Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.೪ ಮೀಸಲಾತಿ ನೀಡುವ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕ ಕಾಂಗ್ರೆಸ್ ಸರಕಾರ ಮುಸ್ಲಿಂ ಸಮುದಾಯಕ್ಕೆ ಶೇ.೪ರಷ್ಟು ಮೀಸಲಾತಿ ನೀಡವ ಮೂಲಕ ಮತ ಬ್ಯಾಂಕ ರಾಜಕಾರಣ ಮಾಡುತ್ತಿದೆ ಎಂದು ವ್ಹಿಎಚ್ಪಿ ಪ್ರಾಂತ್ಯ ಪ್ರಮುಖ ಶೇಖರಗೌಡ ಹರನಾಳ ಹೇಳಿದರು.ಸಿಂದಗಿ ವಿಶ್ವ ಹಿಂದು ಪರಿಷದ್ ವತಿಯಿಂದ ಕರ್ನಾಟಕ ಸರಕಾರವು ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.೪ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿ, ಕಾಂಗ್ರಸ್ ಸರಕಾರ ಮತ ಬ್ಯಾಂಕ ರಾಜಕಾರಣ ಮಾಡುಲು ಮುಂದಾಗಿದೆ. ನಾಗರಿಕ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿಯಲ್ಲಿ ಒದಗಿಸುವ ಕಾರ್ಯವು ರಾಷ್ಟ್ರೀಯ ಸಮಗ್ರತ ಏಕತೆ ಮತ್ತು ಸಾರ್ವಭೌಮತೆಗೆ ಅಪಾಯನ್ನುಂಟುಮಾಡುತ್ತದೆ ಎಂದರು.ಈ ವೇಳೆ ತಾಲೂಕ ವ್ಹಿಎಚ್ಪಿ ತಾಲೂಕಾಧ್ಯಕ್ಷ ಡಾ.ಶರಣಗೌಡ ಬಿರಾದಾರ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಂರಿಗೆ ಶೇ.೪ರಷ್ಟು ಮೀಸಲಾತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ನಮ್ಮ ಸಂಸ್ಥೆಯ ವತಿಯಿಂದ ಹೋಳ್ಕರ್ ಅವಾರ್ಡ ಪರೀಕ್ಷೆಯನ್ನು ನಡೆಸುತ್ತಿದ್ದೇವೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು.ಪಟ್ಟಣದ ವಿದ್ಯಾನಗರದಲ್ಲಿರುವ ಅಭ್ಯುದಯ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು.ಏ.೧೦ ರಂದು ಬೆಳಿಗ್ಗೆ ೧೧-೩೦ ಕ್ಕೆ ಪಟ್ಟಣದ ಅಭ್ಯುದಯ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ ಹೊಂದಿದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು. ಪರೀಕ್ಷೆಯಲ್ಲಿ ಪಾಸಾದ ಮೊದಲ ೧೦ ವಿದ್ಯಾರ್ಥಿಗಳಿಗೆ ೨ ವರ್ಷಗಳ ಕಾಲ ಊಟ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುವದು ಮತ್ತು ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳಿಗೆ ಅಂಕಗಳ ಮೇಲೆ ರಿಯಾಯತಿ ನೀಡಲಾಗುವದು. ಮತ್ತು ಈ ಪರೀಕ್ಷೆಯನ್ನು ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುವದು. ಸ್ಟೇಟ್, ಸಿಬಿಎಸ್ಇ ಮತ್ತು ಐಸಿಎಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದಾಗಿದ್ದು, ಆಧಾರ ಕಾರ್ಡ, ಎಸ್ಎಸ್ಎಲ್ಸಿ ಹಾಲ್ ಟಿಕೆಟ್ ಕಡ್ಡಾಯವಾಗಿ ತರಬೇಕು. ಆಸಕ್ತ ವಿದ್ಯಾರ್ಥಿಗಳು ಈ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನಲ್ಲಿ ತೊಗರಿ ಬೆಳೆ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ಮಳೆ ಬಾರದೆ ಹಾಗೂ ಮಂಜಿನ ವಾತಾವರಣದಿಂದ ತೊಗರಿ ಬೆಳೆ ಸಂಪೂರ್ಣ ಕೈ ಕೊಟ್ಟಿದೆ. ಅದಲ್ಲದೇ ಈ ಬಾರಿ ಕಳಪೆ ಬೀಜ ವಿತರಣೆ ಮಾಡಿದ್ದರಿಂದ ಇಳುವರಿ ಕುಂಠಿತವಾಗಿದ್ದು, ಅಂತಹ ಕಂಪನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲು ಆಗ್ರಹಿಸಿ ರಾಜ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ಕರವೇ ಪದಾಧಿಕಾರಿಗಳು ಮಾಡಿದರು.ತಾಲ್ಲೂಕಿನ ತಾಂಬಾ ಗ್ರಾಮದ ಪ್ರಮುಖ ಹೃದಯಭಾಗದ ವೃತ್ ದಲ್ಲಿ ಹಲುಗೆ ಬಾರಿಸುತ್ತಾ, ಎಮ್ಮೆ ಮೆರವಣಿಗೆ ನಡೆಸಿ, ರಾಜ್ಯ ರಸ್ತೆ ತಡೆದು ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಶಿವರಾಜ್ ಕೆಂಗನಾಳ ಉಪ ತಹಶಿಲ್ದಾರ ಆರ್ ಬಿ ಮೂಗಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು. ಈ ಭಾಗದ ರೈತರು ಯಾವಾಗಲೂ ಅತೀವೃಷ್ಟಿ ಮತ್ತು ಅನಾವೃಷ್ಟಿಗೆ ಬಲಿಯಾಗುತ್ತಾರೆ. ಈ ಬಾರಿಯೂ ಇಂತಹ ದುರಂತದ ಘಟನೆ ರೈತರಿಗೆ…
ತೊಗರಿ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನಲ್ಲಿ ತೊಗರಿ ಬೆಳೆ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ಮಳೆ ಬಾರದೆ ಹಾಗೂ ಮಂಜಿನ ವಾತಾವರಣದಿಂದ ತೊಗರಿ ಬೆಳೆ ಸಂಪೂರ್ಣ ಕೈ ಕೊಟ್ಟಿದೆ. ಅದಲ್ಲದೇ ಈ ಬಾರಿ ಕಳಪೆ ಬೀಜ ವಿತರಣೆ ಮಾಡಿದ್ದರಿಂದ ಇಳುವರಿ ಕುಂಠಿತವಾಗಿದ್ದು, ಅಂತಹ ಕಂಪನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲು ಆಗ್ರಹಿಸಿ ರಾಜ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ಕರವೇ ಪದಾಧಿಕಾರಿಗಳು ಮಾಡಿದರು.ತಾಲ್ಲೂಕಿನ ತಾಂಬಾ ಗ್ರಾಮದ ಪ್ರಮುಖ ಹೃದಯಭಾಗದ ವೃತ್ ದಲ್ಲಿ ಹಲುಗೆ ಬಾರಿಸುತ್ತಾ, ಎಮ್ಮೆ ಮೆರವಣಿಗೆ ನಡೆಸಿ, ರಾಜ್ಯ ರಸ್ತೆ ತಡೆದು ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಶಿವರಾಜ್ ಕೆಂಗನಾಳ ಉಪ ತಹಶಿಲ್ದಾರ ಆರ್ ಬಿ ಮೂಗಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು. ಈ ಭಾಗದ ರೈತರು ಯಾವಾಗಲೂ ಅತೀವೃಷ್ಟಿ ಮತ್ತು ಅನಾವೃಷ್ಟಿಗೆ ಬಲಿಯಾಗುತ್ತಾರೆ.…
