Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ನಗರದ ಆಡುಗೋಡಿಯ ಪೊಲೀಸ್ ಕಾನ್ ಸ್ಟೇಬಲ್ ತುಕಾರಾಮ ಜಮಾದಾರ 2024 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.ಪ್ರತಿ ವರ್ಷ ಪೋಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಹಾಗೂ ವಿಶೇಷ ಸಾಧನೆಗೈದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಏಪ್ರಿಲ್ 2ರ ಪೊಲೀಸ್ ಧ್ವಜ ದಿನಾಚರಣೆಯಂದು ಮಾನ್ಯ ಮುಖ್ಯಮಂತ್ರಿಗಳು ಈ ಪದಕ ಪ್ರದಾನ ಮಾಡಲಿದ್ದಾರೆ.ತುಕಾರಾಮ ಜಮಾದಾರ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ 67 ನೇ ಅಖಿಲ ಭಾರತ ಪೊಲೀಸ್ ಕರ್ತವ ಕೂಟದಲ್ಲಿ ಸ್ಫೋಟಕ ಪತ್ತೆ ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕವನ್ನು ಗೆದ್ದು, ಪೊಲೀಸ್ ಇಲಾಖೆಯ ಘನತೆಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ 2 ಲಕ್ಷ ನಗದು ಬಹುಮಾನ ಕೂಡಾ ಪಡೆದಿದ್ದಾರೆ.ಇವರ ಈ ಸೇವಾ ಸಾಧನೆಯನ್ನು ಗುರುತಿಸಿ ಸರ್ಕಾರ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ ಮಾಡಿದೆ. ಮೂಲತಃ ಕರ್ನಾಟಕ ಗಡಿ ಭಾಗದ ಅಕ್ಕಲಕೋಟೆಯ ತುಕಾರಾಮ ಜಮಾದಾರ ಕಳೆದ 6 ವರ್ಷಗಳಿಂದ ಬೆಂಗಳೂರು ನಗರದ ಪೊಲೀಸ್ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ವಿಭಾಗದ ಐಸು ಶ್ವಾನದ ಪರಿಚಾಲಕರಾಗಿ ಕರ್ತವ್ಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕಾಲುವೆ ಜಾಲಗಳ ಮೂಲಕ ಕೆರೆ ತುಂಬಿಸುವ ಸಂದರ್ಭದಲ್ಲಿ ಕುಡಿಯುವ ನೀರು ಅನ್ಯ ಕಾರ್ಯಕ್ಕೆ ಬಳಕೆ ಹಾಗೂ ನೀರು ಪೋಲಾಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮಂಗವಾರ ಸಂಜೆ ವಿಡಿಯೋ ಸಂವಾದದ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಮುಂದಿನ ಜೂನ್ವರೆಗೆ ಯಾವುದೇ ಸಮಸ್ಯೆಯಾಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಯಾವುದೇ ಅಭಾವವಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಜಿಲ್ಲೆಯಲ್ಲಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ಅವಶ್ಯಕತೆ ಇದ್ದಲ್ಲಿ ಮುಂಚಿವಾತವಾಗಿ ಮಾಹಿತಿ ಸಲ್ಲಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಟ್ಯಾಂಕರ್…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಚಂದ್ರಗಿರಿ ದೇವಿ ಜಾತ್ರಾ ಮಹೋತ್ಸವ ಹಾಗೂ ಹನುಮಾನ ದೇವರ ಓಕಳಿಯ ನಿಮಿತ್ತ ಹಾಲೋಕಳಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು.