Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ )ದಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಪದವಿ, ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದಾಗಿದೆ.ಅಲ್ಲದೆ ಆನಲೈನ್ ಮೂಲಕ www.ignouadmission.samarth.edu.in ಕ್ಕೆ ಲಾಗಿನ್ ಆಗಿ ನೊಂದಣಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ನಂ. 9980691291 ಗೆ ಸಂಪರ್ಕಿಸಬಹುದು ಎಂದು ಇಗ್ನೋ ಕೇಂದ್ರದ ಸಂಯೋಜಕ ಡಾ. ಮಂಜುನಾಥ ಕೋರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿಜಯಪುರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ವೈದ್ಯರ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಜು.1ರಂದು ವೈದ್ಯರ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವೈದ್ಯರಾದ ಡಾ.ಸುಧೀರ್ ರೇಶ್ಮಿ ಅವರು ಮಕ್ಕಳಿಗೆ ಆರೋಗ್ಯದ ಮಹತ್ವವನ್ನು ವಿವರಿಸಿದರಲ್ಲದೇ, ವಿಶೇಷ ಚೇತನತೆ ಹೊಂದಿದ ಮಕ್ಕಳಿಗೆ ಆರೋಗ್ಯದ ಬಗ್ಗೆ ಸದಾ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.”ಆರೋಗ್ಯವೇ ಜೀವನದ ಮೂಲಧಾರೆಯಾಗಿದೆ. ವಿಶೇಷ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಸರಿಯಾದ ಆಹಾರ, ಸಮಯಪಾಲನೆಯು ಅವರಿಗೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ” ಎಂದು ಡಾ.ರೇಶ್ಮಿ ಹೇಳಿದರು.ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಡಾ. ಸುಧೀರ್ ರೇಶ್ಮಿ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದರು. ಬಳಿಕ ಮಕ್ಕಳಿಗೆ ಸಿಹಿ ಹಂಚಿ ದಿನಾಚರಣೆಯನ್ನು ಹರ್ಷೋತ್ಸಾಹದಿಂದ ಆಚರಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಆಡಳಿತ ಮಂಡಳಿ ವೈದ್ಯರಿಗೆ ಧನ್ಯವಾದಗಳನ್ನು ತಿಳಿಸಿ, ಅಂತಹ ಸಾರ್ಥಕ ಕಾರ್ಯಕ್ರಮಗಳು ಮುಂದುವರೆಯಲಿ ಎಂಬ ಆಶಯ…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ವಯಸ್ಸಾದ ತಂದೆ ತಾಯಿ ಆ ಮನೆಯಲ್ಲಿ ಇಬ್ಬರೇ. ಮುಂಜಾನೆ ನಿತ್ಯ ಕರ್ಮಗಳನ್ನು ಪೂರೈಸಿ ವಾಕಿಂಗ್ ಹೋಗುವ ಅವರಿಬ್ಬರೂ ಮನೆಗೆ ಬಂದು ಜೊತೆಯಾಗಿಯೇ ಅಡುಗೆ ಮಾಡಿ ತಿಂಡಿಯ ಬದಲು ಊಟ ಮಾಡಿ ಬಿಡುತ್ತಾರೆ. ಆತ ಆಫೀಸಿಗೆ ಹೊರಟರೆ ಆಕೆ ಕಾಲು ಚಾಚಿಕೊಂಡು ಕುಳಿತು ಪೇಪರ್ ಓದುತ್ತಾಳೆ.