Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿ : ಶ್ರೀಕಂಠ ಈಶ್ವರ್ಹೆಚ್ ಡಿ ಕೋಟೆ : ಕರ್ನಾಟಕ ಕೇರಳ ಸಂಪರ್ಕಿಸುವ ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ಮಾಡುವ ಕುರಿತು ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿರುವ ಬೆನ್ನಲ್ಲೇ ಪ್ರವಾಸೋದ್ಯಮಕ್ಕೆ ಮತ್ತೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿ ಪುನಾರಂಭ ಮಾಡುವ ಸಾಧ್ಯತೆ ದಟ್ಟವಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಗೆ ಬರುವ ಸರಗೂರು ತಾಲೂಕಿನ ಕಾಡಂಚಿನ ಭಾಗದಲ್ಲಿ ಹುಲಿ ದಾಳಿ ನಡೆಸಿ ಮೂವರ ಪ್ರಾಣ ತೆಗೆದಿತ್ತು. ಒಂದೇ ತಿಂಗಳಲ್ಲಿ ನಾಲ್ವರ ಮೇಲೆ ದಾಳಿ ನಡೆಸಿ, ಮೂವರನ್ನು ಬಲಿ ಪಡೆದ ಬಳಿಕ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಕಾಡುಪ್ರಾಣಿಗಳು ನಾಡಿಗೆ ಬರಲು ಸಫಾರಿಯೇ ಕಾರಣ ಎಂಬ ಆರೋಪ ರೈತರಿಂದ ಕೇಳಿಬಂದ ಹಿನ್ನೆಲೆ ಸಫಾರಿಯನ್ನು ಬಂದ್ ಮಾಡಲಾಗಿದೆ. ಆದರೆ ಬಂದ್ ಮಾಡಿ ಇನ್ನೇನು ಮೂರು ತಿಂಗಳು ಕಳೆಯುತ್ತಾ ಬಂದರೂ ಸಫಾರಿ ಪುನಾರಂಭವಾಗಿಲ್ಲ. ಇದರಿಂದ ಹೋಟೆಲ್ ಉದ್ಯಮಕ್ಕೆ ಭಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನಗಲ್ ಹೇಳಿದರು. ಇಂದು ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ರಾಷ್ಟ್ರ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿಎಂಇ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಶಾಂತ ವಾತಾವರಣ, ಕಲಿಕಗೆ ಅಗತ್ಯವಾಗಿರುವ ಸೌಲಭ್ಯಗಳು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಮತ್ತು ಓದಿನ ಮೇಲೆ ಪರಿಣಾಮ ಬೀರುತ್ತವೆ. ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಶೈಕ್ಷಣಿಕ ಪರಿಸರ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಲು ಹೇಳಿ ಮಾಡಿಸಿದಂತಿದೆ. ಇಲ್ಲಿಯ ಕಲಿಕಾ ಸೌಲಭ್ಯಗಳು ಇತರ ಕಾಲೇಜುಗಳಿಗೆ ಮಾದರಿಯಾಗಿದೆ. ನಾನೂ ಕೂಡ ಮತ್ತೋಮ್ಮೆ ಇಲ್ಲಿಯ ಕಾಲೇಜಿನಲ್ಲಿ ಓದಬೇಕು…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕು ಮಕ್ಕಳ ಸಾಹಿತ್ಯ ಸಂಗಮ ಮತ್ತು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಗೆ ಮೈಸೂರಿನ ಅರಮನೆ ಆವರಣದ ಟೌನ್ ಹಾಲ್ ನಲ್ಲಿ ಜರುಗಿದ ಮೈಸೂರು ಉತ್ಸವ ಸಮಾರಂಭದಲ್ಲಿ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾನುವಾರ ಮೈಸೂರಿನ ಅರಮನೆಯ ಆವರಣದಲ್ಲಿ ಜರುಗಿದ ಮೈಸೂರು ಉತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಲಮೇಲನ ಶಿಕ್ಷಕ ಹಾಗೂ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಲಕ್ಷ್ಮೀಪುತ್ರ ಕಿರನಳ್ಳಿ ವಿಶೇಷ ಆವ್ಹಾನಿತರಾಗಿ ಪಾಲ್ಗೊಂಡು ಉತ್ಸವವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಅವರ ಸಂಘಟನಾತ್ಮಕ ಚಟುವಟಿಕೆಗಳು, ಶೈಕ್ಷಣಿಕ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ವಿಜಯನಗರ ,ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ವತಿಯಿಂದ ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ 02-01 : ‘ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮಕ್ಕಳಿಗೆ ಪಾಲಕರು ಕಲಿಸಬೇಕು, ಗುರುಗಳಿಗೆ, ಹಿರಿಯರಿಗೆ ಗೌರವ ನೀಡಬೇಕು’ ಎಂದು ಶಾಲಾ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಡಾ ಎˌ ಜೆˌ ನ್ಯಾಮಗೌಡ ಹೇಳಿದರು. ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಗದುಗಿನ ಜಗದ್ಗುರು ತೊಂಟದಾರ್ಯ ವಿದ್ಯಾಪೀಠದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 1999-2002ನೇ ಸಾಲಿನಲ್ಲಿ ಕಲಿತ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಸ್ನೇಹ ಸಂಗಮ-ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎನ್ನುತ್ತದೆ. ನಮ್ಮ ಸಂಸ್ಕೃತಿ ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ದಾಪೂರ್ವಕ ನಂಬಿಕೆಯ ಕಾರ್ಯಕ್ರಮ ಇದಾಗಿದೆ ಎಂದರು. ಗುರು – ಶಿಷ್ಯರ ಸಂಬಂಧ ಹೇಗೆಲ್ಲ ಇರಬಹುದು ಎಂಬುದನ್ನು ಈ ಕಾರ್ಯಕ್ರಮದ ಮೂಲಕ ಹಳೆ ವಿದ್ಯಾರ್ಥಿಗಳು ತೋರಿಸಿಕೊಟ್ಟರು, ಸುಮಾರು 4 ಗಂಟೆಗಳಿಗೂ ಹೆಚ್ಚು ಸಮಯ ನಡೆದ ಗುರುವಂದನಾ ಕಾರ್ಯಕ್ರಮ ತಮಗೆ…
