Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸ್ವಾತಂತ್ರ್ಯ ಹೋರಾಟಗಾರ, ಶೋಷಿತರ ಧ್ವನಿ, ರೈತರ ಉಸಿರಾಗಿದ್ದ ಡಾ.ಬಾಬು ಜಗಜೀವನರಾಮ್ ಅವರ ಜೀವನ ಮತ್ತು ಸಾಧನೆ ಸರ್ವರಿಗೂ ಮಾದರಿಯಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶನಿವಾರ ಜರುಗಿದ ಡಾ.ಬಾಬು ಜಗಜೀವನರಾಮ್ ಅವರ ೧೧೮ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಬಾಬೂಜೀ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಪ್ರಕಾಶ ಸಿಂದಗಿ ಬಾಬೂಜೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಸಿಬ್ಬಂದಿ ಸಂತೋಷ ತಳವಾರ, ಚನ್ನಬಸು ಹೊಸಮನಿ, ರೈತಸಂಘದ ಸಂಪತ್ ಜಮಾದಾರ, ರಾಹುಲ ದೊಡಮನಿ, ಸಂತೋಷ ಬೇವಿನಗಿಡದ, ಕಿರಣ ವಗ್ಗರ, ನಾಗೇಶ ವಗ್ಗರ, ಭೀಮಾಶಂಕರ ವಗ್ಗರ, ಪರಶು ಸನದಿ, ಪ್ರಭು ಸಂಗಣ್ಣವರ, ಸುರೇಶ ಮಣೂರ, ಮರಣಿಗಪ್ಪ ಪಡಗಾನೂರ, ಸದಾಶಿವ ಬೇವಿನಗಿಡದ, ಪ್ರಭು ದೊಡಮನಿ, ನಿಜಲಿಂಗಪ್ಪ ಮ್ಯಾಕೇರಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಪಡಗಾನೂರ ಗ್ರಾಮದ ಸೋಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದಿ: ೬ರಂದು(ಇಂದು) ರಕ್ತದಾನ, ನೇತ್ರ ಉಚಿತ ತಪಾಸಣೆ ಹಾಗೂ ಎಲಬು ಕೀಲುಗಳ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.ಗ್ರಾಮದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮಧಾನ್ಹ ೨ ಗಂಟೆಯವರೆಗೆ ಜರುಗುವ ಈ ಶಿಬಿರಗಳಲ್ಲಿ ಅನುಗ್ರಹ ವ್ಹಿಜನ ಫೌಂಡೇಶನ್ ಟ್ರಸ್ಟ್ ವಿಜಯಪುರದ ನೇತ್ರ ತಜ್ಞರಾದ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಇವರಿಂದ ನೇತ್ರ ಉಚಿತ ತಪಾಸಣೆ. ವಿಜಯಪುರ ಶ್ರೇಯಾ ಅಸ್ಪತ್ರೆಯ ಎಲುಬು ಕೀಲುಗಳ ತಜ್ಞರಾದ ಡಾ.ಭೀಮನಗೌಡ ಪಾಟೀಲರಿಂದ ಎಲುಬು ಕೀಲುಗಳ ಉಚಿತ ತಪಾಸಣೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಂದಗಿ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಜರುಗಲಿದೆ.ಜಾತ್ರೆಗೆ ಆಗಮಿಸಿದ ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಇವುಗಳ ಸದುಪಯೋಗ ಪಡೆದುಕೊಳ್ಳುವಂತೆ ಜಾತ್ರಾ ಕಮೀಟಿ ಪ್ರಕಟಣೆ ಮೂಲಕ ಕೋರಿದೆ.

