Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಧರ್ಮಸ್ಥಳ ಸಂಘವು ಕೇವಲ ಸಾಲ ಕೊಡುವದಷ್ಟೇ ಅಲ್ಲದೆ ನೂರಾರು ಜನಪಯೋಗಿ ಯೋಜನೆ ಕೈಗೆತ್ತಿ ಕೊಂಡಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ಜನಜಾಗೃತಿ ವೇದಿಕೆ ಮಾಡುತ್ತಿರುವದು ಶ್ಲಾಘನೀಯವಾಗಿದೆ. ವಯೋವೃದ್ದರಿಗೆ ಮಾಶಾಸನವನ್ನು ನೀಡಿ ಸಹಕರಿಸುತ್ತಿದೆ ಎಂದು ಇಂಡಿಯ ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.ಪಟ್ಟಣದ ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆಯ ಕಚೇರಿಯ ಆವರಣದಲ್ಲಿ ನಡೆದ ಹೊಸದಾಗಿ ಮಂಜುರಾದ ಮಾಶಾಸನ ಪತ್ರ, ವ್ಹೀಲ್ ಚೇರ ಮತ್ತು ವಾಕಿಂಗ ಸ್ಟಿಕ್ ವಿತರಿಸಿ ಮಾತನಾಡಿದರು.ಜೆಡಿ ಎಸ್ ಪ್ರಮುಖ ಬಿ.ಡಿ.ಪಾಟೀಲ ಮಾತನಾಡಿ, ಸ್ವಾಸ್ಥ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ನಾಡಿನ ಕಲ್ಯಾಣದ ಆಶಯ ಹೊಂದಿರುವ ಸಂಸ್ಥೆಯು ಮಹಿಳಾ ಸಬಲೀಕರಣ, ವ್ಯಸನಮುಕ್ತ ಸಮಾಜ, ಆರೋಗ್ಯದ ಕಾಳಜಿ, ಪರಿಸರದ ಕಾಳಜಿ, ದೇವಸ್ಥಾನಗಳ ರಕ್ಷಣೆ, ಜೀರ್ಣೋದ್ದಾರ, ಮೂಲಕ ಜಾತ್ಯಾತೀತವಾಗಿ ಧರ್ಮಾತೀತವಾಗಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದರು.ಸಂಸ್ಥೆಯ ಯೋಜನಾಧಿಕಾರಿ ನಟರಾಜ ಯೋಜನೆಯಿಂದ ನಡೆಯುತ್ತಿರುವ ಕಾರ್ಯಕ್ರಮ ಬಗ್ಗೆ ಮಾತನಾಡಿದರು.ಸಿದ್ದು ಡಂಗಾ, ಪ್ರಕಾಶ ಬಿರಾದಾರ, ಶಾರುಖ ವಲಯ ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು ಸೇವಾ ಪ್ರತಿನಿಧಿಗಳು ಮತ್ತಿತರಿದ್ದರು.ಫಲಾನುಭವಿಗಳಾದ…

Read More

ತಿಕೋಟಾ ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳು, ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಡಾ.ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಜಾರಿಗೆ ತಂದಿರುವ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಜನರಿಗೆ ಬಹುಪಯೋಗಿಯಾಗಿದ್ದು, ಅವರ ಆರ್ಥಿಕ ಜೀವನ ಮಟ್ಟ ಹೆಚ್ಚಾಗುವುದರ ಜೊತೆಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಈ ಯೋಜನೆಗಳು ಸಹಕಾರಿಯಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶನಿವಾರ ೨೦೨೩-೨೪ನೇ ಸಾಲಿನ ಹಾಗೂ ೨೦೨೪-೨೫ನೇ ಸಾಲಿನ ಬಬಲೇಶ್ವರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲೂಕಿನಲ್ಲಿ ನಿರ್ಮಿಸಲಾದ ಕಟ್ಟಡ ಕಾಮಗಾರಿಗಳು ಹಾಗೂ ಭೂಮಿ ಪೂಜಾ ಸಮಾರಂಭ ವಿವಿಧ ಕಾಮಗಾರಿಗಳಾದ ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಸಂಖ್ಯೆ-೪ರ ಉದ್ಘಾಟನೆ, ೨೫ ಲಕ್ಷ ರೂ ವೆಚ್ಚದ ರೈತ ಸಂಪರ್ಕ ಕೇಂದ್ರ ಗೋದಾಮು ಉದ್ಘಾಟನೆ, ೧೫ ಲಕ್ಷ ರೂ. ವೆಚ್ಚದಡಿಯ ಅಂಗನವಾಡಿ…

