Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ರಾಜ್ಯ ಮಟ್ಟದ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿಗೆ ವಿವಿಧ ಮಕ್ಕಳ ಸಾಹಿತ್ಯ ಕೃತಿಗಳು ಆಯ್ಕೆಯಾಗಿವೆ.ಬೆಂಗಳೂರಿನ ವಸು ವತ್ಸಲಾ ಅವರ ಅಂತರಿಕ್ಷದಲ್ಲಿ ವಿಹಾ ಕಥಾಸಂಕಲನ, ತುಮಕೂರಿನ ನಾಗಭೂಷಣ ಅವರ ಮಿನುಗುವ ಮನುಷ್ಯ ಕಾದಂಬರಿ, ಬೀಳಗಿಯ ಸೋಮಲಿಂಗ ಬೇಡರ ಅವರ ಬಾರೆಚುಕ್ಕಿ ಬೆಳ್ಳಿಚುಕ್ಕಿ ಕವನ ಸಂಕಲನ ಮತ್ತು ೧೮ ವರ್ಷದೊಳಗಿನ ಮಕ್ಕಳು ಬರೆದ ಕೃತಿಗಳಿಗಿರುವ ಚಿಗುರು ಪ್ರಶಸ್ತಿಗೆ ಆಲಮೇಲದ ನವ್ಯ ಕತ್ತಿ ಅವರ ಮಾಯಾ ಗುಹೆ ಕಥಾ ಸಂಕಲನ ಮತ್ತು ಸಿದ್ದಾಪುರದ ಎಚ್.ವಿದ್ಯಾಶ್ರೀ ಅವರ ನಕ್ಷತ್ರ ಪಟಲ ಕವನ ಸಂಕಲನ ಆಯ್ಕೆಯಾಗಿರುತ್ತವೆ.ಜು.೧೩ರಂದು ಸಿಂದಗಿಯ ಸಾರಂಗಮಠದಲ್ಲಿ ಜರಗುವ ಸಮಾರಂಭದಲ್ಲಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಾಶಕ, ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ನಾಗೂರ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಮಕ್ಕಳಲ್ಲಿ ಮತದಾನದ ಜಾಗೃತಿ ಮತ್ತು ಮಹತ್ವವನ್ನು ತಿಳಿಸಲು ಶಾಲೆಯಲ್ಲಿ ಚಿಣ್ಣರಿಗಾಗಿ ಹಮ್ಮಿಕೊಂಡ ಮತದಾನದ ಅಣುಕು ಪ್ರದರ್ಶನದಲ್ಲಿ ಸಂಸ್ಥೆ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಆಗಮಿಸಿ ಸಂಭ್ರಮದಿಂದ ಮತ ಚಲಾಯಿಸಿದರು. ಮಕ್ಕಳೊಂದಿಗೆ ಶಿಕ್ಷಕರು ಒಟ್ಟುಗೂಡಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು. ಚುನಾವಣೆಯ ಮತಗಟ್ಟೆಯ ಮುಖ್ಯ ಅಧಿಕಾರಿಯಾಗಿ ಸುಪ್ರೀತ ಬಿರಾದಾರ, ಮತಗಟ್ಟೆಯ ಅಧಿಕಾರಿಗಳಾಗಿ ಶಿವನ್ಯ ಬಿರಾದಾರ, ಸನ್ನಿಧಿ ಖೇಡಗಿ, ಸಮರ್ಥ ಕುರುಡೆ ಮತ್ತು ಭದ್ರತಾ ಅಧಿಕಾರಿಗಳಾಗಿ ಸೌರಭ ಪತ್ತಾರ, ರೋಷನ ನಾಯಕ, ಆಹಿಲ್ ಸೌದಾಗರ, ರೋಹಿತ ನಾಯಕ ಭಾಗವಹಿಸಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು. ಮಕ್ಕಳ ಮತದಾನ ಸಂಭ್ರಮದಲ್ಲಿ ಮಕ್ಕಳೇ ಕರ್ತವ್ಯ ನಿಭಾಯಿಸಿದ್ದು ಇಲ್ಲಿ ವಿಶೇಷವಾಗಿತ್ತು. ಮತದಾನದ ಬಗ್ಗೆ ವಿಶೇಷ ಜಾಗೃತಿಯನ್ನು ವಿವಿಧ ಹಂತಗಳಲ್ಲಿ ಶಿಕ್ಷಕರು ಮಕ್ಕಳಿಗೆ ತಿಳಿಸಿಕೊಟ್ಟರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ಸಂಸ್ಥೆ ನಿರ್ದೇಶಕ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆ ಅತಿ ವೇಗವಾಗಿ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಈಗ ಸದ್ಯ ಗೋಲಗುಂಬಜ್ ಎಕ್ಸ್ಪ್ರೇಸ್ ರೈಲ್ವೆ ಸೇವೆ ವಿಜಯಪುರದಿಂದ ಸಾಯಂಕಾಲ ೦೪:೩೦ಗಂಟೆಗೆ ಹೊರಟು ಬೆಂಗಳೂರು ಮಹಾನಗರಕ್ಕೆ ಮರು ದಿನ ಬೆಳಿಗ್ಗೆ ೮:೩೦ಗಂಟೆಗೆ ತುಲುಪುತ್ತದೆ. ಇದರಿಂದ ಪ್ರಾಯಾಣಿಕರಿಗೆ ಅನಾನುಕೂಲವಾಗುತ್ತಿದೆ. ಇದರಿಂದ ಸಾರ್ವಜನಿಕರು ಖಾಸಗಿ ಹಾಗೂ ಸಾರಿಗೆ ಬಸ್ ಅವಲಂಭಿಸಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ರಾಷ್ಟ್ರದ ತುಂಬಾ ವಂದೇ ಭಾರತ ಎಂಬ ಆಧುನಿಕ ರೈಲ್ವೆ ಸೇವೆ ಪ್ರಾರಂಭದಡಿ ದೇಶದ ಜನರ ತ್ವರಿತ ಪ್ರಯಾಣದ ಕನಸು ನನಸು ಮಾಡಿರುವುದು ಸಂತಸದ ವಿಷಯ. ಹಾಗಾಗಿ ವಿಜಯಪುರ-ಬೆಂಗಳೂರು-ವಿಜಯಪುರ ಮಾರ್ಗ ಮಧ್ಯ ರಾತ್ರಿ ೭ಗಂಟೆಗೆ ಸೂಪರ ಫಾಸ್ಟ್ ರೈಲು ಸೇವೆ ಆರಂಭಿಸಿದರೆ ಸಮಸ್ತ ವಿಜಯಪುರ ಜಿಲ್ಲೆಯ ಜನತೆಗೆ ಅನುಕೂಲವಾವ ಜೊತೆಗೆ ರೈಲ್ವೆ ಇಲಾಖೆಗೂ ಆದಾಯ ಹೆಚ್ಚುತ್ತದೆ. ಆದ್ದರಿಂದ ಈ ಮಾರ್ಗ ಮದ್ಯದಲ್ಲಿ ವಂದೇ ಭಾರತ ರೈಲು ಸೇವೆ ಆರಂಭಿಸುವ ಪರಿಶೀಲನೆ ಮಾಡಿ…
ಮೊಹರಂ ಹಬ್ಬದ ನಿಮಿತ್ತ ಈ ವಿಶೇಷ ಲೇಖನ ಲೇಖನ- ಮಲಿಕ್ ಎಲ್.ಜಮಾದಾರಉಪನ್ಯಾಸಕರು, ಲೇಖಕರು ವಿಜಯಪುರ ಉದಯರಶ್ಮಿ ದಿನಪತ್ರಿಕೆ ಭಾರತೀಯ ಸಂಸ್ಕೃತಿಯು ಜಗಮೆಚ್ಚುವಂಥದ್ದು ಅಂತಹ ಪವಿತ್ರ ದೇಶ ನಮ್ಮದು,ವಿವಿಧತೆಯಲ್ಲಿ ಏಕತೆಯ, ಭಾವೈಕ್ಯತೆಯ, ಸಾಂಸ್ಕೃತಿಕ, ಸಾಂಪ್ರದಾಯಿಕ ಹಿನ್ನೆಲೆಯ ನೆಲೆಬೀಡಾಗಿದ್ದು ಅದು ವಿಶೇಷವಾಗಿ ಹಲವು ಧರ್ಮಗಳ ವಿವಿಧ ವಿಶೇಷ ಆಚರಣೆಗಳಾಧಾರಿತವಾದ ಹಬ್ಬ ಹರಿದಿನಗಳು ನಾವು ಕಾಣುತಿದ್ದೇವೆ. ಇಸ್ಲಾಮಿಕ್ ನ ಹೊಸ ವರ್ಷವೆಂದು ಕರೆಯಲ್ಪಡುವ ‘ಮೊಹರಂ’ ಎಂಬ ಪವಿತ್ರ ತಿಂಗಳು ಅದು ಅಮವಾಸ್ಯೆ ದೃಶ್ಯದೊಂದಿಗೆ ಇಸ್ಲಾಮಿಕ್ನ ಪ್ರಸ್ತುತದಲ್ಲಿ ಹಿಜರಿ ಸನ್ 1447 ನೇ ಮೊಹರಂ ಇಸ್ಲಾಮಿಕ್ ಕ್ಯಾಲೆಂಡರ್ ಈ ತಿಂಗಳಿನಿಂದ ಪ್ರಾರಂಭ.ಪ್ರಾರಂಭದ ಹತ್ತು ದಿನಗಳ ಕಾಲ ಆಚರಿಸುವ ಈ ಹಬ್ಬವು ಶೋಕವನ್ನು ಒಳಗೊಂಡಿರುವಂಥದ್ದು.- ಮೊಹರಂ ಐತಿಹಾಸಿಕ ಹಿನ್ನೆಲೆ:ಮೊಹರಂ ಎಂಬ ಹಬ್ಬವು ಸುನ್ನಿ ಮತ್ತು ಶಿಯಾ ಮುಸ್ಲಿಂ ಪಂಗಡಗಳು ವಿಭಿನ್ನವಾಗಿ ಆಚರಿಸುತ್ತಾರೆ.ಪ್ರವಾದಿ ಮೊಹಮ್ಮದ (ಸ.ಅ)ಅವರ ಮೊಮ್ಮಗ ಹುಸೇನ್(ಸ.ಅ) ಇಬ್ನ ಅಲಿಯವರ ಕೊಲೆಯ ಅವರ ಸಾವಿನ ರೋಚಕತೆ ಒಳಗೊಂಡಿರುವ ಇತಿಹಾಸ ಇದಾಗಿದೆ.ಮೊಹರಂ ಎಂಬುದು ಒಂದು ಇಸ್ಲಾಮಿಕ್ ಧರ್ಮದ ಪವಿತ್ರ ತಿಂಗಳಲ್ಲಿ…
ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9663750451..(Watsapp) ಉದಯರಶ್ಮಿ ದಿನಪತ್ರಿಕೆ ದೇವನಹಳ್ಳಿ ಭೂ ಸ್ವಾಧೀನ ವಿರುದ್ಧದ ರೈತ ಹೋರಾಟ ಸ್ವಲ್ಪಮಟ್ಟಿಗೆ ಯಶಸ್ವಿಯಾಗುತ್ತಿರುವ ಸಂದರ್ಭದಲ್ಲಿ ನೆನಪಾಗುತ್ತಿರುವ ರೈತರ ಆ ದಿನಗಳು..ತುಂಬಾ ಹಿಂದೆ ಏನು ಅಲ್ಲ, ಕೇವಲ 25/30 ವರ್ಷಗಳ ಹಿಂದೆ ಜಾಗತೀಕರಣದ ಪರಿಣಾಮವಾಗಿ ಮುಕ್ತ ಮಾರುಕಟ್ಟೆಗೆ ಭಾರತ ಸಹಿ ಹಾಕಿದ ನಂತರ ಅಭಿವೃದ್ಧಿ ಎಂಬ ಮಾನದಂಡವೇ ಬದಲಾಯಿತು. ಆಗಿನ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು, ಕರ್ನಾಟಕದ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಸ್ವಲ್ಪಮಟ್ಟಿಗೆ ರಾಜಾಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅದೇ ಹಾದಿಯಲ್ಲಿ ಆಗ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಬಂಡವಾಳ ಹೂಡಿಕೆದಾರರಿಗೆ ರತ್ನಗಂಬಳಿ ಹಾಸಿ ಸ್ವಾಗತ ಕೋರಿದರು.ಬಹುತೇಕ ಅವರು ಕೇಳಿದ ಎಲ್ಲಾ ಸೌಕರ್ಯಗಳನ್ನು ಸರ್ಕಾರವೇ ಅವರಿಗೆ ಶರಣಾದಂತೆ ಒದಗಿಸಿದರು. ಮುಖ್ಯವಾಗಿ ಯಥೇಚ್ಛವಾಗಿ ಭೂಮಿಯನ್ನು ಧಾರೆಯೆರೆದು ಕೊಡಲಾಯಿತು. ಜೊತೆಗೆ ವಿಶೇಷ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳನ್ನು ಸ್ಥಾಪಿಸಲಾಯಿತು. ಅದಕ್ಕಾಗಿ ಕೃಷಿ, ಅರಣ್ಯ, ಖಾಸಗಿ ಮುಂತಾದ ಅನೇಕ ಉಪಯುಕ್ತ ಜಮೀನುಗಳನ್ನು ಹಿಂದೆ ಮುಂದೆ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬದುಕಿನಲ್ಲಿ ಎಷ್ಟೋ ಬಾರಿ ಸೋಲುಗಳು ನಮ್ಮನ್ನು ಇನ್ನಿಲ್ಲದಂತೆ ಎಚ್ಚರಿಸಿ ಸರಿಯಾದ ದಾರಿಯಲ್ಲಿ ನಡೆಯಲು ಅನುವು ಮಾಡಿ ಕೊಡುತ್ತವೆ. ಸೋಲುಗಳಿಂದ ನಿರಾಶೆಗೊಂಡು ಕಂಗೆಡುವುದಕ್ಕಿಂತ ಮತ್ತೆ ಮತ್ತೆ ಪ್ರಯತ್ನಿಸಿ ಯಶಸ್ಸಿನ ಹಾದಿಯಲ್ಲಿ ಸಾಗಿದವರು ಇತಿಹಾಸವನ್ನು ನಿರ್ಮಿಸಿದ್ದಾರೆ.