ವಿಜಯಪುರ ಜಿ.ಪಂ. ಸಿಇಓ ರಿಷಿ ಆನಂದ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ ಹಾಗೂ ಅಂಗನವಾಡಿ ಕೇಂದ್ರಗಳ ಅಭಿವೃದ್ದಿಗೆ ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಇಂಡಿ ತಾಲೂಕ ಪಂಚಾಯತಿ ಇಂಡಿ ಸಭಾ ಭವನದಲ್ಲಿ ಇಂಡಿ ಮತ್ತು ಚಡಚಣ ತಾಲೂಕಿನ ಎಲ್ಲ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳೊಂದಿಗೆ ಗ್ರಾಮಗಳ ಸ್ವಚ್ಚತೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳ ಮನೆ ಮನೆಗಳಿಗೆ ಭೇಟಿ ಮಾಡಿ ಕುಡಿಯುವ ನೀರು ಸಮಸ್ಯೆ ಕುರಿತು ವೀಕ್ಷಣೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ನೀರು ಪೂರೈಕೆ ಪೂರ್ವದಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಮಾಡಿ ತದನಂತರ ಕುಡಿಯುವ ನೀರನ್ನು ಪೂರೈಸಬೇಕು, ಸಮಸ್ಯೆಗಳಿದ್ದಲ್ಲಿ ಕೂಡಲೇ ಮೇಲಾಧಿಕಾರಿಗಳಿಗೆ ವರದಿ…
ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಜಿಲ್ಲೆಯಲ್ಲಿ ಅಂಗನವಾಡಿಗಳನ್ನು ಅಭಿವೃದ್ಧಿ”ಗೊಳಿಸುವ ನಿಟ್ಟಿನಲ್ಲಿ “ಸ್ವಚ್ಛ ಅಂಗನವಾಡಿ-ಬಾಲ ಸ್ನೇಹಿ ಅಂಗನವಾಡಿ” ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್ ಅವರು ತಿಳಿಸಿದ್ದಾರೆ.ಅಂಗನವಾಡಿ ಕೇಂದ್ರಗಳ ಸುತ್ತಲೂ ಕೊಳಚೆ ನೀರು ಸಂಗ್ರಹಗೊಳ್ಳುವುದು, ಚರಂಡಿಗಳು, ಕೇಂದ್ರದ ಮಕ್ಕಳಿಗೆ ಮತ್ತು ಕೇಂದ್ರಕ್ಕೆ ಬರುವ ಗರ್ಭಿಣಿ ಮತ್ತು ತಾಯಂದಿರಿಗೆ ದುರ್ವಾಸನೆ, ವೃದ್ಧರು, ಮಕ್ಕಳು ಅಂತಹ ರಸ್ತೆಗಳಲ್ಲಿ ಒಡಾಡಲು ಕಷ್ಟ, ಕೇಂದ್ರದ ಮಕ್ಕಳಿಗೆ ಆಟವಾಡಲು ಚರಂಡಿಗಳ ಹತ್ತಿರ ಹೋದರೆ ಅಪಾಯ, ಅಲ್ಲದೇ ಚರಂಡಿ ನೀರಿನಿಂದ ಸೊಳ್ಳೆಗಳ ಉತ್ಪತ್ತಿ, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೀಗೆ ಅನೇಕ ಸಮಸ್ಯೆಗಳಿಗೆ ಒಂದೇ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ಅಂಗನವಾಡಿಗಳನ್ನು ಮಾದರಿ ಹಾಗೂ ಆಕರ್ಷಕ ಅಂಗನವಾಡಿ ಕೇಂದ್ರಗಳನ್ನಾಗಿ ಮಾಡಲು ವಿಶೇಷ ಅಭಿಯಾನವೊಂದನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದುವೇ “ಸ್ವಚ್ಛ ಅಂಗನವಾಡಿ-ಬಾಲ ಸ್ನೇಹಿ ಅಂಗನವಾಡಿ” ಅಭಿಯಾನ. ಪ್ರಸ್ತುತ ಆರಂಭಿಸಲಾಗಿರುವ ಈ ಅಭಿಯಾನದಡಿ ಪ್ರತಿವಾರ ಪ್ರತಿ ಗ್ರಾಮ ಪಂಚಾಯತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦ಕೆ.ವ್ಹಿ ಮಲಘಾಣ-ಮಟ್ಟಿಹಾಳ ಸ್ಟೇಶನ್ ಮಾರ್ಗದಲ್ಲಿ ಏಪ್ರಿಲ್ ೦೭ರ ಮಧ್ಯರಾತ್ರಿ ಸುರಿದ ಗಾಳಿ ಮಳೆಯಿಂದಾಗಿ ಎ ಟೈಪ್ ಟಾವರ್ (ಗೋಪುರ) ಬಿದ್ದಿರುವುದರಿಂದ, ಈ ಗೋಪುರದ ದುರಸ್ಥಿ ಕಾರ್ಯ ೩ ದಿನ ನಡೆಯಲಿದ್ದು, ಆದರಿಂದ ೧೧೦ಕೆ.ವ್ಹಿ ಮಟ್ಟಿಹಾಳ ಸ್ಟೇಶನದಿಂದ ಹೊರಹೋಗುವ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಹಾಗೂ ವಿಜಯಪುರ ನಗರಕ್ಕೆ ನೀರು ಸರಬರಾಜು ಮಾಡುವ ಕೋಲ್ಹಾರ ಮುಖ್ಯ ಸ್ಥಾವರ ಹಾಗೂ ಮುಳವಾಡ ಮಧ್ಯಂತರ ಪಂಪಿಂಗ್ ಸ್ಟೇಶನ್ಗೆ ಸಂಬಂಧಿಸಿದ ೩೩ ಕೆ.ವ್ಹಿ ವಿದ್ಯುತ್ ಸಂಪರ್ಕ ಕಡಿತದಿಂದಾಗಿ ನೀರು ಸರಬರಾಜು ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.ಪರ್ಯಾಯವಾಗಿ ಮುತ್ತಗಿ ಸ್ಟೇಶನ್ನ ೩೩ ಕೆ.ವ್ಹಿ ಲೈನನ್ನು ವಿಜಯಪುರ ನಗರಕ್ಕೆ ನೀರು ಸರಬರಾಜು ಮಾಡುವ ೩೩ ಕೆ.ವ್ಹಿ ಲೈನ್ ಗೆ ನೇರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ನಗರಕ್ಕೆ ನೀರು ಸರಬರಾಜು ಮಾಡಲು ವಿದ್ಯುತ್ ಇಲಾಖೆಯಿಂದ ಅನುಕೂಲ ಕಲ್ಪಿಸಲಾಗುತ್ತಿದ್ದು, ವಿದ್ಯುತ್ ಏರಿಳಿತದಿಂದ ಕೋಲ್ಹಾರ ಶುದ್ಧ ಕುಡಿಯುವ ನೀರಿನ ಜಲ ಶುದ್ಧೀಕರಣ ಘಟಕದಿಂದ ನೀರು ಸರಬರಾಜು ಆಗುವ ನಗರದ ಪ್ರದೇಶಗಳಲ್ಲಿ ನೀರು ಸರಬರಾಜುವಿನಲ್ಲಿ ವ್ಯತ್ಯಯ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕನ್ನಡ ನವೋದಯ ಮೂರು ಕೇಂದ್ರಗಳ ಜೊತೆಗೆ ಹಲಸಂಗಿ ಗೆಳೆಯರ ಬಳಗವು ನಾಲ್ಕನೇಯ ಕೇಂದ್ರವಾಗಿದೆ, ಈ ಭಾಗದ ಹಲಸಂಗಿ ಗೆಳೆಯರು ಜಾನಪದ ಲೋಕಕ್ಕೆ ನೀಡಿದ ಕೊಡುಗೆ ಸ್ಮರಣಿಯ ಎಂದು ಹಿರಿಯ ಜಾನಪದ ಸಾಹಿತಿ ಶಂಕರ ಬೈಚಬಾಳ ಹೇಳಿದರು,ಅವರು ಬುಧವಾರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನೀಡಿದರು.ಇಂಡಿ ಭಾಗದ ಈ ನೆಲವು ಜಾನಪದದ ಶಕ್ತಿ ಕೇಂದ್ರವೂ ಆಗಿದೆ, ನೂರು ವರ್ಷಗಳ ಹಿಂದೆಯೇ ಜಾನಪದ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಇಲ್ಲಿ ನಡೆದಿದೆ, ಮಧುರಚೆನ್ನ, ಸಿಂಪಿ ಲಿಂಗಣ್ಣ, ಪಿ.ಧೂಲಾಸಾಹೇಬ ಮೊದಾಲಾದ ಗೆಳೆಯರು ಧಾರವಾಡ ಗೆಳೆಯರ ಬಳಗದಂತೆಯೇ ಜಾನಪದ ಸಾಹಿತ್ಯದಲ್ಲಿ ಕಾರ್ಯಮಾಡಿದ್ದರು ಅಂತಹ ಹಿರಿಯರನ್ನು ಸ್ಮರಿಸುವ ಕೆಲಸ ನಿರಂತರ ನಡೆಯಬೇಕು ಎಂದು ಆಶಿಸಿದರು.ಅಕ್ಕಮಹಾದೇವಿ ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯ ಪ್ರೊ.ಎಸ್.ಜೆ. ಮಾಡ್ಯಾಳ ಮಾತನಾಡಿ ʼಜಾಣಪದ ಉಳಿಯಲು ಗ್ರಾಮೀಣ ಭಾಗದವರ ಕೊಡುಗೆ ದೊಡ್ಡದು, ಅದನ್ನು ಮುಂದುವರೆಸಿಕೊಂಡು ಹೋಗಲು ನಾವೆಲ್ಲರೂ ಕಟಿಬದ್ಧರಾಗೋಣ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರಕ್ಕೆ ಬೆಂಗಳೂರಿನ ಬಸವ ವೇದಿಕೆ ನೀಡುವ ವಚನ ಸಾಹಿತ್ಯಶ್ರೀ ಪ್ರಶಸ್ತಿ-2025 ಘೋಷಣೆ ಮಾಡಲಾಗಿದೆ.03.05.2005 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 11ಕ್ಕೆ ನಡೆಇರುವ ಬಸವ ಜಯಂತಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗುವುದು.ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಕಾಲಗರ್ಭದಲ್ಲಿ ನಶಿಸಿ ಹೋಗುತ್ತಿದ್ದ ಬಸವಾದಿ ಶರಣರ ವಚನಗಳನ್ನು ಸಂಶೋಧಿಸಿ ಪ್ರಕಟಿಸುವ ಮೂಲಕ ವಚನಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಹಳಕಟ್ಟಿ ಅವರು ಸ್ಥಾಪಿಸಿದ ಬಿ.ಎಲ್.ಡಿ.ಇ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು, ನಾಡು ಮತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ.ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಹಳಕಟ್ಟಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಸಂಶೋಧನಾ ಕೇಂದ್ರ ಈಗ ವಚನ ಸಾಹಿತ್ಯ ಪ್ರಸಾರ ಮತ್ತು ಪ್ರಕಟಣೆಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಅಲ್ಲದೇ, ಈ ಕೇಂದ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ ಬಿರಾದಾರ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 5ನೇ ಮತ್ತು ಜಿಲ್ಲೆಗೆ ಪ್ರಥಮ ಹಾಗೂ ಜಾಹ್ನವಿ ತೋಶ್ನಿವಾಲ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಜಿಲ್ಲೆಗೆ ಪ್ರಥಮ ಸ್ಥಾನ(Rank) ಪಡೆಯುವ ಮೂಲಕ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಶ್ರೀ ಬಿ ಎಂ. ಪಾಟೀಲ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಬಿರಾದಾರ ವಾಣಿಜ್ಯ ವಿಭಾಗದಲ್ಲಿ ಒಟ್ಟು 600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದಿದ್ದಾರೆ. ಕನ್ನಡದಲ್ಲಿ 100, ಇಂಗ್ಲಿಷ್ ನಲ್ಲಿ 96, ಎಕನಾಮಿಕ್ಸ್ ನಲ್ಲಿ 100, ಅಕೌಂಟೆನ್ಸಿಯಲ್ಲಿ 100, ಬ್ಯೂಸಿನೆಸ್ ಸ್ಟಡೀಸ್ ನಲ್ಲಿ 100 ಹಾಗೂ ಸ್ಟಾಟಿಸ್ಟಿಕ್ಸ್ ನಲ್ಲಿ 100 ಅಂಕ ಅಂದರೆ ಒಟ್ಟು ಶೇ. 99.20 ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅಲ್ಲದೇ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 5ನೇ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಅದೇ ರೀತಿ…
