Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ತಾಲೂಕಿನ ಹುನ್ನೂರು ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಗಂಭೀರ ಸ್ವರೂಪ ಪಡೆದು ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.ಗ್ರಾಮದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಗ್ರಾಮ ಮಾಡುವಲ್ಲಿ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ತ್ಯಾಜ್ಯವನ್ನು ಸೂಕ್ತ ಜಾಗದಲ್ಲಿ ಸಂಗ್ರಹಿಸಲು ಕ್ರಮ ಕೈಗೊಳ್ಳದ ಗ್ರಾಮ ಪಂಚಾಯಿತಿಯು ಊರು ಪಕ್ಕದ ಹಿಪ್ಪರಗಿ ರಸ್ತೆ ಬದಿಯಲ್ಲಿಯೇ ಸಂಗ್ರಹಿಸುತ್ತಿದೆ. ನಂತರದ ದಿನಗಳಲ್ಲಿ ಅದನ್ನು ಜನವಸತಿಯಿಂದ ದೂರದ ಪ್ರದೇಶಕ್ಕೆ ಸಾಗಿಸಲು ಕ್ರಮ ಕೈಗೊಳ್ಳುತ್ತಿಲ್ಲ. ತ್ಯಾಜ್ಯದಲ್ಲಿರುವ ಪ್ಲಾಸ್ಟಿಕ್, ಕಸಕಡ್ಡಿ ಗಾಳಿಗೆ ಹಾರಿ ಮತ್ತೆ ಊರು ಸೇರಿಕೊಳ್ಳುತ್ತಿದೆ. ವಾರಕ್ಕೊಮ್ಮೆ ಇಲ್ಲವೆ ವಾರದಲ್ಲಿ ಎರಡು ಬಾರಿ ಪ್ಲಾಸ್ಟಿಕ್ ಹಾಗೂ ಕಸವನ್ನು ಸುಡಲಾಗುತ್ತಿದೆ. ಇದರಿಂದ ವಾಯು ಮಾಲಿನ್ಯ ಉಂಟಾಗಿ ಗ್ರಾಮಸ್ಥರು ಅಸ್ತಮಾ ರೋಗಕ್ಕೆ ತುತ್ತಾಗುವಂತಾಗಿದೆ. ಈಗಾಗಲೇ ಗ್ರಾಮಸ್ಥರು ಹಲವಾರು ಬಾರಿ ಈ ವಿಷಯದ ಕುರಿತು ಗ್ರಾಮ ಪಂಚಾಯಿತಿಗೆ ಮೌಖಿಕವಾಗಿ ದೂರು ನೀಡಿದರೂ ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಸ್ಥಳಾವಕಾಶದ ಸಮಸ್ಯೆಹುನ್ನೂರು ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆ ಕುರಿತು ಪಿಡಿಒ…

Read More

ಮಕ್ಕಳ ಬೇಸಿಗೆ ಶಿಬಿರ ಸಮಾರೋಪ | ಜಿಪಂ ಸಿಇಓ ರಿಷಿ ಆನಂದ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಜ್ಞಾನ ಮತ್ತು ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಬೇಸಿಗೆ ಶಿಬಿರಗಳು ಸಹಾಕಾರಿಯಾಗಿವೆ ಎಂದು ಜಿಲ್ಲಾ ಬಾಲ ಭವನ ಅಧ್ಯಕ್ಷರಾದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಹೇಳಿದರು.ಅವರು, ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಮಂಗಳವಾರ ನಡೆದ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ಬೇಸಿಗೆ ಶಿಬಿರವು ಬಹಳ ತೃಪ್ತಿದಾಯಕವಾಗಿ ಜರುಗಿದ್ದು, ಅತ್ಯಲ್ಪ ಸಮಯದಲ್ಲಿಯೇ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಕರಾಟೆ, ನೃತ್ಯ, ಸಂಗೀತ, ಚಿತ್ರಕಲೆ, ಕರಕುಶಲ ವಸ್ತುಗಳ ತಯಾರಿಕೆ ಸೇರಿದಂತೆ ಅಗತ್ಯ ಕೌಶಲ್ಯಗಳನ್ನು ತಿಳಿದುಕೊಂಡಿದ್ದಾರೆ. ನಾಲ್ಕು ಗೋಡೆಗಳ ಮಧ್ಯ ಸದಾ ಪುಸ್ತಕ, ಓದು-ಬರಹ ಒತ್ತಡದಿಂದ ಮುಕ್ತರಾಗಿ ಮಕ್ಕಳು ತಮ್ಮ ಸ್ನೇಹಿತರೊಂದಿಗೆ ಆಟವಾಡಿಕೊಂಡು ಸಂತೋಷದಿAದ ಮುಕ್ತವಾದ ವಾತಾವರಣದಲ್ಲಿ ಕಲಿಕೆಯಲು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಕ್ತದಾನ ಮಾಡುವದರಿಂದ ದೇಹದಲ್ಲಿ ಹೊಸ ರಕ್ತದ ಉತ್ಪತ್ತಿಯಾಗುತ್ತದೆ. ಎಲ್ಲ ದಾನಗಳಲ್ಲಿ ರಕ್ತದಾನವು ಅತ್ಯಂತ ಶ್ರೇಷ್ಠದಾನವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್‌ ಸಂಸ್ಥೆಯ ವಿಜಯಪುರದ ಚೇರಮನ್‌ ರಾದ ಪ್ರೋ.