Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಡಾ. ಬಿ.ಆರ್.ಅಂಬೇಡ್ಕರ ಅವರು ಎಂದಿಗೂ ದೇಶ ಒಡೆಯುವ, ಸಮಾಜ ಸೀಳುವ ಕೆಲಸ ಮಾಡಲಿಲ್ಲ. ತಮ್ಮ ಅವಿಶ್ರಾಂತ ಹೋರಾಟದ ಫಲವಾಗಿ ಅವರೊಬ್ಬ ಜಾತಿ ನಾಯಕರಾಗದೇ ಇಡೀ ರಾಷ್ಟ್ರದ ನಾಯಕರಾಗಿದ್ದಾರೆ ಎಂದು ಧಾರವಾಡ ಎಲ್ಐಸಿ ಉಪವ್ಯವಸ್ಥಾಪಕ ಪಿ.ಎಸ್.ಮಳಗಿ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ ತಾಲೂಕು ಪಂಚಾಯತ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೪ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಡಾ.ಅಂಬೇಡ್ಕರ ಅವರ ಹೋರಾಟ ಕೇವಲ ಸ್ವಂತದ ಉನ್ನತಿಗಾಗಿರದೇ ಇಡೀ ಒಂದು ಜನವರ್ಗದ ಉನ್ನತಿಗಾಗಿ ಇತ್ತು. ಅವರು ಈ ಶತಮಾನದ ಒಬ್ಬ ಶ್ರೇಷ್ಠ ಮೇಧಾವಿಯೆನಿಸಿಕೊಂಡು ಬುದ್ಧಿಯೋಗಿಯಾಗಿದ್ದಾರೆ ಎಂದರು.ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು.ಅಧ್ಯಕ್ಷತೆಯ ವಹಿಸಿದ್ದ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಡಿಎಸ್ಎಸ್ ಮುಖಂಡರಾದ ಅರವಿಂದ ಸಾಲವಾಡಗಿ, ಅಶೋಕ ಚಲವಾದಿ, ಮಹಾಂತೇಶ ಸಾಸಾಬಾಳ, ಸಂಜೀವ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಜರುಗಿದ ಡಾ.ಅಂಬೇಡ್ಕರವರ ೧೩೪ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಪಟ್ಟಣ ಪಂಚಾಯಿತಿ ಸಭಾಭವನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೇನಿಸಿದ್ದಾರೆ ಎಂದರು.ತಾಳಿಕೋಟಿ ಎಸ್.ಕೆ.ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತಾ ಚಲವಾದಿ ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.ಜಯಂತಿ ಅಂಗವಾಗಿ ಅಂಬೇಡ್ಕರ್ ವೃತ್ತದಿಂದ ಮೊಹರೆ ಹಣಮಂತ್ರಾಯ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಜರುಗಿತು. ನಂತರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಕಾರ್ಯಕ್ರಮ ಜರುಗಿತು.