Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ 2025-26 ನೇ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಮಾನ್ಯ ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ರವರ ಸುತ್ತೋಲೆಯ ಮೇರೆಗೆ ತರಗತಿವಾರು ಮತ್ತು ರೋಸ್ಟರ್‌ ಆಧಾರದ ಮೇಲೆ ಸಂಸ್ಥೆಯಲ್ಲಿ ಖಾಲಿ ಇರುವ 7ನೇ ತರಗತಿಯಲ್ಲಿ 17 ಸೀಟುಗಳು, 8ನೇ ತರಗತಿಯಲ್ಲಿ 12 ಸೀಟುಗಳು, 9ನೇ ತರಗತಿಯಲ್ಲಿ 10 ಸೀಟುಗಳು ಖಾಲಿ ಇದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ದಿನಾಂಕ: 03-07-2025 ರಿಂದ 10-07-2025 ರವರೆಗೆ ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಮರಳಿ ಶಾಲೆಗೆ ಸಲ್ಲಿಸುವದು.ಪರೀಕ್ಷಾ ದಿನಾಂಕ : 25-07-2025 ರಂದು ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ ಜರುಗುವದು ಎಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹುನ್ನೂರ ಮತ್ತು ಮುಖ್ಯೋಪಾಧ್ಯಾಯ ಎಸ್.ಜಿ.ಬನಸೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಮಹಿಳಾ ತರಬೇತಿ ಯೋಜನೆಯಡಿ ಫೀಲ್ಡ್ ಟೆಕ್ನಶಿಯನ್ * ಕಂಪ್ಯೂಟಿಂಗ್ ಪೆರಿಫೆರಲ್ಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.೨೦೨೪-೨೫ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ನೊಂದಣಿಯಾದ ಇಂಡಿ ತಾಲೂಕಿನ ಎಸ್.ಕೆ.ಕಂಪ್ಯೂಟರ್ ಇನ್ಸ್ಟಿಟ್ಯೂಟ್ ಇಂಡಿ ಸಂಸ್ಥೆ ಮೂಲಕ ಜಿಲ್ಲೆಯಲ್ಲಿ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಎಸ್.ಕೆ. ಕಂಪ್ಯೂಟರ್ ಇನ್ಸಟಿಟ್ಯೂಟ್ ಎ.ಬಿ.ಪಾಟೀಲ ಕಾಂಪ್ಲೆಕ್ಸ್, ಸಿಂದಗಿ ರಸ್ತೆ, ಇಂಡಿ ಸಂಸ್ಥೆಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : ೧೦-೦೬-೨೦೨೫ರೊಳಗಾಗಿ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೮೨೯೬೨೮೭೩೬೩, ೯೯೭೨೭೮೫೭೭೧ ಸಂಖ್ಯೆಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು ಪ್ರಸಕ್ತ ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆಅರ್ಜಿಯನ್ನು https://swdservice.karnataka.gov.in/PrizeMoneyClientAPP/ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ಪುಂಡಲೀಕ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜು.೦೨ ರ ಬೆಳಿಗ್ಗೆ ೧೦ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ್ ಎನ್, ವಿಧಾನ ಪರಿಷತಿನ ಶಾಸಕರಾದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ…

Read More

