Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸದೃಢವಾದ ಶರೀರದ ರಚನೆಯಲ್ಲಿ ಆಹಾರವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ನಿಟ್ಟಿನಲ್ಲಿ ಜನತೆ ಆಹಾರದ ಕಡೆಗೆ ಹೆಚ್ಚು ಗಮನ ಹರಿಸುವ ಅಗತ್ಯವಿದೆ ಎಂದು ಪಟ್ಟಣದ ಖ್ಯಾತ ವೈದ್ಯ ಡಾ. ಎನ್.ಬಿ.ವಜೀರಕರ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಐಕ್ಯೂಎಸಿ,ವಿಜಯಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಮಹಿಳಾ ವೇದಿಕೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿದಿನ ಊಟದಲ್ಲಿ ಧಾನ್ಯ, ತರಕಾರಿ ,ದ್ವಿದಳ ಧಾನ್ಯ, ಸಿರಿಧಾನ್ಯ ಮೊಳಕೆ ಒಡೆದ ಕಾಳುಗಳು ಬಳಸಬೇಕು. ಬೇಯಿಸದೇ ಇರುವ ತರಕಾರಿಗಳಾದ ಗಜ್ಜರಿ , ಸೌತೆಕಾಯಿ, ಮೂಲಂಗಿ , ಬಿಟರೂಟ್, ಈರುಳ್ಳಿ , ಬೆಳ್ಳುಳ್ಳಿ ಅನೇಕ ತರಕಾರಿಯನ್ನು ಹೆಚ್ಚಿಗೆ ಬಳಸಬೇಕು. ಮಾಂಸ ಆಹಾರಕ್ಕಿಂತ ಸಸ್ಯ ಆಹಾರವು ಆರೋಗ್ಯಕ್ಕೆ ಹೆಚ್ಚಿನ ಶಕ್ತಿ ತಂದುಕೊಡುತ್ತದೆ. ದೀರ್ಘಕಾಲದವರೆಗೆ ಸದೃಢವಾದ ಶರೀರವನ್ನು ಕಾಪಾಡಿಕೊಳ್ಳಲು ಬೇಕರಿ ಮತ್ತು ಕರಿದ ಪದಾರ್ಥಗಳಿಂದ ದೂರ ಇರಬೇಕು. ವಯಸ್ಕರು ಪ್ರತಿದಿನ ಮೂರರಿಂದ ಮೂರುವರೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವ್ಯಕ್ತಿ ಶ್ರೀಮಂತನಾಗುತ್ತಾ ಹೋದಂತೆ ವಿಚಾರ ಮತ್ತು ನಡವಳಿಕೆ ಮೃಗವಾಗುತ್ತಾ ಹೋಗಿ ಜ್ಞಾನಿಯಾಗುತ್ತಿದ್ದಂತೆ ಆತನ ವಿಚಾರಗಳಲ್ಲಿ ನಡವಳಿಕೆಗಳಲ್ಲಿ ಗುರುವಾಗುತ್ತಾ ಹೋಗುತ್ತಾನೆ ಎಂದು ಪ್ರಾಚಾರ್ಯ ಕೆ.ಜಿ. ಲಮಾಣಿ ಹೇಳಿದರು.ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕೂಡಗಿಯಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ಪಡೆದ ಸಮಾಜಶಾಸ್ತ್ರದ ಹಿರಿಯ ಉಪನ್ಯಾಸಕರಾದ ಪ್ರೊ: ಬಸವರಾಜ ಜಾಲವಾದಿಯವರ ಅಭಿನಂದನಾ ಸಮಾರಂಭದ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ್ತಿದ್ದರು.೨೩ ಜಿಲ್ಲೆಗಳಿಗೆ ದೊರೆಯದ ಈ ಪ್ರಶಸ್ತಿ ನಮ್ಮ ಜಿಲ್ಲೆಗೆ ಬಸವಣ್ಣನ ಈ ನೆಲಕ್ಕೆ ಅದೂ ನಮ್ಮ ಕಾಲೇಜಿಗೆ ಇವರ ರೂಪದಲ್ಲಿ ದೊರಕಿದ್ದು ಭಾಗ್ಯವೇ ಸರಿ ಎಂದರು. ಇಂತಹ ಧನಾತ್ಮಕ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಪ್ರೇರೇಪಣೆಗೊಂಡು ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕೆಂದು ಕರೆಕೊಟ್ಟರು.ಪ್ರಾಸ್ಥಾವಿಕ ಮಾತುಗಳನ್ನಾಡಿದ ಪ್ರೊ: ವ್ಹಿ.