Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಚನೆ- ಜಯಂತಿ ಎಸ್ ಭಟ್ಟಶಿರಾಲಿ”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ತನ್ನೆಲ್ಲ ಕನಸು ಕಾಣುತ ಮಕ್ಕಳಲಿತನ್ನವರಿಗಾಗಿ ಜೀವ ಸವೆದವನುನೋವನೆಲ್ಲ ಮರೆಮಾಚಿ ತನ್ನಲಿಖುಷಿ ಹಂಚುತ ನಗು ಚೆಲ್ಲಿದವನು ಗಂಭೀರ ಮುಖ ಮುದ್ರೆಯಲಿಜೀವನದ ಪಾಠವ ಕಲಿಸಿದವನುತನ್ನ ಬಯಕೆಗಳ ಸಾಯಿಸುತಲಿತನ್ನವರ ಬಯಕೆ ತೀರಿಸಿದವನು ತಾನು ಕಾಣದ ಸುಂದರ ಲೋಕದಿನಮಗಾಗಿ ಭವ್ಯ ಚಿತ್ತಾರ ಗೀಚಿದನುಸೋತಿಹೆವು ನಾವು ಶಬ್ದಕೋಶದಿಪದವ ತರಲು ಅಪ್ಪನ ವರ್ಣಿಸಲು
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ಕುಮಾರ ಘೋಷ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮುಂಗಾರಿನಲ್ಲಿ ಬಿತ್ತನೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ ೧೫ರವರೆಗೆ ತೊಗರಿ ಬಿತ್ತನೆಗೆ ಕಾಲಾವಕಾಶವಿದೆ. ಒಂದು ವೇಳೆ ಮಳೆ ಬಾರದೆ ಇದ್ದ ಸಂದರ್ಭದಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಯುವ ಕುರಿತು ರೈತರಲ್ಲಿ ಸೂಕ್ತ ಜಾಗೃತಿ ತಿಳುವಳಿಕೆ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಸೂಚಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜನವರಿಯಿಂದ ಜೂನ್ವರೆಗೆ ಜಿಲ್ಲೆಯಲ್ಲಿ ಶೇ.೮೨% ರಷ್ಟು ಮಳೆಯಾಗಿದೆ. ಈ ವರ್ಷ ಏಪ್ರಿಲ್-ಮೇನಲ್ಲಿ ಶೇ.೨೮೩ ರಷ್ಟು ಹೆಚ್ಚುವರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ನಡೆದಿದ್ದು, ಜುಲೈ ೧೫ರವರೆಗೆ ತೊಗರಿ ಬಿತ್ತನೆಗೆ ಅವಕಾಶವಿದೆ. ಈ ಸಲ ಶೇಕಡ ನೂರರಷ್ಟು ಇಳುವರಿ ಅಂದಾಜಿಸಲಾಗಿದೆ. ಎಲ್ಲ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಸಮರ್ಪಕವಾಗಿ ದಾಸ್ತಾನಿಟ್ಟುಕೊಂಡು ರೈತರಿಗೆ ಯಾವುದೇ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಜಯಪುರದ ಅಮ್ಮ ಫೌಂಡೇಶನ್ ವತಿಯಿಂದ ಪ್ರತೀ ವರ್ಷ ಕೊಡಮಾಡುವ ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿಗೆ ತಾಲೂಕಿನ ಕೇಸಾಪುರದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಪಿ.ಸಿ.ಹಡಗಿನಾಳ ಆಯ್ಕೆಯಾಗಿದ್ದಾರೆ.ಜು.