ಕುಂಬಾರ ಹಳ್ಳ ಗ್ರಾಮದ ಮಾಳಿ ಮತ್ತು ಮಾರಾಯ ಸಿದ್ದ ಓಣಿಯ ಯುವಕರ ಮಧ್ಯ ಜರುಗಿದ ಓಕಳಿಯು ಅತ್ಯಂತ ತುರಿಸಿನಿಂದ ಕೂಡಿತ್ತು, ಯುವಕರು ಓಕಳಿಯ ಕಂಬ ಏರುವುದು ಅತ್ಯಂತ ರೋಚಕವಾಗಿತ್ತು.ಜಾತ್ರಾ ಮಹೋತ್ಸವ ಹಾಗೂ ಓಕಾಳಿಯ ಮುಂದಾಳತ್ವವನ್ನು ಹಿರಿಯರಾದ ನ್ಯಾಯವಾದಿ ಸದಾಶಿವ ನ್ಯಾಮಗೌಡ, ಪಿಕೆಪಿಎಸ್ ಸದಸ್ಯ ದುಂಡಪ್ಪ ಬಾಡಗಿ, ನಾಗಪ್ಪ ಸೊನ್ನದ, ಪಿ ಎಲ್ ಡಿ ಇ ಬ್ಯಾಂಕ್ ನಿರ್ದೇಶಕ ಬಸವರಾಜ್ ಮರನೂರ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಧರೆಪ್ಪ ಮಂಟೂರ, ಚಾರ್ಟೆಡ್ ಅಕೌಂಟ್ ಧರೆಪ್ಪ ಮರನೂರ, ಗ್ರಾಮ ಪಂಚಾಯತ್, ಪಿಕೆಪಿಎಸ್, ಹಾಲು ಉತ್ಪಾದಕ ಮಂಡಳಿ, ಹಾಗೂ ಸಂಕಲ್ಪ ಸಮಿತಿಯ ಸದಸ್ಯರು ವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸ್ವ- ಸಹಾಯ ಸಂಘಗಳು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಮತ್ತು ಸಕಾಲದಲ್ಲಿ ಆರ್ಥಿಕ ಸಹಾಯ ಒದಗಿಸುವಲ್ಲಿ ತುಂಬಾ ಅನುಕೂಲಕರವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಿಜಯಪುರ ಜಿಲ್ಲಾ ನಿರ್ದೇಶಕರು ಸಂತೋಷ್ ಕುಮಾರ್ ತಿಳಿಸಿದರುತಾಲೂಕಿನ ಕಾಶಿನಕುಂಟಿ ಗ್ರಾಮದಲ್ಲಿ ೨೮೫೧ನೇ ನೂತನ ಸ್ವ ಸಹಾಯ ಸಂಘ ಉದ್ಘಾಟನೆ ಮಾಡಿ ದಾಖಲಾತಿ ಹಸ್ತಾಂತರಿಸಿ ಅವರು ಮಾತನಾಡಿದರು.ಸಮ್ಮ ಸಂಸ್ಥೆಯ ಯೋಜನೆ ಕಾರ್ಯಕ್ರಮಗಳಾದ ಅರೋಗ್ಯ ರಕ್ಷಾ, ಸಂಪೂರ್ಣ ರಕ್ಷಾ, ನಿರ್ಗತಿಕರಿಗೆ ಮಾಶಾಸನ ದೊರಕಿಸಿ ಕೊಡುವುದು, ದೇವಸ್ಥಾನಗಳಿಗೆ ಅನುದಾನ ವಿತರಣೆ, ಕೆರೆ ಕಾಮಗಾರಿ ಹೀಗೆ ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಅದರ ಜೊತೆಗೆ ಸ್ವ ಸಹಾಯ ಸಂಘಗಳನ್ನು ರಚಿಸಿ ಗ್ರಾಮೀಣ ಭಾಗದ ಜನತೆಯ ಜೀವನ ಸುಧಾರಿಸುವ ಕಾರ್ಯವನ್ನು ನಮ್ಮ ಸಂಸ್ಥೆ ಮಾಡುತ್ತಿದೆ ಎಂದರು.ತಾಲೂಕಿನ ಯೋಜನಾಧಿಕಾರಿ ನಾಗೇಶ ಎನ್.ಪಿ ಮಾತನಾಡಿ ಸಂಘ ಗಳನ್ನು ಸಮರ್ಪಕವಾಗಿ ನಡೆಸುವಲ್ಲಿ ಆಯಾ ಭಾಗದ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಬೇಕು. ಸಂಘದ ಎಲ್ಲ ಸದಸ್ಯರು ಸಂಘದ ಉಳಿತಾಯ ಮತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಬೇಕು ಎಂದು ಜಿಲ್ಲಾ ಗಾಣಿಗ ಸಮಾಜದ ಮುಖಂಡರು ಒತ್ತಾಯಿಸಿದರು.