ಜಿ. ಕಿವುಡಜಾಡರ್ ಮಾತನಾಡಿ, ಅನುಕರಣನೀಯ ವ್ಯಕ್ತಿತ್ವ ಹೊಂದಿದ ಜಾಲವಾದಿಯವರಿಂದ ವಿದ್ಯಾರ್ಥಿಗಳು ಬಹಳ ಕಲಿಯುವುದಿದೆ. ಇಂತಹ ಅರ್ಹ ವ್ಯಕ್ತಿತ್ವದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದಾಗ ಆ ಪ್ರಶಸ್ತಿಗೆ ಘನತೆ ಬರುತ್ತೆ ಅದಕ್ಕಾಗಿ ರಾಜ್ಯಮಟ್ಟದ ಆಯ್ಕೆ ಸಿಬ್ಬಂದಿಗೆ ಧನ್ಯವಾದಗಳು ಎಂದರು.ಎಸ್.ಬಿ. ದೇಸಾಯಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಎಸ್‌ಎಲ್‌ಸಿ ನಂತರದ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕೊತ್ತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರು ಪಾವತಿ ಹಾಗೂ ವಿಕಲಚೇತನರಿಗೆ ವಿವಾಹವಾದಲ್ಲಿ ನೀಡಲಾಗುವ ಪ್ರೋತ್ಸಾಹಧನಕ್ಕೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ ೩೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಜಗದೀಶ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ: ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: ೯೬೦೬೧೫೧೧೪೯, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿಯ ಸಂಯೋಜಕರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ ೧೭ರಂದು ಡಾ.ಬಿ.ಆರ್.ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆಗೆ , ಬಕೆಟ್‌ನಲ್ಲಿ ಬಾಲ್ ಎಸೆಯುವುದು ಮಹಿಳೆ ಹಾಗೂ ಪುರಷರು ಭಾಗವಹಿಸಬಹುದಾಗಿದ್ದು, ೬೦ ರಿಂದ ೭೦ ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.ಹೆಚ್ಚಿನ ಮಾಹಿತಿಗೆ: ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: ೯೬೦೬೧೫೧೧೪೯, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಬಸವನ ಬಾಗೇವಾಡಿ ತಾಲೂಕ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇದೇ ಅ.೯ ರಂದು ಆಲಮಟ್ಟಿ ಜಲಾಶಯವನ್ನು ೫೧೯.೬ ಮೀ ನಿಂದ ೫೨೪.೨೫೬ ಮೀ ಎತ್ತರದ ಕಾರ್ಯಾಚರಣೆಯನ್ನು ರೈತ ಸಂಘದಿಂದಲೇ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.ಆಲಮಟ್ಟಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.ಗ್ಯಾರಂಟಿಗಳ ಭಾಗ್ಯಗಳಲ್ಲಿ, ಅಭಿವೃದ್ಧಿಯ ಗ್ಯಾರಂಟಿ ರಾಜ್ಯ ಸರ್ಕಾರ ಮರೆತಿದ್ದು, ಅದಕ್ಕಾಗಿ ಜಲಾಶಯವನ್ನು ನಾವೇ ರೈತರು ಕೂಡಿಕೊಂಡು ಎತ್ತರಿಸುತ್ತೇವೆ ಎಂದರು.ಪ್ರತಿ ಗ್ರಾಮ, ಗ್ರಾಮಗಳಲ್ಲಿಯೂ ಜಲಾಶಯ ಎತ್ತರದ ಬಗ್ಗೆ ಅರಿವು ಮೂಡಿಸಲಾಗುವುದು, ಸರ್ಕಾರಕ್ಕೂ ಹೋರಾಟದ ಬಗ್ಗೆ ಮೊದಲೇ ತಿಳಿಸಲಾಗುವುದು ಎಂದರು.