Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ (ಮಹಾಬಲೇಶ್ವರ): ಮಹಾರಾಷ್ಟ್ರ, ಆಂದ್ರಪ್ರದೇಶ, ತೆಲಂಗಾಣ ರಾಜ್ಯಗಳೂ ಸೇರಿದಂತೆ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟ, ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಯ ರೈತ ಕುಟುಂಬಗಳಿಗೆ ಕೃಷ್ಣಾ ನದಿ ಜೀವನಾಡಿಯಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಮುಂಗಾರು ಹಂಗಾಮಿನ ಮೊದಲ ಹಬ್ಬವಾದ ಕಡ್ಲಿಗರ ಹುಣ್ಣಿಮೆಯಂದು ಮಹಾರಾಷ್ಟ್ರ ರಾಜ್ಯದ ಮಹಾಬಲೇಶ್ವರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಬಸವನ ಬಾಗೇವಾಡಿ ಮತಕ್ಷೇತ್ರದ ಹಾಗೂ ಅವಳಿ ಜಿಲ್ಲೆಗಳ ರೈತರ ನೂರಾರು ರೈತರೊಂದಿಗೆ ಕೃಷ್ಣೆಯ ಉಗಮ ಸ್ಥಾನವಾದ ಪಂಚಗಂಗಾ ನದಿಯಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಮಾತನಾಡಿದರು.ರೈತ ಕುಟುಂಬಗಳಿಗೆ ಕೃಷ್ಣಾ ನದಿ ಜೀವನಾಡಿಯಾಗಿದೆ. ಹೀಗಾಗಿ ಕಳೆದ ೧೯ ವರ್ಷಗಳಿಂದ ಕೃಷ್ಣೆಯ ಉಗಮ ಸ್ಥಾನವಾದ ಈ ಮಹಾಬಲೇಶ್ವರದಲ್ಲಿ ಬಸವನ ಬಾಗೇವಾಡಿ ಕ್ಷೇತ್ರವೂ ಸೇರಿದಂತೆ ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ರೈತಾಪಿ ಜನತೆಯೊಂದಿಗೆ ಗಂಗಾ ಪೂಜೆಯೊಂದಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಕೃಷ್ಣೆಯ ಜತೆಗೆ ಗಾಯತ್ರಿ, ಸಾವಿತ್ರಿ, ಕೋಯ್ನಾ, ವೆನ್ನಾ ನದಿಗಳಿಗೂ ಈ ಮಹಾಬಲೇಶ್ವರ ಉಗಮ ಸ್ಥಾನವಾಗಿದ್ದು ದಕ್ಷಿಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಹಾಗೂ ಹಿರಿಯ ಮುಖಂಡ ಎನ್.ತಿಪ್ಪಣ್ಣ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಅಧಿಕಾರಿಗಳು ಎರಡು ನಿಮಿಷಗಳ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು, ನಮ್ಮ ಮಹಿಳಾ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದ ಎನ್.