ಡಂಬಳ ಗ್ರಾಮದಲ್ಲಿ ತೋಂಟದಾರ್ಯ ಜಾತ್ರಾ ಮಹೋತ್ಸವ ಪೆ.3 ರಿಂದ ಆರಂಭ ಉದಯರಶ್ಮಿ ದಿನಪತ್ರಿಕೆ ಡಂಬಳ: ಗದಗ ಜಿಲ್ಲೆಯ ಡಂಬಳ ಗ್ರಾಮದಲ್ಲಿ ಜಗದ್ಗುರುತೋಂಟದಾರ್ಯ ಮಠದ 286 ನೇ ಜಾತ್ರಾಮಹೋತ್ಸವ ಕಾರ್ಯಕ್ರಮಗಳು ಇದೇ ಪೆಬ್ರವರಿ 3 ರಿಂದ ಪ್ರಾರಂಭವಾಗಲಿದೆ. ಎರಡು ದಿನಗಳಕಾಲ ಸರಳತೆಯ ವೈಭವೋಪೇತದಲ್ಲಿ ನಡೆಯಲಿದೆ.ಲಿಂ.ತೋಂಟದ ಡಾ, ಸಿದ್ದಲಿಂಗ ಮಹಾಸ್ವಾಮೀಜಿಯವರ ಪ್ರಕಾಶದಲ್ಲಿ, ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಹಾಗೂ ಸಕಲ ಭಕ್ತರ ಸಮ್ಮುಖದಲ್ಲಿ ಸಡಗರ-ಸಂಭ್ರಮದ ವೈಭವದಲ್ಲಿ ವೈವಿಧ್ಯಮಯವಾಗಿ ಜರುಗಲಿವೆ.ಇದೇ ಪೆಬ್ರುವರಿ 3 ರಿಂದ ಅಸಂಖ್ಯಾತ ಭಕ್ತಗಣದ ಆರಾಧ್ಯದೈವ ಶ್ರೀ ತೋಂಟದಶ್ರೀಮಧರ್ದನಾರೀಶ್ವರ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ವಿದ್ಯುಕ್ತವಾಗಿ ಪ್ರಾರಂಭವಾಗಲಿದೆ.ಫೆಬ್ರುವರಿ 3 ರಂದು ಮಂಗಳವಾರ ಡಂಬಳದ ಭಕ್ತರಾದ ಚನ್ನಬಸಪ್ಪ. ಎಂ.ಪಟ್ಟಣಶೆಟ್ಟರ ಇವರ ಮನೆಗೆ ಪೂಜ್ಯ ಡಾ,ಸಿದ್ದರಾಮ ಶ್ರೀಗಳವರು ದಯಪಾಲಿಸಿ ಸಂಪ್ರದಾಯದಂತೆ ಪ್ರಸಾದ ಸ್ವೀಕರಿಸಿದ ಬಳಿಕ ಡಂಬಳ ಜೆ.ಟಿ. ಶ್ರೀಮಠಕ್ಕೆ ಸಂಜೆ 4 ಗಂಟೆಗೆ ಸಕಲವಾದ್ಯ ಮೇಳಗಳೊಂದಿಗೆ ಆಗಮಿಸಿ ಜಾತ್ರ್ಯೋತ್ಸವಕ್ಕೆ ಮೆರಗು ನೀಡಲಿದ್ದಾರೆ.ಜಾತ್ರಾ ಪ್ರಯುಕ್ತ ತೋಂಟದ ಮಧರ್ದನಾರೀಶ್ವರ ಶಿವಯೋಗಿಗಳವರ 286 ವರ್ಷದ ಮಹಾರಥೋತ್ಸವವು ಸಂಜೆ 6-30 ಗಂಟೆಗೆ ವಾದ್ಯಮೇಳಗಳೊಂದಿಗೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲ್ಲೂಕಿನ ಚಿಕ್ಕಪಡಸಲಗಿಯ ಶಿವಕರಣ ಹರಳಯ್ಯ ಸ್ಮಾರಕ ಪ್ರೌಢ ಶಾಲಾ ಆವರಣದಲ್ಲಿ ಫೆಬ್ರವರಿ 1ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ ಹಾಗೂ ವಿದ್ಯಾರ್ಥಿಗಳಿಂದ ಕಲಿಸಿದ ಗುರುಗಳಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. 1999–2002ನೇ ಸಾಲಿನ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಂದ 25ನೇ ವರ್ಷದ “ಗುರುವಂದನೆ ಹಾಗೂ ಸ್ನೇಹ ಸಂಗಮ” ರಜತ ಸಂಭ್ರಮದ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮವು ಶಾಲೆಯ ಹಳೆಯ ವಿದ್ಯಾರ್ಥಿಗಳ ಭಾವನಾತ್ಮಕ ಪುನರ್ಮಿಲನವಾಗಿದ್ದು, ತಮ್ಮ ಶಿಕ್ಷಕರಿಗೆ ಗೌರವ ಸಲ್ಲಿಸುವ ಹಾಗೂ ಹಳೆಯ ನೆನಪುಗಳನ್ನು ಹಂಚಿಕೊಳ್ಳುವ ವೇದಿಕೆಯಾಗಲಿದೆ. ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ ಎಂದು ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ಬಾಳು ಮಠೋಳಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ನಾದ ಕೆಡಿ ಗ್ರಾಮದ ಜಮಖಂಢಿ ಸುಗರ್ಸ ಯುನಿಟ್ ೨ ಕಾರ್ಖಾನೆಗೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ನೇತೃತ್ವದಲ್ಲಿ ಕಬ್ಬು ಪರಿಶೀಲನಾ ಸಮಿತಿ ಭೇಟಿ ನೀಡಿತು.ಕಬ್ಬಿನ ತೂಕ, ಮಷಿನ ಮತ್ತು ಇಳುವರಿ ಪರಿಶೀಲಿಸಿತು.ಕಬ್ಬಿನ ತೂಕದ ಮಷೀನು ಡಿಜಿಟಲ್ ಮತ್ತು ಎರಡು ತೂಕದ ಮಷಿನ್ ಇರುವದನ್ನು ಪರಿಶೀಲಿಸಿತು.ಅದರಂತೆ ಕಬ್ಬಿನ ರಿಕವರಿ ರೈತರ ಸಮ್ಮುಖದಲ್ಲಿ ಪ್ರಯೋಗಾಲಯದಲ್ಲಿ ಖಚಿತ ಪಡಿಸಿಕೊಂಡಿತು.ಅದಲ್ಲದೆ ರೈತರಿಗೆ ಕಬ್ಬಿನ ತೂಕದ ಪಾವತಿ ವಿತರಣೆ ಯಾಗುತ್ತಿರುವ ಬಗ್ಗೆ ಪರಿಶೀಲಿಸಿದರು.ರೈತರಿಗೆ ತೂಕದಲ್ಲಿ ಯಾವದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿ ಕೊಳ್ಳಲು ಕಾರ್ಖಾನೆ ಸಿಬ್ಬಂದಿಗೆ ಸೂಚಿಸಿತು. ಕಬ್ಬಿನ ಹಣ ನೀಡುವದನ್ನು ಸಮಿತಿ ಖಚಿತ ಪಡಿಸಿಕೊಂಡಿತು.ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಅಧಿಕಾರಿ ಶ್ರೀಶೈಲ ಗುರುಬೆಟ್ಟಿ, ಆಹಾರ ನೀರಿಕ್ಷಕ ಸಿದ್ದು ಹಲಸಂಗಿ, ಅಬಕಾರಿ ಅಧಿಕಾರಿ ರಾಹುಲ ನಾಯಕ, ಎಎಸ್ಐ ಇಂಡಿ ತೂಕ ಮತ್ತು ಅಳತೆ ಅಧಿಕಾರಿ ಶಶಿಕಾಂತ ಚವ್ಹಾಣ ರೈತ ಮುಖಂಡರಾದ ಸಿದ್ದರಾಮ ತಳವಾರ, ಮತ್ತಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಕುಸ್ತಿ ಸ್ಪರ್ಧೆಯಲ್ಲಿ ಸಿಂದಗಿ ತಾಲ್ಲೂಕಿನ ಚಿಕ್ಕ ಅಲ್ಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಭೈರವ್ ಬನ್ನೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸತತ ನಾಲ್ಕು ವರ್ಷಗಳಿಂದ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಿದ್ದಾರೆ.