Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಆದರ್ಶವಿದ್ಯಾಲಯದ 7, 8 ಹಾಗೂ 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿ ದೆ. ಖಾಲಿ ಇರುವ ಸ್ಥಾನಗಳಿಗಾಗಿ ಅರ್ಜಿ ಕರೆಯಲಾಗಿ ದ್ದು, ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಜೂ.26 ರಿಂದ ಜುಲೈ 7 ರವರೆಗೆ ಆದರ್ಶ ವಿದ್ಯಾಲಯದ ಆರ್ಎಂಎಸ್ಎ ಆಲಗೂರು ಆರ್ಸಿ ಶಾಲೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಗಳು ಆ.16ರಂದು ಬುಧವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ವಿದ್ಯಾಲಯದಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು, ಮೀಸಲಾತಿಯ ವಿವರವನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು7411672048/9916006936 ಸಂಪರ್ಕಿಸಬಹುದು ಎಂದು ಮುಖ್ಯಶಿಕ್ಷಕರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಹದಾನ ಮಾಡುವುದರಿಂದ ಅಂಗಾಂಗ ಅಗತ್ಯವಿರುವ ರೋಗಿಗಳಿಗೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸ್ಟೇಟ್ ಬ್ಯಾಂಕಿನ ರೀಜನಲ್ ಮ್ಯಾನೇಜರ ಸಂತೋಷ ನಾಯಕ ಹೇಳಿದ್ದಾರೆ.ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಟ್ರಾಮಾ ಸೆಂಟರ್ ಹಾಗೂ ರಕ್ತನಿಧಿ ಕೇಂದ್ರದ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎಸ್.ಬಿ.ಐ 70ನೇ ಫೌಂಡೇಶನ್ ದಿನದ ಅಂಗವಾಗಿ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ಉಚಿತ ಅರೋಗ್ಯ ತಪಾಸಣೆ, ರಕ್ತದಾನ, ದೇಹದಾನ, ನೇತ್ರದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ದೇಹ ದಾನ ಶ್ರೇಷ್ಟ ದಾನವಾಗಿದೆ. ಇದರಿಂದ ಮರಣ ನಂತರವೂ ಅಂಗಾಂಗಗಳನ್ನು ಅಗತ್ಯವಿರುವ ರೋಗಿಗಳಿಗೆ ದಾನ ಮಾಡಬಹುದು. ಅಲ್ಲದೇ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೂ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮಾತನಾಡಿ, ದೇಹದಾನ, ಅಂಗದಾನ, ರಕ್ತದಾನ, ಮಾಡುವಲ್ಲಿ ಆಸಕ್ತಿ ತೋರಿರುವ ಸ್ಟೇಟ್ ಬ್ಯಾಂಕ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಮಾಜಿಕ ಕಳಕಳಿ ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ. ಅಲ್ಲದೇ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಧ್ಯೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಗಿದೆ.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ ಮತ್ತು ಎಸ್ಪಿ ಕಚೇರಿಯ ಪರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಣಣ ನಿಂಬರಗಿ ಅವರು ಮೂರು ವರ್ಷಗಳ ಈ ಒಪ್ಪಂದಕ್ಕೆ ಸಹಿ ಹಾಕಿದರು.ಈ ಒಡಂಬಡಿಕೆಯಿಂದಾಗಿ ಕಾನೂನು ಶಾಲೆಯ ವಿದ್ಯಾರ್ಥಿಗಳು ಕಾನೂನು ವಿಷಯಗಳಾದ, ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆ, ಭಾರತೀಯ ಸಾಕ್ಷ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಪೋಲೀಸ ಅಧಿಕಾರಿಗಳಿಂದ ಪ್ರಾತ್ಯಕ್ಷಿಕೆಯ ಮೂಲಕ ಅನುಭವವನ್ನು ಪಡೆದುಕೊಳ್ಳಲಿದ್ದಾರೆ. ಅಲ್ಲದೇ, ಇಂಟರ್ನಶಿಪ್ ಮಾಡಲಿದ್ದಾರೆ. ಅಲ್ಲದೇ, ಪೋಲೀಸ್ ತರಬೇತಿ ಕೇಂದ್ರದಲ್ಲಿ ಅಧ್ಯಯನಶೀಲರಾದ ಅಧಿಕಾರಿಗಳಿಗೆ ಕಾನೂನು ಶಾಲೆಯ ಬೋಧಕ ವೃಂದದವರು ಪಾಠವನ್ನು ಮಾಡಲಿದ್ದಾರೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು ಇದನ್ನು ಮತ್ತೆ ನವೀಕರಿಸಬಹುದಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಕಾನೂನು ಶಾಲೆಯ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ, ಈ ಒಡಂಬಡಿಕೆಯಿಂದ ವಿದ್ಯಾರ್ಥಿಗಳು, ಕಾನೂನು ಶಾಲೆಯ ಪ್ರಾಧ್ಯಾಪಕರು ಮತ್ತು ಪೋಲಿಸ್…
ಹೊನವಾಡದ ಸರ್ಕಾರಿ ಪ್ರೌಡಶಾಲೆ ಮಂಜೂರಾತಿ ಹಾಗೂ ಸರ್ಕಾರಿ ಆಸ್ಪತ್ರೆಯ ಸಮಸ್ಯೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಸರಕಾರಿ ಪ್ರೌಡಶಾಲೆ ಪ್ರಾರಂಭಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಒದಗಿಸುವುದು ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ,ಬಿ ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಹೊನವಾಡ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ೭ ನೇ ತರಗತಿ ಕಲಿತ ಮಕ್ಕಳಿಗೆ ಮುಂದೆ ಕೂಡಾ ಓದಬೇಕಾದರೆ ಸರಕಾರಿ ಪ್ರೌಡಶಾಲೆ ಬೇಕೆ ಬೇಕು ಎಂದು ತಮ್ಮ ಗಮನಕ್ಕೂ ಈ ವಿಷಯವನ್ನು ತಂದಾಗ ಈ ವರ್ಷ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಿರಿ ಆದರೆ ಅದು ಸಾಧ್ಯವಾಗಿಲ್ಲ, ಕೂಡಲೇ ಅಲ್ಲಿಯೇ ಇರುವ ಶಾಲಾ ಕಟ್ಟಡದಲ್ಲಿ ಪ್ರೌಡಶಾಲೆ ಪ್ರಾರಂಭಿಸಬೇಕು ಜೊತೆಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಸಿಬ್ಬಂದಿ ಹಾಗೂ ಕಲಿಕಾ ಸಾಮಗ್ರಗಳನ್ನು