ತಿಪ್ಪಣ್ಣ ಅವರು ವಿವಿ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆಯನ್ನು ಈ ಸಂದಭದಲ್ಲಿ ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ಚಿತ್ರದುರ್ಗ ಜಿಲ್ಲೆಯ ತುರುವನೂರಿನಲ್ಲಿ ಜನಿಸಿದ ಎನ್.ತಿಪ್ಪಣ್ಣ ಅವರು ಕರ್ನಾಟಕದ ಕಾನೂನು, ರಾಜಕೀಯ ಮತ್ತು ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆರು ದಶಕಗಳಿಗೂ ಹೆಚ್ಚು ಕಾಲ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ಅಗಲುವಿಕೆ ರಾಜ್ಯಕ್ಕೆ ಮತ್ತು ನಮ್ಮ ಮಹಿಳಾ ವಿವಿಗೆ ಅಪಾರ ನಷ್ಟ ಉಂಟು ಮಾಡಿದೆ ಎಂದರು.ಐಕ್ಯುಎಸಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಅವರು ಮಾತನಾಡಿ, ಎನ್.ತಿಪ್ಪಣ್ಣ ಅವರು, ಕರ್ನಾಟಕ ವಿಧಾನ ಪರಿಷತ್ತಿಗೆ ನಾಲ್ಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ; ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಜುಲೈ 19 ರಂದು ಜರುಗಲಿರುವ ಸಮಾರಂಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಇವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು ಬೆಂಗಳೂರಿಗೆ ತೆರಳಿ ಅತಿಥಿಗಳನ್ನು ಅಮಂತ್ರಿಸಿದರು.ಈ ಎಲ್ಲರೂ ಕಾರ್ಯಕ್ರಮಕ್ಕೆ ಭಾಗವಹಿಸುವ ಭರವಸೆ ನೀಡಿದ್ಧಾರೆಂದು ಮೋಹನ ಕುಲಕರ್ಣಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪ್ರಸ್ತುತ ಕೃಷಿ ಬಿಕ್ಕುಟ್ಟುಗಳ ಜೊತೆ ಭವಿಷ್ಯದಲ್ಲಿ ತುಂಡು ಕೃಷಿ ತಂದೊಡ್ಡಬಹುದಾದ ಸಮಸ್ಯೆಗಳನ್ನು ಮೆಟ್ಟಿ ನಿಂತು ರೈತರ ಬದುಕಲ್ಲಿ ಆಶಾದಾಯಕ ಭರವಸೆ ಮೂಡಿಸಲು ಸಮುದಾಯ ಕೃಷಿಯಿಂದ ಮಾತ್ರ ಸಾಧ್ಯವೆಂಬುದನ್ನು ನಿರೂಪಿಸಲು ಹುಟ್ಟಿ ಬಂದ ರೈತ ಉತ್ಪಾದಕ ಕಂಪನಿಯ ಕಲ್ಪನೆಗೆ ದಾಸೋಹಿ ಹೊಸ ಭಾಷ್ಯೆ ಬರೆದಿದೆ ಎಂದು ಹಿರೇಮುರಾಳದ ಶ್ರೀ ಸಂಗಮೇಶ್ವರ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಬಿ.ವಿ ಭೋವಿ ಹೇಳಿದರು.ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿರುವ ದಾಸೋಹಿ ರೈತ ಉತ್ಪಾದಕ ಕಂಪನಿಯ ದಾಸ್ತಾನು ಮಳಿಗೆ ಆವರಣದಲ್ಲಿ ಏರ್ಪಡಿಸಲಾಗಿದ್ದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಪ್ರಥಮ ಸಂಸ್ಥಾಪನಾ ದಿನಾಚರಣೆ ಹಾಗೂ ದಾಸ್ತಾನು ಮಳಿಗೆಯ ಪೂಜಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸದಸ್ಯ ರೈತರೇ ಮಾಲೀಕರೆಂದು ಪ್ರತಿಪಾದಿಸಿ ಒಂದೇ ವರ್ಷದಲ್ಲಿ ದಾಸೋಹಿ ಎಂಬ ಸೂರಿನಡಿ ರೈತರ ಅಗತ್ಯತೆಯನ್ನು ಪೂರೈಸಲು ಹಲವು ಸೇವೆಗಳನ್ನು ಆರಂಭಿಸಿ ಯಶಸ್ವಿಯಾಗಿ ಮುನ್ನೆಡೆಸುತ್ತಿರುವುದು ಶ್ಲಾಘನೀಯವೆಂದರು.ಮುಖ್ಯ ಅತಿಥಿಯಾಗಿದ್ದ ಎ.ಪಿ.ಎಂ.ಸಿ ಜಾಗೃತ ಕೋಶದ ನಿವೃತ್ತ ಅಧಿಕಾರಿ ಜಿ.ಎಂ ಯಡವಣ್ಣವರ ಮಾತನಾಡಿ, ರೈತರನ್ನು…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಿಂದ ಮುಖ್ಯ ರಸ್ತೆಯಲ್ಲಿರುವ ಹಳ್ಳದ ಸೇತುವೆಯಲ್ಲಿ ಅಪಾಯಕರ ಪ್ರಮಾಣದಲ್ಲಿರುವ ಬ್ರಹತ್ ಗುಂಡಿಗಳು ಬಾಯ್ತೆರೆದು ಬಲಿಗಾಗಿ ಕಾಯುತಿದ್ದು ಈ ಭಾಗದ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.ಗ್ರಾಮದಿಂದ ಜಗದಾಳ ಮಾರ್ಗವಾಗಿ ಜಮಖಂಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಗ್ರಾಮದ ಸಮೀಪದಲ್ಲಿಯೇ ಹಳ್ಳಕ್ಕೆ ನಿರ್ಮಿಸಲಾಗಿರುವ ಬ್ರಹತ್ ಸೇತುವೆಯ ಎರಡೂ ಬದಿಗಳಲ್ಲಿ ಒಡೆದು ದೊಡ್ಡ ಗುಂಡಿ ನಿರ್ಮಾಣವಾಗಿರುವುದರಿಂದ ಈ ಮಾರ್ಗದ ಸಂಚಾರಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಟ್ರ್ಯಾಕ್ಟರ್, ಟಿಪ್ಪರ್, ಶಾಲಾ ವಾಹನಗಳು ಸೇರಿದಂತೆ ನೂರಾರು ಸರಕಾರಿ ಖಾಸಗಿ ವಾಹನಗಳು ಈ ಮಾರ್ಗವಾಗಿಯೇ ಸಂಚರಿಸುತ್ತಿರುವುದರಿಂದ ಚಾಲಕರು ಆತಂಕದಿಂದಲೇ ಈ ಸೇತುವೆ ದಾಟಬೇಕಾಗಿದೆ. ಸೇತುವೆಯ ತಳಭಾಗ ದಿನದಿನಕ್ಕೂ ಕುಸಿಯುತ್ತಿರುವುದರಿಂದ ಯಾವುದೇ ಸಂಧರ್ಬದಲ್ಲಿ ಅನಾಹುತ ಸಂಭವಿಸುವ ಆತಂಕವಿದೆ, ಸಂಬಂದಿಸಿದ ಇಲಾಖೆಯ ಅಧಿಕಾರಿಗಳಿಗೆ ಈಕುರಿತು ಹಲವಾರು ಬಾರಿ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಸೇತುವೆ ಇಷ್ಟು ಅಪಾಯಕಾರಿ ಸ್ಥಿತಿಯಲ್ಲಿದ್ದರೂ ದುರಸ್ತಿಗೆ ಸ್ಪಂದಿಸದ ಅಧಿಕಾರಿಗಳು ಅನಾಹುತ ಸಂಭವಿಸುವುದಕ್ಕಾಗಿ ಕಾಯುತಿದ್ದಾರೆಯೇ ಎಂದು ಈ ಭಾಗದ ರೈತರು ಗ್ರಾ.ಪಂ. ಸದಸ್ಯರು…