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವ ಮೂಲಕ ಅಗತ್ಯ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ, ಉತ್ತಮ ಫಲಿತಾಂಶಕ್ಕಾಗಿ ಸೂಕ್ಷ್ಮ ಯೋಜನೆಗಳನ್ನು ರೂಪಿಸಿ, ಆ ಯೋಜನೆಯ ಅನುಗುಣವಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚಿಸಿದರು.ಅನುದಾನಿತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಸಾರವಾಗಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳವಂತೆ ಸಂಸ್ಥೆಗಳಿಗೆ ಸೂಚಿಸಬೇಕು ಹಾಗೂ ಫಲಿತಾಂಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಮುದಾಯ ಭವನ, ರಸ್ತೆ ಅಭಿವೃದ್ಧಿ, ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು.ವಿಜಯಪುರ ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವರಸಪುರದ ವಿಜಯ ಕಾಲೊನಿಯ ಶ್ರೀ ಹನುಮಾನ ದೇವಸ್ಥಾನದ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರಿಸಲಾದ ರೂ.5 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ನಗರದ ಅಟಲ್ ಬಿಹಾರಿ ವಾಜಪೇಯಿ ರಸ್ತೆಯಲ್ಲಿ ನಿರ್ಮಾಣ ಮಾಡಲಾದ ಕೊಳಗೇರಿ ಮನೆಗಳ ಹತ್ತಿರ, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಜೂರಿಸಲಾದ ರೂ.56.35 ಲಕ್ಷ ಅನುದಾನದಲ್ಲಿ ಪ್ರಧಾನಮಂತ್ರಿ ಅವಾಸ ಯೋಜನೆಯಡಿ ನಿರ್ಮಿಸಲಾದ ಜಿ+1 ಮಾದರಿ ಮನೆಗಳಿಗೆ ಕೀರು ನೀರು ಸರಬರಾಜು, ಸಿಸಿ ರಸ್ತೆ ಹಾಗೂ ಆರ್.ಸಿ.ಸಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ನಗರದ ವಾರ್ಡ್ ನಂ.24ರ ಕಮಾನಖಾನ್ ಬಜಾರ್ (ಗೌಡರ ಓಣಿ)ದಲ್ಲಿ ಬರುವ ಶ್ರೀ ಬಸವಣ್ಣ ದೇವರ ಪುರಾತನ ದೇವಸ್ಥಾನದ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಮತ್ತು ಮುಜರಾಯಿ ಇಲಾಖೆಯಿಂದ ಮಂಜೂರಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025-26 ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯ ಕಗ್ಗೊಡ ಶಾಲೆಯಲ್ಲಿ 7, 8 ಮತ್ತು 9 ನೇ ತರಗತಿಗೆ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುವದು.ದಿನಾಂಕ: 03-07-2025 ರಿಂದ 10-07-2025 ರವರೆಗೆ ಕಗ್ಗೊಡ ಶಾಲೆಯಲ್ಲಿ ಅರ್ಜಿ ಪಡೆದು ಸೂಕ್ತ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸುವದು. ದಿನಾಂಕ: 25-07-2025 ರಂದು ಪ್ರವೇಶ ಪರೀಕ್ಷೆ ನಡೆಸಲಾಗುವದು.ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ತಾಲೂಕಿನ ಪಾಲಕರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಎಸ್. ಬಳೋಲಮಟ್ಟಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ನೋಡಲ್ ಸುರೇಶ ಕುಶಾಲಕರ (9902716236) ತಾಲೂಕ ನೋಡಲ್ ಪ್ರಭು ಬಿರಾದಾರ(9880832448)ಇವರನ್ನು ಸಂಪರ್ಕಿಸಲು ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕೋಶದ ವತಿಯಿಂದ ವಿಜಯಪುರ ಜಿಲ್ಲೆಯ ೫ ಗ್ರಾಮಗಳನ್ನು ದತ್ತು ಪಡೆಯಲು ಜಿಲ್ಲಾ ಪಂಚಾಯತ್ ಮಂಜೂರಾತಿ ನೀಡಿದೆ.