Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ರವೀಂದ್ರನಾಥ ಟ್ಯಾಗೋರ್ ಶಿಕ್ಷಣ ಸಂಸ್ಥೆಯ ಶ್ರೀ ಗುರುದೇವ ಪಬ್ಲಿಕ್ ಅಂತರಾಷ್ಟ್ರೀಯ ವಸತಿ ಶಾಲೆಯ ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮ ರೀತಿಯಲ್ಲಿ ಬಂದಿದೆ.ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದವರು ೮೨, ಡಿಸ್ಟಿಂಕ್ಷನ-೧೩, ಫಸ್ಟಕ್ಲಾಸ್-೪೦, ಸೆಕೆಂಡಕ್ಲಾಸ-೧೪, ಪಾಸಕ್ಲಾಸ-೯ ಫಲಿತಾಂಶ ಪಡೆದುಕೊಂಡಿದ್ದಾರೆ. ಅದರಲ್ಲಿ ಕುಮಾರಿ ದಿವ್ಯಾ ಮರೋಳ ೬೦೯ ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾಳೆ. ಹಾಗೆಯೇ ಶಿವಲಿಂಗ ಕಿಣಗಿ ೫೮೦ ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದರೆ ಮೊಹಮ್ಮದ ಮುಜಾಹಿದ್ ಕಾಚೂರ೫೭೭ ಅಂಕಗಳನ್ನು ಪಡೆಯುವ ಮೂಲಕ ತೃತಿಯ ಸ್ಥಾನ ಗಳಿಸಿದ್ದಾನೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ|| ರವೀಂದ್ರ ಭೋಸಲೆ, ಶ್ರೀಮತಿ ಡಾ|| ಉಮಾ ಭೋಸಲೆ, ಸಂಸ್ಥಾಪಕರ ಕಾರ್ಯದರ್ಶಿ ರಾಮಚಂದ್ರ ಭೋಸಲೆ, ಸುಧೀರ ಭೋಸಲೆ ಮುಖ್ಯ ಗುರುಗಳು ಹಾಗೂ ಎಲ್ಲಾ ಸಿಬ್ಬಂಧಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ಮೇ.೦೧ ಸಾಹಿತಿ ಡಾ.ಡಾ.ಚನ್ನಪ್ಪ ಕಟ್ಟಿ ಜನ್ಮದಿನ ಈ ಸಂದರ್ಭದಲ್ಲಿ ಅವರ ಶಿಷ್ಯ ಬಳಗ ಮತ್ತು ಅಭಿಮಾನಿಗಳು ಸೇರಿ ಸಿಂದಗಿಯಲ್ಲಿ ಇದೇ ಮೇ .೦೧ ಶುಕ್ರವಾರ ದಂದು “ನೆಲೆ” ಎನ್ನುವ ಅಭಿನಂದನಾ ಗ್ರಂಥ ಅರ್ಪಿಸುವ ಮೂಲಕ ಅವರ ೭೦ ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿಸಲಿದ್ದಾರೆ. ಆ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮನು ಪತ್ತಾರ, ಕಲಕೇರಿವಿಜಯಪುರ ಉದಯರಶ್ಮಿ ದಿನಪತ್ರಿಕೆ ಸೃಜನಶೀಲತೆಯೇ ಜೀವಾಳವಾಗಿಸಿಕೊಂಡ ಕನ್ನಡದ ಅಪರೂಪದ ಲೇಖಕರಲ್ಲಿ ಡಾ. ಚನ್ನಪ್ಪ ಕಟ್ಟಿ ಅವರು ಕೂಡಾ ಒಬ್ಬರು.ಸಿಂದಗಿ ಎಂಬ ‘ಅರೆ ನಗರಿ’ ಯಲ್ಲಿ ನೆಲೆ ನಿಂತು, ಕಾವ್ಯದ ಮೂಲಕ ಸಾಹಿತ್ಯದ ಯಾನವನ್ನು ಪ್ರಾರಂಭಿಸಿ ಕಥೆ, ವಿಮರ್ಶೆ, ಸಂಶೋಧನೆ, ಜೀವನ ಚರಿತ್ರೆ, ಸಂಪಾದನೆ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಅನೂಹ್ಯವಾದ ಕಾರ್ಯ ಮಾಡಿ ಮೌನ ಸಾಧಕರಾದ ಡಾ. ಚನ್ನಪ್ಪ ಕಟ್ಟಿ ಅವರು ಅಪ್ಪಟ ಗ್ರಾಮೀಣ ಪ್ರತಿಭೆ. ತಮ್ಮ ಗ್ರಾಮ ಬದುಕಿನ ಸಶಕ್ತ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ದಾರಿಯನ್ನು ತಂದು ಜೋಡಿಸುವ ಮೂಲಕ ಬರಹಕ್ಕೆ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೨ ರಂದು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯಿತು.ಈ ವೇಳೆ ಮುಖ್ಯ ಅತಿಥಿ ವಿಜಯಪುರದ ಹೆಚ್ಐವಿ ಏಡ್ಸ್ ಸಲಹೆಗಾರರಾದ ಅರ್ಚನಾ ಒಲಕೋಟೆ, ಮಾತನಾಡಿ, ಇಂದಿನ ಯುವಕರಲ್ಲಿ ಹೆಚ್ಐವಿ ಏಡ್ಸ್ ಸುರಕ್ಷಿತೆ ಬಗ್ಗೆ ಜಾಗೃತಿ ಅವಶ್ಯಕತೆ ಇದೆ ಅದರಂತೆ ತಡೆಗಟ್ಟುವಿಕೆ ಮತ್ತು ಚಿಕಿತ್ಸೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಬಗ್ಗೆ ಜಾಗೃತಿ ಮೂಡಿಸಿದರಲ್ಲದೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಯ ಇದೆ ಎಂದರು.ಈ ವೇಳೆಯಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಧರ್ಮಗುರು ಪ್ರಸಾದ್ ಎಂ.ಪಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಹೆಚ್ಐವಿ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಶಾಲೆಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಪ್ರತಿನಿತ್ಯ ಓದುವ ಕ್ರಮ ಕಡ್ಡಾಯ ಮಾಡಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ.ಶಾಲೆಗಳಲ್ಲಿ ಓದುವ ಮತ್ತು ಬೋರ್ಡ್ ಮೇಲೆ ಬರೆಯುವ, ನೋಟೀಸ್ ಬೋರ್ಡ್ ನಲ್ಲಿ ಹಾಕುವ ಅಭ್ಯಾಸವು ಮಾಸುತ್ತಿದೆ.ಮೊಬೈಲ್ ಯುಗದ ಪ್ರಭಾವದಲ್ಲಿ ಹಿಂದಿನ ಪದ್ದತಿಗಳು ಮರೆತು ಹೋಗುತ್ತಿರುವ ಈ ಹೊತ್ತಿನಲ್ಲಿ ಉತ್ತರ ಪ್ರದೇಶ ಸರ್ಕಾರ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯ ಮಾಡಿದೆ. ಇದೇ ರೀತಿಯಲ್ಲಿ ರಾಜ್ಯ ಸರ್ಕಾರ ಕೂಡ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಡಿಸೆಂಬರ್ ನಲ್ಲಿ ಸರ್ಕಾರಕ್ಕೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಮಾಡಿತ್ತು.ಈ ಮನವಿಗೆ ರಾಜ್ಯ ಸರ್ಕಾರ ಮನ್ನಣೆ ನೀಡಿ, ಈ ನಿಟ್ಟಿನಲ್ಲಿ ಕೂಡಲೇ ಕ್ರಮ ತೆಗೆದುಕೊಂಡ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪದ್ಮಶ್ರೀ ಪುರಸ್ಕೃತ ಹಿರಿಯ ಪೊಟೋ ಜರ್ನಲಿಸ್ಟ್ ರಘು ರಾಯ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಸಂತಾಪವ್ಯಕ್ತಪಡಿಸುತ್ತದೆ. ಬಾಂಗ್ಲಾ ವಿಮೋಚನಾ ಯುದ್ಧ, ಭೋಪಾಲ್ ಅನಿಲ ದುರಂತದಂತಹ ಪ್ರಮುಖ ಘಟನೆಗಳನ್ನು ಅವರು ತಮ್ಮ ಕ್ಯಾಮರಾದಲ್ಲಿ ದಾಖಲಿಸಿರುವುದು ಇತಿಹಾಸ ಪುಟದಲ್ಲಿ ಅಚ್ಚಳಿಯದ ಉಳಿದಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಸೇವೆ ಸ್ಮರಿಸಿದ್ದಾರೆ.