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಾಬು ಜನಜೀವನರಾಮ್ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ಮತ್ತು ತುಳಿತಕ್ಕೊಳಗಾದ ವರ್ಗಗಳ ಹಕ್ಕುಗಳಿಗಾಗಿ ಹೋರಾಡಿದ ಗಮನಾರ್ಹ ಭಾರತೀಯ ಕಾರ್ಯಕರ್ತ ಮತ್ತು ರಾಜಕಾರಣಿ ಡಾ ಬಾಬು ಜಗಜೀವನರಾಮ್ ಅವರು ನಮಗೆ ಎಂದೆಂದೂ ಆದರ್ಶಪ್ರಾಯರು. ಅವರ ವಿಚಾರಧಾರೆಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳುವಂತಾಗಬೇಕೆಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ ಬಾಬು ಜಗಜೀವನರಾಮ್ ಜಯಂತಿಯಲ್ಲಿ ಮಾತನಾಡಿದರು.ಈ ಸಂದರ್ಭದಲ್ಲಿ ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಐಕ್ಯೂಎಸಿ ನಿರ್ದೇಶಕರು ಡಾ.ಪಿ.ಎಸ್.ಪಾಟೀಲ, ನ್ಯಾಕ್ ಸಂಯೋಜಕರು ಡಾ.ಕೆ.ಮಹೇಶ್ ಕುಮಾರ, ಪ್ರೊ.ಎಸ್ ಡಿ ಪಾಟೀಲ, ಪ್ರೊ.ಮಾಲತಿ ಚನಗೊಂಡ, ಮತ್ತು ಡಾ.ಗಿರೀಶ್ ಹನಮರೆಡ್ಡಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧೀಯ ವಿಜ್ಞಾನ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಡಿ. ಫಾರ್ಮ್ ವಿದ್ಯಾರ್ಥಿಗಳು ಎವಿಎಸ್ ಆಯುರ್ವೇದ ಮಹಾವಿದ್ಯಾಲಯದ ಶ್ರೀವನಕ್ಕೆ ಭೇಟಿ ನೀಡಿ ಕ್ಷೇತ್ರ ಅಧ್ಯಯನ ನಡೆಸಿದರು.ಶುಕ್ರವಾರ ಎವಿಎಸ್ ಆಯುರ್ವೇದ ಕಾಲೇಜಿಗೆ ತೆರಳಿದ ವಿದ್ಯಾರ್ಥಿಗಳು, ಭಾರತೀಯ ಔಷಧ ಪರಿಷತ್ತಿನ ಡಿಪ್ಲೊಮಾ ಕೋರ್ಸಿನ ಶೈಕ್ಷಣಿಕ ಚಟುವಟಿಕೆ ಭಾಗವಾಗಿ ಈ ಭೇಟಿ ನೀಡಿದರು. ಈ ಮೂಲಕ ಸೈಸರ್ಗಿಕ ಜಗತ್ತಿನ ಅನುಭವ ಪಡೆದುಕೊಂಡರು.ನಾನಾ ಔಷಧೀಯ ಸಸ್ಯಗಳನ್ನು ವೀಕ್ಷಿಸಿದ ತರಗತಿಯ ಕೊಠಡಿಗಳಲ್ಲಿ ತಾವು ಪುಸ್ತಕಗಳಲ್ಲಿ ಓದಿದ ವಿಷಯ ಮತ್ತು ಇಲ್ಲಿ ನಿಸರ್ಗದಲ್ಲಿರುವ ಔಷಧಿಯ ಸಸ್ಯಗಳ ಕುರಿತು ಮನನ ಮಾಡಿಕೊಂಡರು.ಎವಿಎಸ್ ಆಯುರ್ವೇದ ಕಾಲೇಜಿನ ಶ್ರೀವನದ ಅಧಿಕಾರಿ ಡಾ. ಗುರುದೇವಿ ಪಾಟೀಲ ಅವರು ವಿದ್ಯಾರ್ಥಿಗಳಿಗೆ ನಾನಾ ಬಗೆಯ ಔಷಧೀಯ ಸಸ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಔಷಧೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಿ. ಮಲ್ಲಿಕಾರ್ಜುನ ಶೆಟ್ಟಿ, ನೈಸರ್ಗಿಕ ಔಷಧ ವಿಜ್ಞಾನ ವಿಭಾಗದ ಡಾ. ಬಸವರಾಜ ಹುನಸಗಿ, ಸಹಾಯಕ ಪ್ರಾಧ್ಯಾಪಕ…

