Author: editor.udayarashmi@gmail.com

ಲೇಖನ- ಸುಧಾ ಪಾಟೀಲಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಆಯುಕ್ತರಾದ ಶಿವಾನಂದ ಕಲಕೇರಿ ಅವರು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರದ ವಿಶ್ವಸ್ಥರು ಮತ್ತು ನಮ್ಮ ವೇದಿಕೆಯ ಬಗೆಗೆ ಅಭಿಮಾನ ಮತ್ತು ಕಳಕಳಿ ಹೊಂದಿರುವ ಸರಳತೆಯ ಸಾಕಾರಮೂರ್ತಿಯಂತಿರುವ ಸರ್ಕಾರಿ ಅಧಿಕಾರಿ.ನಮ್ಮ ಎಲ್ಲ ಕೆಲಸ ಕಾರ್ಯಗಳಲ್ಲಿ ಯಾವತ್ತೂ ತಮ್ಮ ಸಾರಥ್ಯವನ್ನು ವಹಿಸುವ ಒಬ್ಬ ಅಪ್ಪಟ ಬಸವಾಭಿಮಾನಿ ಮತ್ತು ಯಾವುದೇ ಪ್ರಚಾರವಿಲ್ಲದೆ, ಸದ್ದುಗದ್ದಲವಿಲ್ಲದೆ ತಮ್ಮ ಕೆಲಸ ಕಾರ್ಯಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ತೂಗಿಸಿಕೊಂಡು ಹೋಗುವ ಒಬ್ಬ ದಕ್ಷ ಅಧಿಕಾರಿ ಎಂದು ಹೇಳಬಹುದು.ಶಿವಾನಂದ ಹಣಮಂತರಾಯ ಕಲಕೇರಿ ಅವರು ಜುಲೈ 21. 1971ರಲ್ಲಿ ಜನಿಸಿದರು. ಇವರ ತಂದೆಯವರು ದಿ. ಹಣಮಂತರಾಯ ಕಲಕೇರಿ, ನಿ. ಶಾಲಾ ಶಿಕ್ಷಕರು, ಇವರ ತಾಯಿ ಯವರು ದಿ. ಗಿರಿಜಾ. ಎಚ್. ಕಲಕೇರಿ , ಪ್ರೌಢಶಾಲಾ ಶಿಕ್ಷಕಿ. ಶಿವಾನಂದ ಕಲಕೇರಿ ಅವರ ತಂದೆಯವರು ಅಪ್ಪಟ ಶರಣ ಸಂಪ್ರದಾಯವಾದಿಗಳು. ತಮ್ಮ ವೈಜ್ಞಾನಿಕ ದೃಷ್ಟಿಕೋನ ಮತ್ತು ವೈಚಾರಿಕ ಚಿಂತನೆಯಿಂದ ಹಲವು…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಅಭದ್ರತಾ ಭಾವದ ಹಿಡಿಕೆಇತರರಿಗೆ ಹೋಲಿಸಿದರೆ ನಾನು ಅತಿಯಾಗಿ ಪರಾವಲಂಬಿಯಾಗಿದ್ದೇನೆ. ನನಗೇನು ಬೇಕೋ ಅದನ್ನು ಕೊಳ್ಳಲೂ ಆಗುತ್ತಿಲ್ಲ. ಪ್ರತಿಯೊಂದಕ್ಕೂ ಮತ್ತೊಬ್ಬರ ಮುಂದೆ ಕೈ ಚಾಚಬೇಕು. ಎಂಬ ನೋವು ಆರಂಭವಾಯಿತೆಂದರೆ ಮಾನಸಿಕ ರೋಗಿಯಾಗಿ ಬಳಲುವುದೊಂದೇ ಬಾಕಿ ಉಳಿಯುತ್ತದೆ. ನಿಮ್ಮನ್ನು ನೀವು ಮತ್ತೊಬ್ಬರೊಂದಿಗೆ ಹೋಲಿಸಿಕೊಂಡು ನಿಮ್ಮ ಸಾಮರ್ಥ್ಯದ ಬಗ್ಗೆ ಗಮನ ಹರಿಸದೇ ಇದ್ದರೆ ನಿಮ್ಮಲ್ಲಿರುವ ಉತ್ತಮ ಗುಣಮಟ್ಟದ ಪ್ರತಿಭೆ ಸಾಮರ್ಥ್ಯ ಕೊಳೆತು ಹೋಗುತ್ತದೆ. ಅಭದ್ರತಾ ಭಾವ ಬೆನ್ನು ಹತ್ತುತ್ತದೆ. ಇತರರೊಂದಿಗೆ ಬೆರೆತು ಬಾಳುವ ಶಕ್ತಿಯೂ ಕುಂದುತ್ತದೆ. ’ನಿನ್ನ ಭವಿಷ್ಯ ಏನಾಗುತ್ತದೆ ಎಂದು ನನಗೆ ಗೊತ್ತಿಲ್ಲ. ಆದರೆ ನನಗೆ ಒಂದು ವಿಷಯ ಮಾತ್ರ ತಿಳಿದಿದೆ. ಅದೆಂದರೆ ಬೇರೆಯವರ ಸೇವೆ ಮಾಡುವುದನ್ನು ಅರಸಿ ಹೇಗೆ ಸೇವೆ ಮಾಡುವುದೆಂದು ಅರಿತವರು ಮಾತ್ರ ಸಂತೊಷದಿಂದ ಇರುವರು ಎಂಬ ಸತ್ಯ.’ ಎಂದಿದ್ದಾನೆ ಫ್ರೆಂಚ್ ವೈದ್ಯ ಅಲ್ಬರ್ಟ್ ಶ್ವೆಟ್‌ಜರ್. ಸುಪ್ತವಾಗಿ ಹುದುಗಿರುವ ಪ್ರತಿಭೆಯನ್ನು ಹೊರಗೆಳೆದು ಸೇವೆ ಮಾಡುವ ಪ್ರಯತ್ನ ಮಾಡದೇ ಹೋದರೆ ನಿಮಗೆ ನಿರುದ್ಯೋಗ…

Read More

ಚಡಚಣ:ವೃತ್ತಿಯಲ್ಲಿ ಅತ್ಯಂತ ಪವಿತ್ರ, ಶ್ರೇಷ್ಠ ವೃತ್ತಿ ಅಂತಹ ವೃತ್ತಿಯಲ್ಲಿ ರಾಜಾರಾಮ‌ ಎಸ್.ಪಾಟೀಲ ಅವರ ಕೊಡುಗೆ ಅಪಾರವಾದದ್ದು ಎಂದು ಉಪನ್ಯಾಸಕ ಮಲಿಕ್ ಎಲ್‌ ಜಮಾದಾರ ಹೇಳಿದರು.ಸಮೀಪದ ಧುಮಕನಾಳ ಗ್ರಾಮದ ಶಿಕ್ಷಕ ರಾಜಾರಾಮ್ ಶ್ರೀ ಪಾಟೀಲ ಇವರು ಹಡಲಸಂಗ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಕ ವೃತ್ತಿ ಪೂರೈಸಿ ನಿವೃತ್ತಿಹೊಂದಿದ ಹಿನ್ನೆಲೆ ಸನ್ಮಾನಿಸಿ, ಗೌರವಿಸಿ ಮಾತನಾಡಿದ ಅವರು ಶಿಕ್ಷಕರು ಮಕ್ಕಳನ್ನು ಜ್ಞಾನ ಮತ್ತು ಸುಸಂಸ್ಕೃತರನ್ನಾಗಿ ಮಾಡುವವರು. ಒಬ್ಬ ಶಿಕ್ಷಕರು ದೇವರು ನೀಡಿದ ಸುಂದರವಾದ ಕೊಡುಗೆಯಾಗಿದೆ ಏಕೆಂದರೆ ದೇವರು ಇಡೀ ಪ್ರಪಂಚದ ಸೃಷ್ಟಿಕರ್ತ ಮತ್ತು ಶಿಕ್ಷಕ ಇಡೀ ರಾಷ್ಟ್ರದ ಸೃಷ್ಟಿಕರ್ತ. ಶಿಕ್ಷಕನು ಶೈಕ್ಷಣಿಕ ಜ್ಞಾನ, ನೈತಿಕ ಮೌಲ್ಯಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ನಮ್ಮ ವ್ಯಕ್ತಿತ್ವವನ್ನು ಉತ್ತಮ ಮನುಷ್ಯರನ್ನಾಗಿ ರೂಪಿಸಲು ಸಹಾಯ ಮಾಡುವ ನೈತಿಕ ಮೌಲ್ಯಗಳನ್ನು ಸಂಯೋಜಿಸುತ್ತಾರೆ.ಅಂತಹ ಶಿಕ್ಷಕ ವೃತ್ತಿಯಲ್ಲಿ ಅನರ್ಘ್ಯ ಸೇವೆ ಸಲ್ಲಿಸಿದ್ದಾರೆ ಅವರು ನಮಗೆ ಎಂದೆಂದಿಗೂ ಮಾರ್ಗದರ್ಶಕರಾಗಿದ್ದಾರೆ.ನನ್ನ ವೃತ್ತಿಯಲ್ಲಿ ಅವರ ನೀಡಿರುವ ಸಲಹೆ ಸೂಚನೆಗಳನ್ನು ಕರಗತವಾಗಿವೆ ಎಂದು ಹೇಳಿದರು.ಈ ವೇಳೆಯಲ್ಲಿ ನಿವೃತ್ತ ಶಿಕ್ಷಕ ರಾಜಾರಾಮ ಶ್ರೀ.ಪಾಟೀಲ ಮಾತನಾಡಿ ಶಿಕ್ಷಕ…

Read More

ಡಾ.ಶಶಿಕಾಂತ ಪಟ್ಟಣ* ರಾಮದುರ್ಗ – ಪುಣೆ *ಉದಯರಶ್ಮಿ ದಿನಪತ್ರಿಕೆ* ವೀರಶೈವರಿಗೆ ಪರ್ಯಾಯ ಸಂಘಟನೆಯೊಂದೇ ಪರಿಹಾರವಲ್ಲ, ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪಿತವಾಗಿ 121 ವರ್ಷಗಳು ಕಳೆದಿವೆ . ಅಂದಿನ ಕಾಲಕ್ಕನುಗುಣವಾಗಿ ವೀರಶೈವ ಲಿಂಗಾಯತ ಒಂದೇ ಎನ್ನುವ ಭಾವವಿತ್ತು ಅಭಿಪ್ರಾಯಗಳು ಒಂದೇ ಇದ್ದವು. ಉತ್ತರ ಕನ್ನಡ ಭಾಷೆಯಲ್ಲಿ ಕೇವಲ ಲಿಂಗಾಯತ ಇತ್ತು 1978 ರ ಈಚೆಗೆ ವೀರಶೈವ ದಕ್ಷಿಣದಿಂದ ಉತ್ತರ ಗಂಡು ಕನ್ನಡಿಗರ ಹೆಗಲ ಮೇಲೇರಿತು. ಇಂದು ಪರ್ಯಾಯ ಸಂಘಟನೆ ಮಾಡಿ ಸಂಘರ್ಷಕ್ಕಿಳಿಯುತ್ತೇವೆ ಎಂದೆನ್ನುವುದು ಒಂದು ಭ್ರಾ೦ತಿ ಭ್ರಮೆ. ಎಲ್ಲವೂ ಕೊನೆಗೊಳ್ಳುವುದು ರಾಜಕೀಯ ಲೆಕ್ಕಾಚಾರ. *ನನ್ನ ಕೆಲವು ಪ್ರಶ್ನೆಗಳು ಸಂಬಂಧಿತರು ಉತ್ತರಿಸಲಿ* ನ್ಯಾಯಮೂರ್ತಿ ಶ್ರೀ ನಾಗಮೋಹನದಾಸ ಅವರು ಸಲ್ಲಿಸಿದ ವರದಿ ಆಧಾರದ ಮೇಲೆ ಕರ್ನಾಟಕ ಅಂದಿನ ಸರಕಾರವು ಕೇಂದ್ರ ಮೈನಾರಿಟಿ ಇಲಾಖೆಗೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ಮೇಲೆ ಸಂಬಂಧಿತ ಲಿಂಗಾಯತ ಮಠಗಳು ಸಂಘಟನೆಗಳು ಕಳೆದ ಏಳು ವರ್ಷಗಳಿಂದ ಮತ್ತೆ ಪುಷ್ಠೀಕರಿಸಿದ ಅರ್ಜಿಯನ್ನು ಏಕೆ ಸಲ್ಲಿಸಲಿಲ್ಲ? ಅವತ್ತಿನ ಸಮ್ಮಿಶ್ರ ಸರಕಾರ ಕೇಂದ್ರ ಸರಕಾರಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಬಸವೇಶ್ವರ ವೃತ್ತದಲ್ಲಿ ಕಾಶ್ಮೀರದ ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕ್ಷಿಪಣಿ ದಾಳಿ ಕೈಗೊಂಡಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಬುಧವಾರ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.ಭಾರತ ಮಾತಾ ಕೀ ಜೈ, ಭಾರತೀಯ ಸೈನ್ಯಕ್ಕೆ ಜೈ, ಪಾಪಿ ಪಾಕಿಸ್ತಾನಕ್ಕೆ ಧಿಕ್ಕಾರ ಘೋಷಣೆಗಳನ್ನು ಕೂಗುತ್ತಾ ಬಸವೇಶ್ವರ ವೃತ್ತದಲ್ಲಿ ಸೇರಿದ ರಾಷ್ಟ್ರೀಯ ಬಸವಸೈನ್ಯದ ಕಾರ್ಯಕರ್ತರು ನಂತರ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವದಲ್ಲಿ ರಾಷ್ಟ್ರೀಯ ಬಸವಸೈನ್ಯದ ಕಾರ್ಯಕರ್ತರು ತ್ರಿವರ್ಣ ಧ್ವಜಗಳನ್ನು ಹಿಡಿದು ಸಂಭ್ರಮಿಸಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ನಮ್ಮ ಹೆಮ್ಮೆಯ ಭಾರತೀಯ ಸೈನ್ಯದ ಜೊತೆ ನಾವು ಸದಾ ಇದ್ದೇವೆ. ನಿನ್ನೆ ಮದ್ಯರಾತ್ರಿ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆ ಕ್ಷಿಪಣಿ ದಾಳಿ ಮಾಡಿ ಉಗ್ರರ ಅಡುಗು ತಾಣಗಳನ್ನು ನಾಶ ಮಾಡಿ ಅನೇಕ ಉಗ್ರರನ್ನು ಸದೆ ಬಡಿದ ಭಾರತೀಯ ಸೈನ್ಯದ ಅಪರೇಷನ್…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಂಸಾರದಲ್ಲಿ ಗಂಡು-ಹೆಣ್ಣು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಬ್ಬರು ಸಾಮರಸ್ಯದಿಂದ ಜೀವನ ಮಾಡಿದರೆ ಸಂಸಾರ ಸುಖಮಯವಾಗಿರುತ್ತದೆ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಅರಳಿಚಂಡಿ ಗ್ರಾಮದ ಗ್ರಾಮದೇವತೆ ಆದಿದೇವಿಶಕ್ತಿ ಜಾತ್ರಾಮಹೋತ್ಸವದಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಉಡಿ ತುಂಬುವ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಉಪದೇಶಾಮೃತ ನೀಡಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಮಹಿಳೆಯರಿಗೆ ಅನಾದಿ ಕಾಲದಿಂದಲೂ ಪೂಜನೀಯ ಸ್ಥಾನ ನೀಡಲಾಗಿದೆ. ಜನ್ಮ ನೀಡಿದ ತಾಯಿಯನ್ನು, ಪ್ರತಿಯೊಬ್ಬ ಪತಿ ತನಗಾಗಿ ಜನ್ಮ ಪಡೆದ ಪತ್ನಿಯನ್ನು, ಜನ್ಮ ಪಡೆದ ಮಗಳನ್ನು ಈ ಮೂವರು ಮಹಿಳೆಯನ್ನು ಪ್ರೀತಿಸುವಂತಾದರೆ ಮಹಿಳೆಯರಿಗೆ ನಿಜವಾದ ಗೌರವ ನೀಡಿದಂತೆ. ಪ್ರತಿಯೊಬ್ಬರಿಗೂ ಮಹಿಳೆಯರಿಗೆ ಗೌರವ ನೀಡಿದರೆ ನಮ್ಮ ಸಂಸ್ಕ್ರತಿ ಉಳಿದಂತಾಗುತ್ತದೆ ಎಂದರು.ಭಾರತ ದೇಶದಲ್ಲಿ ದೈವ ಶಕ್ತಿ ಅಪಾರವಾಗಿದೆ. ಪ್ರತಿಯೊಬ್ಬರೂ ತಮಗೆ ಕಷ್ಟ ಬಂದಾಗ ದೇವರ ಮೊರೆ ಹೋಗಿ ಪರಿಹಾರ ಕಾಣುವದು ಸಹಜ. ಅರಳಿಚಂಡಿ ಗ್ರಾಮದಲ್ಲಿರುವ ಗ್ರಾಮದೇವತೆ ಆದಿಶಕ್ತಿದೇವತೆಯು ಅಪಾರ ಶಕ್ತಿಯನ್ನು ಹೊಂದಿದ್ದಾಳೆ. ಈ ದೇವಿಯಲ್ಲಿ ಕಷ್ಟವನ್ನು ಹೇಳಿಕೊಂಡು ಬಂದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಸಿಂದಗಿ ಮತಕ್ಷೇತ್ರದ ಗುಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಗುಗಿಹಾಳ ಗ್ರಾಮಸ್ಥರಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ೨೦೨೩ರ ಸಿಂದಗಿ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಯಲ್ಲಿ ಗುಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗು ಮಾಡುತ್ತೇನೆ ಎಂದು ಹೇಳಿದ್ದೆ. ಅವರಿಗೆ ಕೊಟ್ಟ ಮಾತಿನಂತೆ ಗುಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಿರುವೆ. ಇದಕ್ಕೆ ಸಹಕರಿಸಿದ ರಾಜ್ಯ ಸರಕಾರದ ಸಿಎಂ, ಡಿಸಿಎಂ, ಕಂದಾಯ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ ಎಂದರು.