Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ MES ಪಬ್ಲಿಕ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಸಸಿ ನೆಟ್ಟು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪರಿಸರ ಸಂರಕ್ಷಣೆ ಸೇರಿದಂತೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅವರ ಕಾರ್ಯಗಳು ಅತ್ಯಂತ ಶ್ಲಾಘನೀಯವಾಗಿವೆ ಎಂದು ಹೇಳಿದರು.MES ಪಬ್ಲಿಕ್ ಶಾಲೆಯ ಅಧ್ಯಕ್ಷ ಮೋಹನ ಚೋಳಕೆ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಂಡಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ನೀಡಲು ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಾ ಬಂದಿದೆ ಎಂದರು.ಶಿಕ್ಷಕರಾದ ರಮೇಶ ಮಲ್ಲಾಡಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಹೆಸರಿನಲ್ಲಿ ಒಂದು ಗಿಡವನ್ನು ನೆಟ್ಟು ಅದನ್ನು ಸಂರಕ್ಷಿಸಿದರೆ ಪರಿಸರ ಉಳಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ವಲಯದ ಮೇಲ್ವಿಚಾರಕರಾದ ಮಹಾಂತೇಶ ವಿ.ಎ. ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಟಾಕಳಿ ಗ್ರಾಮದ ಪ್ರಕಾಶ ಲವಟೆ ವಸ್ತಿಯ ಅಂಗನವಾಡಿ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೆ ಮಕ್ಕಳ ಶಿಕ್ಷಣ ಹಾಗೂ ಪೋಷಣೆಗೆ ತೊಂದರೆಯಾಗುತ್ತಿದೆ ಎಂದು ಲವಟೆ ವಸ್ತಿ ಪಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್, ತೂಕ ಯಂತ್ರ, ಅಡುಗೆ ಪಾತ್ರೆಗಳು ಹಾಗೂ ಅಗತ್ಯ ದಾಖಲೆಗಳು ಇಲ್ಲದೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ಕಾರ್ಯನಿರ್ವಹಿಸಿದ್ದ ಅಂಗನವಾಡಿ ಕಾರ್ಯಕರ್ತೆಯ ಸ್ಥಾನಕ್ಕೆ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆ ಗೆ ಆವೇಳೆ, ಹಸ್ತಾಂತರಿಸದೆ ಅಂಗನವಾಡಿಗೆ ಸಂಬಂಧಿಸಿದ ದಾಖಲೆಗಳು, ಅಡುಗೆ ಸಾಮಗ್ರಿಗಳು ಹಾಗೂ ಮಕ್ಕಳ ಆಟಿಕೆಗಳನ್ನು ಪಂಚಾಕ್ಷರಿ ಲವಟೆ ಅವರ ವಸ್ತಿಯಲ್ಲಿ ಇಟ್ಟು ಹೋಗಿದ್ದು, ಹೊಸದಾಗಿ ನೇಮಕಗೊಂಡ ಕಾರ್ಯಕರ್ತೆಗೆ ಯಾವುದೇ ಸಾಮಗ್ರಿ ಹಾಗೂ ದಾಖಲೆಗಳನ್ನು ಹಸ್ತಾಂತರಿಸಿಲ್ಲ ಎಂದು ಪಾಲಕರು ಆರೋಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ವಾಲಿ ಅವರು, ಸರಕಾರದ ಆದೇಶದಂತೆ 2023ರಲ್ಲಿ ಪ್ರಕಾಶ ಲವಟೆ ವಸ್ತಿಯಲ್ಲಿ ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲಾಗಿತ್ತು. ಆದರೆ, ಮೇಲ್ವಿಚಾರಕಿಯ ಸೂಚನೆಯ ಮೇರೆಗೆ ಆಗಿನ ಚಾರ್ಜ್ ತೆಗೆದುಕೊಂಡ ಕಾರ್ಯಕರ್ತೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತದ ಪ್ರತಿಯೊಂದು ಭಾಷೆಯೂ ದೇಶದ ಅಮೂಲ್ಯ ಸಂಪತ್ತಾಗಿದ್ದು, ಎಲ್ಲ ಭಾಷೆಗಳನ್ನು ಗೌರವದಿಂದ ಕಾಣಬೇಕು. ಭಾಷೆಗಳ ನಡುವೆ ಶ್ರೇಷ್ಠತೆ ಎಂಬ ಭೇದಭಾವ ಸಲ್ಲದು. ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಹಾರಾಷ್ಟ್ರ ರಾಜ್ಯದ ಮಡ್ಡಿ ಸಂಖ ಗ್ರಾಮದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾರಾಷ್ಟ್ರದ ಜತ್ತ ತಾಲೂಕಿನ ಸಂಖ ಗ್ರಾಮದಲ್ಲಿ ಆಯೋಜಿಸಿದ್ದ ಗಡಿನಾಡು ಕನ್ನಡ ಸಾಹಿತ್ಯ–ಸಂಸ್ಕೃತಿ ಸಂಭ್ರಮ ಹಾಗೂ ನಲಿ–ಕಲಿ ಸಾಮಗ್ರಿ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗಡಿನಾಡು ಪ್ರದೇಶದ ಕನ್ನಡಿಗರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ಸರ್ಕಾರಗಳು ಸೇರಿ ಬಗೆಹರಿಸಬೇಕು. ಈ ಭಾಗದ ಕನ್ನಡ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತಿ ವರ್ಷ ಕನಿಷ್ಠ 1೦೦ ಕೋಟಿ ರೂ. ಅನುದಾನ ನೀಡಬೇಕೆಂದು ಅವರು ಕರ್ನಾಟಕ ಸರ್ಕಾರವನ್ನು ಮನವಿ…