ಈ ಕುರಿತು ನಗರದಲ್ಲಿ ಜಿಲ್ಲಾ ಗಾಣಿಗ ಸಮಾಜ ಸಂಘದಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಬಾಬು ಸಜ್ಜನ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಒಬ್ಬ ಅತ್ಯುತ್ತಮ ಸಂಘಟಕರಾಗಿದ್ದು, ಈ ಹಿಂದೆ ಜಿಲ್ಲಾ ಪಂಚಾಯತ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷದ ಬಲವರ್ಧನೆಗೆ ತಮ್ಮದೇ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ.ಈ ಹಿಂದೆ ಲೋಣಿಯವರು ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ವಂಚಿತರಾದಾಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬೆರಳಣಿಕೆ ಮತಗಳಿಂದ ಪರಭಾವಗೊಂಡರೂ ತೀವ್ರ ಸ್ಪರ್ಧೆ ನೀಡಿ ತಮ್ಮ ಸಾಮರ್ಥ್ಯ ಸಾಭೀತುಪಡಿಸಿದ್ದರು. ತದ ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಎಂಎಲ್ಸಿ ಸುನೀಲಗೌಡ ಪಾಟೀಲ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಅವರನ್ನು ಸಿಎಂ,ಡಿಸಿಎಂ ಸಮ್ಮುಖದಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಗಣೇಶ ನಗರ ನಗರದಲ್ಲಿ ಮಂಗಳವಾರ ಆರೋಗ್ಯ ಇಲಾಖೆಯ 15 ನೇ ಹಣಕಾಸು ಆಯೋಗದ ಅಡಿಯಲ್ಲಿ ನಮ್ಮ ಕ್ಲಿನಿಕ್ ಅನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ನಮ್ಮ ಕ್ಲಿನಿಕ್ಗಳು ನಗರ ಪ್ರದೇಶದ ಬಡವರ ಆರೋಗ್ಯ ಸಂಜೀವಿನಿಯಾಗಿದ್ದು. ರಾಜ್ಯದಲ್ಲಿ ಒಟ್ಟು 817 ನಮ್ಮ ಕ್ಲಿನಿಕ್ಗಳು ಅನುಮೋದನೆಯಾಗಿವೆ. ಮೊದಲನೇ ಹಂತದಲ್ಲಿ 2021-22 ರಲ್ಲಿ 438, ಎರಡನೇ ಹಂತದಲ್ಲಿ 2022-23 ರಲ್ಲಿ 125, ಮೂರನೇ ಹಂತದಲ್ಲಿ 2024-25 ರಲ್ಲಿ 254 ನಮ್ಮ ಕ್ಲಿನಿಕ್ಗಳು ಅನುಮೋದನೆಯಾಗಿವೆ. ಮತಕ್ಷೇತ್ರದಲ್ಲಿ ಈಗಾಗಲೇ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿಯಲ್ಲಿ ಮೊದಲ ಹಂತದಲ್ಲಿ ನಮ್ಮ ಕ್ಲಿನಿಕ್ಗಳು ಆರಂಭವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇದೀಗ ಬಸವನಬಾಗಾವಾಡಿ, ಮನಗೂಳಿಯಲ್ಲಿ ಒಂದೊಂದು ನಮ್ಮ ಕ್ಲಿನಿಕ್ಗಳು ಆರಂಭಿಸಲಾಗುತ್ತಿದೆ. ಪಟ್ಟಣ ಪ್ರದೇಶದ ಜನರಿಗೆ ನಮ್ಮ ಕ್ಲಿನಿಕ್ ನಿಂದ ಉತ್ತಮ ಆರೋಗ್ಯ ಸೌಲಭ್ಯ ದೊರೆಯಲೆಂದು ಹಾರೈಸಿದರು.