Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ :ಶಾಸಕ ಗುಡಗುಂಟಿ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಬಾಗಲಕೊಟೆಯಲ್ಲಿ ಇಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿಯ ವಿರುದ್ದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಅಭಿವೃದ್ಧಿ ಯೋಜನೆಯ 38,860 ಕೋಟಿ ಹಣವನ್ನು ದುರ್ಬಳಕೆಮಾಡಿಕೊಂಡಿದೆ. ಎಸ್ಸಿಎಸ್ಪಿ, ಟಿಎಸ್ಪಿಯ ಸುಮಾರು 10 ಸಾವಿರ ಕೋಟಿ ಹಣವನ್ನು ಅಲ್ಪಸಂಖ್ಯಾತರಿಗೆ ವರ್ಗಮಾಡಿದೆ. ಮಿತಿ ಮೀರಿ ಮುಸ್ಲಿಂ ಓಲೈಕೆ ಮಾಡುತ್ತಿದ್ದು, ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಶಾದಿ ಭಾಗ್ಯಕ್ಕೆ ₹50 ಸಾವಿರ, ಉರ್ದು ಶಾಲೆಗಳಿಗೆ 500 ಕೊಟಿ, ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಆಭ್ಯಾಸಕ್ಕೆ 30 ಲಕ್ಷ, ಅಭಿವೃದ್ಧಿಗೆ ₹4500 ಕೋಟಿ ಮೀಸಲು, ಕಾಲೋನಿಗಳ ಅಭಿವೃದ್ಧಿಗೆ ಸಾವಿರಕೋಟಿ ಮೀಸಲಿಟ್ಟು ಉಳಿದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಪ್ರತಿಷ್ಟಿತ ಶಾಲೆ ಯೋಜನೆಯಡಿ ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಿಗೆ ೬ನೇ ತರಗತಿ ಪ್ರವೇಶ ಪರೀಕ್ಷೆಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್ ಸೈಟ್ https://swd.karnataka.gov.inನಲ್ಲಿ ದಿನಾಂಕ:೦೩-೦೫-೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಯುವಕರು ನಮ್ಮ ದೇಶದ ಸೈನಿಕರು ಗಡಿಯಲ್ಲಿ ಕಾದಂತೆ ಅದರಂತೆ ವಿದ್ಯಾರ್ಥಿಗಳು ಎನ್ ಎಸ್ ಎಸ್ ಸೇವೆಯ ಮೂಲಕ ಕಾರ್ಯಪ್ರವೃತ್ತರಾಗಬೇಕಿದೆ ಎಂದು ವಿಜಯಪುರ ತಾಲೂಕು ಎನ್ ಎಸ್ ಎಸ್ ಪ್ರಭಾರಿ ಸಂಯೋಜನಾಧಿಕಾರಿ ಪ್ರೊ. ರಾಜು ಬಿ.ಕಪಾಲಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೧ & ೨ ಸಂಯೋಜನೆಯಡಿ ೨೦೨೪-೨೫ ನೇ ಸಾಲಿನ ಹಂಚನಾಳ ಪಿಹೆಚ್ ಗ್ರಾಮದಲ್ಲಿ ಏ.