Read More

ವಿಜಯಪುರ ಮಹಿಳಾ ವಿವಿಯಲ್ಲಿ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನರಲ್ಲಿ ವೈಜ್ಞಾನಿಕ ಮನೋಭಾವದ ಕೊರತೆಯಿಂದಾಗಿ ಸಮಾಜದಲ್ಲಿ ಇನ್ನೂ ಮೌಢ್ಯಗಳು ಹೆಚ್ಚಾಗಿವೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದರಿಂದ ಸಮಾಜದಲ್ಲಿನ ಮೌಡ್ಯತೆ ಹಾಗೂ ಅಂಧಕಾರಗಳನ್ನು ಕಡಿಮೆ ಮಾಡಬಹುದಾಗಿದೆ ಎಂದು ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಶಾಂತಾದೇವಿ ಟಿ ಅಭಿಪ್ರಾಯಪಟ್ಟರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ತಂತ್ರಜ್ಙಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗಗಳು ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ವಿಯಪುರ ಚಾಪ್ಟರ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಪ್ರಾದೇಶಿಕ ಭಾಷೆಯಲ್ಲಿ ವಿಜ್ಞಾನ ಸಂವಹನ” ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಧೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಜನಪ್ರಿಯಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವೈದ್ಯಕೀಯ ಮತ್ತು ಎಂಜನಿಯರಿಂಗ್ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ದೊರೆಯುವಂತಾಗಬೇಕು ಎಂದರು.ಇದೇ ಸಂದರ್ಭದಲ್ಲಿ ವಿಜ್ಞಾನ ಕ್ಷೇತ್ರದ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿದರು.ಸಂಪನ್ಮೂಲ ವ್ಯಕ್ತಿಯಾಗಿದ್ದ ಬೆಂಗಳೂರಿನ ಭಾರತೀಯ…