ಎಸ್‌ ಜಿ ರೊಡಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ರೆಡ್‌ ಕ್ರಾಸ್‌ ಸಂಸ್ಥೆ ಹಾಗೂ ಐಕ್ಯೂಎಸಿ ಮತ್ತು ಎನ್‌ಎಸ್ಎಸ್‌ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರು ಆರೋಗ್ಯವಂತ ವ್ಯಕ್ತಿ ರಕ್ತದಾನ ಮಡುವುದರಿಂದ ಆರೋಗ್ಯ ದೃಷ್ಠಿಯಿಂದ ಒಳ್ಳೆಯದು ಎಂದರು.ಭಾರತೀಯ ರೆಡ್ ಕ್ರಾಸ್‌ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಸ್‌ ಜಿ ಮುರನಾಳ, ಭಾರತೀಯ ರೆಡ್ ಕ್ರಾಸ್‌ ಸಂಸ್ಥೆಯ ನಿರ್ದೇಶಕ ಶಿವಾನಂದ ಹತ್ತರಕಿ ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಪ್ರೊ. ಆರ್‌ ಎಚ್‌ ರಮೇಶ ಮಾತನಾಡಿʼರಕ್ತದಾನ ಶಿಭಿರದ ಮೂಲಕ ರಕ್ತದ ಅವಶ್ಯಕತೆ ಉಳ್ಳವರಿಗೆ ಸಾಹಾಯಕಾರಿಯಾಗಿದೆ. ಇಂತಹ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳಿಸಬೇಕಾದುದು ಅಗತ್ಯವಾಗಿದೆ ಎಂದರು.ಐವತ್ತಕ್ಕೂ ಹೆಚ್ಚು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಮಹಿಳಾ ವಿ. ವಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೆರೂಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ ಬೆಳೆ ವಿಮೆ ಜಮೆಯಾಗದ ಹಿನ್ನೆಲೆಯಲ್ಲಿ, ರೈತರು ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಮಂಗಳವಾರ ಆಗಮಿಸಿದ ಕೆರೂಟಗಿ ಗ್ರಾಮದ ರೈತರು ತಮ್ಮ ಖಾತೆಗಳಿಗೆ ಜಮೆಯಾಗದೇ ಇರುವ ಬೆಳೆ ವಿಮೆಯ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ ಮಾತನಾಡಿ, ೨೦೨೪-೨೫ ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ರೈತರು ತೊಗರಿ ಬೆಳೆ ಭಿತ್ತನೆ ಮಾಡಿದ್ದರು. ಆದರೆ ನಂತರ ಬಹುತೇಕ ಬೆಳೆ ಮಳೆ ಕೊರತೆ ಹಾಗೂ ಇನ್ನಿತರ ಪ್ರಕೃತಿ ವಿಕೋಪಗಳಿಗೆ ಒಳಗಾಗಿ ಫಸಲು ಬಾರದಂತಾಯಿತು. ಆದರೆ ರೈತರು ತೊಗರಿ ಬೆಳೆಯ ವಿಮೆ ತುಂಬಿದ್ದು, ಈಗ ವಿಮೆ ಪರಿಹಾರದ ಹಣ ಕೆಲವು ರೈತರಿಗೆ ಮಾತ್ರ ಜಮೆ ಆಗಿದೆ. ಇನ್ನೂಳಿದ ರೈತರು ವಿಮೆ ಹಣ ಪಾವತಿಸಿದ್ದರು ಸಹ ಅವರಿಗೆ ಯಾವುದೇ ವಿಮೆ ಪರಿಹಾರ ಬಂದಿರುವುದಿಲ್ಲ ಎಂದರು.ಬಿಜೆಪಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಜಾಪ್ರಭುತ್ವದಲ್ಲಿ ಮತದಾನ ಒಂದು ಶ್ರೇಷ್ಠ ಕರ್ತವ್ಯ. ಮತದಾನ ಎಂಬುದು ಪ್ರಜಾಪ್ರಭುತ್ವದ ಬೆನ್ನೆಲುಬು ಇದ್ದಂತೆ ಎಂದು :ಪ್ರೊ.