Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮಹಾನ ಶ್ರೇಷ್ಠ ತಪಸ್ವಿಗಳಾದ ಕಡಕೋಳ ಮಡಿವಾಳೇಶ್ವರರು ರಚಿಸಿದ ತತ್ವಪದ “ಮೂಕನಾಗಬೇಕು ಜಗದೊಳು ಜ್ವಾಕ್ಯಾಗಿರಬೇಕು” ಎಂಬ ಗೀತೆಯಲ್ಲಿ ಅಂದಿನ ಇಂದಿನ ಮುಂದಿನ ಕಾಲಕ್ಕೂ ನಾವುಗಳು ಬದುಕುವ ರೀತಿ ಅರ್ಥಪೂರ್ಣವಾಗಿರಬೇಕು ಎನ್ನುವ ಸಂದೇಶ ಅಡಗಿದೆ ಎಂದು ನಿವೃತ್ತ ಶಿಕ್ಷಕ ಬಸವರಾಜ ಹಂಗರಗಿ ಹೇಳಿದರು.ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಕಡಕೋಳ ಮಡಿವಾಳೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಮಾಜದಲ್ಲಿ ಏನನ್ನಾದರೂ ನಾವು ಹೇಳಬೇಕಾದರೆ ಆಲೋಚನೆ ಮಾಡಿ ಹೇಳಬೇಕು ಹಾಗೂ ಎಚ್ಚರದಿಂದ ಇರಬೇಕು ಎಂಬುದನ್ನು ಮಡಿವಾಳೇಶ್ವರರು ತಿಳಿಸಿದ್ದಾರೆ. ಸಮಾಜಕ್ಕೆ ಅವರು ಕೊಟ್ಟಿರುವ ಕೊಡುಗೆ ಅಪಾರವಾದದ್ದು. ಅಂತವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಉಸ್ಮಾನ್ ಪಟೇಲ ಮಾತನಾಡಿ, ಭಾರತ ದೇಶದಲ್ಲಿ ಅನೇಕ ಜಾತಿ ಧರ್ಮ ಜನಾಂಗದವರಿದ್ದರು ಕೂಡಾ ಭಾರತಿಯ ಸಂಸ್ಕೃತಿಗೆ ವಿಶ್ವವೇ ಮತ್ತು ನಾವುಗಳು ತಲೆ ಬಾಗಿ ನಡೆದಾಗ ಮಕ್ಕಳಲ್ಲಿ ನಮ್ಮ ಸಂಸ್ಕಾರ ಹಿಂದಿನ ಸಂಪ್ರದಾಯಗಳ ಆಚರಣೆ ಮಾಡಲು ಉಳಿಸಲು ಸಾಧ್ಯವಾಗುತ್ತದೆ. ಭಾವೈಕ್ಯತೆಯ ಶೃದ್ದಾ ಕೇಂಧ್ರ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ತಹಶೀಲ್ದಾರ ಎಸ್.ಎಸ್. ನಾಯಕಲಮಠ, ಶಿರಸ್ತೇದಾರ್ ಕೃಷ್ಣಾ ಗೂಡುರ, ಹಿರಿಯರಾದ ಸಂಗಪ್ಪ ಚೌಡಪ್ಪಗೋಳ, ಈರಣ್ಣ ಔರಸಂಗ, ಸಂಗಪ್ಪ ಬಳೂರಗಿ, ಬಸಪ್ಪ ಮಂಕಣಿ, ಬಸವರಾಜ ಚೌಡಪ್ಪಗೋಳ, ಸಂಗಪ್ಪ ಚಿತ್ತಾಪೂರ, ಸಂಗಮೇಶ ಮೇಲಗಿರಿ, ರಾಜು ಚೌಡಪ್ಪಗೋಳ, ವಿಜಯಕುಮಾರ ನಿಲವಾಣಿ, ಎಂ.ಎಸ್. ಗುತ್ತರಗಿ, ಬಿ.ಎನ್. ಜಿಡ್ಡಿಮನಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿ ಹಾಗೂ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿಗೆ ನಿರ್ಮಿಸಿದ ಕೊರ್ತಿ ಕೊಲ್ಹಾರ ಸೇತುವೆ ಮೇಲೆ ಹೈಮ್ಯಾಕ್ಸ್ ದೀಪಗಳು ಹಾಗೂ ಸಿಸಿ ಟಿವಿ ಅಳವಡಿಕೆಯ ಕುರಿತು ಪೊಲೀಸ್ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇತೃತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿವೇಕ ಮಠ ಮಾದ್ಯಮದೊಂದಿಗೆ ಮಾತನಾಡಿ, ಕೊರ್ತಿ ಕೊಲ್ಹಾರ ಸೇತುವೆಯು ಸುಮಾರು ಮೂರು ಕಿಮೀ ವ್ಯಾಪ್ತಿ ಉದ್ದವಾಗಿದ್ದು ಪ್ರಯಾಣಿಕರ ಹಿತದೃಷ್ಟಿಯಿಂದ ಸೇತುವೆಯ ಎರಡು ಬದಿ 50 ಮೀಟರಗೆ ಒಂದರಂತೆ ಒಟ್ಟು ಸುಮಾರು 120 ಹೈಮ್ಯಾಕ್ಸ್ ಬಲ್ಬುಗಳನ್ನು ಅಳವಡಿಸುವ ಚಿಂತನೆ ನಡೆಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರ ವಿಜಯ ಪಾಟೀಲ್, ಸಿಪಿಐ ಅಶೋಕ್ ಚವ್ಹಾಣ, ಪಿಎಸ್ಐ ಎಮ್.ಬಿ ಬಿರಾದಾರ ಸಹಿತ ಇನ್ನಿತರರು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಬೆಲೆ ಏರಿಕೆ ಆಗುತ್ತಿದೆ. ದೇಶದಲ್ಲಿ ಅತ್ಯಂತ ದುಬಾರಿ ಜೀವನ ನಡೆಸುವ ದುಃಸ್ಥಿತಿ ನಾಡಿನ ಜನರಿಗೆ ಬಂದಿದೆ. ಉಸಿರಾಡುವ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲವುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಕಿಡಿಕಾರಿದ್ದಾರೆ.