ತಹಶೀಲ್ದಾರ ಪ್ರಕಾಶ ಸಿಂದಗಿ, ಪಟ್ಟಣ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಕಲಾವಿದ ಬಸವರಾಜ ಹಡಪದ ಅವರು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅಂಬೇಡ್ಕರ್ ಅವರ ಚಿತ್ರವನ್ನು ಪೆನ್ಸಿಲ್ ನಿಂದ ಚಿತ್ರಿಸಿ ಅಭಿಮಾನ ಮೆರೆದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಜ್ಞಾನ, ಅಂಧಕಾರ, ಜಾತಿ ವ್ಯವಸ್ಥೆಯಿಂದ ಬೇಯುತ್ತಿರುವ ನಾಡನ್ನು ಕಟ್ಟಲು ಸಾಕಷ್ಟು ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಯಾರೊಬ್ಬರೂ ಪಾಲನೆ ಮಾಡದಿರುವದು ಬೇಸರದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ ಮಾತನಾಡಿ, ಡಾ.ಅಂಬೇಡ್ಕರ್ ಅವರ ಕನಸಿನಂತೆ ಜಾತಿ, ವರ್ಗ, ಲಿಂಗಬೇಧ ತಾರತಮ್ಯ ಮಾಡದೇ ಎಲ್ಲರೂ ಒಂದಾಗಿ ಈ ದೇಶವನ್ನು ಉನ್ನತ ಸ್ಥಾನಕ್ಕೆ ಒಯ್ಯೋಣ ಎಂದು ಪ್ರತಿಜ್ಞೆ ಮಾಡೋಣ ಎಂದರು.ಶಾಸಕ ಸಿ.ಎಸ್.ನಾಡಗೌಡ ಮಾತನಾಡಿದರು.ಸಹ ಪ್ರಾಧ್ಯಾಪಕ ಆರ್.ಎಚ್.ಸಜ್ಜನ ವಿಶೇಷ ಉಪನ್ಯಾಸ ನೀಡಿದರು. ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ತಾ.ಪಂ ಕಚೇರಿಯ ಖೂಬಾಸಿಂಗ್ ಜಾಧವ, ಪ್ರಮುಖರಾದ ತಿಪ್ಪಣ್ಣ ದೊಡಮನಿ, ಪ್ರಕಾಶ ಸರೂರ ಸೇರಿದಂತೆ ಹಲವರು ರಕ್ತದಾನ ಮಾಡಿದರು.ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಇಓ ನಿಂಗಪ್ಪ ಮಸಳಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿಯ ಹರಿಕಾರ, ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರು ರಚಿಸಿದ ಸಂವಿಧಾನ ಸೂರ್ಯ ಚಂದ್ರದರು ಇರುವವರೆಗೆ ಈ ದೇಶದ ಸಂವಿಧಾನವಾಗಿ ಉಳಿಯುತ್ತದೆ. ಯಾವುದೇ ಕಾಲಕ್ಕೂ ಸಂವಿಧಾನಕ್ಕೆ ಧಕ್ಕೆ ಆಗದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೇರಿದಂತೆ ನಮ್ಮ ನಾಯಕರು ನೋಡಿಕೊಳ್ಳುತ್ತಾರೆ ಎಂಬ ಅಚಲ ವಿಶ್ವಾಸವಿದೆ. ಅಂಬೇಡ್ಕರ್ ಜಯಂತಿ ಅಂದರೆ ನಮಗೆಲ್ಲ ಹಬ್ಬವಿದ್ದಂತೆ. ಏಕೆಂದರೆ ಎಲ್ಲ ಜನಾಂಗದವರಿಗೆ ನ್ಯಾಯ ಕೊಟ್ಟಿರುವ ಪುಣ್ಯಾತ್ಮರು ಅಂಬೇಡ್ಕರರು ಎಂದು ಹೇಳಿದರು.