Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೋರಟಗಿಯ ೧೧೦/೧೧ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.ಈ ಉಪ ಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ ಮಾರ್ಗಗಳಲ್ಲಿ ಮಾ.೨೬ರಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮರಾಠಿ ವಿದ್ಯಾಲಯ ಹಾಗೂ ಹೇಮರಡ್ಡಿ ಮಲ್ಲಮ್ಮ ಪ್ರೌಢ ಶಾಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸುವಂತೆಯೂ, ಯಾವುದೇ ಸಮಸ್ಯೆ ಬಾರದ ರೀತಿಯಿಂದ ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಿ ಸುಸೂತ್ರ ಪರೀಕ್ಷೆ ನಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭ ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯ,ಭದ್ರತೆ ಕುಡಿಯುವ ನೀರು, ಅಳವಡಿಸಿರುವ ಸಿಸಿಟಿವಿ ಎಲ್ಲ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ ಅವರು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಿ, ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಇರಬೇಕು. ಸಮಯಪಾಲನೆ ಅನುಸರಿಸಿಪ ರೀಕ್ಷೆಗೆ ನಿಯೋಜಿತ ಅಧಿಕಾರಿ,ಸಿಬ್ಬಂದಿ ವಹಿಸಿರುವ ಜವಾಬ್ದಾರಿ ಅಚ್ಚುಕಟ್ಟಾಗಿ ಬಹು ಎಚ್ಚರಿಕೆಯಿಂದ ನಿಭಾಯಿಸಿ ಎಂದು ಸೂಚನೆ ನೀಡಲಾಯಿತು.ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಇದ್ದರು.
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಗಳ ಸೂಕ್ಷ್ಮ ಪರಿಶೀಲನೆ, ಪ್ರೇರಣಾದಾಯಕ ಭೇಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುಧವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.ತಾಲೂಕಿನ ಹಿಟ್ಟಿನಹಳ್ಳಿ ಶ್ರೀ ಶಿವಮೂರ್ತಿ ಸ್ವಾಮಿ ಚರಂತಿಮಠ ಪ್ರೌಢ ಶಾಲೆ ಹಾಗೂ ನಗರದ ಲೋಯೋಲಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ವಿಕಾಸ್ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ, ಪರೀಕ್ಷಾ ಪರೀಕ್ಷಾ ವ್ಯವಸ್ಥೆಯ ಸಮಗ್ರ ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳೊಂದಿಗೆ ಸ್ನೇಹಪೂರ್ಣವಾಗಿ ಮಾತನಾಡಿದ ಅವರು, ಯಾವುದೇ ರೀತಿಯ ಆತಂಕ ಪಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪ್ರೇರೇಪಿಸಿದರು. ನಿಮ್ಮ ಪರಿಶ್ರಮವೇ ನಿಮ್ಮ ಯಶಸ್ಸಿನ ಮೂಲ, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿರಿ ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು. ಈ ಮಾತುಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದವುಬಳಿಕ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ, ಭದ್ರತಾ ವ್ಯವಸ್ಥೆಗಳು, ಪ್ರಶ್ನೆಪತ್ರಿಕೆ ವಿತರಣೆ ಕ್ರಮ, ಪರೀಕ್ಷಾ ಮೇಲ್ವಿಚಾರಣೆ, ಪ್ರಥಮ ಚಿಕಿತ್ಸಾ ವ್ಯವಸ್ಥೆ ಹಾಗೂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂಡಿಯಿಂದ ಕಲಬುರಗಿಗೆ ಹೋಗುವ ರಾಜ್ಯ ಕರ್ನಾಟಕ ರಾಜ್ಯ ಸಾರಿಗೆ ಬಸಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಘಟಕ ವ್ಯವಸ್ಥಾಪಕ ರೇವಣಸಿದ್ಧ ಖೈನೂರ ತಿಳಿಸಿದ್ದಾರೆ.ಆಲಮೇಲದಿಂದ ಅಫಝಲಪೂರಕ್ಕೆ ಹೋಗುವ ಮಾರ್ಗದಲ್ಲಿ ದೇವಣಗಾಂವ ಬ್ರೀಡ್ಜ ಕಾರ್ಯ ನಡೆದ ನಿಮಿತ್ಯ ಈ ಕ್ರಮ ಕೈಕೊಳ್ಳಲಾಗಿದೆ.ಇಂಡಿಯಿಂದ ಕಲಬುರಗಿಗೆ ಹೋಗುವ ಬಸ್ಸುಗಳು ಉಡಚಾಣ ಮಾರ್ಗವಾಗಿ ಅಪಝಲಪೂರಕ್ಕೆ ಹೋಗುವವು ಆದರೆ ದರದಲ್ಲಿ ಯಾವದೇ ಬದಲಾವಣೆ ಇರುವದಿಲ್ಲ ಎಂದು ಖೈನೂರ ತಿಳಿಸಿದ್ದಾರೆ
ಇಂಡಿಯಲ್ಲಿ ನಡೆದ ಟಾಸ್ಕಪೋರ್ಸ ಸಭೆಯಲ್ಲಿ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂಡಿ ನಗರ ಹಾಗೂ ತಾಲೂಕಿನಾದ್ಯಂತ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆ ಕ್ರಮವಹಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು ಯಾವದೇ ಶಾಲೆ ಹಾಗೂ ಹಾಸ್ಟೇಲಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಕೊಳ್ಳಬೇಕು ಎಂದು ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದರು.ಅವರು ನಗರದ ತಾ,ಪಂ ಸಬಾಭವನದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಗಳ ಬಗ್ಗೆ ನಡೆದ ಟಾಸ್ಕಪೋರ್ಸ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.ಬೇಸಿಗೆಯಲ್ಲಿ ನೀರಿನ ಅಭಾವ ಆಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ಮಾಹಿತಿ ಸಲ್ಲಿಸಬೇಕು ಎಂದರು.ನಗರ ನೀರು ಸರಬರಾಜಿಗೆ ಸಂಬಂದಿಸಿದಂತೆ ಅಗತ್ಯ ಮುಂಜಾಗೃತೆ ಕ್ರಮ ವಹಿಸಬೇಕು. ಗ್ರಾಪಂ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಎಂದು ಎಇಇ ಬಂಡಿಯವರಿಗೆ ಸೂಚನೆ ನೀಡಿದರು.ಇಒ ಭೀಮಾಶಂಕರ ಕನ್ನೂರರವರು ಮಾತನಾಡಿ ಮಿರಗಿ, ಮಸಳಿ, ಗುಬ್ಬೇವಾಡ, ಕೊಳುರಗಿ, ಝಳಕಿ, ಬಸನಾಳ, ಬಬಲಾದ, ನಿಂಬಾಳ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ಷಯರೋಗ ನಿಯಂತ್ರಿಸಬಹುದು ಮತ್ತು ಗುಣವಾಗಬಹುದಾದ ಕಾಯಿಲೆ. ೬ ರಿಂದ ೯ ತಿಂಗಳು ಔಷದ ತೆಗೆದುಕೊಂದರೆ ಸಂಪೂರ್ಣ ಗುಣವಾಗಬಹುದು ಎಂದು ತಾಲೂಕಾ ಆರೋಗ್ಯ ಅಧಿಕಾರಿ ಡಾ|| ರಾಜೇಶ ಕೋಳೆಕರ ಹೇಳಿದರು.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ವಿಶ್ವಕ್ಷಯ ರೋಗ ದಿನಾಚರಣೆ ನಿಮಿತ್ಯ ನಡೆದ ಸಭೆಯಲ್ಲಿ ಮಾತನಾಡಿದರು.