ಸ್ವಲ್ಪ ಹೊತ್ತಿನ ನಂತರ ಮನೆ ಕೆಲಸದಾಕೆ ಬಂದು ಇಡೀ ಮನೆಯ ಕಸಗುಡಿಸಿ ನೆಲ ಒರೆಸಿ, ಪಾತ್ರೆ ತೊಳೆದು ಹೋಗುವವರೆಗೂ ಆಕೆಯ ಹಿಂದೆ ಮುಂದೆ ಓಡಾಡಿ ಆಕೆಗೆ ಬೇಕಾದುದನ್ನು ಒದಗಿಸುವುದು ಮನೆಯ ಯಜಮಾನಿಯ ಕೆಲಸ. ಮಧ್ಯಾಹ್ನ ಆಕೆ ಬೇಕಾದರೆ ಒಂದಷ್ಟು ಊಟ ಮಾಡುತ್ತಾರೆ, ಇಲ್ಲವಾದರೆ ಒಂದು ಕಪ್ಪು ಚಹಾ ಮಾಡಿಕೊಂಡು ಕುಡಿದು ಒಂದು ಸಣ್ಣ ನಿದ್ದೆಯನ್ನು ತೆಗೆದು ಏಳುತ್ತಾಳೆ. ಸಂಜೆ ಗಂಡ ಮನೆಗೆ ಬರುವ ವೇಳೆಗೆ ಕಸ ಗುಡಿಸುವ ಆಕೆ ತಲೆ ಬಾಚಿಕೊಂಡು ಕೈ ಕಾಲು ಮುಖ ತೊಳೆದು ದೇವರಿಗೆ ದೀಪ ಮುಡಿಸಿ ಕಾಫಿ ಡಿಕಾಕ್ಷನ್ ಹಾಕಿಡುತ್ತಾರೆ. ಪತಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಾನು ಸನ್ಮಾನ ಮಾಡಿಸಿಕೊಳ್ಳುವುದು ದೊಡ್ಡದಲ್ಲ. ಇತರರನ್ನು ಗೌರವಿಸುವುದು, ಮೇಲಕ್ಕೆ ಎತ್ತಬೇಕು ಎಂದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಪಿ.ಎಚ್ಡಿ ಪಡೆದವರಿಗೆ ಸನ್ಮಾನ ಮಾಡಬೇಕೆಂದು ಕಾರ್ಯಕ್ರಮ ಮಾಡಿದ ಶಾಂತಗಂಗಾಧರ ಮಹಾಸ್ವಾಮಿಗಳ ಗುಣ ದೊಡ್ಡದು ಎಂದು ವಿಜಯಪುರದ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮಿಗಳು ಹೇಳಿದರು.ಸಿಂದಗಿ ಪಟ್ಟಣದ ಗುರುದೇವ ಆಶ್ರಮದಲ್ಲಿ ಶಾಂತಗಂಗಾಧರ ಮಹಾಸ್ವಾಮಿಗಳ ೭೮ನೇ ಜನ್ಮ ದಿನೋತ್ಸವದ ನಿಮಿತ್ತವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಸ್ವಾಮಿಗಳು ನೂರಾರು ಸಸಿಗಳನ್ನು ಹಚ್ಚಿದ್ದಾರೆ. ಅವರು ಹಚ್ಚಿದ ಸಸಿಗಳು ಇಂದು ಜ್ಞಾನದ ಹಣ್ಣನ್ನು ನೀಡುತ್ತಿವೆ. ಸಿದ್ದೇಶ್ವರ ಸ್ವಾಮಿಗಳು, ಶಾಂತಗಂಗಾಧರ ಮಹಾಸ್ವಾಮಿಗಳು ಅವರ ಶಿಷ್ಯರು. ನಾವೆಲ್ಲ ಸಂಭ್ರಮ ಪಡಬೇಕು. ಶಾಂತಗಂಗಾಧರ ಮಹಾಸ್ವಾಮಿಗಳು ಡಾಕ್ಟರೇಟ್ ಬಯಸಿದವರಲ್ಲ. ಅವರ ಸಾಧನೆಗೆ ಹುಡುಕಿಕೊಂಡು ಬಂದಿದೆ. ಸಾಕಷ್ಟು ಏಳುಬೀಳುಗಳನ್ನು ಎದುರಿಸಿದವರು. ಅದೆಲ್ಲವನ್ನು ಮೆಟ್ಟಿ ನಿಂತು ಸಮಾಜೋಧಾರ್ಮಿಕ ಕೆಲಸಗಳ ಜೊತೆಗೆ ಸಾಹಿತ್ಯದ ಕೃಷಿಯನ್ನು ಮಾಡಿದವರು ಎಂದರು.ಮೋಳೆ ಗ್ರಾಮದ ಸಂಚಾರಿ ಶರಣ ಡಿ.ಎಸ್.ಚಾಳೇಖರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಗಂಗಾಧರ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಿಂದಗಿ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಮಾಡುತ್ತಿರುವ ತ್ಯಾಜ್ಯ ವಿಲೇವಾರಿಯನ್ನು ಬೇರೆಡೆ ಸ್ಥಳಾಂತರಿಸುವಂತೆ ಆಗ್ರಹಿಸಿ ರೈತರು ಹಾಗೂ ಜಮೀನುಗಳ ಮಾಲೀಕರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಸೋಮವಾರ ಆಗಮಿಸಿದ ರೈತರು ಹಾಗೂ ಜಮೀನುಗಳ ಮಾಲೀಕರು ಪಟ್ಟಣ ಪಂಚಾಯಿತಿ ವಿಲೇವಾರಿ ಮಾಡುತ್ತಿರುವ ತ್ಯಾಜ್ಯದಿಂದ ತಮಗಾಗುತ್ತಿರುವ ತೊಂದರೆ ಕುರಿತು ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ರೈತಪ್ರತಿನಿಧಿ ಅರವಿಂದ ನಾಯ್ಕೋಡಿ ಮಾತನಾಡಿ, ಪಟ್ಟಣ ಪಂಚಾಯಿತಿ ವಿಲೇವಾರಿ ಮಾಡುತ್ತಿರುವ ಪ್ಲಾಸ್ಟಿಕ್ ಕಾಗದಗಳು ಜಮೀನುಗಳಲ್ಲಿ ಹಾರಾಡಿ ಬೆಳೆಗಳಿಗೆ ಸುತ್ತಿಕೊಳ್ಳುತ್ತಿವೆ. ಇದರಿಂದ ಬೆಳೆಗಳ ಬೆಳವಣಿಗೆಯ ಮೇಲೆ ಪರಿಣಾಮವಾಗುತ್ತಿದೆ. ಅಲ್ಲದೆ ಹಸಿ ಕಸ ಮತ್ತು ಸತ್ತ ಪ್ರಾಣಿಗಳನ್ನು ಅಲ್ಲಿಯೇ ಎಸೆದಿರುವುದರಿಂದ ಇಡೀ ವಾತಾವರಣ ಗಬ್ಬು ವಾಸನೆಯಿಂದ ಕೂಡಿದೆ. ಇದರಿಂದ ಜಮೀನುಗಳ ಮನೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ಅಸಹನೀಯವೆನಿಸಿದೆ.ತ್ಯಾಜ್ಯ ವಿಲೇವಾರಿ ಮಾಡುವ ಸಿಬ್ಬಂದಿ ಕೆಲವು ಬಾರಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದರಿಂದ ಕಬ್ಬು ಬೆಳೆಗೆ ಬೆಂಕಿ ತಗಲುವ ಸಾಧ್ಯತೆಯಿದೆ. ತ್ಯಾಜ್ಯದ ಬೆಂಕಿಯಿಂದ ಇಡೀ ಪ್ರದೇಶ ಹೊಗೆಮಯವಾಗುತ್ತಿದೆ. ಅಲ್ಲದೇ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮಹಾರಾಷ್ಟçದ ವಿವಿಧ ಜಲಾಶಯಗಳಿಂದ ನೀರನ್ನು ಭೀಮಾ ನದಿಗೆ ಹರಿಬಿಟ್ಟ ಪರಿಣಾಮದಿಂದಾಗಿ ಆಲಮೇಲ ತಾಲೂಕಿನ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ಗೆ ಸಧ್ಯ ೪೭೬೯೦ ಕ್ಯೂಸೇಕ್ ನೀರು ಹರಿದು ಬರುತ್ತಿದೆ ಎಂದು ಕೆಎನ್ಎನ್ಎಲ್ ಎಇಇ ಸಂತೋಷಕುಮಾರ ಸಜ್ಜನ್ ಮಾಹಿತಿ ನೀಡಿದ್ದಾರೆ.ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸೊನ್ನ ಬ್ಯಾರೇಜ್ನ ಒಟ್ಟು ಸಂಗ್ರಹ ಸಾಮರ್ಥ್ಯ ೩.೧೬೬ ಟಿಎಂಸಿ ಇದ್ದು ಮಹಾರಾಷ್ಟçದ ಜಲಾಶಯಗಳಿಂದ ಒಟ್ಟು ೪೭೬೯೦ ಕ್ಯೂಸೇಕ್ಸ್ ನೀರು ಹರಿದು ಬಂದಿದ್ದರಿಂದ ಬ್ಯಾರೆಜ್ನ ೨೪ ಗೇಟ್ಗಳ ಮೂಲಕ ೪೦ ಸಾವಿರ ಕ್ಯೂಸೇಕ್ಸ್ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ. ಹೀಗಾಗಿ ಸೊನ್ನ ಬ್ಯಾರೇಜ್ ಕೆಳಗಡೆಯಲ್ಲಿ ನದಿಗೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಲಿದೆ.ಆದ್ದರಿಂದ ತಾಲೂಕಿನ ನದಿ ತೀರದ ದೇವಣಗಾಂವ, ಶಂಬೇವಾಡ, ಕಡ್ಲೇವಾಡ, ಕುಮಸಗಿ , ಚಿಕ್ಕಹವಳಗಿ, ಬಗಲೂರ ಗ್ರಾಮಗಳ ಜನರು ರೈತರು ಜಾಗೃತ ವಾಗಿ ಇರಬೇಕು ಸದ್ಯ ಭೀಮಾ ನದಿಯಲ್ಲಿಗ ಪ್ರವಾಹ ಪರಿಸ್ಥಿತಿ ಇಲ್ಲ. ಆದಾಗ್ಯೂ ಕೂಡ ಸಾರ್ವಜನಿಕರು ನದಿ ಪಾತ್ರಕ್ಕೆ ಹೋಗುವುದು ಸರಿಯಲ್ಲ ಎಂದು ಸಲಹೆ ನೀಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಿಂದೂ ಭಾವೈಕ್ಯತೆ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕೆಂದು ಪಿಎಸ್ಐ ಆರೀಫ್ ಮುಷಾಪುರಿ ತಿಳಿಸಿದರು.ಸಿಂದಗಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ಮೋಹರಂ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮೊಹರಂ ಹಬ್ಬವು ೧೦ ದಿನಗಳವರೆಗೆ ನಡೆಯುತ್ತಿದ್ದು. ನಾವೇಲ್ಲರೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಬಗ್ಗೆ ಸೂಕ್ತ ನಿಗಾವಹಿಸಲಾಗುವುದು. ಹಾಗೂ ತಪ್ಪು ಕಂಡುಬಂದರೆ ಅಂತವರ ಮೇಲೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಸಿಂದಗಿಯಲ್ಲಿ ೮ ಪಂಜಾ ಮತ್ತು ೪ಡೋಲಿಗಳಿರುವ ಕಾರಣ ಆ ಪ್ರದೇಶದಲ್ಲಿ ಆಯಾ ಸಮಿತಿಯವರು ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ಮತ್ತು ನಿಮ್ಮ ಪಂಜಾ ಡೋಲಿ ಕುಡಿಸುವ ಜಾಗದಲ್ಲಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಬೇಕು.ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟಗಳನ್ನ ಹರಿಬಿಟ್ಟು ಸಮಾಜದ ಸ್ವಾಸ್ತ್ಯ ಕದಡುವ ಪ್ರಯತ್ನ ಮಾಡುತ್ತಾರೆ. ಅಂತಹ ಸಮಾಜ ಘಾತುಕರನ್ನು ಸಾಮಾಜಿಕ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗುವುದು ಹಾಗೂ ತಪ್ಪು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲೆಗಳು ಸಾಮಾನ್ಯವಾಗಿ ಬಣ್ಣಗಳ ದಿನವನ್ನು ಕಿರಿಯ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶ್ರೇಣಿಗಳ ವಿದ್ಯಾರ್ಥಿಗಳಿಗೆ ಒಂದು ಮನರಂಜನೆ ಮತ್ತು ಶೈಕ್ಷಣಿಕ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ ಎಂದು ಕ್ರಿತಯೇಟಿವ್ ಕಿಡ್ಸ್ ಹೋಮ್ನ ಮುಖ್ಯಗುರುಮಾತೆ ಡಾ.ಜ್ಯೋತಿ ಪೂಜಾರ ಹೇಳಿದರು.ಸಿಂದಗಿ ಪಟ್ಟಣದ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಕ್ರಿಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡ ಬಣ್ಣಗಳ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಾಲ್ಯದ ಶಿಕ್ಷಣದಲ್ಲಿ ಬಣ್ಣಗಳ ದಿನವನ್ನು ಆಚರಿಸುವುದರಿಂದ ಮಕ್ಕಳಿಗೆ ಹಲವಾರು ಬೆಳವಣಿಗೆಯ ಪ್ರಯೋಜನಗಳಿವೆ. ಇದು ಬಣ್ಣ ಗುರುತಿಸುವಿಕೆ, ಅರಿವಿನ ಕೌಶಲ್ಯಗಳು, ಸೃಜನಶೀಲತೆ ಮತ್ತು ಸಂವೇದನಾ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಜೊತೆಗೆ ಸಾಮಾಜಿಕ ಸಂವಹನ ಮತ್ತು ಭಾಷಾ ಕೌಶಲ್ಯಗಳನ್ನು ಬೆಳೆಸುತ್ತದೆ. ಬಣ್ಣಗಳ ದಿನದೊಂದಿಗೆ ಸಂಬಂಧಿಸಿದ ಮೋಜಿನ ಮತ್ತು ಆಕರ್ಷಕ ಚಟುವಟಿಕೆಗಳು ಚಿಕ್ಕ ಮಕ್ಕಳಿಗೆ ಕಲಿಕೆಯನ್ನು ಆನಂದದಾಯಕ ಮತ್ತು ಸ್ಮರಣೀಯವಾಗಿಸುತ್ತದೆ ಎಂದು ತಿಳಿಸಿದರು.ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು, ಅದೇ ಬಣ್ಣದ ಮಾದರಿಗಳನ್ನು ತಂದು ಅದರ ಬಗ್ಗೆ ವಿವರಿಸಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಮಾವೂರಿನ ಬಾಲಲೀಲಾ ಸಂಗಮೇಶ್ವರ ನಾಟ್ಯ ಸಂಘವು ಹಿರಿಯ ಕಲಾವಿದ ಶಿವಲಿಂಗಯ್ಯ ಹಿರೇಮಠ ಅವರ ಮಗನ ಶಿಕ್ಷಣದ ಸಹಾಯರ್ಥವಾಗಿ ಭಾನುವಾರ ಸಂಜೆ ಪ್ರದರ್ಶನಗೊಂಡ ಬಂಜೆ ತೊಟ್ಟಿಲು ನಾಟಕ ಪ್ರೇಕ್ಷಕರನ್ನು ಮನಸೂರೆಗೊಂಡಿತ್ತು.ನಾಟಕದಲ್ಲಿ ಕಲಾವಿದರಾದ ಅನಿತ ಹುಬ್ಬಳ್ಳಿ, ಶಶಿಕುಮಾರ ಜೀವಾಪುರ, ಮಂಜು ಹುಬ್ಬಳ್ಳಿ, ಶಿವಲಿಂಗಸ್ವಾಮಿ ಮಾವೂರು, ಚನ್ನವೀರಯ್ಯ, ಈರಣ್ಣ ಮೈಂದರಗಿ, ಸಾವಿತ್ರಮ್ಮ ದಾವಣಗೇರಿ, ಮಹಾದೇವಿ ದಾವಣಗೇರಿ, ಪ್ರೇಮಾಬಾಯಿ ತಾಳಿಕೋಟಿ, ಮಂಜುಳಾ ಹಾವೇರಿ ಮನೋಜ್ಞವಾಗಿ ಅಭಿನಯಿಸಿದರು.ನಾಟಕಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗಭೂಮಿಯ ನಾಟಕಗಳನ್ನು ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಮಾಜಿಕ ಪ್ರeಯನ್ನು ಬೆಳೆಸಲು ನಾಟಕಗಳು ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಆಧುನಿಕತೆಗೆ ಕಲೆಗಳು ಸೊರಗುತ್ತಿವೆ ಎಂಬ ಮನೋಭಾವ ಬೇಡ. ಕಲೆಗೆ ಸದಾ ಬೆಲೆ ಇರುತ್ತದೆ ಎಂದರು.ಹಿರಿಯ ಕಲಾವಿದ ಶಿವಲಿಂಗಯ್ಯ ಹಿರೇಮಠ ಅವರ ಮಗನ ಶಿಕ್ಷಣ…
ಪ.ಜಾತಿ/ವರ್ಗಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿಜಯಪುರ ಜಿ.ಪಂ. ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಪಂಚಾಯತಿಯ ಮುಖ್ಯಕಾರ್ಯ ನಿರ್ವಣಾಧಿಕಾರಿಗಳಾದ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ಸೂಚನೆ ನೀಡಿದರು.ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಶೀಲ್ದಾರರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು ಎಂದು ಅವರು ಹೇಳಿದರು.ಡಾ. ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಅವರು ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.ಪ್ರತಿ ಸಭೆಗೂ ಮುನ್ನ…