ರವಿ ಕಟ್ಟಿಮನಿ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಜg ನಂಪ್ರಥಮ ದರ್ಜೆ ಕಾಲೇಜುಯಡಿ ಮುಳಸಾವಳಗಿ ದತ್ತು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಪ್ರೇವiಕುಮಾರಿ ಮಾತನಾಡಿ, ಮತದಾರರು ಭ್ರಷ್ಟರಾದರೆ ಆಯ್ಕೆಯಾಗಿ ಬರುವ ಆಳುವ ವರ್ಗವು ಭ್ರಷ್ಟವಾಗಿರುತ್ತದೆ ಎಂದರು.ಉಪನ್ಯಾಸಕ ಶಿವಪುತ್ರ ಜಾಲವಾದಿ, ಸಂಗನಗೌಡ ಬಿರಾದಾರ, ಗ್ರಾಮ ಪಂಚಾಯಿತಿ ಸದಸ್ಯರಾದ ರೇಣುಕಾ ಬಿರಾದಾರ, ಉಮೇಶ ಮೂಲಿಮನಿ, ರೇಖಾ ತಳವಾರ ಸೇರಿದಂತೆ ರಾಜು ಕಪಾಲಿ, ಮಲ್ಲಿಕಾರ್ಜುನ ಲಕ್ಷ್ಮೀಶ, ಭೀಮನಗೌಡ ಬಿರಾದಾರ ಇದ್ದರು.

Read More

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಘೋಷಣೆ ಮಾಡಿದ್ದ ಸಹಾಯಧನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸದಾ ಹಿಂದುತ್ವ, ಹಿಂದೂಗಳ ಪರವಾಗಿ ಗಟ್ಟಿಯಾಗಿ ನಿಲ್ಲುವ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು, ಈಚೆಗೆ ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಕುಟುಂಬವರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.5 ಲಕ್ಷ ಸಹಾಯ ಧನ ನೀಡುವುದಾಗಿ ಘೋಷಿಸಿದಂತೆ, ಮಂಗಳವಾರ ತಮ್ಮ ಆಪ್ತ ಸಹಾಯಕರ ಮೂಲಕ ಸಹಾಯಧನ ಚೆಕ್ ನ್ನು ನೀಡಿದರು.ಬಂಟ್ವಾಳ ತಾಲ್ಲೂಕಿನ ಕಾರಿಂಜ ಗ್ರಾಮದಲ್ಲಿರುವ ತೋಟದ ಮನೆಗೆ ಭೇಟಿ ನೀಡಿ, ಸುಹಾಸ್ ಶೆಟ್ಟಿ ಅವರ ತಂದೆ-ತಾಯಿ ಅವರಿಗೆ ಸಾಂತ್ವನ ಹೇಳಿ ಚೆಕ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಪಿ.ಜಿ.ಕೆಂಗನಾಳ, ಉಮೇಶ ಕೋರೆ, ಯಲಗೊಂಡ ಬಾಗಾದಿ, ಮುಖಂಡರಾದ ದಾದಾಸಾಹೇಬ ಬಾಗಾಯತ, ಸಚಿನ ಕೋರಿ ಸೇರಿದಂತೆ ಸ್ಥಳೀಯ ಹಿಂದೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬಡ ಜನರಿಗೆ ಪೂರೈಸಿದ ಅನ್ನಭಾಗ್ಯ ಅಕ್ಕಿಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 40890 ರೂಪಾಯಿ ಮೌಲ್ಯದ 28 ಅಕ್ಕಿ ತುಂಬಿದ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಡಿಮೆ ದರದಲ್ಲಿ ಅಕ್ಕಿ ಖರೀದಿಸಿ, ಅವುಗಳನ್ನು ಒಂದೆಡೆ ಸಂಗ್ರಹಿಸಿ ತದನಂತರ ಬಹಳಷ್ಟು ಚೀಲ ತುಂಬಿದ ಮೇಲೆ ಬೇರೆ ಕಡೆಗೆ ಸಾಗಾಟ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಸೂಮ್ ಸಲೀಂ ಅರಬ್, ಹಾಗೂ ಸದ್ದಾಂ ಮತಾಬ್ ಬಾಗವಾನ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಇದ್ದರು