ಇದೇ ಸಂದರ್ಭದಲ್ಲಿ ಕಾಂತನಗೌಡ ಪಾಟೀಲ, ಹಮಿದ ಚೌಧರಿ, ಲಕ್ಷ್ಮಣ ಗುಗಿಹಾಳ, ಚಾಂದ ಕಸಾಬ, ಮಾಶ್ಯಾಕ ಕಸಬ್, ಸೈಪಾಂ ಕಸಬ್, ಸೈಪನ ಚೌಧರಿ, ಗುಲಾಮ ಕೊರಬು, ವಜೀರ ಗುಗಿಹಾಳ ಸೇರಿದಂತೆ ಅನೇಕರಿದ್ದರು.

Read More

ಶ್ರೀಶೈಲದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ದೇಶ ಧರ್ಮಪ್ರಧಾನವಾಗಿರುವ ದೇಶ. ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ. ಪ್ರಸಂಗ ಬಂದರೆ ನಮ್ಮ ಜನತೆ ಧರ್ಮ ಮತ್ತು ದೇವರಿಗಾಗಿ ಎಂತಹ ತ್ಯಾಗಕ್ಕೂ ಸನ್ನದ್ಧರಾಗುತ್ತಾರೆ ಎಂದು ಶ್ರೀಶೈಲದ ೧೦೦೮ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ನುಡಿದರು.ಪಟ್ಟಣದ ವಿನಾಯಕ ನಗರದ ಶ್ರೀ ವಿನಾಯಕ ಹಾಗೂ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರರ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.ಪ್ರಪಂಚದಲ್ಲಿ ಎರಡು ಪ್ರಕಾರದ ದೇವಾಲಯಗಳಿವೆ. ದೇವರು ಬಂದು ನೆಲೆಸಲೆಂದು ಭಕ್ತರೆಲ್ಲ ಕೂಡಿ ನಿರ್ಮಿಸಿದ ದೇವಾಲಯಗಳು ಒಂದು ಪ್ರಕಾರದ್ದಾದರೆ ದೇವರು ಭಕ್ತರ ಕಷ್ಟಗಳನ್ನು ಪರಿಹರಿಸಲು ತಾನೇ ನಿರ್ಮಿಸಿಕೊಂಡ ದೇವಾಲಯಗಳು ಮತ್ತೊಂದು ಪ್ರಕಾರದ್ದಾಗಿವೆ. ಇಲ್ಲಿನ ದೇವಾಲಯ ನಿರ್ಮಿಸಲು ನೀವೆಲ್ಲ ಸಾಕಷ್ಟು ಶ್ರಮ ಪಟ್ಟಿದ್ದೀರಿ ಇದು ಮಾನವ ನಿರ್ಮಿತ ದೇವಾಲಯ. ಇನ್ನು ದೇವ ನಿರ್ಮಿತ ದೇವಾಲಯ ಎಂದರೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಸರಕಾರ ಯುವಜನ ಹಾಗೂ ಕ್ರೀಡಾ ಇಲಾಖೆಯ ಮೂಲಕ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಯಶವಂತರಾಯ ಗೌಡ ಪಾಟೀಲ ತಿಳಿಸಿದರು.ಅವರು ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕ ಕ್ರೀಡಾಂಗಣದ ಅಭಿವೃದ್ಧಿಯ ಕುರಿತು ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದರು,ತಾಲೂಕಿನ ಕ್ರೀಡಾಪಟುಗಳಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.