Read More

ನಾಡು ಕಂಡ ಶ್ರೇಷ್ಟ ಶತಮಾನದ ವಿಶ್ವ ಸಂತ, ಅಲ್ಲಮನ ವಾರಸುದಾರ ನಡೆ-ನುಡಿಗಳನ್ನೊಂದಾಗಿಸಿದ ನಮ್ಮೆಲ್ಲರ ದೈವ ಶ್ರೀ ಸಿದ್ದೇಶ್ವರ ಶ್ರೀ ಗಳ ಪುಣ್ಯಸ್ಮರಣೆಯ ನಿಮಿತ್ತ ಪ್ರತಿ ವರ್ಷ ಜನೇವರಿ 1 ಹಾಗೂ 2 ರಂದು ನಡೆಯಲಿರುವ ಗುರುನಮದ ನಿಮಿತ್ಯ ಈ ಶಬ್ದ ನಮನ ಲೇಖನ- ಜಿ.ಬಿ.ಸಾಲಕ್ಕಿವಿಜಯಪುರ ಉದಯರಶ್ಮಿ ದಿನಪತ್ರಿಕೆ “ಸತ್ಯವೂ ಇಲ್ಲ, ಅಸತ್ಯವೂ ಇಲ್ಲ, ಸಹಜವೂ ಇಲ್ಲ, ಅಸಹಜವೂ ಇಲ್ಲ, ಇಲ್ಲ, ಇಲ್ಲವೆಂಬುದು ತಾನಿಲ್ಲ ಗುಹೇಶ್ವರ ನೆಂಬುದು ತಾ ಬಯಲು”ಎಂಬ ಅಂತಿಮ ಅಭಿವಂದನೆ ಯೊಂದಿಗೆ ವಿಶ್ವದ ದಾರ್ಶನಿಕರಾದ ಸಾಕ್ರೆಟಿಸ ಪ್ಲ್ಯಾಟೊ , ಅರಿಸ್ಟಾಟಲ, ಝೆನ್, ಅಲ್ಲಮ, ಅಣ್ಣ ಬಸವಣ್ಣರಂತ ರವರ ಸಾಲಿಗೆ ಸೇರಿದ ನಡೆ-ನುಡಿಗಳನ್ನು ಒಂದಾಗಿಸಿದ ವಿಶ್ವಸಂತ ಶ್ರೀ ಸಿದ್ದೇಶ್ವರ ಶ್ರೀಗಳು ಕಾಯಿ-ಕರ್ಪೂರ, ಹಾರ-ತುರಾಯಿ, ಪಲ್ಲಕ್ಕಿಗಳಿಂದ ಅತೀ ದೂರವಿದ್ದ ಈ ಶತಮಾನ ಕಂಡ ಬ್ರಹ್ಮ ಖು(ರು)ಷಿ ತಮ್ಮ ಅಗಲುವಿಕೆಯ ನಂತರ.. “ಯಾವ ಗದ್ದುಗೆ, ಸ್ಮಾರಕಗಳೂ ಬೇಡ, ದೇಹವನ್ನು ಬೆಂಕಿಗೆ ಅರ್ಪಿಸಿ ಬಿಡಿ ನಾನು ಆವಿ, ಭಸ್ಮವಾಗಿ ಆಶ್ರಮದ ಗಿಡಗಳ ಹೂ ಎಲೆಗಳ ಮೇಲೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯವೈಖರಿ, ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ದೇವರ ಹಿಪ್ಪರಗಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು, ಆಧಾರ ನೋಂದಣಿ, ಕಂದಾಯ ಗ್ರಾಮ ಮಾಹಿತಿ, ಭೂಮಿ ಪ್ರಗತಿ, ಈ-ಪೌತಿ ಖಾತೆ ಪ್ರಗತಿ, ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಿದರು.ತಾಲೂಕಿನ ಹಳ್ಳಿಗಳಿಗೆ ಸ್ಮಶಾನ ಜಾಗ ಅವಶ್ಯವಿದ್ದಲ್ಲಿ ಸರ್ಕಾರಿ ಜಮೀನು ಗುರುತಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.