೧೩ ರಂದು ಎನ್ ಎಸ್ ಎಸ್ ೭ ದಿನಗಳ ವಿಶೇಷ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಸ್ವಯಂ ಸೇವೆಯ ಮೂಲಕ ದೇಶ ಸೇವೆಗೆ ಮುಂದಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ನಾವೆಲ್ಲರೂ ಶ್ರಮಿಸಬೇಕಾಗಿದೆ. ಅದರಂತೆ ವಿದ್ಯಾರ್ಥಿಗಳು ಇಂತಹ ೭ ದಿನಗಳ ಕ್ಯಾಂಪ್ಗಳು ಕೇವಲ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಯುವಕರು ನಮ್ಮ ದೇಶದ ಸೈನಿಕರು ಗಡಿಯಲ್ಲಿ ಕಾದಂತೆ ಅದರಂತೆ ವಿದ್ಯರ್ಥಿಗಳು ಎನ್ ಎಸ್ ಎಸ್ ಸೇವೆಯ ಮೂಲಕ ಕಾರ್ಯಪ್ರವೃತ್ತರಾಗಬೇಕಿದೆ ಎಂದು ವಿಜಯಪುರ ತಾಲೂಕು ಎನ್ ಎಸ್ ಎಸ್ ಪ್ರಭಾರಿ ಸಂಯೋಜನಾಧಿಕಾರಿ ಪ್ರೊ. ರಾಜು ಬಿ.ಕಪಾಲಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೧ & ೨ ಸಂಯೋಜನೆಯಡಿ ೨೦೨೪-೨೫ ನೇ ಸಾಲಿನ ಹಂಚನಾಳ ಪಿಹೆಚ್ ಗ್ರಾಮದಲ್ಲಿ ಏ.೧೩ ರಂದು ಎನ್ ಎಸ್ ಎಸ್ ೭ ದಿನಗಳ ವಿಶೇಷ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಸ್ವಯಂ ಸೇವೆಯ ಮೂಲಕ ದೇಶ ಸೇವೆಗೆ ಮುಂದಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ನಾವೆಲ್ಲರೂ ಶ್ರಮಿಸಬೇಕಾಗಿದೆ. ಅದರಂತೆ ವಿದ್ಯಾರ್ಥಿಗಳು ಇಂತಹ ೭ ದಿನಗಳ ಕ್ಯಾಂಪ್ಗಳು ಕೇವಲ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಸೋಮವಾರ ಭವ್ಯ ಮೆರವಣಿಗೆ ಜರುಗಿತು. ಮೆರವಣಿಗೆಯಲ್ಲಿ ಮಹಾರಾಷ್ಟ್ರದ ನಾಶಿಕ್ನ ಡೋಲು ವಾದ್ಯಗಳು, ಗೊಂಬೆಗಳು, ಕಲಾ ತಂಡಗಳು ಮೆರವಣಿಗೆಯ ಕಳೆ ಹೆಚ್ಚಿಸಿತು. ನೀಲಿ ಧ್ವಜ, ಜಯಘೋಷ ಎಲ್ಲೆಡೆ ಮೊಳಗಿದ್ದು ವಿಶೇಷವಾಗಿದ್ದವು.ಜನಾಕರ್ಷಿಸಿತ ಸ್ತಭ್ದ ಚಿತ್ರ: ಮೆರವಣಿಗೆಯಲ್ಲಿ ಸಂಸತ್ತ ರೂಪಕ ವಾಹನದಲ್ಲಿ ಡಾ.ಅಂಬೇಡ್ಕರ್ ಅವರ ಕುಳಿತ ಭಂಗಿಯ ಭಾವಚಿತ್ರವನ್ನು ಇಟ್ಟು ಅಲಂಕರಿಸಲಾಗಿತ್ತು. ನಾನಾ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅಂಬೇಡ್ಕರ್ ಜಯಂತಿ ಅಂಗವಾಗಿ ಸಿಂದಗಿಯಲ್ಲಿ ನಡೆದ ಮೆರವಣಿಗೆಯಲ್ಲಿ ಮಹಿಳೆಯರು, ಯುವಕರು ಡಿ.ಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು.ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ದಲಿತ ಸಂಘಟನೆಗಳ ಪ್ರಮುಖರಾದ ಚಂದ್ರಕಾಂತ ಸಿಂಗೆ, ಶ್ರೀಕಾಂತ ಸೋಮಜಾಳ, ಪರುಶರಾಮ ಕಾಂಬಳೆ, ರವಿ ಹೋಳಿ, ಮಲ್ಲು ಕೂಚಬಾಳ, ದತ್ತು ನಾಲ್ಕಮಾನ, ರಮೇಶ ನಡುವಿನಕೇರಿ, ಶ್ರೀನಿವಾಸ ಓಲೇಕಾರ, ರಾವುತ ತಳಕೇರಿ, ಶ್ರೀಶೈಲ ಜಾಲವಾದಿ, ರಾಕೇಶ ಕಾಂಬಳೆ, ಶಿವಾನಂದ ಆಲಮೇಲ, ನಿಂಗರಾಜ, ಹರ್ಷವರ್ಧನ ಪೂಜಾರಿ ಸೇರಿದಂತೆ ಅಭಿಮಾನಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾರ್ವಜನಿಕರ ಗಮನ ಬೇರೆ ಕಡೆಗೆ ಸೆಳೆದು ಬೆಲೆ ಬಾಳುವ ವಸ್ತುಗಳನ್ನು, ಬಂಗಾರದ ಒಡವೆಗಳನ್ನು ಮತ್ತು ಹಣವನ್ನು ಕಳ್ಳತನ ಮಾಡುವಂತಹ ಗ್ಯಾಂಗ್ ಬಂದಿದೆ. ಇತ್ತೀಚಿಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದು ಕಳ್ಳರು ತಾವು ಸಿಬಿಐ ಪೊಲೀಸರ್ ಅಂತ ಸುಳ್ಳು ಹೇಳಿಕೊಂಡು ಮೈಮೇಲೆ ಬಂಗಾರ ಹಾಕಿಕೊಂಡು ಓಡಾಡುವರಲ್ಲಿ ಕಳ್ಳರು ಬಂದಿದ್ದಾರೆ ಈ ರೀತಿ ಬಂಗಾರವನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಬಂಗಾರವನ್ನು ತೆಗೆಸಿ ತಮ್ಮ ಬ್ಯಾಗಿನಲ್ಲಿ ಇರಿಸುವಂತೆ ಮಾಡಿ ಬ್ಯಾಗ್ ನಿಂದ ಕಳ್ಳತನ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ತರದ ವ್ಯಕ್ತಿಗಳಿಂದ ಎಚ್ಚರಿಕೆಯಿಂದ ಇರಬೇಕು ಮತ್ತು ಅನುಮಾಸ್ಪದ ವ್ಯಕ್ತಿಗಳು ಕಂಡಲ್ಲಿ ಕೂಡಲೇ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಪಿಎಸ್ಐ ಸಂಜಯ ತಿಪರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವದರ್ಜೆಯ ವಕೀಲರು, ಸಮಾಜ ಸುಧಾರಕರೂ ಆಗಿದ್ದ ಅಂಬೇಡ್ಕರ್ ಅವರು ಭಾರತದ ದಲಿತ ಚಳುವಳಿಗಳ ಹಿಂದಿನ ಮಹಾನ್ ಶಕ್ತಿ ಎಂದರೂ ತಪ್ಪಾಗಲಿಕ್ಕಿಲ್ಲ. ಶಿಕ್ಷಣ, ಸಮಾನತೆ, ಅರ್ಥಶಾಸ್ತçಕ್ಕೆ ಇವರು ನೀಡಿದ ಕೊಡುಗೆಗಳು ಅಪಾರ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಇ.ಡಿ.ಲಮಾಣಿ ಹೇಳಿದರು.ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಸೋಮವಾರದಂದು ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕ್ತಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ, ಭವ್ಯ ಭಾರತದಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು.ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಎಲ್.ಚವ್ಹಾಣ್ರವರು ಮಾತನಾಡುತ್ತ, ಅಂಬೇಡ್ಕರ್ ಭಾರತದ ಸಾಮಾಜಿಕ ಸಮಾನತೆಯ ಹರಿಕಾರ. ಸಾಮಾಜಿಕವಾಗಿ ಬಹಿಷ್ಕಾರಕ್ಕೆ ಒಳಗಾದ ದೀನ ದಲಿತರ ಏಳಿಗೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರ ಆದರ್ಶಗಳು ಎಲ್ಲ ವರ್ಗದ ಜನರಿಗೂ ಮಾದರಿಯಾಗಿವೆ ಎಂದರು.ಈ ವೇಳೆಯಲ್ಲಿ ಎ.ಎಂ.ನಾಗೊಂಡ, ಎಂ.ಬಿ.ಪೂಜಾರಿ, ಆರ್.ಎನ್.ಬಕಾಟೆ, ಆರ್.ವಿ.