Read More

ಲೇಖನ- ಎಸ್.ಶ್ರೀಧರಮೂರ್ತಿ(ಶಿವಜಯಸುತ)ಮಂಡ್ಯ”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ಮೈತ್ರಿ ಮತ್ತು ಧಾತ್ರಿ ಬಾಲ್ಯದ ಗೆಳತಿಯರು. ಎರಡು ಜೀವ ಒಂದೇ ಪ್ರಾಣದಂತಿತ್ತು ಅವರ‌ ಗೆಳೆತನ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಯವರೆಗೂ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಇಬ್ಬರೂ ಓದಿನಲ್ಲಿ ತುಂಬಾ ಚುರುಕು. ಏಳನೇ ತರಗತಿಯಲ್ಲಿ ಮೈತ್ರಿ ಶಾಲೆಗೆ ಪ್ರಥಮಳಾದರೆ ಧಾತ್ರಿ ದ್ವಿತೀಯ ಸ್ಥಾನ ಪಡೆದಿದ್ದಳು. ಶಾಲೆಯ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮುಂದಿದ್ದು ಶಿಕ್ಷಕ- ಶಿಕ್ಷಕಿಯರಿಗೆ ಪ್ರೀತಿ ಪಾತ್ರರಾಗಿದ್ದರು ಈ ಕನಸು ಕಂಗಳ ಪೋರಿಯರು. ಅವರಿಬ್ಬರ ವಿಚಾರ,ಹವ್ಯಾಸ, ಅಭ್ಯಾಸ, ಸ್ವಭಾವಗಳೆಲ್ಲವೂ ಅಪರಿಚಿತರಿಗೆ ಅವರು ಅವಳಿ ಸಹೋದರಿಯರಿರಬೇಕೆಂಬ ಭ್ರಮೆ ಹುಟ್ಟಿಸುತ್ತಿತ್ತು. ಕೊನೆಯವರೆಗೂ ಜೊತೆಯಾಗಿ ಓದಿ ವೈದ್ಯೆಯರಾಗುವ ಹಂಬಲ ಇವರದು. ಮೈತ್ರಿ ಬಡ ಕುಟುಂಬದ ಕುಡಿ. ಆಕೆಯ ಅಪ್ಪ ಕಛೇರಿಯೊಂದರ ದಿನಗೂಲಿ ಗುಮಾಸ್ತರಾಗಿದ್ದರು. ಅಮ್ಮ ಅನಕ್ಷರಸ್ಥ ಗೃಹಿಣಿ. ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಪ್ರೀತಿಯ ತಮ್ಮನೊಂದಿಗೆ ಇದ್ದುದರಲ್ಲಿಯೇ ತೃಪ್ತಿ ಕಾಣುತ್ತಿದ್ದಳು ಮೈತ್ರಿ. ಆದರೆ ಧಾತ್ರಿ ಐಶ್ವರ್ಯ ಲಾಲಸೆಯ ಸಿರಿವಂತ ಮನೆತನದವಳು. ಶ್ರೀಮಂತ ಉದ್ಯಮಿ ಹಾಗೂ ಜಮೀನ್ದಾರರ ಮಗಳವಳು. ಅವಳಿಗೂ…

Read More

ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಡಾ. ಸರಸ್ವತಿ ಪಾಟೀಲ ಅವರು ಒಬ್ಬ ಅತ್ಯಂತ ಪ್ರಬುದ್ಧ, ಗಂಭೀರ, ಸಂಶೋಧನಾತ್ಮಕ ನಿಲುವಿನ, ಸಮಚಿತ್ತದ ಮಹಿಳೆಎಂದರೆ ತಪ್ಪಾಗಲಾರದು. ಇವರು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರದ ದತ್ತಿ ದಾಸೋಹಿಗಳು.