ಕಳೆದ ಶನಿವಾರ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಯಾವ ಪುರುಷಾರ್ಥಕ್ಕಾಗಿ ಕೃಷ್ಣೆಗೆ ಬಾಗಿನ ಅರ್ಪಿಸಿದರು ಎಂಬುದೇ ತಿಳಿಯುತ್ತಿಲ್ಲ. ಯುಕೆಪಿ ಯೋಜನೆಯನ್ನು ಸಂಪೂರ್ಣ ನಿರ್ಲಕ್ಷ ತಾಳಿದ್ದಾರೆ, ಯಾವುದೇ ಕಾಲಮಿತಿಯಿಲ್ಲ. ಪೂರ್ಣಗೊಳಿಸುವ ಯಾವುದೇ ಜವಾಬ್ದಾರಿಯೂ ರಾಜ್ಯ ಸರ್ಕಾರಕ್ಕಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.ಯುಕೆಪಿಯ ವಿಷಯಗಳಲ್ಲಿ ಎಲ್ಲಾ ಪಕ್ಷದವರು ರಾಜಕೀಯ ಮಾಡುತ್ತಲೇ ಸಾಗುತ್ತಿದ್ದಾರೆ. ಈಗ ಭೂಸ್ವಾಧೀನದ ಪ್ರಶ್ನೆ ಎದ್ದಿದ್ದು, ಅದರಲ್ಲಿಯೂ ರಾಜಕೀಯ ನಡೆಯುತ್ತಿದೆ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ ಮರಾಠ ಸಮಾಜದ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಭವಾನಿ ಕೋ-ಆಪ್ ಕ್ರೇಡಿಟ್ ಸೋಸಾಯಿಟಿ ನಿ. ಸಾವಳಗಿ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.ಬೇಕಾದ ದಾಖಲಾತಿ:ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಪಿಯುಸಿ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿ, ಎರಡು ಪೋಟೋ, ಆಧಾರ ಕಾರ್ಡ, ಪೂರ್ಣ ವಿಳಾಸದೊಂದಿಗೆ 16-9-2025 ಒಳಗಾಗಿ ಹೆಸರು ನೊಂದಾಯಿಸಿ ಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕ ಸಹದೇವ ಕೇಸ್ಕರ 9844565589, ಅಧ್ಯಕ್ಷ ಉಮೇಶ ಜಾಧವ 9880666671 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ ಮರಾಠ ಸಮಾಜದ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಭವಾನಿ ಕೋ-ಆಪ್ ಕ್ರೇಡಿಟ್ ಸೋಸಾಯಿಟಿ ನಿ. ಸಾವಳಗಿ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.ಬೇಕಾದ ದಾಖಲಾತಿ:ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಪಿಯುಸಿ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿ, ಎರಡು ಪೋಟೋ, ಆಧಾರ ಕಾರ್ಡ, ಪೂರ್ಣ ವಿಳಾಸದೊಂದಿಗೆ 16-9-2025 ಒಳಗಾಗಿ ಹೆಸರು ನೊಂದಾಯಿಸಿ ಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕ ಸಹದೇವ ಕೇಸ್ಕರ 9844565589, ಅಧ್ಯಕ್ಷ ಉಮೇಶ ಜಾಧವ 9880666671 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ. ಕಲಾ – ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಇದೇ ದಿ.10 ರಂದು ಬೆಳಿಗ್ಗೆ 10 ಕ್ಕೆ ತತ್ವಪದಕಾರ್ತಿಯರ ಲೋಕ ದೃಷ್ಟಿ ಎಂಬ ವಿಷಯದ ಕುರಿತು ರಾಷ್ಟೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.