Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂದು (ಏಪ್ರಿಲ್ 10) ರಾಷ್ಟ್ರಿಯ ಭೂಮಾಪನ ದಿನಾಚರಣೆ. ಆ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಬಸವರಾಜ ಪೂದಾರಭೂಮಾಪಕರುಯ ಬೂದಿಹಾಳಮೊ: 95358 54360 ಉದಯರಶ್ಮಿ ದಿನಪತ್ರಿಕೆ ಪ್ರತಿ ವರ್ಷವು ಏಪ್ರಿಲ್ 10 ರಂದು ರಾಷ್ಟ್ರಿಯ ಭೂಮಾಪನ ದಿನಾಚರಣೆ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಭೂಮಾಪನ ಕಾರ್ಯವು ಬಹು ಮಹತ್ವ ಪಡೆದಿದೆ. ಭಾರತದ ಆರ್ಥಿಕ ವ್ಯವಸ್ಥೆಯ ಮೂಲ ಕಂದಾಯ. ಅಂತಹ ಕಂದಾಯ ನಿಗದಿಪಡಿಸಲು ವೈಜ್ಞಾನಿಕ ದಾಖಲೆ ಒದಗಿಸುವುದೇ ಭೂಮಾಪನ ಶಾಖೆ. ಸರ್ವೆ ಕಾರ್ಯವು ಇಡಿ ಭಾರತದ ಆರ್ಥಿಕ ವ್ಯವಸ್ಥೆಯ ಭುನಾದಿ ಎಂದರೆ ತಪ್ಪಾಗಲಾರದು.ಈ ಹಿಂದೆ ಬ್ರಿಟೀಷರು ಭಾರತವನ್ನು ಭೂಮಾಪನ ಮಾಡಬೇಕೆಂದು ಮಹತ್ವಾಕಾಂಕ್ಷೆಯನ್ನು ಹೊಂದಿ ಮೊಟ್ಟಮೊದಲ ಬಾರಿಗೆ ಮ್ರದಾಸ ಪ್ರಾಂತ್ಯದಿಂದ ಆರಂಭಿಸಿದರು. ಅಂದಿನ ಮದ್ರಾಸ್ ಸೇನಾಧಿಕಾರಿ ಕರ್ನಲ್ ವಿಲಿಯಂ ಲ್ಯಾಂಬ್ಟನ್ ಅವರು ಮದ್ರಾಸಿನ ಸೆಂಟ್ ಥಾಮಸ್ ಮೌಂಟ ಎಂಬ ಸ್ಥಳದಿಂದ1802 ರ ಎಪ್ರಿಲ್ 10 ರಂದು ಕಾರ್ಯಪ್ರವೃತರಾದರು. ಅದರ ಒಂದು ಸವಿ ನೆನಪಿಗಾಗಿ ಪ್ರತಿ ವರ್ಷವು ಎಪ್ರಿಲ್ 10 ನ್ನು ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಭಾರತವು ಕೃಷಿ…
ಪಿಯುಸಿ ಪರೀಕ್ಷೆ: ಕೊಲ್ಹಾರದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸುಶ್ಮೀತಾ ಔರಸಂಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ರಕ್ಷಿತಾ ಕಾಖಂಡಕಿ ಪಡೆದುಕೊಂಡಿದ್ದಾರೆ.ಕಾಲೇಜಿನ ಕಲಾವಿಭಾಗದಲ್ಲಿ ಪ್ರಥಮ ಸ್ಥಾನ ಸುಶ್ಮೀತಾ ಔರಸಂಗ 95.5, ದ್ವಿತೀಯ ಸ್ಥಾನ ಅಮೃತಾ ಗಾಣಿಗೇರ 94.83, ತೃತೀಯ ಸ್ಥಾನ ಸುಜಾತಾ ಬೆಳ್ಳುಬ್ಬಿ 92.83, ಮತ್ತು ಭಾಗ್ಯಾಶ್ರೀ ವಾಲಿಕಾರ 92.83, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ರಕ್ಷಿತಾ ಕಾಖಂಡಕಿ 95, ದ್ವಿತೀಯ ಸ್ಥಾನ ಸ್ವಾತಿ ಜಂಬಗಿ 94.16, ತೃತೀಯ ಸ್ಥಾನ ಅಶ್ವಿನಿ ಬಿಂಗಿ 92.83. ಪಡೆದಿದ್ದಾರೆ.ಕನ್ನಡ ವಿಷಯದಲ್ಲಿ ಇಬ್ಬರು, ರಾಜ್ಯಶಸ್ತ್ರದಲ್ಲಿ ಒಬ್ಬ ಹಾಗೂ ಇತಿಹಾಸ ವಿಷಯದಲ್ಲಿ ನಾಲ್ಕು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹರ್ಷವಾಗಿದೆ ಎಂದು ಅಧ್ಯಕ್ಷ ಬಿ.ಯು. ಗಿಡ್ಡಪ್ಪಗೋಳ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಕೀಲರ ಕ್ಷೇಮಾಭಿವೃದ್ದಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸುವ ಜೊತೆಗೆ ವಕೀಲರ ಕ್ಷೇಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ ಹೇಳಿದರು.ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ಸೋಮವಾರ ವಕೀಲರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಬಹುತೇಕ ವಕೀಲರ ಆಶೀರ್ವಾದದಿಂದ ರಾಜ್ಯ ವಕೀಲರ ಪರಿಷತ್ ನಿರ್ದೇಶಕರಾಗಿ ಆಯ್ಕೆಯಾಗುವ ಜೊತೆಗೆ ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿ ಉತ್ತರ ಕರ್ನಾಟಕ ಭಾಗದ ವಕೀಲರ ಸೇವೆ ಮಾಡುವ ಜೊತೆಗೆ ಕೊಡುಗೆ ನೀಡಬೇಕಾದ ಜವಾಬ್ದಾರಿ ನನ್ನ ಮೇಲಿದ್ದು ವಕೀಲರ ಧ್ವನಿಯಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.ಉತ್ತರ ಕರ್ನಾಟಕ ಭಾಗದ ವಕೀಲರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಪರಿಷತ್ ಕೆಲವು ಸೇವೆಗಳನ್ನು ಆನ್ಲೈನ್ ಮಾಡಿದ್ದು ವಕೀಲರು ಸಲಹೆ-ಸೂಚನೆ ನೀಡಿದರೇ ಖಂಡಿತವಾಗಿ ಸ್ವೀಕರಿಸಿ ಜಾರಿಗೆಗಾಗಿ ಪ್ರಯತ್ನಿಸುವೆ, ಉತ್ತರ ಕರ್ನಾಟಕಕ್ಕೆ ಒಂದು ಅವಕಾಶ ಸಿಕ್ಕಿದ್ದು ಈ ಭಾಗದ ವಕೀಲರ ಪರಿಶ್ರಮ ಪ್ರೋತ್ಸಾಹ ಕಾರಣವಾಗಿದೆ, ಮುಕ್ತವಾಗಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಕೀಲರ ಸಂಘಕ್ಕೆ ಸಂಘಕ್ಕೆ ಜರುಗಿದ ಚುನಾವಣೆಯಲ್ಲಿ ನಾಗನಗೌಡ ಸಂಗನಗೌಡ ಬಿರಾದಾರ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಚನ್ನಪ್ಪ ಮಲ್ಲಿಕಾರ್ಜುನ ಹಡಪದ, ಕಾರ್ಯದರ್ಶಿಯಾಗಿ ರವಿ ಮೋತಿಲಾಲ ರಾಠೋಡ, ಖಜಾಂಚಿಯಾಗಿ ಅನೀಲ ಚಂದ್ರಶೇಖರ ಚಿಕ್ಕೊಂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ವಕೀಲ ಎ.ಎನ್.ಕೋಲಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ಜರುಗಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪಂಚಗ್ಯಾರಂಟಿ ಯೋಜನೆಯ ತಾಲೂಕಾಧ್ಯಕ್ಷ ಮಹಿಬೂಬ ನಾಯ್ಕೋಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಬಡಜನರಿಗೆ ಜೀವನಾಧಾರವಾಗಿವೆ. ರಾಜ್ಯದ ಜನರ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗಿವೆ ಎಂದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಉಕ್ಕಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗೊಂಡ ಸಿಂದಗಿ, ಪಂಡಿತ ಓಜಿ, ಸುಭಾಸ ಕಲ್ಯಾಣಿ, ಲಾಲಸಾಬ ದೇವರಗೋಳ, ಶಫೀಕ ಬೇದೆಕರ, ಬಿ.ಕೆ.ಮಸಳಿ, ಗ್ಯಾರಂಟಿ ಯೋಜನೆಯ ಸದಸ್ಯರಾದ ಮಹಾಂತೇಶ ತಳೇವಾಡ, ಬಂಡೆಪ್ಪ ನಾಟೀಕಾರ, ಕವಿತಾ ಮಣ್ಣೂರಮಠ, ರಾಕೇಶ ಬದ್ನೂರ, ಶಂಕರ ಚಕ್ರಮನಿ, ಪಂಚ ಗ್ಯಾರಂಟಿ ಯೋಜನೆ ಗ್ಯಾರಂಟಿಗಳ ಅನುಷ್ಠಾನಾಧಿಕಾರಿಗಳು ಇತರರು ಇದ್ದರು. ಶಶಿ ಪಾಟೀಲ ನಿರೂಪಿಸಿ, ವಂದಿಸಿದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ಮೂರು ತಾಲೂಕಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ, ಕಾರ್ಯದರ್ಶಿಗಳಿಗೆ, ಸಿಬ್ಬಂದಿಗಳಿಗೆ ಸೋಮವಾರ ಇ-ತಂತ್ರಾಂಶ ಕುರಿತು ತರಬೇತಿ ಕಾರ್ಯಾಗಾರ ಜರುಗಿತು.