ಈ ಕುರಿತಾ ಪತ್ರಿಕಾ ಹೇಳಿಕೆ ನೀಡಿದ ಅವರು, ಅಧಿಕಾರ ನೀಡಿದ ಮತದಾರರಿಗೆ ಈ ಸರಕಾರ ಶಾಪಗ್ರಸ್ಥವಾಗಿದೆ. ವಿದ್ಯುತ್ ದರ, ಹಲ್ಲಿನ ದರ, ಮುದ್ರಾಂಕ ಶುಲ್ಕ, ಆಫಿಡೆವಿಟ್, ಮಾರ್ಟ್ಗೇಜ್, ವೃತ್ತಿಪರ ತರಿಗೆ, ಬಸ್ ದರ, ನೀರಿನ ಸುಂಕ ಪೆಟ್ರೋಲ್ ಸೇರಿದಂತೆ ಎಲ್ಲವೂ ಏರಿಕೆಯಾಗಿದೆ. ಅಧಿಕಾರ ನೀಡಿದ ಮತದಾರರಿಗೆ ಶಾಪ ನೀಡುವ ಸರಕಾರ ಇದಾಗಿದೆ. ರಾಜ್ಯ ಸರಕಾರ ಈ ದರ ಹೆಚ್ಚಳ ಹಿಂಪಡೆಯಬೇಕು ಎಂದು ಆಗ್ರಹಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬ್ರಾಹ್ಮಣ ಆರ್ಗನೈಜೇಷನ್ ಆಫ್ ಇಂಡಿಯಾ ಸಂಘಟನೆಯ ರಾಜ್ಯ ಉಪಾಧ್ಯಕ್ಷನಾಗಿ ಗುಂಡು ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಧ್ಯಕ್ಷರಾದ ರವೀಂದ್ರ ಕುಲಕರ್ಣಿ ಹೇಳಿದರು.ಈ ವೇಳೆ ಪತ್ರಿಕಾ ಹೇಳಿಕೆ ನೀಡಿದ ಅವರು, ಸಮಾಜದ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಸಮಾಜ ಸೇವಕ ಹಾಗೂ ಪತ್ರಕರ್ತ ಗುಂಡು ಕುಲಕರ್ಣಿ ಅವರನ್ನು ನಮ್ಮ ಸಂಘಟನೆಯ ರಾಜ್ಯ ಯುವ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಾಗೂ ಮುಂದಿನ ದಿನಮಾನಗಳಲ್ಲಿ ಸಮುದಾಯದ ಏಳಿಗೆಗಾಗಿ ಹಾಗೂ ಸಮುದಾಯದ ಕೆಲಸ ಕಾರ್ಯಗಳಿಗಾಗಿ ನಿಮ್ಮ ಸೇವೆ ಇರಲಿ. ಸಂಘಟನೆಯನ್ನು ರಾಜ್ಯಾದ್ಯಾಂತ ಬಲಪಡಿಸಿ ಎಂದು ಹೇಳಿ ಆದೇಶ ಹೊರಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕದ ಗಾಣಿಗ ಸಮುದಾಯಕ್ಕೆ ಇಲ್ಲಿವರೆಗೂ ಕಾಂಗ್ರೆಸ್ ಪಕ್ಷ ಸಚಿವ ಸಂಪುಟದ ಸಚಿವ ಸ್ಥಾನವನ್ನು ನೀಡಿಲ್ಲ. ಹಾಗಾಗಿ ಮುಂದಿನ ಸಚಿವ ಸಂಪುಟದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಬೇಕು ಎಂದು ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಆಗ್ರಹಿಸಿದರು.ಸಿಂದಗಿ ಪಟ್ಟಣದಲ್ಲಿ ಗಾಣಿಗ ಸಮಾಜದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಲ್ಲು ಲೋಣಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.ಮಲ್ಲು ಲೋಣಿ ಅವರು ಪಕ್ಷ ಮತ್ತು ಸಮುದಾಯದ ಏಳಿಗೆಗಾಗಿ ದುಡದಿದ್ದಾರೆ. ಅನೇಕ ಹೋರಾಟಗಳನ್ನು ಮಾಡಿದ್ದಾರೆ. ವಿಧಾನ ಪರಿಷತ್ನಲ್ಲಿ ಸಮರ್ಥವಾಗಿ ಪ್ರತಿನಿಧಿಸಬಲ್ಲರು. ಈ ಕಾರಣಕ್ಕೆ ಲೋಣಿ ಅವರನ್ನು ನಮ್ಮೆಲ್ಲರ ಪ್ರತಿನಿಧಿಯಾಗಿ ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದು ರಾಜ್ಯ ಸರಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇವೆ ಎಂದರು.ಈ ವೇಳೆ ಸಂಗು ಹಿಪ್ಪರಗಿ, ಬಿ.ಹೆಚ್.