Author: editor.udayarashmi@gmail.com

ಉಚಿತವಾಗಿರುವ ಅತ್ಯಾಧುನಿಕ ಸೌಕರ್ಯಗಳ ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಹಾಗೂ ಹದಿಹರೆಯದವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಮುಂದಾಗುವ ಅನಾರೋಗ್ಯವನ್ನು ತಡೆಗಟ್ಟಬಹುದು. ಆರೋಗ್ಯ ಸದೃಢವಾಗಿದ್ದರೆ ಮಾತ್ರ ಭವ್ಯ ರಾಷ್ಟ್ರದ ನಿರ್ಮಾಣದ ಕನಸು ಪೂರ್ಣಗೊಳ್ಳುತ್ತದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನ್ ರಾಷ್ಟ್ರೀಯ ರಾಯಭಾರಿ ಶಿಫಾ ಜಮಾದಾರ ಹೇಳಿದರು.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಅರಿವು ಮತ್ತು ನೆರೆಹೊರೆಯವರ ಉತ್ತಮ ಬಾಂಧವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇಂದು ಯುವ ಜನತೆ ದುಶ್ಚಟಗಳಿಗೆ ದಾಸರಾಗಿದ್ದಾರೆ. ಮಾದಕ ವಸ್ತುಗಳ ಸೇವನೆ ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು ಯುವಜನತೆಗೆ ಅರಿವು ಮೂಡಿಸಬೇಕಾಗಿದೆ ಎಂದು ಶಿಫಾ ನುಡಿದರು.ಅಧ್ಯಕ್ಷತೆ ವಹಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಇಂದಿನ ವಾತಾವರಣದಲ್ಲಿ ಒತ್ತಡ, ಆತಂಕ ಮತ್ತು ಕಿನ್ನತೆ ಹೆಚ್ಚಾಗಿ ಕಂಡು ಬರುತ್ತಿದೆ. ಅದ್ಯಾಗೂ ಮಾನಸಿಕ ಆರೋಗ್ಯವನ್ನು…

Read More

*ಉದಯರಶ್ಮಿ ದಿನಪತ್ರಿಕೆ* ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ಕಾಲೇಜ್ ಆಫ್ ಕಾಮರ್ಸ್(ಸ್ವಾಯತ್ತ)ನ ಮ್ಯಾನೆಜಮೆಂಟ್ ಆಫ್ ರಿಸರ್ಚ್ ಸೆಂಟರ್ ನಲ್ಲಿ ಗುರುವಾರ ಪೂಲ್ ಕ್ಯಾಂಪಸ್ ಡ್ರೈವ್- 2025 ನಡೆಯಿತು. ಈ ಪೂಲ್ ಕ್ಯಾಂಪಸ್ ಡ್ರೈವ್-2025 ನ್ನು ಬಿ.ಎಲ್. ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ವಿ. ಎಸ್. ಬಗಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಿನಾಭಾವ ಸಂಬಂಧವಿದೆ. ಉತ್ತಮ ಶಿಕ್ಷಣ, ತರಬೇತಿ ಪಡೆಯುವುದರಿಂದ ಉದ್ಯಮದಲ್ಲಿ ಯಶಸ್ಸು ಸಾಧಿಸಬಹುದು. ಇದರಲ್ಲಿ ಪರಸ್ಪರ ಸಹಯೋಗದಿಂದ ಉನ್ನತ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ಇಂಥ ಪೂಲ್ ಕ್ಯಾಂಪಸ್ ಡ್ರೈವ್ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಈ ಪೂಲ್ ಕ್ಯಾಂಪಸ್ ಡ್ರೈವ್-2025ನಲ್ಲಿ ಒಟ್ಟು 10 ಹೆಸರಾಂತ ಕಂಪನಿಗಳು ಪಾಲ್ಗೋಂಡಿದ್ದವು. ಐಟಿ, ಹಣಕಾಸು, ಮಾರ್ಕೆಟಿಂಗ್, ರಿಟೇಲ್, ಕನ್ಸಲ್ಟಿಂಗ್ ಮತ್ತು ಉತ್ಪಾದನೆ ಕ್ಷೇತ್ರಗಳಿಗೆ ಸೇರಿದದ ಫೋನ್ಪೇ, ಆರ್.ಎನ್.ಎಸ್ ಮೋಟಾರ್ಸ್, ಜಿಯೋ, ಯತಿ ಕಾರ್ಪ್, ಸಂತೋಷ್ ಆಟೋ, ಪೇಟಿಎಂ ಮುಂತಾದ ಕಂಪನಿಗಳು…