೬ ರಂದು ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಪೌಂಡೇಶನ ಸಂಚಾಲಕ ಕಬೂಲ ಕೊಕಟನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ತಾಲೂಕಿನ ಮುಳವಾಡ ಬಳಿಯ ಟೋಲ್ ಪ್ಲಾಜಾದಲ್ಲಿ ಟೋಲ್ ಶುಲ್ಕವನ್ನು ಸುತ್ತಮುತ್ತಲಿನ 20ಕಿಮಿ ವ್ಯಾಪ್ತಿಯ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸಬಾರದು ಎಂದು ಟೋಲ್ ಪ್ಲಾಜಾ ಎದುರಿಗೆ ಗ್ರಾಮಸ್ಥರು, ಚಾಲಕರು ಹಾಗೂ ರೈತರಿಂದ ಕುಳಿತು ಪ್ರತಿಭಟನೆ ಮಾಡಿದರು.ಟೋಲ್ ಪ್ಲಾಜಾದಲ್ಲಿ ಕಾನೂನು ಬಾಹೀರವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕರರು ಆರೋಪಿಸಿದರು. ಯಾರಿಗೆಲ್ಲಾ ಶುಲ್ಕ ವಿಧಿಸಲಾಗುತ್ತಿದೆ ಎಂಬ ದಾಖಲಾತಿಗಾಗಿ ಪ್ರತಿಭಟನಾಕಾರರು ಒತ್ತಾಯಿಸಿದರು. ಟೋಲ್ ವ್ಯಾಪ್ತಿಯ ಗ್ರಾಮಗಳ ಜನರಿಗೆ ಶುಲ್ಕ ವಿಧಿಸಬಾರದು ಎಂದು ಆಗ್ರಹ ಮಾಡಿದರು .ಸ್ಥಳಕ್ಕೆ ಕೊಲ್ಹಾರ ಠಾಣೆಯ ಪೊಲೀಸರು ಆಗಮಿಸಿ ಪ್ರತಿಭಟನಾಕಾರೊಂದಿಗೆ ಮಾತುಕತೆ ನಡೆಸಿದರು. ಪೊಲೀಸರ ಮನವಿ ಮೇರೆಗೆ ಪ್ರತಿಭಟನೆ ಪ್ರತಿಭಟಕಾರರು ಹಿಂಪಡೆದರು.ಪ್ರತಿಭಟನೆ ಕಾರಣ ಎನ್ಎಚ್ 50 ರಲ್ಲಿ ಸಂಚಾರಕ್ಕೆ ವ್ಯತ್ಯಯವಾಗಿ ವಾಹನಗಳು ಸಾಲುಗಟ್ಟಿ ನಿಂತು ವಿವಿಧ ವಾಹನಗಳು, ಪ್ರಯಾಣಿಕರಿಗೆ ತೊಂದರೆ ಉಂಟಾಯಿತು. “ಕೊಲ್ಹಾರ ತಾಲೂಕು ಹಾಗೂ ಜಿಲ್ಲೆಯ ಜನರು ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಗಳಿಗೆ ಫಲವತ್ತಾದ ಭೂಮಿಯನ್ನು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿಜಯಪುರದ ಅಮ್ಮ ಫೌಂಡೇಶನ್ ಕೊಡಮಾಡುವ 2025ನೇ ಸಾಲಿನ ರಾಜ್ಯ ಮಟ್ಟದ “ಬಸವ ಚೇತನ” ಪ್ರಶಸ್ತಿಗೆ ಸಾಹಿತಿ, ಯುವ ಮುಖಂಡ, ನ್ಯಾಯವಾದಿ ಮಹ್ಮದಗೌಸ ಹವಾಲ್ದಾರ ಅವರು ಆಯ್ಕೆಯಾಗಿದ್ದಾರೆ.ಮಹಮ್ಮದಗೌಸ್ ಹವಾಲ್ದಾರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜುಲೈ 6 ರಂದು ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಹವಾಲ್ದಾರ್ ಅವರಿಗೆ “ಬಸವ ಚೇತನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಯ್ಕೆ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಲಿಂಗರಾಜ ವಿವಿಧೋದ್ದೇಶ ಸಂಸ್ಥೆ, ಶ್ರೀಮತಿ ಕಮಲಾಬಾಯಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್, ಶಿರಸಂಗಿ ಲಿಂಗರಾಜ ಸಹಕಾರಿ ಪತ್ತಿನ ಸಂಘ ಹಾಗೂ ವಿಜಯಪುರ ಜಿಲ್ಲಾ ಲಿಂಗಾಯತ ಕುಡವಕ್ಕಲಿಗ ನೌಕರರ ಕ್ಷೇಮಭಿವೃದ್ಧಿ ವೇದಿಕೆ ಇವರ ಸಹಯೋಗದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್. ಎಲ್.