ಈ ಸಂದರ್ಭದಲ್ಲಿ ಸಹಕಾರ ಮಹಾಮಂಡಳ ನಿರ್ದೇಶಕ ಐ. ಸಿ. ಪಟ್ಟಣಶೆಟ್ಟಿ, ಪುರಸಭೆ ನೂತನ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿರುವುದನ್ನು ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಬಿ.ಕೆ.ಕಲ್ಲೂರ ಖಂಡಿಸಿದ್ದಾರೆ.ಬಿಜೆಪಿ ಪಕ್ಷ ಕಟ್ಟಿ ಬೆಳೆಸುವಲ್ಲಿ ಇತರ ನಾಯಕರೊಂದಿಗೆ ಶ್ರಮಿಸುವುದರೊಂದಿಗೆ ಭ್ರಷ್ಟಾಚಾರ, ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ದ ಧ್ವನಿ ಎತ್ತುವ ಮೂಲಕ ರಾಜ್ಯದಲ್ಲಿ ತಮ್ಮದೇಯಾದ ಛಾಪು ಮೂಡಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.ಬಸನಗೌಡರಂತಹ ಜನನಾಯಕನನ್ನು ಬಿಜೆಪಿ ಪಕ್ಷ ಆರು ವರ್ಷಗಳ ಕಾಲ ಉಚ್ಚಾಟಿಸಿರುವ ಬಿಜೆಪಿ ಕಾರ್ಯಕರ್ತರಿಗಲ್ಲದೇ ಪಕ್ಷಾತೀತ, ಜಾತ್ಯತೀತವಾಗಿ, ಹಿಂದೂ ಬಾಂಧವರಿಗೆ ನೋವನ್ನುಂಟು ಮಾಡಿದೆ. ಬಿಜೆಪಿ ಹೈಕಮಾಂಡ್ ಕೂಡಲೇ ಪರಿಶೀಲಿಸಿ ಉಚ್ಚಾಟನೆಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ಕಮಿಟಿ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬಸವನಬಾಗೇವಾಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸದಸ್ಯೆ ಜಗದೇವಿ ಗುಂಡಳ್ಳಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸದಸ್ಯ ಅಶೋಕ ಹಾರಿವಾಳ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಘೋಷಿಸಿದರು.ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಗದೇವಿ ಗುಂಡಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಸದಸ್ಯರಾದ ಅಶೋಕ ಹಾರಿವಾಳ, ನಜೀರ ಗಣಿ, ಬಿಜೆಪಿ ಪಕ್ಷದ ಸದಸ್ಯ ಅಶೋಕ ಸಂಪನ್ನವರ ನಾಮಪತ್ರ ಸಲ್ಲಿಸಿದ್ದರು. ಸದಸ್ಯ ನಜೀರ ಗಣಿ ನಾಮಪತ್ರ ಹಿಂದಕ್ಕೆ ಪಡೆದರು. ಅಶೋಕ ಹಾರಿವಾಳ ಪರವಾಗಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ 19 ಸದಸ್ಯರು ಕೈ ಎತ್ತಿದ್ದರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ಸದಸ್ಯ…