ಈ ಗ್ರಾಮಗಳನ್ನು ಗುರುತಿಸಿ, ದತ್ತು ಪಡೆದ ಹಳ್ಳಿಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆ, ಕೃಷಿ, ಯೋಗ, ಆರೋಗ್ಯ, ಕಲೆ, ಸಾಹಿತ್ಯ, ಕ್ರೀಡೆ ಮತ್ತು ಇನ್ನಿತರ ಚಟುವಟಿಕೆಗಳನ್ನು ಜಾರಿಗೆ ತರಲು ಜಿಲ್ಲಾ ಪಂಚಾಯತ್ ಸೂಚಿಸಿದೆ.ಮಹಿಳಾ ವಿವಿಯ ಎನ್‌ಎಸ್‌ಎಸ್ ಘಟಕ ಬಬಲೇಶ್ವರ ತಾಲೂಕಿನ ಕಣ್ಮುಚ್ಚಿನಾಳ, ಧನ್ಯಾಳ, ತಿಕೋಟಾ ತಾಲೂಕಿನ ಲೋಹಗಾವ್, ತೊರವಿ ಮತ್ತು ವಿಜಯಪುರ ತಾಲೂಕಿನ ಹಿಟ್ನಳ್ಳಿ ಗ್ರಾಮಗಳನ್ನು ದತ್ತು ಪಡೆಯಲಿದ್ದು ನಿರಂತರ ಕಾರ್ಯಕ್ರಮಗಳನ್ನು ಸಂಘಟಿಸಲಿದೆ ಎಂದು ಮಹಿಳಾ ವಿವಿಯ ಎನ್‌ಎಸ್‌ಎಸ್ ಕೋಶದ ಸಂಯೋಜಕರಾದ ಅಶೋಕಕುಮಾರ ಸುರಪುರ ಮತ್ತು ವಿಜಯಪುರ ಜಿಲ್ಲಾ ಮಹಿಳಾ ಮಹಾವಿದ್ಯಾಲುಯಗಳ ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಪ್ರೊ. ವಿಷ್ಣು ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ‘ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹಂತದ ಒಳನೋಟಗಳು’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.ಆದಾಯ ತೆರಿಗೆ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿವೆ. ಇ-ಫೈಲಿಂಗ್ ಮಾಡುವ ವೇಳೆ ನಿಖರವಾದ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದು ಅತ್ಯಂತ ಅಗತ್ಯ. ಯಾವುದೇ ತಪ್ಪುಗಳಿಲ್ಲದಂತೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಇಂತಹ ಪ್ರಯೋಗಾತ್ಮಕ ಕಾರ್ಯಕ್ರಮಗಳು ಅವಶ್ಯಕ. ವಿಶ್ವವಿದ್ಯಾನಿಲಯವು ಈ ನಿಟ್ಟಿನಲ್ಲಿ ಸದಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ. ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ, ಎಂ. ಬಿ. ಎ ವಿಭಾಗ ವತಿಯಿಂದ ಜುಲೈ 3 ರಂದು ಗುರುವಾರ ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ ಮೇಳ(ಕ್ಯಾಂಪಸ್‌ ಸಂದರ್ಶನ)‌ವನ್ನು ಆಯೋಜಿಸಲಾಗಿದೆ.ಗುರುವಾರ ಬೆಳಗ್ಗೆ 10 ಗಂಟೆಗೆ ಬಿ.ಎಲ್.ಡಿ.ಇ. ಹೊಸ ಆವರಣದ ಎಂ.ಬಿ.ಎ. ಆಡಿಟೋರಿಯಂನಲ್ಲಿ ಈ ಉದ್ಯೋಗ ಮೇಳ ನಡೆಯಲಿದ್ದು, ಅದರಲ್ಲಿ ಪೇ-ಟಿಎಂ, ಆರ್. ಎನ್. ಎಸ್.‌ ಮೋಟರ್ಸ್‌, ಫೋನ್-ಪೇ, ಕನಿಷ್ಕ ಆಭರಣ, ಐಎಫ್.ಬಿ. ಮುತ್ತೂಟ್ ಫೈನಾನ್ಸ್‌, ನಿಪ್ಪೊನ್‌ ಪೇಂಟ್ಸ್‌, ಯಟಿಕಾರ್ಪ್‌, ಜಿಯೋ, ಮುಂತಾದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.ಆಸಕ್ತರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು‌ ವಿಭಾಗದ ನಿರ್ದೇಶಕ ಡಾ. ಚಿದಾನಂದ ಜಿ. ಬ್ಯಾಹಟ್ಟಿ ಮತ್ತು ಉದ್ಯೋಗ ನಿಯೋಜನೆ ಅಧಿಕಾರಿ ಡಾ. ಮಹಾಂತೇಶ ಪಿ. ಕನಮಡಿ ತಿಳಿಸಿದ್ದಾರೆ.ಭಾಗವಹಿಸುವವರು ಕೆಳಗೆ ನಮೂದಿಸಿದ ಲಿಂಕ್ ನ್ನು ಉಪಯೋಗಿಸಿಕೊಂಡು ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.Link: https://forms.gle/4i5yBLTqKDConT769

Read More