Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಬಡತನದಲ್ಲಿ ಕಷ್ಟಪಟ್ಟು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.92.83 ರಷ್ಟು ಅಂಕ ಪಡೆದು ಗ್ರಾಮೀಣ ಭಾಗದ ತಾಲ್ಲೂಕಿನ ಬಾಬಾನಗರ ಗ್ರಾಮದ ಶಿಲ್ಪಾ ಲಕ್ಕಣ್ಣ ತಳವಾರ ಎಂಬ ವಿಧ್ಯಾರ್ಥಿನಿ ಸಾಧನೆ ಮಾಡಿದ್ದಾರೆ.ಐದನೇ ತರಗತಿಯವರೆಗೆ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರೆಕುರುಬರ ವಸ್ತಿ ಬಾಬಾನಗರ, ಆರರಿಂದ ಹತ್ತನೆ ತರಗತಿಯನ್ನು ಆದರ್ಶ ವಿದ್ಯಾಲಯ ಕಗ್ಗೋಡ, ಪಿಯುಸಿ ವಿಜ್ಞಾನ ವಿಭಾಗ ವಿಜಯಪುರದ ಬೆನಕಟ್ಟಿ ಕಾಲೇಜಿನಲ್ಲಿ ಪೂರೈಸಿದ್ದಾರೆ.ಕಡುಬಡತನದಲ್ಲಿ ಹಳ್ಳಿಯಲ್ಲಿಯೇ ಕಲಿತು ಹೆಚ್ಚು ಅಂಕ ಪಡೆದಿದ್ದಕ್ಕಾಗಿ ಕುಟುಂಬಸ್ಥರು, ಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಇಂದು ರಥೋತ್ಸವ | ನಾಳೆ ಪಲ್ಲಕ್ಕಿ ಉತ್ಸವ | ಹಿಂದು-ಮುಸ್ಲಿಂ ಸೌಹಾರ್ದದ ಪ್ರತಿಬಿಂಬ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್.ಎಮ್.ಇಟ್ಟಿಜಮಖಂಡಿ: ತಾಲೂಕಿನ ತುಬಚಿ ಗ್ರಾಮ ಹಿಂದು ಮುಸ್ಲಿಮರ ಸಮನ್ವಯತೆಗೆ ಖ್ಯಾತಿ ಹೊಂದಿದೆ. ಧಾರ್ಮಿಕವಾಗಿ ಗ್ರಾಮಕ್ಕೆ ಸುಕ್ಷೇತ್ರದ ಸ್ಥಾನಮಾನ ಕಲ್ಪಿಸಿದ ಪವಾಡ ಪುರುಷ ಶಿವಲಿಂಗೇಶ್ವರರ ರಥೋತ್ಸವ ಇಂದು ಸಂಜೆ 7 ಗಂಟೆಗೆ ನಡೆಯಲಿದೆ.ಡಾ. ಅಲ್ಲಮ್ಮಪ್ರಭು ಸ್ವಾಮಿಗಳು ನಾಗನೂರಮಠ (ಸಾವಳಗೇಶ ದೇವರು ವಿರಕ್ತಮಠ ತುಬಚಿ ಇವರ ನೇತೄತ್ವದಲ್ಲಿ ಏ.13 ರಂದು ಬೆಳ್ಳಿಗ್ಗೆ 11 ಗಂಟೆಗೆ ಪಲ್ಲಕ್ಕಿ ಉತ್ಸವ ಸಕಲ ವೈಭವಗಳೊಂದಿಗೆ ನಡೆಯಲಿದೆ.ಮಠದ ವಿಶೇಷ: ಮೂರು ಅಂತಸ್ತಿನ ಶಿವಲಿಂಗೇಶ್ವರ ಮಠ ಭಾವೈಕ್ಯ ಕೇಂದ್ರವಾಗಿದೆ. ಮಠದ ಕಟ್ಟಡ ಮೇಲಿರುವ ಗೋಪುರಕ್ಕೆ ಹೋಗಲು 12 ಮೆಟ್ಟಿಲುಗಳಿವೆ. ಮೂರನೇ ಅಂತಸ್ತು ಮುಸ್ಲಿಂ ದರ್ಗಾದ ಮಿನಾರ್ ರೂಪದಲ್ಲಿದೆ. ಮಧ್ಯದ ಅಂತಸ್ತಿನಲ್ಲಿ ಶಿವಲಿಂಗೇಶ್ವರರ ಅನುಷ್ಠಾನದ ಆಸನ ಸಹಿತ ಗದ್ದುಗೆ ಇದೆ. ಅದರ ಮೇಲೆ ಶ್ರೀಗಳ ಇಷ್ಟಲಿಂಗ ಇಡಲಾಗಿದೆ. ನೆಲಮನೆ ಅತ್ಯಂತ ಆಕರ್ಷಕವಾಗಿದೆ. ಗವಿ ರೂಪದಲ್ಲಿರುವ ನೆಲಮನೆಯ ಹದಿನಾಲ್ಕು ಮೆಟ್ಟಿಲುಗಳನ್ನು ಇಳಿದು ಒಳಗೆ ಪ್ರವೇಶಿಸಿ ನೋಡಿದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾಮಾಜಿಕ ನೆರವು ಯೋಜನೆಗಳಿಗೆ ಸಂಬಂಧಿಸಿದಂತೆ ಪಿಂಚಣಿದಾರರು ತಮ್ಮ ಕುಂದು-ಕೊರತೆಗಳನ್ನು ನೋಂದಾಯಿಸಲು,ಪಿಂಚಣಿ ಕುರಿತ ಮಾಹಿತಿ ಪಡೆಯಲು ಹಾಗೂ ಮಾಹಿತಿ ಹಂಚಿಕೊಳ್ಳಲು ಜಿಲ್ಲೆಯ ೧೩ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿ ತ್ರೈಮಾಸಿಕದಲ್ಲಿ ಒಂದು ಬಾರಿ ಪಿಂಚಣಿ ದಿನವನ್ನು ಆಯೋಜಿಸುವ ನಿಟ್ಟಿನಲ್ಲಿ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಯಶಸ್ವಿಯಾಗಿ ಏಪ್ರಿಲ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ೧೩ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ದಿನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ತಿಳಿಸಿದ್ದಾರೆ.ಅಂದು ಬೆಳಗ್ಗೆ ೧೧ ಗಂಟೆಗೆ ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ನಾಗಠಾಣ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ್ ಅವರು ಅರ್ಜುಣಗಿ ಗ್ರಾಮ ಪಂಚಾಯತಿಯಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಲೋಹಗಾಂವ ಗ್ರಾಮ ಪಂಚಾಯತಿಯ ಕಾರ್ಯಾಲಯದ ಸಮುದಾಯ ಭವನದಲ್ಲಿ,ಬಸವನ ಬಾಗೇವಾಡಿ ತಹಸೀಲ್ದಾರ್ ಗ್ರೇಡ್-೨ ಅವರು ಇವಣಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಂಚಣಿ ದಿನ ನಡೆಸಲಿದ್ದಾರೆ.ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಬಳಬಟ್ಟಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಸೌಲಭ್ಯಕ್ಕಾಗಿ ೨೬ ವರ್ಗಗಳ ಅಸಂಘಟಿತ ಕಾರ್ಮಿಕರು ಈಗಾಗಲೇ ಗುರುತಿಸಿ ನೋಂದಾಯಿಸಲಾಗಿದ್ದು, ಹೊಸದಾಗಿ ಹಿಂದುಳಿದ ವರ್ಗಗಗಳ ಪ್ರವರ್ಗ -೧,೨ಎ,೩ಎ ಮತ್ತು ೩ಬಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ ೩೮ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಪಂಗಡಗಳ ಕುಲಕಸುಬಿನಲ್ಲಿ ತೊಡಗಿರುವ ೨೭ ವರ್ಗಗಳ ಕಾರ್ಮಿಕರು ಒಳಗೊಂಡಂತೆ ೬೫ ಅಸಂಘಟಿತ ಕಾರ್ಮಿಕರನ್ನು ಹೊಸದಾಗಿ ಸೇರ್ಪಡೆ ಂಆಡಿ ಒಟ್ಟಾರೆ ೯೧ ವರ್ಗಗಳ ಅಸಂಘಟಿತ ಕಾರ್ಮಿಕರ ಸೌಲಭ್ಯ ಪಡೆಯಲು ಆನಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯ ಸೌಲಭ್ಯದ ನೋಂದಣಿಗಾಗಿ ಇರಬೇಕಾದ ಅರ್ಹತೆ ರಾಜ್ಯದ ನಿವಾಸಿಗಳಾಗಿರಬೇಕು. ಅರ್ಜಿದಾರರು ೧೮ ರಿಂದ ೬೦ ವರ್ಷದವರಾಗಿರಬೇಕು. ಆದಾಯ ತೆರಗೆ ಪಾವತಿದಾರರಾಗಿರಬಾರದು. ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯ ಹೊಂದಿರಬಾರದು.\ಪಾಸ್ ಫೋರ್ಟ್ ಅಳತೆಯ ಇತ್ತೀಚಿನ ಭವಚಿತ್ರ, ವಯಸ್ಸಿನ ಪ್ರಮಾಣ ಪತ್ರಕ್ಕಾಗಿ ಆಧಾರ ಕಾರ್ಡ್, ಶಾಲಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೧೪ರಂದು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೮ ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನಡೆಯಲಿದ್ದು, ನಗರದ ಬುದ್ಧವಿಹಾರ ಜಲನಗರದಿಂದ ಬಾಗಲಕೋಟೆ ಕ್ರಾಸ್, ಮಹಾತ್ಮಾ ಗಾಂಧೀ ವೃತ್ತದಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಶಿಲೆಯಲ್ಲಿ ಕೆತ್ತಿಸಿದ ಸಂವಿಧಾನ ಪೀಠಿಕೆಯ ಉದ್ಘಾಟನಾ ಕಾರ್ಯಕ್ರಮ ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿನ ನವೀಕರಿಸಿದ ಗ್ರಂಥಾಲಯ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತ ಸಂದೇಶ ಸಾರುವ ಛಾಯಾಚಿತ್ರಗಳ ಅನಾವರಣ ಹಾಗೂ ಜಯಂತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ ಅವಧಿಯನ್ನು ದಿನಾಂಕ : ೦೧-೦೫-೨೦೨೫ರವರೆಗೆ ಹಾಗೂ ರೈತರ ನೊಂದಣಿ ಅವಧಿಯನ್ನು ದಿನಾಂಕ : ೨೫-೦೪-೨೦೨೫ರವರೆಗೆ ವಿಸ್ತರಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಪ್ರತಿ ಕ್ವಿಂಟಾಲ್‌ಗೆ ೭೫೫೦ ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೊತ್ಸಾಹಧನ ಪ್ರತಿ ಕ್ವಿಂಟಾಲ್‌ಗೆ ೪೫೦ ರೂ. ಸೇರಿದಂತೆ ಒಟ್ಟು ೮೦೦೦ ರೂ. ಪ್ರತಿ ಕ್ವಿಂಟಾಲ್‌ಗೆ ಖರೀದಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ತೊಗರಿ ಬೆಳೆದ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್‌ಪಿಓ ಸಂಘಗಳಲ್ಲಿ ನೊಂದಣಿ ಮಾಡಿಸಿ ತೊಗರಿ ಮಾರಾಟ ಮಾಡಿ, ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳುವಂತೆ ಕನಿಷ್ಠ ಬೆಂಬಲ ಬಲೆ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ವಿಜಯಪುರ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿಯ ಕೃಷಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿದ್ದ ಮತ್ತು ಈಗ ಶಿರಸಿಯ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಭಾಗದ ವಿಜ್ಞಾನಿ ಹಾಗೂ ಸಹಾಯಕ ಪ್ರಾಧ್ಯಾಪಕರಾಗಿರುವ ಹರೀಶ್.ಡಿ.ಕೆ. ಅವರು “ನ್ಯಾನೋ ಗೊಬ್ಬರಗಳಿಗೆ ವಿಶೇಷ ಒತ್ತು ನೀಡುವ ಮೂಲಕ ಈರುಳ್ಳಿಯಲ್ಲಿ ಸಮಗ್ರ ಬೆಳೆ ನಿರ್ವಹಣೆ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.ಧಾರವಾಡ ಕೃಷಿ ವಿಶ್ವವಿದ್ಯಾಲಯದ ತೋಟಗಾರಿಕೆ ವಿಭಾಗದ ಪ್ರಾಧ್ಯಾಪಕರಾಗಿರುವ ಡಾ.ಎಸ್.ಜಿ.ಅಂಗಡಿ ಅವರ ಮಾರ್ಗದರ್ಶನದಲ್ಲಿ ಹರೀಶ್ ಡಿ.ಕೆ. ಅವರು ಸಂಶೋಧನೆ ಕೈಕೊಂಡು ಮಹಾಪ್ರಬಂಧ ಸಿದ್ದಪಡಿಸಿದ್ದರು. ಈ ಮಹಾಪ್ರಬಂಧವನ್ನು ಮೌಲ್ಯಮಾಪನ ಮಾಡಿದ ತಜ್ಞರು ನೀಡಿದ ಸಕಾರಾತ್ಮಕ ವರದಿಯನ್ನು ಪರಿಗಣಿಸಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಾ.ಹರೀಶ್ ಡಿ.ಕೆ. ಅವರಿಗೆ ಪಿಎಚ್‌ಡಿ ಪದವಿ ನೀಡಿ ಅಧಿಸೂಚನೆ ಹೊರಡಿಸಿದೆ.