ಸಿ ಹಾಗೂ ಪಿ.ಯು.ಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿಜಯಪುರ, ಬಾಗಲಕೋಟೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶೇ.85 ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಜುಲೈ 10 ರ ಒಳಗಾಗಿ ವಿಜಯಪುರ ನಗರದ ಅಥಣಿ ರಸ್ತೆಯ ಜಿ ಕೆ ಪಾಟೀಲ ಸಭಾಭವನ ಹಾಗೂ ಆಶ್ರಮ ರಸ್ತೆಯ ಸಾಯಿ ಗಿಫ್ಟ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ: 7892071467 ಹಾಗೂ 8147065366 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ಜುಲೈ 8 ರಿಂದ 120 ದಿನಗಳ ಕಾಲ ನೀರು ಹರಿಸಲು ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಜರುಗಿದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ.ಸದ್ಯ ಎರಡೂ ಜಲಾಶಯಗಳಲ್ಲಿಯೂ ಸಾಕಷ್ಟು ನೀರಿನ ಸಂಗ್ರಹವಿದ್ದು, ಒಳಹರಿವು ಕೂಡಾ ಹೆಚ್ಚಿದೆ. ಅದಕ್ಕಾಗಿ ಮುಂಗಾರು ಹಂಗಾಮಿಗೆ ನಿರಂತರ ನೀರು ಹರಿಸಲಾಗುತ್ತದೆ. ಒಳಹರಿವು ಸ್ಥಗಿತಗೊಂಡ ನಂತರ ಕಾಲುವೆಗೆ 14 ದಿನ ಚಾಲು, 10 ದಿನ ಬಂದ್ ಅವಧಿಯ ವಾರಾಬಂಧಿ ಅಳವಡಿಸಲಾಗುತ್ತದೆ.ಕಾಲುವೆಗಳ ಸ್ವಚ್ಛತೆ ಕಾರ್ಯ , ಪಂಪಸೆಟ್ ದುರಸ್ತಿ ಮತ್ತೀತರ ನಿರ್ವಹಣೆಯ ಕಾರ್ಯ ಕೈಗೊಂಡು, ಜುಲೈ 8 ರೊಳಗೆ ಕಾಲುವೆಗೆ ನೀರು ಹರಿಸಲು ಕಾಲುವೆಗಳನ್ನು ಸಿದ್ಧಗೊಳಿಸಿಕೊಳ್ಳಬೇಕು, ರೈತರಲ್ಲಿ ನೀರಿನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಗಿದೆ.ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕರಾದ ಜೆ.ಟಿ.ಪಾಟೀಲ, ಅಜಯ ಧರ್ಮಸಿಂಗ್, ರಾಜಾವೇಣುಗೋಪಾಲ ನಾಯಕ, ಮಾನಪ್ಪ ವಜ್ಜಲ, ವಿಠ್ಠಲ ಕಟಕದೋಂಡ, ಕರಿಯಮ್ಮ ನಾಯಕ, ರಾಜುಗೌಡ…
ಹೈಕೋರ್ಟ್ನ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ | ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.