Author: editor.udayarashmi@gmail.com

ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ | ಶಾಸಕ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ | ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಾಧಿ ಶಿಕ್ಷೆ ನೀಡಿದೆ. ಇದೇ ಪ್ರಕರಣದಲ್ಲಿ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಮತ್ತು ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಿದ್ದಾರೆ. ಇದೇ ವೇಳೆ ಯೋಗೇಶ್ ಗೌಡ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಸೂಚಿಸಿದೆ.ವಿನಯ್ ಕುಲಕರ್ಣಿ…

Read More

ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಗತ್ತಿನಲ್ಲಿ ಪ್ರೀತಿ-ವಿಶ್ವಾಸ ಬಹುಮುಖ್ಯವಾಗಿದೆ. ಪ್ರತಿಯೊಬ್ಬರೂ ಪ್ರೀತಿ-ವಿಶ್ವಾಸ ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಭಜನಾ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಟ್ಟೀಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 77ನೇ ಯಾತ್ರಾಮಹೋತ್ಸ, ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ 25ನೇ ಸಂಸ್ಮರಣೋತ್ಸವ ಹಾಗೂ ಶ್ರೀಗುರು ಮಹಾಂತೇಶ್ವರ ಪ್ರಶಸ್ತಿ ಹಾಗೂ ಭೂ ಜನ ಆರೋಗ್ಯ ರಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,ಗುರುರಕ್ಷೆ, ಧರ್ಮ ಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬರಲ್ಲಿ ಪ್ರೀತಿ-ವಿಶ್ವಾಸ ಇಲ್ಲದಂತಾಗಿರುವದು ವಿಷಾದನೀಯ. ಇದನ್ನು ಉಳಿಸಿಕೊಳ್ಳುವದು ಬಹಳ ದೊಡ್ಡ ಶಕ್ತಿಯಾಗಿದೆ. ಇದನ್ನು ಪ್ರತಿಯೊಬ್ಬರೂ ಉಳಿಸಿಕೊಂಡು ಜೀವನ ಮಾಡುವ ಅಗತ್ಯವಿದೆ. ಮನಸ್ಸಿನಲ್ಲಿ ಒಂದು ಹೊರಗೊಂದು ವಿಚಾರವನ್ನು ಇಟ್ಟುಕೊಂಡು ಜೀವನ ಸಾಗಿಸುವದು ಸರಿಯಲ್ಲ. ಎಂದಿಗೂ ವೈಮನಸ್ಸು ಇರಬಾರದು.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ನ ಪ್ರಸಕ್ತ ಸಾಲಿನ ಸಿಬಿಎಸ್‌ಸಿ ೧೦ನೆಯ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ೧೦ನೆಯ ತರಗತಿಯ ವಾಷೀಕ ಪರೀಕ್ಷೆಗೆ ಹಾಜರಾದ ಒಟ್ಟು ೫೭ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ೨೦ ವಿದ್ಯಾರ್ಥಿಗಳು, ೩೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಶಾಲೆಯ ಒಟ್ಟು ಪಲಿತಾಂಶ ೧೦೦ಕ್ಕೆ ೧೦೦ರಷ್ಟಾಗಿದೆ. ವೈಷ್ಣವಿ ಮಸಳಿ, ಮಾಹಿತಿ ತಂತ್ರಜ್ಞಾನ (ಐ.ಟಿ) ಮತ್ತು ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ, ಸ್ನೇಹಾ ಪಾಟೀಲ ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದುಕೊಂಡಿದ್ದಾರೆ. ವೈಷ್ಣವಿ ಮಸಳಿ ಶೇ.೯೯ರಷ್ಟು ಪ್ರತಿಶತ ಅಂಕ ಪಡೆಯುವುದರ ಮೂಲಕ ಸಿಂದಗಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಗೆ ಅತ್ಯುನ್ನತ ಶ್ರೇಣಿ ತೇರ್ಗೆಡೆ ಹೊಂದಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿನಿಯರ ಈ ಕಠಿಣ ಪರಿಶ್ರಮ, ಶಾಲೆಯ ಶಿಕ್ಷಕರ ಅತ್ಯುತ್ತಮ ಭೋಧನೆಯಿಂದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳನ್ನು ಪಡೆಯುವದರೊಂದಿಗೆ ಶಾಲೆಯ ಪಲಿತಾಂಶ ಶೇ.೧೦೦ಕ್ಕೆ ೧೦೦ರಷ್ಟು ವಿದ್ಯಾರ್ಥಿಗಳು ಉತ್ತಮ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಗತ್ತಿನಲ್ಲಿ ಬಹಳಷ್ಟು ಜನ ಜನ್ಮ ತಾಳುತ್ತಾರೆ. ಅದರಲ್ಲಿ ಬೆರಳಣಿಕೆಯಷ್ಟು ಜನ ಮಾತ್ರ ಮಹಾನ ಸಾಧಕಕರಾಗಿ ಹೊರಹೊಮ್ಮುತ್ತಾರೆ. ಆ ಸಾಲಿನಲ್ಲಿ ಬಾಬಾಸಾಹೇಬ್ ಅವರು ಒಬ್ಬರು. ಇವರ ಜಯಂತಿಯನ್ನು ಆಚರಣೆ ಮಾಡುವುದರ ಜೊತೆಗೆ ತತ್ವದಾರ್ಶಗಳನ್ನು ಮೈಗೂಡಿಸಿಕೊಂಡು ಬದುಕು ಸಾಗಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬಸ್ ಡಿಪೋದಲ್ಲಿ ಎಸ್‌ಸಿ/ಎಸ್‌ಟಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿದಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಜಯಂತಿಯನ್ನು ಪಕ್ಷಾತೀತವಾಗಿ ಎಲ್ಲರೂ ಆಚರಣೆ ಮಾಡಿದ್ದು ಸ್ವಾಗತಾರ್ಹ. ಅವರ ಚಿಂತನೆಗಳು ಮುಂದಿನ ಯುವ ಪಿಳಿಗೆಗೆ ರವಾನೆ ಆಗಬೇಕಾದರೆ ಹೆಚ್ಚೆಚ್ಚು ಗ್ರಂಥಾಲಯಗಳು ತೆರೆಯುವ ಮೂಲಕ ಅವರ ತತ್ವಗಳನ್ನು ಬಿತ್ತಬೇಕಾಗಿದೆ ಎಂದರು.