Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಬಸವ ನಗರದ ಜ್ಞಾನ ಭಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರೇಮಾ ನಾಯಕ್ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ಕೋರವಾರ ಶಾಖೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಎ.೨೬ರಂದು ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ಆಯೋಜಿಸಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಜ್ಞಾನಭಾರತಿ ಶಾಲೆಯ ಆದರ್ಶ ಶಿಕ್ಷಕಿ ಪ್ರೇಮಾ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ.ಕಳೆದ ಸುಮಾರು ಎರಡು ದಶಕಗಳಿಂದ ಜ್ಞಾನಭಾರತಿ ಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಅವರನ್ನು ಗುರುತಿಸಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಭಾಜನರಾಗಿದ್ದಾರೆ.ಅವರಿಗೆ ಜ್ಞಾನ ಭಾರತಿ ಶಾಲೆಯ ಸಹದ್ಯೋಗಿಗಳು, ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಪಾಲಕರು ಅಭಿಮಾನಿಗಳು ಶುಭ ಕೋರಿದ್ದಾರೆ.
ಇಂಡಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪುರಸಭೆ ಸದಸ್ಯರ ಆಗ್ರಹ ಉದಯರಶ್ಮಿ ದಿನಪತ್ರಿಕೆ ಇಂಡಿ: ಪುರಸಭೆಯಲ್ಲಿ ಸದಸ್ಯರ ಗಮನಕ್ಕೆ ತರದೇ ಪುರಸಭೆ ಅಧ್ಯಕ್ಷ ಹಣ ತೆಗೆಯುತ್ತಿದ್ದಾರೆ. ಯಾವದೇ ಹಣ ತೆಗೆಯುವ ಮುನ್ನ ಸದಸ್ಯರ ಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ಪುರಸಭೆ ಸದಸ್ಯರು ಒತ್ತಾಯಿಸಿದರು.ಬುಧವಾರ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.ಸಭೆಯನ್ನು ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸ್ವಾಗತಿಸಿದರು.2೦25-26 ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನ ₹ 2 ಕೋಟಿ 24 ಲಕ್ಷ ಕ್ರಿಯಾ ಯೋಜನೆ ತಯಾರಿಸಿ ಎಲ್ಲ 23 ವಾರ್ಡುಗಳಿಗೆ ಸಮರ್ಪಕವಾಗಿ ಹಂಚಬೇಕೆಂದು ಸದಸ್ಯ ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಇಸ್ಮಾಯಿಲ್ ಅರಬ, ಅಯೂಬ ಬಾಗವಾನ, ಉಮೇಶ ದೇಗಿನಾಳ ಒತ್ತಾಯಿಸಿದರು.ಸಭೆಯಲ್ಲಿ ಒಳ ಚರಂಡಿ ನೀರು ಶುದ್ಧಿಕರೀಸಿ ಹಳ್ಳಕ್ಕೆ ಬಿಡುವ ಬಗ್ಗೆ ಮತ್ತು ಸ್ವಚ್ಛತೆಗಾಗಿ ಅವಶ್ಯವಿರುವ ಹೊಸ ಮಶೀನು ಖರೀದಿಗೆ ಸೇರಿದಂತೆ ಅನೇಕ ವಿಷಯಗಳ ಕುರಿತು ಚೆರ್ಚೆ ನಡೆಯಿತು.ಪಟ್ಟಣದಲ್ಲಿ ಸಾರ್ವಜನಿಕರು ಒಳಚರಂಡಿ ಸಂಪರ್ಕ ಕಲ್ಪಿಸಲು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ಸರ್ಕಾರ ಜಾತಿ ಗಣತಿಯನ್ನು ಅವೈಜ್ಞಾನಿಕವಾಗಿ ಮಾಡಿದೆ. ಉದ್ದೇಶಪೂರ್ವಕವಾಗಿ ಲಿಂಗಾಯತರ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ರಾಜ್ಯದ ಶೇ. 20ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಲಿಂಗಾಯತ ಸಮುದಾಯವನ್ನು ತುಳಿಯುವ ಹುನ್ನಾರ ರಾಜ್ಯ ಸರ್ಕಾರದ್ದಾಗಿದೆ. ಮನೆ ಮನೆಗೆ ಬಂದು ಸರಿಯಾಗಿ ವರದಿಯನ್ನು ತಯಾರಿಸಿಲ್ಲ. ಯಾರನ್ನೋ ಮೆಚ್ಚಿಸುವ ಸಲುವಾಗಿ ಮುಖ್ಯಮಂತ್ರಿ ತುರಾತುರಿಯಿಂದ ವರದಿ ಮಂಡಿಸಲು ಹೊರಟಿದ್ದಾರೆ. ಈ ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ವರದಿಯನ್ನು ತಯಾರಿಸಬೇಕು.ಏ. 17 ರಂದು ನಡೆಯುವ ಮಂತ್ರಿಮಂಡಲದ ವಿಶೇಷ ಸಭೆಯಲ್ಲಿ ಜಿಲ್ಲೆಯ ಉಭಯ ಸಚಿವರು ವರದಿಯನ್ನು ವಿರೋಧಿಸುವ ಮೂಲಕ ವರದಿ ಜಾರಿಯಾಗುವದನ್ನು ತಪ್ಪಿಸಬೇಕೆಂದು ಬಸವನಬಾಗೇವಾಡಿ ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯಾಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಗುರು ಮಹಾಂತೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಅಮೃತ ಮಹೋತ್ಸವದಂಗವಾಗಿ ಏ.೨೫ ರಂದು ಸಾಮೂಹಿಕ ಅಯ್ಯಾಚಾರ ಮತ್ತು ಶಿವದೀಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಯ್ಯಾಚಾರ, ಶಿವದೀಕ್ಷೆಯನ್ನು ಪಡೆಯಲು ಇಚ್ಚಿಸುವವರು ಎರಡು ದಿನ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕು. ಅಯ್ಯಾಚಾರ, ಶಿವದೀಕ್ಷೆ ಪಡೆಯುವರು ಕಾರ್ಯಕ್ರಮದ ಹಿಂದಿನ ದಿನ ರಾತ್ರಿಯೆ ಶ್ರೀಮಠಕ್ಕೆ ಬರಬೇಕು. ಹೆಚ್ಚಿನ ಮಾಹಿತಿಗೆ ಮೊ- ೯೯೦೨೬೦೨೧೮೦,೯೯೪೫೩೩೮೨೨೯ ಸಂಪರ್ಕಿಸಬಹುದು ಎಂದು ಪಟ್ಟೀಕಂಥಿ ಹಿರೇಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: 12 ನೇ ಶತಮಾನದ ಶರಣೆ ಅಕ್ಕಮಹಾದೇವಿಯ ದಿಟ್ಟನಿಲುವು ಹಾಗೂ ಧೈರ್ಯ ಮಹಿಳೆಯರಿಗೆ ಇಂದಿಗೂ ಸ್ಪೂರ್ತಿಯಾಗಿ ನಿಲ್ಲುತ್ತದೆ ಎಂದು ಸ್ಥಳೀಯ ಸರಕಾರಿ ಪದವಿ ಕಾಲೇಜಿನ ಇತಿಹಾಸದ ಉಪನ್ಯಾಸಕಿ ವಿಜಯಲಕ್ಷ್ಮಿ ರೊಟ್ಟಿ ಹೇಳಿದರು.ಪಟ್ಟಣದ ವಿರಕ್ತ ಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ವಿರಕ್ತಮಠ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಅಕ್ಕನ ವಚನಗಳು ಎತ್ತರ ಮಟ್ಟದಲ್ಲಿವೆ. ಅವರ ಒಂದೊಂದು ವಚನಗಳು ಅನುಭವದ ಆಧಾರದಲ್ಲಿ ಮೂಡಿ ಬಂದಿದೆ. ಎಂದು ಹೇಳಿದರು.ಕಾಮವನ್ನು ಗೆದ್ದ ಅಕ್ಕ ದೈವತ್ವದ ಕಡೆಗೆ ಹೋಗಬೇಕಾದರೆ ಸಾಕಷ್ಟು ನೋವುಗಳನ್ನು ಅನುಭವಿಸಿದರು. ಧೈರ್ಯ ಸಾಹಸಕ್ಕೆ ಅಕ್ಕ ನಮಗೆಲ್ಲರಿಗೂ ಇಂದಿಗೂ ಮಾರ್ಗದರ್ಶಕರಾಗಿ ನಿಲ್ಲುತ್ತಾರೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಜಗದೇವಿ ಗುಂಡಳ್ಳಿ ಮಾತನಾಡಿ, 12ನೇ ಶತಮಾನದ ಶರಣರು ಶರಣೆಯರ ವಚನಗಳು ಇಂದಿಗೂ ಪ್ರಸ್ತುತವಾಗಿ ನಿಲ್ಲುತ್ತವೆ. ಯುವ ಜನಾಂಗ ಮೊಬೈಲ್ ದಾಸರಾಗಿ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ…
ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ೨೦೨೫-೨೬ನೇ ಸಾಲಿಗೆ ೬ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ,ಕ್ರ್ರಿಶ್ಚಿಯನ್,ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.೭೫ರಷ್ಟು ಇತರೆ ವರ್ಗದ ವಿದ್ಯಾರ್ಥಿಗಳಿಗೆಶೇ.೨೫ರಷ್ಟು ಪ್ರವೇಶಾತಿ ಕಲ್ಪಿಸಲಾಗುತ್ತಿದೆ. ಶೇ.೫೦ರಷ್ಟು ಬಾಲಕಿಯರಿಗಾಗಿ ಮೀಸಲಿರಿಸಲಾಗಿದೆ. ಅರ್ಜಿಯನ್ನು website:https://sevasindhuservices.karnataka.gov.inಮೂಲಕ ದಿನಾಂಕ ೧೦-೦೫-೨೦೨೫ರ ಒಳಗಾಗಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩, ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿ (ಮೊ:೮೯೭೦೭೦೪೯೮೬), ಇಂಡಿ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿ (ಮೊ:೯೯೦೦೨೨೯೭೮೦), ವಿಜಯಪುರ ನಂ-೧ರ ಕುಂಬಾರಗಲ್ಲಿಯ ಮೌಲಾನಾ ಆಜಾದ್ ಮಾದರಿ ಶಾಲೆಯ ಮುಖ್ಯೋಪಾಧ್ಯಾಯ ಮಹಾದೇವಪ್ಪ ಸಂಗಪ್ಪನವರ (ಮೊಬೈಲ್: ೭೭೯೫೩೫೯೩೬೯), ವಿಜಯಪುರ ನಂ-೨ರ ನವಬಾಗನ ಮೌಲಾನಾ ಆಜಾದ್ ಮಾದರಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಅಲ್ತಮಷ್ ಅತ್ತಾರ (ಮೊಬೈಲ್:೯೧೬೪೭೭೭೩೧೭), ಸಿಂದಗಿಯ ಮೌಲಾನಾ…
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಗೆ ಸಕಾ೯ರ ಸ್ಪಂದನೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಒಂದನೆಯ ತರಗತಿ ಶಾಲಾ ಮಕ್ಕಳ ದಾಖಲಾತಿಗೆ ಸಂಬಂಧಿಸಿದಂತೆ ಸಕಾ೯ರ ವಯೋಮಿತಿ ಸಡಿಲಿಕೆ ಕ್ರಮಕ್ಕೆ ಅಸ್ತು ನೀಡಿದ್ದು ಸ್ವಾಗತಾರ್ಹವಾಗಿದೆ ಎಂದು ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹರ್ಷ ವ್ಯಕ್ತಪಡಿಸಿದೆ.ಈ ಕುರಿತು ಪ್ರಕಟಣೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಕೆ. ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಒಂದನೆಯ ತರಗತಿ ಮಕ್ಕಳ ದಾಖಲಾತಿ ವಯಸ್ಸು ೬ ವರ್ಷದಿಂದ ೫ ವರ್ಷ ೬ ತಿಂಗಳಿಗೆ ಇಳಿಸುವ ಮಹತ್ವದ ಐತಿಹಾಸಿಕ ನಿರ್ಣಯ ಬುಧವಾರ ಕೈಗೊಂಡ ಸರಕಾರದ ಕ್ರಮವನ್ನು ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಳಕಳಿಯನ್ನು ಹಾದಿ೯ಕವಾಗಿ ಸ್ವಾಗತಿಸಿ ಅಭಿನಂದಿಸಿದ್ದಾರೆ.೧ ನೇ ತರಗತಿ ಮಕ್ಕಳ ದಾಖಲಾತಿಗೆ ೬ ವರ್ಷ ವಯೋಮಿತಿಯನ್ನು ಕಡ್ಡಾಯಗೊಳಿಸುತ್ತಿದ್ದು ಇದರಿಂದ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕ್ಷೀಣಿಸುತ್ತಿದೆ. ಬೇರೆ ಅನ್ಯ ರಾಜ್ಯಗಳಲ್ಲಿ ಮಹಾರಾಷ್ಟ್ರ, ಕೇರಳದಲ್ಲಿನ ಅಂಶಗಳನ್ನು ಗಮನಿಸಿ ನಮ್ಮ ರಾಜ್ಯದ ೧ ನೇ ತರಗತಿಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರಿನ ಕೇಂದ್ರಿಯ ಆಹಾರ ತಂತ್ರಜ್ಞಾನ ಸಂಶೋಧನಾಲಯದಲ್ಲಿ ಜೂನಿಯರ್ ಸೆಕ್ರೆಟರಿ ಅಸಿಸ್ಟಂಟ್ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ಮಾಜಿ ಸೈನಿಕರಿಗಾಗಿ ೦೧ ಹುದ್ದೆ ಮೀಸಲಿದ್ದು, ಆಸಕ್ತ ಮಾಜಿ ಸೈನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಹಾಗೂ ಮಾಹಿತಿ ವಿವರಗಳಿಗಾಗಿhttps://cftri.res.in CxÀªÁ https://recruitment.cftri.res.in ವೆಬ್ಸೈಟ್ ವೀಕ್ಷಿಸಬಹುದಾಗಿz.ೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ಗೆ ಹಾಗೂ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ನಗರದ ವಿಬಿ ದರಬಾರ ಕಾಲೇಜಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿಇಟಿ) ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳ ಕಾರ್ಯ ವಿಧಾನವನ್ನು ಅವರು ಪರಿಶೀಲಿಸಿದರು.ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಣೆ ಹಾಗೂ ಅವರಿಂದ ಪರೀಕ್ಷಾ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ವಹಿಸಿಕೊಟ್ಟ ಜವಾಬ್ದಾರಿಯನ್ನು ಸುಸೂತ್ರವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕೆಂದು ಹೇಳಿದರು.ಸದರಿ ಪರೀಕ್ಷಾ ಕೇಂದ್ರದಲ್ಲಿನ ವೆಬ್ ಕಾಸ್ಟಿಂಗ್ ಕಾರ್ಯ ನಿರ್ವಹಣೆ ವ್ಯವಸ್ಥೆ ಬಗ್ಗೆ ವೀಕ್ಷಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ…
ಜನಾಕ್ರೋಶ ಯಾತ್ರೆಯಲ್ಲಿ 3ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ | ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿಕೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿಜಯಪುರ ಜನಾಕ್ರೋಶ ಯಾತ್ರೆಯ ಸಭೆಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಮೂರು ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಜನಾಕ್ರೋಶ ಯಾತ್ರೆಯ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಂದ ಜನಸಾಮಾನ್ಯರು ಬೇಸತ್ತು ಬಳಲುವಂತಾಗಿದೆ. ದಿನಬಳಕೆಯ ವಸ್ತುಗಳು ಬೆಲೆ ದಿನದಿಂದ ದಿನಕ್ಕೆ ಆಕಾಶದೆತ್ತರಕ್ಕೆ ಏರುತ್ತಿವೆ. ಜೊತೆಗೆ ಜಾತಿಗಣತಿ ನೆಪದಲ್ಲಿ ರಾಜ್ಯದಲ್ಲಿ ಜಾತಿ ರಾಜಕೀಯ ಆರಂಭಗೊಂಡಿದೆ. ಇದರಿಂದ ಜನತೆ ಹತಾಶೆಗೊಂಡಿದ್ದು ಜನಕ್ರೋಶ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಬೇಕು ಎಂದರು.ಬಿಜೆಪಿ ಮುಖಂಡ ವಿಜಯಕುಮಾರ ಕೂಡಗಿನವರ ಪ್ರಾಸ್ತಾವಿಕವಾಗಿ ಮಾತನಾಡಿ, ದಿ.೧೭ ರಂದು ಗುರುವಾರ ವಿಜಯಪುರದ ದರ್ಬಾರ ಶಾಲಾ ಮೈದಾನದಲ್ಲಿ ಜರುಗುವ ಸಭೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.ಬಿಜೆಪಿ ಜಿಲ್ಲಾ…