ಹೈಕೋರ್ಟ್ನ ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್, ವಿಶೇಷ ತನಿಖಾ ತಂಡದ(SIT) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ಸಂಜೀವ ಜೋಶಿ, ವೈದ್ಯರು ಹೇಗೆ ರೋಗಿಗಳ ಶುಶ್ರೂಷೆ ಮಾಡಿ ರೋಗವನ್ನು ಗುಣಪಡಿಸುವರೋ ಅದೇ ರೀತಿ ಸಮಾಜಕ್ಕೆ ಚಿಕಿತ್ಸೆ ನೀಡಿ ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿದವರು ಬಸವಣ್ಣ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ ಕನಕದಾಸರು ಪುರಂದರದಾಸರು ಸಾಮಾಜಿಕ ಚಿಕಿತ್ಸಕರನ್ನು ನಾವು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.ವೈದ್ಯ ಲೋಕದ ವೈಜ್ಞಾನಿಕ ಚಿಂತನ ಮಂಥನ ನಡೆಸುವ ಈ ಸುದಿನದಂದು ಸಾರ್ವಜನಿಕರಲ್ಲಿ ವೈದ್ಯರ ಪಾತ್ರ ಮತ್ತು ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಹಾಗೂ ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿ ಸoಯಮ , ಪ್ರೀತಿ , ಕರುಣೆ ಮಾನವೀಯತೆ ಮೆರೆಯುವ ಪವಿತ್ರ ಕ್ಷೇತ್ರವೆಂದರೆ ವೈದ್ಯಕೀಯ ಕ್ಷೇತ್ರ, ವೈದ್ಯರಿಗೆ ದೇವರು ನೀಡಿದ ಪವಿತ್ರ ಕರ್ತವ್ಯವೆಂದು ಭಾವಿಸಿ ಸಮಾಜದ ಋಣ ತೀರಿಸಬೇಕಾಗಿದೆ ಎಂದು ತಿಳಿಸಿದರು.ವೇದಿಕೆಯ ಮೇಲೆ ಪ್ರಧಾನ ಗುರುಮಾತೆ ಶ್ರೀಮತಿ ರೂಪಾ…
ವಿಜಯಪುರದಲ್ಲಿ ಪ್ರೊ.ಸಿದ್ದಣ್ಣ ಲಂಗೋಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕದಲ್ಲಿ ಹುಟ್ಟಿಕೊಂಡ ಬಂಡಾಯ ಸಾಹಿತ್ಯಕ್ಕೆ ಮುನ್ನುಡಿ ಬರೆದು ಮುನ್ನಡೆಸಿದವರು. ಕುಮಾರ ಕಕ್ಕಯ್ಯ ಪೋಳರು ಅವರು ಬಿ.ಆರ್. ಅಂಬೇಡ್ಕರರಂತೆ ಶೋಷಣೆಗೆ ಒಳಗಾಗಿ ನೋವು ಮತ್ತು ಅವಮಾನ ಉಂಡು ಯಾತನೆ ಪಟ್ಟರು. ಡೋಹರ ಸಮುದಾಯಕ್ಕೆ ಸೇರಿದ ಅವರು ತಹಶೀಲ್ದಾರರಾಗಿ ಸ್ವಯಂ ನಿವೃತ್ತಿ ಹೊಂದಿ ಸಮಾಜ ಸೇವೆಗೆ ತೊಡಗಿಸಿದರು. ಅವರ ಹೆಸರು ಬಿ.ಎಸ್. ಪೋಳ ಕುಮಾರ ಕಕ್ಕಯ್ಯ ವಚನಾಂಕಿತದಿಂದ ಸಾವಿರಾರು ವಚನಗಳನ್ನು ರಚಿಸಿ ಆಧುನಿಕ ವಚನಕಾರರಾದರು. ದೀನ ದಲಿತರು ಮಹಿಳೆಯರ ನೋವುಗಳಿಗೆ ಧ್ವನಿಯಾಗಿ ಬಂಡಾಯ ಸಾಹಿತ್ಯ ಬರೆದರು. ಎಂದು ಪ್ರೊ. ಸಿದ್ದಣ್ಣ ಲಂಗೋಟಿ ಅವರು ಹೇಳಿದರು.ಅವರು ಶರಣ ಸಾಹಿತ್ಯ ಪರಿಷತ್ತು, ಎ.ಎಸ್. ಹಿಪ್ಪರಗಿ ಪ್ರತಿಷ್ಠಾನ, ಜಿಲ್ಲಾ ವಿರಶೈವ ಲಿಂಗಯತ ಮಹಾಸಭಾ ಮತ್ತು ಕುಮಾರ ಕಕ್ಕಯ್ಯ ಪೋಳ ಪ್ರತಿಷ್ಠಾನಗಳ ಸಂಯುಕ್ತಾಶಯದಲ್ಲಿ ಡನೆದ ಕುಮಾರ ಕಕ್ಕಯ್ಯ ಪೋಳ ಲಿಂ. ಸಿದ್ದಣ್ಣ ಕೋಳೂರು ಮಲಕಾಜಪ್ಪ ವಡವಡಗಿ ಅವರ ದತ್ತಿ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಶರಣ ಸಾಹಿತ್ಯಕ್ಕೆ ಕುಮಾರ ಕಕ್ಕಯ್ಯ ಪೋಳರು ಅಪಾರ…