ಮತ್ತೆ ಕೆಲವರು ಇತಿಹಾಸವನ್ನು ನಿರ್ಮಿಸದೆ ಹೋದರೂ ಸೋಲನ್ನು ಛಲದಿಂದ ಮೆಟ್ಟಿ ತಮ್ಮ ಬದುಕಿನಲ್ಲಿ ಹೊಸ ತಿರುವುಗಳನ್ನು ಕಂಡುಕೊಂಡಿದ್ದಾರೆ.ಮಂದ ಬುದ್ಧಿ, ಮಾನಸಿಕವಾಗಿ ಅಷ್ಟೇನೂ ಚುರುಕುತನವನ್ನು ಹೊಂದಿಲ್ಲ ಎಂದು ಎಲ್ಲರಿಂದಲೂ ಕರೆಸಿಕೊಂಡ ಥಾಮಸ್ ಅಲ್ವಾ ಎಡಿಸನ ಅವರನ್ನು ಅವರು ಓದುತ್ತಿದ್ದ ಶಾಲೆಯಿಂದ ಹೊರ ಹಾಕಿದ್ದರು. ಆದರೆ ಆತ ಮುಂದೆ ಜಗತ್ತಿನ ಅತಿ ದೊಡ್ಡ ಸಂಶೋಧಕನಾಗಿ ಜಾಗತಿಕ ಇತಿಹಾಸದಲ್ಲಿ ಗುರುತಿಸಿಕೊಂಡರು.’ಉಳಿವಿಗಾಗಿ ಹೋರಾಟ’ ಎಂಬ ಸಿದ್ಧಾಂತದ ಮೂಲಕ ವಿಶ್ವ ಸಂಕುಲದ ಜೀವ ಸಿದ್ಧಾಂತವನ್ನು ಜಗತ್ತಿಗೆ ತಿಳಿಸಿದ ಚಾರ್ಲ್ಸ್ ಡಾರ್ವಿನ್ ತನ್ನ ತಂದೆಯ ಒತ್ತಾಸೆಯಂತೆ ವೈದ್ಯಕೀಯ ಓದಲು ಸಾಧ್ಯವಾಗಲಿಲ್ಲ. ತನ್ನ ಮಗ ಇಲ್ಲದ ವಿಚಿತ್ರ ಕಲ್ಪನೆಗಳಲ್ಲಿ ಮುಳುಗಿ ಹೋಗುತ್ತಾನೆ ಬೇರೆಯವರ ಕುರಿತು ಆತನಿಗೆ ಯಾವುದೇ…
ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಲು ಡಿಸಿಎಂ ಗೆ ಮನವಿ ಸಲ್ಲಿಸಿದ ಸಚಿವ ಎಂ.ಬಿ.ಪಾಟೀಲ ಸ್ಪಷ್ಟನೆ ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಭಾರಿ ಕೈಗಾರಿಕೆ ಸಚಿವ ಎಂಬಿ ಪಾಟೀಲ ಸ್ಪಷ್ಟಪಡಿಸಿದರು.ಗುರುವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನ, ಭಿನ್ನಮತ ಇಲ್ಲ ಎಂದು ಸ್ಪಷ್ಪಪಡಿಸಿದರು.ರಣದೀಪ್ ಸುರ್ಜೇವಾಲ ಅವರು ಪಕ್ಷದ ಶಾಸಕರೊಂದಿಗೆ ಚರ್ಚಿಸಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ವಿಜಯಪುರದಲ್ಲಿ ನಿಗದಿಪಡಿಸಿರುವ ಮುಂದಿನ ಸಚಿವ ಸಂಪುಟ ಸಭೆ ಸಿದ್ಧತೆ ಕುರಿತು ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ…
ಕಾಳಿದಾಸ ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ ರಿಷಿ ಆನಂದ ಶಿಕ್ಷಕರಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ನಗರದ ಕಾಳಿದಾಸ ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳ ಕುರಿತು ಬೋಧನೆ ಮಾಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರತಿ ವಿಷಯಗಳಲ್ಲಿ ಶಿಕ್ಷಕರ ಬೋಧನಾ ಶೈಲಿ, ಬಿಸಿಯೂಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು.ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿ ಹಾಜರಾತಿ ಪರಿಶೀಲಿಸಿದ ಅವರು, ಶಿಕ್ಷಕ ಸಿಬ್ಬಂದಿ ಸಮಯಪಾಲನೆಗೆ ಒತ್ತು ನೀಡಬೇಕು. ಸಮರ್ಪಕ ಹಾಜರಾತಿ ನಿರ್ವಹಣೆ ಮಾಡಬೇಕು. ವಿದ್ಯಾಥಿಗಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು. ಮಕ್ಕಳು ಗೈರಾಗದಂತೆ ನೋಡಿಕೊಳ್ಳಲು ಅವರ ಪೋಷಕರಿಗೆ ತಿಳಿ ಹೇಳಬೇಕು. ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಯೋಜನಾಬದ್ಧ ಕಾರ್ಯಸೂಚಿ ಹಾಕಿಕೊಂಡು ನಿರ್ವಹಿಸಿ, ಈ ಕುರಿತು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಲ್ಲ ವಿಷಯಗಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ವತಿಯಿಂದ ಯುಪಿಎಸ್ಸಿ ಹಾಗೂ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್ಸಿ ಗ್ರೂಪ್ -ಸಿ, ಆರ್ಆರ್ಬಿ ಹಾಗೂ ಎಸ್ಎಸ್ಸಿ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಪೋರ್ಟ್ಲ https://dom.karnataka.gov.inವೆಬ್ಸೈಟ್ ಮೂಲಕ ಆಗಸ್ಟ್ ೦೨ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೮೨೭೭೭೯೯೯೯೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ೨೦೨೫-೨೬ನೇ ಸಾಲಿನ ಜುಲೈ ಆವೃತ್ತಿಯ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ವಿವಿಧ ಕೋರ್ಸಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಬಿ.ಎ, ಬಿ.ಕಾಂ. ಬಿ.ಬಿ.ಎ.,ಬಿಸಿಎ, ಬಿಎಸ್ಸಿ (ಐಟಿ),ಬಿಎಸ್ಸಿ (೧೪ ಕಾಂಬಿನೇಷನ್ಸ್),ಬಿಎಸ್ ಡಬ್ಲ್ಯೂ, ಬಿಎಲ್ಐಎಸ್ಸಿ, ಎಂಎ, ಎಂಕಾಂ, ಎಂಬಿಎ, ಎಂಎಲ್ಐಎಸ್ಸಿ, ಎಂಎಸ್ಸಿ (೧೭ ವಿಷಯಗಳಲ್ಲಿ), ಎಂಸಿಎ,ಎಂಎಸ್ ಡಬ್ಲ್ಯೂ, ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್ಸ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, www.ksoumysuru.ac.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಮತ್ತು ೯೧೧೦೨೫೬೭೩೮ ಸಂಪರ್ಕಿಸಬಹುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