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿ ಠೇವಣಿದಾರರಲ್ಲಿ ಮುಗಿಲು ಮುಟ್ಟಿದ ಆತಂಕ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯಲ್ಲಿಟ್ಟಿದ್ದಠೇವಣಿದಾರರ ಹಣವನ್ನು ಮರಳಿಸಲು ಯಾವುದೇ ದಿಟ್ಟ ಕ್ರಮಕ್ಕೆ ಮುಂದಾಗದೇ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ ನೊಂದ ಠೇವಣಿದಾರರು ಆಕ್ರೋಶಭರಿತರಾಗಿ ಹೋರಾಟದ ಹಾದಿ ತುಳಿಯುವ ನಿರ್ಧಾರಕ್ಕೆ ಬಂದಿದ್ದಾರೆ.ಈ ಕುರಿತು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ ನೊಂದ ಠೇವಣಿದಾರರು,ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳು. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ. ಸಹಕಾರ ಕ್ಷೇತ್ರ, ಕಂದಾಯ ಇಲಾಖೆ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ. ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು ತಮ್ಮ ಉಳಿತಾಯಕ್ಕಾಗಿ ಭವಿಷ್ಯಕ್ಕಾಗಿ ಠೇವಣಿ ಹಣವನ್ನ ಇಟ್ಟಿದ್ದರು. ಚಿತ್ರ ಉದ್ಯಮಿ ಆನಂದ ಅಪ್ಪುಗೋಳ ಎಂಬ ವಂಚಕ ಠೇವಣಿದಾರರಿಗೆ ಪಂಗನಾಮ ಹಾಕಿದ್ದು ಸಾವಿರಾರು ಕೋಟಿ…
ರಂಜಾನ್ ಹಬ್ಬದ ಮರುದಿನ ಮುಸ್ಲಿಮರು ಆಲಮಟ್ಟಿಯ ಉದ್ಯಾನಕ್ಕೆ ಭೇಟಿ ನೀಡುವುದು ವಾಡಿಕೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ರಂಜಾನ್ ಹಬ್ಬದ ಅಂಗವಾಗಿ ಆಲಮಟ್ಟಿಯ ವಿವಿಧ ಉದ್ಯಾನಗಳಿಗೆ ಮಂಗಳವಾರ ೧೦ ಸಾವಿರಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದರು.ರಾಕ್ ಉದ್ಯಾನವಂತೂ ಪ್ರವಾಸಿಗರಿಂದ ತುಂಬಿತ್ತು.ಪ್ರತಿ ವರ್ಷ ರಂಜಾನ್ ಹಬ್ಬದ ಮರುದಿನ ಮುಸ್ಲಿಮರು ಆಲಮಟ್ಟಿಯ ವಿವಿಧ ಉದ್ಯಾನಕ್ಕೆ ಭೇಟಿ ನೀಡುವುದು ಹೆಚ್ಚು.ಬೆಳಿಗ್ಗೆಯಿಂದಲೇ ಕಾರು, ಟಂಟಂ, ಬಸ್ ಹಾಗೂ ರೈಲಿನ ಮೂಲಕ ಆಗಮಿಸಿದ ಸಹಸ್ರಾರು ಪ್ರವಾಸಿಗರು ರಾಕ್ ಉದ್ಯಾನದ ಮುಂದೆ ಟಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡು ಬಂತು.ಮಧ್ಯಾಹ್ನದ ನಂತರ ಉದ್ಯಾನ ಗಳಲ್ಲಿ ಜನಜಂಗುಳಿ ಇನ್ನಷ್ಟು ಹೆಚ್ಚಿತು. ಸಂಜೆಯವರೆಗೂ ಜನ ಬರುತ್ತಲೆ ಇದ್ದರು. ಬುತ್ತಿ ಕಟ್ಟಿಕೊಂಡು ಕುಟುಂಬ ಸಮೇತರಾಗಿ ಬಂದು ರಾಕ್ ಉದ್ಯಾನ ಸೇರಿ ನಾನಾ ಕಡೆ ಊಟ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೃಷ್ಣಾ ನದಿಯ ತಟದಲ್ಲಿಯೂ ಜನಜಂಗುಳಿ ಹೆಚ್ಚಿತ್ತು.ಟಂಟಂ, ಟ್ರಾಕ್ಸ್, ಕಾರ್, ಬೈಕ್, ಮೂಲಕ ಉದ್ಯಾನಕ್ಕೆ ಬರುವವರ ಸಂಖ್ಯೆಯೂ ಹೆಚ್ಚಿತ್ತು. ಚಕ್ಕುಲಿ, ಐಸ್ಕ್ರೀಂ, ನೀರು, ದಿಢೀರ್ ಫೋಟೋ…