Read More

ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೊಂಡಗೂಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ ಮಾಡಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶುಕ್ರವಾರ ವಿಜಯಪುರದಲ್ಲಿನ ಸಚಿವರ ಸ್ವಗೃಹಕ್ಕೆ ತೆರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಎಮ್. ನಾಗಾವಿ ಮಾತನಾಡಿ, ಗ್ರಾಮದಲ್ಲಿ ಪ್ರೌಢಶಾಲೆಯ ಅವಶ್ಯಕತೆಯಿದೆ. ಈ ಮೊದಲು ಇದ್ದ ಖಾಸಗಿ ಪ್ರೌಢಶಾಲೆ ೩ ವರ್ಷಗಳ ಹಿಂದೆ ಬಂದಾಗಿದೆ. ಇದರಿಂದ ೩ ಪ್ರಾಥಮಿಕ ಶಾಲೆಗಳ ಮಕ್ಕಳು ಪ್ರೌಢಶಾಲೆ ವಿದ್ಯಾಭ್ಯಾಸಕ್ಕೆ ದೇವರಹಿಪ್ಪರಗಿ ಅಥವಾ ತಾಳಿಕೋಟೆ ಪಟ್ಟಣಗಳಿಗೆ ತೆರಳಬೇಕಾಗಿದೆ. ಆದರೆ ಎರಡು ಪಟ್ಟಣಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಯಿಲ್ಲ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೂ ಹೆಣ್ಣುಮಕ್ಕಳು ಪಾಲಕರು ದೂರದ ಪ್ರೌಢಶಾಲೆಗಳಿಗೆ ಕಳಿಸಲು ಹಿಂಜರೆದು ವಿದ್ಯಾರ್ಥಿನೀಯರ ಪ್ರೌಢಶಾಲಾ ಶಿಕ್ಷಣ ಮೊಟಕುಗೊಳಿಸಲು ಕಾರಣರಾಗುತ್ತಿದ್ದಾರೆ. ಇವೆಲ್ಲ ಕಾರಣಗಳಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರಾಮದಲ್ಲಿ ಕೂಡಲೇ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಮೃದ್ಧಿ ಸಹಕಾರಿ ಸಂಘದ ನಿರ್ದೇಶಕ ಕೆ.ಎಸ್.ಕೋರಿ ವಿಜಯಪುರದ ಅಮ್ಮ ಫೌಂಡೇಷನ್ ಇದೇ ಪ್ರಥಮ ಬಾರಿಗೆ ಕೊಡಮಾಡುತ್ತಿರುವ ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪಟ್ಟಣದ ಸಮೃದ್ಧಿ ಸಹಕಾರಿ ಸಂಘದ ಮೂಲಕ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಬರುವ ಜುಲೈ ೭ ರಂದು ವಿಜಯಪುರ ಕಂದಗಲ್ಲ ಹನುಮಂತ್ರಾಯ ರಂಗಮಂದಿರದಲ್ಲಿ ಜರುಗುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಫೌಂಡೇಷನ್ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಮಲ್ಲಯ್ಯ, ರಾವುತರಾಯ ದೇವಸ್ಥಾನಗಳ ಯಾತ್ರಿನಿವಾಸ ಅಭಿವೃದ್ಧಿಗಾಗಿ ಕಮಿಟಿ ಸದಸ್ಯರು ನೀಡಿದ ಉದಾರ ದೇಣಿಗೆ ನಿಜವಾಗಿಯೂ ಶ್ಲಾಘನೀಯವಾದದು ಎಂದು ಕಮಿಟಿ ಅಧ್ಯಕ್ಷ ವಿನೋದಗೌಡ ಪಾಟೀಲ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಯಾತ್ರಿನಿವಾಸ ಅಭಿವೃದ್ಧಿಗಾಗಿ ಕಮಿಟಿ ಸದಸ್ಯ ನಾಗರಾಜ್ ಸಂಗಣ್ಣವರ ನೀಡಿದ ೫ ಲಕ್ಷ ರೂ.ಗಳ ದೇಣಿಗೆ ಚೆಕ್ ಅನ್ನು ಸ್ವೀಕರಿಸಿ ನಂತರ ಅವರನ್ನು ಕಮಿಟಿ ಮೂಲಕ ಸನ್ಮಾನಿಸಿ ಮಾತನಾಡಿದರು. ಭಕ್ತರ ಆಶಯದಂತೆ ನಿರ್ಮಿಸಲಾಗುತ್ತಿರುವ ಯಾತ್ರಿನಿವಾಸಕ್ಕೆ ಕಮಿಟಿ ಸದಸ್ಯರು ನೀಡಿದ ಈ ಸಹಕಾರ ಸಮಯೋಚಿತ ಹಾಗೂ ಅನುಕರಣಿಯ ಎಂದರು.ಕಮಿಟಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ದಾನಿ ನಾಗರಾಜ ಸಂಗಣ್ಣವರ, ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ಪುರಂದಾಸರ ಕೀರ್ತನಾವಾಣಿಯಂತೆ ಧರ್ಮ ಹಾಗೂ ಧಾರ್ಮಿಕ ಕಾರ್ಯಗಳಿಗೆ ಸಹಕಾರಿಯಾಗುವಂತೆ ನನ್ನ ತನು,ಮನ, ಧನದ ಭಕ್ತಿಸೇವೆ ಸಲ್ಲಿಸಿದ್ದೇನೆ ಎಂದರು.ಕಮಿಟಿ ಉಪಾಧ್ಯಕ್ಷ ಶ್ರೀಧರ ನಾಡಗೌಡ, ಕಾರ್ಯದರ್ಶಿ ಮಲ್ಲು ನಾಟೀಕಾರ, ಸದಸ್ಯರಾದ ಕಾಶೀನಾಥ ತಳಕೇರಿ, ನಿಂಗು ಯಂಭತ್ನಾಳ, ಅಪ್ಪೋಜಿ ದೇಸಾಯಿ, ಶಿವನಗೌಡ ಯರನಾಳ, ರಾವುತಪ್ಪ ದೇವರಮನಿ, ಯಮನೂರಪ್ಪ ಸಣ್ಣಕ್ಕಿ, ಮಲ್ಲು ಜಮಾದಾರ,…