ತಮ್ಮತಾಯಿ -ತಂದೆ, ಅತ್ತೆ -ಮಾವ, ಅವರ ಪತಿ ಡಾ. ಬಿ. ಆರ್. ಪಾಟೀಲರು ಹಾಗೂ ಅವರ ಪಿ. ಎಚ್. ಡಿ ಮಾರ್ಗದರ್ಶಕರ ಹೆಸರಿನಲ್ಲಿ ದತ್ತಿ ದಾಸೋಹದ ಸೇವೆಯನ್ನು ಮಾಡಿದ್ದಾರೆ.ಡಾ. ಸರಸ್ವತಿ ಪಾಟೀಲ ಅವರ ತಾಯಿಯವರು ಶ್ರೀಮತಿ ಗೌರಮ್ಮ, ತಂದೆಯವರು ಶ್ರೀಯುತ ಬಿ. ಎಚ್.ಸಿಂದಗಿ, ನಿವೃತ್ತ ಉಪ ನಿರ್ದೇಶಕರು,ಕೃಷಿ ಇಲಾಖೆ. ಪರಿಶ್ರಮ ಜೀವಿಗಳು,ಶಿಕ್ಷಣ ಪ್ರೇಮಿಗಳು ತಮ್ಮ ಮಕ್ಕಳ ಜೊತೆಗೆ ಬೇರೆಯವರ ಮಕ್ಕಳನ್ನು ಮನೆಯಲ್ಲಿ ಇಟ್ಟುಕೊಂಡು ಶಿಕ್ಷಣ ಕೊಡಿಸಿದ ಮಹನೀಯರು.ಅವರು ಶಿಕ್ಷಣ ಕಾಶಿ ಎಂದೇ ಕರೆಸಿಕೊಂಡಿರುವ ಧಾರವಾಡದಲ್ಲಿ ಹುಟ್ಟಿ ಬೆಳೆದರು. ಪ್ರಾಥಮಿಕ ಶಿಕ್ಷಣವನ್ನು ಪ್ರೆಸೆಂಟೇಶನ್ ಕಾನ್ವೆಂಟ್ ಸ್ಕೂಲ್ ನಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ ನಲ್ಲಿ, ಬಿ.ಎಸ್ಸಿ. ಕರ್ನಾಟಕ ಕಾಲೇಜಿನಲ್ಲಿ,ಎಂ.ಸ್ಸಿ ಕರ್ನಾಟಕ…

Read More

ಉದಯರಶ್ಮಿ ದಿನಪತ್ರಿಕೆ ಝಳಕಿ: ಇಲ್ಲಿನ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿ ಬಂದ ಪಿಎಸ್‌ಐ ಮಂಜುನಾಥ ತಿರಕನವರ ಇವರನ್ನು ಕ.ರ.ವೇ ತಾಲೂಕಾ ಉಪಾಧ್ಯಕ್ಷ ಪ್ರಕಾಶಗೌಡ ಬಿರಾದಾರರವರ ನೇತೃತ್ವದಲ್ಲಿ ಶಾಲು ಹೊಂದಿಸಿ ಹೂಗುಚ್ಛವನ್ನು ನೀಡುವ ಮೂಲಕ ಸ್ವಾಗತ ಕೋರಲಾಯಿತು.ಈ ಸಂದರ್ಭದಲ್ಲಿ ಕ.ರವೇ ವಲಯ ಅಧ್ಯಕ್ಷರಾದ ರವಿಕುಮಾರ ಹೂಗಾರ, ಸಂತೋಷ ನಾವಿ, ನಿರಂಜನ ಪೂಜಾರಿ, ಹರೀಶ ಶೆಟ್ಟಿ, ಪಿಂಟು ಬಿರಾದಾರ, ಬಾಲಕೃಷ್ಣ ಭೋಸಲೆ, ಮಲ್ಲಿಕಾರ್ಜುನ ಬನಸೋಡೆ, ಅಮೋಘ ಢಾಳೆಯವರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಮುಖ್ಯಮಂತ್ರಿಗಳು ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು ಎಂದು ಕುಟುಕಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಮಹಾನಗರ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆ ತೋರಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತುರ್ತು ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.