ಕನ್ನಡ ಸಾಹಿತ್ಯದಲ್ಲಿ ತತ್ವಪದಕ್ಕೆ ತನ್ನದೇ ಆದ ಮಹತ್ವವಿದ್ದು, ಕೀರ್ತನೆ, ವಚನಗಳಂತೆ ತತ್ವಪದಗಳು ಸಹ ಬಹುಮುಖ್ಯ ಪಾತ್ರ ವಹಿಸಿದ್ದು, ತತ್ವಪದಕಾರ್ತಿಯಯರ ತಾತ್ವಿಕ ವಿಷಯಗಳ ಕುರಿತು ಡಾ.ಗುರುಲಿಂಗಪಪ್ ದಬಾಲೆ, ತತ್ವಪದಕಾರ್ತಿಯರ ಕಲ್ಪನೆ ಎಂಬ ವಿಷಯದ ಕುರಿತು ಡಾ.ಗೌರ್ ಮೊದಲಾದ ಹಿರಿಯ ಚಿಂತಕರು ಉಪನ್ಯಾಸ ಮಂಡಿಸಲಿದ್ದಾರೆ. ಬಿಎಲ್‌ಡಿಇ ವಿವಿ ಸಮ ಕುಲಾಧಿಪತಿ ಡಾ.ವೈ.ಎಂ. ಜಯರಾಜ್, ಡಾ.ದಸ್ತಗೀರ ಸಾಬ್ ದಿನ್ನಿ, ಡಾ.ಶ್ರೀನಿವಾಸ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಎಸ್.ಬಿ. ವಿಜ್ಡಮ್ ಕರಿಯರ್ ಅಕಾಡೆಮಿ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ವದ ಹಾದಿ. ಶಿಕ್ಷಕರಾಗಿ ಹೊರಹೊಮ್ಮಲು CET, TET, CTET ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗಿರುವ ಈ ಕಾಲದಲ್ಲಿ, ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಉಚಿತ 2 ದಿನಗಳ CET, TET, CTET ಕಾರ್ಯಾಗಾರ ಅತ್ಯಂತ ಸೂಕ್ತವಾಗಿದೆ ಎಂದು ವಿಜಯಪುರದ ಎಸ್.ಬಿ. ವಿಜ್ಡಮ್ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಅಭಿಪ್ರಾಯಪಟ್ಟರು.ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ, “ಶಿಕ್ಷಕರು ಸಮಾಜದ ಕಣ್ಣುಗಳು, ದಾರಿ ತೋರಿಸುವ ದೀಪಸ್ತಂಭರು. ಉತ್ತಮ ಶಿಕ್ಷಕರನ್ನು ರೂಪಿಸಲು ಇಂತಹ ಕಾರ್ಯಾಗಾರಗಳು ಪೂರಕವಾಗುತ್ತವೆ. ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ ಉಪಯೋಗಿಸಿ, ನಿರಂತರ ಅಭ್ಯಾಸ ಮತ್ತು ಶಿಸ್ತಿನ ಜೀವನವನ್ನು ಅಳವಡಿಸಿಕೊಂಡರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಕಷ್ಟಕರವಾಗುವುದಿಲ್ಲ. CET, TET, CTET ಪರೀಕ್ಷೆಗಳು ವಿದ್ಯಾರ್ಥಿಗಳ ಕನಸುಗಳನ್ನು ನನಸು ಮಾಡುವ ಹಾದಿಯಾಗಬೇಕು, ಅಡ್ಡಿಯಾಗಬಾರದು”ಎಂದು ತಿಳಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಬಿ.ಜಿ. ಮಠ, ವಿದ್ಯಾರ್ಥಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸತ್ಯಸೃತಿ ಎಂ ಅವರು ಸಲ್ಲಿಸಿದ್ದ “ಜಂಬುನಾಥ ಕಂಚ್ಯಾಣಿ ಅವರ ಜೀವನ ಮತ್ತು ಸಾಹಿತ್ಯ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಸತ್ಯಸೃತಿ ಎಂ ಅವರು ಕನ್ನಡ ವಿಭಾಗದ ಪ್ರೊ.ಮಹೇಶ ಚಿಂತಾಮಣಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸತ್ಯಸೃತಿ ಎಂ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.

Read More