Read More

ಜುಲೈ 07 ರಿಂದ ಕೆಲಸ ನಿರ್ವಹಿಸದೇ ಅಸಹಕಾರ ಚಳುವಳಿ ನಡೆಸಲು ನಿರ್ಧಾರ | ಜಿಲ್ಲಾಧ್ಯಕ್ಷ ಪೃಥ್ವಿರಾಜ ಪಾಟೀಲ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂದಿ ನರೇಗಾ ಯೋಜನೆಯಡಿ ವಿವಿಧ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ 06 ತಿಂಗಳಿಂದ ವೇತನ ಪಾವತಿಸದೇ ಇರುವುದರಿಂದ ಶೀಘ್ರವೇ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳುವಂತೆ ವಿನಂತಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ ಅವರಿಗೆ ನರೇಗಾ ಸಿಬ್ಬಂದಿ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೃಥ್ವಿರಾಜ ಪಾಟೀಲ ಮಾತನಾಡಿ, “ಕಳೆದ ಜನೇವರಿ-2025 ರಿಂದ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯವ್ಯಾಪ್ತಿ ಕೆಲಸ ಮಾಡುವ ನರೇಗಾ ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿರುವದಿಲ್ಲ, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಾವು ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಮಟ್ಟದಲ್ಲಿ ವಿವಿಧ ಸ್ಥರಗಳಲ್ಲಿ ಕಳೆದ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ಗುರುಚಂದ್ರಶೇಖರ ಸಂಸ್ಥಾನ ಹಿರೇಮಠ ತದ್ದೇವಾಡಿಯಲ್ಲಿ ನಡೆಯುವ ಗುರುಪೂರ್ಣಿಮೆ ನಿಮಿತ್ಯ ಪ್ರತಿ ವರ್ಷ ಐದು ಗ್ರಾಮಗಳಿಂದ ಜ್ಯೋತಿ ತಂದು ಪ್ರಾರಂಭೋತ್ಸವ ಮಾಡುತ್ತ ಬಂದಿದ್ದು, ಈ ವರ್ಷ ಬಳ್ಳೋಳ್ಳಿ ಗ್ರಾಮ ದೇವರು ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಜ್ಯೋತಿ ತದ್ದೆವಾಡಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ರೇಣುಕ ದೇವರು ಮಹಾಸ್ವಾಮಿಗಳ ಮತ್ತು ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಇವರ ಸಹಯೋಗದಲ್ಲಿ ಚಾಲನೆ ನೀಡಲಾಯಿತು.ತದ್ದೇವಾಡಿ ಗ್ರಾಮದ ವೇದ ಮೂರ್ತಿ ಮಹಾಂತೇಶ್ ಹಿರೇಮಠ ಇವರು ಮಾತನಾಡಿ ಮಠದಲ್ಲಿ ಜೂನ್ ೨೬ ರಿಂದ ಜೂಲೈ ೧೦ರ ವರೆಗೆ ಪುರಾಣ ಪ್ರವಚನ, ಕೃಷಿ ಚಿಂತನ, ವೀರ ಯೋಧರಿಗೆ ಸನ್ಮಾನ ಸಮಾರಂಭ, ರಕ್ತದಾನ ಶಿಬಿರ, ಅಕಾಡೆಮಿ ವತಿಯಿಂದ ಜಾನಪದ ವೈಭವ ಸಮ್ಮೇಳನ, ಕಲಾ ಸಮ್ಮೇಳನ, ನೂರಾರು ಕಲಾವಿದರಿಗೆ ಪ್ರೋತ್ಸಾಹ ಹಾಗೂ ಸನ್ಮಾನ, ಪ್ರಶಸ್ತಿ ಪ್ರಮಾಣ ಪತ್ರಿಕೆ ವಿತರಣೆ, ಸುಪ್ರಸಿದ್ದ ಡೊಳ್ಳಿನ ಪದಗಳು, ನಾಟಕ, ಜಾನಪದ ತಂಡಗಳಿಂದ ಕಲಾ ಪ್ರದರ್ಶನ ಮುಂತಾದ ಕಾರ್ಯಕ್ರಮ ಈ ವರ್ಷವೂ ಕೂಡಾ ಹಮ್ಮಿಕೊಳ್ಳಗುವದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪ್ಲಾಸ್ಟಿಕ್‌ ತ್ಯಾಜ್ಯವು ಜಾಗತಿಕ ಸಮಸ್ಯೆಯಾಗಿದೆ. ಜಗತ್ತಿನ ಅತಿ ಎತ್ತರದ ಗಿರಿ ಶಿಖರಗಳಿಂದ ಹಿಡಿದು ಆಳ ಸಮುದ್ರದ ಒಡಲೊಳಗೆ ಸೇರಿಕೊಳ್ಳುತ್ತಿರುವ ಇದು ಜನ, ಜಾನುವಾರು ಹಾಗೂ ಸಸ್ಯ ಸಂಕುಲಕ್ಕೆ ಮಾರಕವಾಗಿದ್ದು, ಇದರ ನಿಯಂತ್ರಣ ಇಂದಿನ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಗುರುವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ’ದ ನಿಮಿತ್ತ ಹಮ್ಮಿಕೊಂಡ ‘ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ’ ಚರ್ಚಾಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಪ್ಲಾಸ್ಟಿಕ್‌ ವಸ್ತುಗಳು ಮಣ್ಣಿನಲ್ಲಿ ಕೊಳೆಯುವುದಿಲ್ಲ. ಅವನ್ನು ಸುಟ್ಟರೆ ‘ಡಯಾಕ್ಸಿನ್‌’ ಎಂಬ ವಿಷಪೂರಿತ ಅಂಶ ಬಿಡುಗಡೆಯಾಗಿ, ಅದು ಗಾಳಿಯಲ್ಲಿ ಬೆರೆತು ಉಸಿರಾಟಕ್ಕೆ ತೊಂದರೆಯಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಬಳಕೆ ಕಡಿಮೆ ಮಾಡಿ, ಬಟ್ಟೆ ಚೀಲ ಬಳಸುವ ರೂಢಿ ದೈನಂದಿನ ಜೀವನದ ಭಾಗವಾಗಬೇಕಿದೆ ಎಂದು ಹೇಳಿದರು.ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ತರಕಾರಿ, ದಿನಸಿ ವಸ್ತುಗಳನ್ನು ತರಲು ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಹುನ್ನೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 2002-03ನೇ ಸಾಲಿನ ಎಸ್ ಎಸ್ ಎಲ್ ಸಿ ಹಳೆ ವಿದ್ಯಾರ್ಥಿಗಳಿಂದ ನೂತನ ಕೊಡುಗೆಯಾಗಿ ನಾಮಫಲಕ ನೀಡಿದರು.ಈ ವೇಳೆ ಹಳೆ ವಿದ್ಯಾರ್ಥಿ ಶಂಕರಗೌಡ ಚಿಕ್ಕನಗೌಡ ಮಾತನಾಡಿ – ನಮ್ಮದು ಬಹಳ ದಿನದ ಕನಸು ನಾವು ಕಲಿತ ಶಾಲೆಗೆ ಏನಾದರೂ ನೀಡಬೇಕೆಂದು – ಅದಕ್ಕೆ ನಾವು ಸ್ನೇಹ, ಪ್ರೀತಿಯ ಸೂಚಕವಾಗಿ ನಾಮಫಲಕ ನೀಡಿದ್ದೇವೆ ನಾಮಫಲಕಕ್ಕೆ ಅವಕಾಶ ಮಾಡಿಕೊಟ್ಟ ಶಾಲೆ ಗುರುಗಳಿಗೆ ಧನ್ಯವಾದ ತಿಳಿಸುತ್ತೇವೆ ಎಂದರು. ಶಿಕ್ಷಕ ಸಂತೋಷ ತಳಕೇರಿ ಮಾತನಾಡಿ, ಬಹಳ ವರ್ಷ ಕಳೆದು ಹೋಗಿರುವ ಶಾಲೆ 1964 ರಲ್ಲಿ ಉದ್ಘಾಟನೆ ಆಗಿದೆ ಸುಮಾರು 60 ವರ್ಷಗಳ ನಂತರ ಪ್ರೌಢ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ನಾಮಫಲಕ ನೀಡಿದ್ದು ಹೆಮ್ಮೆಯ ಸಂಗತಿ, ಕಲಿತಿರುವ ವಿದ್ಯಾರ್ಥಿಗಳು ಇವಾಗ ಉನ್ನತ ಹುದ್ದೆಯಲ್ಲಿದ್ದಾರೆ.ಈಗಿನ ವಿದ್ಯಾರ್ಥಿಗಳು ಕೂಡಾ ಶಾಲೆಯಲ್ಲಿ ಪ್ರಮುಖ ವಿದ್ಯೆ ಸಂಸ್ಕಾರ ಜೀವನ ಮಾರ್ಗಕ್ಕೆ ಬೇಕಾಗುವ ಎಲ್ಲವನ್ನು ಕಲಿಯಬೇಕು ಹಾಗೂ ಉನ್ನತ ಸ್ಥಾನದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಜುಲೈ 7ರಿಂದ-ಜುಲೈ 17ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಹಿಡಿತ, ಸಂಧಿವಾತ ಹಾಗೂ ಊತ(ರೊಮಟಾಯ್ಡ ಅರ್ಥರೈಟಿಸ್ ರೋಗ) ರೋಗದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಡಲಾಗುವುದು.ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದು ಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:7975160825 ಮತ್ತು 9513397413 ಸಂಪರ್ಕಿಸುವಂತೆಕಾಲೇಜಿನ ಪ್ರಾಚಾರ್ಯ ಡಾ. ಅಶೋಕ.ಪಾಟೀಲ‌ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Read More