ಕ್ಷಯರೋಗವು ಮೈಕೊಬ್ಯಾಕ್ಟೆರಿಯಂ ಟ್ಯುಬರ ಕ್ಯೂಲೋಸಿಸ ಎಂಬ ಬ್ಯಾಕ್ಟೆರಿಯಾದಿಂದ ಬರುತ್ತದೆ. ಹೆಚ್ಚಾಗಿ ಶ್ವಾಸಕೋಶಕ್ಕೆ ಹಾನಿಮಾಡುವ ಪಲ್ಮನರಿ ಕ್ಷಯರೋಗ ಎಂದು ಕರೆಯಲಾಗುತ್ತಿದೆ. ದೇಹದ ಇತರ ಭಾಗಗಳಿಗೂ ಇದು ಹರಡುತ್ತದೆ ಎಂದರು.ಡಾ|| ರವಿ ಭತಗುಣಕಿ, ಡಾ|| ಚೇತನ ಹುಬ್ಬಳ್ಳಿ, ಡಾ|| ವಿಕಾಸ ಸಿಂದಗಿ, ಡಾ|| ರವಿ ಅಂಬೇವಾಡಿ ಕ್ಷಯರೋಗದ ಲಕ್ಷಣ ಗುಣ ಪಡಿಸಬಹುದಾದ ಕ್ರಮಗಳ ಕುರಿತು ಮಾತನಾಡಿದರು.ವೈದ್ಯರಾದ ಅಮೀತ ಕೋಳೆಕರ, ವಿಪುಲ್ ಕೋಳೆಕರ, ಮನೋಜ ಗಿಡಗಂಟಿ, ಮುಜಮೀಲ್ ಪಾನ, ಪ್ರವೀಣ ಗಜಾಕೋಶ, ಚಿದಾನಂದ ಅರಗೆ, ಬಸವರಾಜ ಪಾಟೀಲ, ಸುನಂದಾ ಅಂಬಲಗಿ, ಮರಿಯಪ್ಪ ದೊಡಮನಿ, ಆನಂದ ಚವ್ಹಾಣ, ಪುಟ್ಟು ಮೆಡೆದಾರ ಸೇರಿದಂತೆ ಪೌರಕಾರ್ಮಿಕರು ಸಾರ್ವಜನಿಕರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಹರಿಯುವ ಕೃಷ್ಣಾ ಕಾಲುವೆಯ ಡಿಸ್ಟ್ರಿಬ್ಯೂಟರ್ ೨೩ ಮತ್ತು ೨೪ ಕ್ಕೆ ನೀರು ಬಿಡಬೇಕೆಂದು ಆಗ್ರಹಿಸಿ ಆಡಳಿತ ಸೌಧ ಎದುರು ಪ್ರತಿಭಟನೆ ನಡೆಸಿದರು.ಸಂಘದ ತಾಲೂಕಾ ಅಧ್ಯಕ್ಷ ಎಂ.ಎಚ್.ಪೂಜಾರಿ ಮಾತನಾಡಿ, ಹಿರೇಬೇವನೂರ ಭಾಗದ ಹೊಲಗಳಿಗೆ ನೀರಿನ ಅವಶ್ಯಕತೆ ಇದೆ. ಕಾರಣ ಈ ಕೂಡಲೇ ನೀರು ಬಿಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವದೆಂದರು. ಬೆಳೆಗಳಿಗೆ ಸೇರಿದಂತೆ ಜನ ಜಾನುವಾರುಗಳಿಗೂ ನೀರಿನ ತೊಂದರೆ ಯಾಗುತ್ತದೆ ಎಂದರು.ಸಿದ್ದರಾಮ ಹಂಜಗಿ, ಸುರೇಶ ಪಾಯಿಕರ, ಸಂಜು ಹಿರೇಕುರಬರ, ಧನು ರಾಠೋಡ, ದತ್ತು ಹೆಳವರ, ಮಾಂತು ಬಡಿಗೇರ, ಸುರೇಶ ಹಂಜಗಿ ಮತ್ತಿತರಿದ್ದರು..ಕಂದಾಯ ಉಪವಿಬಾಗಾಧಿರಿ ಚಿದಾನಂದ ಗುರುಸ್ವಾಮಿ ಇವರಿಗೆ ಮನವಿ ಪತ್ರ ಸಲ್ಲಿಸಿದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಮತ್ತು ಮೌಲ್ಯವನ್ನು ಕಲಿಸುವಲ್ಲಿ ಇಡೀ ಕುಟುಂಬದ ಪಾತ್ರ ಇದ್ದರೂ ಅದರಲ್ಲಿ ತಾಯಂದಿರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಅದಕ್ಕಂತಲೇ ಹಿರಿಯರು ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು ಎಂದು ಹೇಳಿದ್ದಾರೆ. ಮಗುವು ಚಿಕ್ಕವನಿರುವಾಗಲೇ ತಾಯಿಯಾದವಳು ತಪ್ಪು ಮಾಡಿದಾಗ ತಿದ್ದಿ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೋತ್ಸಾಹಿಸಿ, ಒಳ್ಳೆಯ ನಾಗರೀಕನಾಗುವಂತೆ ರೂಪಿಸಬೇಕು ಎಂದು ಹಿರಿಯ ಮಕ್ಕಳ ಸಾಹಿತಿ ಫ.ಗು.ಸಿದ್ದಾಪೂರ ಅವರು ಅಭಿಪ್ರಾಯಪಟ್ಟರು.