ಮದರ್ ತೆರೇಸಾ ಸೇರಿದಂತೆ ಪ್ರಮುಖ ವ್ಯಕ್ತಿಗಳ ಶ್ರೇಷ್ಠ ಚಿತ್ರಗಳನ್ನು ಸೆರೆ ಹಿಡಿದಿರುವುದು ಅವರ ಹೆಗ್ಗಳಿಕೆ. ಪ್ರತಿಷ್ಠಿತ ಮ್ಯಾಗ್ನಮ್ ಸಂಸ್ಥೆಯ ಸದಸ್ಯರಾಗಿದ್ದ ಅವರ ಛಾಯಾ ಚಿತ್ರಗಳನ್ನು ಟೈಮ್ ಮತ್ತು ದಿ ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಅನೇಕ ಅಂತರಾಷ್ಟ್ರೀಯ ಮಾಧ್ಯಮಗಳು ಪ್ರಕಟಿಸಿವೆ. ಎಂದು ಅವರು ನೆನಪಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಜಾಪುರ ಲಿಂಗಾಯತ ಡೆವಲೆಪಮೆಂಟ್ ಸೌಹಾರ್ದ ಸಹಕಾರಿ ಸಂಘ ನಿ. ಗ್ರಾಹಕರ ವಿಶ್ವಾಸ ಗಳಿಸಿ, ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ದಿ.30 ಗುರುವಾರ ಬೆ.10ಗಂ. 12ನೇ ಶಾಖೆಯನ್ನು ಆರಂಭಿಸಲಿದೆ ಎಂದು ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಸುನೀಗೌಡ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮಿಜಿವರು ಮತ್ತು ಪ.ಪೂ ಕತ್ನಳ್ಳಿ ಶಿವಯ್ಯ ಮಹಾಸ್ವಾಮಿಗಳವರಿಂದ ಆರಂಭಗೊಂಡ ಬಿ.ಎಲ್.ಡಿ ಸೌಹಾರ್ದವು ಕಳೆದ ಮೂರುವರೆ ವರ್ಷದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿ, ರೂ. 1000 ಕೋಟಿಗೂ ಅಧಿಕ ವಹಿವಾಟು ನಡೆಸಿದೆ. ಆಕರ್ಷಕ ಬಡ್ಡಿ ದರಗಳೊಂದಿಗೆ ರೂ.300 ಕೋಟಿಗೂ ಅಧಿಕ ಸಾಲಗಳನ್ನು ನೀಡಲಾಗಿದೆ. ಹಿರಿಯ ನಾಗರಿಕರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ವಿಧವೆಯರಿಗೆ 0.5% ಹೆಚ್ಚಿನ ಬಡ್ಡಿದರ ನೀಡಲಾಗುತ್ತಿದೆ. ಅಲ್ಲದೇ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಸೇವೆ ಒದಗಿಸುವ ಯೋಜನೆ ರೂಪಿಸಲಾಗಿದೆ ಮತ್ತು ರಾಷ್ಟ್ರೀಕೃತ ಸೇವೆಗಳಾದ ಆರ್.ಟಿ.ಜಿ.ಎಸ್ / ಎನ್.ಇ.ಎಫ್.ಟಿ ಸೌಲಭ್ಯಗಳನ್ನು ಆರಂಭಿಸಲಾಗಿದೆ ಎಂದು ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಮುಧೋಳ ನಗರದ ರೂಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು, ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ಮಹಾದೇವಪ್ಪ ಗುರುಬಸಪ್ಪ ಮುಳವಾಡ(82) ಅವರ ಮೃತದೇಹವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.82 ವರ್ಷದ ಮಹಾದೇವಪ್ಪ ಗುರುಬಸಪ್ಪ ಮುಳವಾಡ ಅವರು ಏಪ್ರಿಲ್ 24 ರಂದು ಶುಕ್ರವಾರ ನಿಧನರಾಗಿದ್ದು. ಮೃತರ ಇಚ್ಛೆಯಂತೆ ಕುಟುಂಬಸ್ಥರು ದೇಹದಾನ ಮಾಡಿದ್ದಾರೆ.ಈ ಸಂದರ್ಭದಲ್ಲಿ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್. ಎಸ್. ಬುಲಗೌಡ ಅವರು ಪಾರ್ಥಿವ ಶರೀರ ಸ್ವೀಕರಿಸಿ ಕುಟುಂಬಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218ರ ಗಾಣದೇವಿ ಸರ್ಕಲ್ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಯುವಕನನ್ನು ವಿಜಯಪುರದ ನಿವಾಸಿ ಆಕಾಶ ಭೀಮಪ್ಪ ಬಬಲೇಶ್ವರ (ಬಂಡಿವಡ್ಡರ) (26) ಎಂದು ಗುರುತಿಸಲಾಗಿದೆ.