ಬಿರಾದಾರ, ನಿಂಗಣ್ಣ ಮರಡಿ, ಸುರೇಶ ಚೌಧರಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ತಾಲೂಕಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ನಿಡಗುಂದಿಯ ಪಟ್ಟಣ ಪಂಚಾಯತಿ ಹಾಗೂ ಹೆಬ್ಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳ ಪರೀವೀಕ್ಷಣೆ ನಡೆಸಿ, ನಿಡಗುಂದಿ ಪಟ್ಟಣದಲ್ಲಿ ಮೇಘಾ ಮಾರುಕಟ್ಟೆ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ನಿಡಗುಂದಿಯಲ್ಲಿನ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ಕ್ಯಾಂಟೀನ್ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಶೀಘ್ರದಲ್ಲಿ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.ನಿಡಗುಂದಿಯ ಒಳಚರಂಡಿ ನೀರು ಶುದ್ಧೀಕರಣ ಘಟಕದ ಮಂಜೂರಾತಿಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೂಡಲೇ ಸ್ಥಳ ವೀಕ್ಷಣೆ ಮಾಡಿ, ನಿರಾಕ್ಷೇಪಣಾ ಪತ್ರ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮುದ್ದೇಬಿಹಾಳದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಭೇಟಿ ನೀಡಿದ ಅವರು, ಕಟ್ಟಡದ ಸುತ್ತಮುತ್ತಲೂ ಕಂಪೌAಡ್ ವಾಲ್, ಪ್ಲೋರಿಂಗ್ ಕಾರ್ಯಕ್ಕೆ ಸೂಚನೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ ೭,೮ ಹಾಗೂ ೯ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂರು ದಿನಗಳವರೆಗೆ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಏಪ್ರಿಲ್ ೭ರ ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ…
ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿರುವ ನಿಂಬಾಳ್ಕರ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.೧೯೯೮ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ವಿಜಯಪುರದಲ್ಲಿ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಂಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ- ನೆಮ್ಮದಿಯಿಂದ ಬದುಕಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಜಿಲ್ಲಾ ಪೊಲಿಸ್ ಕವಾಯತು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಕಾರ್ಯ ಮಾಡುತ್ತ, ನೊಂದವರಿಗೆ ಭರವಸೆ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂಬುದು ಪೊಲೀಸ್ ಕಾರ್ಯವೈಖರಿಯಾಗಿದೆ. ಪ್ರತಿಯೊಂದು ಹಂತದಲ್ಲಿ ಪೊಲೀಸರ ಅವಶ್ಯಕತೆ ಇದೆ. ಇದು ಸಮಾಜದ ಭಾಗವಾಗಿದೆ. ನೆಮ್ಮದಿಯ ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರ ಕರ್ತವ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.ಪೊಲೀಸರು ಸಮಾಜದ ಒಳಿತಿಗಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುವುದರಿಂದಲೇ ಸಮಾಜದಲ್ಲಿ ಶಾಂತಯುತವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ. ವಿಪತ್ತು-ಆಪತ್ತು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಣೆ ಮಾಡುವ ಮೂಲಕ…