ಜಿಲ್ಲಾಧಿಕಾರಿಗಳ ಕಾರ್ಯಾಲಯದ ಜಿಲ್ಲಾ ಇ-ಆಫೀಸ್ ಸಮಾಲೋಚಕ, ಸಂಪನ್ಮೂಲ ವ್ಯಕ್ತಿ ಪ್ರಕಾಶ ಕನ್ನೂರ ಅವರು, ಗ್ರಾಮ ಪಂಚಾಯಿತಿ ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇ-ತಂತ್ರಾಂಶ ಬಹುಪಯೋಗವಾಗುತ್ತದೆ. ಇ-ಆಫೀಶ್ ತಂತ್ರಾಂಶ ಬಳಕೆಯ ಕುರಿತು ಡೆಮೋ ಮಾಡುವ ಮೂಲಕ ಎಲ್ಲ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡಿದರು.ನಂತರ ಬಸವನಬಾಗೇವಾಡಿಯ ಇಓ ಪ್ರಕಾಶ ದೇಸಾಯಿ, ಕೊಲ್ಹಾರ ಇಓ ಸುನೀಲ ಮದ್ದಿನ ಅವರು, ನರೇಗಾ ಯೋಜನೆಯಲ್ಲಿ ಮಾನವ ದಿನಗಳ ಸೃಜನೆ, ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಸುವಿಕೆ, ದುಡಿಯೋಣ ಬಾ ಅಭಿಯಾನ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ೨೫ ಬದು ನಿರ್ಮಾಣ ಹಾಗೂ ೧೦ ಕೃಷಿ ಹೊಂಡ ಕಾಮಗಾರಿ ಆರಂಭಿಸಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ೨೦೦ ಲೇಬರ್ ಎಂಗೇಜ್ ಅನ್ನು ಮಾಡಬೇಕೆಂದು ಪಿಡಿಓಗಳಿಗೆ ಸೂಚಿಸಿದರು.೨೦೨೪-೨೫…
ಉದಯರಶ್ಮಿ ದಿನಪತ್ರಿಕೆ ಇಂಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿದನ್ನು ವಿರೋಧಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಹಲಗೆ ಬಾರಿಸುತ್ತ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ವಿರುಧ್ಧ ಧಿಕ್ಕಾರ ಕೂಗುತ್ತ, ಯತ್ನಾಳ ಅವರಿಗೆ ಜಯವಾಗಲಿ ಎಂಬ ಜಯಘೋಷ ಹಾಕುತ್ತ ಸಾಗಿದರು.ಬಸನಗೌಡ ಪಾಟೀಲ (ನಾಗರಾಳ ಹುಲಿ) ಮಾತನಾಡಿ, ಯಡಿಯೂರಪ್ಪ ವಿಜಯೇಂದ್ರ ಅವರ ಕುತಂತ್ರ ಕುಮ್ಮಕ್ಕಿನಿಂದ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿರುವದು ಹಿಂದೂ ಸಮುದಾಯಕ್ಕೆ ಮಾಡಿರುವ ಅಪಮಾನ. ಈ ತಪ್ಪು ನಿರ್ಧಾರದಿಂದ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬೀಳಲಿದೆ. ಕೂಡಲೇ ಅವರನ್ನು ಪಕ್ಷಕ್ಕೆ ಮರಳಿ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.ಎಂ.ಎಸ್.ರುದ್ರಗೌಡ ಮಾತನಾಡಿ, ಹೈಕಮಾಂಡ ತನ್ನ ನಿರ್ಧಾರವನ್ನು ಬದಲಿಸಿ ಮತ್ತೆ ಯತ್ನಾಳ ಅವರನ್ನು ಪಕ್ಷಕ್ಕೆ ಗೌರವಯುತವಾಗಿ ಸ್ವಾಗತಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಬಿಜೆಪಿ ಕೇವಲ ಅಪ್ಪ ಮಕ್ಕಳ ಪಕ್ಷವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಅಭ್ಯುದಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಶರಣಬಸು ವನಕಿಹಾಳ (೯೪.೦೦%) ಪ್ರಥಮ, ಐಶ್ವರ್ಯ ಪೂಜಾರಿ (೯೩.