Read More

ರಚನೆ- ಡಾ. ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ನವಿಲಿನಂತೆ ರೆಕ್ಕೆ ಬಿಚ್ಚಿನೆಲದ ಮೇಲೆ ಕುಣಿಯುವಾಸೆಗುಬ್ಬಿಯಂತೆ ಗೂಡು ಬಿಟ್ಟುಆಗಸದಿ ಹಾರೋವಾಸೆ ರಾಗದಲ್ಲಿ ಹಾಡೋ ಇಚ್ಛೆಕಳ ಕಂಠದ ಕೋಗಿಲೆತಂಪು ಕೊಳದಲಿ ಮಿಂದುಹ೦ಸೆಯಾಗಿ ನಲಿಯುವಾಸೆ ಮಂಗನಂತೆ ಕೊಂಬೆ ಕೊಂಬೆಜಿಗಿಯುವಾಸೆಇಣಚಿಯಂತೆ ಅತ್ತ ಇತ್ತಇಣುಕುವಾಸೆ ಚಿಟ್ಟೆಯಂತೆ ಕನಸು ಹೊತ್ತುಹೂವು ಮರವ ಮುಟ್ಟುವಾಸೆಮೀನಿನಂತೆ ಕಡಲಾಳದಿನೀರಿನಲ್ಲಿ ಈಜುವಾಸೆ ಆನೆಯಂತೆ ಅಡವಿಯಲ್ಲಿರಾಜನಾಗಿ ಮೆರೆಯುವಾಸೆಕುದುರೆಯಾಗಿ ದಶ ದಿಕ್ಕಿಗೆಗಾಳಿಯಂತೆ ಓಡುವಾಸೆ ಇಂದ್ರಲೋಕ ಚಂದ್ರಲೋಕಗಗನದಲ್ಲಿ ಸುತ್ತುವಾಸೆಮನುಷ್ಯನಾಗಿ ಭೂಮಿ ಮೇಲೆಮನುಜನಾಗಿ ಬದುಕುವಾಸೆ

Read More

ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಗುಡುಗು ಮತ್ತು ಸಿಡಿಲಿನ ಅಪಾಯ ತಗ್ಗಿಸಲು ಸಾಮಾನ್ಯವಾಗಿ ಸಿಡಿಲಿಗೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕ ಆಸ್ತಿ, ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಇಂಡಿಯನ್ ಮೆಟ್ರಾಲಾಜಿಕಲ್ ಇಲಾಖೆಯ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ತಿಳುವಳಿಕೆ ಮೂಡಿಸುವುದು ಹಾಗೂ ಈ ಕುರಿತು ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯತಿಗಳ ಮೂಲಕ ಮಾಹಿತಿ ನೀಡುವುದು ಮತ್ತು ಜಾಗೃತಿ ಮೂಡಿಸುವುದು.ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ…