ಈ ವೇಳೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೈ.ಸಿ.ಮಯೂರ ಮಾತನಾಡಿ, ಶೋಷಿತ ಸಮುದಾಯದಲ್ಲಿ ಜನಿಸಿ, ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ದ ಬಹುದೊಡ್ಡ ಕ್ರಾಂತಿಕಾರಿ ಚಳುವಳಿ ಆರಂಭಿಸಿದ್ದಲ್ಲದೇ ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಲು ಹಗಲು…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ನಿಡಗುಂದಿ ತಾಲ್ಲೂಕಿನಲ್ಲಿ ಭಾರತೀಯ ಜನಗಣತಿ-೨೦೨೭ರ ಮೊದಲ ಹಂತದ ಸಮೀಕ್ಷೆಗೆ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶ ಸೇರಿ ಒಟ್ಟು ೧೮೨ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಎ.ಡಿ. ಅಮರಾವದಗಿ ತಿಳಿಸಿದರು.ಆಲಮಟ್ಟಿ ಗ್ರಾಮದಲ್ಲಿ ಗುರುವಾರ ಗ್ರಾಮೀಣ ಭಾಗದ ಗಣತಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಗ್ರಾಮೀಣ ಭಾಗದಲ್ಲಿ ೧೧೬ ಬ್ಲಾಕ್ ಹಾಗೂ ಪಟ್ಟಣ ಭಾಗದಲ್ಲಿ ೨೬ ಬ್ಲಾಕ್‌ಗಳನ್ನು ರಚಿಸಲಾಗಿದೆ. ಪ್ರತಿ ಬ್ಲಾಕ್‌ಗೆ ಒಬ್ಬರಂತೆ ಗಣತಿದಾರರನ್ನು ಹಾಗೂ ಪ್ರತಿ ಆರು ಗಣತಿದಾರರಿಗೆ ಒಬ್ಬ ಸೂಪರ್‌ವೈಸರ್‌ರನ್ನು ನೇಮಿಸಲಾಗಿದೆ” ಎಂದರು.“ಮೊದಲ ಮೂರು ದಿನ ಆಯಾ ಬ್ಲಾಕ್‌ನ ಮನೆಗಳ ಗುರುತಿಸುವಿಕೆ ಕಾರ್ಯ ನಡೆಯಲಿದೆ. ನಂತರ ಗಣತಿ ಕಾರ್ಯ ಆರಂಭಗೊಂಡು ಮುಂದಿನ ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಪ್ರತಿ ಗಣತಿದಾರರಿಗೂ ಐದು ದಿನಗಳ ತರಬೇತಿ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.“ಜನಗಣತಿ ಎರಡು ಹಂತದಲ್ಲಿ ನಡೆಯುತ್ತಿದ್ದು, ಈಗ ನಡೆಯುತ್ತಿರುವುದು ಮೊದಲ ಹಂತದ ಗಣತಿ. ಈ ಹಂತದಲ್ಲಿ ಮನೆಗಳ ಗುರುತಿಸುವಿಕೆ, ಕಟ್ಟಡಗಳಿಗೆ ಸಂಕೇತ ನೀಡುವುದು ಹಾಗೂ ಸ್ವತ್ತು ದಾಖಲಿಸುವ ಕಾರ್ಯ ನಡೆಯಲಿದೆ”…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯನ್ನು ಏ.೨೦ರಂದು ಸಂಜೆ ೫ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ನಗರದ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಹಾಗೂಅಂದು ಸಂಜೆ ೪ಗಂಟೆಗೆ ಭಾವಚಿತ್ರದ ಮೆರವಣಿಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ಜರುಗಲಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಇದೇ ಏಪ್ರಿಲ್ ೨೪ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:೧೮.೦೪.೨೦೨೬ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗ | ರವಿವಾರ ಸಂಜೆ 7ಗಂ. ಆರಂಭ | ಬಸವಜ್ಯೋತಿ ಪಾದಯಾತ್ರೆ ಆಯೋಜಕ ಬಿ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗದಲ್ಲಿ ಬಸವಜ್ಯೋತಿ ಪಾದಯಾತ್ರೆ ದಿ.19 ರವಿವಾರ ರಾ.7ಗಂ. ಆರಂಭಿಸಲಾಗುವುದು ಎಂದು ಆಯೋಜಕ ಬಿ.ಬಿ.ಪಾಟೀಲ ತಿಳಿಸಿದರು.ವಿಜಯಪುರದಲ್ಲಿ ಬಸವಜ್ಯೋತಿ ಪಾದಯಾತ್ರೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶಿಷ್ಟ ರೀತಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು. ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಾದಯಾತ್ರಿಗಳು ಸಂ.6ಗಂ. ಹಾಜರಿರುವುದು. ಸಂ.6.30ಗಂ. ಪೂಜೆ ಸಲ್ಲಿಸಿದ ನಂತರ ರಾ.7ಗಂ. ಬಸವಜ್ಯೋತಿ ಪಾದಯಾತ್ರೆಗೆ ಬಸವನ ಬಾಗೇವಾಡಿ ವಿರಕ್ತಮಠದ ಪ.ಪೂ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಮಸಬಿನಾಳ, ಉಕ್ಕಲಿ, ಉಕುಮನಾಳ ಮಾರ್ಗವಾಗಿ ಶಿವಗಿರಿ ತಲುಪಲಿದೆ. ನಂತರ ನಗರದ ಬಸವೇಶ್ವರ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. 50ಕಿ.ಮೀ ಮಾರ್ಗದೂದ್ದಕ್ಕೂ ಪಾದಯಾತ್ರಿಗಳಿಗೆ ಅಲ್ಪೋಪಹಾರ ಮತ್ತು ಲಘುಪಾನಿಯ ವ್ಯವಸ್ಥೆ ಕಲ್ಪಿಸಲಾಗುವುದು…