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಿರಂತರ ಮೂವತ್ತು ವರ್ಷದ ಹೋರಾಟದ ಪ್ರತಿಫಲವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆಲ, ಜಲ, ಮೀಸಲಾತಿಯನ್ನು ಪ್ರತಿಯೊಂದು ದಲಿತರಿಗೆ ನ್ಯಾಯ ಬದ್ದವಾಗಿ ಮೀಸಲಾತಿ ಸಿಗಬೇಕು ಎಂಬ ಸದ್ದುದೇಶದಿಂದ ಪರಿಶೀಷ್ಠ ಜಾತಿಯ ಸಮಗ್ರ ಸಮೀಕ್ಷೆ ಪ್ರಾರಂಭಿಸಲಾಗಿದೆ ದಲಿತ ಮುಖಂಡ ರಾಜಶೇಖರ ಕೂಚಬಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಮೀಸಲಾತಿಯಿದ್ದರು ಸಹಿತ ಸಂಪೂರ್ಣ ಲಾಭವನ್ನು ಕೆಲವು ಜಾತಿಗಳು ಅದರ ಸದುಪಯೋಗ ಪಡೆದುಕೊಳ್ಳುತ್ತಿರುವುದನ್ನು ನೋಡಿದ ಹೋರಾಟಗಾರರು ಕಳೆದ ೩೦ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಎಲ್ಲ ಪರಿಶಿಷ್ಟ ಸಮುದಾಯಗಳು ಮನೆ ಬಾಗಿಲಿಗೆ ಬರುವ ಸಮೀಕ್ಷಾದಾರರಿಗೆ ಸಹಕಾರ ನೀಡಿ ಸಂಪೂರ್ಣವಾದ ಮಾಹಿತಿ ಒದಗಿಸಬೇಕು. ಹಾಗೂ ಮುಖ್ಯವಾಗಿ ನಮೂದಿಸ ಬೇಕಾಗಿರುವುದು ಜಾತಿ ಖಾಲಂ. ನನ್ನ ಕುಲ ಬಾಂದವರು ಅವರು ನೀಡುವ ಖಾಲಂ ನಂಬರ ೪೪.೧, ೪೪.೨, ೪೪.೩.( ಹೋಲೆಯ, ಹೋಲೆರ, ಹೊಲೇಯ) ಮೂರು ಸಮನಾರ್ಥಕ ಪದಗಳು ಸೂಚಿಸುತ್ತದೆ. ನಿಮ್ಮ ಜಾತಿ ಪ್ರಮಾಣ ಪತ್ರದಂತೆ ನಮೂದು ಮಾಡಿಸಬೇಕಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರು ಸಿದ್ಧಲಿಂಗ ರಾಖದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಶ್ರೀ ಉಜ್ಜಯಿನಿ ಮಹಾಪೀಠ ಇವರ ದಿವ್ಯ ಸಾನಿಧ್ಯದಲ್ಲಿ ಇತ್ತೀಚಗೆ ಹಮ್ಮಿಕೊಂಡ ಶ್ರೀ ಜಗದ್ಗುರು ಮರುಳಸಿದ್ಧೇಶ್ವರ ಸ್ವಾಮಿಯ ತೈಲಾಭಿಷೇಕ, ಸದ್ಧರ್ಮ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದಿಂದ ಕೊಡಮಾಡುವ ಸದ್ಧರ್ಮ ಶಿರೋಮಣಿ ಪ್ರಶಸ್ತಿಯನ್ನು ಸಿಂದಗಿ ಸಾರಂಗಮಠದ ಪೀಠಾಧಿಪತಿ, ಗುರುಕುಲ ಭಾಸ್ಕರ್, ಪಂಚಾಚಾರ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರಿಗೆ ಅಲ್ಲಿ ಸಮ್ಮೇಳನಗೊಂಡ ಶಿವಾಚಾರ್ಯರ ಸಮ್ಮುಖದಲ್ಲಿ ಉಜ್ಜಯಿನಿ ಜಗದ್ಗುರು ಮಹಾಸನ್ನಿಧಿಯವರು ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು.ಈ ವೇಳೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಯಂಕAಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಕನ್ನೊಳ್ಳಿಯ ಸಿದ್ದಲಿಂಗ ಶಿವಾಚಾರ್ಯರು ಸೇರಿದಂತೆ ಹರಗುರು ಚರಮೂರ್ತಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ರವರು ನಾಳೆ ದಿ. ೭ ಬುಧವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆ. ೧೧ಗಂ. ಧನ್ಯಾಳ ಗ್ರಾಮದ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಗೊಳಿಸಲಿದ್ದಾರೆ. ನಂತರ ಸಂ. ೪ಗಂ. ನಿಡೋಣಿಯಲ್ಲಿ ನಿಡೋಣಿ ಮತ್ತು ಕಾಖಂಡಕಿ ಸುತ್ತಲಿನ ಎತ್ತರದ ಪ್ರದೇಶಕ್ಕೆ ನೀರೋದಗಿಸುವ ೫ಎ ಮತ್ತು ೫ಬಿ ಲಿಫ್ಟ್ ಏತನೀರಾವರಿ ಮತ್ತು ೧೫ ನೇ ವಿತರಣಾ ಕಾಲುವೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More