ಮಿನಿ ಪ್ರಜಾಸೌಧ ಕಟ್ಟಡದ ಜಾಗ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ನಿಂಗಪ್ಪ ಬಿರಾದಾರ, ಮುಖ್ಯಾಧಿಕಾರಿ ಕಲಾಲ ಸೇರಿದಂತೆ ಶಿರಸ್ತೇದಾರರು, ತಹಶೀಲ್ದಾರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಲಿಖಿತ ಭರವಸೆ | ಮುದ್ದೇಬಿಹಾಳ ಇಂದಿರಾನಗರದ ನಿವಾಸಿಗಳು ಧರಣಿ ಹೋರಾಟ ಅಂತ್ಯ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಉತಾರೆ ಮತ್ತು ಮತದಾರರ ಪಟ್ಟಿ ಪರಿಶೀಲಿಸುವಂತೆ ಒತ್ತಾಯಿಸಿ ಪಟ್ಟಣದ ಇಂದಿರಾನಗರದ ನಿವಾಸಿಗಳು ಮುಖಂಡ ಬಸವರಾಜ ಕೊಳೂರ ನೇತೃತ್ವದಲ್ಲಿ ಇಲ್ಲಿನ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಆರಂಭಿಸಿದ ಧರಣಿ ಸತ್ಯಾಗ್ರಹ ೫ನೇ ದಿನಕ್ಕೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರ ಲಿಖಿತ ಭರವಸೆ ಮೇರೆಗೆ ಅಂತ್ಯ ಕಂಡಿದೆ.ಹೋರಾಟದ ನಾಲ್ಕನೇ ದಿನದಿಂದ ಹೋರಾಟಗಾರರು ತಮಟೆ ಚಳುವಳಿಯನ್ನು ಪ್ರಾರಂಭಿಸಿದ್ದರು. ದಿನವಿಡೀ ತಮಟೆ ಬಾರಿಸುವ ಮೂಲಕ ತಮ್ಮ ಆಕ್ರೋಷವನ್ನು ಹೊರಹಾಕಿದ್ದರು. ನಾಲ್ಕನೇ ದಿನ ಯಾವೊಬ್ಬ ಅಧಿಕಾರಿ ಕೂಡ ತಮಗೆ ಭೇಟಿ ನೀಡಿಲ್ಲ ಎಂದು ಮಾಧ್ಯಮದ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದರು.೫ನೇ ದಿನದ ಹೋರಾಟವೂ ತಮಟೆ ಚಳುವಳಿಯ ಮೂಲಕ ಪ್ರಾರಂಭವಾಗಿತ್ತು. ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಎಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ, ಪ್ರಮುಖರಾದ ಹುಸೇನ ಮುಲ್ಲಾ, ಗೋಪಿ ಮಡಿವಾಳರ ಮತ್ತೀತರರು ಹೋರಾಟಕ್ಕೆ ಬೆಂಬಲ ನೀಡಿದರು. ಹೋರಾಟದ ಕಾವು ಹೆಚ್ಚುತ್ತಿದ್ದಂತೆ ಎಚ್ಚರಗೊಂಡ ಅಧಿಕಾರಿಗಳು ಹೋರಾಟಗಾರರ ಮನವೊಲಿಸಲು…

