Author: editor.udayarashmi@gmail.com

ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಕರ್ನಾಟಕ ಬಜೆಟ್ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಚರ್ಚೆಗಳೂ ಆರಂಭವಾಗಿವೆ. ಸಿಎಂ ಬದಲಾವಣೆ ವಿಷಯವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು.ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ.ಬಜೆಟ್‌ಗೆ ಸಾಲ ಮಾಡಿದ್ದನ್ನು ಸಮರ್ಥಿಸಿಕೊಂಡ ಸಿಎಂ, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ. ಹೀಗಾಗಿ ಸಾಲ ಮಾಡಿದ್ದೇನೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ ಎಂದು ವಿಪಕ್ಷಗಳ ಟೀಕೆಗೆ ಉತ್ತರಿಸಿದ್ದಾರೆ. “ಮೈಸೂರಿನ ಜನರಷ್ಟೇ ಅಲ್ಲ, ಇಡೀ ನಾಡಿನ ಜನರು ನಾನು ಮುಖ್ಯಮಂತ್ರಿಯಾಗಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಬಸಯ್ಯ ಮಲ್ಲಿಕಾರ್ಜುನಮಠ ಇವರು ಶ್ರೀಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ, ಸಾಧಕರ ಶ್ರೀಮಾತಾ ಪ್ರಕಾಶನ (ರಿ) ಅವರ ಧಾರವಾಡ ನುಡಿ ಸಂಭ್ರಮ ಪ್ರಯುಕ್ತ ನೀಡುವ “ರಾಷ್ಟ್ರಮಟ್ಟದ ಉತ್ತಮ ಸಮಾಜ ಸೇವಾರತ್ನ ಪ್ರಶಸ್ತಿ”ಗೆ ಭಾಜನರಾಗಿದ್ದು, ದಿ:೨೨ ರಂದು ಭಾನುವಾರ ಧಾರವಾಡ ರಂಗಾಯಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಡಾ.ನಾಗರಾಜ ತಂಬ್ರಹಳ್ಳಿ, ಲೀಲಾಧರ ನಾಯಕ್, ಟಿ.ತ್ಯಾಗರಾಜು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಚಡಚಣ ತಾಲೂಕು ಪಂಚಾಯತಿಯ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾಗಿ (ಇಓ) ಅಶೋಕ ಕುಮಾರ ರಾಠೋಡರವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು.ಸಂಜಯ ಖಡಗೇಕರ ಅವರ ವರ್ಗಾವಣೆಯಿಂದ ತೆರುವಾದ ಜಾಗದ ಚಡಚಣ ತಾಲೂಕು ಪಂಚಾಯತಿಯ ಇಓ ಆಗಿ ಅಧಿಕಾರ ಸ್ವೀಕರಿಸಿದರು.ಈ ವೇಳೆಯಲ್ಲಿ ಸಹಾಯಕ ನಿರ್ದೇಶಕರಾದ ಶಿವದತ್ತ ಕೊಟ್ಟಲಗಿಯವರು ಸೇರಿದಂತೆ ಎಲ್ಲ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ಮುಖಂಡರು ಚಡಚಣ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.ಮಾರ್ಚ್ 27, 2026 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ, ಒಳಮೀಸಲಾತಿಯನ್ನು ಜಾರಿಗೊಳಿಸದೆ ನೇಮಕಾತಿ ನಡೆಸಿದರೆ ಮಾದಿಗ ಸಮುದಾಯಕ್ಕೆ ಭರಿಸಲಾಗದ ಅನ್ಯಾಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿರುವ ಶೇ.15 ಮೀಸಲಾತಿಯಲ್ಲಿ ಸಮಾನ ಅನುಪಾತದಲ್ಲಿ ಹಂಚಿಕೆ ಮಾಡಿ, ಅದರಲ್ಲಿ ಮಾದಿಗರಿಗೆ ಶೇ. 6 ಮೀಸಲಾತಿಯನ್ನು ನೀಡಬೇಕು. ಉಳಿದ ಮೀಸಲಾತಿಯನ್ನು ಇತರ ವರ್ಗಗಳಿಗೆ ಹಂಚಿಕೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಸರ್ಕಾರವೇ ಒಳಮೀಸಲಾತಿಯನ್ನು ಜಾರಿಗೆ ತಂದಿರುವಾಗ ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿ ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮನವಿಯ ಮುಂಚೆ ಮಾದಿಗ ಸಮಾಜ ಬಾಂಧವರು ತಮಟೆ ಭಾರಿಸುತ್ತ ಚಡಚಣ ಪ್ರವಾಸಿ ಮಂದಿರದಿಂದ ಮೆರವಣಿಗೆ ಪ್ರಾರಂಭಿಸಿ ಬಸವೇಶ್ವರ ವೃತ್ತದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಪಿಂಚಣಿ ಹಾಗೂ ಕುಟುಂಬ ಪಿಂಚಣಿಗೆ ಸಂಬಂಧಿಸಿದಂತೆ ಬೇಡಿಕೆ ಈಡೇರಿಸಲು ಆಗ್ರಹಿಸಿ, ತೋಳಿಗೆ ಕಪ್ಪು ಪಟ್ಟಿ ಧರಿಸಿ ತಹಶೀಲ್ದಾರ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಬುಧವಾರ ಬೆಳಿಗ್ಗೆ ಆಗಮಿಸಿದ ತಾಲ್ಲೂಕು ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಪಿಂಚಣಿ ಸಮಸ್ಯೆ ಕುರಿತು ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನ ಅಧಿವೇಶನದಲ್ಲಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಮುಂಬರುವ ದಿನಗಳಲ್ಲಿ ಯಾವುದೇ ವೇತನ ಪರಿಷ್ಕರಣೆ ಹಾಗೂ ವರ್ಷದಲ್ಲಿ ಎರಡು ಬಾರಿ ನೀಡುತ್ತಿರುವ ತುಟ್ಟಿಭತ್ಯೆ ನೀಡಲು ಸಾಧ್ಯವಾಗುವುದಿಲ್ಲ ಎಂಬ ವಿಷಯ ಮಂಡಿಸಿರುವುದು ನಿವೃತ್ತ ನೌಕರರು ಹಾಗೂ ಕುಟುಂಬದವರಿಗೆ ಆಘಾತಕಾರಿ ವಿಷಯವಾಗಿದೆ. ಹೀಗೆ ಮಾಡುವುದರಿಂದ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ಕುಟುಂಬಗಳು ಬೀದಿ ಪಾಲಾಗುತ್ತವೆ. ಅಲ್ಲದೆ ಈ ವಿಷಯದ ಕುರಿತು ಸರ್ವೋಚ್ಛ ನ್ಯಾಯಾಲಯ ಪಿಂಚಣಿ ಭಿಕ್ಷೆಯಲ್ಲ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುರಿತ ಖಾಯಂ ವೈದ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿದ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ವೈದ್ಯರ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್ ಮಾತನಾಡಿ, ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾದ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಆರಂಭಿಸಿಲ್ಲ. ಜೊತೆಗೆ ಈಗ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನುರಿತ ಖಾಯಂ ವೈದ್ಯರಿಲ್ಲ ಹೀಗಾದರೆ ಬಡಜನತೆಯ ಪಾಡೇನು ಎನ್ನುವಂತಾಗಿದೆ. ಪಿಎಚ್‌ಸಿಗೆ ನೇಮಕಗೊಂಡು ಬರುವ ವೈದ್ಯರು ೬ ತಿಂಗಳಲ್ಲಿ ಬೇರೆಡೆ ತೆರಳುತ್ತಾರೆ ಹೀಗಾಗಿ ಖಾಯಂ ವೈದ್ಯರು ಇಲ್ಲದ ಸ್ಥಿತಿ ಇಲ್ಲಿನ ಪಿಎಚ್‌ಸಿಯದ್ದಾಗಿದೆ. ಗ್ರಾಮೀಣ ಭಾಗದ ಜನರ ಕಾಳಜಿಯಿಂದಾದರೂ ಕೂಡಲೇ ಖಾಯಂ ವೈದ್ಯರನ್ನು ಕೂಡಲೇ ನೇಮಕ ಮಾಡಬೇಕು. ಇಲ್ಲವಾದರೇ ಎಪ್ರೀಲ್ ದಿ:೧ ರಿಂದ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.ಚಿದಾನಂದ ಬಜಂತ್ರಿ, ಅಬೂಬಕರ್…