ಮುಖಂಡರಾದ ಮಡಿವಾಳ ಯಾಳವಾರ, ದಾದಾಸಾಹೇಬ ಬಾಗಾಯತ, ವಿಠ್ಠಲ ನಡುವಿನಕೇರಿ, ಶಶಿಧರ ಅಥರ್ಗಾ, ಗುರು ಗಚ್ಚಿನಮಠ, ರಾಘವ ಅಣ್ಣಿಗೇರಿ, ಶಂಕರ ಹೂಗಾರ, ಪಾಂಡುಸಾಹುಕಾರ ದೊಡಮನಿ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ಜವಾಹರ ಗೋಸಾವಿ, ದತ್ತಾ ಗೊಲಂಡೆ, ಅಶೋಕ ಬೆಲ್ಲದ, ರಾಚು ಬಿರಾದಾರ,…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಪೊಲೀಸ್ ಇಲಾಖೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಖ್ಯ ರಸ್ತೆಗಳಲ್ಲಿ ಅಪಘಾತ ವಲಯಗಳಲ್ಲಿ ಅಳವಡಿಸಿರುವ ಸೋಲಾರ್ ಬ್ಲಿಂಕರ್ಸ್ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.ಜಮಖಂಡಿ ಮತ್ತು ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಆಲಗೂರ ಮತ್ತು ಕವಟಗಿ ಆರ್ ಸಿ ಸೇರಿ ಜಿಲ್ಲೆಯಲ್ಲಿನ ಮುಖ್ಯರಸ್ತೆಗಳಲ್ಲಿನ ಅಪಘಾತ ವಲಯಗಳನ್ನು ಗುರುತಿಸಿ ಅಲ್ಲಿ ಜಿಗ್ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳ ವೇಗ ಕಡಿಮೆ ಮಾಡುವುದರ ಮೂಲಕ ಅಪಘಾತಗಳ ಸಂಖ್ಯೆ ಕಡಿಮೆಯಾಗುವಂತೆ ಮಾಡಿತ್ತು. ಈ ಪ್ರಯೋಗದ ಯಶಸ್ಸಿನ ಬೆನ್ನಲ್ಲೇ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಸೋಲಾರ್ ಬ್ಲಿಂಕರ್ಸ್ ಅಳವಡಿಸಿದೆ.ವಿಜಯಪೂರ—ಧಾರವಾಡ ಮುಖ್ಯ ರಸ್ತೆಯಲ್ಲಿನ ಚಿಕ್ಕಪಡಸಲಗಿ ಸೇತುವೆ ಬಳಿ ತಿರುವುಗಳಲ್ಲಿ, ಕ್ರಾಸ್ ರೋಡ್ಗಳಲ್ಲಿ, ಮುಖ್ಯ ರಸ್ತೆಗೆ ಬರುವ ದಾರಿಯಲ್ಲಿ ಹೀಗೆ ಅಪಘಾತವಾಗುವ ಸಾಧ್ಯತೆಗಳಿರುವ ಕಡೆಗಳಲ್ಲಿ ಸೋಲಾರ್ ಬ್ಲಿಂಕರ್ಸ್ ಅಳವಡಿಸಿದ್ದು, ಇದರಲ್ಲಿರುವ ಕೆಂಪು ದೀಪ ಮಿನುಗುತ್ತಾ ವಾಹನ ಸವಾರರನ್ನು ಎಚ್ಚರಿಸುತ್ತಿದೆ. ಇದನ್ನು ಗಮನಿಸಿ ವಾಹನ ಸವಾರರು ಎಚ್ಚರದಿಂದ ವಾಹನ ಚಲಾಯಿಸುವುದರಿಂದ ಅಪಘಾತಗಳು…
ಚಡಚಣದ ಕಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಚಿಕ್ಕ ವಯಸ್ಸಿನಲ್ಲಿಯೇ ಸಕಲ ಸುಖವನ್ನು ತ್ಯಜಿಸಿ, ಚೆನ್ನಮಲ್ಲಿಕಾರ್ಜುನನ್ನು ತನ್ನ ಪತಿಯೆಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ವಚನ ಸಾಹಿತ್ಯದಲ್ಲಿ ಗುರುತಿಸಿಕೊಂಡು ಮಾದರಿಯಾಗಿದ್ದಾಳೆ. ಸ್ತ್ರೀವಾದಿ ಚಳುವಳಿಯ ಪ್ರತಿಪಾದಕಿಯಾಗಿ ಅಂದಿನ ಕಾಲದಲ್ಲಿ ತೋರಿದ ದಿಟ್ಟತನ, ಶ್ರದ್ಧೆ, ವೈಚಾರಿಕ ಮನೋಭಾವನೆ ಇಂದಿನ ಮಹಿಳೆಯರ ಬದುಕಿಗೆ ಅಕ್ಕಮಹಾದೇವಿ ಆದರ್ಶ ಎಂದು ಚಡಚಣ ತಾಲೂಕು ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ದೀಪಾ ಪ್ರಶಾಂತ ಮಾಳಿಯವರು ಹೇಳಿದರು.