ಪೂರೈಸಬೇಕು ಎಂದರುಜೊತೆಗೆ ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲೋಕಾಯುಕ್ತ ಸಂಸ್ಥೆಯಲ್ಲಿನ ಅಕ್ರಮಗಳ ತನಿಖೆ, ಉಚ್ಚ ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ, ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆಯುವಲ್ಲಿ ವಿಫಲರಾಗಿರುವ ಸಚಿವ ಆರ್.ಬಿ. ತಿಮ್ಮಾಪುರ ರವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಶುಕ್ರವಾರ ಮನವಿ ಸಲ್ಲಿಸಲಾಯಿತು.ಆಡಳಿತದಲ್ಲಿನ ಅಕ್ರಮ, ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರವನ್ನು ನಿಯಂತ್ರಿಸಬೇಕಾದ ಲೋಕಾಯುಕ್ತ ಸಂಸ್ಥೆಯ ನಿರಂತರವಾಗಿ ಅಕ್ರಮಗಳಲ್ಲಿ ಮತ್ತು ಅವ್ಯವಹಾರಗಳಲ್ಲಿ ಸಿಲುಕುತ್ತಿರುವುದು ದುರದೃಷ್ಟಕರ. ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಬಹುತೇಕ ಪ್ರಕರಣಗಳು ತಾರ್ಕಿಕ ಅಂತ್ಯ ಕಾಣದೆ ಮುಕ್ತಾಯವಾಗುತ್ತಿವೆ ಮತ್ತು ಸ್ಪಷ್ಟವಾಗಿ ಭ್ರಷ್ಟಾಚಾರವೆಸಗಿರುವ ಪ್ರಕರಣಗಳು ಕೂಡ ವಿಲೇವಾರಿಯಾಗದೆ ದೂಳು ಹಿಡಿಯುತ್ತಿವೆ. ಇದು ಲೋಕಾಯುಕ್ತ ಸಂಸ್ಥೆಯ ಹಳ್ಳ ಹಿಡಿರುವುದನ್ನು ತೋರಿಸುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಾಲು ಸಾಲು ಹಗರಣಗಳು ನಡೆಯುತ್ತಿದ್ದು, ನಿಯಂತ್ರಿಸಲು ಸರ್ಕಾರದ ವತಿಯಿಂದ ಯಾವುದೇ ಕ್ರಮವಾಗುತ್ತಿಲ್ಲ. ಅಬಕಾರಿ ಇಲಾಖೆಯಲ್ಲಿ ಅಸಹ್ಯಕರ ಅವ್ಯವಹಾರ, ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಇವನ್ನೆಲ್ಲ ನಿಯಂತ್ರಿಸಬೇಕಾದ…
ಬರಟಗಿ ಗ್ರಾಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬರಟಗಿ ಗ್ರಾಮದಲ್ಲಿ ತಾಲೂಕು ಪಂಚಾಯತಿ ವತಿಯಿಂದ ಜರುಗಿದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಮಿತಿಯ ತಾಲೂಕು ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಮಾತನಾಡಿದರು.ಸರಕಾರ ಜಾರಿಗೆ ತಂದಿರುವ ಈ ಪಂಚ ಗ್ಯಾರಂಟಿಗಳಿಂದ ಬಡಜನರ ಜೀವನವು ಅತ್ಯಂತ ಸುಖಕರವಾಗಿ ನಡೆಯುತ್ತಿದೆ, ಸಾಕಷ್ಟು ಕಷ್ಟಗಳನ್ನು ಅನುಭವಿಸಿದ ಕುಟುಂಬಗಳು ಈಗ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದಕ್ಕೆ ಪಂಚ ಗ್ಯಾರಂಟಿಗಳೇ ಕಾರಣ ಎಂದರು.