Read More

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜನವರಿ 24ರಂದು ವಿಶೇಷ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ. ಅವರು ತಿಳಿಸಿದರು.ಬುಧವಾರ ನಗರದ ಜಿಲ್ಲಾ ನ್ಯಾಯಾಲಯ ಕಟ್ಟಡದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಎಲ್ಲ ಕಕ್ಷಿದಾರರ ಅನುಕೂಲಕ್ಕಾಗಿ ವಿಶೇಷ-ಲೋಕ-ಅದಾಲತನ್ನು ಹಮ್ಮಿಕೊಳ್ಳಲಾಗಿದ್ದು, ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಒಳಪಡಬಹುದಾದ ಭೂ-ಸ್ವಾಧೀನ ಪ್ರಕರಣಗಳನ್ನುರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪಕ್ಷಗಾರರಿಗೆ ಅವಕಾಶವಿರುವುದರಿಂದ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮಗಳಲ್ಲಿ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಸುಮಾರು 2,89,479 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೂ. 18,30,25,426 ಗಳನ್ನು ಪರಿಹಾರ ಒದಗಿಸಲಾಗಿದೆ. ಇದರಿಂದ ವಿಜಯಪುರ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಚಿನ್ನ ಹಾಗೂ ಬೆಳ್ಳಿ ಆಭರಣ ಮಾರಾಟ ಅಂಗಡಿಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದರ ಮೂಲಕ ಎಚ್ಚರಿಕೆ ವಹಿಸಲು ಪಿಎಸ್‌ಐ ಸಚೀನ ಆಲಮೇಲಕರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಮಳಿಗೆಗಳ ಮಾಲೀಕರಿಗೆ ಮಾಹಿತಿ ನೀಡಿದರು.ಪಟ್ಟಣದ ವಿವಿಧ ಚಿನ್ನ ಹಾಗೂ ಬೆಳ್ಳಿ ಆಭರಣ ತಯಾರಿಕಾ ಹಾಗೂ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ ಪೊಲೀಸರು ಅಗತ್ಯ ಕ್ರಮಗಳ ಕುರಿತು ವಿವರಿಸಿದರು.ಈ ಸಂದರ್ಭದಲ್ಲಿ ಪಿಎಸ್‌ಐ ಸಚೀನ ಆಲಮೇಲಕರ ಮಾತನಾಡಿ, ಇತ್ತೀಚಿಗೆ ರಾಜಸ್ಥಾನ ಹಾಗೂ ಉತ್ತರಪ್ರದೇಶ ರಾಜ್ಯಗಳ ದರೋಡೆಕೋರರು ಚಿನ್ನಾಭರಣಗಳನ್ನು ಗುರಿಯಾಗಿಸಿ ದರೋಡೆ, ಕಳ್ಳತನ ಮಾಡುತ್ತಿರುವುದು ಕಂಡು ಬಂದಿದೆ. ಚಿನ್ನಾಭರಣ ಮಳಿಗೆಗಳಲ್ಲಿ ಶೂನ್ಯ ಭದ್ರತೆ ಇರುವುದರಿಂದ ಇವುಗಳ ಮೇಲೆ ಕಳ್ಳರ ಗಮನ ಹೆಚ್ಚಾಗಿರುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಅಂಗಡಿಗಳ ಪ್ರವೇಶ ದ್ವಾರ, ಕ್ಯಾಶ್ ಕೌಂಟರ್, ಸ್ಟ್ರಾಂಗ್ ರೂಮ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ೩೦ ದಿನಗಳವರೆಗೆ ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಸಂಗ್ರಹಣೆ, ಅಲಾರಾಮ್ ವ್ಯವಸ್ಥೆ, ಬಲವಾದ ಹಾಗೂ ಸುರಕ್ಷಿತ ಶಟರ್‌ಗಳ ಅಳವಡಿಕೆ ಹಾಗೂ…