Read More

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿ ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಸಾವಿರ ಹೆಜ್ಜೆಗಳ ಪಯಣ ಮೊದಲ ಹೆಜ್ಜೆಯಲ್ಲಿ ಶುರುವಾಗುತ್ತದೆ. ಅಂತೆಯೇ ಯಾವುದರಲ್ಲೇ ಆಗಲಿ ಗೆಲುವು ಪಡೆಯುವದರ ಮೂಲಮಂತ್ರ ಎಂದರೆ ಸಂಕಲ್ಪ. ಮಂತ್ರಕ್ಕೆ ಮಾವಿನಕಾಯಿ ಉದುರುವುದಿಲ್ಲ ಎನ್ನುವ ಮಾತೊಂದಿದೆ. ರಸಭರಿತ ಮಾವುಗಳು ಕಣ್ಣಿಗೆ ಬಿದ್ದ ತಕ್ಷಣ ಮನಸ್ಸು ತಿನ್ನುವ ಬಯಕೆಯನ್ನು ವ್ಯಕ್ತಪಡಿಸುತ್ತದೆ. ಹಾಗಂತ ಮಾವಿನ ಮರದ ಕೆಳಗೆ ಬಾಯಿ ತೆರೆದು ನಿಂತರೆ ಮಾವಿನ ಹಣ್ಣು ಬಾಯಿಗೆ ಬಂದು ಬೀಳುವುದಿಲ್ಲ. ಮರ ಏರಲೇಬೇಕು. ಅದರ ಹಣ್ಣುಗಳನ್ನು ಕಿತ್ತು ಸವಿಯಬೇಕು. ಇದರರ್ಥ ಹಣ್ಣು ಬೇಕೆಂದವನು ಮರವನ್ನು ಏರಲೇಬೇಕು.ಮರ ಏರಬೇಕು ಲಾಲ್ ಬಹದ್ದೂರ ಶಾಸ್ತ್ರೀಯವರ ಜೀವನದಲ್ಲಿ ನಡೆದ ಒಂದು ಘಟನೆಯನ್ನು ತಮ್ಮ ಮುಂದೆ ಹೇಳಲೇಬೇಕು. ಅವರು ಚಿಕ್ಕವರಿದ್ದಾಗ ಗೆಳೆಯರೆಲ್ಲ ಕೂಡಿ ಮಾವಿನ ತೋಟಕ್ಕೆ ಲಗ್ಗೆಯಿಟ್ಟು ಹಣ್ಣನ್ನು ಸವಿಯಲು ನಿರ್ಧರಿಸಿದರು. ಅದರಂತೆ ತೋಟಕ್ಕೆ ನುಗ್ಗಿ ಹಣ್ಣನ್ನು ಕೀಳುತ್ತಿರುವಾಗ ತೋಟದ ಮಾಲಿಯು ಬಂದದ್ದು ಗೊತ್ತಾಗಿ ಎಲ್ಲ ಹುಡುಗರು ಕಾಲಿಗೆ ಬುದ್ಧಿ ಹೇಳಿದರು. ಆದರೆ ಬಾಲಕ ಶಾಸ್ತ್ರೀ ಮಾತ್ರ ಅಲ್ಲೇ ನಿಂತಿದ್ದ.…