Read More

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ 5 ಲಕ್ಷ ರೂ. ಚೆಕ್ ವಿತರಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಕರ್ನಾಟಕ ಪೊಲೀಸ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲಿಸಿದರು.ಪೋಲಿಸ್ ಇಲಾಖೆಯ ಸಿಬ್ಬಂದಿಯ ಮಕ್ಕಳಿಗಾಗಿ ನಿರ್ಮಾಣಗೊಂಡಿರುವ ರಾಜ್ಯದ ಮೊದಲ ಶಾಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಪ್ರತಿಷ್ಠಿತ ಶಾಲೆಯ ವಿಶಿಷ್ಟ ಚಟುವಟಿಕೆಗಳ ಬಗ್ಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ರವರು ಅಧ್ಯಕ್ಷ ಬಬಲೇಶ್ವರ ಅವರಿಗೆ ಸಮಗ್ರ ಮಾಹಿತಿ ಒದಗಿಸಿದರು.ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಬರಮನಿ, ಸಿಪಿಐ ಮುರುಗೇಶ್ ಚೆನ್ನಣ್ಣವರ್ ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಪರವಾಗಿ ಧಾರವಾಡ ಜಿಲ್ಲೆಯಾದ್ಯಂತ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಸಹಯೋಗದೊಂದಿಗೆ, “ಡ್ರಗ್ಸ್ ಅವೇರ್ನೆಸ್ ಪ್ರೋಗ್ರಾಮನ್ನು” ರೂಪಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು.ಗೃಹ ಸಚಿವರ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಹಾಸನದಲ್ಲಿ ಏ.12 ಮತ್ತು 13ರಂದು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೇಟ್ ಕ್ರೀಡಾಕೂಟದ ಲಾಂಛನವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿ, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಡಿಸಿಎಂ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ , ಜಾಹೀರಾತು ಪರಿಶೀಲನಾ ಸಮಿತಿ ಅಧ್ಯಕ್ಷ ರಮೇಶ್ ಬಾಬು ಇದ್ದರು.

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ ೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಧನಾತ್ಮಕವಾದ ಚಿಂತನೆಯು ವ್ಯಕ್ತಿಯೊಬ್ಬನಿಗೆ ತನ್ನ ಹುಟ್ಟಿನಿಂದಲೇ ಬರುವ ವರವಂತೂ ಖಂಡಿತಾ ಅಲ್ಲ. ಅದೇ ರೀತಿ ಧನಾತ್ಮಕ ಚಿಂತನೆಯ ವ್ಯಕ್ತಿಗಳು ಹುಟ್ಟಿನಿಂದಲೆ ಧನಾತ್ಮಕ ಚಿಂತಕರಾಗಿ ಹುಟ್ಟಿರುವುದಿಲ್ಲ. ಅದು ವ್ಯಕ್ತಿಗೆ ಗುರುಗಳು ಅಥವಾ ಆತನ ಜೀವನವು ಕಲಿಸಿಕೊಟ್ಟ ಒಂದು ಪಾಠವಾಗಿರುತ್ತದೆ. ಧನಾತ್ಕ ಚಿಂತನೆಯು ಸಾಮಾನ್ಯವಾಗಿ ಎಲ್ಲರ ತರ್ಕ ಅಥವಾ ಮನೋಭಾವ ಎಂದರೆ ತಪ್ಪಾಗಲಾರದು. ಅಥವಾ ವ್ಯಕ್ತಿಯೊಬ್ಬ ಯಾವುದೇ ಒಂದು ಸನ್ನಿವೇಶವನ್ನು ನೋಡುವ ಮತ್ತು ಅದನ್ನು ಸ್ವೀಕರಿಸುವ ರೀತಿಯೇ ಆಗಿದೆ. ಧನಾತ್ಮಕ ಚಿಂತನೆ ಯಾರಲ್ಲಿ ಇದನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇದೆಯೋ ಅವರನ್ನು ಆಧರಿಸಿರುತ್ತದೆ.ನಾನು ಮಾಡುವ ಯಾವ ಕೆಲಸವೂ ಯಶಸ್ವಿ ಆಗುವುದಿಲ್ಲ, ನನ್ನಿಂದ ನನ್ನ ಮುಂದೆ ಇರುವ ಗುರಿಯನ್ನು ತಲುಪಲು ಸಾಧ್ಯವಾಗುವುದಿಲ್ಲ. ನಾನು ಯಾವುದಕ್ಕೂ ಲಾಯಕ್ಕಲ್ಲ ಎನ್ನುವಂತಹ ಋಣಾತ್ಮಕವಾಗಿ (ನೆಗೆಟಿವ್) ಯೋಚನೆ ಮಾಡುವ ಬದಲಿಗೆ ಈ ಎಲ್ಲಾ ಸನ್ನಿವೇಶಗಳನ್ನು ತದ್ವಿರುದ್ಧವಾಗಿ ಯೋಚಿಸುವುದೇ ಧನಾತ್ಮಕ ಚಿಂತನೆ. ಮನಸ್ಸಿನಲ್ಲಿ ಬರುವ…

Read More