Read More

ವಿಜಯಪುರದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಭಾಭವನ & ಅಗಸ್ತ್ಯ ಪೌಂಡೇಶನ್ ಪ್ರಾಯೋಜಕತ್ವದ ಸಂಚಾರಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದಿನ ಕಾಲದಲ್ಲಿ ಗುರುಕುಲಗಳು ಗುಡಿಸಿಲಿನಲ್ಲಿ ನಡೆಯುತ್ತಿದ್ದವು. ಅಲ್ಲಿ ಒಳ್ಳೆಯ ಶಿಕ್ಷಣ ಪಡೆದು ಮೇಧಾವಿಗಳಾಗಿ ಉನ್ನತ ಹುದ್ದೆ ಪಡೆಯುತ್ತಿದ್ದರು. ಯಾಕೆಂದರೆ ಅಲ್ಲಿ ಒಳ್ಳೆಯ ಶಿಕ್ಷಕರಿಂದ ಒಳ್ಳೆಯ ಶಿಕ್ಷಣ ದೊರಕುತ್ತಿತ್ತು. ಆದರೆ ಅಲ್ಲಿ ಸುಸಜ್ಜಿತ ಕಟ್ಟಡಗಳಿರಲಿಲ್ಲ. ಇಂದು ಹಲವು ಸೌಲಭ್ಯಗಳೊಂದಿಗೆ ಕಟ್ಟಡ, ಡಿಜಿಟಲ್ ಕ್ಲಾಸ್ ಇತ್ಯಾದಿ ಇದ್ದರು ಶಿಕ್ಷಣದ ಗುಣಮಟ್ಟ ಹೆಚ್ಚಾಗಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.ನಗರದ ಠಕ್ಕೆಯಲ್ಲಿ ಶುಕ್ರವಾರ ಸಂಜೆ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಸಿ.ಎಸ್.ಆರ್.(ಎಂ.ಎಸ್.ಐ.ಎಲ್) ಅನುದಾನದಡಿ ನಿರ್ಮಿಸಲಾದ ಸಭಾಭವನ ಉದ್ಘಾಟನೆ, ಎಸ್.ಎಸ್.ಎಲ್.ಸಿ.ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಗಸ್ತ್ಯ ಪೌಂಡೇಶನ ಪ್ರಾಯೋಜಕತ್ವದ ಸಂಚಾರಿ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರು ಶಾಲೆಯ ಹೃದಯವಿದ್ದಂತೆ. ಶಿಕ್ಷಕರು ಪ್ರಾಮಾಣಿಕತೆಯಿಂದ ಬಡ ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡಬೇಕು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯೂ ಕುಸಿತ ಕಂಡಿದ್ದು ಸುಧಾರಣೆಗೆ ಹೆಚ್ಚು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಶಿಕ್ಷಕಿ, ಸಾಹಿತಿ ಪಾರ್ವತಿ ಬಸವರಾಜ ಸೊನ್ನದ (ತಳವಾರ)- ಅವರನ್ನು “ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಜುಲೈ 06 ರಂದು ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ ದಿನ ಎಂಬುದು ವರ್ಷಕ್ಕೊಮ್ಮೆ ಬರುವ ವೃತಾಚರಣೆಯಲ್ಲ. ಅದು ನಿತ್ಯಾರಾಧನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಹೊರವಲಯದ ತೊರವಿ ಬಳಿ ಪೊಲೀಸ್ ವಸತಿ ಗೃಹದ ಆವರಣದಲ್ಲಿ 1800 ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಹಸಿರೀಕರಣ ಕೆಲಸ ಮುಂದುವರೆದಿದೆ. ಹಸಿರು ವಿಜಯಪುರ ರೂಪಿಸಬೇಕೆಂಬ ಸಂಕಲ್ಪಕ್ಕೆ ಕೋಟಿ ವೃಕ್ಷ ಅಭಿಯಾನ ಒಳಗೊಂಡಂತೆ ಜಿಲ್ಲಾದ್ಯಂತ ದೊರಕುತ್ತಿರುವ ಸ್ಪಂದನೆ ಹೃದಯ ತುಂಬುವ ಸಂತಸ ನೀಡಿದೆ. ಈ ಹಸಿರು ಅಭಿಯಾನ ಮುಂದುವರೆಯಲಿದ್ದು, ನಮ್ಮ ಬಸವ ನಾಡು ಇನ್ನಷ್ಟು ಸುಂದರವಾಗಲಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿಗಳಾದ ರಾಮನಗೌಡ ಹಟ್ಟಿ, ಶಂಕರ ಮಾರಿಹಾಳ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ಬಿ. ಕುಶನಾಳ, ಸಹಾಯಕ ಸಂರಕ್ಷಣಾಧಿಕಾರಿ ಭಾಗ್ಯವಂತ ಮಸೂದಿ, ವಲಯ ಅರಣ್ಯಾಧಿಕಾರಿ ಸಂತೋಷ ಅಜೂರ, ವಿಜಯಪುರ ಅಲ್ ಅಮೀನ್ ಮೆಡಿಕಲ್…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಮತ್ತು ಘಟಪ್ರಭಾ , ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ನೀರಿನ ಒಳಹರಿವು ಹಾಗೂ ಹೊರ ಹರಿವು ಎರಡು ಒಂದು ಲಕ್ಷ ಕ್ಯೂಸೆಕ್‌ ಗೂ ಅಧಿಕವಾಗಿದೆ. 1,08,723 ಕ್ಯೂಸೆಕ್ ಒಳಹರಿವು ಇದ್ದರೆ 1.07.973 ಕ್ಯೂಸೆಕ್ ಹೊರಹರಿವು ಇದೆ. ಈ ಬ್ಯಾರೇಜ್ ಕೆಳಭಾಗದಲ್ಲಿ ಇರುವ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶ್ರಮಬಿಂದು ಸಾಗರ ಈಗಾಗಲೇ ಸಂಪೂರ್ಣ ಮುಳುಗಿ ಹೋಗಿದೆ. ಜಲಾಶಯದ ಮೇಲ್ಬಾಗದಲ್ಲಿ ನೀರು ಉಕ್ಕಿ ಹರಿಯುತ್ತಿದೆ.ಘಟಪ್ರಭಾ ನದಿಯಲ್ಲೂ ನೀರಿನ ಹರಿವು ಹೆಚ್ಚಳವಾಗಿದೆ. ಜಿಎಲ್‌ಬಿಸಿ ಕಾಲುವೆಗೆ 2400 ಕ್ಯೂಸೆಕ್ ಹಾಗೂ ನದಿಗೆ 13890 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ ಅಡ್ಡಲಾಗಿ ಮುಧೋಳ ತಾಲೂಕಿನಲ್ಲಿ ಒಟ್ಟು 12 ಬ್ಯಾರೇಜ್‌ಗಳು ಇದ್ದು, ನೀರಿನ ಹರಿವು 30 ಕ್ಯೂಸೆಕ್ ದಾಟಿದರೆ ಕೆಲ ಬ್ಯಾರೇಜ್‌ಗಳು ಮುಳುಗಿ ಸೇತುವೆ ರಸ್ತೆಯಲ್ಲಿ ಸಂಚಾರ ಬಂದ್ ಆಗುವ ಸಂಭವ ಇದೆ. ಈಗ ಮಿರ್ಜಿ ಗ್ರಾಮದ…

Read More