ಚಡಚಣ ಪಟ್ಟಣದ ಕಲ್ಮೇಶ್ವರ ಪ್ರಾಥಮಿಕ ಶಾಲೆಯಲ್ಲಿ ಕದಳಿ ಮಹಿಳಾ ವೇದಿಕೆ ಹಾಗೂ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಅಕ್ಕಮಹಾದೇವಿ’ ಜಯಂತಿ ಕಾರ್ಯಕ್ರಮವನ್ನು ಉದ್ದೇಶಸಿ ಮಾತನಾಡಿದ ಅವರು. ಅಕ್ಕಮಹಾದೇವಿಯವರ ಧಾರ್ಮಿಕ ತತ್ತ್ವಗಳು, ಸಾಧನೆ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಕೊಡುಗೆಗಳು ಅಜರಾಮರ ಎಂದರು.ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕಾಶಿಬಾಯಿ ವಾಲಿಕಾರರವರು ಮಾತನಾಡುತ್ತ. ೧೨ನೇ ಶತಮಾನದ ವಚನಕಾರರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದಾರೆ. ಅಧಿಕಾರ,…
ರೇವತಗಾಂವ ಉಮರಜ ಮಾರ್ಗ ಮಧ್ಯದ ರಸ್ತೆ | ಸಂಚಾರಕ್ಕೆ ನಿತ್ಯ ಪರದಾಟ | ಚಾಲಕರಿಗೆ ಧೂಳಿನ ಸ್ವಾಗತ | ಬೈಕ್ ಸವಾರರೇ ಹುಷಾರ್! ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿಚಡಚಣ: ಶಿರಾಡೋಣ, ರೇವತಗಾಂವ ಉಮರಜ ಮಾರ್ಗ ಮಧ್ಯದ ರಸ್ತೆ ಸಂಪೂರ್ಣ ಹದಗೆಟ್ಟ ಹಿನ್ನಲೆ ವಾಹನ ಚಾಲಕರು, ಬೈಕ್ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸ್ವಲ್ಪ ಎಚ್ಚರ ತಪ್ಪಿದರೆ ಭಾರಿ ಅನಾಹುತಗಳು ಸಂಭವಿಸಬಹುದಾಗಿದೆ.ತೀವ್ರ ಹದಗೆಟ್ಟಿರುವ ರಸ್ತೆಯುದ್ಧಕ್ಕೂ ಅಲ್ಲಲ್ಲಿ ಭಾರೀ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಡಾಂಬರು ಕಾಣದೆ ದಶಕಗಳೇ ಕಳೆದಿವೆ. ಕಲ್ಲು-ಮಣ್ಣು, ಜಲ್ಲಿ ಕಲ್ಲು ಮೇಲೆದ್ದಿರುವುದರಿಂದ ಸಂಚಾರಕ್ಕೆ ಇನ್ನಿಲ್ಲದ ಅಡಚಣೆಯಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ತಗ್ಗು-ಗುಂಡಿಗಳಿರುವ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ, ವಾಹನ ಸವಾರರು ಜನಪ್ರತಿನಿಧಿಗಳಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.