಕೊಲೆ, ಸುಲಿಗೆ, ಅನ್ಯಾಯ, ಅತ್ಯಾಚಾರ ಕಣ್ಣಾರೆ ಕಂಡ ಬಾಬಾಸಾಹೇಬರು ಪುಸ್ತಕವನ್ನೇ ದೇವರೆಂದು ನಂಬಿ ಕಡು ಬಡತನದಲ್ಲಿ ಬೀದಿ ದೀಪದಲ್ಲಿ ಓದುವ ಮೂಲಕ ಸಂವಿಧಾನವನ್ನು ರಚಿಸಿ ತುಳಿತಕ್ಕೆ ಒಳಗಾದ ಸಮಾಜವನ್ನು ಎತ್ತಿ ಹಿಡಿದ ಅವರ ಸಾಧನೆ ಸೂರ್ಯ ಚಂದ್ರ ಇರುವರೆಗೂ ಅಜರಾಮರ. ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಅಸ್ತಿ ಅಂತಸ್ತು ಗಳಿಸುವ ಬದಲು ನಿಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ…