Read More

ಜತ್ತ ನಗರ ಸಂಪೂರ್ಣ ಬಂದ್ ಮಾಡಿ ಲಿಂಗಾಯತ ಸಮುದಾಯ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಸಾಂಗ್ಲಿ: ಜಿಲ್ಲೆಯ, ಜತ್ತ ತಾಲೂಕ ಕೇಂದ್ರದ ಗುರುಬಸವೇಶ್ವರ ವೃತ್ತದಲ್ಲಿ ಮಾಡ್ಗ್ಯಾಳದ ಸಾಗರ ಕೋರೆ ಅವರ ನೇತೃತ್ವದಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆಯ ಬೇಡಿಕೆಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಗೊಂಡು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ಜತ್ತ ನಗರವನ್ನು ಸಂಪೂರ್ಣ ಬಂದ್ ಮಾಡಿ ಲಿಂಗಾಯತ ಸಮುದಾಯ ಪ್ರತಿಭಟಿಸುತ್ತಿದೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ , ಪ್ರತಿಭಟನಾ ಮೆರವಣಿಗೆ ನಡೆದಿದೆ. ಮಾನ್ಯತೆ ಸೇರಿದಂತೆ ಲಿಂಗಾಯತ ಸಮುದಾಯದ ಅಭಿವೃದ್ಧಿಯ ಬೇಡಿಕೆಗಳಿಗಾಗಿ ಪ್ರತಿಭಟಿಸಲಾಗುತ್ತಿದೆ.ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದು ವಿಚಾರಿಸಿಲ್ಲ ಎಂದು ಹೋರಾಟ ನಿರತ ಲಿಂಗಾಯತ ಧರ್ಮಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಲಕ್ಷ ಸಂಖ್ಯೆಯಲ್ಲಿ ಲಿಂಗಾಯತರಿದ್ದರೂ ಸರಕಾರ ಅಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಲಿಂಗಾಯತ ಧರ್ಮಿಯರು, ಡಾ. ಅರಳಿ ನಾಗರಾಜ, ಶಿವಾನುಭವ ಮಂಟಪ ಸಂಸ್ಥೆ, ಜತ್ತ ಅರ್ಬನ್ ಬ್ಯಾಂಕ್, ಗಣೇಶ ಪತ್ತಿನ ಸಹಕಾರ ಸಂಘ, ಸರ್ವೋದಯ ಪತ್ತಿನ ಸಂಸ್ಥೆ…

Read More