ಭುಜಂಗನವರ,…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಲಕಿ ಕ್ರಾಸ್ ಆರೋಗ್ಯ ಕೇಂದ್ರದಲ್ಲಿ 134 ನೇ ಜನ್ಮದಿನಾಚರಣೆ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ನೆರವೇರಿಸಲಾಯಿತು.ಇದೆ ಸಂದರ್ಭದಲ್ಲಿ ಮುಖ್ಯಆರೋಗ್ಯ ಅಧಿಕಾರಿ ಡಾ.ಮುಕುಂದ ಕಾಂಬಳೆˌ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಎಸ್ ಎಸ್ ಸಬಕಾಳೆˌ ಗೋವಿಂದ ದಾಸರˌ ಆಶಾ ಕಾರ್ಯಕರ್ತೆ ಸಾವಿತ್ರಿ ನ್ಯಾಮಗೌಡ ಸೇರಿದಂತೆ ಅನೇಕರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ, ಉಪ್ರಾಚಾರ್ಯ ಡಾ.ಅನೀಲ ಬಿ ನಾಯಕ ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ .ಪಾಟೀಲ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್ ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಎಕ್ಸಲಂಟ್ ಪಿಯು ಕಾಲೇಜಿನಲ್ಲಿ ನಡೆದ ಅಂಬೇಡ್ಕರ ಹಬ್ಬದಲ್ಲಿ ಶ್ರೀಕಾಂತ ಕೆ.ಎಸ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿ ಜೀವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡರೆ ಸ್ವಾಭಿಮಾನದ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳುವುದರೊಂದಿಗೆ ಬದುಕಿಗೆ ಹೊಸ ಅರ್ಥ ಬರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಅವರ ಬದುಕಿನ ಹೋರಾಟವನ್ನು ಅರಿತುಕೊಂಡಲ್ಲಿ ಬದಲವಾಣೆಯ ಪರ್ವಕ್ಕೆ ಮನಸ್ಸು ತೆರೆದುಕೊಳ್ಳುತ್ತದೆ ಎಂದು ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀಕಾಂತ ಕೆ.ಎಸ್ ಹೇಳಿದರು.ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ೧೪೩ ನೇ ಜನ್ಮ ದಿನದ ಅಂಗವಾಗಿ ನಗರದ ಎಕ್ಸಲಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು; ಯಾವ ವ್ಯಕ್ತಿಯಲ್ಲಿ ಜ್ಞಾನ ತುಂಬಿರುತ್ತದೆ ಅಂಥ ವ್ಯಕ್ತಿಯನ್ನು ಇಡೀ ಜಗತ್ತೇ ಗೌರವಿಸುತ್ತದೆ ಎನ್ನುವುದಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಕ್ಷ್ಯವಾಗಿ ನಿಲ್ಲುತ್ತಾರೆ. ಒಂದು ಕಾಲದಲ್ಲಿ ಕಡು ಕಷ್ಟವನ್ನು ಅನುಭವಿಸಿ, ಶೋಷಣೆಯ ಕೂಪದಲ್ಲಿ ನರಳಿದ ಅವರು ತಮ್ಮ ಜ್ಞಾನದ ಬಲದಿಂದ ಇಡೀ ಜಗತ್ತೇ ತಮ್ಮ ಕಡೆಗೆ ತಿರುಗಿ ನೋಡುವಂತೆ…