೩೩%) ದ್ವಿತೀಯ ಮತ್ತು ಸಾನಿಕಾ ಜಾಲಿಹಾಳ (೯೨.೮೩) ತೃತೀಯ ಸ್ಥಾನ ಪಡೆದು ಸಂಭ್ರಮಿಸಿದರೆ, ಪರೀಕ್ಷೆ ಬರೆದ ಒಟ್ಟು ೨೫೭ ವಿದ್ಯಾರ್ಥಿಗಳ ಪೈಕಿ ೬೫ ಡಿಸ್ಟಿಗ್ಷನ್, ೧೧೭ ಪ್ರಥಮ, ೪೫ ದ್ವಿತೀಯ ದರ್ಜೆಯಲ್ಲಿ ಪಾಸಾಗುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿಜಯಪುರ ಜಿಪಂ ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಆರಂಭಿಸಿ, ಹೆಚ್ಚಿನ ಜನರಿಗೆ ಉದ್ಯೋಗ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ರಿಷಿ ಆನಂದ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಿಕೋಟಾ ತಾಲೂಕಿನ ತಾಜಪುರ.ಹೆಚ್ ಗ್ರಾಮ ಪಂಚಾಯತಿಗೆ ಹಾಗೂ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಮುದಾಯ ಆಧಾರಿತ ಕಾಮಗಾರಿಗಳನ್ನು ಹೆಚ್ಚಾಗಿ ಆರಂಭಿಸಿ ಬೇಸಿಗೆ ಅವಧಿಯಲ್ಲಿ ಕಡ್ಡಾಯವಾಗಿ ಕೂಲಿಕಾರರಿಗೆ ನಿರಂತರ ಕೆಲಸ ಒದಗಿಸಬೇಕು, ಪ್ರಸ್ತುತ ಚಾಲನೆಯಲ್ಲಿರುವ “ದುಡಿಯೋಣ ಬಾ” ಅಭಿಯಾನದ ಮೂಲಕ ಯೋಜನೆಯ ಕುರಿತು ಹೆಚ್ಚು ಪ್ರಚುರಗೊಳಿಸಿ, ಪ್ರಸ್ತುತ ಸಾಲಿನಲ್ಲಿ ನರೇಗಾ ಕೂಲಿ ದರ ರೂ.೩೭೦/- ಇದ್ದು, ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಕೆಲಸದ ಪ್ರಮಾಣದಲ್ಲಿ ಶೇ.೫೦.೦೦ರಷ್ಟು ರಿಯಾಯಿತಿ ಇದೆ. ಈ ಎಲ್ಲ ಅಂಶಗಳ ಕುರಿತು ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.ಅಭಿಯಾನದಡಿ…
ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸ್ಪಷ್ಠನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸವೋಚ್ಛ ನ್ಯಾಯಾಲಯದ ಆದೇಶದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಕಾನೂನು ಬಾಹಿರ ಕಟ್ಟಡಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳಿಗೆ ಸಂಬಂಧಿಸಿದಂತೆ ಮೊದಲ ಹಂತವಾಗಿ ವಿಜಯಪುರ ಮಹಾನಗರ ಪಾಲಿಕೆ ವಾರ್ಡ ನಂ.೧೨ರಲ್ಲಿನ ಮದ್ದಿನ ಖಣಿಯ ಸರ್ಕಾರಿ ರಸ್ತೆ ಜಾಗೆಯಲ್ಲಿ ಒತ್ತುವರಿ ಮಾಡಿ ನಿರ್ಮಿಸಿರುವ ಅನಧಿಕೃತ ಕಟ್ಟಡಗಳು, ವಾರ್ಡ ನಂ.೧೩ರಲ್ಲಿನ ಆಶ್ರಮ ರಸ್ತೆಯ ಬಿಎಲ್ಡಿಇ ಇಂಜಿನೀಯರಿಂಗ್ ಕಾಲೇಜ್ ಎದುರುಗಡೆಯ ರಸ್ತೆ ಅತಿಕ್ರಮಣ ಮಾಡಿ ನಿರ್ಮಿಸಿರುವ ಅನಧಿಕೃತ ಕಟ್ಟಡಗಳು ಹಾಗೂ ವಾರ್ಡ ನಂ.೪ರಲ್ಲಿನ ಸೋಲಾಪುರ ರಸ್ತೆಯ ಬಂಜಾರಾ ಕ್ರಾಸ್ದಿಂದ ಬಿಎಂ ಪಾಟೀಲ ವೃತ್ತದವರೆಗಿನ ರಸ್ತೆಯ ಕಟ್ಟಡ ರೇಖೆಯಲ್ಲಿ ಬರುವ ನಿಯಮಬಾಹಿರ ಕಟ್ಟಡಗಳ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂದಿಂದ ಕಡಿತಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸಾರ್ವಜನಿಕ ರಸ್ತೆ ಜಾಗೆಯಲ್ಲಿ ಹಾಗೂ ಕಟ್ಟಡ ರೇಖೆಯಲ್ಲಿ ಬರುವ…
