Author: editor.udayarashmi@gmail.com

ದರ ಏರಿಕೆ, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ & ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಖಂಡಿಸಿ ಈ ಯಾತ್ರೆ :ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಲೆ ಏರಿಕೆ, ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್.7ರಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲು ಬಿಜೆಪಿ ಮುಂದಾಗಿದೆ.ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಛಾಟಿಸಿದ ಕ್ರಮ ಖಂಡಿಸಿ ಯತ್ನಾಳ ಅಭಿಮಾನಿಗಳು ಪ್ರತಿಭಟನೆ ಕೈಗೊಂಡು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ಸಭೆ ಸೇರಿದ ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿಮಾನಿಗಳು ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುಧ್ದ ಧಿಕ್ಕಾರ ಕೂಗುತ್ತ ಅಂಬೇಡ್ಕರ ವೃತ್ತದಲ್ಲಿ ಅರ್ಧಘಂಟೆಗಳ ಕಾಲ ಹೆದ್ದಾರಿ ಬಂದ್ ಮಾಡಿ ಸಭೆ ಆರಂಭಿಸಿದರು.ಈ ಸಂದರ್ಭದಲ್ಲಿ ಮತಕ್ಷೇತ್ರದ ಬಿಜೆಪಿ ಧುರೀಣ ಬಸನಗೌಡ ಪಾಟೀಲ (ನಾಗರಾಳಹುಲಿ), ಮಾತನಾಡಿ, ಯತ್ನಾಳರನ್ನು ಪಕ್ಷದಿಂದ ಹೊರಹಾಕುವುದರ ಮೂಲಕ ಎಲ್ಲ ಲಿಂಗಾಯತ ಪ್ರಮುಖ ನಾಯಕರನ್ನು ಮೂಲೆಗುಂಪು ಮಾಡುವುದಾಗಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಹಿಂದೂಗಳ ಬೆನ್ನಿಗೆ ನಿಂತವರು ಯತ್ನಾಳರು ಮಾತ್ರ ಎಂದು ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆಯ ಮಡುಗೌಡ ಬಿರಾದಾರ, ಎ.ಎಸ್.ಪಾಟೀಲ (ನಡಹಳ್ಳಿ) ನಡೆಯನ್ನು ಪ್ರಸ್ತಾಪಿಸಿ ಮಾತನಾಡುತ್ತ, ದೇವರಹಿಪ್ಪರಗಿ ಮತಕ್ಷೇತ್ರದ ಎರಡು ಅವಧಿಯ ಅಧಿಕಾರ ಅನುಭವಿಸಿದ ತಾವು ಈ ಮತಕ್ಷೇತ್ರದ ಅಭಿವೃದ್ದಿಗೆ ಮಾತ್ರ ಶೂನ್ಯ ಕೊಡುಗೆ ನೀಡಿದ್ದೀರಿ. ನಿಮಗೆ ಯತ್ನಾಳರ ಬಗ್ಗೆಯಾಗಲಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕು. ನಿಹಾಲ್ ಶ್ರೀಶೈಲ ಮಾಳಿ ಇವನು ೨೦೨೪-೨೫ ನೇ ಸಾಲಿನ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದು ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಕ್ಕಾಗಿ ಕು. ನಿಹಾಲ ಗೆ ಮಂಗಳವಾರ ಶಾಲಾ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯೆಯ ಅಂಗವಾಗಿ ಸ್ನಾನಕ್ಕಿಳಿದ ಮೂವರಲ್ಲಿ ನಾಪತ್ತೆಯಾಗಿದ್ದ ಇಬ್ಬರ ಶವಗಳು ಮಂಗಳವಾರ ದೊರಕಿವೆ.ಆಲಮಟ್ಟಿ ಶಾಸ್ತ್ರಿ ಜಲಾಶಯದ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಈಜಾಡಲು ಹೋಗಿದ್ದಮೂವರಲ್ಲಿ ಒಬ್ಬನ ಶವ ಪತ್ತೆಯಾಗಿದ್ದು, ನಾಪತ್ತೆಯಾದ ಇನ್ನಿಬ್ಬರಿಗಾಗಿ ಎರಡು ದಿನಗಳ ಕಾಲ ಹುಡುಕಾಟ ನಡೆದಿತ್ತು. ಮೂವರು ಬಾಗಲಕೋಟೆ ತಾಲ್ಲೂಕಿನ ಇಲ್ಯಾಳ ಗ್ರಾಮದವರು.ಭಾನುವಾರವೇ ಸೋಮಶೇಖರ ಬೊಮ್ಮಣ್ಣ ದೇವರಮನಿ (೧೫) ಶವ ಪತ್ತೆಯಾಗಿದ್ದು. ಇವನೊಂದಿಗೆ ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (೧೫), ಪರನಗೌಡ ಮಲ್ಲಪ್ಪ ಬೀಳಗಿ (೧೭) ಕಾಣೆಯಾಗಿದ್ದರು, ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದೆ.ಘಟನೆ ನಡೆದ ತಕ್ಷಣ ಕಾಣೆಯಾದವರ ಹುಡುಕಾಟಕ್ಕೆ ಮೀನುಗಾರರು, ಅಗ್ನಿಶಾಮಕದಳದವರು ಅವಿರತವಾಗಿ ನದಿಯಲ್ಲಿ ಶೋಧ ಕಾರ್ಯ ನಡೆಸಿ ಕೊನೆಗೂ ಮಂಗಳವಾರ ಶವ ದೊರಕಿತು.ಪ್ರಕರಣ ಬಾಗಲಕೋಟ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನೋಂದಣಿ ಅವಧಿಯನ್ನು ಏಪ್ರಿಲ್ ೨೫ರ ವರೆಗೆ ಹಾಗೂ ಖರೀದಿ ಅವಧಿಯನ್ನು ಮೇ ೦೧ರವರೆಗೆ ವಿಸ್ತರಣೆ ಮಾಡಲಾಗಿದೆ.೨೦೨೪-೨೫ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ೭,೫೫೦ ರೂ. ಜೊತೆಗೆ, ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲಿಗೆ ರೂ.೪೫೦ ಸೇರಿದಂತೆ ರೂ.೮,೦೦೦ ಪ್ರತಿ ಕ್ವಿಂಟಾಲಿಗೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಅಧ್ಯಕ್ಷರಾದ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦/೧೧ ಕೆ.ವ್ಹಿ ಉಮರಾಜ (ರೇವತಗಾಂವ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ ೨x೧೦ ಎಮ್.ವಿ ಸಾಮರ್ಥ್ಯದ ಪರಿವರ್ತಕಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ೧೧೦/೧೧ ಕೆ.ವ್ಹಿ ಕೆರೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ೧೧ ಕೆ.ವ್ಹಿ ಟಾಕಳಿ ಐಪಿ, ೧೧ ಕೆ.ವ್ಹಿ ಕಲ್ಮಡ ಐಪಿ ಹಾಗೂ ೧೧ ಕೆ.ವ್ಹಿ ಕೆರೂರು ಎನ್.ಜೆ.ವೈ ನೀರು ಸರಬರಾಜು ವಿದ್ಯುತ್ ಮಾರ್ಗಗಳಲ್ಲಿ ಏಪ್ರಿಲ್ ೨ರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ಗಂಟೆ ವರೆಗೆ ಹಾಗೂ ೧೧೦/೧೧ ಕೆ.ವ್ಹಿ ಕೆರೂರು ವಿದ್ಯುತ ವಿತರಣಾ ಕೇಂದ್ರದಿಂದ ಹೊರಹೋಗುವ ೧೧ ಕೆ.ವ್ಹಿ ಅಂಕಲಮ್ಮ ಐಪಿ, ೧೧ ಕೆ.ವ್ಹಿ ಕಲ್ಮಡ ಐಪಿ ವಿದ್ಯುತ್ ಮಾರ್ಗಗಳಲ್ಲಿ ಏಪ್ರಿಲ್ ೩ರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಅದರಂತೆ, ೧೧೦/೧೧ ಕೆ.ವ್ಹಿ ಕೆರೂರು ವಿದ್ಯುತ ವಿತರಣಾ ಕೇಂದ್ರದಿಂದ ಹೊರಹೋಗುವ ೧೧ ಕೆ.ವ್ಹಿ ಅಂಕಲಮ್ಮ ಐಪಿ ವಿದ್ಯುತ್ ಮಾರ್ಗಗಳಲ್ಲಿ ಏಪ್ರಿಲ್ ೪ರ ಮಧ್ಯಾಹ್ನ ೨ ರಿಂದ ಸಂಜೆ ೬ಗಂಟೆ ವರೆಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ ೧೦ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ website: https://sevasindhuservices.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತಿ ರಸ್ತೆ ಕನಕದಾಸ ಬಡಾವಣೆ ತಾಲೂಕ ವಿಸ್ತರಾಣಾಧಿಕಾರಿಗಳು, ಉಪ ವಿಭಾಗ ವಿಜಯಪುರ ಮತ್ತು ಇಂಡಿ ಇವರನ್ನು ಹಾಗೂ ಅರಕೇರಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ರೇಖಾ ಬಾರ್ಕಿ (ಮೊಬೈಲ್ ಸಂಖ್ಯೆ: ೮೯೭೧೪೫೯೬೮೩), ಸಿಂದಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ದಪ್ಪ ಕಾರಿಮುಂಗಿ (ಮೊ:೯೯೮೦೯೫೨೯೬೦), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಾಳಿಯನ್ನು ಹೊರತುಪಡಿಸಿ ಮಿಕ್ಕೆಲ್ಲಾ ವಸ್ತುಗಳು ಕಾಂಗ್ರೇಸ್ ಸರ್ಕಾರ ಹೆಚ್ಚಿಸಿದೆ. ಜನರ ಕಷ್ಟವನ್ನು ಕಿಂಚಿತ್ತು ಅರ್ಥ ಮಾಡಿಕೊಳ್ಳಲು ಅಸಮರ್ಥವಾದ ಆಡಳಿತವನ್ನು ಸಿದ್ಧರಾಮಯ್ಯನ ಸರ್ಕಾರ ನೀಡುತ್ತಿದ್ದಾರೆ.ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರ ಶಾಪಗ್ರಸ್ಥವಾಗಿದೆ. ಹಾಲಿನ ದವರನ್ನು ರೂ. ೪ ಹೆಚ್ಚಳ ಮಾಡು೭ವವರೆಗೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಕಿಂಚಿತ್ತು ಸಂವೇದನಾಶೀಲತೆಯಿಲ್ಲದ ಹೆಚ್ಚಳ ಮಾಡುತ್ತಿರುವುದು ಖಂಡನೀಯ. ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಾರಣಾಂತಿಕ ಪೆಟ್ಟನ್ನು ನೀಡಿದ್ದಾರೆ. ವಿದ್ಯುತ್ ಇಲಾಖೆಯ ನೌಕರರಿಗೆ ಪಿಂಚಿಣಿ ಕೊಡಲು ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರ ವಿದ್ಯುತ್ ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಿಜಯ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜನರ ಅನುಕೂಲಕ್ಕಾಗಿ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಪ್ರಾರಂಭಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.ಯುಗಾದಿಯ ದಿನವಾದ ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ವತಿಯಿಂದ ಪ್ರಾರಂಭಿಸಲಾಗಿರುವ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಪಾಟೀಲ್ ಪ್ಲ್ಯಾನೆಟ್ ಪಕ್ಕದಲ್ಲಿ ಆರಂಭವಾಗಿರುವ ಈ ಸಿಟಿ ಮೆಡಿಕಲ್ ಸೆಂಟರ್ ನಲ್ಲಿ ಎಲ್ಲ ವೈದ್ಯಕೀಯ ಸೇವೆಗಳು ಲಭ್ಯವಿವೆ. ಶೀಘ್ರದಲ್ಲಿ ದಂತ ವೈದ್ಯಕೀಯ ಚಿಕಿತ್ಸೆ, ಸುಸಜ್ಜಿತ ಲ್ಯಾಬ್, ಡೈಗ್ನೊಸ್ಟಿಕ್ ವ್ಯವಸ್ಥೆ, ಫಿಜಿಯೋಥೆರಪಿ ಪ್ರಾರಂಭವಾಗಲಿದೆ. ಅಲ್ಲದೇ, ಮನೆಯಲ್ಲಿರುವ ರೋಗಿಗಳಿಂದ ರಕ್ತ ಸಂಗ್ರಹಿಸಿ ತಪಾಸಣೆ ಮಾಡಿಕೊಡುವ ಹೋಮ್ ಸರ್ವಿಸ್ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ. ಒಟ್ಟಾರೆ ಈ ಭಾಗದ ಜನರ ಅನುಕೂಲಕ್ಕಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ…

Read More

ವಿಜಯಪುರ & ಬಾಗಲಕೋಟೆ ಜಿಪಂ ಸಿಇಓ ರಿಗೆ ಎಂಎಲ್ಸಿ ಸುನೀಲಗೌಡ ಪಾಟೀಲ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ರಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಇದೇ ಏಪ್ರೀಲ್ 30ರ ವರೆಗೆ ವಿಸ್ತರಿಸಲಾಗಿದ್ದು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳು, ಎಲ್ಲ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ಪತ್ರ ಬರೆದಿದ್ದಾರೆ.ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ರಡಿ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ 31.03.2025 ನಿಗದಿ ಪಡಿಸಲಾಗಿತ್ತು. ಆದರೆ, ಶೇ 100 ರಷ್ಟು ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಲು ರಾಜೀವ ಗಾಂಧಿ ವಸತಿ ನಿಗಮ ಸಮೀಕ್ಷೆ ಅವಧಿಯನ್ನು 30.04.2025ರ ವರೆಗೆ ವಿಸ್ತರಿಸಿದೆ. ಹೀಗಾಗಿ ಜಿ.ಪಂ, ತಾ.ಪಂ ಅಧಿಕಾರಿಗಳು ಹಾಗೂ ಪಿ.ಡಿ.ಓ…

Read More