ಶಿಕ್ಷಕರ ಈ ಕ್ರೀಡಾ ಸಾಧನೆಗೆ ಸಿಂದಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ್ ಯಡ್ರಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಐ ಎಸ್ ಟಕ್ಕೆ, ಗೋಲಗೇರಿ ಕ್ಲಸ್ಟರ್ ಸಿಆರ್ ಪಿ ಶರಣು ಚಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಾಂತಪ್ಪ ನಾಯ್ಕೋಡಿ, ಶಿಕ್ಷಕರಾದ ಸೈಪನ್ ನದಾಫ್, ಮಡಿವಾಳ ನಾಯ್ಕೋಡಿ ಸೇರಿದಂತೆ ಚಿಕ್ಕ ಅಲ್ಲಾಪುರ ಗ್ರಾಮಸ್ಥರು ಹಾಗೂ ಗೋಲಗೇರಿ ಕ್ಲಸ್ಟರ್ ನ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾವಸಾರ ಕ್ಷತ್ರೀಯ ಕೊ-ಆಫ್ ಕ್ರೆಡಿಟ್ ಸೊಸಾಯಿಟಿಯ 2026-2031 ನೇ ಸಾಲಿನ 5 ವರ್ಷ ಅವಧಿಗಾಗಿ ಅಧ್ಯಕ್ಷರಾಗಿ ರಾಜೇಶ ದೇವಗಿರಿ ಹಾಗೂ ಉಪಾಧ್ಯಕ್ಷರಾಗಿ ದೀಪಕ ಶಿಂತ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣೆ ಅಧಿಕಾರಿ ಎ. ಎಸ್. ಕನ್ನೂರ ಅವರು ಘೋಷಿಸಿದ್ದಾರೆ.ಸೊಸಾಯಿಟಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ನೂತನವಾಗಿ ಅವಿರೋಧ ಆಯ್ಕೆಯಾದ ಆಡಳಿತ ಮಂಡಳಿ ನಿರ್ದೇಶಕರಾದ ನ್ಯಾಯವಾದಿ ಅಶೋಕ ವಾಯ್ ಮಿರಜಕರ, ನ್ಯಾಯವಾದಿ ತುಕಾರಾಮ ಡಿ ಜವಳಕರ, ವಿಜಯಕುಮಾರ ಎಸ್ ನವಲೆ, ಶ್ರೀಕಾಂತ ಎಸ್ ದೇವಗಿರಿ, ವಿಜಯ ಪಿ ಸುಲಾಖೆ, ಶ್ರೀನಿವಾಸ ಎಮ್ ಜವಳಕರ, ಶಶಿಕುಮಾರ ಎ ಚೌಡಿಹಾಳ, ಶ್ರೀಮತಿ ರಾಧಾಬಾಯಿ ಎಮ್ ದೇವಗಿರಿ, ಶ್ರೀಮತಿ ದೀಪಾ ಜಿ ಇಜಂತಕರ, ಕಾರ್ಯದರ್ಶಿಯಾದ ಗಣೇಶ ಎಸ್ ದೇವಗಿರಿ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಉಮರಜದ ಶ್ರೀ ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಸಲ್ಲಿಸಿದರು.ಶನಿವಾರದ ನಸುಕಿನ ಜಾವಗ ೪ ಗಂಟೆಯಿಂದ ಸಾಮೂಹಿಕವಾಗಿ ಭೀಮೆಯಲ್ಲಿ ಮಿಂದ ಭಕ್ತರು ಶ್ರೀ ರೇವಣಸಿದ್ಧೇಶ್ವರ ದೇವಾಸ್ಥಾನದವರಗೆ ದೀರ್ಘದಂಡ ನಮಸ್ಕಾರ ಹಾಕಿದರು. ಭಾವೈಕ್ಯತೆ ಸಾರುವ ಎಲ್ಲ ಧರ್ಮದ ಕಿರಿಯರಿಂದ ಹಿರಿಯ ಎಲ್ಲ ವಯೋಮಾನದವರು ದೀರ್ಘದಂಡ ನಮಸ್ಕಾರವನ್ನು ಹಾಕಿ ದೇವರ ದರ್ಶನ ಪಡೆದರು.ನಸುಕಿನ ಜಾವ ೬ ಗಂಟೆಗೆ ರೇವಣಸಿದ್ದೇಶ್ವರ ದೇವಾಸ್ಥಾನಕ್ಕೆ ಮಹಾಮಜ್ಜನ ಹಾಗೂ ಮಹಾ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿತು. ಮುಂಜಾನೆ ೧೦ ಗಂಟೆಗೆ ವಿಶೇಷ ಆಹ್ವಾನಿತರ ಸಮ್ಮುಖದಲ್ಲಿ ಶ್ರೀ ರೇವಣಸಿದ್ದೇಶ್ವರ ದೇವಾಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕಾಣಿಕೆ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು.
