Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಇಂಡಿ ತಾಲೂಕಿನ ಮಿನಿ ವಿಧಾನ ಸೌಧದ ತಹಶೀಲ್ದಾರ ಕಚೇರಿಯಲ್ಲಿ ಏ.೦೯ರ ಬೆಳಿಗ್ಗೆ ೧೦ರಿಂದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು ಕುಂದುಕೊರತೆಗಳನ್ನು ಆಲಿಸಲು ಏ.೦೭ರಂದು ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ಸಂಖ್ಯೆ : ೬೩೬೬೪೨೩೮೮೭ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವಕೀಲ ಎಂ.ಡಿ.ಕುಂಬಾರ ಬುಧವಾರ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಪಕ್ಷ ಕೊಟ್ಟ ಹಲವಾರು ಜವಾಬ್ದಾರಿಗಳನ್ನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ಸದ್ಯದ ಕಲುಷಿತ ರಾಜಕೀಯ ಪರಿಸ್ಥಿತಿಯಲ್ಲಿ ಬಹುದೊಡ್ಡ ನಾಯಕ ಬಸನಗೌಡ ಪಾಟೀಲ ಯತ್ನಾಳ ರವರನ್ನು ಉಚ್ಛಾಟನೆ ಮಾಡಿರುವ ನಿರ್ಧಾರ ಖಂಡಿಸಿ ಭಾರವಾದ ಮನಸ್ಸಿನಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪವಾಡ ಬಸವೇಶ್ವರ ಆಶ್ರಮದಲ್ಲಿ ಶ್ರೀ ಬಸಪ್ಪ ಶರಣರ (ಮೌನ ಯೋಗಿ) ೨೮ನೇ ಆರಾಧನಾ ಮಹೋತ್ಸವ ಎ.೪ ಮತ್ತು ೫ ನಡೆಯಲಿದೆ.ಎ೪ ರಂದು ತಾಲೂಕಿನ ಬಸರಕೋಡ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ರಾತ್ರಿ ಅಖಂಡ ಭಜನೆ ನಡೆಯಲಿದೆ. ಎ೫ ರಂದು ಬೆಳಿಗ್ಗೆ ೧೦.೩೦ಕ್ಕೆ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ಶರಣರ ಗದ್ದುಗೆಗೆ ಅಭಿಷೇಕ, ಪೂಜೆ, ಭಜನಾ ಸಮಾಪ್ತಿ, ಮಹಾನೈವೇದ್ಯ, ಮಂಗಳಾರತಿ, ಹಾಗೂ ಮಧ್ಯಾಹ್ನ ೧ ಕ್ಕೆ ಮಹಾ ಪ್ರಸಾದ ಇರುತ್ತದೆ. ಈ ಕಾರ್ಯಕ್ರಮಗಳು ಚನ್ನಮ್ಮಲ್ಲಪ್ಪ ಶರಣರ ದಿವ್ಯ ನೇತೃತ್ವದಲ್ಲಿ ವಿವಿಧ ಮಠಾಧೀಶರ, ಸಂತರ ಸಮ್ಮುಖದಲ್ಲಿ ನಡೆಯಲಿದೆ. ಕಾರಣ ಸದ್ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿ ಶ್ರೀ ಗುರುದೇವರ ಕೃಪೆಗೆ ಪಾತ್ರರಾಗಬೇಕಾಗಿ ಪವಾಡ ಬಸವೇಶ್ವರ ಆಶ್ರಮದವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೀರಾವರಿ ಯೋಜನೆಗೆ ಸರ್ಕಾರದ ಆದ್ಯತೆ | ನಮ್ಮ ನೀರು ನಮ್ಮ ಹಕ್ಕು ಹೋರಾಟ | ಜಮಖಂಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಸ್ಪಷ್ಠನೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ”ಯುಕೆಪಿ 3ನೇ ಹಂತದ ಗೆಜೆಟ್ ಪ್ರಕಟಣೆಗಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತದೆ” ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.ನಗರದಲ್ಲಿ ಬುಧವಾರ ದಿ.ಜಮಖಂಡಿ ಅರ್ಬನ್ ಕೋ ಅಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.’ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಯಿಂದ ನದಿಯ ನೀರು ಸಮುದ್ರ ಸೇರುವುದನ್ನು ತಪ್ಪಿಸಬೇಕಿದೆ. ಕೃಷ್ಣಾ ನ್ಯಾಯಾಧೀಕರಣದ ಗೆಜೆಟ್ ಪ್ರಕಟಗೊಂಡರೆ ಆಲಮಟ್ಟಿ ಡ್ಯಾಂನಲ್ಲಿ 524 ಮೀ.ವರೆಗೆ ನೀರು ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಿದ್ದೇವೆ. ಯುಕೆಪಿ ಮೂರನೇ ಹಂತದಲ್ಲಿ ಒಪ್ಪಿತ ಪರಿಹಾರ ವಿತರಿಸಿ ಏಕ ಕಾಲಕ್ಕೆ ಭೂಸ್ವಾಧೀನ ಕೈಗೊಂಡು ರೈತರ ಬದುಕು ಹಸನುಗೊಳಿಸುವ ಯತ್ನ ನಡೆದಿದೆ” ಎಂದರು.”ಮಾಜಿ ಸಚಿವ ಸಿದ್ದು ನ್ಯಾಮಗೌಡ, ಮಾಜಿ ಶಾಸಕ ರಾಮಣ್ಣ ಕಲೂತಿ ಜಮಖಂಡಿ ಅಭಿವೃದ್ಧಿ ಮಾಡಿದ್ದಾರೆ. ನಾನು ಸಹಕಾರಿ ಸಚಿವನಿದ್ದಾಗ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಒದಗಿಸಿದೆ. ನಾನು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೃಷ್ಣಾ ತೀರದ ಐತಿಹಾಸಿಕ ಸುಪ್ರಸಿದ್ಧ ಹಿಂದೂ ಮುಸ್ಲಿಂ ಭಾವೈಕ್ಯತೆಯುಳ್ಳ ಪರಮಜಾಗೃತ ಸ್ಥಾನವು ಆದ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ತುಬಚಿ ಸುಕ್ಷೇತ್ರದಲ್ಲಿ ಶುಕ್ರವಾರ ಎಪ್ರಿಲ್ 4 ರಿಂದ ರವಿವಾರ ಏಪ್ರಿಲ್ 13ರವರೆಗೆ ಜಾತ್ರಾ ಮಹೋತ್ಸವದ ನಿಮಿತ್ಯ ವಿಶೇಷ ಕಾರ್ಯಕ್ರಮಗಳು ಶ್ರೀ ಮಠದ ಪೂಜ್ಯರಾದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರೀಮಠದಲ್ಲಿ ಜರುಗುವುದು .