ನಮ್ಮ ತಾಲೂಕಿನ ಅನುಷ್ಠಾನ ಸಮಿತಿಯು ತುಂಬಾ ಕ್ರೀಯಾಶೀಲವಾಗಿದ್ದು, ಸಮಸ್ಯೆಯನ್ನು ಹೇಳಿಕೊಂಡು ಬರುವ ಫಲಾನುಭವಿಗಳಿಗೆ ಕೇವಲ ೧೫ ನಿಮಿಷದಲ್ಲಿಯೇ ಪರಿಹಾರ ನೀಡುತ್ತಿದ್ದೇವೆ. ಸಮಸ್ಯೆಗಳನ್ನು ವ್ಯಾಟ್ಸಾಫ್ ಮೂಲಕ ಸಲ್ಲಿಸಿದರೂ ಸಹಿತ ೧೫ ನಿಮಿಷದಲ್ಲಿ ಪರಿಹಾರ ನೀಡಲಾಗುತ್ತಿದೆ. ಈ ಕಾರ್ಯಕ್ಕೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳ ಜೊತೆಗೆ ತಾಲೂಕು ಪಂಚಾಯತಿಯ ಎಲ್ಲಾ ಅಧಿಕಾರಿಗಳು ತುಂಬಾ ಸಹಾಯ ಸಹಕಾರ ನೀಡುತ್ತಿದ್ದಾರೆ, ಯೋಜನೆಯ ಯಶಸ್ವಿಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.ಪಂಚ…
ಮಾದಕ ವಸ್ತುಗಳ ಜಾಗ್ರತಿ ಕಾರ್ಯಕ್ರಮ | ಪಿಎಸ್ಐ ಮಂಜುನಾಥ ಪಾಟೀಲ್ ಸಲಹೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಇತ್ತೀಚಿನ ದಿನಗಳಲ್ಲಿ ಯುವಕರು ಸಂಚಾರಿ ನಿಯಮ ಪಾಲಿಸದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಕಾನೂನು ನಿಯಮಗಳನ್ನು ಪಾಲಿಸುವುದರ ಜೊತೆಗೆ ಮಾದಕ ವಸ್ತುಗಳಿಂದ ದೂರವಿದ್ದು ಪ್ರಾಣ ಉಳಿಸಿಕೊಳ್ಳಿ ಎಂದು ಅಪರಾಧ ವಿಭಾಗದ ಪಿಎಸ್ಐ ಮಂಜುನಾಥ ಪಾಟೀಲ್ ಸಲಹೆ ನೀಡಿದರು.ಗುರುವಾರ ಗ್ರಾಮದ ಕಲ್ಪವೃಕ್ಷ ಕಾಲೇಜಿನಲ್ಲಿ ಸಿಂದಗಿ ಪೊಲೀಸ್ ಠಾಣಾ ವತಿಯಿಂದ ಹಮ್ಮಿಕೊಂಡ ಮಾದಕ ವಸ್ತು ಸಾಗಣೆ ಹಾಗೂ ಮಾರಾಟದ ಕುರಿತು ಜಾಗ್ರತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹೆಲ್ಮೆಟ್ ಇಲ್ಲದೆ ಫ್ಯಾಶನ್ ಮಾಡುವ ಹುರುಪಿಲ್ಲಿ ದ್ವಿಚಕ್ರ ವಾಹನ ಮನ ಬಂದಂತೆ ಓಡಿಸುತ್ತಾರೆ ಹಳಿ ತಪ್ಪಿದರೆ ಪ್ರಾಣ ಹೋಗುವುದು ಕಟ್ಟಿಟ್ಟ ಬುತ್ತಿ ಎಲ್ಲರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಅಪಘಾತದಲ್ಲಿ ವಾಹನ ಛಿದ್ರವಾದರೆ ಮತ್ತೊಂದು ವಾಹನ ಖರೀದಿಸಬಹುದು ಒಂದು ಪ್ರಾಣ ಖರೀದಿಸಲು ಸಾಧ್ಯವಿಲ್ಲ ಎಂದರು.ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಶಿವಶರಣಗೌಡ ಬಿರಾದಾರ, ಪ್ರಾಚಾರ್ಯ ಎ ಬಿ ಸಿಂದಗಿ, ಎಸ್ ಬಿ ಬಿರಾದಾರ, ಪೊಲೀಸ್ ಹೊರಠಾಣೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಣಣದ ವಿದ್ಯಾಭಾರತಿ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಾಡಪ್ರಭು ಕೆಂಪೇಗೌಡರ ೫೧೬ ನೇ ಜಯಂತಿ ಆಚರಿಸಲಾಗುತ್ತದೆ.ನಂತರ ಮಾತನಾಡಿದ ಶಾಲಾ ಅಧ್ಯಕ್ಷ ಕೆ.ಪಿ.ಬೋಳೆಗಾಂವ ಅವರು, ನಮ್ಮ ಭಾರತೀಯ ಜ್ಞಾನ ಪರಂಪರೆಯ ಉಳಿವು ಮತ್ತು ಮುಂದುವರಿಕೆಯ ದೃಷ್ಟಿಯಿಂದ ನಾಡಿನ ಧರ್ಮ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡು ನಾಡನ್ನು ಕಟ್ಟಿ ಆಳಿದ ನಾಡಪ್ರಭು ಕೆಂಪೇಗೌಡರು ಧರ್ಮಪ್ರಭುಗಳೂ ಆಗಿದ್ದರು ಎಂದರು.