ರಸ್ತೆ ತುಂಬ ಗುಂಡು ಕಲ್ಲುಗಳು ತುಂಬಿಕೊಂಡಿದ್ದು, ಅಲ್ಲಲ್ಲಿ ತಗ್ಗು-ದಿನ್ನೆಗಳು ನಿರ್ಮಾಣವಾಗಿವೆ. ಅಲ್ಲದೆ, ಗಾಡಿಗಳ ಓಡಾಟದಿಂದ ಧೂಳು ಏಳುತ್ತಿದ್ದು, ಚಾಲಕರು ಪರದಾಡುತ್ತಿದ್ದಾರೆ. ಬೈಕ್ ಸವಾರರು ಈ ರಸ್ತೆಯಲ್ಲಿ ಜೀವ ಕೈಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನಸ್ಸು ಆಗೋಚರವಾಗಿದ್ದು ಸೂಕ್ಷ್ಮ ಹಾಗೂ ಸಂಕೀರ್ಣವಾದ ರಚನೆಹೊಂದಿದೆ. ಸ್ವಸ್ಥ ಮನದಲ್ಲಿ ಸ್ವಸ್ಥ ಮನಸ್ಸಿರಬೇಕು. ಒಮ್ಮೆ ಮನಸ್ಸು ಆಘಾತಕ್ಕೊಳಗಾದರೆ ಅದನ್ನು ತಿದ್ದುವುದು ಕಠಿಣ, ಇತ್ತೀಚೆಗೆ ಹಿರಿಯರಂತೆ ಮಕ್ಕಳೂ ಕೂಡ ಮೊಬೈಲ ನೋಡುವುದರಲ್ಲಿ ತಲ್ಲೀನರಾಗಿರುತ್ತಾರೆ. ಅವರ ಆಳುವನ್ನು ನಿಲ್ಲಿಸಲು ಕೈಗೆ ಮೊಬೈಲ ಕೊಟ್ಟು ಸುಮ್ಮನಾಗಿಸುತ್ತಾರೆ. ಸದಾ ಮೊಬೈಲ ನೋಡುವುದರಿಂದ ಕಣ್ಣು ಮತ್ತು ಮನಸ್ಸುಗಳ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮಕ್ಕಳಿಗೆ ಮೊಬೈಲ ಬದಲಿಗೆ ಪುಸ್ತಕಗಳನ್ನು ಕೊಟ್ಟು ನೈತಿಕ ಮೌಲ್ಯಗಳನ್ನು ಹೆಚ್ಚಿಸಬೇಕೆಂದು ನಾಡಿನ ಖ್ಯಾತ ಮನೋವೈದ್ಯ ಡಾ.ಆನಂದ ಪಾಂಡುರಂಗಿ ಹೇಳಿದರು.ಅವರು ಶರಣ ಸಾಹಿತ್ಯ ಪರಿಷತ್ತಿನ ಜನ ಕಲ್ಯಾಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಕಂಚ್ಯಾಣಿ ಶರಣಪ್ಪನವರ ಪುಣ್ಯ ಸ್ಮರಣೆಯ ದತ್ತಿ ಸಮಾರಂಭ ಲಿಂ. ಕಂಚ್ಯಾಣಿ ಶರಣಪ್ಪನವರ ಸ್ಮರಣಾರ್ಥ ನಡೆದ ದತ್ತಿ ಸಮಾರಂಭದಲ್ಲಿ ಶರಣ ಸಾಹಿತ್ಯ ಪರಿಷತ್ತು ಡಾ. ಆನಂದ ಪಾಂಡುರಂಗಿ ಹಾಗೂ ಶ್ರೀ ಎಸ್.ಎಸ್. ಝಳಕಿ ದಂಪತಿಗಳನ್ನು ಸನ್ಮಾನಿಸಿ ಜನಕಲ್ಯಾಣ ಪ್ರಶಸ್ತಿ ನೀಡಿ ಗೌರವಿಸಿತು.ನಿವೃತ್ತ ಉಪಪ್ರಾಚಾರ್ಯ ಎಸ್.ಎಸ್. ಝಳಕಿ ಸನ್ಮಾನ ಸ್ವೀಕರಿಸಿ ಮಾತನಾಡಿಶರಣಪ್ಪನವರು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕರ್ನಾಟಕ ಛಾಯಾ ಚಿತ್ರಗ್ರಾಹಕ ಸಂಘದ ವತಿಯಿಂದ ಪ್ರತೀ ವರ್ಷ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ತಾಲೂಕಿನ ತಾರನಾಳ ಗ್ರಾಮದ ರಂಜಾನ ಅಲ್ಲಾಸಾ ನಧಾಫ (ರಾಜು ಢವಳಗಿ) ಭಾಜನರಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ೭೦ನೇ ವರ್ಷದ ಛಾಯಾಗ್ರಾಹಕರ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