ಶಾಸಕರ ಬಂಡಾಯ ತಣಿಸುವುದಕ್ಕೆ, ಕಾಂಗ್ರೆಸ್ ಪಕ್ಷದಲ್ಲಿನ ಬೇಗುದಿಯನ್ನು ಕಡಿಮೆ ಮಾಡಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಮಯವೇ ಸಾಲುತ್ತಿಲ್ಲ. ಇದನ್ನು ನಾನು ತಪ್ಪೆನ್ನಲಾರೆ. ಆದರೆ, ಪಾಲಿಕೆ ನೌಕರರು ಎಸಗಿದ ಪಾಪವೇನು? ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಳಂಬ ಧೋರಣೆ ಯಾಕೆ? ಸ್ವತಃ ಮುಖ್ಯಮಂತ್ರಿ ಅವರೇ ಮಾನವೀಯ ನೆಲೆಗಟ್ಟಿನಲ್ಲಿ ತಕ್ಷಣವೇ ಕ್ರಮ ವಹಿಸುತ್ತಿಲ್ಲ ಏಕೆ? ಹಗಲಿರುಳು ಜನರಿಗಾಗಿ ದುಡಿಯುವ ಅವರ ಬದುಕಿಗೂ…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮುಖ್ಯರಸ್ತೆಗಳ ಪಕ್ಕದ ಎರಡು ಬದಿಗಳಲ್ಲಿ ಚಂಡಿಗಳ ಜಾಗ ಒತ್ತುವರಿ ಮಾಡಿಕೊಂಡು ಕಟ್ಟಿರುವ ಗೂಡಂಗಡಿಗಳು, ತಳ್ಳು ಬಂಡಿಗಳ ತೆರವು ಕಾರ್ಯಾಚರಣೆ ಬುಧವಾರ ನಡೆಯಿತು.ಪುರಸಭೆ ಮುಖ್ಯಾಧಿಕಾರಿ ವಿಜಯಮಹಾಂತೇಶ ಹೂಗಾರ ಮಾಹಿತಿ ನೀಡಿ ಮಾತನಾಡಿ ಪಟ್ಟಣದ ಮುಖ್ಯರಸ್ತೆಗಳ ಚರಂಡಿಗಳು ಒತ್ತುವರಿಯಾಗಿದ್ದರಿಂದ ಚರಂಡಿಗಳ ಸ್ವಚ್ಚತೆ ಮಾಡಲಾಗುತ್ತಿಲ್ಲ, ವಾಹನ ದಟ್ಟಣೆ ನಿಯಂತ್ರಣ ಮಾಡಲಾಗುತ್ತಿಲ್ಲ ಹೀಗಾಗಿ ಪುರಸಭೆ ಅಧ್ಯಕ್ಷೆ ಸುಹಾಸಿನಿ ವಿರೇಶ ಖೇಳಗಿ ಅಧ್ಯಕ್ಷತೆಯಲ್ಲಿ ಕೆಲ ತಿಂಗಳ ಹಿಂದೆ ಸಭೆ ನಡೆಸಲಾಗಿದ್ದು ಸರ್ವ ಸದಸ್ಯರ ಸಮ್ಮತಿಯ ನಂತರ ಠರಾವು ಪಾಸು ಮಾಡಿ ಪಟ್ಟಣದ ಸೂಚಿತ ರಸ್ತೆಗಳ ಒತ್ತುವರಿ ತೆರವು ಕಾರ್ಯಕ್ಕೆ ಸಿದ್ದತೆ ಮಾಡಿಕೊಳ್ಳಲಾಯಿತು. ಬಳಿಕ ತೆರವುಗೊಳಿಸುವ ರಸ್ತೆಗಳಲ್ಲಿರುವ ವ್ಯಾಪಾರಿಗಳು, ಸಾರ್ವಜನಿಕರಿಗೆ ನೋಟಿಸ್ ನೀಡಲಾಗಿದ್ದು ಮೈಕ್‌ಗಳ ಮೂಲಕವು ಡಂಗೂರ ಸಾರಿಸಲಾಗಿತ್ತು. ಒತ್ತುವರಿ ತೆರವಿನ ದಿನಾಂಕ ನಿಗದಿಗೊಳಿಸಿದ್ದರಿಂದ ಜುಲೈ ೯ ಮತ್ತು ೧೦ರಂದು ತೆರವು ಕಾರ್ಯಚರಣೆ ಕೈಗೊಂಡಿದ್ದೇವೆ. ಮೊದಲ ದಿನ ಬಸ್ ನಿಲ್ದಾಣದ ಮುಂದಿನ ರಸ್ತೆಯಿಂದ ಕಾರ್ಯಾಚರಣೆ ನಡೆದಿದ್ದು ಬಸವಣ್ಣ ದೇವರ ಗುಡಿ ತನಕ ತಲುಪಿದೆ. ಗುರುವಾರದಂದು ಉಳಿದ…

Read More