Read More

ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ಆರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪರಮಾಪ್ತರಿಗೆ ಅನುಕೂಲವಾಗಲು ಪಾಲಿಕೆಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಜಮೀನು ಸರಿಸುಮಾರು ೨೬ ಗುಂಟೆ (ಸರ್ವೆ ನಂ. ೩೮೧//೧೦೬ ಗಂಗನಹಳ್ಳಿ ಲೇಔಟ್‌ನಲ್ಲಿರುವ ಬಯಲು ಜಾಗೆಯನ್ನು ನಿರ್ವಹಣೆಗೆ ಸಂಬಂಧಿಸಿದಂತೆ ಶ್ರೀ ಅಮೋಘಸಿದ್ದೇಶ್ವರ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಸ್ಥೆಗೆ ನೀಡಲು ಠರಾವು ಪಾಸು ಮಾಡಿರುವುದು ಖಂಡನೀಯ, ಇದು ಶಾಸಕರ ಲ್ಯಾಂಡ್ ಮಾಫಿಯಾಕ್ಕೆ ಒಂದು ಉದಾಹರಣೆ ಎಂದು ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕರಿಗೆ ಪರಮಾಪ್ತರಿಗೆ ಅನುಕೂಲವಾಗಲು ಕೋಟ್ಯಂತರ ರೂ. ಮೌಲ್ಯದ ಬಯಲು ಜಾಗೆಯನ್ನು ನಿರ್ವಹಣೆಗೆ ನೀಡುತ್ತಿರುವುದು ಕಾನೂನು ಬಾಹಿರ, ಉದ್ಯಾನವನ, ಬಯಲು ಜಾಗೆ, ಕ್ರೀಡಾಂಗಣವನ್ನು ಯಾವ ಕಾರಣಕ್ಕೂ ಯಾರಿಗೂ ಪರಭಾರೆ ಮಾಡಬಾರದು ಎಂಬ ನಿಯಮವಿದೆ, ಈ ಬಗ್ಗೆ ಮೇಯರ್ ಹಾಗೂ ಆಯುಕ್ತರಿಗೂ ಸಹ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರೂ ಸಹ ಅವರು ನಮಗೆ…

Read More

ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಲು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಯಮಾವಳಿಗಳನ್ನು ಗಾಳಿಗೆ ತೂರಿ ಅಲ್ಪ ಸಂಖ್ಯಾತರನ್ನು ಓಲೈಸಲು ಕೋಗಿಲು ಸಂತ್ರಸ್ತರಿಗೆ ಅಕ್ರಮವಾಗಿ ಮನೆ ಹಂಚಿಕೆ ಮಾಡುತ್ತಿರುವುದು ಖಂಡನೀಯ ಹಾಗೂ ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಹೈ ಕಮಾಂಡ್ ಒತ್ತಡಕ್ಕೆ ಮಣಿದು ಬೆಂಗಳೂರಿನ ಯಲಹಂಕದ ಕೋಗಿಲುವಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಕುಟುಂಬಗಳನ್ನು ತೆರವು ಮಾಡಿದ ನಂತರ ಅವರಿಗೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ಮೂಲಕ ಮನೆಗಳನ್ನು ಜನವರಿ 1, 2026 ರಂದು ಹಸ್ತಾಂತರ ಮಾಡಲಾಗುವುದು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಶೆಡ್ ನಿರ್ಮಿಸಿದವರು ರಾಜ್ಯದ ವಸತಿ ಯೋಜನೆಗೆ ಅರ್ಹರೋ? ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ವಲಸೆ ಬಂದು ಕಷ್ಟಪಟ್ಟು ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ವಸತಿ ಯೋಜನೆಗೆ ಅರ್ಹರೋ?ಸರ್ಕಾರಕ್ಕೆ, ನಿಜಕ್ಕೂ ಕಾಳಜಿಯಿದ್ದಲ್ಲಿ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಗುಳೆ ಬಂದು ಕೂಲಿ…

Read More