ಲೇಖನ- ಡಾ. ಶಶಿಕಾಂತ ಪಟ್ಟಣರಾಮದುರ್ಗಮೊ: 9552002338 ಉದಯರಶ್ಮಿ ದಿನಪತ್ರಿಕೆ ಹೆಚ್ಚಿನ ವಿದ್ಯಾಭ್ಯಾಸ ಒಳ್ಳೆಯ ಹುದ್ದೆ ನೌಕರಿ ಇದ್ದರೂ ಅವುಗಳೆಲ್ಲವನ್ನೂ ತೊರೆದು ದೇಶ ಸೇವೆಗೆ ಸ್ವಾತಂತ್ರ್ಯ ಚಳುವಳಿಗೆ ಧುಮುಕಿದ ರಾಷ್ಟ್ರ ಸಂತರು ಪಿಂಗಳಿ ವೆಂಕಯ್ಯ.ಪಿಂಗಳಿ ವೆಂಕಯ್ಯ (2 ಆಗಸ್ಟ್ 1876 – 4 ಜುಲೈ 1963) ಒಬ್ಬ ಭಾರತೀಯ ಅಪ್ಪಟ ಸ್ವಾತಂತ್ರ್ಯ ಹೋರಾಟಗಾರ, ಭಾರತೀಯ ರಾಷ್ಟ್ರೀಯ ಧ್ವಜದ ಆರಂಭಿಕ ಆವೃತ್ತಿಯನ್ನು ವಿನ್ಯಾಸಗೊಳಿಸಲು ಹೆಸರುವಾಸಿಯಾಗಿದ್ದರು. ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಪಾತ್ರದ ಹೊರತಾಗಿ, ವೆಂಕಯ್ಯ ಅವರು ಉಪನ್ಯಾಸಕ , ಲೇಖಕ, ಭೂವಿಜ್ಞಾನಿ , ಶಿಕ್ಷಣತಜ್ಞ , ಕೃಷಿಕ ಮತ್ತು ಬಹುಭಾಷಾ ಪಂಡಿತರಾಗಿದ್ದರು .ವೆಂಕಯ್ಯ 19 ನೇ ವಯಸ್ಸಿನಲ್ಲಿ ಬ್ರಿಟಿಷ್ ಭಾರತೀಯ ಸೇನೆಯನ್ನು ಸೇರಿದರು ಮತ್ತು ಎರಡನೇ ಬೋಯರ್ ಯುದ್ಧದ ಸಮಯದಲ್ಲಿ (1899-1902) ದಕ್ಷಿಣ ಆಫ್ರಿಕಾದಲ್ಲಿ ಸೇವೆ ಸಲ್ಲಿಸಿದರು. ತಮ್ಮ ಸೇವಾವಧಿಯಲ್ಲಿ, ಭಾರತೀಯ ಸೈನಿಕರು ಬ್ರಿಟಿಷ್ ಧ್ವಜವಾದ ಯೂನಿಯನ್ ಜ್ಯಾಕ್‌ಗೆ ವಂದಿಸಬೇಕಾಗಿರುವುದರಿಂದ ಭಾರತಕ್ಕೆ ರಾಷ್ಟ್ರೀಯ ಧ್ವಜದ ಅಗತ್ಯವನ್ನು ಅವರು ಗುರುತಿಸಿದರು. ಅವರ ಅನುಭವದಿಂದ ಪ್ರೇರಿತರಾಗಿ ಮತ್ತು ನಂತರ…