Read More

ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತುಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಹೆಲೆನ್ ಕೆಲ್ಲರ್ ಅಮೆರಿಕದ ಪ್ರಖ್ಯಾತ ಬರಹಗಾರ್ತಿ, ರಾಜಕೀಯ ಕಾರ್ಯಕರ್ತೆ, ಉಪನ್ಯಾಸಕಿ, ಸಾಮಾಜಿಕ ಕಾರ್ಯಕರ್ತೆ, ಅಂಗವಿಕಲರು ಮತ್ತು ಶೋಷಿತ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಮಾನವತಾವಾದಿ. ಇನ್ನೂ ಕೇವಲ 19 ತಿಂಗಳ ಹಸುಳೆಯಾಗಿದ್ದಾಗಲೇ ಅವರಿಗೆ ಕುರುಡುತನ ಮತ್ತು ಕಿವುಡುತನ ಎರಡೂ ಪ್ರಾಪ್ತವಾಯಿತು. ಹೀಗೆ ಯಾವುದೇ ಬದುಕಿನ ಅಡೆತಡೆಗಳಿದ್ದರೂ ಮನುಷ್ಯನಿಗೆ ಸಾಧ್ಯವಿಲ್ಲದ್ದು ಯಾವುದೂ ಇಲ್ಲ ಎಂದು ತಮ್ಮ ಬದುಕಿನಿಂದ ನಿರೂಪಿಸಿದ ಮಹಾನ್ ಚೇತನ ಹೆಲೆನ್ ಕೆಲ್ಲರ್.ಬದುಕೆoಬುದಕ್ಕೆ ಅರ್ಥ ಇಷ್ಟೇ, ಒಂದೋ ಅದು ಧೈರ್ಯದಿಂದ ಎದುರಿಸಬೇಕಾದ ಸವಾಲು, ಇನ್ನೊಂದೋ ಅದು ಏನೂ ಅಲ್ಲ. ನಮಗೆ ಯಾವುದು ಬೇಕು ಅದನ್ನು ಆರಿಸಿಕೊಳ್ಳಬಹುದು. ಆಕೆಯ ಈ ಉದ್ಘೋಷ ಬಹಳಷ್ಟನ್ನು ಹೇಳುತ್ತದೆ. ಹೆಲನ್ ಕೆಲ್ಲರ್ ಕಿವುಡು ಮತ್ತು ಅಂಧ ವ್ಯಕ್ತಿಯಾಗಿ ಕಲಾ ಪದವಿ ಪಡೆದ ಪ್ರಪ್ರಥಮರು. ಆನ್ ಸುಲ್ಲಿವನ್ ಮ್ಯಾಸಿ ಎಂಬಾಕೆ ಯಾವುದೇ ಉಪಯೋಗಕ್ಕೆ ಬಾರದೆ ಹೋಗಬಹುದಾಗಿದ್ದ ಈ ಅಂಧ ಮತ್ತು ಕಿವುಡು ಜೀವಿಯನ್ನು ವಿಶ್ವದ ಅದ್ಭುತ ಪ್ರತಿಭೆಯನ್ನಾಗಿಸುವಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇವರ ದಾಸಿಮಯ್ಯನ ವಚನಗಳು ವ್ಯಕ್ತಿಯ ಆತ್ಮ ಶುದ್ಧಿಗೊಳಿಸುತ್ತವೆ ಎಂದು ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ, ಎಂ ನಾಗರಾಜ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ವಿಭಾಗದಲ್ಲಿ (ಎನ್‌ಇಪಿ) ಬುಧವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರ ದಾಸಿಮಯ್ಯ ಅವರ ವಚನಗಳು ಸಮಾಜದಲ್ಲಿ ಮಹತ್ವದ ಪರಿವರ್ತನೆಗಳನ್ನು ಉಂಟುಮಾಡುವ ಶಕ್ತಿ ಹೊಂದಿವೆ. ಅವರ ವಚನಗಳಲ್ಲಿ ಶ್ರಮಪೂಜೆ, ಭಕ್ತಿ, ಮಾನವೀಯತೆ ಮತ್ತು ಸಮಾನತೆಯ ಆದರ್ಶಗಳು ಸ್ಪಷ್ಟವಾಗಿ ಪ್ರತಿಫಲಿಸುತ್ತವೆ. ಅವರ ವಚನಗಳು ಕೇವಲ ಭಕ್ತಿಯ ಸಾರವಲ್ಲ, ಅದು ಬದುಕಿನ ನೈತಿಕ ಮೌಲ್ಯಗಳಿಗೂ ದಾರಿದೀಪವಾಗಿದೆ. ಹೊಸ ತಲೆಮಾರಿಗೆ ದಾಸಿಮಯ್ಯನ ವಚನಗಳು ಸೌಹಾರ್ದತೆ, ಸತ್ಕಾರ್ಯ ಮತ್ತು ಮಾನವೀಯತೆಯ ಆಧಾರಶಿಲೆಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಯುಜಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕ್ಪಾಲ ಹೂವಣ್ಣ ಮಾತನಾಡಿ, ದೇವರ ದಾಸಿಮಯ್ಯ ಅವರ ವಚನಗಳು ಇಂದಿಗೂ ಸಮಾಜದ ಸುಧಾರಣೆಗೆ ಪ್ರೇರಣೆಯಾಗಿದ್ದು, ಅವು ಬದುಕಿಗೆ ಮಾರ್ಗದರ್ಶಕ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶುಕ್ರವಾರ ಸಂಜೆ ಸಕ್ಕರೆ,ಕೃಷಿ ಮಾರುಕಟ್ಟೆ, ಜವಳಿ ಸಚಿವ ಶಿವಾನಂದ ಪಾಟೀಲ ವೀಕ್ಷಿಸಿದರು.ರೂ.೫.೫ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಅಭಿವೃದ್ಧಿ ಕಾಮಗಾರಿ ಮಾಡುವ ಜೊತೆಗೆ ಇಲ್ಲಿ ಜನರಿಗೆ ಉದ್ಯಾನವನ, ವಾಕಿಂಗ್ ಟ್ರ್ಯಾಕ್, ಮಕ್ಕಳ ಆಟಿಕೆ ಅಳವಡಿಕೆ ಸೇರಿದಂತೆ ಸುಂದರವಾದ ಪ್ರವಾಸಿ ತಾಣವನ್ನಾಗಿ ಮಾಡಲು ಬೇಕಾದ ಅಗತ್ಯ ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ಕಾಲಾವಧಿಯಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಸಚಿವ ಶಿವಾನಂದ ಪಾಟೀಲರು ಸೂಚಿಸಿದರು.ನಂತರ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ರೂ. ೧.೩೦ ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಆಟದ ಮೈದಾನದ ಕಾಮಗಾರಿಯನ್ನು ವೀಕ್ಷಿಸಿದರು. ಆಟದ ಮೈದಾನದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸುತ್ತಮುತ್ತ ಸಸಿಗಳನ್ನು ನೆಡಬೇಕು. ಕಾಮಗಾರಿಯನ್ನು ಗುತ್ತಿಗೆದಾರರು ಗುಣಮಟ್ಟದಿಂದ ಮಾಡುವಂತೆ ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣದ ಪಂಚಾಯಿತಿ ಮುಖ್ಯಾಧಿಕಾರಿ ಶಬ್ಬೀರ ರೇವೂರಕರ, ಪಟ್ಟಣ ಪಂಚಾಯಿತಿ ಅಭಿಯಂತರ ಸೋಮು ತುಪ್ಪದ, ಸಣ್ಣ ನೀರಾವರಿ ಇಲಾಖೆಯ ಎಇ ಸುಣದಾಳ, ಪಟ್ಟಣ ಪಂಚಾಯಿತಿ ಸದಸ್ಯ ಶಂಕರ ಶಿವಮತ,…

Read More

ಪಾರದರ್ಶಕ ತನಿಖೆಗೆ ಬಿಜೆಪಿ ಆಗ್ರಹ | ಶಾಸಕ ಪೊನ್ನಣ್ಣ ಬಂಧನಕ್ಕೆ ಒತ್ತಾಯ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಶಾಸಕ ಪೊನ್ನಣ್ಣ ಬಂಧನಕ್ಕೆ ಆಗ್ರಹಿಸಿದೆ.ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್ ಸರ್ಕಾರ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದೆ.ಅಲ್ಲದೆ, ವಿನಯ್‌ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪೋಸ್ಟ್…

Read More