ಕಾರ್ಯಕ್ರಮ ವಿವರಏಪ್ರಿಲ್ 4ರಿಂದ ದಿನಾಲು ಸಂಜೆ 7 ಗಂಟೆಗೆ ಪ್ರವಚನ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರಗುವುದು. ಏಪ್ರಿಲ್ 8ರಂದು ಮುಂಜಾನೆ 9 ಗಂಟೆಗೆ ಶ್ರೀ ಶಿವಲಿಂಗೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಜರುಗುವುದು. ಏಪ್ರಿಲ್ 11ರಂದು ಪೂಜ್ಯಶ್ರೀ ಲಿಂ. ಶಿವಲಿಂಗೇಶ್ವರ ಮಹಾಸ್ವಾಮಿಗಳ 20ನೆಯ ಪುಣ್ಯ ಸ್ಮರಣೋತ್ಸವ ಹಾಗೂ ಭಜನಾ ಮೇಳ ಜರುಗುವುದು. ಏಪ್ರಿಲ್ 12ರಂದು ಮುಂಜಾನೆ 9 ಗಂಟೆಗೆ ಕರಡಿಮೇಳ ಉದ್ಘಾಟನಾ ಕಾರ್ಯಕ್ರಮ, ಏಪ್ರಿಲ್ 12ರಂದು ಸಂಜೆ 7 ಗಂಟೆಗೆ ಶ್ರೀ ಶಿವಲಿಂಗೇಶ್ವರ ಶಿವಯೋಗಿಗಳ ರಥೋತ್ಸವ ಜರಗುವುದು,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ತಹಸೀಲ್ದಾರ ಕಚೇರಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ದಿಢೀರನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆಗಳಲ್ಲಿ ನಡೆಯುತ್ತಿರುವ ವಿವಿಧ ಕೆಲಸ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುತ್ತಿರುವ ಬಗ್ಗೆ ಮತ್ತು ಸಾರ್ವಜನಿಕರಿಗೆ ಏನಾದರೂ ತೊಂದರೆಗಳಾಗುತ್ತಿವೆಯಾ ಎಂಬ ಬಗ್ಗೆ ಪರಿಶೀಲಿಸಲು ಭೇಟಿ ನೀಡಿದ್ದೇವೆ. ಜೊತೆಗೆ ಪುರಸಭೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್, ಮೆಗಾ ಮಾರುಕಟ್ಟೆ, ಎಸ್ಡಿಪಿ, ಎಫ್ಎಸ್ಡಿಪಿ, ಕಸ ವಿಲೇವಾರಿ ಘಟಕಗಳನ್ನು ವೀಕ್ಷಣೆ ಮಾಡಿದ್ದೇವೆ. ಇಲ್ಲಿನ ಮೆಘಾ ಮಾರುಕಟ್ಟೆ ಟೆಂಡರ್ ಪ್ರಕ್ರೀಯೆಯಲ್ಲಿದ್ದು ಒಂದೆರಡು ವಾರಗಳಲ್ಲಿ ಭೂಮಿ ಪೂಜೆ ಮಾಡಿ ಕೆಲಸ ಪ್ರಾರಂಭಿಸಲಾಗುವದು, ಇಂದಿರಾ ಕ್ಯಾಂಟೀನ ಕಾಮಗಾರಿ ಪೂರ್ಣಗೊಂಡಿದ್ದು, ಸಾಮಗ್ರಿಗಳು ಮತ್ತು ಕೆಲಸದ ಸಿಬ್ಬಂದಿಗಳನ್ನು ಕೂಡ ನಿಯೋಜಿಸಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿದ್ದು ಇದೇ ತಿಂಗಳಿನಲ್ಲಿ ಪ್ರಾರಂಭಗೊಳ್ಳಲಿದೆ ಎಂದರು.ಈ ವೇಳೆ ತಹಸೀಲ್ದಾರ ಬಲರಾಮ ಕಟ್ಟಿಮನಿ, ಎಎಲ್ಡಿಆರ್ ಶಿವಾನಂದ ಸಜ್ಜನ, ಶಿರಸ್ತೇದಾರ ಎಂ.ಎಂ.ಬಾಗೇವಾಡಿ, ಕಂದಾಯ ನಿರೀಕ್ಷಕರುಗಳಾದ ವೆಂಕಟೇಶ ಅಂಬಿಗೇರ, ಮಹಾಂತೇಶ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಎಕ್ಸ್ಪರ್ಟ ಟ್ಯಾಲೆಂಟ್ ಅವಾರ್ಡ ಪರೀಕ್ಷೆಯನ್ನು ನಡೆಸುತ್ತಿದ್ದೇವೆ. ಪರೀಕ್ಷೆಯಲ್ಲಿ ಭಾಗವಹಿಸಿ ೧ ರಿಂದ ೫ ನೇ ರ್ಯಾಂಕ ಪಡೆಯುವ ವಿದ್ಯಾರ್ಥಿಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಪ್ರತಿಭಾನ್ವಿತ ೨೦ ವಿದ್ಯಾರ್ಥಿಗಳಿಗೆ ೨ ವರ್ಷಗಳ ಕಾಲ ಉಚಿತ ಶಿಕ್ಷಣ ನೀಡಿ ಪ್ರೋತ್ಸಾಹಿಸುತ್ತಿದ್ದೇವೆ ಎಂದು ತಾಲೂಕಿನ ನಾಗರಬೆಟ್ಟ ಗ್ರಾಮದ ಹೆಸರಾಂತ ಎಕ್ಸ್ಫರ್ಟ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಬಿ.ಜಿ.ಮಠ ಹೇಳಿದರು.ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಎಸ್ಎಸ್ಎಲ್ಸಿ, ಸಿಬಿಎಸ್ಇ, ಐಸಿಎಸ್ಇ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು. ಎ.೬ ರಂದು ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ರ್ಯಾಂಕ್ ಬಂದವರಿಗೆ ಪ್ರಥಮ ಬಹುಮಾನವಾಗಿ ೨ಲಕ್ಷ ೨೫ ಸಾವಿರ ರೂಗಳ ಶಿಷ್ಯ ವೇತನ ಜೊತೆಗೆ ೨೫ಸಾವಿರ ರೂಪಾಯಿ ನಗದು, ದ್ವಿತೀಯ ಬಹುಮಾನವಾಗಿ ೨ಲಕ್ಷ ೨೫ ಸಾವಿರ ರೂಗಳ ಶಿಷ್ಯ ವೇತನ ಜೊತೆಗೆ ೨೦ಸಾವಿರ ರೂಪಾಯಿ ನಗದು, ತೃತೀಯ ಬಹುಮಾನವಾಗಿ ೨ಲಕ್ಷ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ ಈ ಕಡೆ ನೋಡುತ್ತ ನಿಂತು ಬಿಡುತ್ತೇವೆ. ಅವರಲ್ಲಿ ನಾವೂ ಒಬ್ಬರೆಂಬ ಭಾವನೆ ಬರದೇ ಅವರ ಇರುವಿಕೆಯನ್ನು ಸಂತಸದಿಂದ ಕಳೆಯದೆ ಪೇಚಾಡುತ್ತೇವೆ. ಉಸಿರುಗಟ್ಟಿದ ವಾತಾವರಣದಲ್ಲಿ ನಿಂತಂತೆನಿಸಿ ಅಲ್ಲಿಂದ ಹೊರ ನಡೆದರೆ ಸಾಕೆಂದು ಅನಿಸುವುದೂ ಉಂಟು. ಅಂಥ ಸಮಯದಲ್ಲಿ ನೀವೂ ಅವರಲ್ಲೊಬ್ಬರು ಅಂತೆನಿಸಲು ಹೇಗೆ ಮಾತನಾಡಬೇಕೆಂದು ಯೋಚಿಸುತ್ತೀರಿ. ಆದರೆ ಮಾತನಾಡಿ ಏನಾದರೂ ತಪ್ಪಾದರೆಂದು ಬಾಯಿ ಮುಚ್ಚಿಕೊಂಡಿರುತ್ತೀರಿ. ನಡೆಯುತ್ತಿರುವ ಸಂಭಾಷಣೆಯಲ್ಲಿ ನೀವೂ ಭಾಗ ತೆಗೆದುಕೊಳ್ಳಬೇಕೆಂದರೆ ಏನು ಮಾಡಬೇಕೆಂಬುದಕ್ಕೆ ಇಲ್ಲಿವೆ ಕೆಲವು ಸಲಹೆಗಳು.ಸಾಮಾನ್ಯವಾದುದನ್ನು ಹುಡುಕಿ ನಡೆಯುತ್ತಿರುವ ಸಂಭಾಷಣೆಯನ್ನು ಗಮನವಿಟ್ಟು ಕೇಳಬೇಕು. ಚಟುವಟಿಕೆಗಳನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ “ಗುಮ್ಮಟನಗರಿ” ಪ್ರಾದೇಶಿಕ ದಿನಪತ್ರಿಕೆ ಸಂಪಾದಕ ಇರ್ಫಾನ್ ಶೇಖ ಇವರ ತಂದೆ ಮುನಿರಅಹಮ್ಮದ್ ಮನ್ಸೂರ್ ಅಲಿ ಶೇಖ (71) ನಿಧನರಾಗಿದ್ದಾರೆ. ಮೃತರು ಧರ್ಮ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗ ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಯಿತು.