ಈ ಸಂದರ್ಭದಲ್ಲಿ ಮುಖ್ಯಾಧ್ಯಾಪಕ ಆರ್,ಎಸ್,ಬಣಗಾರ, ಶಿಕ್ಷಕರಾದ ಎಸ್ ಎಸ್ ಪೂಜಾರಿ, ಬಿ ಎಲ್ ಪೂಜಾರಿ, ಡಿ ಎಸ್ ಬಗಲಿ, ನರೂಣಿ, ಮೆಂಡೆಗಾರ, ಸಿಂಪಿ, ಬಡಿಗೇರ, ಬೀರಾದಾರ, ಶೇಖ, ಉಮರಾಣಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಷಾಡ ಏಕಾದಶಿಯ ಬೆನ್ನಲೇ ಮಹಾರಾಷ್ಟ್ರದ ಪಂಢರಪುರದಲ್ಲಿ ಜರುಗಲಿರುವ ಜಾತ್ರೆ ನಿಮಿತ್ಯ ಯಾತ್ರಾರ್ಥಿಗಳ ಅನಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗ ವತಿಯಿಂದ ಜುಲೈ ೦೭ ರಿಂದ ಜುಲೈ ೦೮ರವರೆಗೆ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಿವೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನ ಬಾಗೇವಾಡಿ ಘಟಕ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಬಸ್ ಕಾರ್ಯಾಚರಣೆ ಮಾಡಲಿದ್ದು, ಒಂದೇ ಗುಂಪಿನಲ್ಲಿ ೪೭ ಯಾತ್ರಾರ್ಥಿಗಳು ಲಭ್ಯವಾದಲ್ಲಿ ಅವರ ಸ್ಥಳದಿಂದ ಪಂಢರಪುರಕ್ಕೆ ನೇರವಾಗಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿಗಳ ಮೊ.ಸಂ: ೭೭೬೦೯೯೨೨೫೨, ವಿಜಯಪುರ -೧ರ ಘಟಕ ವ್ಯವಸ್ಥಾಪಕರ ಮೊ.ಸಂ:೭೭೬೦೯೯೨೨೬೩, ವಿಜಯಪುರ -೨ರ ಘಟಕ ವ್ಯವಸ್ಥಾಪಕರ ಮೊ.ಸಂ:೭೭೬೦೯೯೨೨೬೪, ಇಂಡಿ ಘಟಕ ವ್ಯವಸ್ಥಾಪಕರ ಮೊ.ಸಂ:೭೭೬೦೯೯೨೨೬೫, ಸಿಂದಗಿ ಘಟಕ ವ್ಯವಸ್ಥಾಪಕರ ಮೊ.ಸಂ:೭೭೬೦೯೯೨೨೬೬, ಮುದ್ದೇಬಿಹಾಳ ಘಟಕ ವ್ಯವಸ್ಥಾಪಕರ ಮೊ.ಸಂ:೭೭೬೦೯೯೨೨೬೭, ಬಸವನ ಬಾಗೇವಾಡಿ ಘಟಕ ವ್ಯವಸ್ಥಾಪಕರ ಮೊ.ಸಂ:೭೭೬೦೯೯೨೨೬೯, ವಿಜಯಪುರ ಕೇಂದ್ರ ಬಸ್ ನಿಲ್ದಾಣ ದೂರವಾಣಿ ಸಂ: ೦೮೩೫೨- ೨೫೧೩೪೪ ಹಾಗೂ…
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಪಾಲಕರಿಗೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಶಿಕ್ಷಣಕ್ಕಾಗಿ ಒತ್ತು ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.ನಗರದ ಟಕ್ಕೆಯಲ್ಲಿರುವ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದ ಎಂಎಸ್ಐಎಲ್ ಸಿಎಸ್ಆರ್ ಅನುದಾನದಡಿ ನಿರ್ಮಿಸಲಾದ ಸಭಾ ಭವನ ಉದ್ಘಾಟನೆ, ೨೦೨೪-೨೫ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಗಸ್ತ್ಯ ಫೌಂಡೇಶನ್ ಪ್ರಾಯೋಜಕತ್ವದ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಸಂಚಾರಿ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಪ್ರಾಥಮಿಕ ಶಾಲಾ ಹಂತದಲ್ಲಿಯೇ…