ನಗರದ ಅಥಣಿ ರಸ್ತೆಯ ಅಲ್-ಅಮೀನ್ ಆಸ್ಪತ್ರೆ ಎದುರಿಗೆ ಇರುವ ಸೇನಾ ನಗರದ ಶಿವಾಲಯದ ದೇವಸ್ಥಾನದಲ್ಲಿ ಹಿರಿಯ ನಾಗರೀಕರ ಕ್ಷೇಮಾಭಿವೃದ್ಧಿ ಸಂಘ (ರಿ), ನವರಸಪುರ ಇವರ ಸಹಯೋಗದಡಿಯಲ್ಲಿ ಜರುಗಿದ “ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ & ಮೌಲ್ಯಧಾರಣೆಯಲ್ಲಿ ತಾಯಂದಿರ ಪಾತ್ರ” ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಇಂದಿನ ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರ ಮಾಯವಾಗುತ್ತಿರುವುದು ತೀರ ಕಳವಳಕಾರಿ ಸಂಗತಿ. ತಾಯಿ ಮಕ್ಕಳಿಗೆ ದೇಶಕ್ಕಾಗಿ ತ್ಯಾಗ ಮಾಡಿದ ವೀರ-ಮಹಾಪುರುಷರು ಜೀವ-ತತ್ವ-ಸಿದ್ದಾಂತ, ರಾಷ್ಟ್ರಪ್ರೇಮ, ತ್ಯಾಗ-ಬಲಿದಾನ ಮತ್ತು ಸಾಧಕರ ಯಶೋಗಾಥೆಯ ಬಗ್ಗೆ ನೀತಿ ಕಥೆಗಳನ್ನು ಹೇಳುವುದರ ಮೂಲಕ ಮನವರಿಕೆ…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಎರಡು ಬಾರಿ ಗೆದ್ದು ಇತಿಹಾಸ ನಿರ್ಮಿಸಿರುವ ಶಾಸಕ ಅನಿಲ್ ಚಿಕ್ಕಮಾದು ಅವರು ಅವಳಿ ತಾಲೂಕಿನ ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಹೆಚ್ ಡಿ ಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ತೆರೆದು ಉದೋಗ್ಯ ನೀಡಬೇಕೆಂದು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ಹೆಚ್ ಡಿ ಕೋಟೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಮಮತ ನವೀನ್ ಕುಮಾರ್ ಮನವಿ ಮಾಡಿದ್ದಾರೆ.ತಾಲೂಕಿನ ಯರಹಳ್ಳಿಯಲ್ಲಿ ಮಾತನಾಡಿದ ಮಮತ ನವೀನ್ ಕುಮಾರ್, ಶಾಸಕ ಅನಿಲ್ ಚಿಕ್ಕಮಾದು ಅವರು ಅನೇಕ ಅಭಿವೃದ್ಧಿ ಕೆಲಸ ಕಾರ್ಯ ಮಾಡುತ್ತಾ ಬರುತ್ತಿದ್ದಾರೆ. ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಕಳಚಲು ಸರ್ಕಾರದಿಂದ ಅನುದಾನ ತಂದು ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡಿದ್ದಾರೆ. ಆದರೆ ಹೆಚ್ ಡಿ ಕೋಟೆ, ಸರಗೂರು ತಾಲೂಕಿನಲ್ಲಿ ಯಾವುದೇ ಗಾರ್ಮೆಂಟ್ಸ್ ಫ್ಯಾಕ್ಟರಿ ಇಲ್ಲದ ಹಿನ್ನೆಲೆ ಅವಳಿ ತಾಲೂಕಿನ ಮಹಿಳೆಯರು ಕೆಲಸಕ್ಕಾಗಿ ಮೈಸೂರಿಗೇ ಹೋಗಬೇಕಾಗಿದೆ. ಇದರಿಂದ ಸಾಕಷ್ಟು ಕಾಲಹರಣ ಆಗುತ್ತಿದ್ದು,…
ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಕರ್ನಾಟಕ ಬಜೆಟ್ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಚರ್ಚೆಗಳೂ ಆರಂಭವಾಗಿವೆ. ಸಿಎಂ ಬದಲಾವಣೆ ವಿಷಯವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲವೂ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು.ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ.ಬಜೆಟ್ಗೆ ಸಾಲ ಮಾಡಿದ್ದನ್ನು ಸಮರ್ಥಿಸಿಕೊಂಡ ಸಿಎಂ, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ. ಹೀಗಾಗಿ ಸಾಲ ಮಾಡಿದ್ದೇನೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ ಎಂದು ವಿಪಕ್ಷಗಳ ಟೀಕೆಗೆ ಉತ್ತರಿಸಿದ್ದಾರೆ. “ಮೈಸೂರಿನ ಜನರಷ್ಟೇ ಅಲ್ಲ, ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ…