Read More

ಲೇಖನ- ಶಿವಪ್ರಿಯೆಪ್ರಿಯಾ ಎಸ್ ದೇಗಾವಿಮಠ್”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ವೈದ್ಯ ಕಣ್ಣಿಗೆ ಕಾಣುವ ದೇವರು ಮರುಜನ್ಮ ಕರುಣಿಸುವ ಕೃಪಾಳು. ಮನುಷ್ಯನ ಜನ್ಮಕ್ಕೆ ಭಗವಂತ ಕಾರಣನಾದ್ರೆ ಆರೋಗ್ಯಯುತ ಜೀವನ ಸಡೆಸಲು ವೈದ್ಯ ಕಾರಣನಾಗುತ್ತಾನೆ.5000 ವರ್ಷಗಳ ಹಿಂದೆ ಪ್ರಪಂಚಕ್ಕೆ ಅತ್ಯಮೂಲ್ಯ ಆಯುರ್ವೇದದ ಚಿಕಿತ್ಸೆ ಕೊಡುಗೆ ಕೊಟ್ಟದ್ದು ನಮ್ಮ ಪೂರ್ವಜರು, ಜಗತ್ತಿನ ಮೊದಲ ಶಸ್ತ್ರ ಚಿಕಿತ್ಸಕ ವೈದ್ಯ ಸುಶ್ರುತ ನಮ್ಮ ಭಾರತದ ಕಾಶಿ ನಗರದವರು. ಅವರಿಗೆ “ಶಸ್ತ್ರ ಚಿಕಿತ್ಸಾ ಪಿತಾಮಹ” ಎಂದು ಕರೆಯುತ್ತಾರೆ. ತಾವೇ ತಯಾರಿಸಿದ ಉಪಕರಣಗಳ ಬಳಸಿ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದವರು ಸುಶ್ರುತ. ಯಾವುದೇ ಸ್ಕ್ಯಾನಿಂಗ್ ಮೆಷಿನ್ ಇಲ್ಲದೆ ಎಕ್ಸರೇ ನೋಡದೆ ಬರೀ ನಾಡಿ ಮಿಡಿತ ಗಮನಿಸಿ ರೋಗಿಯ ಸಮಸ್ಯೆ ಅದರ ಆಳ ತಿಳಿಯುತ್ತಿದ್ದ ಅಪ್ರತಿಮ ಬುದ್ಧಿಶಕ್ತಿ ಹೊಂದಿದ ವೈದ್ಯರವರು. ಆಗಿನ ಕಾಲದಲ್ಲೇ ಉಸಿರಾಟದ ಸಮಸ್ಯೆಗೆ, ಸೀಳು ತುಟಿ, ಎಲುಬು ಜೋಡಣೆ, ಚರ್ಮ ಬದಲಾವಣೆಯ ಶಸ್ತ್ರ ಚಿಕಿತ್ಸೆ ಮಾಡಿದವರು.ಕೆಲವು ದಿನಗಳ ಹಿಂದೆ ನನ್ನ ಕುಟುಂಬದ ಜೊತೆ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶೌರ್ಯ ಭೂಮಿ”…

Read More

ರಚನೆ- ಸುವರ್ಣ ಕುಂಬಾರ”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ನಯನಗಳ ಸಂಗೀತಕೆ ಒಲವಿನ ಸಂಚಲನಹೃದಯದ ವಿನಿಮಯ ಪ್ರೇಮಾನುರಾಗದ ಮಿಲನಮಾತುಗಳು ಮೌನವಾದಾಗಲೆ ಚೈತನ್ಯದ ಗಾನದಮನಿಯ ಲಯದಲ್ಲಿ ಇಬ್ಬರಕನಸ್ಸುಗಳಿಗೆ ಜೀವನ ಸಾಗುವ ಪಥಗಳಲ್ಲಿ ಬದುಕಿನ ಸರಿಗಮವುಗುನುಗೋಣವೇ ಜನ್ಮ ಜನ್ಮಕ್ಕೂ ಒಲವುಭಾವಾಂತರಂಗದಲ್ಲಿ ಪ್ರೀತಿಯ ಅದ್ಬುತ ಚೆಲುವುನಮ್ಮೊಲವೇ ಈ ಬಾಳ್ವೆಗೆ ಭದ್ರವಾದ ನಿಲುವು ಅಂತರ ಅಳೆಯುತ ಆತ್ಮಗಳಲ್ಲಿ ಬೆರೆತೆವುಒಲವ ಯಾನದ ಸುಂದರ ಗಾನದ ಮುತ್ತಾದೆವುಎರಡಳೆದು ಒಂದಾದ ಸವಿನಯ ಭಾವವುಉಸಿರು ಉಸಿರಿನಲಿ ನಮ್ಮೊಲವಿನ ಕಾವು.

Read More