ಕ್ರಿಕೆಟ್, ಹಾಕಿ, ಫುಟ್ಬಾಲ್,ವಾಲಿಬಾಲ್, ಸೇರಿದಂತೆ ಇಂಡೋರ್ ಹಾಗೂ ಔಟ್ ಡೋರ್ ಆಟಗಳನ್ನು ಆಡಿಸಲು ಪ್ರಯತ್ನಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಅಂಕ ಕ್ರೀಡಾಂಗಣ ಕ್ರೀಡಾಪಟುಗಳಿಗೆ ಅನುಕೂಲವಾಗಬೇಕು ವಿದ್ಯಾರ್ಥಿಗಳು ಹಾಗೂ ಹಿರಿಯರು ಅಲ್ಲಿ ಬಂದು ಕಾಲ ಕಳೆಯುವಂತಹ ವಾತಾವರಣ ನಿರ್ಮಾಣ ಆಗಬೇಕು.ಬೇರೆ ಬೇರೆ ತಾಲೂಕುಗಳು ಜನ ಇಂಡಿ ಕ್ರೀಡಾಂಗಣ ನೋಡಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವಂತೆ ಮಾದರಿ ಕ್ರೀಡಾಂಗಣ ಮಾಡಲು ಸೂಚಿಸಿದರು.ಈ ಸಂದರ್ಭದಲ್ಲಿ ಯುವಜನ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಗಿ, ಪುರಸಭೆ ಮುಖ್ಯ…

Read More

ಶ್ರೀ ಪದ್ಮರಾಜ ಮಹಿಳಾ ಪದವಿ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಓದಿನೊಂದಿಗೆ ಸಾಧನೆ ಮಾಡಲು ಬಡತನ ಎಂಬುದು ಅಡ್ಡಿಯಾಗಲಾರದು. ನನ್ನ ಈ ಸಾಧನೆಗೆ ನನ್ನ ಕುಟುಂಬ ಪಾತ್ರ ಹಿರಿದಾದದ್ದು ಎಂದು ವೈದ್ಯಾಧಿಕಾರಿ ಪ್ರಾ.ಆ.ಕೇಂದ್ರ ಮಡಕೇಶ್ವರ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ೪೮೨ ರ‍್ಯಾಂಕ್ ಪಡೆದ ಡಾ.ಮಹೇಶ ಆರ್.ಮಡಿವಾಳರ ಹೇಳಿದರು.ಪಟ್ಟಣದ ಶ್ರೀ ಪದ್ಮಾರಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀಪದ್ಮರಾಜ ಮಹಿಳಾ ಪದವಿ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ದಿಕ್ಕು ಬದಲಾವಣೆ ಮಾಡುವುದೇ ಪದವಿ. ಮನೆಯ ಜವಾಬ್ದಾರಿಯಲ್ಲಿ ಪುರುಷನಷ್ಟೇ ಪಾತ್ರ ಮಹಿಳೆಯದ್ದು ಆಗಿರುತ್ತದೆ. ಮಹಿಳೆ ಹೆಚ್ಚಿನ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿಯಲ್ಲಿಯೇ ಸಾಧನೆ ಮಾಡಲೇಬೇಕು. ಅಸಮಾನತೆ, ಬಡತನ ಇವೆಲ್ಲವನ್ನು ಮೆಟ್ಟಿನಿಂತು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ನಿರಂತರವಾಗಿ ಓದಿನಲ್ಲಿ ತೊಡಗಿಕೊಳ್ಳಬೇಕು. ಶಿಕ್ಷಣ. ಶಾಂತಿ, ಸತ್ಯ, ಅಹಿಂಸೆ ಮಾರ್ಗದಿಂದ ಮೊದಲು ಎಲ್ಲವನ್ನು ಪಾಲಿಸೋಣ. ವಿದ್ಯಾರ್ಥಿಗಳು ಓದಿನಲ್ಲಿ…

Read More