ವಿಜಯಪುರದಿಂದ ಬೀಳಗಿ ಕಡೆಗೆ ತೆರಳುತ್ತಿದ್ದ ಬೀಳಗಿ ಘಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.ಡಿಕ್ಕಿ ತೀವ್ರವಾಗಿದ್ದರಿಂದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಅಥಣಿ: ಬಡ ಮಕ್ಕಳ ಶಿಕ್ಷಣಕ್ಕೆ ಎಲ್ಲರೂ ಆಸರೆಯಾಗುವ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಿದ್ದು, ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಎಲ್ಲತರದಿಂದಲೂ ಸಹಾಯಕ್ಕೆ ಸಿದ್ದ ಎಂದು ಎಸ್ಪಿ ರವೀಂದ್ರ ಗಡಾದೆ ಹೇಳೀದರು.ತಾಲೂಕಿನ ತೆಲಸಂಗ ಗ್ರಾಮದ ಸರ್ಕಾರಿ ಕನ್ನಡ ಶಾಸಕರ ಮಾದರಿ ಶಾಲೆಯಲ್ಲಿ ಆಂತರಿಕ ಭದ್ರತಾ ವಿಭಾಗದ (ಧಾರವಾಡ ವಲಯ) ಪೊಲೀಸ್ ಅಧೀಕ್ಷಕ ರವೀಂದ್ರ ಗಡಾದೆ ಜನ್ಮದಿನದ ಪ್ರಯುಕ್ತ ಗ್ರಾಮಸ್ಥರು ಹಮ್ಮಿಕೊಂಡಿದ್ದ ಬಡ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಶಿಕ್ಷಣದಿಂದ ಯಾವೊಬ್ಬ ಮಗುವೂ ವಂಚಿತರಾಗಬಾರದು. ಸಾಕ್ಷರ ಸಮಾಜದಿಂದ ಮಾತ್ರ ದೇಶದ ಉತ್ತಮ ಭವಿಷ್ಯ ಸಾಧ್ಯ, ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣವೇ ಪ್ರಬಲ ಅಸ್ತ್ರವಾಗಿದೆ. ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಸಮೃದ್ಧ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಬಡತನ ಎಂಬುದು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಗ್ರಾಮಸ್ಥರು ಹಮ್ಮಿಕೊಂಡಿರುವ ಈ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ಡಾ. ಆರ್.ಡಿ. ಪೂಜಾರಿ, ರಾಜಕುಮಾರ ಪರ್ನಾಕರ,…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಹುಬನೂರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ.ಲಕ್ಷ್ಮೀ ಭಜಂತ್ರಿ ಶೇ. 95.68, ವಿಶಾಲ ಮಾಳಿ ಶೇ.92.64, ಸಾಗರ ಮಾಳಿ ಶೇ.91.36 ಪಡೆದು ಸಾಧನೆ ಮಾಡಿದ್ದಾರೆ.ಸಾಗರ ಮಾಳಿ, ಪ್ರವೀಣ ರಾಠೋಡ ಹಿಂದಿಯಲ್ಲಿ ನೂರಕ್ಕೆ ನೂರು ಅಂಕ ಪಡೆದುಕೊಂಡಿದ್ದಾರೆ.ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು, ಊರಿನ ಗಣ್ಯರು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು, ಶಾಲಾ ಮುಖ್ಯೋಪಾಧ್ಯಾಯ ಸುರೇಶ ಕುಪ್ಪಿ ಅಭಿನಂದನೆ ಸಲ್ಲಿಸಿದ್ದಾರೆ.