Read More

ಲೇಖನ- ಡಾ ಶಶಿಕಾಂತ ಪಟ್ಟಣಪೂನಾ – ರಾಮದುರ್ಗಮೊ: 9552002338 ಉದಯರಶ್ಮಿ ದಿನಪತ್ರಿಕೆ ಕರ್ನಾಟಕ ಸರಕಾರ ಎಲ್ಲಾ ಶರಣರ ಜಯಂತಿಗಳನ್ನು ಆಚರಿಸುವ ಒಳ್ಳೆಯ ಯೋಜನೆಯನ್ನು ರೂಪಿಸಿದೆ. ಆದರೆ ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಅದೆಷ್ಟೋ ಮನವಿಗಳನ್ನು ಲೇಖನಗಳನ್ನು ಬರೆದು ಸರಕಾರಕ್ಕೆ ಜೇಡರ ದಾಸಿಮಯ್ಯ ಮತ್ತು ದೇವರ ದಾಸಿಮಯ್ಯ ಇಬ್ಬರೂ ಬೇರೆ ಬೇರೆ ಎಂಬ ಮನವಿ ಸಲ್ಲಿಸಿದರೂ ಸಹಿತ ಕುರುಡು ಕೆಪ್ಪರ ಸರಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ಇದು ಲಿಂಗಾಯತ ನೇಕಾರ ಸಮುದಾಯದವರಿಗೆ ಮಾಡುವ ಬಹು ದೊಡ್ಡ ದ್ರೋಹವಾಗಿದೆ. ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಬೇರೆ ಬೇರೆದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಇಬ್ಬರೂ ಬೇರೆ ಬೇರೆ. ಪ್ರತಿ ವರ್ಷವೂ ಕರ್ನಾಟಕ ಸರಕಾರವು ಆದ್ಯ ವಚನಕಾರ ದೇವರ ದಾಸಿಮಯ್ಯನ ಜಯಂತಿಗೆ ಲಕ್ಷ ಲಕ್ಷ ಹಣ ಕೊಟ್ಟು ರಾಜ್ಯಾದಂತ ದೇವರ ದಾಸಿಮಯ್ಯನವರ ಜಯಂತಿಯನ್ನು ಆಚರಿಸುವ ಕಾರ್ಯಕ್ಕೆ ಇಳಿದಿರುವುದು ಹಾಸ್ಯಾಸ್ಪದವಾಗಿದೆ.ದೇವರ ದಾಸಿಮಯ್ಯ ೧೧ ನೆಯ ಶತಮಾನದ ಶಿವ ಭಕ್ತ , ಇಮ್ಮಡಿ ಜಯಸಿಂಹನ ಮಡದಿ ಸುಗ್ಗಲೆ ಇವಳಿಗೆ…

Read More

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ಕಾಗವಾಡ: ತಾಲೂಕಿನ ಕವಲಗುಡ್ಡ ಹೊರ ವಲಯದಲ್ಲಿರುವ ಈಶ್ವರ್ ದುಂಡಪ್ಪ ತೆಗ್ಗಿನವರ ಇವರ ಮನೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ ಭೇಟಿ ನೀಡಿ ಪರಿಶೀಲಿಸಿದರು.ತಗ್ಗಿನವರ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಕಸ್ಮಿಕ ಬೆಂಕಿ ಹೊತ್ತಿಕೊಳ್ಳುತ್ತಿತ್ತು. ಇದನ್ನು ಮನಗಂಡು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಭೇಟಿಮಾಡಿ ಮನೆಯವರೊಂದಿಗೆ ಸಂದರ್ಶಿಸಿದಾಗ ಅಲ್ಲಿ ಯಾವುದೇ ರೀತಿಯ ಭಾನಾಮತಿ ಹಾಗೂ ಮಾಟ ಮಂತ್ರ ಇರುವುದಿಲ್ಲ. ಆತ್ಮವಿಶ್ವಾಸದಿಂದ ಧನಾತ್ಮಕ ಚಿಂತನೆ ಮಾಡಿದರೆ ಯಾವುದೇ ಭಯ ಬೇಡ ಎಂದು ಮನೆಯವರಿಗೆ ಆತ್ಮಸ್ಥೈರ್ಯ ನೀಡಿ ಬಹು ವರ್ಷಗಳಿಂದ ಕಂಡು ಬಂದಿರುವ ಸಮಸ್ಯೆಗೆ ಪರಿಹಾರ ನೀಡಲಾಯಿತು.ಈ ವೇಳೆ ಹುಲಿಕಲ್ ನಟರಾಜ ಮಾತನಾಡಿ, ಬಾನಾಮತಿ ಎಂಬುದು ಶತ್ರುಗಳಿಗೆ ಹಾನಿ ಮಾಡಲು ಅನಾರೋಗ್ಯ ತರಲು ಅಥವಾ ಕುಟುಂಬಗಳನ್ನು ಸರ್ವನಾಶ ಮಾಡಲು ನಡೆಸುವ ಕೆಟ್ಟ ಪ್ರಯೋಗ ಎಂಬ ಭಯ ಜನರಲ್ಲಿದೆ. ಇದರ ಭಯಕ್ಕೆ ಬಿದ್ದವರು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ.…

Read More